ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೂಗಿರೆ ರಂಗನ್ನ ತೂಗಿರೆ ಕೃಷ್ಣನತೂಗಿರೆ ಅಚ್ಯುತಾನಂತನ ಪ.ತೂಗಿರೆ ವರಗಿರಿ ಅಪ್ಪ ತಿಮ್ಮಪ್ಪನತೂಗಿರೆ ಕಾವೇರಿ ರಂಗಯ್ಯನ ಅಪಇಂದ್ರಲೋಕದೊಳುಪೇಂದ್ರ ಮಲಗಿಹನೆಬಂದೊಮ್ಮೆ ತೊಟ್ಟಿಲ ತೂಗಿರೆಮಂದಗಮನೆಯರು ಚೆಂದದಿ ಪಾಡುತನಂದನ ಕಂದನ ತೂಗಿರೆ 1ನಾಗಲೋಕದಲ್ಲಿ ನಾರಾಯಣ ಮಲಗಿಹನೆಹೋಗಿ ನೀವ್ ತೊಟ್ಟಿಲ ತೂಗಿರೆನಾಗವೇಣಿಯರು ನಾಲ್ಕು ನೇಣನು ಪಿಡಿದುಭಾಗ್ಯವಂತನೆಂದು ತೂಗಿರೆ 2ಜಲಧಿಯೊಳಾಲದ ಎಲೆಯಲ್ಲಿ ಮಲಗಿದಚೆಲುವನ ತೊಟ್ಟಿಲ ತೊಗಿರೆಸುಲಭ ದೇವರ ದೇವ ಬಲಿಬಂಧಮೋಚಕಎಳೆಯನ ತೊಟ್ಟಿಲ ತೂಗಿರೆ 3ಸೂಸುವ ಮಡುವಿನೊಳ್ ಕಾಳಿಯನ ತುಳಿದಿಟ್ಟದೋಷವಿದೂರನ ತೂಗಿರೆಸಾಸಿರ ನಾಮದ ಸರ್ವೋತ್ತಮನೆಂದುಲೇಸಾಗಿ ತೊಟ್ಟಿಲ ತೂಗಿರೆ 4ಅರಳೆಲೆ ಮಾಗಾಯಿ ಕೊರಳ ಪದಕ ಸರತರಳನ ತೊಟ್ಟಿಲ ತೂಗಿರೆಉರಗಾದ್ರಿವಾಸ ಶ್ರೀ ಪುರಂದರವಿಠಲನಹರುಷದಿ ಪಾಡುತ ತೂಗಿರೆ 5
--------------
ಪುರಂದರದಾಸರು
ನಡೆರಂಗ ನಡೆ ಕೃಷ್ಣ ನಡೆ ಮನೆಗೆಧೃಡ ಭಕ್ತರ ಕೂಡಿ ದ್ವಾರಕೆಗೆ ಪ.ಬಂದ ಜನರಿಗೆಲ್ಲ ಗಂಧ ಕುಂಕುಮವನಿಟ್ಟುತಂದು ತಾಂಬೂಲ ಕೊಡುತಲೆತಾಂಬೂಲ ಕೊಡುತಲೆ ರುಕ್ಮಿಣಿಕುಂದವ ಮಾಡಿ ಬಗೆಯದೆ 1ಮಿತ್ರೆ ದ್ರೌಪತಿದೇವಿ ಮತ್ತೆ ಪಾದಕ್ಕೆರಗಿಅತ್ಯಂತ ನಾವು ನುಡಿದೆವಅತ್ಯಂತ ನಾವು ನುಡಿದ ಅಪರಾಧವಚಿತ್ತದೊಳಿಡದೆ ಕರುಣಿಸು 2ಅರಗಿಳಿ ಮಾತಿನಹರದಿಸುಭದ್ರಾ ತಾನುಎರಗಿದಳುಭಾವೆಚರಣಕ್ಕೆಎರಗಿದಳುಭಾವೆಚರಣಕ್ಕೆ ರುಕ್ಮಿಣಿಯಪರಮಆಶೀರ್ವಾದ ಇರಲೆಂದು3ಅತ್ತಿಗೆಯರೆಂದು ಅರ್ಥಿಲಾಡಿದ ಮಾತುಮತ್ತೊಂದು ನೀವು ತಿಳಿಯದೆಮತ್ತೊಂದು ನೀವು ತಿಳಿಯದೆ ರಂಗನಮಿತ್ರೆಯರೆ ನಿಮ್ಮ ದಯವಿರಲಿ 4ಬಂದು ಪಾಂಡವರೆಲ್ಲ ಇಂದಿರೇಶಗೆ ಎರಗಿಚಂದಾಗಿ ತಾವು ಕೈ ಮುಗಿದುಚಂದಾಗಿ ತಾವು ಕೈ ಮುಗಿದು ನುಡಿದರುಕುಂದುಗಳೆಣಿಸದೆ ಸಲುಹೆಂದು 5ಭಾವಮೈದುನತನದಿ ನಾವೊಂದು ವಿನಯದಿಯಾವ ತಪ್ಪುಗಳ ಎಣಿಸದೆಯಾವ ತಪ್ಪುಗಳ ಎಣಿಸದೆ ಶ್ರೀ ಕೃಷ್ಣದೇವ ನೀ ಮಾಡೊ ದಯವನೆ 6ತಂದೆ ರಾಮೇಶಗೆ ನಾವಂದ ಮಾತುಗಳೆಲ್ಲಕುಂದವ ಮಾಡಿ ಬಗೆಯದೆಕುಂದವ ಮಾಡಿ ಬಗೆಯದೆ ನಮ್ಮನೆಗೆಬಂದು ಬಂದೊಮ್ಮೆ ಸಲುಹಯ್ಯ 7
--------------
ಗಲಗಲಿಅವ್ವನವರು