ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಷ್ಟೇ ದಯ ಮಾಡಬಾರದೇ ಸೃಷ್ಟಿಕರ್ತಾ ಜಗದ್ರಕ್ಷಾ ವಿಶ್ವನಾಥಾ ಇಷ್ಟೇ ದಯ ಮಾಡಬಾರದೇ ಪ ದುಷ್ಟ ವಿಷಯದೊಳಗೆ ಬೆರೆತೆ ಸೃಷ್ಟೀಶ ನಿನ್ನನೆ ಮರೆತೆ ಭ್ರಷ್ಟ ಮನವನಳಿದು ನಿನ್ನಿಷ್ಟ ಭಕ್ತರೊಳಗೆ ದುಡಿಸುನಿ 1 ನಿನ್ನದೆಂಬಿ ಮರುಳು ಹಿಡಿದು ಅನ್ನಿಗರನು ಕಾಡಿ ತರಿದು ಕುನ್ನಿಮನುಜನಂತೆ ಬಾಳ್ದೆ ಘನ್ನನೆ ರಕ್ಷಿಸು ನಾ ಬೇಡ್ವೆ 2 ಕಾಲ ಕಳೆದೆ ಪರರ ಬೇಡಿ ಹೊಟ್ಟೆ ಪೊರೆದೆ ನರಸಿಂಹವಿಠ್ಠಲನರಿಯದೆ ಕರುಣಾನಿಧಿ ಬೇಡದೆ ಪೋದೆ 3
--------------
ನರಸಿಂಹವಿಠಲರು
ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆನುದೋಷ ರಾಶಿ ನಾಶ ಮಾಡು ಶ್ರೀಶ ಕೇಶವ ಪ ಶರಣು ಹೊಕ್ಕೆನಯ್ಯ ಎನ್ನ ಮರಣ ಸಮಯದಲ್ಲಿ ನಿನ್ನಚರಣ ಸ್ಮರಣೆ ಕರುಣಿಸಯ್ಯ ನಾರಾಯಣ1 ಕಲುಷ ಮಾಧವ 2 ಹಿಂದನೇಕ ಯೋನಿಗಳಲಿ ಬಂದು ಬಂದು ನೊಂದೆ ನಾನುಇಂದು ಭವದ ಬಂಧ ಬಿಡಿಸು ತಂದೆ ಗೋವಿಂದನೆ 3 ಭ್ರಷ್ಟನೆನಿಸ ಬೇಡ ಕೃಷ್ಣ ಇಷ್ಟು ಮಾತ್ರ ಬೇಡಿಕೊಂಬೆಶಿಷ್ಟರೊಳಗೆ ಇಟ್ಟು ಕಷ್ಟ ಬಿಡಿಸು ವಿಷ್ಣುವೆ 4 ಪಾದ ಪೂಜೆ ಮುದದಿ ಗೈವೆನಯ್ಯ ನಾನುಹೃದಯದೊಳಗೆ ಒದಗಿಸಯ್ಯ ಮಧುಸೂದನ 5 ಕವಿದುಕೊಂಡು ಇರುವ ಪಾಪ ಸವೆದು ಹೋಗುವಂತೆ ಮಾಡಿಜವನ ಬಾಧೆಯನ್ನು ಬಿಡಿಸೊ ಘನ ತ್ರಿವಿಕ್ರಮ 6 ಕಾಮಜನಕ ನಿನ್ನ ನಾಮ ಪ್ರೇಮದಿಂದ ಪಾಡುವಂಥನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ 7 ಸದನ ಮಾಡು ಮುದದಿ ಶ್ರೀಧರ 8 ಹುಸಿಯನಾಡಿ ಹೊಟ್ಟೆ ಹೊರೆವ ವಿಷಯದಲ್ಲಿ ರಸಿಕನೆಂದುಹುಸಿಗೆ ನನ್ನ ಹಾಕದಿರೋ ಹೃಷಿಕೇಶನೆ 9 ಅಬ್ಧಿಯೊಳಗೆ ಬಿದ್ದು ನಾನು ಒದ್ದುಕೊಂಬೆನಯ್ಯ ಭವದಿಗೆದ್ದು ಪೋಪ ಬುದ್ಧಿ ತೋರೊ ಪದ್ಮನಾಭನೆ10 ಕಾಮಕ್ರೋಧ ಬಿಡಿಸಿ ನಿನ್ನ ನಾಮ ಜಿಹ್ವೆಯೊಳಗೆ ನುಡಿಸುಶ್ರೀಮಹಾನುಭಾವನಾದ ದಾಮೋದರ 11 ಪಂಕಜಾಕ್ಷ ನೀನು ಎನ್ನ ಮಂಕುಬುದ್ಧಿ ಬಿಡಿಸಿ ನಿನ್ನಕಿಂಕರನ್ನ ಮಾಡಿಕೊಳ್ಳೊ ಸಂಕರುಷಣ12 ಏಸು ಜನ್ಮ ಬಂದರೇನು ದಾಸನಲ್ಲವೇನೊ ನಿನ್ನಘಾಸಿ ಮಾಡದಿರೋ ಎನ್ನ ವಾಸುದೇವನೆ 13 ಬುದ್ಧಿ ಶೂನ್ಯನಾಗಿ ನಾನು ಕದ್ದ ಕಳ್ಳನಾದೆನಯ್ಯತಿದ್ದಿ ಹೃದಯ ಶುದ್ಧಿ ಮಾಡೊ ಪ್ರದ್ಯುಮ್ನನೆ 14 ಜನನಿ ಜನಕ ನೀನೆ ಎಂದು ಎನುವೆನಯ್ಯ ದೀನಬಂಧುಎನಗೆ ಮುಕ್ತಿ ಪಾಲಿಸಿಂದು ಅನಿರುದ್ಧನೆ 15 ಹರುಷದಿಂದ ನಿನ್ನ ನಾಮ ಸ್ಮರಿಸುವಂತೆ ಮಾಡು ನೇಮಇರಿಸು ಚರಣದಲ್ಲಿ ಕ್ಷೇಮ ಪುರುಷೋತ್ತಮ 16 ಅಧೋಕ್ಷಜ 17 ಚಾರುಚರಣ ತೋರಿ ಎನಗೆ ಪಾರುಗಾಣಿಸಯ್ಯ ಕೊನೆಗೆಭಾರ ಹಾಕಿ ಇರುವೆ ನಿನಗೆ ನಾರಸಿಂಹನೆ 18 ಸಂಚಿತಾರ್ಥ ಪಾಪಗಳನು ಕಿಂಚಿತಾದರುಳಿಯದಂತೆಮುಂಚಿತಾಗಿ ಕಳೆದು ಪೊರೆಯೊ ಸ್ವಾಮಿ ಅಚ್ಯುತ19 ಜ್ಞಾನ ಭಕ್ತಿ ಕೊಟ್ಟು ನಿನ್ನ ಧ್ಯಾನದಲ್ಲಿ ಇಟ್ಟು ಎನ್ನಹೀನ ಬುದ್ಧಿ ಬಿಡಿಸೊ ಮುನ್ನ ಜನಾರ್ದನ 20 ಜಪತಪಾನುಷ್ಠಾನ ನೀನು ಒಪ್ಪುವಂತೆ ಮಾಡಲಿಲ್ಲತಪ್ಪ ಕೋಟಿ ಕ್ಷಮಿಸಬೇಕು ಉಪೇಂದ್ರನೆ 21 ಮೊರೆಯನಿಡುವೆನಯ್ಯ ನಿನಗೆ ಸೆರೆಯ ಬಿಡಿಸು ಭವದ ಎನಗೆಇರಿಸು ಭಕ್ತರೊಳಗೆ ಪರಮಪುರುಷ ಶ್ರೀಹರೇ22 ಪುಟ್ಟಿಸಲೇ ಬೇಡವಿನ್ನು ಪುಟ್ಟಿಸಿದಕೆ ಪಾಲಿಸಿನ್ನುಇಷ್ಟು ಬೇಡಿಕೊಂಬೆ ನಾನು ಶ್ರೀಕೃಷ್ಣನೆ23 ಸತ್ಯವಾದ ನಾಮಗಳನು ನಿತ್ಯದಲ್ಲಿ ಪಠಿಸುವವರಅರ್ತಿಯಿಂದ ಕಾಯದಿರನು ಕರ್ತೃ ಕೇಶವ 24 ಮರೆತು ಬಿಡದೆ ಹರಿಯ ನಾಮ ಬರೆದು ಓದಿ ಕೇಳುವರಿಗೆಕರೆದು ಮುಕ್ತಿ ಕೊಡುವ ಬಾಡದಾದಿಕೇಶವ 25
--------------
ಕನಕದಾಸ
ಕಮಲನಾಭ ನಿಮ್ಮ ಪಾದಕಮಲ ನಂಬಿ ಭಜಿಪೆ ಶ್ರೀ ಮಾಧವ ಪ ಪಕ್ಷಿಗಮನ ನಿಮ್ಮ ನಿರ್ಮಲಕ್ಷಯನಾಮ ಎನ್ನ ಜಿಹ್ವೆಗೆ ಲಕ್ಷ್ಯದಿತ್ತು ಪಿಡಿದು ಬಿಡದೆ ರಕ್ಷಿಸ್ಯಾದವ 1 ಮಂದಭಾಗ್ಯ ನಾನು ನಿಮ್ಮ ಬಂಧುರಂಘ್ರಿಕುಸುಮ ಮರೆ ಬಂದು ಬಿದ್ದೆ ದಯದಿ ಕಾಯೋ ಮಂದರೋದ್ಧಾರ 2 ಅರಿಯದೆ ನಾ ಮಾಡಿದಂಥ ಪರಮದುರಿತ ತರಿದು ತವ ಚರಣಸೇವೆ ನೀಡಿ ಪೊರೆಯೈ ಉರಗಶಯನ 3 ನಾನಾ ಬೇನೆಯೊಳಗೆ ಬಿದ್ದು ಹಾನಿಯಾಗಿ ಬಳಲುವಂಥ ಹೀನ ಬವಣೆ ತಪ್ಪಿಸಿನ್ನು ದಾನವಾಂತಕ 4 ಕ್ಷಣಕೆಕ್ಷಣಕೆ ಮಾನವರಿಗೆ ಮಣಿದು ಬೇಡಿ ಜೀವಿಸುವ ಬಿನಗುಕೃತಿ ಗೆಲಿಸು ದಯದಿ ದೀನಮಂದಾರ 5 ಜನಿಸಿದಂದಿನಿಂದ ನಾನು ಘನ ತಾಪತ್ರಯದಿ ನೊಂದೆ ಮನಕೆ ತಂದು ರಕ್ಷಿಸಿನ್ನು ಜನಕಜಾವರ 6 ಬುದ್ಧಿಯಿಲ್ಲದೆ ಕೆಟ್ಟೆನಭವ ಬಧ್ಧಜನರ ಸಂಗದಿ ಬಿದ್ದು ಶುದ್ಧಮತಿಯ ನೀಡಿ ಸಲಹು ಪದ್ಮನಾಭನೆ 7 ವಿಶ್ವ ವಿಶ್ವಾಕಾರ ನಿಮ್ಮ ವಿಶ್ವಾಸೆನಗೆ ಕೃಪೆಯ ಮಾಡಿ ನಶ್ವರೆನಿಪ ಮತಿಯ ಬಿಡಿಸು ವಿಶ್ವರಕ್ಷನೆ 8 ನೀನೆ ಗತಿಯು ಎನಗೆ ದೇವ ನಾನಾದೈವವರಿಯೆ ಸತ್ಯ ಜ್ಞಾನಪಾಲಿಸೊಳಿದು ಬೇಗ ಜ್ಞಾನಸಾಗರ 9 ಕೆಟ್ಟ ಹೊಟ್ಟೆ ಕಷ್ಟಕಡಿದು ದುಷ್ಟ ಭ್ರಷ್ಟ ಸಂಗ ತರಿದು ಶಿಷ್ಟ ಸಂಗ ದೊರಕಿಸೆನಗೆ ಸೃಷ್ಟಿಕರ್ತನೆ 10 ಸುಜನ ಸಹ ವಾಸದಿರಿಸನುಮೇಷ ಎನ್ನ ವಾಸುದೇವನೆ 11 ಹೀನ ಹೀನ ಜಗ ಅಭಿಮಾನ ತೊಲಗಿಸಧಿಕ ನಿಮ್ಮ ಧ್ಯಾನಾನಂದ ಕರುಣಿಸಯ್ಯ ಜನಾರ್ದನ12 ಭಾರವೆನಿಪ ವಿಷಮಸಂಸಾರ ಸುಲಭದಿಂದ ಗೆಲಿಸು ಘೋರ ಭವದ ತಾಪಹರ ನಾರಾಯಣ 13 ದೇಶದೇಶಂಗಳನು ತಿರುಗಿ ಅಸಂಬದ್ಧನಾದೆ ಸ್ವಾಮಿ ದೋಷ ಮನ್ನಿಸಯ್ಯ ಎನ್ನ ಈಶಕೇಶವ 14 ಸಂಚಿತಿಂದೀಗಳಿ( ಯಿ)ಸೆನ್ನ ಮುಂಚಿತಾಗಮ ಗೆಲಿಸು ಜೀಯ ಸಂಚಿತಾಗಮ ರಹಿತ ವಿರಂಚಿತಾತನೆ 15 ಚಾರುವೇದ ಪೊಗಳುವಂಥ ತೋರಿಸಯ್ಯ ನಿನ್ನ ಮೂರ್ತಿ ಮೂರು ಲೋಕ ಸಾರ್ವಭೌಮ ನಾರಸಿಂಹ 16 ಮದನನಯ್ಯ ಮುದದಿ ಬೇಡ್ವೆ ಸದಮಲ ಸಂಪದವ ನೀಡು ಸದಮಲಾಂಗ ಸರ್ವಾಧಾರ ಮಧುಸೂದನ 17 ಸಕಲ ವಿಘ್ನದೂರ ಮಾಡಿ ಮುಕುತಿಪಥಕೆ ಹಚ್ಚು ತ್ವರಿತ ಭಕುತರಿಷ್ಟ ಪೂರ್ಣ ಆದಿಲಕುಮಿನಾಯಕ 18 ದರ್ಜುಮಾಡಿಸೆನ್ನ ನಿಮ್ಮ ಮರ್ಜಿಪಡೆದ ಭಕ್ತರೊಳಗೆ ದುರ್ಜನಾಗಿ ದಯಾರ್ಣವ ನಿರ್ಜರೇಶನೆ 19 ಪೋಷಿಸೆನ್ನನುಮೇಷ ನಿಮ್ಮ ದಾಸನೆನಿಸಿ ವಸುಧೆಯೊಳು ಆಸೆಯಿಂದ ಬೇಡಿಕೊಂಬೆ ಕ್ಲೇಶನಾಶನೆ 20 ನಿರುತ ಮನದಿ ಹರಿಯ ನಾಮ ಬರೆದು ಓದಿ ಕೇಳುವರಿಗೆ ಪರಮ ಮುಕ್ತಿ ಕೊಡುವ ಮಮ ವರದ ಶ್ರೀರಾಮ 21
--------------
ರಾಮದಾಸರು
ತತ್ತ ಪ್ರತಿಪಾದನೆ ದೂಡಿಸುವ ಸಂಸಾರ ದೇವ ರೂಢಿಯೊಳು ಭÀಕ್ತರೊಡನಾಡಿ ರಂಗ ಪ. ಭವ ನಾವಿಕನಾಗಿ ಗಾಢನೆ ನಡೆಸುತ ಜೋಡು ಕುಂಡಲಧರ ಅ.ಪ. ಭಕ್ತಿರಸವೆಂಬ ತೊಗಲನ್ನು ಹೂಡಿ ಯುಕ್ತಿಲಿ ಮಣ್ಣಿನ ಬೊಂಬೆಯೊಳಗಾಡಿ ಪರ ಶಕ್ತಿಯೆಂಬ ಹೊಲಿಗೆಯನ್ನು ಕೂಡಿ ಭಕ್ತಿಲಿ ಸ್ತುತಿಸುವ ಭಕ್ತರೊಳಾಡಿ 1 ಗುರುಹಿರಿಯರ ಸೇವೆಯೆಂಬ ಮನಕೊಟ್ಟು ಸರಸದಿ ಮನೆಗೆಲಸವ ಗುಟ್ಟಿಲಿಟ್ಟು ಸರಸಿಜನಾಭನÀ ಮನಸಿನೊಳಿಟ್ಟು ಹರುಷದಿ ಸ್ತುತಿಪರ ಸಲಹುವನೆಂಬೊ ಬಿರುದಿಟ್ಟು2 ಕರುಣಾಮಯನೆಂಬೊ ಪೆಸರನು ಇಟ್ಟು ಹರುಷದಿ ಕೂಗುವ ಭಕ್ತರೊಳಗೆ ತಾ ಗುಟ್ಟು ಕರುಣಾಸಾಗರ ವರ ಶೇಷಾಚಲವಾಸ ಭವ ಸಂಸಾರವ 3
--------------
ಸರಸ್ವತಿ ಬಾಯಿ
ಭವ ಕಾಮಹರ ನಿನ್ನಂಘ್ರಿ ತಾಮರಸಯುಗಳ ಭಜಿಸುವೆ | ಭಜಿಸಿ ಬಿನ್ನೈಸುವೆ ಶ್ರೀ ಮನೋಹರನ ತೋರಯ್ಯ 1 ಕೃತ್ತಿವಾಸನೆ ಎನ್ನ ಚಿತ್ತದಲಿ ಹರಿಯಪದ ನಿತ್ಯದಲಿ ಭಜಿಪ ಮತಿ ನೀಡೊ | ಮತಿ ನೀಡೊ ಪಾರ್ವತಿ ಚಿತ್ತದೊಲ್ಲಭನೆ ನಮಿಸುವೆ 2 ಸುವರ್ಣಮುಖರಿಯ ತೀರದಲಿ ನೆಲಸಿರುವೆ ಶ್ರೀ ವರಾಹನಂಘ್ರಿ ಭಜಿಸುತ್ತ | ಭಜಿಸುತ್ತ ನೆಲಸಿರುವ ಪಾವನರೂಪ ಸಲಹಯ್ಯ 3 ಕಾಳಸ್ತಿನಿಲಯನೆ ಪೇಳಲಿನ್ನೇನು ನಾ ತಾಳಲಾರೆನು ಈ ಭವಬಂಧ | ಭವಬಂಧ ಬಿಡಿಸುವ ವ್ಯಾಳ ಶಯನನ್ನ ತೋರೈಯ್ಯ 4 ಭಕ್ತರಿಗೊಲಿದು ಅಪಮೃತ್ಯು ಪರಿಹರಿಸಿದೆ ಸತ್ಯ ಸಂಕಲ್ಪ ನಿನ್ನಂಘ್ರಿ | ನಿನ್ನಂಘ್ರಿ ಕಮಲಗಳ ಚಿತ್ತದಲಿ ತೋರಿ ಸಂತೈಸು 5 ಮನಕೆ ಗುರು ನೀನಹುದು ಮನವ ಹರಿಯಲಿ ನೆಲಸೊ ವೈರಿ ಮಮತೆಯಿಂ | ಮಮತೆಯಿಂದಲಿ ನಿತ್ಯ ಮನಶುದ್ಧಿಗೈದು ಕಾಯಯ್ಯ 6 ಶಂಖಚಕ್ರವ ಪಿಡಿದ ಸಂಕರ್ಷಣನ ರೂಪ ನಿತ್ಯ ಭಜಿಸುವೆ | ಭಜಿಸುವೆ ಕೈಲಾಸ ಅಂಕದಲಿ ನೆಲಸಿ ಹರುಷದಿ 7 ನರಸಿಂಹ ರೂಪವನು ಸ್ಮರಿಸುತ್ತ ಮೈಮರೆವೆ ಉರುತರ ಭಾವ ಭಕ್ತಿಯಲಿ | ಭಕ್ತಿಯಲಿ ಭಜಿಪ ನಿನ್ನ ಸ್ಮರಿಸುವರ ಭಯವ ಹರಿಸುವೆ 8 ಶ್ರೀ ರಾಮನಾಮವನು ಪ್ರೇಮದಿಂದುಮೆಗರುಹಿ ಆರಾರು ಅರಿಯದಾನಂದ | ಆನಂದವಿತ್ತೆ ಭವ ತಾರಕವೆಂದು ಕರುಣಾಳೂ 9 ಅಜನ ಭ್ರೂಮಧ್ಯದಲಿ ಜನಿಸಿದೆಯೊ ಜಗದಲ್ಲಿ ಭಂಜನ | ಭಂಜನಗೊಳಿಸಿದೆ ತ್ರಿಜಗದಲಿ ನಿನಗೆ ಸರಿಯುಂಟೆ 10 ಶೇಷ ಪರ್ಯಂಕನಿಗೆ ಹಾಸಿಗೆಯಾಗಲು ತೋಷದಲಿ ತಪವಾಚರಿಸಿದೆ | ಚರಿಸಿ ಸಾಧಿಸಿದೆ ನೀ ಶೇಷ ಪದವಿಯನು ತ್ರಿನೇತ್ರ 11 ಶರಧಿ ಮಥಿಸಲು ಗರಳ ಉದ್ಭವಿಸಿ ಭಯವಾಗೆ | ಭಯವಾಗಿ ಪರಿಹರಿಸಿ ಗರಳವನೆ ಕುಡಿದೆ ಶ್ರೀ ಕಂಠ 12 ಅಸುರರ ವಂಚಿಸಿದ ವಶವಲ್ಲದ ಹೆಣ್ಣು ವಶವಾಗಲೆಂದು ಹಾರೈಸಿ | ಹಾರೈಸಿ ಬಳಲುತಿರೆ ಬಿಸಜಾಕ್ಷ ನಿನ್ನ ಸಲಹಿದ 13 ತಾರಕಾಸುರನಿಂದ ಘೋರಪಡುತಿರೆ ಜಗವು ಮಾರ ಪೂಅಸ್ತ್ರ ಎಸೆಯಲು | ಎಸೆಯಲು ದಹಿಸಿ ಕು- ಮಾರನನು ಪಡೆದೆ ಗಿರಿಜೇಶ 14 ಸ್ತುತಿಪ್ರಿಯ ನಿನ್ನ ನಾ ಸ್ತುತಿಸಲಾಪೆನೆ ಮಂದ ಮತಿ ಎಂದು ನೀನೆ ಸಂತೈಸೊ | ಸಂತೈಸಬೇಕಿನ್ನು ಮತಿಯಿತ್ತು ಹರಿಯ ಪದದಲ್ಲಿ 15 ಶಿರದಲ್ಲಿ ಗಂಗೆ ಚಂದ್ರನ ಮೆರೆಯುವ ಉರಗ ಭೂಷಣನೆ ಕೇಳಿನ್ನು | ಕೇಳಿನ್ನು ಎನ್ನ ಮನ ಮರೆಯದೆ ಹರಿಯ ನೆನೆಯಲಿ 16 ವಿಷ್ಣು ಭಕ್ತರೊಳಗೆ ಶ್ರೇಷ್ಠ ನೀನಹುದಯ್ಯ ಜಿಷ್ಣುವಿಗೆ ಮೆಚ್ಚಿ ಧನುವಿತ್ತೆ | ಧನುವಿತ್ತೆ ಗೋಪಾಲ- ಕೃಷ್ಣವಿಠ್ಠಲನ ತೋರಯ್ಯ 17
--------------
ಅಂಬಾಬಾಯಿ