ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನಾಜ್ಞದವನೊ ನಾನೆನ್ನನೊಪ್ಪಿಸದೆಬಿನ್ನಹ ಚಿತ್ತೈಸಿ ಎನ್ನ ಪಾಲಿಸೊ ಕೃಷ್ಣ ಪ ಏಳು ಸುತ್ತಿನಕೋಟೆ ಯಮನಾಳು ಮುತ್ತಿಕೊಂಡುಪಾಳು ಮಾಡೇವೆಂದು ಪೇಳುತಿರಲುಆಳು ಸಾಮಗ್ರಿಯ ಅಪಾರ ಬಲಮಾಡಿಕೋಳುಹೋಗದ ಮುನ್ನ ಕೋಟೆ ರಕ್ಷಿಸಬೇಕು 1 ಆರು ಮೂರರ ಬಾಧೆ ಆರು ಎಂಟರ ಬಾಧೆಕ್ರೂರರೈವರ ಬಾಧೆ ಹೋರುತಲಿದಕೋಆರಿಂದ ನಿರ್ವಾಹವಾಗದು ಇವರನುಮೇರೆಲಿಡುವನೊಬ್ಬ ಧೀರನ್ನ ಬಲಮಾಡೊ2 ಲಕ್ಷ ಎಂಭತ್ತು ನಾಲ್ಕು ಜೀವರಾಶಿಗಳೊಳುಸೂಕ್ಷ್ಮದ ಕೋಟೆಂದುಪೇಕ್ಷಿಸದೆಪಕ್ಷಿವಾಹನ ನೀನು ಪ್ರತ್ಯಕ್ಷ ನಿಂತರೆಅಕ್ಷಯ ಬಲವೆನಗೆ ರಕ್ಷಿಸೊ ಸಿರಿಕೃಷ್ಣ 3
--------------
ವ್ಯಾಸರಾಯರು
ದಯಮಾಡೋ ದಯಮಾಡೋ ದಯಮಾಡೋ ರಂಗ ಪದಯಮಾಡೋ ನಾ ನಿನ್ನ ದಾಸನೆಂತೆಂದು ಅ.ಪಹಲವು ಕಾಲವು ನಿನ್ನ ಹಂಬಲವೆನಗೆಒಲಿದು ಪಾಲಿಸಬೇಕುವಾರಿಜನಾಭ1ಇಹಪರದಲಿ ನೀನೆ ಇಂದಿರೆರಮಣಭಯವೇಕೋ ನೀನಿರಲು ಭಕ್ತರಭಿಮಾನಿ 2ಕರಿರಾಜವರದನೆ ಕಂದರ್ಪನಯ್ಯಪುರಂದರವಿಠಲ ಸದ್ಗುಣ ಸಾರ್ವಭೌಮ 3
--------------
ಪುರಂದರದಾಸರು