ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಿದರೆ ನಾ ನಿನ್ನ ಕಾಂಬೆಶ್ರೀನಿವಾಸನೆ ಭಕ್ತ ದೀನಜನ ಬಂಧೊ ಪ ಪರಮೇಷ್ಠಿ ಸುತನು ಕೊಟ್ಟ ಹರಿಮಂತ್ರ ತುಷ್ಟನಾಗುತ ನರಹರಿಯದೃಷ್ಟಿಯಿಂದ ಕಂಡವನಾ ಭೆಟ್ಟಿ ಸಾಧಿಸಲ್ಯಾ 1 ಹುಡುಗತನದಲಿ ತಂದೆ ತೊಡೆಯಾಸಿಗೆ ಬರೆ ತಾಯಿ-ನುಡಿದ ಮಾತನು ಕೇಳಿ ಅಡವಿಯೊಳಗೆಮೃಡ ಶಿಷ್ಟನುಪದೇಶವನು ನಂಬಿ ವೈಕುಂಠವನುಪಡೆದಿರುವ ಬಾಲಕನ ನಡತೆ ನಂಬಿರಲ್ಯಾ 2 ಐದು ಮಂದಿ ತನ್ನ ಕಾದುಕೊಳ್ಳದೆ ಇರಲುದುರುಳನೊಬ್ಬನು ರಾಜಬೀದಿಯೊಳಗೆಕೂದಲು ಹಿಡಿದೆಳೆದು ತರಲು ಶ್ರೀಧರನೆ ಎಂದೊದರಿಮೋದಿಸಿದ ಕಾಮಿನಿಯ ಹಾದಿ ಸೇರಿರಲ್ಯಾ 3 ಸತಿ ಸಹಾಯ ವೃಂದದಿ ಸಹಾಯ ಭೂತನಾಗಿಪ್ರೀತಿಯಲಿ ಲಂಕಾನಾಥನಾಗಿಹ ಮುನಿಪೋತ ರಾಕ್ಷಸನ ಸಖ ನೀತಿ ಸಾಧಿಸಲ್ಯಾ4 ಹೇ ಸುರಾರ್ಚಿತ ಮನುಜ ಕೇಸರಿಯ ಸುರಗೀತಾವಾಸುದೇವ ದ್ವಾರಕೀಶ ಕೃಪಾ ದಾಶರಥೆಶ್ರೀವೆಂಕಟೇಶ ಬದರಿನಿವಾಸ ದಾಸರ ಕಾಯೋಆದರದಿ ಇಂದಿರೇಶ ಕರುಣಾಬ್ಧಿ 5
--------------
ಇಂದಿರೇಶರು
ರಕ್ಷಿಸೋ ಶ್ರೀ ವೇದವ್ಯಾಸ | ಬದರಿನಿವಾಸ | ಆಶ್ರಿತ ಜನತೋಷ ಪ ಭೃತ್ಯ ಮತ್ಸ್ಯ | ವ್ಯಕ್ತನಾದನು ಹರಿ ಅವ್ಯಕ್ತ | ಕರೆಸಿದ ಸತ್ಯ | ವತಿಯಸುತ ಗೋಪ್ತ 1 ಕಾಲ ತಾಪ | ಬಟ್ಟರು ಜನ ಪ್ರಲಾಪ |ಶ್ರೀಪತಿ ತಾಳ್ದನು ರೂಪ | ವ್ಯಾಸ ರೂಪ | ದೋಷ ನಿರ್ಲೇಪ |ದ್ವೀಪದೊಳುದಿಸಿತೀರೂಪ | ಯಮುನಾ ಸಮೀಪ | ಪರಾಶರ ಜನೆನಿಪ 2 ಸೂತ್ರ ದಾತ | ಎನ್ನೊಳು ಪ್ರೀತ | ನಾಗು ಭಕ್ತಿ ಪ್ರದಾತ 3 ಜನಿತ | ಸಕಲ ಭಸ್ಮೀಭೂತ 4 ಭೋಗಾದಿಂ ಪ್ರಾರಬ್ಧ ಪೋಗಾಡಿದಂಥ | ಕಾರ್ಯಾಖ್ಯ ಬ್ರಹ್ಮಪ್ರಾಪ್ತ |ಯೋಗೀಜನ ಪ್ರಳಯೇಪಿ ಅಜನ ಪ್ರಾಪ್ತ | ಇತ್ಯಾದ್ಯವಸ್ಥಾದಿಯೊಳ್ಗತ |ಮಾರ್ಗಗಳು ಶೇಷ ಗರುಡಾದಿಯೋಳ್ಗತ | ಈ ಪರೀಯಿಂ ಸಮಸ್ತ |ಯೋಗೀ ಜನಂಗಳಿಗೆ ಆ ಅಜಸಮೇತ | ವಿರಜಾ ಸ್ನಾನ ಪ್ರಾಪ್ತ ||ಸ್ನಾನದಿಂದಲಿ ಲಿಂಗನಾಶ | ಮಾಡುವೆ ಶ್ರೀಶ | ಆದರವರು ನಿರ್ದೋಷ |ಅನಂತರ್ಹರಿ ಉದರ ಪ್ರವೇಶ | ಕೆಲವರು ಶ್ರೀಶ | ಆನಂದವೇ ವಪುಷ |ಜ್ಞಾನಿ ಇನ್ನಿತರರು ತದ್ದೇಶ | ದಲ್ಲಿವಾಸ | ಆನಂದಾನನುಭವ ಶ್ರೀಶ |ನಾನಾ ಪರಿಯೋಗ್ಯರ ಶ್ರೀಶ | ಪ್ರಳಯದಲ್ಲೀಶ | ಧರಿಸುವಸರ್ವೇಶ 5 ಪರಿ ಕಾರಣಂಗಳಿಂದ ನಿನ್ನ | ಇಚ್ಚಾಖ್ಯ ಆವರಣವಪಸಾರಿಸೀ |ತುಷ್ಟೀಯಿಂದಲಿ ಸ್ವಸ್ತಯೋಗ್ಯಸುಖವ | ಅಭಿವ್ಯಕ್ತಿಂಗಳಂ ಗೈಯ್ಯುವಾ |ಲಕ್ಷ್ಣ ಮುಕ್ತಿದ ಮಾಯೆ ಪತಿಯು ಆದ | ಶ್ರೀವಾಸುದೇವನ ದರ್ಶನ ||ವಾಸುದೇವನ ಕಂಡನಂತರ | ಮತಿವಂತರ | ಪೊಗಿಸುವಾಗಾರ |ಶ್ರೀಸಿತ ದ್ವೀಪಾದಿ ಆಗಾರ | ವರ ಮಂದಿರ | ವೈಕುಂಠಾಗಾರ | ಲೇಸಾಗಿ ಸ್ವಯೋಗ್ಯ ಸುಖಸಾರ | ಅತಿಪರತರ | ಅನುಭವಿಪ ವಿಸ್ತಾರ | ಆಶಾಮಾತ್ರದಿ ಸರ್ವ ಸುಖಸಾರ | ಸೃಷ್ಟ್ಯಾದಿ ಇತರ | ಇತ್ತು ತೋಷಿಪೆ ಅವರ 6 ಚಾರು ಕೌಪೀನ ಮದನ ದರ ಪೋಲ್ವಧದನ | ತುಳಸಿಯ ವನ | ಮಾಲೆಗಳ್ಹಸನ |ನಂದನಂದನ ನಿನ್ನ ಕರುಣ | ಗುಣಾಭರಣ | ತೊಡಿಸಯ್ಯ ಪ್ರಧನ 6 ಪ್ರೀಯಾ ಪ್ರೀಯ ಸರ್ವ ವಿಷಯಕೆಲ್ಲ | ನೀನೇ ಮೂಲನೆಂದು ತಿಳಿಸೋ |ಕಾಯಾ ವಾಚಕ ಮಾನಸೀಕ ಸರ್ವಾ | ಕರ್ಮಾದಿಗಳೆಲ್ಲವಾ ||ಜೀಯಾ ನಿನ್ನಯ ಚರಣಕಿತ್ತು ನಮಿಪ | ಬಿಂಬಕ್ರಿಯಾಜ್ಞಾನವಾ ||ರಾಯಾ ನೀನೆನಗಿತ್ತು ಪಾಲಿಸಯ್ಯ ಮುದದೀ | ನಿನ್ನನ್ನು ನಾ ಬೇಡುವೆ ||ತುತಿಪ ಜನರ ಸುರಧೇನು | ಕಾಮಿತವನೆ | ಕರುಣಿಪ ಕಲ್ಪದ್ರುಮನೆ |ಮತಿಗೆಟ್ಟ ಮನುಜನು ನಾನೆ | ನಿನ್ನ ಪಾದವನೆ | ನಂಬಿ ಬಂದಿಹೆ ನಾನೇ |ಹಿತದಿಂದ ನೀನೆನ್ನ ಕರವನೆ | ಪಿಡಿ ಎಂಬೆನೆ | ನಾ ಬೇಡುವೆ ನಿದನೆ |ಅತುಳ ಮಹಿಮ ಜಗದೀಶನೆ | ಮಧ್ವೇಶನೆ | ಗುರು ಗೋವಿಂದ ವಿಠಲನೆ 8
--------------
ಗುರುಗೋವಿಂದವಿಠಲರು
ಶ್ರೀ ಪ್ರಾಣದೇವರ ಸ್ತೋತ್ರಗಳು ಆನಮಿಸುವೆ ನಿನಗೆ ಶ್ರೀ ಪವಮಾನ ಪಾಲಿಸೆನಗೆ ಜ್ಞಾನ ಪೂರ್ವಕದಿ ಶ್ರೀನಿವಾಸನಗುಣ ಗಾನ ಮಾಡುವಮತಿ ಸಾನುರಾಗದಿ ಕೊಡು ಪ ಶರಧಿಯ ಲಂಘಿಸಿಧರಿಜೆ ದೇವಿಪದ - ಕ್ಕೆರಗಿ ಮುದ್ರಿಕೆ ಕೊಟ್ಟಹರುಷದಿ ಹನುಮನೆ 1 ಹೇಮನಗರ ದಹಿಸಿ ಸತ್ವರ ರಾಮ ಪದಕೆ ನಮಿಸಿ ಪ್ರೇಮದಿ ಜಾನಕಿ ಕ್ಷೇಮವ ತಿಳುಹಿಸಿ ತಾಮರಸಜಪದ ನೇಮದಿ ಐದಿದ 2 ಕುಂತಿಗರ್ಭದಿ ಜನಿಸಿ ರುಕ್ಮಿಣಿಕಾಂತನಣುಗನೆನಿಸಿ ಅಂತಕಾತ್ಮಜನ ಸಂತತ ಸಲಹಿದೆ ಹಂತಧಾರ್ತೃರಾಷ್ಟ್ರಾಂತಕ ಭೀಮನೆ 3 ದೇಶಿಕಪತಿಯನಿಸಿ ಬದರಿನಿವಾಸನ ಪದ ಭಜಿಸೆ ವಾಸುದೇವಸರ್ವೇಶನೆಂದರುಹಿದೆ ದೂಷಿತ ಮತ ತಮ ನೇಸರಮಧ್ವನೆ 4 ಕಾಮಕ್ರೋಧದಿ ಬೆಂದೆ ನಾ ಬಲು ತಾಮಸದಲಿ ನೊಂದೆ ಶ್ರೀ ಮನೋಹರ ವರದೇಶ ವಿಠಲನ ನಾಮ ಬರೆದೆ ಕುಪ್ಪೀ ಭೀಮನೆ ಪಾಲಿಸು 5
--------------
ವರದೇಶವಿಠಲ
ಶ್ರೀಶ ವೇದವ್ಯಾಸನಾದನು ಪ ಶ್ರೀಶ ವೇದವ್ಯಾಸನಾಗಲು ಸಾಸಿರ ನಯನ ಸಾಸಿರ ವದನ ಕರ ಮಿಕ್ಕ ಸುರರೆಲ್ಲ ತು- ತಿಸಿ ಹಿಗ್ಗುತ ಹಾರೈಸಲಂದು ಅ.ಪ. ದರ್ಪಕ ಜನಕ ಸರ್ಪತಲ್ಪನಾಗಿ ತಪ್ಪದನುಗಾಲ ಇಪ್ಪ ವಾರಿಧೀಲಿ ಕಂದರ್ಪ ಹರನೈಯ ಸುಪರ್ಣರಥನಾಗಿ ಒಪ್ಪಿಕೊಂಡು ಇಪ್ಪತ್ತು ಲಕ್ಷಗಲಿಪ್ಪ ಯೋಜನದ ಅಪ್ಪನ ಅರಮನೆ ದರ್ಪಣದಂತೆ ತಾ ರಪ್ಪಥ ಮೀರಿದಂತಿಪ್ಪದು ನೋಡಿ ಸಾ- ಮೀಪಕ್ಕೆ ವಾಣೀಶ ಬಪ್ಪ ಬೇಗಾ 1 ಬಂದು ಬೆನ್ನೈಸಿದ ಮಂದಮತಿ ಕಲಿ- ಯಿಂದ ಪುಣ್ಯಮೆಲ್ಲ ಹಿಂದಾಯಿತೆನೆ ಮು ಕುಂದ ಭಕ್ತನಿಗೆ ಒಂದೆ ಮಾತಿನಲಾ- ನಂದ ಬಡಿಸಿ ಪೋಗೆಂದು ಪೇಳೆ ಅಂದು ಸುಯೋಜನಗಂಧಿ ಗರ್ಭದಲ್ಲಿ ನಿಂದವತರಿಸುತ ಪೊಂದಿದ ಅಜ್ಞಾನ ಅಂಧಕಾರವೆಲ್ಲ ಹಿಂದು ಮಾಡಿ ಸುರ- ಸಂದಣಿ ಪಾಲಿಸಿ ನಿಂದ ದೇವ 2 ಕೆಂಜೆಡೆವೊಪ್ಪ ಕೃಷ್ಣಾಜಿನ ಹಾಸಿಕೆ ಕಂಜಾಪ್ತನಂದನದಿ ರಂಜಿಸುವ ಕಾಯ ಮಂಜುಳ ಸುಜ್ಞಾನ ಪುಂಜನು ವಜ್ಜರ- ನಿತ್ಯ ಅಂಜಿದಗೆ ಸಂಜೆಯ ತೋರಿ ಧನಂಜಯ ಶಿಷ್ಯ ನೀ- ಗಂಜದಂತೆ ಕರಕಂಜವ ತಿರುಹಿ ನಿರಂಜನ ಪೇಳಿದ ಕುಂಜರ ವೈರಿಯ ಭಂಜನನು 3 ಗಂಗಾತೀರದಲಿ ಶೃಂಗಾರ ಉಪವ- ನಂಗಳದರೊಳು ಶಿಂಗಗೋಮಾಯು ಭು ಮೂಷಕ ಮಾತಂಗ ಸಾರಮೇಯ ಕೊಂಗಹಂಗ ಸರ್ವಾಂಗ ರೋಮ ಶರಭ ವಿಹಂಗ ಶಾರ್ದೂಲ ಸಾ- ರಂಗ ಕುರಂಗ ಕುಳಿಂಗ ಪಾಳಿಂಗ ಪ್ಲ ವಂಗ ತುರಂಗ ಪತಂಗ ಭೃಂಗಾದಿ ತು- ರಂಗವು ತುಂಬಿರೆ ಮಂಗಳಾಂಗ 4 ಬದರಿ ಬೇಲವು ಕಾದರಿ ಕಾಮರಿ ಮಧುಮದಾವಳಿ ಅದುಭುತ ತೆಂಗು ಕದಳಿ ತಪಸಿ ಮದಕದಂಬ ಚೂ- ತದಾರು ದ್ರಾಕ್ಷಿಯು ಮೃದು ಜಂಬೀರವು ಬಿದಿರು ಖರ್ಜೂರ ಮೋದದಿ ದಾಳಿಂಬ ತುದಿ ಮೊದಲು ಫ ಲದ ನಾನಾವೃಕ್ಷ ಪದಲತೆಯ ಪೊದೆಯು ಫಲ್ಲಸೈ ಇದೆ ಆರು ಋತು ಸದಾನಂದ 5 ವನದ ನಡುವೆ ಮುನಿಗಳೊಡೆಯ ಕಾನನ ಸುತ್ತಲು ಆ- ನನ ತೂಗುತ್ತ ಧ್ವನಿಯೆತ್ತಿ ಬಲು- ಗಾನ ಪಾಡಿದವು ಗುಣದಲ್ಲಿ ಕುಣಿದು ಖಗಾದಿ ಗಣಾನಂದದಿಂದಿರೆ ವನನಿಕರ ಮೆಲ್ಲನೆ ಮಣಿದು ನೆ- ಲನ ಮುಟ್ಟುತಿರೆ ಅನಿಮಿಷರು ನೋ ಡನಿತಚ್ಚರಿಯನು ಪೇಳೆ 6 ಮೌನಿ ನಾರದನು ವೀಣೆ ಕೆಳಗಿಟ್ಟು ಮೌನವಾದನು ಬ್ರಹ್ಮಾಣಿ ತಲೆದೂಗಿ ಗೀರ್ವಾಣ ಗಂಧರ್ವರು ಗಾನ ಮರೆದು ಇದೇನೆನುತ ಮೇನಕೆ ಊರ್ವಸಿ ಜಾಣೀರು ತಮ್ಮಯ ವಾಣಿ ತಗ್ಗಿಸಿ ನರ್ತನೆಯ ನಿಲ್ಲಿಸಿ ದೀನರಾದರು ನಿಧಾನಿಸಿ ಈಕ್ಷಿಸಿ ಎಣಿಸುತ್ತಿದ್ದರು ಶ್ರೀನಾಥನ 7 ನಮೋ ನಮೋಯೆಂದು ಹಸ್ತ- ಕಮಲ ಮುಗಿದು ನಮಗೆ ನಿಮ್ಮಯ ಅಮಲಗುಣ ನಿಗಮದಿಂದೆಣಿಸೆ ಕ್ರಮಗಾಣೆವು ಉತ್ತಮ ದೇವ ಕೂರ್ಮ ಖಗಮೃಗ ಸಮವೆನಿಸಿ ಅ- ಚಮತ್ಕಾರದಲ್ಲಿ ನಾಮಸುಧೆಯಿತ್ತ ರಮೆಯರಸ ಆಗಮನತ8 ಇದನು ಪಠಿಸೆ ಸದಾ ಭಾಗ್ಯವಕ್ಕು ಮದವಳಿ ದಘವುದದಿ ಬತ್ತೋದು ಸಾಧನದಲ್ಲಿಯೆ ಮದುವೆ ಮುಂಜಿ ಬಿಡದಲ್ಲಾಗೋದು ಶುಭದಲ್ಲಿ ಪದೆಪದೆಗೆ ಸಂಪದವಿಗೆ ಜ್ಞಾನ- ನಿಧಿ ಪೆಚ್ಚುವುದು ಹೃದಯ ನಿರ್ಮಲ ಬದರಿನಿವಾಸ ವಿಜಯವಿಠ್ಠಲ ಬದಿಯಲ್ಲೆ ಬಂದೊದಗುವ 9
--------------
ವಿಜಯದಾಸ