ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೊಂಡಿಲಾನಗರದ ಭೂಪನ ಕೊಂಡಾಡಲ್ವಶವಲ್ಲ ತಾಯಿಕಂಡು ಬಂದೆನೆ ಪಾಂಡವರ ಭಾಗ್ಯವ ಪ. ಥೋರ ಮುತ್ತಿನ ಝಲ್ಲೆ ಬಿಗಿದ ತೇರುವಾಜಿ ಶೃಂಗರಿಸಿದ ದಾರಿ ಮ್ಯಾಲ ನಿಂತಾವ ನಮ್ಮ ವೀರ ರಂಗನ ಕರೆಯ ಬರಲು 1 ಅಚ್ಚ ಮುತ್ತಿನ ಝಲ್ಲೆ ಬಿಗಿದಹೆಚ್ಚಿನ ರಥಗಳುವಾಜಿಜತ್ತಾಗಿ ನಿಂತಾವಮ್ಮಅಚ್ಯುತನ ಕರೆಯ ಬರಲು2 ಬರಿಯ ಮಾಣಿಕ ರತ್ನ ಬಿಗಿದ ದೊರೆಗಳೇರೊ ರಥ ವಾಜಿಸರಿಯಾಗಿ ನಿಂತಾವಮ್ಮ ನಮ್ಮಹರಿಯ ಕರೆಯ ಬರಲು 3 ನಾನಾ ಮುತ್ತು ರತ್ನ ಬಿಗಿದ ಆನೆ ಅಂಬಾರಿಗಳು ಕೋಟಿಮಾನವಂತರು ಏರಬೇಕುಶ್ರೀನಿವಾಸನ ಕರೆಯ ಬರಲು 4 ಮುತ್ತು ಮಾಣಿಕ ರತ್ನ ಬಿಗಿದಹೆಚ್ಚಿನ ರಥಗಳು ವಾಜಿಮಿತ್ರೆಯರಿಂದ ಬರತಾರಮ್ಮನಮ್ಮ ಅಚ್ಯುತನ ಕರೆಯ ಬರಲು 5 ಏಳು ಕೋಟಿ ಕಾಲಾಳುಗಳುಭಾಳ ಮುತ್ತಿನ ರತ್ನವಿಟ್ಟುತಾಳ ಮೇಳದಿ ನಿಂತಾರಮ್ಮವ್ಯಾಳಾ ಶಯನನ ಕರೆಯ ಬರಲು6 ಸಾವಿರ ಬಂಡಿಯ ಮ್ಯಾಲೆ ಹೇರಿ ಬುಕ್ಕಿಟ್ಟು ಗುಲಾಲು ಸೂರ್ಯಾಡಿ ರಂಗನ ಕರೆಯಲು ವೀರರೈವರು ಬರುತಾರಮ್ಮ 7 ಕೊಲ್ಹಾರಿ ಬಂಡಿಯ ಮ್ಯಾಲೆ ಮಲ್ಲಿಗೆ ಸಂಪಿಗೆ ಹೇರಿಚೆಲ್ಲಾಡಿ ರಂಗನ ಕರೆಯ ಬಲ್ಲಿದ ಐವರು ಬರುತಾರಮ್ಮ 8 ಮದ್ದು ಬಾಣ ಬಿರುಸು ಕೋಟಿ ಶೀಘ್ರವಾಗಿ ನಿಂತಾವಮ್ಮಮುದ್ದು ರಂಗನ ಕರೆಯ ಬರಲು ಮಧ್ವ ಮತದ ಬಿರುದು ಹಿಡಿಸಿ 9 ಬಿಡವೋ ಬಾಣ ಬಿರುಸು ಕೋಟಿ ಕಡು ಭಾಗÀವತರು ಕೋಟಿಷಟಶಾಸ್ತ್ರ ಬಲ್ಲವರು ಕೋಟಿಒಡೆಯ ರಂಗನ ಕರೆಯ ಬರಲು 10 ತಂದೆ ರಾಮೇಶನ ಗುಣವ ಬಂಧುಗಳು ಹೊಗಳೋರು ಕೋಟಿಅಂದು ಆರಣ ಬ್ರಾಹ್ಮಣ ಕ್ರಮ ಜಟಿ ಬಂದು ಕರೆವೊ ದ್ವಿಜರು ಕೋಟಿ 11
--------------
ಗಲಗಲಿಅವ್ವನವರು
ದೂರಹವು ದೂರಹವು ದುರಿತಗಳೆಲ್ಲಕ್ರೂರ ಸ್ತಂಭಿನಿ ಬಗಳೆ ಸ್ಮರಣೆ ಮಾತ್ರದಲಿಪಕಳ್ಳರಡಕಟ್ಟಿದಲ್ಲಿ ಕಾರಾಗೃಹದಲ್ಲಿಗುಲ್ಲಾದ ಸ್ಥಳದಲ್ಲಿಘನಗಾಳಿಯಲ್ಲಿಎಲ್ಲ ರೋಗಗಳಲ್ಲಿ ಚಿಂತೆಗಳು ಮುತ್ತಿದಲ್ಲಿಬಲ್ಲ ಬಗಳೆಯ ಸ್ಮರಣೆ ನಾಲಗೆಗೆ ಬರಲು1ಮಾರಿದುರ್ಗಿಯಲ್ಲಿ ಮಹಾಗ್ರಹವು ಹಿಡಿದಲ್ಲಿಮಾರಣವು ಮುಟ್ಟಿದಲ್ಲಿ ಮಹಾಕಾರ್ಯದಲ್ಲಿಊರು ಮುತ್ತಿದಲ್ಲಿ ವಸ್ತು ಹೋಗಿದ್ದಲ್ಲಿಕಾರಣ ಬಗಳೆ ಸ್ಮರಣೆ ನಾಲಗೆಗೆ ಬರಲು2ಮಳೆಯೊಳು ಸಿಕ್ಕಿದಲ್ಲಿ ಸಾಯ್ವಸಮಯದಲ್ಲಿಹೊಳೆಯೊಳು ಮುಳುಗಿದಲ್ಲಿ ಹೊಲ ಬೆಳೆಯದಲ್ಲಿ ಬ-ಹಳದಾರಿದ್ರ್ಯದಲ್ಲಿ ಬೇಗೆ ಸುತ್ತಡಸಿದಲ್ಲಿಬಲು ಚಿದಾನಂದ ಬಗಳೆ ಸ್ಮರಣೆ ನಾಲಗೆಗೆ ಬರಲು3
--------------
ಚಿದಾನಂದ ಅವಧೂತರು