ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದೆನ್ನ ಜನ್ಮ ಪಾವನವಾಯಿತು ತಂದೆ ಶ್ರೀಗುರು ನಿಮ್ಮ ಚರಣ ದರುಶನದಿ ಧ್ರುವ ಅರ್ಕ ಮಂಡಲಗಳು ರವಿಶಶಿ ಕಿರಣವು ಝಳಝಳಿಸುವ ಪ್ರಭೆ ನೋಡಿ ಅನಿಮಿಷದಾದೃಷ್ಟಿಲೆನ್ನ ಲಕ್ಷಿಯೊಳು ಸಾಕ್ಷಾತ್ವಸ್ತು ಗತಿಯು ನಿಮ್ಮ ಪ್ರಕಾಶವನು ಕಂಡಾಂಧತ್ವಗಳದಿನ್ನು 1 ಓಂಕಾರ ಮೊದಲಾದ ದ್ವಾದಶ ನಾದದಾ ಭೇದದಾ ಘೋಷವನು ಕೇಳಿನ್ನೀ ದೃಶ್ಯದಾ ಕರ್ಣಲೆನ್ನಾ ಲಯಲೀಲೆಯೊಳು ಸಾದೃಶ್ಯ ಮೂರ್ತಿಯು ನಿಮ್ಮ ಶ್ರುತಿಗಳು ಕೇಳಿ ಬಧಿರತ್ವವಾಗಳಿದಿನ್ನು 2 ಜಪವನ್ನು ತಿಳಿದು ಪ್ರಣಮ್ಯಲೆನ್ನ ಮೂರ್ತಿ ನಿಮ್ಮ ಮಂತ್ರವನು ತಿಳಿದು ಪಿಶಾಚತ್ವ ಕಳೆದಿನ್ನು 3 ಸ್ತುತಿ ಸ್ತೌತ್ಯ ಸ್ಮರಿಸುವ ದಿವ್ಯನಾಮಾಮೃತವ ನುಡಿದು ಪಯಸ್ವನೀ ಜಿಹ್ವೆಲೆನ್ನ ಮೂರ್ತಿ ನಿಮ್ಮ ಸ್ಮರಿತ ಗತಿವರಿತು ಮೂಕತ್ವ ಕಳೆದಿನ್ನು 4 ಚಿನ್ಮಯ ಚಿದ್ರೂಪ ಕಂಡು ಬೆರಗಾಗಿ ಮನ ಭ್ರಾಂತಿ ಅಜ್ಞಾನವನ್ನು ಜರಿಯಲೆನ್ನ ಏಕೋದೇವ ಈತ ವಿಶ್ವಾತ್ಮ ಹಂಸನೆಂದು ಸಂದೇಹ ಸಂಕಲ್ಪ ಬಾಧೆಯಾಗಳದಿನ್ನು 5 ಭಕ್ತಿ ಮುಕ್ತಿ ಉದಾರಿ ಆತ್ಮದಲಿ ಸಾರಿದೋರಿ ನಿಜ ಬೋಧಾಮೃತ ಬೆರೆದು ತಾರಿಸಲೆನ್ನ ಗರ್ಭಪಾಶದ ಬಲಿಯು ಹರಿದು ಧರೆಯೊಳಿನ್ನು ಉತ್ಪತ್ತಿ ಸ್ಥಿತಿ ಲಯದ ಬೀಜವನ್ನು ಹುರಿದಿನ್ನು 6 ಭಾಸ್ಕರಸ್ವಾಮಿಯ ಕರುಣಾಳು ಮೂರ್ತಿಯ ಮೂಢ ಮಹಿಪತಿಯ ಕೃಪಾಂಬುಧಿಯು ಕರುಣದಭಯ ಹಸ್ತವನು ಶಿರಸದಲ್ಲಿಡಲಾಗಿ ಧನ್ಯನಾದೆನು ಸತಿಪತಿ ಸಹಿತವಾಗಿನ್ನು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ರಾಘವೇಂದ್ರ ಶ್ರೀ ರಾಘವೇಂದ್ರ ಶ್ರೀ ರಾಘವೇಂದ್ರ ಎನ್ನಿರೋ ``ಶ್ರೀ ರಾಘವೇಂದ್ರಾಯನ ನಮಃ'' ಎಂಬ ಪ ನಾಮವ ಸ್ಮರಿಸಿ | ಸುಖಿಯಾಗು ಮನವೇ ಅ.ಪ ಸಂಸಾರ ಸಾಗರದಿ ಬೆಂದು ಬಳಲಿರುವೇನಯ್ಯ ಮುಂದೇನು ಗತಿ ಕಾಣೆ ಗಾಡಾಂಧಕಾರದೊಳು ಮುಳುಗಿ ಬೆಂಡಾದೆನೊ ಕರುಣಿಸೈ ಗುರುರಾಘವೇಂದ್ರಾ1 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆಂದು ನಂಬಿದೆನೈ ಪ್ರಭವೆ ಸಂದೇಹವೇಕಿನ್ನು ಕಂದನೆನು ತೆಂದು ಕಾಯೋ ಗುರುವೇ ಶ್ರೀ ರಾಘವೇಂದ್ರ ಪ್ರಭುವೆ2 ಅಂಧತ್ವ ಮೂಕತ್ವ, ಬಧಿರತ್ವ ಎಕಲಾಂಗಿಗಳ ಹಿಂದೆ ಪೊರೆದೆ ನೀನೆಂಬ ವಾರ್ತೆಕೇಳಿ ನಿನ್ನ ಘನ್ನಮಹಿಮಾ ಶ್ರೀ ರಾಘವೇಂದ್ರಾ 3 ಭವರೋಗ ಗಳೆಲ್ಲ ಪರಿಹರಿವುದೊ ಸ್ಮರಣೆ ಮಾತ್ರದಿ ಸಕಲ ಪಾಪಗಳನೋಡಿಸಿ ಪುನೀತರನೆ ಮಾಡುವಿಯೊ ಗುರುವೆ 4 ಬಿಡೆನು ಬಿಡೆನು ನಿನ್ನಡಿಗಳಿಗೆ ಸೇವಿಸಲು ದೃಢ ಭಕುತಿಯನೆ ಕೊಡು ಎನಗೆ ಶ್ರೀ ರಾಘವೇಂದ್ರಾ ಅಪಾರ ಮಹಿಮ ಶ್ರೀ ರಾಘವೇಂದ್ರಾ 5
--------------
ರಾಧಾಬಾಯಿ