ಒಟ್ಟು 26 ಕಡೆಗಳಲ್ಲಿ , 18 ದಾಸರು , 25 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂದಾರಮ್ಮಾ ಆ ನಾರಿಯರು ನನ್ನಂದಾರಮ್ಮಾ ಪ ಗೋಪಾಲನೆಲ್ಲಾ ಸೂರೆಗೊಂಬುವೆ ನಂತೇ ಕುಡಿದು ಗಡಿಗೆಯ ಒಡೆದು ತೂತು ಮಾಡಿದೆನಂತೆ 1 ನಾರೀಮಣಿಗಳೆಲ್ಲ ನೀರಿಗೆ ಪೋಪಾಗ ದಾರಿಗಡ್ಡವಕಟ್ಟಿ ಒಳ್ಳೆ ಬುದ್ದಿ ಇಲ್ಲಾವಂತೇ ಯನ್ನ ಹೋಗ್ಹೋಗಂದರಮ್ಮಾ2 ಕಟ್ಟಿ ಬರಿದ ಬಾಧಿಸುವರೇ ಸುಳ್ಳಾಡಿ ಕೊಂಬೋರೆ 3 ಮುದ್ದು ಮಾಡಿದಿಯಂತೆ ಬುದ್ಧಿ ಕಲಿಸಲಿಲ್ಲವಂತೆ ಮೊಸರು ಬೆಣ್ಣೆಗಳನು ಮೆದ್ದು ಓಡುವೆನಂತೆ 4 ಮಡುವನ್ನಾದರು ಪೋಗಿ ಧುಮುಕುವೆನೇ ತಾಯೆ 5
--------------
ರಾಧಾಬಾಯಿ
ಅಷ್ಟಮಠದ ಯತಿಗಳು ನೋಡಿ ದಣಿದವೆನ್ನ ಕಂಗಳು ಉಡುಪಿಯಲ್ಲಿರುವ ಅಷ್ಟಮಠದ ಶ್ರೀಪಾದಂಗಳವರ ಪ. ಸುಧಿಂದ್ರತೀರ್ಥ ಗುರುವರ್ಯರು ಬಂದ ಭಕ್ತರಿಗೆ ಕರುಣಾಮೃತ ಮಳೆಗರೆವರು ಶ್ರೀಹರಿಯ ತೋರುವರು ನೇಮದಿಂದಲಿ ಇವರ ನಾಮ ನೆನೆದರೆ ಸ್ವಾಮಿ ಶ್ರೀರಾಮನು ಪ್ರಸನ್ನನಾಗುವನು 1 ವಿಭುದಪ್ರಿಯತೀರ್ಥ ಗುರುವರ್ಯರು ಬಂದಾ ದುರ್ಜನರ ಮನವನು ಜಯಿಸುವರು ಮಹಾನುಭಾವರು ತರ್ಕನ್ಯಾಯ ವೇದಾಂತ ನಿಪುಣರು ಮಹಾಗುಣವಂತರು 2 ವಿದ್ಯಾಪುಣ್ಯತೀರ್ಥ ಶ್ರೀಪಾದಂಗಳವರು ಬಂದ ಸೇವಕರಿಗೆ ಬ್ರಹ್ಮವಿದ್ಯಾ ಪಾಲಿಸುವರು ರ್ದುಜನರ ದುರ್ಬುದ್ಧಿ ಒದ್ದಿ ಕೆಡಹುವವರು 3 ವಿಶ್ವೇಂದ್ರತೀರ್ಥರು ಈ ಗುರುವರ್ಯರು ವಾದಿರಾಜರ ಪೂಜಿಸುವರು ಜಗಕೆ ಸುಖವ ಸುರಿಸುವರು ಭೂತಪ್ರೇತಪಿಶಾಚಾದಿ ಮಾಡುವರು ಭಕ್ತರಘ ಕಡಿವರು4 ಇವರು ಭವಸಮುದ್ರವ ನೀಗಿಸುವರು ಶಿಷ್ಯರಿಗ್ಹರುಷ ಪಡಿಸುವುದು ಆನಂದದಿಂದಲ್ಲಿ ಹೃನ್ಮಂದಿರದಲಿ ಇಂದಿರೇಶನ ನೋಡುವರು 5 ರಘುಮಾನ್ವತೀರ್ಥ ಗುರುವರ್ಯರು ಲೋಕಮಾನ್ಯರು ಭಕ್ತರಿಗತಿಪ್ರಿಯರು ಮಹಾನುಭಾವರು ಅನ್ನದಾನದಲಿ ದೈನ್ಯರು ಆನಂದ ಭರಿತರು ಸುರರಿವರು 6 ಲಕ್ಷ್ಮೀಂದ್ರತೀರ್ಥ ಶ್ರೀಗಳವರು ಇವರು ತಮ್ಮ ತುಷೆಯೊಳಗಿಟ್ಟುಕೊಂಡು ರಕ್ಷಿಸುವರು ಲಕ್ಷ್ಮೀರಮಣನ್ನ ಪಾದಾ ಅಪೇಕ್ಷೆಯ ಮಾಡುಸುವರು ಹರಿಯ ಭಜಿಸುವರು 7 ವಿಶ್ವಮಾನ್ಯತೀರ್ಥ ಈ ಗುರುವರ್ಯರು ಬಂದ ಭೂಸುರರಿಂದ ಅನುವಾದ ಮಾಡುವರು ನೋಡುವರಿಗಾನಂದ ಪಡಿಸುವರು ಸುಜ್ಞಾನ ಯತಿವರ್ಯರು 8 ಅಷ್ಟಮಠದ ಯತಿಗಳ ಮಹಿಮೆಯನ್ನು ನಿಷ್ಠೆಯಿಂದಲಿ ಪೇಳುವನು ಅವನು ಸುರನು ಇವರ ದೋಷಿ ಎಂದವರನೇ ನರಕಾಧಿ ಬಾಧಿಸುವುದು ಕೃಷ್ಣನ ಪೂಜಿಸುವರು 9
--------------
ಕಳಸದ ಸುಂದರಮ್ಮ
ಎಚ್ಚರಿಕೆಚ್ಚರಿಕೆ ಮನವೆ ಇನ್ನು | ಎಚ್ಚರಿಕೆಚ್ಚರಿಕೆ ಯಮನ ಪುರದ ಬಾಧೆ ಪ ಕಿಚ್ಚನಾದರು ಕೇಳಿ ದುಶ್ಚಿಂತನ ಬಿಡು ಅ.ಪ ಗಂಡ ಅತ್ತೆ ಮಾವ ಮೈದುನರ ಬೈವರ | ಖಂಡ ತುಂಡನೆ ಮಾಡಿ ಖಂಡವ ಕೊಯಿದು | ಕಂಡದೊಳಗೆ ಬೇಯ್ಸಿ ದಿಂಡುಗೆಡಹಿ ಕಟ್ಟಿ | ಮಂಡೆಯ ಒಡೆದು ಡಂಡದಿ ಶಿಕ್ಷಿಸಿ | ಹಿಂಡಿ ಹಿಪ್ಪೆಯ ಮಾಡಿ ಕೊಂಡೊಯ್ದು ಅಗ್ನಿಯ ಕುಂಡವ ಹೋಗಿಸುವರೊ-ಎದೆಯ ಮೇಲೆ | ಗುಂಡನೆ ಹೊರಿಸುವರೊ-ಬಾಯೊಳಗೆ | ಕೆಂಡವ ಸುರಿಸುವರೊ-ಕೋಟಿ ಜನ್ಮ ಚಂಡಾಲ ಯೋನಿಯಳಿಟ್ಟು ಬಾಧಿಸುವರೊ 1 ಉತ್ತಮ ಗುರು ಹಿರಿಯರುಗಳ ಬೈವರ | ತಿತ್ತಿಯ ಸುಲಿದು ಕತ್ತರಿಪ ಬಾಚೆಯ ತಂದು | ಕೆತ್ತಿ ಶರೀರಕ್ಕೆ ಹತ್ತೊ ನೀರನೆ ಚೆಲ್ಲಿ | ನೆತ್ತಿಯ ಕೊರೆದು ಖಾರವನೊತ್ತಿ ಹಾವಿನ ಹುತ್ತವ ಹೊಗಿಸಿ ವಿಷವನಿತ್ತು ಕೈ ಕಾಲು | ಕಿತ್ತು ಹೊಟ್ಟೆಯ ಕೊಯ್ವರೊ ಬೊಬ್ಬಿರಿ | ಯುತ್ತುರುಳು ಹಾಕುವರೊ ಬೆನ್ನೊಳಗೇ | ಎತ್ತಿ ಕರುಳ ತೆಗೆವರೊ ದೊಡ್ಡ ಬೆಟ್ಟ | ಹತ್ತಿಸಿ ತಲೆಕೆಳಗಾಗಿ ನೂಕಿಸುವರೊ 2 ಪರಧನ ಪರಸತಿ ಪರನಿಂದೆಗೆಳೆವರ | ಮರುಳುವ ಮರಳಿನೋಳ್ ಹೊರಳಿಸಿ ಅಸ್ಥಿಯ | ಮುರಿದು ಮುಟ್ಟಿಗೆ ಮಾಡಿ ಉರೆದ ಗುಂಡಿಗೆ ಸೀಳಿ | ಜಿಹ್ವೆ ಕೊರೆದು ತೈಲದೊಳಗೆ | ಅರಿವೆಯೆದ್ದಿ ಮೈಗೆ ಉರಿಯ ಸುತ್ತಲಿಕ್ಕೆ | ಉರವಣಿಸು ಕುಣಿಸುವರೊ-ಹೆರೆದಂಬಿಗೆ | ಗುರಿಮಾಡಿ ನಿಲಿಸುವರೊ ಉಕ್ಕಿನ ಕಂಭ | ಕ್ಕೊರಗಿಸಿ ನಿಲಿಸುವರೊ ಶೂಲಕೆ ಹಾಕಿ | ಎರಡು ಕಾಲೆಳೆದು ಕಾವಲಿ ಮೇಲೆ ನಿಲಿಸೀರೊ 3 ಹೆಣ್ಣುಮಾರಿ ಹೊನ್ನು ಕಟ್ಟಿದ ಮನುಜರ | ತುಂಬಿ | ಸುಣ್ಣದೊಳಗೆ ಹೂಳಿ ಜನ್ಮ ಕಳೆದು ಶಿರ | ವಣ್ಣಿಕಲ್ಲನೆ ಆಡಿ ಇನ್ನು ಉಕ್ಕಿನ ಕಾದ- | ಎಣ್ಣೆಯ ಸುರಿದು ನೀರನ್ನೆರದು ನರಮಾಂಸ- | ಉಣ್ಣೆಂದು ತಿನಿಸುವರೊ-ತಿತ್ತಿಯನಿಕ್ಕಿ | ಹಣ್ಣಣ್ಣು ಮಾಡುವರೊ-ಅಸೀಪತ್ರಾ- | ರಣ್ಯವ ಹೊಗಿಸುವರೊ-ಕ್ಷುಧೆಯೆನ್ನೆ | ತುಂಬಿ ಕುಟ್ಟಿ ಮೆಲ್ಲಿಸುವರೊ4 ವಾಸುದೇವನ ವಾಸರದಲ್ಲಿ ಉಂಬರ | ಹಾಸುಗಲ್ಲಿನ ಮೇಲೆ ಬೀಸಿ ಅಪ್ಪಳಿಸಿ ಆ- | ಕಾಶಕ್ಕೊಗೆದು ಖಡ್ಗ ರಾಸಿಯೋಳ್ ಬೀಳಲು | ಕೇಶ ಪಿಡಿದು ಕೆಡಹಿ ಘಾಸಿಸಿ ಬಾಯೊಳು | ತುಂಬಿ | ನಾಸಿಕ ಕೊಯ್ಸುವರೋ-ಕೀಸಿಸಿ ಗೂಟ | ಹೇಸದೆ ಬಡಿಸುವರೊ ಹಂದಿಯಂತೆ | ಈ ಶರೀರ ಸುಡಿಸವರೊ-ತಮಸಿನೊಳು | ಏಸು ಜನ್ಮಕೆ ಗತಿಯಲ್ಲವೆನಿಸುವರೊ 5 ಎಲ್ಲ ಒಂದೇ ಎಂಬ ಪಂಚ ಮಹಾಪಾತಕಿಯ | ಹಲ್ಲನ್ನು ಮುರಿದು ಗಂಟಲ ಶೀಳಿ ಅಂಗುಳಿಗೆ | ಮುಳ್ಳನ್ನು ತಂದೂರಿ ತಪ್ತ ಲೋಹದ ಮೇಲೆ | ಕುಳ್ಳಿರಿಸಿ ಕೊಡಲಿಯೊಳ್ ಎಲ್ಲವನು ಕಡಿದು | ಕೊಲ್ಲ ಬಡಿದು ಅಂಬಿನಲಿ ಚುಚ್ಚಿ ರಕ್ತ- | ಚೆಲ್ಯಾಡಿ ಬಗೆಯುವರೊ-ಉರಿಯ ಕೊಂಡ- | ದಲ್ಲಿ ಮುಳುಗಿಸಿಬಿಡವರೊ-ಹೊತ್ತು ಒಯ್ದು | ಕಲ್ಲುಗಾಣಕೆ ಹಾಕುವರೋ-ಕುಂಭೀಪಾಕ | ದಲ್ಲಿ ಕುದಿಸಿ ಬೇಯ್ಸಿ ಬೆಂಡು ಮಾಡುವರೊ6 ಒಂದು ನೋಡಿದರೊಂದು ಅಧಿಕ ಪಾಪಗಳಿವೇ- ನೆಂದು ಪೇಳಲಿ ಎನಗೊಂದಾದರಳವಲ್ಲ | ಹಿಂದಿನ ದುರ್ವಾರ್ತೆ ಮರೆದು ಮುಂದಾದರು | ನಂದತೀರ್ಥರ ಪಾದಾನಂದದಿ ಭಜಿಸಿ ಪು | ರಂದರನನು ಸರಿಸಿ-ವಿಜಯವಿಠ್ಠಲ | ನ್ಹೊಂದಿ ಪತಿಕರಿಸಿ-ಮುಕ್ತಿ ಮಾರ್ಗ- | ವಿಂದು ಆಶ್ರಿಯಿಸೊ ಗೋವಿಂದನ ಸ್ತುತಿಸಿ | 7
--------------
ವಿಜಯದಾಸ
ಓಂ ನಮೋ ನಾರಾಯಣ ಪ ದುರಿತ ಹರ | ಓಂ ನಮೋ ಜಗದೀಶ ಪಾಲಿಸೊಅ.ಪ ಪೊರೆಯೊ ಅನಾಥ ಬಂಧು 1 ಬಾಧಿಸುವ ಮಾಯಾಗುಣಂಗಳು | ಭವ ಆಧರಿಸಿ ಸಲಹುವರ ಕಾಣೆನು 2 ತಂದೆ ಸದಾನಂದ 3
--------------
ಸದಾನಂದರು
ಕಲಿಪುರುಷನಿಗತಿಹರುಷ ಬಲುಸಜ್ಜನಗಳುಬಾಯ್ಬಾಯ್ಬಿಡುವುದು ಪ ಅಲಕ್ಷ್ಮೀರಮಣ ಅಖಿಲ ದುರ್ಗುಣಂ ಗಳಕೊಟ್ಟೆಲ್ಲರ ಗಾಳಿಗೆ ತೂರುವೆ ಅ.ಪ ರಾವಣಾಸುರಗೆ ಮಗನೆನಿಸಿ ದೇವತೆಗಳ ಸೆರೆಯಲ್ಲಿಡಿಸಿ ಭಾವಜ್ಞರನು ನಿರಾಕರಿಸಿ ಸಭಾಸ್ಥಾನಗಳ ಭಂಗಪಡಿಸಿ ಬಹುದುಃಖ ಪಡಿಸಿ ಪಾಂಡುಕುಮಾರರ ಪಾವನಿಯಿಂತೊಡೆಯೊಡೆದು ಬೀಳುತ ಬಗೆಯ ನೆನದುಯೀಗೆಮ್ಮ ಬಾಧಿಸುವೆ 1 ಆಗಮಗಳು ಸುಳ್ಳೆಂಬುವದು | ನಾ ಯೋಗಿಯೆಂದು ಹಿಗ್ಗುತಲಿಹುದು ಭಾಗವರತ ನಿಂದನೆಗೈದು | ನಿರ್ ಭಾಗ್ಯತನ್ನತಾನೆ ಪೊಗಳುವದು ಸಾಗರದಂತಿಹ ದುರಾಸೆಯೊಳಗಾ ವಾಗಲು ಜನ ಮುಳುಗುತ ತಿಳಿಯದೆ ಹಾಗರ್ವದಿ ನಿಷ್ಫಲವ ಪೊಂದುವರಿದು 2 ನೀತಿ ತಪ್ಪಿತಾವ್ನಡೆಯುವುದು | ದು ರ್ಜಾತಿಗಳುತ್ತಮರೆಂಬುವದು ಆತುರದಲಿಮನವಳುಕುವುದು | ಬಲು ಘಾತಕತನದಲಿತಿರುಗುವದು ಗಾತುರಸುಖವೇ ಮೊಕ್ಷವೆಂದು ವಿಷ ಯಾತಿಶಯದಿಯರಿಷಡ್ವರ್ಗಗಳೊಳು ರಾತಿರಿಪಗಲೆನ್ನದೆ ಬೀಳ್ವುದುನಿ ನ್ನಾತಗಳಿಂಗೆ ಸ್ವಭಾವಗುಣಂಗಳು 3 ಕ್ಷಾಮಡಾಂಬರಗಳ್ಹೆಚ್ಚುವದು | ನಿ- ಷ್ಕಾಮರ ಹಾಸ್ಯವಮಾಡುವದು ಕಾಮದಿಜನಗಳ ಬಾಧಿಪದು ನಿಷ್ಕಾರಣರೋಗದಿ ಸಾಯುವದು ಪಾಮರರೆಲ್ಲರು ಪಂಡಿತರಾವೆಂ- ದೀಮಹಿಯೊಳುಮನಬಂದಂತೆಸದಾ ತಾಮಸಗಳಬೋಧಿಸುತಲಿಜಗದೊಳು ದ್ರವ್ಯಾರ್ಜನೆಮುಖ್ಯಸಾಧನವೆಂಬುದು 4 ವಿಪರೀತ ಫಲಗಳಾಗುವುದು ಚಪಲಹೊಂದಿಚಿಂತಿಸುತಿಹುದು ಜಪಹೋಮಗಳನು ತ್ಯಜಿಸುವದು ಬಲುಜಾಡ್ಯಂಗಳನನುಭವಿಸುವದು ಉಪಕಾರಗಳನುಮಾಳ್ಪರಲ್ಲಿ ಪ್ರ ತ್ಯಪಕಾರಗಳೆಣಿಸುತಲಾವಾಗಲು ಕಾಲಕಳೆಯುತ ವೃಥಾನೋಯುವದು 5 ಶೂದ್ರರುವೇದವ ಪಠಿಸುವದು | ನಿರು ಪದ್ರವನುದಂಡಿಸುತಿಹುದು | ಹರಿ ರುದ್ರವಿಧಿಗಳದೂಷಿಪದು | ಅ- ಬದ್ಧವೆಬಲುರುಚಿಯೆಂಬುವದು ಕ್ಷುದ್ರಕುನಾಸ್ತಿಕಮತವನಂಬಿ ದೇ- ವದ್ರೋಹಗಳನುಮಾಡುತ ಬಾಯಲಿ ಇದ್ದದ್ದಾದರುಯಿಲ್ಲೆಂಬುವದು6 ಪರರೊಡವೆಗಳಪಹರಿಸುವದು | ನೆರೆ- ಹೊರೆಯಂತಿರಬೇಕೆಂಬುವದು ಗುರುವಿನಲ್ಲಿ ದ್ವೇಷವೆಣಿಸುವದು | ಸತಿ- ಯರುಪತಿಯಲಿದ್ವೇಷಿಸುತಿಹುದು ನಿರತವುಜೀವನಕಿಲ್ಲೆಂದುಬಳಲಿ ದುರ್ವಿದ್ಯಗಳಭ್ಯಾಸಿಸಿಕಡೆಯಲಿ ನರಕಂಗಳಿಗೆ ಪ್ರಯಾಣಮಾಡುವದು7
--------------
ಗುರುರಾಮವಿಠಲ
ಕೃಷ್ಣ ನೀ ಕರುಣದಿ ಥಟ್ಟನೆ ಸಲಹೊ ದುಷ್ಟಮರ್ದನ ಸಕಲೇಷ್ಟದಾಯಕ ರಾಮ ಪ. ಹುಟ್ಟಿಸಿದ ದೇವರು ಹುಲ್ಲು ಮೇಯಿಸನೆಂದು ಶಿಷ್ಟ ನುಡಿವುದ ನಂಬಿಹೆನು ಮೆಟ್ಟಿ ಬಾಧಿಸುವಂಥ ದಟ್ಟ ದಾರಿದ್ರ್ಯದ ಬಟ್ಟೆ ಒಂದನು ಕಾಣೆ 1 ಊರ ಜನರ ಮುಂದೆ ಸೇರಿದ ಪದವನ್ನು ದೂರಗೊಳಿಸಿ ಬಹು ಗಾರಾದೆನು ಮಾರಮಣ ನೀನ್ನುದಾರ ಗುಣವ ನಂಬಿ ಚೀರುವ ಎನಗೆ ಬೇರಾರು ರಕ್ಷಕರಿನ್ನು 2 ವಿಶ್ವಕುಟುಂಬಿ ಸರ್ವೇಶ್ವರ ನೀನಿಂದು ವಿಶ್ವಾಸದಿಂದ ನಾನಿರುವದನು ತೈಜಸ ಪ್ರಾಜ್ಞ ತುರ್ಯರೂಪಗಳಿಂದ ವಿಶ್ವವ್ಯಾಪಕನಾದ ನಿನಗರುಪುವುದೇನೊ 3 ಖುಲ್ಲ ಮಾನವರೆಂಬ ಕ್ಷುಲ್ಲ ನುಡಿಗಳಿಂದ ತಲ್ಲಣಗೊಳಿಸುವುದುಚಿತವೇನೊ ಮಲ್ಲ ಚಾಣೂರ ಮುಷ್ಟಿಕರನ್ನ ಗೆಲಿÉದರಿ- ದಲ್ಲಣಯನಗೆ ಬೆಂಬಲನಾಗಿ ಸಲಹಿನ್ನು 4 ಇಂದ್ರಾದಿ ದಿವಿಜರ ಪದಗಳನವರಿಗೆ ಪೊಂದಿಸಿ ಪಾಲಿಪ ಕರುಣಿ ನೀನು ಇಂದಿರೆ ಸಹಿತಾಗಿ ಬಂದೆನ್ನ ಮನಸಿಗಾ ನಂದ ತೋರಿಸೊ ಭುಜಗೇಂದ್ರಾದಿ ಒಡೆಯ 5
--------------
ತುಪಾಕಿ ವೆಂಕಟರಮಣಾಚಾರ್ಯ
ಗೋಕುಲ ಬಿಟ್ಹ್ಯಾಂಗಿಲ್ಲಿಗೆ ಬಂದೆ ಶಿರಿಕೃಷ್ಣ ರಂಗಾ ವ್ಯಾಕುಲದಲಿ ನೀ ಸಾಗರ ತ್ಯಜಿಸಿ ಜೋಕೆಯಿಂದಲಿ ನಿಜಧಾಮಕೆ ಬಂದೆ ಪ ಬನ್ನವ ಪಡುತಿಹ ಭಕುತನ ನೋಡಿ ಚಿಂತೆಯ ಮಾಡಿ ಎನ್ನಂತರಂಗದ ಬಾಧೆಗಳು ಕಾಡೆ ಬಳಲುವುದಾ ನೋಡೆ ಮನ್ನಿಸಿ ಶರಣನ ಬಾಧಿಸುವ ಪೀಡೆ ಪರಿಹಾರ ಮಾಡೆ ಪನ್ನಗ ಶಯನ ಶ್ರೀಹರಿಯೇ ಓಡೋಡಿ ಬಂದೆ 1 ಪೊಕ್ಕಿಹೆನು ಸಂಸಾರಾರ್ಣವದೊಳಗೆ ಬಹು ದುಃಖದ ಅಲೆಗೆ ಲೆಕ್ಕವಿಲ್ಲದಾ ಜಂತುಗಳದರೊಳಗೆ ಇಂಬಿಲ್ಲಾ ಅಲ್ಲಿಡಿಂಬಕೆ ಸಿಕ್ಕಿ ಬಳಲುವಂಥ ಭಕುತನ ನೋಡಿ ಬಿಡುಗಡೆ ಮಾಡೆ ಅಕ್ಕರದಿಂದಲಿ ಭರದಿ ಕಾಪಾಡಲು ಬಂದೆ 2 ಶರಣರ ಪೊರೆಯುವುದೇ ನಿನ ಗುಟ್ಟು ಬಣ್ಣಿಸಲಿನ್ನೆಷ್ಟು ಕರುಣಿಸಿ ಬರುವಿ ಶಿರಿಯನು ಬಿಟ್ಟು ಭಕುತರೆ ನಿನಕಟ್ಟು ನಿರುಪಮ ನಿನ್ನಯ ದಯಕೇನೆನ್ನಲಿ ಶರಣರ ಪೊರೆಯುವಿ ನರಸಿಂºವಿoಲಾ ಬಂದೆ 3
--------------
ನರಸಿಂಹವಿಠಲರು
ಘನತಾಪ ಘನತಾಪ ಘನತಾಪ ಸಂಸಾರ ನೆನೆಸಲಳವಲ್ಲದನು ಕನಸಿನೋಳಭವ ಪ ಕ್ಷಣಹೊತ್ತು ಮನಸನ್ನು ಸನುಮತಯಿರಗೊಡದು ಗಣನೆಯಿಲ್ಲದ ತಾಪವನೆ ಒದಗಿಪುದಭವ ಅ.ಪ ವನಿತೆಯರ ತಿನಿಸು ತನುಜ ಅನುಜರ ಮುನಿಸು ಜನರನೊಲಿಸುವುದಿನಿಸು ಘನತಾಪ ಅಭವ ತನುರೋಗ ಮನರೋಗ ಧನದ ವಿಯೋಗ ಇನಿತೆಲ್ಲವೊಂದಾಗಿ ಘನಬಾಧಿಸುವುವಭವ 1 ಕೊಟ್ಟ ಒಡೆಯರು ಬಂದು ನಿಷ್ಠೂರಾಡುತ ಬಲು ಕಟ್ಟಿಕಾದುವ ಮಹಕೆಟ್ಟತಾಪಭವ ತಾಪ ಕೊಟ್ಟವರ್ಹಂಗಿನ ತಾಪ ಹುಟ್ಟುಸಾವಿನ ಅತಿ ಕಷ್ಟತಾಪಭವ 2 ಮನುಜರೂಪದ ಮಹ ಘನತೆಯನು ಕೆಡಿಸಿ ಕ್ಷಣದಿ ತೋರೆರಗುವ ಕನಿಕಷ್ಟ ಅಭವ ಇನಿತೀ ಸಂಸಾರತಾಪ ಕನಿಕರದಿಂ ಕಡೆಹಾಯ್ಸಿ ಮನಕೆ ಜಯನೀಡಿ ಕಾಯೋ ಎನ್ನಯ್ಯ ಶ್ರೀರಾಮ 3
--------------
ರಾಮದಾಸರು
ಜನನಿ ರುದ್ರಾಣಿ ರಕ್ಷಿಸು ಎನ್ನ ಜಗದೀಶನ ರಾಣಿ ಪ. ವನಜಭವಸುರಮುನಿಕುಲಾರ್ಚಿತೆ ಕನಕವರ್ಣಶರೀರೆ ಕಮಲಾ- ನನೆ ಕರುಣಾಸಾಗರೆ ನಮಜ್ಜನ- ಮನಮುದಾಕರೆ ಮಾನಿತೋದ್ಧರೆ ಅ.ಪ. ಆದಿಕೃತಾಯುಗದಿ ಪ್ರತಿಷ್ಠಿತ- ಳಾದೆ ಧರಾತಳದಿ ಆದಿತೇಯರ ಬಾಧಿಸುವ ದಿತಿ- ಜಾಧಮರ ಭೇದಿಸಿದೆ ಸಜ್ಜನ- ರಾದವರ ಮನ್ನಿಸಿದೆ ತ್ರೈಜಗ- ದಾದಿಮಾಯೆ ವಿನೋದರೂಪಿಣಿ 1 ಖಂಡ ಪರಶುಪ್ರೀತೆ ನಿಖಿಲಬ್ರ- ಹ್ಮಾಂಡೋದರಭರಿತೆ ಚಂಡಮುಂಡವೇತಂಡದಳನೋ- ದ್ದಂಡಸಿಂಹೆ ಅಖಂಡಲಾರ್ಚಿತೆ ಪಾಂಡುತನುಜ ಕೋದಂಡ ವಿತರಣೆ ಚಂಡಿಕೇ ಕರದಂಡಲೋಚನಿ2 ಸಿಂಧೂರ ಸಮಯಾನೆ ಸರಸ ಗುಣ- ವೃಂದೆ ಕೋಕಿಲಗಾನೆ ಸುಂದರಾಂಗಿ ಮೃಗೇಂದ್ರವಾಹಿನಿ ಚಂದ್ರಚೂಡಮನೋಜ್ಞೆ ಸತತಾ- ನಂದಪೂರ್ಣೆ ಮುನೀಂದ್ರನುತೆ ಸುಮ- ಗಂಧಿ ಗೌರಿ ಶಿವೇ ಭವಾನಿ 3 ಲಂಬೋದರಮಾತೆ ಲಲಿತ ಜಗ- ದಂಬಿಕೆ ಗಿರಿಜಾತೆ ಕಂಬುಕಂಠಿ ಕಾದಂಬನೀಕು- ರುಂಬಜಿತಧಮ್ಮಿಲ್ಲೆ ತವ ಪಾ- ದಾಂಬುಜವ ನಾ ನಂಬಿದೆನು ಎನ- ಗಿಂಬು ಪಾಲಿಸೆ ಶುಂಭಮರ್ದಿನಿ 4 ಘನವೇಣುಪುರವಾಸೆ ಸರ್ವಾರ್ಥದಾ- ಯಿನಿ ತ್ರೈಜಗದೀಶೆ ಸನಕನುತೆ ಶ್ರೀಲಕ್ಷುಮಿನಾರಾ- ಯಣಭಗಿನಿ ಶ್ರೀಮಹಿಷಮರ್ದಿನಿ ಮನಮಥಾಮಿತರೂಪೆ ಕಾತ್ಯಾ- ಯಿನಿ ನಿರಾಮಯೆ ಮಂಜುಭಾಷಿಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ತಂದೆ ನಿನ್ನೊಲುಮೆಯೊಂದೆ ಎನ್ನ ಬಯಕೆ ಪ ಬಂದ ಕಷ್ಟಗಳೆಲ್ಲ ಎನ್ನಭ್ಯುದಯಕೆ ಅ.ಪ ಆಸೂರಿಯಾದರೂ ಈ ಸೂರಿಯಾದರೂ ಏಸೂರಿಗ್ಹೋದರೂ ವಾಸಿಯಿಲ್ಲ ಕೂಸುಗಳ ಪಡೆದರೂ ಆಸೆಗಳ ತೋರಿದರೂ ಹೇಸಿಕೆ ಬೇಳಲೆದರೂ ಲೇಸಾಗಲಿಲ್ಲ 1 ಈ ವೂರಿನೈವತ್ತು ಆ ವೂರಿನೈವತ್ತು ದೇವರ್ಕಳಿಗೆ ನಾಮ ಹರಕೆ ಹೊತ್ತು ಬೇವಿನಲಿ ಸಿಹಿಯ ನೀನೀವುದೆಂದತ್ತತ್ತು ಜೀವಿತವು ಬರಿದಾಯ್ತ ಬಾಧಿಸುವುದೈಮುಪ್ಪು 2 ತಂದೆ ಗೋವಿಂದನಯ್ಯ ಒಂದುನೂರ್ವಂದನೆಯ ಇಂದರ್ಪಿಸುವೆನಯ್ಯ ಕೈಹಿಡಿಯಯ್ಯ ಕುಂದ ಕಳೆಗಾಣಿಸಯ್ಯ ಬಂಧನವ ಬಿಡಿಸಯ್ಯ ಇಂದಿರಾನಂದ ಮಾಂಗಿರಿಯ ರಂಗಯ್ಯ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀತಿಯೆ ಎನ್ನ ಬಾಧಿಸುವುದಿನ್ನು ಪ. ಎಲ್ಲಿಯೂ ಎನಗೆ ನೀನಲ್ಲದೆ ಬೇರೆ ಗತಿ ಸಿರಿನಲ್ಲ ನೀ ಬಿಡುವುದು 1 ಶ್ರೀಯರಸ ನೀನೆ ತಂದೆತಾಯಿಗಳೆಂದು ಬಾಯಬಿಟ್ಟೊದರಲು ಕಾಯದೆ ಕಠಿಣ 2 ಭೂಧರಾಧೀಶಾಯುರ್ವೇದ ವಿದಾಯಕ ಮಾಧವ ನೀ ಎನ್ನ ವ್ಯಥೆಗೊಳಿಸುವುದು 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಿನ್ನೈಪೆ ನಿನಗಾನು ಭಕ್ತ ಬಂಧೋ ಪ ಘೋರ ದುರಿತಗಳು ಬಂದು ಬಹು ಬಾಧಿಸುವುದುಚಿತವೇ ಅ.ಪ. ಏಸು ಕಾಲಾದವು ಬಾಧೆ ಬಿಡುತಿಹಳು ಬಲ್ಯಲ್ಲಾಶ್ವಾಸ ಮಂತ್ರದಿ ದಾಶಿಯಳ ಕ್ಲೇಶವಳಿಯೊ ಪ್ರಭುವೆ 1 ಭುವನ ಭಿಕ್ಷುಕಧಾರಿ ಪ್ರತ್ಯಕ್ಷನೀನಿರಲಾಗಿ ಮಾತೃಭಿಕ್ಷವ ನೀಡೋ ಸುಖದ ಕ್ಷಾರಿ ತಲೆಬಾಗಿ2 ಸೊಲ್ಲು ಲಾಲಿಸಬೇಕು ತಂದೆವರದಗೋಪಾಲವಿಠ್ಠಲನ ಪ್ರೀಯಾ 3
--------------
ತಂದೆವರದಗೋಪಾಲವಿಠಲರು
ಭಜಿಪ ಭಕ್ತರ ಭಾವ ಪರಿಪೂರ್ಣ ಬಾಗಿ ಭಜಿಸುವೆ ಬಾರೊ ದಯಾಸದನ ಪ ಪಾದಸೇವೆಯ ಕರುಣಿಸಿ ಪರ ಸಾಧನದ ಮಹದ್ಹಾದಿ ತೋರಿಸಿ ಬಾಧಿಸುವ ಭವಬಾಧೆ ತೊಲಗಿಸಿ ವೇದವಿದ್ಯವ ಬೋಧಿಸಭವ 1 ನಿತ್ಯ ನಿಮ್ಮ ಗುರ್ತುತೋರಿಪ ತತ್ವದರ್ಥವ ತುರ್ತುಪಾಲಿಸು ಕರ್ತುವೇದ 2 ಭಕ್ತವತ್ಸಲನೆಂಬ ಬಿರುದು ಸತ್ಯವಾಗಿ ಹೊತ್ತುಕೊಂಡಿಹಿ ಭಕ್ತನಿಷ್ಟವ ಚಿತ್ತೈಸೊಡನೆ ಮುಕ್ತಿಪದ ನೀಡಾತ್ಮರಾಮ 3
--------------
ರಾಮದಾಸರು
ಮಾಧವ ಮುಕುಂದ ಹರಿ ದನುಜಾರಿದಯಾವಾರಿಧಿ ಅನುದಿನದಿ ನಿಮ್ಮ ಚರಣವ ನಂಬಿದವರಿಗಿಂಥ ಬಿನುಗುದುರಿತಗಳು ಬಾಧಿಸುವುದ್ಯಾತಕೊ ಸ್ವಾಮಿ ಪ. ತರುಣಿಕುಲರಾಮನೊಳು ತೊಡಕು ಬೇಡವು ಸೀತೆ(ಯ) ಹರಿಗೆ ಒಪ್ಪಿಸು ಎನಲು ಊರ ಹೊರಗೋಡಿಸಿರಲು ಭರದಿಂದ ಬಂದು ಮರೆಹೊಗಲು ವಿಭೀಷಣನು ಚರಣಕಮಲಕೆ ಎರಗಲು ಕರವ ಪಿಡಿದೆತ್ತಿ ಅಭಯವನಿತ್ತು ಲಂಕೆಯ ಸ್ಥಿರಪಟ್ಟಕಟ್ಟಿದ ಕರುಣಾಳುಗಳ ದೇವ 1 ಒದೆದೆಳೆದು ಪತಿಗಳೈವರ ಮುಂದೆ ದ್ರೌಪದಿಯ ನಡುಸಭೆಯೊಳು ನಿಲ್ಲಿಸಲು ಉಡುವ ಸೀರೆಯ ಸೆಳೆವೆನೆಂದು ದುಶ್ಯಾಸ(ನ) ಕೈ ದುಡುಕುತಿರಲಾಕ್ಷಣದಲಿ ಕೆಡುವದಭಿಮಾನ ಶ್ರೀ ಹರಿ ನೀನೆ ಕಾಯೊ ಎನ್ನೆಂ- ದೊದರುತಿರಲು ನುಡಿಯಲಾಲಿಸಿ ನಾನಾಪರಿಯ ವಸ್ತ್ರವನಿತ್ತು ಉಡಿಸಿ ಅಭಿಮಾನ ರಕ್ಷಿಸಿದಂಥ ಶ್ರೀಕಾಂತ 2 ಉತ್ತಾನಪಾದರಾಜ (ನ)ಣುಗ ತಮ್ಮಯ್ಯನ ಮತ್ತ ತೊಡೆಯೇರಿಇರಲು ನಿತ್ಯದಲಿ ಸುರುಚಿ ಸುನೀತಿ ಕುಮಾರಕನ ಎತ್ತಿ ಕಡೆಯಕ್ಕೆ ನೂಕಲು ನಿತ್ತ ವಿಚಾರವಿಲ್ಲದಂತೆ ಸತ್ಯಮೂರುತಿ ಹೆಳವನಕಟ್ಟೆರಂಗಯ್ಯ ಭಕ್ತವತ್ಸಲನೆಂಬೊ ಬಿರುದು ನಿನ್ನದು ಸ್ವಾಮಿ 3
--------------
ಹೆಳವನಕಟ್ಟೆ ಗಿರಿಯಮ್ಮ
ಮಾರಿ ಬೇರೆಂದೇಕೆ ಹಲುಬುವರು ಜಗದಿ ನಾರಿಯೇ ಮಕ್ಕಮಾರ್ಯೆಂದೆನ್ನಬಾರದೆ ಪ ಹಿತದೋರಿ ಮನಸೆಳೆದು ಮತಿಗೆಡಿಸಿ ವಿಧವಿಧ ದು ಷ್ಕøತ ಪೇಳಿ ಬಂಧುಗಳ ಹಿತವನೆ ಮರೆಸಿ ಸತತ ಬೆನ್ನ್ಹತ್ತಿ ಬಿಡದೆ ಕ್ಷಿತಿಮೇಲೆ ಅತಿಯಾಗಿ ವ್ಯಥೆಬಡಿಪ ಮಾರಿ ನಿಜಸ್ಥಿತಿ ವಿಚಾರಿಸದೆ 1 ಮನೆ ಧನ ಗುಣ ಸುಲಿದು ಘನತೆಯನು ಕೆಡಿಸಿ ಮ ತ್ತನುಕೂಲವನು ಇತ್ತು ತನುಶಕ್ತಿ ಹೀರಿ ಕುಣಿಕುಣಿಸಿ ಜಗದೊಳಗೆ ಬಿನಗುರಲಿ ಬಿನುಗೆನಿಸಿ ಘನ ಬಾಧಿಸುವ ಮಾರಿದಿನಿಸು ಕಾಣದಲೆ 2 ಸ್ವಾಮಿ ಶ್ರೀರಾಮನ ಪ್ರೇಮಕ್ಕೆ ದೂರೆನಿಸಿ ಭುವಿಯೊಳು ಮುಕ್ತಿಕಾಮಿನಿಯ ತೊರೆಸಿ ನೇಮವಿಲ್ಲದ ಕಷ್ಟ ನೇಮಿಯೊಳಳಿಸಲಿಕೆ ಯಮನೊಶಕೆ ಕೊಡುವಂಥ ಈ ಮಾರಿನೊದೆಯದೆ 3
--------------
ರಾಮದಾಸರು