ಒಟ್ಟು 27 ಕಡೆಗಳಲ್ಲಿ , 11 ದಾಸರು , 27 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

279ಹನುಮ ಭೀಮಾನಂದ ಮುನಿರಾಯ ಎನ್ನದು ಸಲಹೆಂದು ಬಿನ್ನೈಪೆವಿ ಜ್ಞಾನ ರೂಪ ವಿಜಿತಾತ್ಮ 1 280ತ್ರಿದಶವಿಂಶತಿ ರೂಪ ಸುದತಿಯಿಂದೊಡಗೊಡಿ ಪದುಮಜಾಂಡದೊಳು ಸರ್ವತ್ರ | ಸರ್ವತ್ರ ಭಕುತರಾ ಬದಿಗನಾಗಿದ್ದು ಸಲಹುವಿ 2 281ಕೋಟಿತ್ರಯ ಸ್ವರೂಪಿ ದಾಟಿಸು ಭವಾಬ್ಧಿಯ ನಿ ಭಯಹಾರಿ ರಣದೊಳು ಕಿ ರೀಟಿಯ ಕಾಯ್ದಿ ಧ್ವಜನಾಗಿ 3 282ಪ್ರಾಣನಾಯಕ ನಿನ್ನ ಕಾಣ ಬೇಕೆಂದೆನುತ ಸಾನುರಾಗದಲಿ ನಮಿಸುವೆ | ನಮಿಸುವೆನು ಮೂಜಗ ಪರಮೇಷ್ಟಿ 4 283ಚತುರವಿಂಶತಿ ತತ್ವ ಪತಿಗಳೊಳಗೆ ಗರುವ ನತಿಸುವೆನು ನಿನ್ನ ಚರಣಕ್ಕೆ | ಚರಣಕಮಲವ ತೋರಿ ಕೃತ ಕೃತ್ಯನೆನಿಸೊ ಕೃಪೆಯಿಂದ 5 284ಮೂರೇಳು ಸಾವಿರದ ಆರ್ನೂರು ಮಂತ್ರವ ಈರೇಳು ಜಗದಿ ಜನರೊಳು | ಜನರೊಳು ಮಾಡಿ ಉ ದ್ಧಾರ ಗೈಸುವಿಯೊ ಸುಜನರ 6 285ಪವಮಾನರಾಯ ನೀ ತ್ರಿವಿಧ ಜೀವರೊಳಿದ್ದು ವಿವಿಧ ವ್ಯಾಪಾರ ನೀ ಮಾಡಿ | ನೀ ಮಾಡಿ ಮಾಡಿಸಿ ಅವರವರ ಗತಿಯ ಕೊಡುತಿಪ್ಪ 7 286 ಮಿಶ್ರ ಜೀವ ರೊಳಿದ್ದು ಮಿಶ್ರಜ್ಞಾನವನಿತ್ತು ಮಿಶ್ರ ಸಾಧನವ ನೀ ಮಾಡಿ | ನೀ ಮಾಡಿ ಮಾಡಿಸಿ ಮಿಶ್ರಗತಿಗಳನೆ ಕೊಡುತಿಪ್ಪೆ 8 287ಅನಿಲದೇವನೆ ದೈತ್ಯದನುಜ ರಾಕ್ಷ ಸರೊಳಿದ್ದು ಅನುಚಿತ ಕುಕರ್ಮ ನೀ ಮಾಡಿ | ನೀ ಮಾಡಿ ಮೋಹಿಸಿ ದಣಿಸುವಿಯೊ ಅವರ ದಿವಿಜೇಶ 9 288ಕಾಲನಿಯಮಕನೆ ಕಾಲತ್ರಯಾದಿಗಳಲ್ಲಿ ಕಾಲ ಕರ್ಮ ಅನುಸಾರ | ಅನುಸಾರವಿತ್ತು ಪಾಲಿಸುವಿ ಜಗವ ಪವಮಾನ10 289ಆಖಣಾಶ್ಮನೆ ನಿನ್ನ ಸೋಕಲರಿಯವು ದೋಷ ಶ್ರೀಕಂಠ ಮುಖ್ಯ ಸುರರಿಗೆ | ಸುರರಿಗಿಲ್ಲವು ಭಾರ ತೀಕಾಂತ ನಿನಗೆ ಬಹದೆಂತೊ 11 290 ಕಲ್ಯಾದಿ ದೈತ್ಯಕುಲದಲ್ಲಣ ದಯಾಸಾಂದ್ರ ಬಲ್ಲಿದನು ಜಗಕೆ ಭಯದೂರ | ಭಯದೂರ ಭಕ್ತರ ನೆಲ್ಲ ಕಾಲದಲ್ಲಿ ಸಲಹಯ್ಯ 12 291ಕಾರುಣ್ಯನಿಧಿ ಜಗದ ಉದ್ಧಾರಕನು ನೀನೆ ಉ ದ್ಧಾರ ಮಾಡದಿರೆ ಭಕುತರ | ಭಕುತರನು ಕಾವ ರಿನ್ನಾರು ಲೋಕದಲಿ ಜಯವಂತ 13 292ತ್ರಿಜಗದ್ಗುರುವರೇಣ್ಯ ಋಜುಗಣಾಧಿಪ ಪಾದಾಂ ಬುಜ ಯುಗ್ಮಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಮನ್ಮನದಿ ನಿಜರೂಪ ತೋರಿ ಸಂತೈಸೊ 14 293ಅನಿಲದೇವನೆ ನಿನ್ನ ಜನುಮ ಜನುಮಗಳಲ್ಲಿ ಎಂದೆಂದು ವಿಷಯ ಚಿಂ ತನೆಯ ಕೊಡದೆನ್ನ ಸಲಹೆಂದು 15 294ತಾರತಮ್ಯ ಜ್ಞಾನ ವೈರಾಗ್ಯಭಕ್ತಿ ಧಾರಡ್ಯವಾಗಿ ಇರಲೆಂದು | ಇರಲೆಂದು ಬಿನ್ನೈಪೆ ಭಾರತೀರಮಣ ನಿನಗಾನು 16 295 ಮರಣ ಜನನಗಳು ಬಂದರೆ ಬರಲಿ ಪ್ರದ್ವೇಷ ಗುರು ಹಿರಿಯರಲ್ಲಿ ಹರಿಯಲ್ಲಿ | ಹರಿಯಲ್ಲಿ ಕೊಡದೆ ಉ ದ್ಧರಿಸಬೇಕೆನ್ನ ಪರಮಾಪ್ತ 17 296ವಿಷಯದಾಸೆಗಳ ಬಿಡಿಸಿ ಅಸುನಾಥ ಎನ್ನ ಪಾ ಲಿಸಬೇಕು ಮನವ ನಿನ್ನಲ್ಲಿ | ನಿನ್ನಲ್ಲಿ ನಿಲಿಸಿ ಸಂ ತಸದಿ ಕಾಯೆನ್ನ ಮರುದೀಶ 18 297 ವಾಯು ಹನುಮದ್ಭೀಮರಾಯ ಮಧ್ವರ ಸ್ತೋತ್ರ ಬಾಯೊಳುಳ್ಳವಗೆ ಜನ್ಮಾದಿ | ಜನ್ಮಾದಿ ರೋಗಭಯ ವೀಯನೆಂದೆಂದು ಭಗವಂತ 19 298ಮಾತರಿಶ್ವನೆ ಎನ್ನ ಮಾತುಗಳ ಲಾಲಿಸಿ ಜಗ ನ್ನಾಥ ವಿಠಲನ್ನ ಮನದಲ್ಲಿ | ಮನದಲ್ಲಿ ತೋರಿ ಭವ ಭೀತಿಯನು ಬಿಡಿಸೊ ಭವ್ಯಾತ್ಮ 20 299 ನಮ್ಮ ಗುರುಗಳ ಪಾದ ಒಮ್ಮೆ ನೆನೆಯಲು ಆ ಜನ್ಮ ಕೃತ ಪಾಪ ಪರಿಹಾರ | ಪರಿಹಾರವಾಗಿ ಸ ದ್ಬೊಮ್ಮಪದವಿಯಲಿ ಸುಖಿಸುವಿ 21 300ಮೂರೇಳು ಸಾವಿರದ ಆರುನೂರು ಹಂಸ ಮೂರು ಮಂತ್ರಗಳ ಜನರೊಳು | ಜನರೊಳು ಮಾಡ್ವ ಸ ಮೀರನ ಅಡಿಗೆ ಶರಣೆಂಬೆ 22 301ಅಂಜಿದವರಿಗೆ ವಜ್ರಪಂಜರನೆನಿಪ ಪ್ರ ಭಂಜನ ಪ್ರಭುವೆ ಪ್ರತಿದಿನ | ಪ್ರತಿದಿನ ನಮ್ಮ ಭಯ ಭಂಜಿಸಿ ಕಾಯೊ ಬಹುರೂಪ 23 302ಭವಿಷ್ಯದ್ವಿಧಾತನೆ ತವ ಚರಣ ಸೇವಿಪೆನು ಶ್ರವಣ ಮನನಾದಿ ಭಕುತಿಯ | ಭಕುತಿ ನಿನ್ನಲ್ಲಿ ಮಾ ಧವನಲ್ಲಿ ಕೊಟ್ಟು ಸಲಹಯ್ಯ24 303ಕಲಿಮುಖ್ಯ ದೈತ್ಯರುಪಟಳವ ಪರಿಹರಿಸಿ ಮ ಸಿಂಧು ನಿ ನ್ನೊಲುಮೆಯೊಂದಿ ಹರಿಕಾಯ್ವ 25 304 ಭಾರತೀ ರಮಣ ಮದ್ಭಾರ ನಿನ್ನದು ಎನ್ನ ಪಾರ ದೋಷಗಳ ಎಣಿಸದೆ | ಎಣಿಸದೆ ಸಂತೈಸೊ ಸಿಂಧು ಎಂದೆಂದು 26 305ಶ್ರೀಶಸದ್ಮನೆ ಜೀವರಾಶಿಯೊಳಗೊಂದಧಿಕ ವಿಂಶತಿ ಸಹಸ್ರದಾರ್ನೂರು | ಆರ್ನೂರು ಹಗಲಿರುಳು ಶ್ವಾಸ ಜಪಮಾಡಿ ಹರಿಗೀವಿ 27 306ತಾಸಿಗೊಂಭೈ ನೂರು ಶ್ವಾಸಜಪಗಳ ಮಾಡಿ ಬೇಸರದೆ ನಮ್ಮ ಸಲಹುವಿ | ಸಲಹುವಿ ಶ್ರೀ ಭಾರ ತೀಶ ನಿನ್ನಡಿಗೆ ಶರಣೆಂಬೆ 28 307ಬಲದೇವ ನೀನೆ ಬೆಂಬಲವಾಗಿ ಇರಲು ದು ರ್ಬಲ ಕಾಲಕರ್ಮ ಕೆಡಿಸೋದೆ | ಕೆಡಿಸೋದೆ ನಿನ್ನ ಹಂ ಬಲು ಉಳ್ಳ ಜನರ ಜಗದೊಳು 29 308ಹಾಲಾಹಲವನುಂಡು ಪಾಲಿಸಿದೆ ಜಗವ ಕರು ಣಾಳು ಪವಮಾನ ವಿಜ್ಞಾನ | ವಿಜ್ಞಾನ ಭಕುತಿ ಶ್ರೀ ಲೋಲನಲಿ ಕೊಟ್ಟು ಸಲಹಯ್ಯ 30 309ವಾತಾತ್ಮಜನೆ ನಿನ್ನ ಪ್ರೀತಿಯನೆ ಪಡೆದ ಖ ಪೊರೆದಂತೆ ಪೊರೆಯೆನ್ನ ನೀನಿಂತು ಕ್ಷಣದಿ ಕೃಪೆಯಿಂದ 31 310ಅಪರಾಜಿತನೆ ಮನದೊಳಪರೋಕ್ಷವಿತ್ತೆನಗೆ ಸುಖವೀಯೊ ಭಾವಿ ಲೋ ಕಪಿತಾಮಹನೆ ಎನಗೆ ದಯವಾಗೊ 32 311 ಬುದ್ಧಿ ಬಲ ಕೀರ್ತಿ ಪರಿಶುದ್ದ ಭಕ್ತಿಜ್ಞಾನ ಸದ್ಧೈರ್ಯಾಜಾಡ್ಯ ಆಯುಷ್ಯ | ಆಯುಷ್ಯ ವಿತ್ತಭಿ
--------------
ಜಗನ್ನಾಥದಾಸರು
435(ಅ) ನಮೋ ಯತಿಕುಲಶಿಖಾಮಣಿಯೆ ಸುಗುಣನಿಧಿಯೆ ಮತಿಮತಾಂವರ ಮಾನಿನೇ ಪ. ಭುವನೇಂದ್ರತೀರ್ಥ ಯತಿಪ್ರವರಕರಸಂಜಾತ ಸುವಿವೇಕಿ ವರದೇಂದ್ರಕರಸಂಭವಾಯ ಗೀರ್ವಾಣ ತ- ರವ ಸುಕೃತೇಂದ್ರ ಸದ್ಗುರುವೆ ನಮೋಸ್ತುತೇ 1 ಕಾಶೀಮಠಾದಿಪತಿಯೇ ಸುಸನ್ಯಾಸಿ ಯೇ ಸ(ತ್ತ್ವ) ಗುಣಭೂಷಾಯ ತೇ ವ್ಯಾಸ ರಘುಪತಿಚರಣದಾಸವತ್ಪೂಜಕ ವಿ- ಶೇಷ ಭಕ್ತಿಜ್ಞಾನಶಾಲಿನೇ ತುಭ್ಯಂ 2 ಆಜಾನುಬಾಹುವೇ ಗೌಡಸಾರಸ್ವತ ಮ- ಹಾಜನಸಮಾಜಮಂಡಲವಾಸಿನೇ ರಾಜೀವನಯನಾಯ ನಮಿತಜನನಿಕರ ಸುರ ಭೂರಿ ರವಿತೇಜಸ್ವಿನೇ 3 ತುಷ್ಟಾಯ ಭಾಗವತನಿಷ್ಟಾಯ ದ್ವಿಜಕುಲವ ರಿಷ್ಠಾಯ ಷಡ್ವರ್ಗಜಿಷ್ಣವೇ ತುಭ್ಯಂ ದುಷ್ಟ ಜನ ದೂರಾಯ ಧೀರಾಯ ಭಕ್ತದ- ತ್ತೇಷ್ಟಾಯ ಮಹತೇ ಸಹಿಷ್ಣವೇ ಮಹತೇ 4 ಬ್ರಹ್ಮಚರ್ಯಾದಿ ವ್ರತಧರ್ಮಾತ್ಮನೇ ವಿಹಿತ ಕರ್ಮಣೇ ಸುಕೃತೇಂದ್ರ ಶರ್ಮಣೇ ತುಭ್ಯಂ ಬ್ರಹ್ಮಪಿತ ಲಕ್ಷ್ಮೀನಾರಾಯಣಾಂಘ್ರಿಧೃತಿ ಸು- ನಿರ್ಮಲಾಂತಃಕರಣ ಕರುಣನೀರಧಯೇ5
--------------
ತುಪಾಕಿ ವೆಂಕಟರಮಣಾಚಾರ್ಯ
ಕಾರ್ತಿಕೇಯ ಮಹಾಸೇನ ನಿಜ ಭೃತ್ಯರೊಳಾಗು ಪ್ರಸನ್ನ ಪ. ಚಿತ್ತಸಾಕ್ಷಿ ಹರಿಭಕ್ತಿಜ್ಞಾನಮ- ನಿತ್ತು ಕಾಯೊ ಷಡ್ವದನ ಅ.ಪ. ತಂದೆ ತಾಯಿ ಕುಲಸ್ವಾಮಿ ಹರಿ- ಯೆಂದು ಭಜಿಸುವೆನು ಪ್ರೇಮಿ ಸ್ಕಂದನಾಮಕ ನೀನಂತರ್ಯಾಮಿ ಸುಂದರ ಮಯೂರಗಾಮಿ 1 ಪಾರ್ವತಿ ಶಿವಸಂಜಾತ ಪರಿ- ಪಾಲಿತ ಸುಜನವ್ರಾತ ಸರ್ವಗೀರ್ವಾಣ ಸೇನಾಧ್ಯಕ್ಷ ಸರ್ವೋತ್ತಮ ಹರಿಪಕ್ಷ2 ತಾರಕದ್ಯೆತ್ಯಸಂಹಾರ ಸುವಿ- ಚಾರೈಕಪರಾಧಾರ ಪ್ರಾರಂಭಗೈದ ಕಾರ್ಯ ಸಫಲಿಪುದು ಭಾರ ನಿನ್ನದು ರಣಧೀರ 3 ಪಾವಂಜಪುರನಿವಾಸ ನಃ ಪಾತು ಶಿವಗಣಾಧೀಶ ದೇವ ಲಕ್ಷ್ಮೀನಾರಾಯಣದಾಸ ಪಾವನಚರಿತ ವಿಲಾಸ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ತಿಕೇಯ ಮಹಾಸೇನ ನಿಜ ಭೃತ್ಯರೊಳಾಗು ಪ್ರಸನ್ನಪ. ಚಿತ್ತಸಾಕ್ಷಿ ಹರಿಭಕ್ತಿಜ್ಞಾನಮ- ನಿತ್ತು ಕಾಯೊ ಷಡ್ವದನಅ.ಪ. ತಂದೆ ತಾಯಿ ಕುಲಸ್ವಾಮಿ ಹರಿ- ಯೆಂದು ಭಜಿಸುವೆನು ಪ್ರೇಮಿ ಸ್ಕಂದನಾಮಕ ನೀನಂತರ್ಯಾಮಿ ಸುಂದರ ಮಯೂರಗಾಮಿ 1 ಪಾರ್ವತಿ ಶಿವಸಂಜಾತ ಪರಿ- ಪಾಲಿತ ಸುಜನವ್ರಾತ ಸರ್ವಗೀರ್ವಾಣ ಸೇನಾಧ್ಯಕ್ಷ ಸರ್ವೋತ್ತಮ ಹರಿಪಕ್ಷ 2 ತಾರಕದ್ಯೆತ್ಯಸಂಹಾರ ಸುವಿ- ಚಾರೈಕಪರಾಧಾರ ಪ್ರಾರಂಭಗೈದ ಕಾರ್ಯ ಸಫಲಿಪುದು ಭಾರ ನಿನ್ನದು ರಣಧೀರ 3 ಪಾವಂಜಪುರನಿವಾಸ ನಃ ಪಾತು ಶಿವಗಣಾಧೀಶ ದೇವ ಲಕ್ಷ್ಮೀನಾರಾಯಣದಾಸ ಪಾವನಚರಿತ ವಿಲಾಸ 4
--------------
ತುಪಾಕಿ ವೆಂಕಟರಮಣಾಚಾರ್ಯ
ಕೊಡು ನಿನ್ನ ಧ್ಯಾನ ಒಡೆಯ ಶ್ರೀರಮಣ ಎಡಬಿಡದಲೆ ತವಅಡಿಭಕ್ತಿಜ್ಞಾನ ಪ ವನವಸೇರಿರಲಿ ಮತ್ತನುಗಾಲ ಬಡತನ ವನುಭವಿಸುತಿರಲಿ ಘನಸುಖದಿರಲಿ 1 ಸತಿಯಳೊಂದಿಗೆ ಬಿಡದೆ ರತಿಕ್ರೀಡೆಲಿರಲಿ ಸತತದಿ ತವಭಕ್ತಿ ಹಿತಾಹಿತದ ಚಿಂತನೆಯನು 2 ಚಳಿ ಮಳೆಯೊಳು ಬಿದ್ದು ಕಳವಳಗೊಳ್ಳುತಿರಲಿ ಹುಲಿಯ ಬಾಯೊಳು ಸಿಲ್ಕಿ ಹಲುಬಿ ಎದೆಯೊಡೆದು 3 ಕೊಟ್ಟ ಒಡೆಯರು ಬಂದು ಕಟ್ಟಿ ಕಾದಲಿ ಜನ ಬೆಟ್ಟ ಬೇಸರಮಾಡಿ ಅಟ್ಟಬಡಿಯುತಿರಲಿ 4 ಬೇನೆಯೊಳ್ ಬಿದ್ದಿರಲಿ ಹಾನಿಯಾಗಲಿ ಮಾನ ಕಾಣದೆ ಸುಳ್ಳನೆಂದು ಹೀನನುಡಿಯಲಿ ಬಿಡದೆ 5 ಹಗೆಗಳು ಬಂದೆನ್ನ ಬಗೆ ಬಗೆ ನಿಂದಿಸಿ ನಗೆಗೇಡು ಮಾಡೆನ್ನ ಜಗದೆಳಡಾಡುತಿರಲಿ 6 ಅವ ಪರಿಯಲಿರಲಿ ದೇವ ಶ್ರೀರಾಮ ನಿನ್ನ ಸಾವಿರನಾಮ ಎನ್ನ ಭಾವದಿ ನುಡೀತಿರಲಿ 7
--------------
ರಾಮದಾಸರು
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ಜಯಜನನೀ ಶಾರದೆ ಜನನಮೃತಿಭಯಭಿದೆ ಪ. ನಯವಿದೆ ತ್ರಿಜಗನ್ಮಯೆ ವೀಣಾವಿನೋದೆ ಅ.ಪ. ಭಕ್ತಿಜ್ಞಾನ ಮಾನದೆ ಭಗವತ್ಪ್ರಾಪ್ತ ಪ್ರಸಾದೆ ಮುಕ್ತಿಶಕ್ತಿಪ್ರದೆ ನಿಜ ಭೃತ್ಯವತ್ಸಲೆ ಪ್ರಬುದ್ಧೆ 1 ವೇದಾರ್ಥತತ್ವಪ್ರಬೋಧೆ ಆದಿತೇಯಾನತಪದೆ ಶ್ರೀಧರೆ ಸದಾನಂದೆ ಸಾಧು ಸೌಭಾಗ್ಯನಿಧೆ 2 ಅನಘ ಲಕ್ಷುಮಿನಾರಾಯಣನ ಭಕ್ತ ಪ್ರಹ್ಲಾದ ಸನಕನುತೆ ಸನ್ನುತೆ ಘನಪಾಪಾಪಹ್ನುತೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಾನಾನಂತಪರಾಧಿ ಎನ- ಗೇನಿಲ್ಲವು ದೃಢಬುದ್ಧಿಪ. ನೀನೇ ಗತಿ ನಿನ್ಹೊರತು ಕಾವರನು ಕಾಣೆನು ಕರುಣಾಂಬೋಧಿಅ.ಪ. ಹಂದಿಯಂತೆ ತಿಂದು ಬೆಳದೆ ಎನ್ನ ಮುಂದಣ ಗತಿಯನು ಮರೆತೆ ಹಿಂದಿಲ್ಲವು ಮುಂದಿಲ್ಲವು ಲೋಕದಿ ನಿಂದ್ಯಾಪಾತ್ರ ತಾನಾದೆ1 ಮುತ್ತಿತು ಯೆನಗಜ್ಞಾನ ಎನ್ನ ಚಿತ್ತದಿ ಕೊಡು ನಿನ್ನ ಧ್ಯಾನ ನಿತ್ಯ ತವಚರಣ ಭಕ್ತಿಜ್ಞಾನವ ನಿತ್ತು ಕಾಯೊ ಸುತ್ರಾಣ2 ಗತಿಯಾರಿಲ್ಲನ್ಯತ್ರ ಶ್ರೀ- ಪತಿಯೆ ಕಾಯೊ ಸುಚರಿತ್ರ ಕ್ರತುಪಾಲ ಲಕ್ಷ್ಮೀನಾರಾಯಣ ಭಾ- ರತಿಪತಿನುತ ಸುರಮಿತ್ರ3
--------------
ತುಪಾಕಿ ವೆಂಕಟರಮಣಾಚಾರ್ಯ
ಪೋದರಯ್ಯ ತೆರಳಿ ಪೋದರು | ಸಾಧುನರಸಿಂಹಾರ್ಯರು ಮಾಧವನ ಮಂದಿರಕೆ ಪ ಶ್ರೀಕರ ಕೃಷ್ಣಾತಟದಿ ಐಕೂರು ಗ್ರಾಮದಿ ನೆಲೆಸಿ | ಏಕೋ ಭಾವದಿಂ ಸದಾ ಶ್ರೀಕಾಂತನ್ನ ಧ್ಯಾನಂಗತರು 1 ಭಾಗವತ ಸಾರೋದ್ಧಾರ ಸತ್‍ಶಿಷ್ಯರಿಗೆ ಸಾರುತ ಸದ್ಭಕ್ತಿಜ್ಞಾನ | ವೈರಾಗ್ಯಮಾರ್ಗವ ತೋರಿ 2 ಮಧ್ವಮತದಿ ಸಿದ್ಧಾಂತ ಪದ್ಧತಿಯನುಸರಿಸಿ | ಸದ್ಧರ್ಮದಿ ನಡೆಸುವ ಪ್ರಸಿದ್ಧ ವಿದ್ವಾಂಸರು 3 ವ್ಯಾಸದಾಸಕೂಟ ಮರ್ಮಲೇಸಾಗಿ ಸಜ್ಜನ ತತಿಗೆ ಬ್ಯಾಸರಿಲ್ಲದಲೆ ಪ್ರತಿವಾಸರುಪದೇಶಿಸುವರು 4 ನಿತ್ಯಗೈವ ಕೃತ್ಯಂಗಳು | ತತ್ವೇಶ್ವರ ದ್ವಾರಾ ಹರಿಗೆ ಚಿತ್ತಪೂರ್ವಕರ್ಪಿಸುವ ಸೋತ್ತುಮರೋತ್ತುಮರು ಲೋಕಕೆ 5 ಅಂತರಂಗದಲ್ಲಿ ಲಯದ ಚಿಂತನೆಯಗೈದು ಮುಕ್ತಿ ಪಂಥವನ್ನೆ ಪಿಡಿದು | ಜ್ಞಾನ ಸಂತತಿಯ ಜಗದಿ ನೆಲೆಸಿ 6 ಯಾವ ಸಂಶಯವ್ಯಾಕೆ ಕೋವಿದವರ್ಯರಾದ | ಭಾವಜ್ಷರ ಮುಖದಿಂದ ದೇವಾಂಶರೆನಿಸಿಕೊಂಡವರು 7 ವ್ಯಯ ಸಂವತ್ಸರಂತ್ಯಮಾಸ | ದ್ವಯತಿಥಿ ಸಿತವರ್ಷ ಹಯಸಪ್ರಸುತನ ವಾರದಿ ತ್ರಯ ಝಾವ ರಜನಿಯಲ್ಲಿ 8 ಆಸನಸ್ಥರರಾಗಿ ನಾಸಿಕಾಗ್ರದಲಿಟ್ಟು ಶ್ವಾಸಮಂತ್ರ ಜ ಪಿಸಿ ಬಿಂಬೋಪಾಸನಗೈವ ಬುಧರು 9 ಸಾಗರಶಯನನ ಧ್ಯಾನ ಯೋಗ ಬಲದಿ ತಿಳಿದು ಭುವಿ ಭೋಗ ತೀರಿತೆಂದು ಕೊಯಿಲು ತಾಗಿದ್ದೊಂದೆ ನೆವನದಿಂದ 10 ಆಶೆಕ್ರೋಧಂಗಳನಳಿದು | ಕ್ಲೇಶಮೋದ ಸಮ ತಿಳಿದು | ಭೂಸುರ ವೃಂದಕೆ ಸುಗ್ರಾಸವಿತ್ತು ತೋಷಿಸುವರು 11 ಹರಿಯಪುರಕೆ ಪೋಪ ಸಮಯ ಹರಿಸು ಬಂದು ಕೃಪ್ಣೆ ಇವರ ಚರಿಯ ನರೆÉದ ಜನಕೆ ತೋರಿ 12 ಸ್ವಾಮಿಶಾಮಸುಂದರನ | ನಾಮದ ಸನ್ಮಹಿಮ ಸತತ | ಪಾಮರ ಜನಕೆ ಪೇಳಿ ಪ್ರೇಮದಿಂ ಸಲಹಿದವರು 13
--------------
ಶಾಮಸುಂದರ ವಿಠಲ
ಬಂದರ್ನೋಡೀ ಸುಂದರ್ತುಲಶೀರಾಮದಾಸರ್ಬಂದರು ಪ ಅಂದದೆಮ್ಮಾಕಂದರ್ಪಾಲಿಸೆಂದರ್ ತಾವೇ ಚಂದಾದಿಂದಾ ಇಂದ್ರರ್ಪದವಿಗಾಗಿ ಬೇಗಾ 1 ಭಕ್ತಿ ಮುಕ್ತಿ ಯೆರಡಕ್ಕೊಂದೆಯುಕ್ತಿ ತೋರಿ ಮತ್ತೆ ತಾನ್ ಭಕ್ತಿಜ್ಞಾನ ಯೇತನ್ಮಧ್ಯೆ ಹೊಕ್ಕಿ ಶಕ್ತರಾಗಿ ಬೇಗಾ 2 ಆಟಾಪಟಾವೆಂಬಳ ಕಳ್ಳ ಬೂಟಕಂಗಳನ್ನು ಬಿಡಿಸಿ ಸಾಟಿಯಾಗದ ತ್ರಿಕೂಟಮೆಂಬಟರಾರ್ಭಟಾ ತೋರಲ್ ಬೇಗಾ3 ಪಕ್ಷೇಂದ್ರನೇರಿ ಬಂದ ಯಕ್ಷರಕ್ಷನಾಗಿ ನಿಂದಾ ಸಾಕ್ಷಿ ಕೇಳುವಂತಾ ಅಡಿಯರ್ಗಾಕ್ಷಣವೆ ಮೋಕ್ಷ ತೋರಲ್ 4 ಆಶಪಾಶವೆಂಬೊದನ್ನು ನಾಶಮಾಡೊ ಈಶನಾಮಾ ದಾಸನಾದವರ್ಗೆ ಸಾಶಿರಾಂಗಾವಾಗಿ ಬೇಗಾ 5
--------------
ಚನ್ನಪಟ್ಟಣದ ಅಹೋಬಲದಾಸರು
ಬಾರೋ ಬಾರೋ ಮನುಕುಲಗುರುಗುಹಾ ಸೇರಿದಾನತರ್ಗೆ ಚಾರುಸುರಭೂರುಹಪ. ಮಾನಾಭಿಮಾನ ನಮ್ಮದು ನಿನ್ನಾಧೀನ ದೀನಜನರ ಸುರಧೇನು ಮಹಾಸೇನ1 ಶಕ್ತಿ ಕುಕ್ಕುಟವಜ್ರಾಭಯ ಚತುರ್ಭುಜನೆ ಭಕ್ತಿಜ್ಞಾನವನೀಯೋ ಶಂಕರಾತ್ಮಜನೆ 2 ಲಕ್ಷ್ಮೀನಾರಾಯಣನ ಧ್ಯಾನಾಭರಣ ಸುಕ್ಷೇತ್ರಪಾವಂಜಾಧ್ಯಕ್ಷ ರವಿಕಿರಣ3
--------------
ತುಪಾಕಿ ವೆಂಕಟರಮಣಾಚಾರ್ಯ
ರಜತ ಪೀಠದ ಯಾತ್ರೆ ರಜೋತಮ ಗುಣವುಳ್ಳ | ಪ್ರಜರಿಗೆ ದೊರಕುವದೆ | ತ್ರಿಜಗದೊಳಗೆ ಮುಂದೆ | ಅಜನಾಗಿ ಬಪ್ಪಗೆ | ಭಜನೆ ಮಾಡುವಂಥ ಸುಜನರಿಗಲ್ಲದೆ ಪ ಮಂದಾಕಿನಿ ಮಿಕ್ಕಾದ ನದಿಗಳಲ್ಲಿಗೆ ಪೋಗೆ | ಮಿಂದು ನಾನಾ ಕ್ಷೇತ್ರವ ಬಂದೂ ಬಿಡದೆ ತಿರುಗಿ ವೇದ ಶಾಸ್ತ್ರಗಳು | ಚಂದದಿ ಓದಿಕೊಂಡು | ಕುಂದದೆ ವ್ರತ ಯಾಗ ಯೋಗ ಮಾಡಲೇನು | ಬಿಂದು ಮಾತ್ರ ಫಲವಿಲ್ಲ | ಸುರರು ಒಂದಾಗಿ ಒಂದಿನ | ಅಂದು ಪೀಯೂಷವ ಕರೆಯೆ ಉಂಡವರಾರು 1 ಮಾನವ | ನಾಡೊಳು ಉಡುಪಿ ಯಾತ್ರೆ ಮಾಡಿದರವಗೇನು ಲೇಶ ಸತ್ಕರ್ಮವು | ಕೂಡದು ಕೂಡದಯ್ಯಾ | ಬಿಡಾಲನಂದದಿ ತಿರುಗಿದಂತಾಗುವದು | ಕೇಡಿಗೆ ಗುರಿಯಾಗುವಾ | ಜೋಡು ಇಲ್ಲಿಗೆ ಬಂದು ತಿರುಗಿ ಪೋದರೆಯೇನು | ಆಡಲೇನದಕೆ ತಿಲಾಂಶ ಸುಖವುಂಟೆ 2 ತಮೋ ಯೋಗ್ಯ ಉಡುಪಿನ ಯಾತ್ರೆ ಮಾಡಲು | ಅಮಿತ ಬಲವಂತನಾಗಿ ಪುಟ್ಟಿ ಆಕ್ರಮಿಸಿ ಪುಣ್ಯವನೆ ಕೆಡಿಸಿ ತಮಕೆ ಸಾಧನವಾದ ಸುಖಬಟ್ಟು ಬಹುಕಾಲ | ರಮಣಿ ಮಕ್ಕಳು ಸಹಿತದಿ | ನಿತ್ಯ | ತಮಸಿನೊಳಗೆ ವಾಸಫಲ ವ್ಯರ್ಥವಾಗದು 3 ರಾಜಸ ಗುಣದಲ್ಲಿ ಈ ಯಾತ್ರೆ ಮಾಡಲು | ಭೂಷಣವನೆ ಯಿಟ್ಟು | ವಾಜಿ ಗಜವಾಗಿ ಸೌಖ್ಯ ಈ ಜಗದೊಳು ಒಟ್ಟು ಪೋಗೋದಲ್ಲದೆ ವಿ | ರಾಜಿಸುವದು ಬಲ್ಲದೇ | ರಾಜಮಂದಿರಕೆ ನವರತ್ನ ತೆತ್ತಿಸಿದಂತೆ | ಈ ಜನದ ಸುಖದ ಫಲ ವ್ಯರ್ಥವಾಗುವದು4 ಮುಕ್ತಿಯೋಗ್ಯನು ಬಂದು ಯಾತ್ರೆಯ ಮಾಡಲು | ಮುಕ್ತಿ ಉತ್ತಮ ಕುಲದಲ್ಲಿ | ವ್ಯಕ್ತನಾಗೀ | ದಿವ್ಯ ಮನದಲ್ಲಿ ವಿರುಕುತಿ | ಭಕ್ತಿಜ್ಞಾನದಲಿ ಬಾಳಿ | ಶಕ್ತನೆಂದೆನೆ ಸತತ ಶ್ರೀಮದಾರ್ಯರ | ಭಕ್ತಿಲಿ ಲೋಲಾಡುತ | ಭಕ್ತವತ್ಸಲ ವಿಜಯವಿಠ್ಠಲ ಕೃಷ್ಣಸಾರ | ಭೋಕ್ತನಲ್ಲಿಪ್ಪನು ಫಲ ವ್ಯರ್ಥವಾಗದು 5
--------------
ವಿಜಯದಾಸ
ವಿನುತ ಸಿರಿ | ರಾಮ ವಿಠಲ ಕಾಯೋ ಪ ಈ ಸತೀ ಮಣಿಯ ನೀ | ಸಲಹಬೇಕೆಂದುಶೇಷ ಸಂಜ್ಞಿತ ಹರಿಯೆ | ಪ್ರಾರ್ಥಿಸುವೆ ಧೊರೆಯೇ ಅ.ಪ. ಅಮೃತ ಕೂರ್ಮ | ರೂಪದಿಂದರುಹೀಉಪದೇಶ ನೀಡ್ವಗುರು | ರೂಪವನೆ ತೋರಿಸುತಅಪರಿಮಿತ ಕಾರುಣ್ಯ | ರೂಪನಾಗಿರುವೆ 1 ಪರಮ ಗುರು ನಿಜ ರೂಪ | ಎರಡು ಬಾರಿಯು ತೋರಿಸರಸನಾಬ್ಯಾದಿ ಹರುಷ | ಬೀರ್ದೆ ಭಯಹಾರೀಕರುಣವೆಂತುಟೊ ನಿನಗೆ | ಸುರಸಿದ್ಧ ಸಂಸೇವ್ಯಶಿರಿ ರಮಣ ಶ್ರೀರಾಮ | ಪರಮ ಪುರುಷನೆ 2 ಈ ಸತೀಮಣಿ ಬಯಕೆ | ನೀ ಸಲಿಸಿ ಲೌಕಿಕದಿಲೇಸು ಹೊಲ್ಲೆಗಳೆಂಬ | ಪಾಶಗಳ ಬಿಡಿಸೀದೋಷ ದೂರನೆ ಹರಿಯೆ | ನೀ ಸಲಹೆ ಪ್ರಾರ್ಥಿಸುವೆದಾಶರಥೆ ಪೊರೆ ಇವಳ | ಮೇಶ ಮಧ್ವೇಶಾ 3 ಮಧ್ವಮಾರ್ಗದಿ ಇಹಳು | ಶುದ್ಧ ಭಕ್ತಿಜ್ಞಾನಸಿದ್ಧಿಸುತ ಇವಳಲ್ಲಿ | ಉದ್ಧರಿಸೊ ಹರಿಯೇ |ಕೃದ್ಧ ಖಳ ಸಂಹಾರಿ | ಸದ್ಧರ್ಮ ಪಥತೋರಿಅಧ್ವಯನೆ ತವ ನಾಮ | ಶುದ್ಧ ಸುಧೆ ಉಣಿಸೋ 4 ಸರ್ವವ್ಯಾಪ್ತನೆ ದೇವ | ಪವನಾಂತರಾತ್ಮಕನೆದರ್ವಿ ಜೀವಿಯ ಕಾಯೊ | ಶರ್ವವಂದ್ಯಾ |ಸರ್ವ ಸುಂದರ ಗುರು | ಗೋವಿಂದ ವಿಠ್ಠಲನೆಈ ವಿಧದ ಬಿನ್ನಪವ | ನೀವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ಶಾಂತೇರಿ ಕಾಮಾಕ್ಷಿ ಲಕ್ಷ್ಮೀಕಾಂತನ ಸೋದರಿ ಸಂತಜನರ ಭಯನಿವಾರಿ ಕಂತುಸಹಸ್ರ ಸುಂದರಿ ಪ. ಬಂಗಧಿ ದೇವಿ ಸುಪ್ರಸಿದ್ಧೆ ಮಹೇಶ್ವರಿ ಶುದ್ಧ ಶ್ರೀಹರಿಭಕ್ತಿಜ್ಞಾನ ಶ್ರದ್ಧೆಯ ನೀಡಮ್ಮ ಶಂಕರಿ 1 ಪಂಚಾಸ್ಯನಾರಿ ಪಾವನೆ ಕಾಂಚನಾಭೆ ಗೌರಿ ಪಂಚ ಮಹಾಪಾಪವಿದಾರಿ ಪಾಹಿಮಾಂ ಶ್ರೀವಿಶ್ವಂಭರಿ 2 ಸುಕ್ಷೇತ್ರ ಕುಮಟಾಖ್ಯ ನಗರಾಧ್ಯಕ್ಷೆ- ದೇವಿ ಭವಾನಿ ತ್ರೈಕ್ಷನ ರಾಣಿ ಕಲ್ಯಾಣಿ ಲಕ್ಷ್ಮೀನಾರಾಯಣಿ3
--------------
ತುಪಾಕಿ ವೆಂಕಟರಮಣಾಚಾರ್ಯ
ಶೌನಕಾದಿ ಮುನಿಗಳಿಗೆ ಸಾನುರಾಗದಲಿ ಪೇಳಿದರು 1 ಕೈಲಾಸಶಿಖರ ಮೆರೆವುದು ಮೇಲಾದ ರತ್ನಕಾಂತಿಗಳಿಂ2 ಜಂಬುಕೇತಕಿ ಪನಸ ಪುನ್ನಾಗ ಸರ್ವಾತಿಶಯದಲಿ ತೋರುವದು 3 ಸಿದ್ಧಿದಾಯಕ ವೆಂದಿಲ್ಲಿ ಪದಧ್ಯಾನದಿ ಕುಳಿತಿಹರು 4 ದಿವಿಜ ಅವನಿಧರಾಗ್ರಣಿಯಾಗಿ ಭುವನೋದರತ್ವದಿ ಭುವನಜನಾಭ ಶ್ರೀಧವನಂತೆ ಗಿರಿಯು ಮೆರೆಯುವುದು5 ಪಾರ್ವತಿಯೊಡನೆ ಸತಿ ನಮಿಸಿ ನುಡಿದಳು 6 ನುಡಿಯ ಲಾಕ್ಷಣದಿ ನಾಕರುಣಿಸುವೆ ಕೇಳೆಂದ7 ವರಮಹಾಲಕ್ಷ್ಮಿಯ ವೃತವು ದೊರೆವುದು ಸಕಲಸೌಭಾಗ್ಯ 8 ಶ್ರಾವಣ ಪೂರ್ಣ ಮಾಸಿಯ ದಿನದಿ ಪೂಜಿಪದು ವಿಶ್ವಾಸದಿಂದಾರಾಧಿಸುತಲಿ 9 ಪಕ್ವಾನ್ನ ಲೇಹ್ಯಾದಿ ನೈವೇದ್ಯ ತತ್ತನ್ನಿಯಾಮಕರ ಚಿಂತಿಪುದು 10 ಕೃಪಾಪಯೋನಿಧೆಯ ಪೂಜಿಪುದು ಬಿಂಬಾಪರೋಕ್ಷಿಗಳು ಪೂಜಿಪರು 11 ಕಾಮಿತ ಪಡೆದವರ್ಯಾರು ಮಹಾಮಹಿಮೆಯನು ಚನ್ನಾಗಿ12 ಮಡದಿ ತಾನಿರಲು ಕರೆಯುವರೆಲ್ಲಾರು ಪುರದಿ 13 ವನಜನಾಭನ ಶೇವೆಯೆಂದು ಗುಣದಿ ಭೂಷಿತಳು 14 ಬಂದಳು ವರಮಹಾಲಕ್ಷ್ಮಿ ಪರಮ ಸಂಭ್ರಮದಿ 15 ನಿರ್ಮಿಸುವನು ಜಗವೆಲ್ಲ ನೀ ಕರುಣಿಸು ಮಾತೆ 16 ಶ್ರಾವಣ ಹರುಷದಿಂದೆನ್ನಯ ವೃತವ ವರಗಳನಿತ್ತಳು ದಯದಿ 17 ಸಂತೋಷದಲಿ ಪೇಳಲವರು ಚಿಂತಿತ ಫಲವೀವುದೆಂದು 18 ಸಿಂಗರಿಸಿದಳಾದಿನದಿ ವಿಪ್ರಾಂಗನೆಯರನು ಕರೆದಳು 19 ಶಿರಿದೇವಿ ಪೂಜಾಸಾಧನವ ನೆರೆದರಾ ದ್ವಿಜನಮಂದಿರದಿ 20 ಕುಂಭಗಳಿಟ್ಟಘ್ರ್ಯಾದಿಗಳಿಂ ಸುರರ ಸಮ್ಮುಖದಿ 21 ಇಂದಿರ ದೇವಿಗಾರುತಿಯ ಬಂಧÀ£ವÀನÉ ಮಾಡುತಿಹರು 22 ಪೂಜಿಸುತಿರಲಾಗೃಹವು ಸೋಜಿಗವಾಯ್ತು ನೋಳ್ಪರಿಗೆ 23 ಕೊರಳೊಳುನವರತ್ನಹಾರ ಸಿರಿದೇವಿ ಕರುಣವಿದೆಂದು 24 ಇತ್ತರು ಬಾಗಿಣಗಳನು ಪೋದರು ತಮ್ಮ ಮನೆಗೆ 25 ಪುಣ್ಯದಿಂದೆಲ್ಲರು ನಾವೆಂ ಧನಧಾನ್ಯ ಸಂಪದಾಗಮನ 26 ಪಾಲಿಸುವಳು ಸಿರಿಯೆಂದು ಶಿವನು ಹೀಗೆಂದು ||27| ಕಾಯಜ ಜನನಿಯ ಕಾಯುವದೆಂದು ನೀ ತಿಳಿಯೆ 28 ನಿರ್ಮಲ ಭಕ್ತಿಜ್ಞಾನ ವೈರಾಗ್ಯ ಇಳೆಯೊಳು ಕಾರ್ಪರ ನಿಲಯ ಶ್ರೀನರಹರಿ ಒಲಿವನು ನಿರುತ ಪಠಿಸಲು30
--------------
ಕಾರ್ಪರ ನರಹರಿದಾಸರು