ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅಮ್ಮೆಂಬಳದ ಕುರ್ನಾಡು ಸೋಮನಾಥ) ಕಾಮಿತ ಫಲದಾತ ಕಟ್ಟೆಯ ಸ್ವಾಮಿ ಸೋಮನಾಥಾ ಪೂಜೆಯ ನಿರುತದಿ ಕೊಳ್ಳುವ ಪ. ಅಂಬಿಕೆಯನು ವರಿಸಿ ಗಜಚ ರ್ಮಾಂಬರವನು ಧರಿಸಿ ಶಂಬರಾರಿಯನು ಸುಲಭದಿ ಗೆಲಿದಂ- ಮ್ಮೆಂಬಳಜನರನು ನಂಬಿಸಿ ಸಲಹುವ 1 ಒಡೆಯನು ನೀನೆಂದೂ ಊರಿನ ಬಡ ಜನರುಗಳಿಂದೂ ಕೊಡುವ ಪೂಜೆಯನು ಮಡದಿಸಮೇತೀ- ಗಿಡದ ಬುಡದಿ ಕೊಂಬುಡುಪತಿಶಿಖರ 2 ದೋಷಗಳನು ತರಿವಾ ಪನ್ನಗ ಭೂಷಣನೀ ಬರುವಾ ತೋಷಪಡುವ ಸಜ್ಜನರಿಗೆ ಶೇಷಗಿ ರೀಶನು ಸಕಲಭಿಲಾಷೆಯ ಸಲಿಸುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಏನೋ ಮನವೇ ನೀಹೀಂಗಾದಿ ಧ್ರುವ ಏನೋ ಮನವೇ ನೀ ಹೀಂಗಾದಿ | ಸ್ವಾನಂದ ಸುಖ ತಿಳಿಯದೆ ಬಳದಿ | ಮಾನುಭವರ ವಿಡಿನಿಜ ಹಾದಿ | ಭವ ವ್ಯಾಧಿ 1 ಮಂದ ಮತಿತನ ಬಿಡು ಗುಣದಾ | ಹೊಂದೋ ಸದ್ಗುರುವಿನ ಪಾದಾ | ಛಂದದಿ ಪಡಿಯೋ ನಿಜ ಬೋಧಾ | ಸಂದೇಹ ಬಿಡಿಸೆಚ್ಚರಿಸುವದಾ2 ಹೊಗೆ ಅಗ್ನಿಯ ಮುಸುಕಿಹ ಪರಿಯಾ | ಮಾಯಾ | ಬಿಗಿದಾವರಿಸಿಹುದು ನೋಯಾ | ಬ್ಯಾಗನೆ ತಿಳಿ ಗೆಲುವ ಉಪಾಯಾ 3 ಮುಂದ ಹಾಕಿದ ಹೆಜ್ಜೆಯನು | ಹಿಂದಕ ತಿರುಗಿಸದಿರು ನೀನು | ನಿಂದಿಸಲೊಂದಿಸಲಾರೇನು | ಮುಂದಗಿಡದೆ ಬೆರಿ ವಸ್ತವನು 4 ನಿನ್ನ ಸುದ್ದಿಯು ತಾ ನಿನಗಿಲ್ಲಾ | ಇನ್ನಾರೆ ತಿಳಿತನು ಸ್ಥಿರವಲ್ಲಾ | ಮುನ್ನಿನ ಪರಿಕೆಡುವುದು ಸಲ್ಲಾ | ಮನ್ನಿಸು ಮಹಿಪತಿ ಜನ ಸೊಲ್ಲಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿದ್ರೆ ಬಾರದೆ ಕನಸು ಬಿದ್ದುದನು ಕೇಳಿ ಬದ್ಧದೊಳು ಇದರ ಫಲವಿದ್ದರೇನು ಪೇಳಿ ಪ ಊರ ಗೆಲುವೆನು ಎಂದು ದಾರಿಯನು ಸಂವರಿಸಿ ಈರೈದು ಸಾವಿರವ ಹೇರಿಕೊಂಡು ಚೋರತ್ವದೊಳು ಸೇರಿ ಭಾರಿಯಗಳನು ಹಾರಿ ಧೀರರೈವರು ವ್ಯರ್ಥ ಸೂರೆಗೊಟ್ಟುದನು 1 ಹಸಿದ ಮಾರಿಯ ಹೊಲನ ನುಸಿವ ಕುರಿಯಂದದಲಿ ಎಸೆವ ಮೋಹಕದಿಂದ ಭರವಸೆಯೊಳು ಬೆಸನವನು ಮಾಡಿ ನಿಪ್ಪಸರದೊಳು ಮೈಮರೆದು ಬಿಸಿಯಾದ ಮಂಚದೊಳು ಹಮ್ಮೈಸಿಕೊಂಡುದನು2 ಮತಿಯಿಲ್ಲದಾತನಿಗೆ ಜೊತೆಯಾದ ಸೇವಕರು ಹಿತವಾದ ದಾರಿಯನು ತೋರುತಿಹರು ಮಿತಿಗಾಣೆನಿದರೊಳಗೆ ರಥಕೆ ಸಾರಥಿಯಿಲ್ಲ ಅತಿಶಯದ ಚತುರ ಶಿತಿಲಕ್ಷ ಸುಳಿವುದನು 3 ತೋರದಿಹ ಸೂತ್ರದೊಳು ಮೂರು ಕರಗಳ ಬಿಗಿದು ಭಾರಿ ಶಿಲೆಯನು ಹೇರಿ ಚೋರನಂದದಲಿ ಊರೊಳಗೆ ಮೆರೆಸುವುದು ತೋರುತಿಹ ಸ್ವಪ್ನಗಳು ಚಾರ ಫಲವೇನಿದಕೆ ಹೇಳಿ ಬಲ್ಲವರು4 ಮಳೆಗಾಲ ತುದಿಯೊಳಗೆ ಇಳೆಯಾರಿ ಬೆಳೆ ಕೆಡಲು ಕೊಳಕಾಲ್ಪೆಸರ ಬತ್ತಿ ಬಳಲುತಿರಲು ಸ್ಥಳದ ತೆರಿಗೆಗೆ ದೂತರೆಳೆದು ಕೇಳುತ್ತಿರಲು ಹಳೆಯ ಸಂಬಳದವರು ಒಳಒಳಗೆ ಸೇರುವುದ 5 ಬುದ್ಧಿ ತಪ್ಪಿದ ತೆರಿಗೆ ತಿದ್ದಿಕೊಳಬೇಕೆನುತ ಎದ್ದು ಬಹುಕ್ಲೇಶದಲಿ ಒದ್ದು ಕೈ ಕಾಲುಗಳ ತಿದ್ದಿ ಹೋದನು ಪುರಕೆ ಸಿದ್ಧ ಮಾಡುವರೆ 6 ಅಚ್ಚರಿಯ ಸ್ವಪ್ನಗಳು ಎಚ್ಚರದಿ ತೋರುತಿದೆ ಹುಚ್ಚನೆಂದು ಜನರು ನಚ್ಚರಿದನು ಮುಚ್ಚುಮರೆಯಾಕೆ ವರಾಹತಿಮ್ಮಪ್ಪನನು ಬಚ್ಚಿಟ್ಟು ಮನದೊಳಗೆ ಸ್ವೇಚ್ಛನಾಗುವುದು 7
--------------
ವರಹತಿಮ್ಮಪ್ಪ
ಬಾರೋ ಬಾರೋ ಗುರುರಾಯನೆ ಧ್ರುವ ಹೊಳೆಯನೀಸಿ ಇಳದಿ ಬಾರೊ ಇಳಿಯ ಪೊತ್ತು ಬಳಿದಿ ಬಾರೊ ಇಳಿಯಗೆಲಿದು ಸೀಳಿ ಕಂಭದೊಳು ಹೊಳದಿ ಬಾರೊ ನೀನು 1 ಅಳೆದು ಭೂಮಿ ಬಳದಿ ಬಾರೊ ಇಳಹಿ ತಳಿಯ ತಿಳದಿ ಬಾರೊ ಅಳಿದು ದೈತ್ಯಬಲವ ಮುರಿದು ಕೊಳಲನೂದಿ ಬಳಲಿ ಬಾರೊ 2 ಸುಳ್ಳ ವ್ರತನಳಿದಿ ಬಾರೊ ಸುಳುಹಿ ತೇಜ ಹೊಳಿದಿ ಬಾರೊ ಹೊರೆದು ಸಲಹುವ ಸ್ವಾಮಿ ಬಾರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನೋದಣಿಯಾ ಕುಲಮಣಿಯಾ ಪ ಎಳೆಬಿಸಿಲೊಳು ಥಳ ಥಳಿಸುವಾ ಬೆಳಗಿನಾ| ಬಳದ ಒಬ್ಬುಳಿಯಂತೆ ದಿನಮಣಿಯಾ| ಕಳೆಶತ ಮಡಿಯೊಳು ಹೊಳೆವ ರನ್ನಮುಕುಟಾ| ಝಳ ಝಳಿಸುವ ರಳ ಕಾವಳಿ ದೋರಣಿಯಾ 1 ಚಲಾಚಲ ಭೂತಾವಳಿಗಳ ಸಲಹುವ ಭ್ರೂಲಲಿತ ಮೃಗಮದಾಂಕಿತದ ಫಣಿಯಾ| ವಿಮಲತರ ಕಮಲದೆಸಳ ಸುಗಂಗಳ| ನಾಸಿಕ ಸಂಪಿಗಿ ನೆನಿಯಾ 2 ಎಳೆನಗೆ ಚುಬುಕಾಗ್ರ ಚೆಲುವಾ ಕುಂದರದನಾ| ಇಳೆಯೊಳು ಕಾಣೆ ಕುಂಡಲಕ ಎಣಿಯಾ| ಕದಪು ವದನ ಮೋಹನಾರಾಯ| ಒಲಿವ ಮಹಿಪತಿ ಜನ ಪ್ರಭು ಗುಣಖಣಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಿಶೇಷ ಆ ಹಣ್ಣು ಈ ಹಣ್ಣು ನೆನಸಿ ಫಲವೇನೆ ಈ ಹುಣಸೇಹಣ್ಣಿಗೆ ಸಮಬಾಹೋದೇನೆ ಪ ಹಡಗಿಂದ ಬಂದಿತು ಉತ್ತತ್ತಿ ಹಣ್ಣು ಬಡವರಿಗೆ ಬೇಕಾದ ಬಾಳೆಯ ಹಣ್ಣು ಕೂತರೆ ಏಳದು ಕುಂಬಳದ್ದಲ್ಲ ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 1 ಮಕ್ಕಳು ಬಯಸುವ ಚಕ್ಕೋತ ಹಣ್ಣು ಸಕ್ಕರೆ ಸವಿಯಾದ ಅನಾಸಿನ ಹಣ್ಣು ರುಚಿ ಹಲಸಿನ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 2 ದಾಹವಡಗಿಸುವದು ದ್ರಾಕ್ಷಿಯ ಹಣ್ಣು ದೊರೆಗಳು ತಿನ್ನುವ ದಾಳಿಂಬೆ ಹಣ್ಣು ಫರಂಗಿಯರು ತಿನ್ನುವ ಪನ್ನೇರಳೆ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 3 ಅತಿಮಧುರವಾದ ಕಿತ್ತಲೆ ಹಣ್ಣು ಯತಿಗಳಿಗಾನಂದ ಸೀತಾಫಲದ್ಹಣ್ಣು ಅತಿರುಚಿಯಾದ ಅಂಜೂರದ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 4 ಮಾನವಂತರು ತಿನ್ನುವ ಮಾವಿನ ಹಣ್ಣು ಜ್ಞಾನಿಗಳಿಗೆ ರಾಮನಾಮದ ಹಣ್ಣು ದೀನಜನರು ತಿಂಬ ಮೂಸುಂಬೆ ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 5 ಅಪರೂಪದಲಿ ಬೆಳೆದ ಮಾದಳದ್ಹಣ್ಣು ಕಪಿಗಳು ತಿನ್ನುವ ಸೀಬೆಯ ಹಣ್ಣು ತಪಸ್ವಿಗಳಾಹಾರ ಜಂಬುನೇರಳೆಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 6 ಪರಿ ಔಪಧಕೆ ಹೆರಳೆಯ ಹಣ್ಣು ಮರ್ಯಾದೆಗೆ ಕೊಡುವ ನಿಂಬೆಯ ಹಣ್ಣು ಪರಮ ರೂಪಿಯಾದ ಕರಬೂಜದ್ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 7 ಬಡವರಿಗೂ ಈ ಹುಣಸೇ ಹಣ್ಣಿರಬೇಕು ಬಲ್ಲಿದರಿಗೂ ಹುಣಸೇ ಹಣ್ಣಿರಬೇಕು ರುಚಿ ಎಲ್ಲ ಜನರುಗಳು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 8 ಹುಣಸೇಹಣ್ಣಿಲ್ಲದೆ ಭಾಂಡ ಶುದ್ಧಿಗಳಿಲ್ಲ ಹುಣಸೇ ಇಲ್ಲದೆ ಸ್ವಯಂಪಾಕ ರುಚಿಯು ಇಲ್ಲ ಹುಣಸೇ ಮರಕ್ಕಿಂತ ಗಟ್ಟಿ ಮರಗಳಿಲ್ಲ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 9 ಹುಣಸೇಕಾಯಿಯ ಕುಟ್ಟಿ ರಸವ ಮಾಡುವರು ಹುಣಸೇಹಣ್ಣನು ಕುಟ್ಟಿ ಅಣಿಮಾಡಿಡುವರು ಹುಣಸೇಹಣ್ಣಿನ ಬೆಲೆ ಮುಗಿಲಿಗೇರಿರಲು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 10 ಹರಿಯ ಅಪ್ಪಣೆಯಂತೆ ಹುಣಸೆಯ ಮರಹುಟ್ಟಿ ಪರರಿಗೆ ಉಪಕÀರಿಸುವದಿದು ಹರಿಯಾಜ್ಞೆ ವರದ ಶ್ರೀ ಹರಿ ಕಮಲನಾಭ ವಿಠ್ಠಲನಿಚ್ಛೆ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 11
--------------
ನಿಡಗುರುಕಿ ಜೀವೂಬಾಯಿ