ಒಟ್ಟು 11 ಕಡೆಗಳಲ್ಲಿ , 9 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೇಮವತಿಯ ತೀರವಾಸನೇ | ನಾರಸಿಂಹಪ್ರೇಮದಿಂದ ಕಾಯೋ ಬೇಗನೇ ಪ ನಾಮಮಾತ್ರ ಸಲಹುತಿರುವ | ಸ್ವಾಮಿ ನಿಮ್ಮ ಕಂಡು ಭಜಿಸೆಕಾಮಿತಾರ್ಥವಿತ್ತು ಪೊರೆವೆ | ಕಾಮ ಜನಕ ಕಮಲನಾಭ ಅ.ಪ. ಭವದೊಳಾನು ಬಳಲಿ ಬಂದೆನೋ | ಭವ್ಯರೂಪಿಹವಣೆ ತಿಳಿಸಿ ಭವವ ಕಳೆಯಲೋಪವನ ಮತದಿ ಉದಿಸಿಹೇನು | ಭುವನ ಧರಿಸಿ ಮೆರೆಯುವಾನರವಿಯ ಕಂಡು ಹಾರಿದವನ | ಪವನರಾಯನ ಕಾಣೆ ನಾನು 1 ತನುವು ಮನವು ಧನದ ಆಶೆಯೂ | ಪೋಗಲಿಲ್ಲಘನ ಸುಜ್ಞಾನ ಭಕ್ತ್ಯಿ ಭಾವವೂಕನಸಿಲಾದರೊಮ್ಮೆ ಎನ್ನ | ಮನಸ್ಸು ನಿಮ್ಮ ಚರಣ ದ್ವಂದ್ವವನಜದಲ್ಲಿ ನೆಲೆಸಲಿಲ್ಲ | ಅನಘ ನೀನೇ ದಯವ ಬೀರೊ 2 ವನಧಿ ಹರಿಯೆ | ಗುರು ಗೋವಿಂದ ವಿಠ್ಠಲಾನೆ 3
--------------
ಗುರುಗೋವಿಂದವಿಠಲರು
(ಅ) ಮಾಡುವುದೋ ಕೃಪೆ ದಾಸನೊಳು ರಾಮ ಮಾಡುವುದೋ ಕೃಪೆ ದಾಸನೊಳು ಪ ನೋಡ ನೋಡುತ ಕೈಯ್ಯ ಬಿಡುವರೆ ಬೇಡ ಬೇಡಿಕೊಂಬೆನು ರೂಢಿಯೊಳು ನಿನ್ನಂಥ ಕರುಣಿಯ ನೊಡಲಿಲ್ಲವೋ ಎಲ್ಲಿಯು ಅ ಬಂದೆನೋ ನಾನಾ ಜನ್ಮದಲೀ | ರಾಮ ನೊಂದೆನೋ ನಾ ಬಹು ಭವಣೆಯಲೀ ದ್ವಂದ್ವ ದುಃಖದಿ ಕಂದಿ ಕುಂದುತ ಮುಂದುಗಾಣದೆ ಕೆಟ್ಟೆನೋ ಕಂದನೆನ್ನುತ ಬಂದು ಪೊರೆ ಪರಮಾತ್ಮ ನಂಬಿದೆ ನಿನ್ನನು 1 ದಾನ ಧರ್ಮಗಳ ನಾನರಿಯೆ | ರಾಮ ಮೌನ ಮಂತ್ರಗಳ ನಾನರಿಯೆ ಧ್ಯಾನ ಧಾರಣ ಜ್ಞಾನಸಾಧನವೇನೊಂದನು ಅರಿಯೆ ಹಾನಿಯಿದ ನಾನೇನನೊರೆಯಲಿ ಮಾನನಿಧಿ ನಿನ್ನವನು ನಾ 2 ಕಾಮಿನಿ ಕಾಂಚನ ಭೂಮಿಗಳ | ರಾಮ ಕಾಮಕೆÉ ಸಿಕ್ಕಿದೆನೋ ಬಹಳ ನೇಮ ನಿಷ್ಠೆಗಳೇನೂ ಇಲ್ಲದೇ ತಾಪದಿ ನಾ ಕೆಟ್ಟೆನೋ ನಾಮಸುಧೆಯ ಪಾನ ಕರುಣಿಸು ಪ್ರೇಮದಲಿ ಶ್ರೀಕಾಂತನೇ 3
--------------
ಲಕ್ಷ್ಮೀನಾರಯಣರಾಯರು
ಕರುಣ ಬಾರದೆ ವಿಠ್ಠಲಾ | ಶ್ರೀ ಪಾಂಡುರಂಗ ಪ. ಸ್ಮರಣೆ ಮಾಡುತ ಪೊರೆ ಎಂದೆನ್ನುತ ವರಲುವಾ ಧ್ವನಿ ಕೇಳದೇ ಈ ಪರಿಯ ಗರ್ವವಿದೇನೊ ಹರಿಯೆ ಅ. ದೂರದಿಂದಲಿ ಬಂದೆನೋ | ಇಲ್ಲಿಂದ ಮುಂದೆ ದಾರಿ ಕಾಣದೆ ನಿಂದೆನೋ ದ್ವಾರಕಾಪತಿ ನೀನಲ್ಲದಿ ನ್ನಾರು ಕಾಯುವರೀಗ ಪೇಳು ಸಾರಿದೆನು ನಿನ್ನಂಘ್ರಿ ಕಮಲವ ಚಾರು ಚರಿತನೆ ಮಾರನೈಯ್ಯ 1 ತನುಸುಖ ಬೇಡಲಿಲ್ಲಾ | ನಿನ್ನ ನಾನು ಘನವಾಗಿ ಕಾಡಲಿಲ್ಲ ಮನದ ಹಂಬಲ ನೀನೆ ಬಲ್ಲೆಯೊ ಮನಕೆ ತಾರದೆ ಸುಮ್ಮನಿಪ್ಪೆಯೋ ಎನಗೆ ಪ್ರೇರಕ ನೀನೆ ಅಲ್ಲವೆ ನಿನಗೆ ದಾಸಳು ನಾನು ಅಲ್ಲವೆ 2 ಕರೆಕರೆ ಪಡಿಸುವುದೂ | ಸರಿಯಲ್ಲ ನಿನಗೆ ಕರಿವರದ ಕೇಳು ಇದೂ ನರಸಖನೆ ದಯದಿಂದ ನಿನ್ನ ಚರಣ ದರುಶನವಿತ್ತೆ ಒಲಿದು ಕರಪಿಡಿದು ಸಲಹೆಂದರೀಗ ತೆರೆದು ನೋಡದೆ ನೇತ್ರವಿರುವರೆ 3 ಜ್ಞಾನಿ ಹೃತ್ಕಮಲವಾಸ | ಶ್ರೀ ರುಕ್ಮಿಣೀಶ ಭಾನುಕೋಟಿ ಪ್ರಕಾಶ ನೀನೆ ಗತಿ ಇನ್ನಿಲ್ಲ ಅನ್ಯರು ಸಾನುರಾಗದಿ ಸಲಹೊ ಎನ್ನಲು ಆನನದಿ ಈಕ್ಷಿಸದೆ ನಿಂತರೆ ಮಾನ ಉಳಿವುದೆ ಭಕ್ತವತ್ಸಲ 4 ಇಟ್ಟಿಗೆ ಕೊಟ್ಟವನೊ ಕೊಟ್ಟನಿನ್ನೇನು ಅಷ್ಟು ಭಾಗ್ಯವನೂ ಕೊಟ್ಟೆ ಬಡ ಬ್ರಾಹ್ಮಣನ ಅವಲಿಗೆ ದೃಷ್ಟಿ ಬಿದ್ದರೆ ಕಷ್ಟ ಉಂಟೆ ಕೊಟ್ಟು ಅಭಯ ಪೊರೆ ಗೋಪಾಲ- ಕೃಷ್ಣವಿಠ್ಠಲ ಮನದಿ ತೋರೋ5
--------------
ಅಂಬಾಬಾಯಿ
ತಂದೆ ನೀನೆ ದಯದಿ ಪಾಲಿಸೆಂದು ಬಂದೆನೋ ಪ ಹಿಂದುಮುಂದು ಗತಿಯದಾರುಯಿಲ್ಲವೆಂಬೆನೊ ಅ.ಪ ಕುಕ್ಷಿಯೊಳಗೆ ಜಗವನಿಟ್ಟುಕೊಂಡು ಪೊರೆವನೆ ಪಕ್ಷಿಗಮನ ನಿಮ್ಮ ನೆನೆವೆ ಭಜಕಗೊಲಿವನೆ 1 ಕ್ಷೀರವಾರ್ಧಿಶಯನ ಗೋಪಿ-ಜಾರ ಪಾಲಿಸೊ ಮಾರಜನಕ ಮುದದೊಳೆನ್ನ ದೂರಲಾಲಿಸೊ 2 ಸುಮಹದೇವಪುರದ ನಿಲಯ-ಸುಜನರಕ್ಷನೆ ಕ್ರಮದೊಳೆನ್ನ ರಕ್ಷಿಸಯ್ಯ-ಕಮಲೆಯಾಣ್ಮನೆ 3
--------------
ರಂಗದಾಸರು
ನಾರಾಯಣ ನಿನ್ನ ನಂಬಿದೆ ಲಕ್ಷ್ಮೀ-ನಾರಾಯಣ ನಿನ್ಹೊರತು ಪೊರೆವ ದೈವವೆಲ್ಲಿದೆ ಪ ನಾ ಮೀರಿ ದುಷ್ಕರ್ಮವ ಮಾಡಿದೆಅಪಾರಮಹಿಮ ದಯಾನಿಧೇ ಅ.ಪ ನಾನಾ ಯೋನಿಗಳಿಂದ ಬಂದೆನೋಮಾನತಾಳಲಾರದೆ ಬಲು ನೊಂದೆನೋದೀನರಕ್ಷಕ ಎನ್ನ ಗತಿ ಮುಂದೇನೋಮಾನದಿಂದಲಿ ಪಾಲಿಸುವಂಥ ದೊರೆ ನೀನೋ1 ದಾಸರ ಮನ ಉಲ್ಲಾಸನೆಶ್ರೀಶ ಆಶ್ರಿತ ಜನರ ಪೋಷನೆಸಾಸಿರ ಅನಂತಮಹಿಮನೆಕ್ಲೇಶನಾಶ ಮಾಡಿಸೋ ಶ್ರೀನಿವಾಸನೆ 2 ರಂಗನಗರ ಉತ್ತುಂಗನೆಗಂಗಾಜನಕ ಗರುಡತುರಂಗನೆ ಉ-ತ್ತುಂಗ ಗುಣಗಳಂತರಂಗನೆ ಅ-ನಂಗನ ಪೆತ್ತ ರಂಗವಿಠಲನೆ 3
--------------
ಶ್ರೀಪಾದರಾಜರು
ಪಾಲಿಸೊ | ಗುರುವರನೇ ಪಾಲಿಸೋ ಪ ಪಾಲಿಸೊ ಗುರುವರ ಎನ್ನ | ಬಲುಬಾಲ ಭಾಷೆಗೆ ಒಲಿದಿನ್ನ | ಆಹ |ಕಾಲ ಕಾಲಕೆ ಹೃದ | ಯಾಲಯದಲಿ ನಿಂತುಶೀಲ ಗೋಪಾಲನ | ಲೀಲ ಧ್ಯಾನವನಿತ್ತು ಅ.ಪ. ತಂದೆ ವೆಂಕ್ಟನಾ ಕೃಪಾ ಬಲದೀ | ಸಾರಿಬಂದೆನೋ ಪೊಗಳುತ್ತ ಮುದದೀ | ನಿನ್ನದ್ವಂದ್ವ ಪಾದವ ನೋಡೆ ಜವದೀ | ಭವಬಂಧವ ಕಳೆಯಲೋಸುಗದೀ | ಆಹ |ಮಂದಾನ ಕರೆ ತಂದು | ಸಂದೇಶ ಎನಗಿತ್ತುಛಂದಾದಿ ಸಲಹಿದ್ಯೋ | ಸಿಂಧೂರ ಗಿರಿವಾಸ 1 ಅಹಿನವಾಭಿಧ ಕಾಯೋಯನ್ನಾ | ಮನಮೋಹ ಜಾಲವ ನೀಗೋ ಘನ್ನಾ | ಬಲುಕುಹಕ ಬುದ್ಧಿಯ ಬಿಡಿಸೆನ್ನಾ | ನಿನ್ನನೇಹ ಕರುಣೀಸೆನಗೆ ಮುನ್ನ | ಆಹವಿಹಗವಾಹನ ದೂತ | ಮಹಭಯ ವಾರಣಸಹನಾದಿ ಗುಣವಂತ | ಪ್ರಹಿತಾದಿ ಸಲಹೆನ್ನ 2 ಮುದ್ದು ಮೋಹನ ಗುರು ಬಾಲಾ ತಂದೆಮುದ್ದು ಮೋಹನ್ನ ವಿಠ್ಠಲ್ಲಾ | ಸಿರಿಮುದ್ದು ನೃಸಿಂಹನ ಲೀಲಾ | ಬಲುಮುದ್ದಿಸಿ ಪಾಡುವೆ ಬಹಳಾ | ಆಹಮಧ್ವಾಂತರ್ಗತ ಗುರು | ಗೋವಿಂದ ವಿಠಲನೆಹೆದ್ದ್ಯವ ವೆಂತೆಂಬ | ಶುದ್ಧ ಮತಿಯನಿತ್ತು 3
--------------
ಗುರುಗೋವಿಂದವಿಠಲರು
ಬಂದು ನಿಮ್ಮಡಿಗಳ ನಾಶ್ರಯಿಸಿದೆ ಪ್ರಭುವೆ ಭವ ಬಂಧನಗಳ ಬಿಡಿಸಿ ನೀ ಕಾಯೊ ಸದ್ಗುರುವೇ ಪ ಎಲ್ಲೆಲ್ಲಿಯೂ ತಿರುಗಿ ಕಾಯುವರ ಕಾಣದೆಲೆ ತಡಮಾಡದೆಮ್ಮಯ ದುಗುಡಗಳ ಪರಿಹರಿಸಿ ಕರುಣದಿಂದಲಿ ಕಾಯೊ ಗುರುರಾಘವೇಂದ್ರಾ 1 ನಿಶೆ ಹಗಲು ನಿನ್ನನು ಸ್ತುತಿಸಿ ಬೇಡುವೆ ಪ್ರಭುವೆ ಗತಿಗಾಣೆ ನಿನ್ಹರತು ಈ ಪೃಥುವಿಯೊಳಗೆ ಅತಿವ್ಯಥೆಯಲೀ ನೊಂದು ಮತಿಯಿಲ್ಲದಂತಿಹೆನು ತ್ವರಿತದಿಂದಲಿ ಕಾಯೊ ಹೇ ಗುರುರಾಜ ಪ್ರಭುವೇ 2 ಜಗವೆಲ್ಲ ನಿಮ್ಮ ಮಹಿಮೆ ಸಾರುತಿರುವುದ ಕೇಳಿ ಭರದಿಂದ ಬಂದೆನೋ ಗುರುರಾಘವೇಂದ್ರಾ ಇಂದೆಮ್ಮ ಅಪರಾಧಗಳ ಎಣಿಸದೆಲೆ ಸಲಹೈಯ್ಯಾ ಕಾರುಣ್ಯಮೂರ್ತಿ ಶ್ರೀ ಗುರುರಾಘವೇಂದ್ರಾ 3
--------------
ರಾಧಾಬಾಯಿ
ಮೂರ್ತಿ ನೀ ಕರುಣಿಸೊ ಪ್ರಭುವೇ ಪ ಎಲ್ಲೆಲ್ಲಿ ನೋಡಲಲ್ಲಿಲ್ಲಿ ನಿಮ್ಮಯ ಕೀರ್ತಿಯನು ಮೊರೆಹೊಕ್ಕ ಸುಜನರ ಪೊರೆವರೆಂಬ ಬಿರುದು ಕೇಳಿ ತ್ವರಿತದಿಂದಲಿ ಬಂದೆನೋ ಭರದೀ ಹಾರೈಸು ಕರುಣಾ ಶರಧೀ 1 ಇಷ್ಟಾರ್ಥಗಳನಿತ್ತು ಸಲಹಿದೆ ತುಪ್ಪರಾಗುತಲವರ ಕಷ್ಟಗಳನೇ ಕಳೆದೆ ಉದ್ಧರಿಸಿದೆ ಅಷ್ಟ ಸೌಭಾಗ್ಯವ ಕೊಟ್ಟು ರಕ್ಷಿಸಿದೇ - ಕೈಬಿಡದೇ 2 ಅಡಿಗಳಿಗೆರಗುತಲಿ ನುಡಿ ನುಡಿಗೆ ತುತಿಸಲಿ ಬಿಡದೆ ನಿನ್ನನು ಕೊಂಡಾಡುತಲಿ ತಡಮಾಡದೆ ಯಡರುಗಳ ಪರಿಹರಿಸಿದೆ ನಿಮ್ಮ ಮಹಿಮೆಗೆ ಸರಿಗಾಣೆ ಭೂಮಂಡಲದೊಳಗೇ ಪ್ರಭವೇ 3
--------------
ರಾಧಾಬಾಯಿ
ಶ್ರೀ ವೆಂಕಟಾಚಲ ನಿವಾಸ ನಿನ್ನ ಸೇವಾನುಸೇವಕರ ದಾಸಾ ಎನಿಸಿ ಜೀವಿಸುವ ನರಗೆ ಆಯಾಸಾ ಯಾಕೆ ಶ್ರೀವರನೆ ಕೊಡು ಎಮಗೆ ಲೇಸಾ 1 ಕಂಸಾರಿ ಪ್ರಭು ನಿನ್ನ ದಿವ್ಯ ನಾಮ ಒದಗಲು ಜಿಹ್ವೆಗೆನ್ನಾ ದೋಷ ಸೀಮೆಗಾಣದಿದ್ದರೆನ್ನ ಸ್ವಾಮಿ ನೀ ಮರೆಯಲಾಗದು ಸುಪ್ರಸನ್ನ 2 ನೀಚ ಯೋನಿಗಳಲ್ಲಿ ಬಂದೆ ಇನ್ನು ನಾಚಿಕಿಲ್ಲವೊ ಎನಗೆ ತಂದೆ ನೀನೆ ಮೋಚಕನು ಬಿನ್ನಪ ವಿದೆಂದೆ ಸವ್ಯ ಸಾಚಿಸಖ ಕೈಪಿಡಿಯೋ ತಂದೆ 3 ನಾನೊಬ್ಬನೇ ನಿನಗೆ ಭಾರವಾದೆ ನೇನೊ ಸಂತತ ನಿರ್ವಿಕಾರ ಎನ್ನ ಹೀನತ್ವ ನೋಡಲ್ಕಪಾರ ಚಕ್ರ ಪಾಣಿ ಮಾಡಿದಿರೆನ್ನ ದೂರ 4 ಕಂಡ ಕಂಡವರಿಗಾಲ್ಪರಿದು ಬೇಡಿ ಬೆಂಡಾದೆ ನಿನ್ನಂಘ್ರಿ ಮರೆದು ದಿಟ ತೊಂಡವತ್ಸಲನೆಂಬ ಬಿರುದು ಕಾಯೊ ಪುಂಡರೀಕಾಕ್ಷ ನೀನರಿದು 5 ಈ ಸಮಯದೊಳೆನ್ನ ತಪ್ಪ ನೋಡಿ ನೀ ಸಡಿಲ ಬೇಡುವರೇನಪ್ಪ ನಿನ್ನ ದಾಸರ್ಪೆಸರ್‍ಗೊಳಲು ಬಪ್ಪಾ ದೋಷ ನಾಶವಾಗೋದು ತಿಮ್ಮಪ್ಪ 6 ಕಾಮಾದಿಗಳ ಕಾಟದಿಂದ ನಿನ್ನ ನಾ ಮರೆದೆ ಸಚ್ಚಿದಾನಂದ ಎನ್ನ ಈ ಮಹಾ ದೋಷಗಳ ವೃಂದ ನೋಡದೆ ನೀ ಮನ್ನಿಸೆನ್ನ ಮುಕುಂದ 7 ನೀ ಪಿಡಿದವÀರ ಸಹಸ್ರಾರ ಸುಜನ ಪಾಪಾಟವಿಗೆ ಸುಕುಠಾರಾ ಜಗ ದ್ವ್ಯಾಪಕನೆ ಎನ್ನ ಸಂಸಾರ ಘೋರ ಕೊಪದಿಂದೆತ್ತಯ್ಯ ಧೀರ 8 ಸಿಂಧೂರ ರಾಜ ಪರಿಪಾಲ ಕೋಟಿ ಕಂದರ್ಪ ಲಾವಣ್ಯ ಶೀಲ ಧರ್ಮ ಮಂದಾರ ಭೂಜಾಲಪಾಲ ಯೋಗಿ ಸಂದೋಹ ಹೃತ್ಕುಮುದ ಶೀಲಾ 9 ಶಿವನ ವೈರಿಯ ಕೊಂದ ಶಕ್ತ ಪುಣ್ಯ ಶ್ರವಣ ಕೀರ್ತನ ನಿನ್ನ ಭಕ್ತಾ ಜನರ ಭವದೊಳಗೆ ದಣಿಸುವುದು ಯುಕ್ತವೇನೊ ಭುವನ ಪಾವನ ನಿತ್ಯಮುಕ್ತ 10 ಶ್ರೀಕರ ಶ್ರೀಮದಾನಂತ ನಿಖಿಳ ಲೋಕೈಕನಾಥ ನಿನ್ನಂಥ ಸಖರ ನಾ ಕಾಣೆನೆಲ್ಲಿಯೂ ಮಹಂತಾ ಎನ್ನ ನೀ ಕಾಯೋ ಕಂಡ್ಯ ಭೂಕಾಂತಾ 11 ಕರ್ಮ ಚಿತ್ರತ್ವಗ್ರಸನ ಕಾಯ ಕರಣ ಮನಹಂಕಾರ ಘ್ರಾಣಾ ಬುದ್ದಿ ಚರಣ ಪಾಯೂಪಸ್ಥ ನಯನಜಾತ ಉರುಪಾಪ ಕ್ಷಮಿಸು ಶ್ರೀ ರಮಣಾ 12 ಅನಿಮಿತ್ತ ಬಂಧು ನೀಯೆನ್ನ ಬಿಡುವು ದನುಚಿತವೋ ಲೋಕಪಾವನ್ನ ಚರಿತ ಮನ ವಚನ ಕಾಯದಲಿ ನಿನ್ನ ಪಾದ ವನಜ ನಂಬಿದೆ ಸುಪ್ರಸನ್ನಾ 13 ನೀನಲ್ಲದೆನಗೆ ಗತಿಯಿಲ್ಲ ಪವ ಮಾನವಂದಿತ ಕೇಳೋ ಸೊಲ್ಲ ಎನ್ನ ಜ್ಞಾನೇಚ್ಛೆ ಕ್ರಿಯಂಗಳೆಲ್ಲಾ ನಿನ್ನ ಧೀನವಲ್ಲವೆ ಲಕ್ಷ್ಮೀನಲ್ಲಾ 14 ಪ್ರಾಚೀನ ಕರ್ಮಾಂಧ ಕೂಪದೊಳಗೆ ಯೋಚಿಸುವ ನರರ ಸಂತಾಪ ನಿನಗೆ ಗೋಚರಿಸದೇನೋ ಬಹುರೂಪ ವೆಂಕ ಟಾಚಲನಿಲಯ ಪಾಹಿ ಶ್ರೀಪಾ 15 ಯಾಕೆ ದಯ ಬಾರದೆನ್ನಲ್ಲಿ ನರಕ ನಾಕ ನರಕ ಭೂ ಲೋಕಂಗಳಲ್ಲಿ ಚರಿಸಿ ನಾ ಕಷ್ಟಪಟ್ಟ ಬಗ್ಗೆ ನೀ ಬಲ್ಲಿ ವೀತ ಶೋಕ ಕೊಡು ಭಕುತಿ ನಿನ್ನಲ್ಲಿ 16 ಬನ್ನ ಬಡಿಸುವರೇನೋ ಬಿಡದೆ ನಾನು ಮುನ್ನ ಮಾಡಿದ ಪಾಪ ಕೆಡದೆ ನೀ ಪ್ರ ಪನ್ನ ವತ್ಸಲನೆಂದು ನುಡಿದೆ 17 ತಾಪತ್ರಯಗಳಿಂದ ನೊಂದೆ ಮಹಾ ಪಾಪಿಷ್ಠರಲ್ಲನ್ನ ತಿಂದೆ ಇನ್ನು ಆಪರೇತೇಶ್ವರನ ಮುಂದೆ ಪೋಗಿ ನಾ ಪೇಕೊಳಲೇನು ತಂದೆ 18 ದೇಹ ಸಂಬಂಧಿಗಳ ಸಹಿತವಾಗಿ ನಾ ಹೊಂದಿದೆನು ಲೋಕಮೋಹಿತ ಎನ್ನ ಮೋಹಿಪ್ರದು ನಿನ್ನಗೇನು ವಿಹಿತ ಹೃದಯ ಬಾಹಿರಂತರದಿ ಸನ್ನಿಹಿತ 19 ಪೋಗುತಿದೆ ದಿವಸ ಕಮಲಾಕ್ಷ ಪರಮ ಅಪರೋಕ್ಷ ಎನಗೆ ಹೇಗಾಗುವುದೊ ಸುರಾಧ್ಯಕ್ಷ ದುರಿತ ನೀನು ಕಾಮಿತ ಕಲ್ಪವೃಕ್ಷ 20 ಗತಿಯಾರು ನಿನ್ನುಳಿದು ದೇವ ರಮಾ ಸಂಜೀವ ಎನ್ನ ಸತಿಸುತರ ಅನುದಿನದಿ ಕಾವ ಭಾರ ಸತತ ನಿನ್ನದು ಮಹಾನುಭಾವ 21 ದೊಡ್ಡವರ ಕಾಯ್ವುದೇನರಿದು ಪರಮ ದಡ್ಡರನು ಕಾಯ್ವದೇ ಬಿರುದು ಎನ್ನ ಗುಡ್ಡದಂತಹ ಪಾಪ ತರಿದು ಕಾಯೋ ವಡ್ಡಿ ನಾಯಕ ಸಾರೆಗರದೊ 22 ಜ್ಞಾನಿಗಳು ನೀಚರಲಿ ಕರುಣಾ ಮಾಡ ರೇನೋ ಬಿಡುವರೇ ರಥಚರಣ ಪಾಣಿ ಭಾನು ಚಂಡರವಿಕಿರಣ ಬಿಡದೆ ತಾನಿಪ್ಪನೆ ರಮಾರಮಣ23 ಆಡಲ್ಯಾತಕೆ ಬಹಳ ಮಾತಾ ಪರರ ಬೇಡಲಾರೆನೋ ಜಗತ್ರಾತಾ ಹೀಗೆ ಮಾಡುವರೇ ಕೆಳೆನ್ನ ಮಾತ ನೀನೆ ನೀಡೆನಗೆ ಪುರುಷಾರ್ಥ ದಾತಾ 24 ಬೇಡಲೇತಕೆ ಬಹಳ ಮಾತಾ ಎನ್ನ ಕೇಡು ನಿನ್ನದಲ್ಲೇ ಬಲಿದೌತ ಪಾದ ಬೇಡಿಕೊಂಬುವೆ ನಾನನಾಥ ದೂರ ನೋಡಲಾಗದು ಪಾರ್ಥಸೂತ 25 ನಿತ್ಯ ಬಿಡದೆ ಶಾರದೇಶನ ನುತಿಪ ಭಕ್ತ ಜನರ ಪಾರ ಸಂತೈಸುವುದು ಮಿಥ್ಯವಲ್ಲ ಶ್ರೀರಮಣ ಸಾಕ್ಷಿದಕೆ ಸತ್ಯಾ 26 ಪರಿಯಂತ ಶಯನ ಪ್ರಣತಾರ್ತಿ ಹರನೆಂಬೊ ಅಂಕಾ ಕೇಳಿ ಮಣಿದ ನಿನ್ನಂಘ್ರಿಗೆ ಶಶಾಂಕಾ ಭಾಸ ದಣಿಸಲಾಗದು ನಿಷ್ಕಳಂಕಾ27 ಕಾರ್ತವೀರ್ಯಾಜುನನ ಕೊಂದ ಭವ್ಯ ಕೀರ್ತಿ ನಿನ್ನಾನಂದ ವೃಂದ ಸತತ ಕೀರ್ತಿಸುವ ನರರ ಬಹುಕುಂದ ನೋಡ ದಾರ್ತನ್ನ ಪೊರೆಯೊ ಗೋವಿಂದ 28 ದಯದಿಂದ ನೋಡೆನ್ನ ಹರಿಯೆ ಜಗ ನ್ಮಯನೆ ಜ್ಞಾನಾನಂದ ವೃಂದ ಸಿರಿಯೆ ಮನಾ ಭಯದೂರರಿನ್ನೊಬ್ಬರರಿಯೇ 29 ನರಸಿಂಹ ನಿನ್ನುಳಿದು ಜಗವ ಕಾಯ್ವ ಪರಮೋಷ್ಠಿ ರಾಯನು ನಗುವ ನಿತ್ಯ ನಿರಯಾಂಧ ರೂಪದೊಳು ಹುಗಿವಾ 30 ದಾಸ ದಾಸರ ದಾಸನೆಂದು ಬಿಡದೆ ನೀ ಸಲಹೋ ಎನ್ನನೆಂದೆಂದೊ ನಿನ್ನ ನಾ ಸೇವಿಸುವೆ ಕೃಪಾಸಿಂಧು ಎಮ್ಮನು ದಾಸಿಸದÀನಿಮಿತ್ತ ಬಂಧೂ 31 ಎಂದೆಂದು ನೀ ಬಡವನಲ್ಲ ನಿನ್ನ ಮಂದಿರದೊಳಗೆ ಬಲ್ಯಲ್ಲಾ ಚಿದಾ ನಂದ ನೀ ಭಕ್ತ ವತ್ಸಲ್ಲಾ 32 ಕಾಮಿತಪ್ರದನೆಂಬ ಬಿರಿದು ಕೇಳಿ ನಾ ಮುದದಿ ಬಂದೆನೋ ಅರಿದು ಎನ್ನ ತಾಮಸ ಮತಿಗಳೆಲ್ಲ ತರಿದು ಮಮ ಸ್ವಾಮಿ ನೋಡೆನ್ನ ಕಣ್ದೆರದು33 ಹಿತವರೊಳು ನಿನಗಧಿಕರಾದ ತ್ರಿದಶ ತತಿಗಳೊಳು ಕಾಣೆನೋ ಪ್ರಮೋದ ನೀನೆ ಗತಿಯೆಂದು ನಂಬಿದೆ ವಿವಾದವ್ಯಾಕೊ ಪತಿತಪಾವನ ತೀರ್ಥಪಾದ 34 ಮಡದಿ ಮಕ್ಕಳು ತಂದೆ ತಾಯಿ ಎನ್ನ ಒಡಹುಟ್ಟಿದವರ ನೀ ಕಾಯಿ ಲೋಕ ದೊಡೆಯ ನೀನಲ್ಲದಿನ್ನಾರೈ ಎನ್ನ ನುಡಿ ಲಾಲಿಸೋ ಶೇಷಶಾಯಿ 35 ಅನುಬಂಧ ಜನರಿಂದ ಬಪ್ಪ ಕ್ಲೇಶ ವನುಭವಿಸಲಾರೆ ಎನ್ನಪ್ಪ ಉದಾ ಸೀನ ಮಾಡಿ ದಯಮಾಡದಿಪ್ಪರೇನೋ ಘನ ಮಹಿಮ ಫಣಿರಾಜತಲ್ಪ 36 ಹದಿನಾಲ್ಕು ಲೋಕಂಗಳನಾಳ್ವ ಬ್ರಹ್ಮ ಮೊದಲಾದವರು ನಿನ್ನ ಚಲ್ವನಖದ ವಿಧಿಸಲಾಪೆನೆ ನಿನ್ನ ಸಲ್ವಾ 37 ಧನ ಧಾನ್ಯ ಪಶು ಪತ್ನಿ ಗೇಹ ಜನನೀ ಜಾಮಾತ ಸಖ ನೇಹ ಅನುಜ ತನುಜಾಪ್ತವರ್ಗದಿಂದಾಹ ಸೌಖ್ಯ ನಿನಗರ್ಪಿಸಿದೆ ಎನ್ನ ದೇಹಾ 38 ನೀನಿತ್ತ ಸಂಸಾರದೊಳಗೆ ಸಿಲುಕಿ ನಾನೊಂದೆ ಕರೆ ನಿನ್ನ ಬಳಿಗೆ ಚರಣ ಧ್ಯಾನ ದೊರಕಲು ಭವದಿ ಮುಳುಗೆ ನಿನ್ನ ಕಾಣದಿರಲಾರೆನರ ಘಳಿಗೆ 39 ಸಲುಗೆ ಬಿನ್ನಪವ ನೀ ಕೇಳೋ ಎನ್ನ ಬಲು ದುರುಳತನವ ನೀ ತಾಳೋ ನೀನೆ ನೆಲೆಯಲ್ಲದೆನಗಾರು ಪೇಳೋ ಎನ್ನ ಕುಲದೈವ ಬಹುಕಾಲ ಬಾಳೋ40 ಸಾಂದೀಪ ನಂದನನ ತಂದ ನಂದ ಭವ ವೃಂದ ಕಳೆದು ಎಂದೆಂದು ಕುಂದದಾನಂದವೀಯೋ ಇಂದಿರಾರಮಣ ಗೋವಿಂದ41 ತೈಜಸ ಪ್ರಾಜ್ಞ ತುರಿಯಾ ಎನ್ನ ದುಸ್ವಭಾವವ ನೋಡಿ ಪೊರೆಯದಿಹರೆ ನಿಸ್ಪøಹ ನಾನಿನ್ನಂಘ್ರಿ ಮೊರೆಯ ಪೊಕ್ಕೆ ಅಸ್ವತಂತ್ರನ ಕಾಯೋ ಪಿರಿಯಾ42 ಇಹಪರದಿ ಸೌಖ್ಯ ಪ್ರದಾತ ನೀನೆ ಅಹುದೋ ಲೋಕೈಕ ವಿಖ್ಯಾತ ಮಹಾ ಮಹಿಮ ಗುಣಕರ್ಮ ಸಂಜಾತ ದೋಷ ದಹಿಸು ಸಂಸಾರಾಬ್ದಿ ಪೋತಾ 43 ಲೋಕಬಾಂಧವನೆಂಬ ಖ್ಯಾತಿಯನ್ನು ನಾ ಕೇಳಿದೆನು ಖಳಾರಾತಿ ಮನೋ ಶೋಕ ಮೋಹಾಜ್ಞಾನ ಭೀತಿ ಬಿಡಿಸು ಶ್ರೀ ಕರಾರ್ಚಿತ ಸ್ವಯಂ ಜ್ಯೋತಿ44 ಒಂದು ಗೇಣೊಡಲನ್ನಕಾಗಿ ಅಲ್ಪ ಮಂದಭಾಗ್ಯರ ಮನೆಗೆ ಪೋಗಿ ದೈನ್ಯ ದಿಂದ ಸತ್ಕರ್ಮಗಳ ನೀಗಿ ಕಂದಿ ಕುಂದಿದೆನೋ ಸಲಹೋ ಲೇಸಾಗಿ45 ಪಾತಕರೊಳಗಧಿಕ ನಾನಯ್ಯ ಜಗ ತ್ಪಾತಕವ ಕಳೆವ ಮಹಾರಾಯ ನಿನ್ನ ದೂತನಲ್ಲವೆ ಜೀಯ ಜಗ ನ್ನಾಥ ವಿಠ್ಠಲ ಪಿಡಿಯೋ ಕೈಯಾ 46
--------------
ಜಗನ್ನಾಥದಾಸರು
ಯಾಕೆ ನಿನ್ನ ಮನಕೆ ಬಾರೆನೋ ಹೇ ವೇಂಕಟೇಶ ಪಕಾಕುಬುದ್ಧಿ ಎನಗಿಲ್ಲೋ ಹೇ ವೆಂಕಟೇಶಾಅ.ಪಬೆದರಿ ನಿನ್ನ ನೊದೆಯಲಿಲ್ಲೊ ಹೇ ವೆಂಕಟೇಶಾ 1ತಿನಿಸಿದ ತರ ನಾ ತಿನಿಸಲಿಲ್ಲವೋ ಹೇ ವೆಂಕಟೇಶಾ 2ಭಂಡಿ ಹೊಡಿ ಎಂದು ನಡೆಸಲಿಲ್ಲವೋ ಹೇ ವೆಂಕಟೇಶಾ 3ಕಟ್ಟಿಗೆಯ ಹೊರಿಸಲಿಲ್ಲವೋ ಹೇ ವೆಂಕಟೇಶಾ 4ಕೆಟ್ಟ ಕಾರ್ಯ ಮಾಡಿಲಿಲ್ಲವೊ ಹೇ ವೆಂಕಟೇಶಾ 5ಮುಟ್ಟಿ ನಿನ್ನ ಭಜಿಸಿದ ಫಲವೇನೋ ಹೇ ವೆಂಕಟೇಶಾ 6ದಾತಶ್ರೀ ಗುರುಜಗನ್ನಾಥ ವಿಠಲನೆಂದು ನಾಪ್ರೀತಮನದಿ ಬಂದೆನೋ ವೆಂಕಟೇಶಾ 7
--------------
ಗುರುಜಗನ್ನಾಥದಾಸರು
ಯಾರಲಿ ದೂರುವೆನೋ ಗಿರಿಯ ರಾಯಾಯಾರೆನ್ನ ಸಲಹುವರೋ ಪಸಾರಿದ ಭಕ್ತ ಸಂಸಾರಿ ನಿನ್ನಯ ಪದವಾರಿಜವನು ತೋರೋ ಕಾರುಣ್ಯ ನಿಧಿ ಬೇಗ ಅ.ಪಕಷ್ಟಜನ್ಮಕೆ ಬಂದೆನೋ-ಧಾರಿಣಿಯೊಳುದುಷ್ಟರಿಂದಲಿ ನೊಂದೆನೋ ||ನಿಷ್ಠುರ ಬೇಡವೊ ನಿನ್ನ ನಂಬಿದ ಮೇಲೆಸೃಷ್ಟಿಗೊಡೆಯ ಎನ್ನ ಬಿಟ್ಟು ಕಳೆಯಬೇಡ 1ಹಿಂದೆ ಮಾಡಿದ ಕರ್ಮವು ಈ ಭವದೊಳುಮುಂದಾಗಿ ತೋರುತಿದೆ ||ಇಂದೇನುಗತಿಅದರಿಂದ ನೊಂದೆನು ನಾನುಮಂದರಧರಗೋವಿಂದ ನೀನಲ್ಲದೆ2ಹಗಲು ಕತ್ತಲೆ ಸುತ್ತಿದೆ ಕಂಗೆಡಿಸುತಹಗೆಗಳ ನಗಿಸುತಿದೆ ||ಉಗುರಲಿ ಸೀಗೆ ಮುಳ್ಳುಗಳೀಗ ನೆಡುತಿವೆಸೊಗವ ಹಾರಿಸಿ ಎದೆ ದಿಗಿಲುಗೊಳಿಸುತಿದೆ 3ಬಾಡಿದರಳಿಸಸಿಯ ಕಲ್ಲಿನ ಮೇಲೆಈಡಾಗಿ ನಾಟಿದರೆ ||ಬೇಡಿಕೊಂಡರೆತಳಿರುಮೂಡಿ ಬರುವುದುಂಟೆರೂಢಿಗೊಡೆಯ ನೀನು ನೋಡದಿದ್ದ ಮೇಲೆ 4ಹಲವು ಪರಿಯ ಕಷ್ಟವ ನಿನ್ನಯಪಾದಜಲಜದ ಕರುಣದಲಿ ||ಸುಲಿಗೆಗೊಟ್ಟೆನು ನಾನು ಸೂರೆಗಾರರಿಗೆಲ್ಲಒಲವಾಗು ಎನ್ನೊಳು ಪುರಂದರವಿಠಲ 5
--------------
ಪುರಂದರದಾಸರು