ಒಟ್ಟು 8 ಕಡೆಗಳಲ್ಲಿ , 7 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಬಗೆಯಿಂದ ಸಲಿಗೆಯನಿತ್ತಿಯೊ ಮಾವಮರ್ದನ ರಂಗ ನಿನ್ನ ದಯಾ ತಿಳಿಯದು ಪ ಅಂದರೆ ಆನಂದ ಅನಂದದೇ ಅನಾನಂದ ನಿಂದದೆ ಗೋಕುಲ ನಿಲದದೆ ವ್ಯಾಕುಲ ಬಂದದೆ ಪುರುಷಾರ್ಥ ಬಾರದಿದ್ದರೆ ವ್ಯರ್ಥ ಮಂಧರಧರ ನಿನ್ನ ಮನಸು ಬಂದದ್ದೆ ಸರಿ 1 ಕೊಟ್ಟದ್ದೆ ಪುರುಷಾರ್ಥ ಕೊಡದಿಪ್ಪದೆ ಅನರ್ಥ ಅಟ್ಟಿ ಬರುವ ಪಾಪ ಸುಟ್ಟು ಬಿಡು ನಿರ್ಲೇಪ ತಟ್ಟಿದುದೆ ವೇದಾರ್ಥ (ತಟ್ಟದದೆ) ಮಿಥ್ಯ ವಿಠ್ಠಲ ನಿನ್ನ ಭಕ್ತರಿಗೆ ನೀ ಬಲು ಸುಲಭಾ 2 ದೆರಗಲು ಆಕ್ಷಣವೆ ಸಿದ್ಧ ಮಾಳ್ಪೆ ಕರುಣ ನಿಧಿಯೆ ನಮ್ಮ ವಿಜಯವಿಠ್ಠಲ ನಿನ್ನ ಸರಿಯಾದ ದೇವರನು ಕಾಣೆ ತ್ರಿಭುವನದಲ್ಲಿ3
--------------
ವಿಜಯದಾಸ
ಒಲ್ಲೆನವ್ವಾ ಲಕುಮಿಯ ನಲ್ಲ ಬಾರದಿದ್ದರೆತನುಹೊರೆಯನೊಲ್ಲೆನವ್ವಾ ಪ ಭಾರ ಹುವ್ವಿನಭಾರ ಸೈರಿಸಲಾರೆನೆಮಾರನಯ್ಯನು ಬಾರದಿದ್ದರೆಮಾರನಂಬಿಗೆ ಗುರಿಯ ಮಾಡಿ 1 ಎಲ್ಲ ದೇವರ ವಲ್ಲಭನೆಂದುಒಲಿದ ಮನ ನಿಲ್ಲದೆನಿಲ್ಲದೆ ರಂಗ ಪೋದ ಮಧುರೆಗೆಬಿಲ್ಲ ಹಬ್ಬದ ನೆವನ ಮಾಡಿ 2 ಮಂದಾನಿಲನ ಸಹಿಸಲಾಗದುನೊಂದೆ ಶುಕಪಿಕ ರವಗಳಿಂದಚಂದ್ರಕಿರಣದಿ ಬೆಂದೆ ಇನ್ನೀವೃಂದಾವನವೇಕನನಗಲಿ 3 ಮುನ್ನ ಆಡಿದ ಮಾತ ಮರೆತುಎನ್ನ ಮನದೊಳಗೀಡಾಡಿವನ್ನಜಾಕ್ಷನು ಬಾರ ಪುರದವನ್ನಿತೆಯರನು ಮೆಚ್ಚಿ ಪೋದ 4 ಪೊಂಗೊಳಲ ಧ್ವನಿಗೆ ಸಿಲುಕಿಭಂಗಗೆಟ್ಟೆನಂಗಜನಿಂದಲಿಪೆಂಗಳಿಗುಚಿತವಲ್ಲ ಇದುರಂಗವಿಠಲನ ತೋರದಿದ್ದಡೆ 5
--------------
ಶ್ರೀಪಾದರಾಜರು
ಬಾರೋ ಬಾರೋ ಬಾರಯ್ಯ ಬಾರೊ ಸದ್ಗುರುಸ್ವಾಮಿ ಬಾರಯ್ಯ ಬಾರೊ ಮದ್ಗುರು ಸ್ವಾಮಿ ಬಾರಯ್ಯ ಬಾರೊ ಧ್ರುವ ಸ್ವರೂಪಸುಖ ನಿಜವನ್ನು ತೋರೊ ಹರುಷಾನಂದದನುಭವ ಬೀರೊ ಗುರುತವಾಗ್ಯೆನ್ನೊಳು ನಿತ್ಯವಿರೊ ತರಣೋಪಾಯದ ನಿಜಬೋಧ ನೀ ಸಾರೊ 1 ಕಣ್ಣುಕೆಂಗೆಂಡುತಾವೆ ಕಾಣದೆ ನಿಮ್ಮ ಪುಣ್ಯಚರಣ ತೋರೊ ಘನ ಪರಬ್ರಹ್ಮ ಚಿಣ್ಣಕಿಂಕರ ಅತಿದೀನ ನಾ ನಿಮ್ಮ ಧನ್ಯ ಧನ್ಯಗೈಸುವದೆನ್ನ ಜನುಮ 2 ಚಾಲ್ವರುತಾವೆ ಮನೋರಥಗಳು ಆಲೇಶ್ಯ ಮಾಡದಿರು ನೀ ಕೃಪಾಳು ಮೇರೆದಪ್ಪಿ ಹೋಗುತಿದೆ ದಿನಗಳು ಬಲು ಭಾಗ್ಯೊದಗಿಬಾಹುದು ನೀ ದಯಾಳು 3 ಹಾದಿ ನೋಡುತಿದೆ ಹೃದಯ ಕಮಲ ಸಾಧಿಸಿಬಾಹುದು ಮುನಿಜನ ಪಾಲ ಸಾಧುಹೃದಯ ನೀನಹುದೊ ಸಿರಿಲೋಲ ಛೇದಿಸೊ ನೀ ಬಂದು ಭವಭಯಮೂಲ 4 ಬಾರದಿದ್ದರೆ ಪ್ರಾಣ ನಿಲ್ಲದೊ ಎನ್ನ ಕರುಣಿಸಿಬಾಹುದು ಜಗನ್ಮೋಹನ ತರಳ ಮಹಿಪತಿಗೆ ನೀ ಜೀವಜೀವನ ಕರೆದು ಕರುಣ ಮಳೆಗೈಸು ಪಾವನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ರಂಗ ಬಾರೋ ರಂಗಯ್ಯ ಬಾರೋ - ನೀ ಪ ಬಾರದಿದ್ದರೆ ಎನ್ನ ಪ್ರಾಣ ಉಳಿಯದು ಅ ಅತ್ತಿಗೆ ಮೈದುನ ಬಾರೊ ಅತ್ತೆಯ ಮಗಳ ಗಂಡಅತ್ತಿಗೆ ಮೇಲತ್ತಿಗೆ ನಾದಿನಿ ಸೊಸೆಯ ಗಂಡ1 ಮಾವನ ಅಳಿಯನೆ ಬಾರೊ ಮಾವನ ಬೀಗನ ತನುಜಮಾವನ ಮಡದಿಯ ಮಗಳ ತಂಗಿಯ ಗಂಡ 2 ಅಂಬುಧಿ ಶಯನನೆ ಬಾರೊ ಆದಿ ವಸ್ತುವೆ ರಂಗಕಂಬದೊಳು ನೆಲಸಿದ ಆದಿಕೇಶವರಾಯ 3
--------------
ಕನಕದಾಸ
ಸೊಲ್ಲು ಕೇಳುತ ಈಗ ಮೆಲ್ಲನೆ ಎನ್ನ ಮನದಲ್ಲಿ ನಿಲ್ಲೊ ಪ. ಪುಲ್ಲಲೋಚನ ದೇವ ಎಲ್ಲಿಗು ಪೋಗದೆ ಉಲ್ಲಾಸಪಡಿಸುತ ನಿಲ್ಲೊ ಹೃದಯದಲಿ ಅ.ಪ. ಸ್ಥಾವರ ಜಂಗಮ ವ್ಯಾಪ್ತನಾಗಿಹ ದೇವ ದೇವ ಎನ್ನ ಮನದಿ ನಿಲುವುದು ಘನವೆ ಶ್ರೀವರ ನೀನೀಗ ಕಾವನೆಂದರಿತಿರೆ ಸಾವಕಾಶವಿದೇಕೆ ಭಾವಜನಯ್ಯನೆ 1 ಇಷ್ಟು ದಿನವು ನಿನ್ನ ಮುಟ್ಟಿ ಪೂಜಿಸಲಿಲ್ಲ ಸಿಟ್ಟೇನೊ ನಿನಗಿದರ ಗುಟ್ಟು ತಿಳಿಯದೆ ಬಿಂಕ ಕೊಟ್ಟು ಅಭಯ ಸಲಹೊ ಇಷ್ಟ ಸ್ಥಾನದಿ ನಿನ್ನ ಮುಟ್ಟಿ ಪೂಜಿಸಿರುವೆ 2 ಸರಿಯಲ್ಲ ನಿನಗಿದು ಕರೆದರೆ ಭಕ್ತರು ತ್ವರಿತದಿಂದಲಿ ಬರುವ ಬಿರುದಿಲ್ಲೆ ನನಗೆ ಸರಿ ಬಂದರೆ ಬಾರೊ ಬಾರದಿದ್ದರೆ ಬಿಡೊ ಅರಿತು ನಿನ್ನಯ ನಾಮ ಅರುಹುವ ಮತಿ ನೀಡೊ 3 ಕಾರ್ಯಕಾರಣಕರ್ತ ಪ್ರೇರ್ಯಪ್ರೇರಕರೂಪ ಉರ್ವಿಗೊಡೆಯ ಸರ್ವ ನಿರ್ವಾಹಕ ಗರ್ವರಹಿತಳ ಮಾಡಿ ಸರ್ವದಾ ಪೊರೆದರೆ ಸರ್ವಾಧಿಪತಿಯೆಂದು ಸಾರ್ವೆನೊ ನಾನಿಂದು 4 ಸೃಷ್ಟಿ ಸ್ಥಿತಿ ಲಯಗಳಿಗೆ ಕರ್ತನೊಬ್ಬನೆ ನೀನು ಶ್ರೇಷ್ಠನಾಗಿರುವೆಯಾ ಸರ್ವರಿಗೆ ಬಿಟ್ಟಿರುವೆಯೊ ಜಗದ ಅಷ್ಟೂ ವಸ್ತುಗಳಿಂದ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲದೇವ 5
--------------
ಅಂಬಾಬಾಯಿ
ಗೋಪಿಹೇಳೆ ರಂಗಗೆ ಬುದ್ಧಿ ಪಗೋಪಿಹೇಳೆ ರಂಗಯ್ಯಗೆ ಬುದ್ಧಿ ಪುರದೊಳು |ರಾಪು ಮಾಡುವದು ವೆಗ್ಗಳವಮ್ಮ ಅ.ಪ.ಪೋರರ ಒಡಗೂಡಿ ಬಂದು ಎಲ್ಲರು ನೋಡಸೀರೆಯಸೆರಗುಪಿಡಿವರೇನೇ ||ಜಾರೆ ಹೆಂಗಳೆರಾದರೊಳ್ಳತು ತಾಂ ತಡವಲುಈ ರೀತಿಯೆ ಪತಿಯಿದ್ದವರ ಕೂಡ 1ಹಿರಿಯಣ್ಣಗಿಟ್ಟಿದ್ದ ಮೀಸಲ ತುಪ್ಪವಸುರಿದು ಗಡಿಗೆ ವಡದೋಡಿದ |ಗೋಪಿ||ಥರವೆ ನಿಮ್ಮಮ್ಮನಲ್ಲಿಗೆ ಬಾರೋ ಎಂದರೆಸೆರಗ ಕೊಸರಿಮಾನಕೊಂಬನೆ | ಗೋಪಿ 2ಕತ್ತಲೊಳಗೆ ಮಕ್ಕಳಂತೆ ಸಣ್ಣವನಾಗಿಹತ್ತಿಲಿ ಬಂದೊರಗುವನಮ್ಮ |ಗೋಪಿ||ಇತ್ತತ್ತ ಬಾ ಕಂದಯೆಂದಪ್ಪಿಕೊಳಲವಕೃತ್ಯವ ಮಾಡಿ ಓಡುವನಮ್ಮ | ಗೋಪಿ 3ಆಕಳ ಮೊಲೆಯುಂಡು ತರುವಾಯ ಕರುಬಿಟ್ಟುತಾ ಕೂಗುವನೆ ಕರಕೊಳಿರೆಂದು |ಗೋಪಿ||ಗೋಕುಲದೊಳು ಬಹು ದಿವಸವಾಯಿತು ದುಡ್ಡುತೂಕ ಕ್ಷೀರವಮಾರಕಾಣೆವೇ | ಗೋಪಿ 4ಬಚ್ಚಲೊಳಗೆ ಪ್ರಾಯದವಳು ಕುಳಿತು ಎಣ್ಣೆಹಚ್ಚಿಕೊಂಡೆರಕೊಳ್ಳುತಿದ್ದೆವೆ |ಗೋಪಿ||ಎಚ್ಚರಿಸದೆ ಬಂದು ಎದುರಿಗೆ ನಿಲ್ಲುವಹುಚ್ಚನೆ ಬಹು ಜಾಲಗಾರನು | ಗೋಪಿ 5ಪುರುಷಗೆ ಸಂಶಯ ನಮ್ಮ ಮನೆಗೆ ಕೃಷ್ಣಬರುವನೆಂಬು ಮಜ್ಜನಕೆ ಜಲ |ಗೋಪಿ||ಬೆರಸಿಟ್ಟರೆಲ್ಲವು ಚೆಲ್ಲಿ ಪೋಗುವಗಂಡಕರೆಕರೆಮಾಡುವ ಪರಿಪರಿ | ಗೋಪಿ 6ಪೋಗಲಿನಿತೂ ಮುಂದೆ ಪ್ರಾಣೇಶ ವಿಠಲಗೆಹೀಗಿರುಯೆಂದು ನೀ ಪೇಳಮ್ಮಾ |ಗೋಪಿ||ಈಗುಸುರಿದ ಮಾತು ಸರಿಬಾರದಿದ್ದರೆಸಾಗಿರೆಂದಪ್ಪಣೆ ಕೊಡಿರೆಮ್ಮ | ಗೋಪಿ 7
--------------
ಪ್ರಾಣೇಶದಾಸರು
ಚೆಂಡನಾಡುತ ಬಂದ ಪುಂಡ ಕೃಷ್ಣನು ತನ್ನ |ಹಿಂಡುಗೋಪಾಲಕರ ಕೊಂಡು ಯಮುನೆಯ ತಡಿಗೆಪಓರೆ ತುರುಬನೆಕಟ್ಟಿಗೀರುನಾಮವನಿಟ್ಟು |ಹಾರ ಕಂಕಣ ತೋಳಬಂದಿ ಘುಂಗುರ ಘನ-|ಸಾರಕುಂಕುಮ ಕೇಸರಿಗಂಧ ಕೂಡಿಸಿ |ಸೇರಿಸುತ ನಡುವಿಗೆ ಕಾಸಿದಟ್ಟಿಯನುಟ್ಟು |ಹಾರಾಡುತಲಿ ಬಂದ-ತೊಡರಗಾಲ |ತೋರ ಚಿನ್ಮಣಿಗಳಿಂದ. ಮುತ್ತಿನ ಚೆಂಡು |ಧಾರಿಣಿಗೆ ಪುಟಿಸಿ ನಿಂದ-ವಜ್ರದಖಣಿ|ತೋರಿ ಗೆಳೆಯರ ಕೂಡ ಬಂದರಾ ಮನೆಯಿಂದ 1ಕೊಂಡಾಲ ತಿಮ್ಮನು ಚೆಂಡನೆ ಹೊಡೆದನು |ಮಿಂಡೆಯರ ಮೊಲೆಗಾಗಿ ಹಾರಿಹರಿದು ಬೀಳೆ |ಹಿಂಡುನಾರಿಯರೆಲ್ಲ ಸುತ್ತಿಕೊಂಡಿರೆಅವರ|ಮುಂಡೆಗೆ ತಗುಲಿಸಿ ಪುರದ ಬಾಗಿಲ ಬಿಟ್ಟು |ಕಿಂಡಿಯಿಂದಲಿ ಬಂದನು-ನಾರಿಯರ |ಮಂಡೆಗೆ ಚೆಂಡಿಟ್ಟನು-ತೋರಿಸುವರ |ಕಂಡು ತಾ ನಗುತಿದ್ದನು-ಕೌತುಕವೆಂದು |ದಿಂಡೆಯರುಮಡುವಿನೊಳಗೆ ಹಾಕಿ ನಡೆದರು2ಗೆಳೆಯರೆಲ್ಲರು ಕೂಡಿ ಚೆಂಡು ತಾ ಎನಲಾಗಿ |ಗುಳುಗುಳಿಸುವ ವಿಷದ ಯಮುನಾ ತಡಿಯಲಿನಿಂದು|ಬಳಿಯ ವೃಕ್ಷದ ಮೇಲೇರಿ ತಾ ಧುಮುಕಲು |ಕಳಕಳಿಸುವ ಗೋಪಾಲರಳುತಿರೆ |ಇಳಿದ ನೀರೊಳಗಾಗಲು-ನಾಗರಫಣಿ|ತುಳಿದು ಕುಣಿಕುಣಿಯುತಿರಲು-ಬ್ರಹ್ಮನು ಬಂದು |ತಿಳಿದು ಮದ್ದಲೆ ಹೊಯ್ಯಲು-ಇಂದ್ರಾದ್ಯರು |ನಲಿದು ತಾಳವನಿಟ್ಟು ಕೊಂಡಾಡುತಿದ್ದರು 3ಮಗನ ಸುದ್ದಿಯಕೇಳಿಹರಿದು ಬಂದಳುಗೋಪಿ|ನಗರದ ಹೊರಗಾಗಿ ಬಾಯ ನಾದದಿಂದ |ವಿಗಡೆಯರು ಬಿಟ್ಟ ಮಂಡೆಯ ಜುಂಜು ಕೆದರುತ |ತೆಗೆದು ಮಣ್ಣನೆ ತೂರಿ ಕುಳಿತಲ್ಲಿಂದಲೆ ನಮ್ಮ-|ನ್ನಗಲಿ ಹೋಗುವರೆ ಹೀಗೆ-ರಂಗ ನಮ್ಮ |ಮೊಗವ ನೋಡುವುದೆಂದಿಗೆ-ನೋಡಿದ ಕಣ್ಣ |ತೆಗೆದು ಕೀಳುವೆನಿಂದಿಗೆ-ಪಡೆದ ಪೊಟ್ಟೆ |ದಗದಗಿಸಲು ಕೊಟ್ಟು ಮುನಿಯದೆ ಬಾ ಬೇಗ 4ಏನನೆಂಬೆನು ಕೃಷ್ಣ ನಿನ್ನ ಕಾಣದೆ ಪುರದ |ಮಾನಿನಿಯರು ಬೆರಗಾಗಿ ಬೀಳುತ ಕರುವ |ಕಾಣದಿರೆತ್ತಿಗೆ ಕರುವನು ಬಿಡುವರು |ಆ ನಾಸಿಕದ ಮೂಗುತಿ ಕಿವಿಗಿಡುವರು |ಧೇನುಮೇವನೆ ತೊರೆದುವು-ಗೋವುಗಳನ್ಯ-|ರಾಮನೆಗೋಡಿದುವು-ವತ್ಯಗಳೆಲ್ಲ |ಮೌನದಿ ಮೊಲೆ ತೊರೆದುವು ಕೃಷ್ಣಯ್ಯನ |ವೇಣುನಾದದ ಧ್ವನಿ ಕೇಳದೆ ಮೆಚ್ಚವು 5ದ್ವಾರಕಿ ಕೃಷ್ಣ ನೀ ಬಾಯೆಂದು ಕರೆವೆನೊ |ತೋರುವ ಸಮಪಾದ ವಿಠಲನೆಂಬೆನೊ |ಶ್ರೀರಮಣ ವೆಂಕಟನೆಂದು ಒದರುವೆನೊ |ಶ್ರೀರಂಗಶಯನನೆಂದೆನಲ್ಲದೆ ನಿನ್ನ |ಚೋರ-ಜಾರನೆಂದೆನೆ-ಹದ್ದಿನ ಮೇಲೆ |ಏರಿ ತಿರುಗುವನೆಂದೆನೆ-ಬೆಣ್ಣೆಯ ಕದ್ದು |ಸೂರೆ ಮಾಡುವನೆಂದೆನೆ-ಕೃಷ್ಣಯ್ಯ ನೀ |ಬಾರಯ್ಯ ಬಾರದಿದ್ದರೆ ಪ್ರಾಣ ನೀಗುವೆ 6ಕಣ್ಣೆತ್ತಿ ನೋಡಿದನೆಂದೆನೆ ಕಡೆಗೋಲ |ಬೆನ್ನಲಿ ಪಿಡಿದನೆಂದೆನೆ ಹಲ್ಲಳನೂರಿ |ಮಣ್ಣ ಕಚ್ಚಲು ಬಾಯ ತೆರೆಯುವನೆಂದೆನೆ |ಮಣ್ಣ ಬೇಡಲು ನಾ ಕೊಡಲಾರೆನೆಂದೆನೆ |ಎನ್ನ ಕುತ್ತಿಗೆ ಕೊಯ್ವರೆ-ಮಾತೆಯ ಮಾತು |ಮನ್ನಿಸಿ ವನಕೆ ಪೋಪರೆ-ಬಲಭದ್ರ |ಅಣ್ಣನಿಗೆ ಮುಖವ ತೋರೆ-ಕೃಷ್ಣಯ್ಯ ನೀ |ಸಣ್ಣವನೆನ್ನದೆ ಹರಿಯ ಕೊಂಡಾಡಿದೆ 7ಎಂದ ಮಾತನು ಕೇಳುವಾ ಸಮಯ ನಾಗಿಣಿ-|ವೃಂದವೆಲ್ಲವು ತಮ್ಮ ಕಂಠಭೂಷಣರಾಗಿ |ಅಂದದ ಮೇಲುದ ಸುತ್ತಿಕೊಂಡಿರೆ ಅರ-|ವಿಂದನಾಭಾಚ್ಯತ ಕೇಶವಮುರಹರ|ಮಂದರಧರಹರಿಯೆ-ನಿನಗೆ ನಾವು |ಮಂದಾಕಿನಿಯ ಸರಿಯೆ-ಮಾಂಗಲ್ಯದ |ಚೆಂದ ಕಾಯೈ ದೊರೆಯೆ-ಹರಿಯ ಕೃಪೆ-|ಯಿಂದ ಕರೆದು ನಮ್ಮ ಕಾಯಬೇಕೆಂದರು 8ಇಂತಿಂತು ಸ್ತವನವ ಮಾಡೆ ಕಾಳಿಂಗನ |ಕಾಂತೆಯರ ಸ್ತೋತ್ರಕ್ಕೆ ಮೆಚ್ಚಿ ನಾಗನ ಬಿಟ್ಟು |ಕಂತುಕ ಸಹಿತ ಪಂಕಜನಾಳವನೆ ಕೊಂಡು |ಸಂತಸದಲಿ ಇಕ್ಕುತ-ಶೋಕದಿ ನೀವು |ಭ್ರಾಂತಿ ಬಿಡಿರಿ ಎನ್ನುತ-ಬರಿದೆ ಎಲ್ಲ |ಸಂತೆ ಕೂಡಿದೆ ಎನ್ನುತ-ನಾ ಹಸಿದೆನು |ಪಂತಿಭೋಜನ ಕೊಂಡು ನಡೆಯಿರಿ ಮನೆಗೆಂದ 9ಸುರರಿಗೆಸುಧೆಮುಂಚೆ ಉಣಿಸಿದ ಪರಬ್ರಹ್ಮ |ಪರಿಪರಿ ಭೋಜನ ಮಾಳ್ಪ ಕಂಡುವರಾರು? |ಸುರದುಂದುಭಿ ಪೊಡೆದು ಪಾರಿಜಾತದ ಮಳೆ |ಸುರಿಸಿದರಾಕ್ಷಣಕೆ-ಬ್ರಹ್ಮನು ತಾನು |ತೆರಳಿದನಾಶ್ರಮಕೆ-ಪುರಂದರವಿಠಲ |ತಿರುಗಿದ ನಿಜಧಾಮಕೆ-ಕೃಷ್ಣನ ಲೀಲೆ |ಗುರುದಯೆಯಲಿ ನಮ್ಮ ಹರಿಯ ಕೊಂಡಾಡಿದೆ 10
--------------
ಪುರಂದರದಾಸರು