ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇವೆ ನರ ಪಶು ಕಾಣಿರ್ಯೋ | ಇದೇ ಮನದ ಸ್ಥಿತಿ ನೋಡಿರ್ಯೋ ಪ ಉದಯದಲೇಳುತ ಉದರದಿ ಧಾವತಿ | ಉದರ ತುಂಬಲು ನಿದ್ರಿಯ ಭರವು | ಮದದಲಿ ಭಯ ಕೊಟ್ಟಿಗೆಯಲಿ ಮಾಯದ | ಸದಮಲ ಪಾರದ ಬಂಧನವು 1 ಸಂಚಿತ ನೊಗ ಹೆಗಲಲಿ ಪೊತ್ತು | ಘನ್ನದುರಿತ ಘಸಣೆಯ ತಳೆದು | ತನ್ನ ಹಿತಾ ಹಿತ ಲೇಶವ ನರಿಯದೆ | ಕಣ್ಣೆವೆಯಿಕ್ಕದೆ ಡೋಕುವನು 2 ಗುರುವರ ಮಹಿಪತಿ ನಂದನ ಸ್ವಾಮಿಯು | ಹೊರೆವ ವಡಿಯನೆಂಬ ಗುರುತರಿದೇ | ಅನುದಿನ ಕಾವವ | ಸಿರಿಯ ಮದಾಂಧನ ನಂಬಿಹುದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬುವುದು ತಾನು ಎಂತು ಸತಿಯು ಸುತರು ಮಗಳನುನಂಬಿ ಕಡೆ ಹಾಯ್ದುದುಂಟೆ ಹಾದಿಕಾರರನು ಪ ದಾರಿಕಾರರಿಗೆ ವಸತಿ ಮಳಿಗೆ ಭೇಟಿಯಲ್ಲೇದಾರಿ ಹಿಡಿದ ಬಳಿಕ ತಿರುಗಿ ಭೇಟಿಯಾಗೋದೆಲ್ಲಿದಾರ ಸುತರ ಭೇಟಿಯಿದೇ ದೇಹದೊಳಗೆ ಎಂದರಿಯೋಶರೀರವು ಬಿದ್ದ ಬಳಿಕ ಭೇಟಿ ಮುಂದೆ ಮರೆಯೋ1 ಕನಸಿನವರ ತಾನು ಈಗ ನೆನಸಲಿಕ್ಕೆ ಬಹರೆಕನಸಿನಂತೆ ತೋರುವರು ನೀನು ನಚ್ಚುವರೆಮನೆಯ ಬದುಕುಭಾಗ್ಯವೆಲ್ಲ ಮನದಿ ಜರೆದು ಬಿಡುನಿನಗೆ ಗತಿಯು ಏನು ಎಂದು ನೀನು ತಿಳಿದು ನೋಡು 2 ಹೆಗ್ಗಣವು ಜಾಗಿನೊಳಗೆ ಬಿದ್ದು ಮಿಡುಕಿದಂತೆವೆಗ್ಗಳಾಗಿ ಸಂಸಾರಕೆ ಮಾಡಿವೆಯೋ ಚಿಂತೆನುಗ್ಗು ಆದೆ ಬಯಲಭ್ರಾಂತಿ ನಿನಗೆ ವ್ಯಾಪಕಾಗಿಮುಗ್ಗುವೆ ನೀನೊಣನ ತೆರದಿ ನರಕದಲ್ಲಿ ಹೋಗಿ3 ನನ್ನ ಸಂಸಾರವೆನ್ನಬೇಡ ನೀನು ಇದನು ಈಗನನ್ನ ನನ್ನದೆಂದೆ ಹೋದ ನಿಮ್ಮಪ್ಪ ಮುಕ್ತನುಇನ್ನು ನಾಶವಿದು ಒಬ್ಬರಿಲ್ಲ ಸತ್ಯನಿನ್ನದಾರೆಂದು ಮರೆಯದಡೆ ನಿತ್ಯಾ4 ಇಂದ್ರಜಾಲ ನೋಡಲಿಕ್ಕೆ ಖರೆಯದಾಗಿ ಇಹುದುಅಂದದಾ ಪರಿಯು ಸಂಸಾರವೆ ನಿತ್ಯವಿಹುದುಬಂಧನವು ನಿನಗೆ ಇಹುದು ಗುರುವಿನ ಪಾದವಹೊಂದು ಮುಂದೆ ಚಿದಾನಂದನಹೆ ನೀನೀಗ ಎಂದು 5
--------------
ಚಿದಾನಂದ ಅವಧೂತರು
ಬಂದದ್ದನುಭವ ಮಾಡ್ವೆ ಕಂದನಾಗಿರುವೆ ತಂದೆ ನಿನ್ನಯ ದಯವೊಂದಿರಲಿ ಹರಿಯೆ ಪ ಮಂದಿ ಮಕ್ಕಳು ಎನ್ನ ಕುಂದಿಟ್ಟು ಜರೆಯಲಿ ಬಂಧು ಬಾಂಧವರೆಲ್ಲ ನಿಂದಿಸಿ ನುಡಿಲಿ ಬಂಧನವು ಬಿಡರಿರಲಿ ಎಂದೆಂದು ಮರೆಯದಂತೆ ಇಂದಿರೇಶ ನಿಮ್ಮ ಧ್ಯಾನವೊಂದೇ ಎನಗಿರಲಿ 1 ಭೂಪತಿಗಳೆನ್ನೊಳ್ಕೋಪಮಂ ತಾಳಲಿ ತಾಪಬಡಿಸಲಿ ಮಹಪಾಪಿವನೆನುತ ತಾಪತ್ರಯ ಬಿಡದಿರಲಿ ಪಾಪಲೋಪನೆ ಜಗ ದ್ಯ್ಯಾಪಕನೆ ನಿನ್ನ ಧ್ಯಾಸಪರೂಪ ಎನಗಿರಲಿ 2 ಕಂಡಕಂಡಂತೆ ಜನರು ಭಂಡನೆಂದೆನ್ನಲಿ ತಂಡತಂಡದಿ ಕಷ್ಟ ಅಂಡಲೆದು ಬರಲಿ ಹೆಂಡರು ಸೇರದೆ ಗಂಡನೆಲ್ಲೆಂದೆನಲಿ ಪಂಢರೀಶ ನಿನ್ನ ಪದೆನ್ನ ಮಂಡೆಮೇಲಿರಲಿ 3 ಎತ್ತ ಪೋದರು ಜನರು ಹತ್ರ ಬಡಿಯಲಿ ಎನಗೆ ವಿತ್ತಕೊಟ್ಟೊಡೆಯರು ನಿತ್ತರಿಸದೊದಿಲಿ ಮುತ್ತಿಕೊಂಡ್ವೈರಿಗಳು ಕುತ್ತಿಗೆ ಕೊಯ್ಯಲಿ ಚಿತ್ತಜಪಿತನಿನ್ನ ಭಕ್ತ್ಯೊಂದೆನಗಿರಲಿ 4 ಪೀಡಿಸಲಿ ಬಡತನವು ಕಾಡಿಸಲಿ ದಾರಿದ್ರ್ಯ ಓಡಿಸಲಿ ಪೊಡವಿಪರು ನಾಡ ಬಿಟ್ಟೆನ್ನ ನೋಡಲಿ ಮುನಿದೆನ್ನ ನಾಡದೈವಗಳೆಲ್ಲ ಬೇಡೆನೆ ಶ್ರೀರಾಮ ನಿನ್ನಡಿ ಬಲೊಂದೆನಗಿರಲಿ5
--------------
ರಾಮದಾಸರು
ಚಂಚಲಿಸದಿರು ನೀನು ಚತುರನಾಗುವಂಚಿಸದೆ ಸಕಲವೊಪ್ಪಿಸು ಹರಿಗೆ ಮನವೆ ಪ.ಆರು ನಿನ್ನವರೆಂಬೆ ಅವರಗಲಿದರು ಕಡೆಗೆಭೂರಿಸಂಚಿತ ಸಂಪದೆರವಾಯಿತುಜಾರುತಿವೆ ಕ್ಷಣಲವಗಳೀಗಾಗೆ ತಿಳಿಯದುನಾರಸಿಂಹನ ನಂಬು ನಿಷ್ಠೆಯಲಿ ಮನವೆ 1ಅಲ್ಪಸುಖಕಾಗಿ ನೀ ಅನೇಕ ಸುಖ ಮರೆವರೆಕಲ್ಪಕಲ್ಪಕೆ ನಿರಯವುಣಲಿಬಹುದೆಅಲ್ಪರುಪದೇಶದಲಿ ಭ್ರಾಂತನಾಗದೆಶೇಷತಲ್ಪನ್ನ ಮರೆಹೋಗು ತಡೆಯದಲೆ ಮನವೆ 2ನಿನ್ನಿಂದಭವಬಂಧನವು ಮೋಚನವುನೋಡುನಿನ್ನಿಂದ ಪ್ರಸನ್ವೆಂಕಟೇಶನೊಲುಮೆಇನ್ನೆನ್ನ ದಣಿಸದಿರು ಇದರಿಂದ ಮೀರಿದರೆಘನ್ನಗುರು ಮಧ್ವೇಶನಾಣೆ ನಿನಗೆ 3
--------------
ಪ್ರಸನ್ನವೆಂಕಟದಾಸರು