ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾಸಿಕ | ಸಂಭವ ಕಾಯೊ ನಮಿಸುವೆ ನಿನಗೆ ನಾನು ಪ ಅಂದು ಧರಣಿ ಜಲ ವಂದಾಗಿ ಕರಗಿರೇ | ನಂದನ ಚಿಂತಿಸಿ ಬಂದ ವರಹಮೂರ್ತಿ 1 ಮಧು ಪಾನಾವವ ಸಾ | ದದು ಅವನ ಚರ್ಮ | ಹೊದಿಸಿ ಹೆಪ್ಪುಗೊಟ್ಟು ಮೇದಿನೆಂದಿಸಿದೆ 2 ಕನಕಲೋಚನ ಭೂಮಿಯನು ಕದ್ದು ಮೈಯಲು | ಅನಿಮಿಷರೊಲಿಸೆ ಅವನ ಕೊಂದುದ್ಧರಿಸಿದೆ3 ಕರುಣಾಕಟಾಕ್ಷದಿ ಹೊರವಲ್ಲಿ ನಾನೆಲ್ಲಿ | ಸರಿಗಾಣೆ ನಿನಗೆ ಅಂತರ ಬಹಿರದೊಳು 4 ರಜೋಭಿಮಾನಿಯ ವಡಿಯಾ ಸುಜನಪಾಲಾ | ಭುಜಗ ಗಿರಿಯ ವಾಸಾ ವಿಜಯವಿಠ್ಠಲಾಧೀಶಾ 5
--------------
ವಿಜಯದಾಸ
ಸುರನರರ ಸಹಸಕ್ಹರಿ ಸಹಾಯ ಬೇಕುನರಹರಿಯು ಕೊಡದನಕ ದೊರೆವುದೇನು ಪ.ಹರಿಕೊಡದೆ ಅಜಭವರಿಗರಸುತನವೆಲ್ಲಿಯದುಹರಿಕೊಡದೆ ಸಿರಿಸಂಪದೆರವು ತನಗೆಹರಿಕೊಡದೆ ಸಕಳ ಜೀವರಿಗಶನ ದುರ್ಲಭವುಹರಿಕೊಡುವನಿರಲು ಅನ್ಯರಿಗೆ ಸ್ವಾತಂತ್ರ್ಯಿಲ್ಲ 1ಹರಿಯೆ ಜಡಚೇತನರ ಹೊರೆದುದ್ಭವಿಸಿ ಅಳಿವಹರಿಯಾವ ಕಾರ್ಯಕ್ಕೆ ಬೆರೆದು ಬರುವಹರಿಅಂತರ್ಬಹಿರದೊಳು ಭರಿತನಾಗಿಹ ತತ್ವಹರಿಯಿಲ್ಲದಾವ ತಾಣಿಲ್ಲ ನಂಬು ಹರಿಯ 2ಹರಿನುಡಿಯದಾರಿಗುತ್ತರಗುಡಲು ಬಲವಿಲ್ಲಹರಿನುಡಿಯನಾಲಿಪರು ಸಿರಿದಿವಿಜರುಹರಿನುಡಿಯೆ ಗತಿಮತಿಯು ಹರಿಯೆನ್ನ ದಾತಾರಹರಿಪ್ರಸನ್ವೆಂಕಟಪ ನಿರುತ ಬಿಡನೆನ್ನ3
--------------
ಪ್ರಸನ್ನವೆಂಕಟದಾಸರು