ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುಟ್ಟಿದನು ಮಗನೂ ಮಾದಮ್ಮಗೇ ಪ ಪುಟ್ಟಿದ ವೈಶ್ಯ ಮಾದಮ್ಮಗೆ ಮಗ ರಂಡೆವಿಠ್ಠಲ ಎಂತೆಂದು ಪೆಸರಿಟ್ಟು ಕರೆದರೂ ಅ.ಪ. ನಗು ನಗುತಲೇ ನಾನು ಶ್ರೀಹರಿಗೆ ಕೈಮುಗಿದು ಬೇಡಿಕೊಂಡೇನು ||ನಗಧರ ಮಾಡಿದ ಮಾಡಿದ ಪ್ರಪಂಚವುಜಗದಿಂದಲೇನಹುದೆಂದು ನುಡಿದಳು 1 ನದಿಯ ಮಳಲು ಸರೀ ಪ್ರಜೆಗಳು ಬದಿಯೊಳಗೆ ಕೈಕಾಲು ಮುರುಕೊಂ-ಬದರಿಯದೆ ಒದಗಿರಲು ಮುದದಿಂದಮಾದಮ್ಮ ಸುತ್ತ ಮುತ್ತಿತು ಲೋP À 2 ಆ ರಂಡೆ ವಿಠಲಾನ ಗುಡಿಯೊಳಗಿಟ್ಟುಶ್ರೀ ರಮಣಗೇ ಒಪ್ಪಿಸೇ ||ನೀರೆಣ್ಣೆ ನಾರು ಬತ್ತಿಯ ದೀಪ ಉರಿಯಲುಮೂರು ಲೋಕಕೆ ಆಶ್ಚರ್ಯವಾಯಿತು 3 (ನಾಲ್ಕನೆಯ ನುಡಿ ಸಿಕ್ಕಿಲ್ಲ) ಭ್ರಷ್ಟಳ ಆರುತಿಯ ಮೋಹನ್ನವಿಠಲ ಕೈಗೊಂಡ ||ದೃಷ್ಟಾಂತವಾದುದು ಶಿಷ್ಟ ಜನರಿಗೆಲ್ಲಶ್ರೇಪ್ಠಳಾದರು ಇಹಪರದಲ್ಲಿ ಎಂದರು 5
--------------
ಮೋಹನದಾಸರು
ಯಾರಿಗುಸುರಲಿ ಸಾರತತ್ವ ವಿ ಚಾರ ಭವದೂರಾ ಪ ಚಾರು ಸೇರಿ ಮುಕ್ತಿಯ ಸೊರೆವಿಡಿವುದಿನ್ಯಾರಿಗುಸುರಲಿ ಅ.ಪ. ಶ್ರೀ ಗುರುನಾಥನ ಕಟಾಕ್ಷದಿ ತ್ಯಾಗಿಸಿ ಸಂಸಾರದ ಗೊಡವೆಯ ಯೋಗಿಯಂದದೊಳಿದ್ದು ಆಗಮ ನಿಗಮಾರ್ಥಕೆ ಸಿಲುಕದ ಯೋಗ ಘನವನೊಳಗೊಂಡಿಹ ಅಂಗದ ಯೋಗಾನಂದದುಯ್ಯಾಲೆಯ ತೂಗಿ ನೆಲೆಗೆ ನಿಂದಿಹ ನಿಜಸುಖವಿನ್ಯಾರಿಗುಸುರಲಿ 1 ಉದರದ ನಾಭಿಯ ನೀಳದ ತುದಿ ಹೃದಯ ವಾರಿಜದೊಳಗಿಪ್ಪ ಶಿವ ಸದನ ಲಿಂಗವ ಕಂಡು ಅದು ಇದು ಬೇರ್ಪಡಿಸದೆ ಹೃದಯದಿ ಚದುರ ಸಾಧು ಸತ್ಪುರುಷರ ಮತದಲಿ ಮುದದಿ ಮುಕ್ತಿ ಮಾನಿನಿಗೆ ಮಂಗಲ ಮದುವೆಯಾದ ಮನಸಿನ ಮಹಾ ಗೆಲವಿನ್ಯಾರಿಗುಸುರಲಿ 2 ನೆತ್ತಿಯೊಳ್ ಹೊಳೆ ಹೊಳೆವ ಚಿದಾ ದಿತ್ಯನ ಪ್ರಕಾಶವ ಕಂಡು ಚಿತ್ತದಿ ನಲಿದಾಡಿ ಉತ್ತಮಾನಂದಾತ್ಮರಸ ಸವಿ ಯುತ್ತ ಚಪ್ಪರಿದು ಶರಣರ ಮೊತ್ತದೊಡನೆ ಕುಣಿಕುಣಿದು ಬ್ರಹ್ಮನ ಗೊತ್ತು ತಿಳಿದ ಗುರುತಿನ ವಿಸ್ತರವಿನ್ಯಾರಿಗುಸುರಲಿ 3 ಕುಂದುವ ಕಾಯದ ಸುಖಿಕೆಳೆಸದೆ ಹೊಂದಿದ ಸರ್ವಾಂಗದ ಶೋಧಿಸಿ ಒಂದೇ ದೇವನೊಳಾಡಿ ವಂದಿಸಿ ಗುರುಹಿರಿಯರ ಚರಣಕೆ ಹೊಂದಿ ಹೊಂದಿ ಓಲಾಡುವ ಅರಿಗಳ ಬಂದಿಯೊಳಗೆ ಸಿಲುಕದೆ ಬ್ರಹ್ಮಾ ನಂದರಸಾಮೃತ ಸವಿದಿಹ ಸುಖವಿನ್ಯಾರಿಗುಸುರಲಿ 4 ಹಲವು ಯೋನಿಯೊಳಗೆ ಹೊರಳ ಕುಲ ಛಲ ಶೀಲವ ಮೂರಡಗಿಸಿ ಸುಲಭ ವಂಶದೊಳುಂಡು ಮಲಿನ ಮಾಯಾಮೋಹಕೆ ಸಿಲುಕದೆ ಬಲೆಯ ಛೇದಿಸಿ ಮುಕ್ತಾಂಜ್ಯದ ಬಗೆ ಇನ್ಯಾರಿಗುಸುರಲಿ 5
--------------
ಭಟಕಳ ಅಪ್ಪಯ್ಯ