ಒಟ್ಟು 10 ಕಡೆಗಳಲ್ಲಿ , 8 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

1. ಗಜೇಂದ್ರಮೋಕ್ಷ ನಾರಾಯಣ ಎನ್ನಿರೊ ನಾರಾಯಣ ಎನ್ನಿ ನಾರದಾದ್ಯಖಿಳ ಮುನಿವಿನುತಾಯ ಪಾಹಿಮಾಂ ಘೋರ ಭವದುಃಖ ಸಂಹಾರಾಯ ಪ ಪಾಂಡುದೇಶದೊಳು ಇಂದ್ರದ್ಯುಮ್ನನೆಂಬ ಭೂ ಮಂಡಲಾಧಿಪನು ವೈರಾಗ್ಯದಲಿ ಹರಿಪಾದ ಪುಂಡರೀಕಧ್ಯಾನಪರನಾಗಿತಪಸಿಲಿರೆಚಂಡತಾಪಸನಗಸ್ತ್ಯಾ ಹಿಂಡು ಶಿಷ್ಯರ ಬೆರೆಸಿ ಬರಲು ಸತ್ಕರಿಸದಿರೆ ಕಂಡು ಗಜಯೋನಿಯೊಳು ಜನಿಸು ಪೋಗೆಂದು ಉ- ತಾ ಶುಂಡಾಲನಾದನರಸ 1 ಕ್ಷೀರಸಾಗರ ತಡದೊಳೈವತ್ತು ಯೋಜನ ವಿ- ಸ್ತಾರದಿಂದಿರುವ ತ್ರಿಕೂಟಾದ್ರಿ ಶೃಂಗತ್ರಯದಿ ರಾರಾಜಿತ ತಾಮ್ರರಚಿತ ಕಾಂಚನದಿಂದ ಮೇರುಸಮ ಗಂಭೀರದಿ ಪಾರಿಜಾತಾಂಭೋಜ ತುಳಸಿ ಮಲ್ಲಿಗೆ ಜಾಜಿ ಸೌರಭಗಳಶ್ವತ್ಥ ಚೂತ ಪುನ್ನಾಗ ಜಂ ವಾರಣೀಂದ್ರನು ಮೆರೆದನು 2 ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲಾ ಕಾನನವು ತೊಳಲುತ್ತ ಬೇಸಿಗೆಯ ಬಿಸಲಿನಲಿ ಕಂಡಿತು ಪಾನಾಭಿಲಾಷೆಯಿಂದ ನಾನಾ ಪ್ರಕಾರದಿಂ ಜಲಕ್ರೀಡೆಯಾಡುತಿರೆ ಏನಿದೆತ್ತಣ ರಭಸವೆಂದುಗ್ರಕೋಪದಿಂ ನೆಗಳು ಏನೆಂಬೆನಾಕ್ಷಣದೊಳು 3 ಒತ್ತಿ ಹಿಡಿದೆಳೆವುತಿರೆ ಇದೆತ್ತಣಯದೆನುತ ಮತ್ತೆ ಇಭರಾಜನೌಡೆತ್ತಿ ಫೀಳಿಡುತ ಎಳೆ ಸೆಳೆದುದು ಬಿಡದೆ ನೆಗಳವು ಇತ್ತಂಡವಿತ್ತು ಕಾದಿತ್ತು ಸಾವಿರ ವರುಷ ಪೊತ್ತರಿಸಿತ್ತೇನೆಂಬೆ ಮತ್ತಾ ಗಜೇಂದ್ರಂಗೆ ಚಿಂತಿಸುತ ಮತ್ತ್ಯಾರು ತನಗೆನುತಲಿ 4 ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ ದಿಂ ದಿವ್ಯಜ್ಞಾನದಿಂ ಕಣ್ತೆರೆದು ಕೈಮುಗಿದು ಮುಕುಂದ ಮುನಿವೃಂದವಂದ್ಯಾ ಇಂದಿರಾರಮಣ ಗೋವಿಂದ ಕೃಷ್ಣ ಭಕ್ತರ ಬಂಧು ಕರುಣಾಸಿಂಧು ತಂದೆ ಸಲಹೆನ್ನ ನಾ ಮಾಯಾಪ್ರಬಂಧದಿ ನೆಗಳಿನಿಂ 5 ಪರಮಾತ್ಮ ಪರಮೇಶ ಪರಿಪೂರ್ಣ ಪರಾತ್ಪರ ಉರುತರ ಪರಂಜ್ಯೋತಿ ಪರಮಪಾವನ ಮೂರ್ತಿ ಪರಮೇಷ್ಠಿ ಪರಮಪುರುಷಾ ನಿರುಪಮ ನಿಜಾನಂದ ನಿರ್ಭಯ ನಿರಾವರಣ ನಿರಂಜನ ನಿರಾಧಾರ ನಿರವೇದ್ಯ ನಿಶ್ಯಂಕ ನಿತ್ಯನೈಮಿತ್ಯಕಾ ನೀ ಸಲಹೆನ್ನನೆಂದಾನೆ 6 ಗುಪಿತ ಕಂಠಧ್ವನಿಯೊ ಳಂತರಾತ್ಮಕನ ನೆನೆವುತ್ತಳುತ್ತಿರಲಿತ್ತ ಕರುಣದಿಂದಾಕ್ಷಣದೊಳನಂತಶಯನದೊಳೆದ್ದನು ಸಂತವಿಸಿ ಸಿರಿಮುಡಿಯ ಗರುಡವಾಹನನಾಗಿ ಚಿಂತೆಬೇಡವೆನುತ ಅಭಯ ಹಸ್ತ ಕೊಡುತ ಶ್ರೀ ದಂತಿವದನನ ನೆಗಹಿದಾ 7 ನೆಗಳ ಬಾಯನು ಚಕ್ರದಲಿ ಸೀಳಿ ಕರಿವರನ ಉಗುವ ಕರುಣದಿಂ ಮೈದಡಹಲ್ಕೆ ಗಜಜನ್ಮ ಕುಂಡಲದಿಂದ ಮಿಗೆ ಶೋಭಿಸುತಲೆಸೆದನು ವಿಗಡ ದೇವಲ ಋಷಿಯ ಶಾಪದಲಿ ಬಿದ್ದಿಳೆಗೆ ಮಿಗೆನಕ್ರನಾಗಿ ಹೂಹೂ ಎಂಬ ಗಂಧರ್ವ ಅಮರರೊಲುಮೆಗೆ ನೆರೆದನೋಲೈಸುತ 8 ಮಣಿಮಯ ಕಿರೀಟಕುಂಡಲ ಹಾರ ಪದಕ ಕಂ ಕಣ ಕೌಸ್ತುಭೋಜ್ವಲ ಸುಗಂಧ ಭೂಷಣ ಹಸ್ತ ಪಾಣಿಯಾ ಶಂಖಚಕ್ರಾಬ್ಜಧ್ವಜ ಕಸ್ತೂರಿ ತಿಲಕ ಪ್ರಣವ ತಾಕಿದನು [ಝಣ ಝಣಿತನೂ]ಪುರ[ದ] ದಂತ ಪಂಕ್ತಿಯ ಕೃಪೆ ಸಿರಿ ಮೊಗದ ಪೀತಾಂಬರದಾಲಂಕೃತದ ಸುರಸಿದ್ಧ ಸಾಧ್ಯ ಸಂದಣಿಯೊಳಗೆ ಮೆರೆದನು 9 ಹರಿಯನುತಿಗೈದಂಘ್ರಿಗೆರಗಲಾಕ್ಷಣದಲಿ ಭರದಿಂದಲೆತ್ತಿ ಕೇಳ್ಮಗನೆನ್ನನೀ ಶರಧಿ ಗಿರಿಶೃಂಗತ್ರಯ ಸಪ್ತದ್ವೀಪದಲಿ [ಧರಣಿದೇವಿ] ವರಲಕ್ಷ್ಮಿಯೊಳು ಗರುಡ ಶೇಷ ನಾರದ ಪ್ರಹ್ಲಾದ ಧ್ರುವ ರೊಲು ಸಿರಿವತ್ಸ ಶಂಖ ಚಕ್ರಾವತಾರದಲಿ ಸ್ಮರಿಸುವವರ ಕಾಯ್ವೆನೆಂದಾ 10 ಆವನಿದನುದಯ ಕಾಲದೊಳೆದ್ದು ಭಕ್ತಿಯಿಂ ಭಾವಶುದ್ಧಿಯಲಿ ಭಜನೆಯ ಮಾಳ್ಪ ಜನರಿಗ ಫಾವಳಿಯ ಪರಿಹರಿಸಿ ನರಜನ್ಮವನು ಕಳೆದು ಪರಿಶುದ್ಧರಾದಹರೆಂ- ದಾ ವಾಸುದೇವನಾಜ್ಞಾಪಿಸಿದ ಗಜೇಂದ್ರ ಸಹಿ ತಾ ವಿಹಂಗಾಧಿಪನನೇರಿ ಬಿಜಯಂಗೈದ ಆ ವೈಕುಂಠಪತಿಯ ನಂಬಿದ ಸೇವಕರಿಗೇನಿದು ಚೋದ್ಯವೇ11
--------------
ಬೇಲೂರು ವೈಕುಂಠದಾಸರು
ಆರ್ಯನ್ನ ಯೋಗಧುರ್ಯನ್ನ ಭಜಿಸಿವರ್ಯನ್ನ ಮಧ್ವಾಚಾರ್ಯನ್ನಪ. ಅಕಳಂಕ ಮಹಿಮ ಚರಿತ್ರನ್ನ ಈಸಕಲ ಭುವನಕೆ ಪವಿತ್ರನ್ನಪ್ರಕಟ ಭಾರತಿ ಸತ್ಕಳತ್ರನ್ನ ಪಾಪ-ನಿಕರಕಾನನವೀತಿಹೋತ್ರನ್ನ 1 ನಿರ್ಜಿತ ಪಾಷಂಡಯೂಥನ್ನ ದೂರವರ್ಜಿತ ಭವದುಃಖಬದ್ಧನ್ನಸಜ್ಜನರಘಕೆ ನಿರೋಧನ್ನ ದೋಷವರ್ಜಿತ ಗುಣಪೂರ್ಣಬೋಧನ್ನ 2 ತಿಮಿರ ಪತಂಗನ್ನ ಹಯ-ವದನನ್ನ ಚರಣಾಂಬ್ಜಭೃಂಗನ್ನ 3
--------------
ವಾದಿರಾಜ
ಗುರುವೆ ನಿಮ್ಮನು ನಾ ಮೊರೆಹೊಕ್ಕೆನಲ್ಲದೆ ಅರಿಯೆ ಅನ್ಯರನಿನ್ನು ಪೊರೆಯಿರೀಗ ಪ. ಸಿರಿಯರಸನ ತೋರಿ ಗುರುವೆ ಕರುಣಿಸಿರಿ ತರತಮ್ಯ ತಿಳಿಸುತ ಹರಿಸಿರಿ ಭವದುಃಖಅ.ಪ. ಬಂದೆನು ಭವದೊಳು ನಿಂದೆನು ತಾಪದಿ ಹಿಂದು ಮುಂದರಿಯದೆ ಕುಂದಿದೆನು ಬಂದು ಕರುಣದಿ ಆನಂದವ ನೀಡುತ ನಂದಕಂದನ ಲೀಲೆಯಿಂದ ರಕ್ಷಿಸಿದಿರಿ1 ಮುಸುಕಿದ ಅಜ್ಞಾನ ಹಸನಾಗಿ ತೊಲಗಿಸಿ ಕುಶಲದ ಮತಿಯಿತ್ತು ಪಾಲಿಸುತ ಬಿಸಜಾಕ್ಷನು ದಯ ಎಸೆವ ಕರುಣದಿಯಿತ್ತು ಘಸಣೆಗೊಳಿಸದಲೆ ವಸುಮತಿಯೊಳು ಪೊರೆವ 2 ಕಷ್ಟವಪಡಲಾರೆ ಸೃಷ್ಟಿಯೊಳಗಿನ್ನು ತಟ್ಟದೆ ಎನ್ನ ಮೊರೆ ಮನಸಿಗೀಗ ಕೊಟ್ಟು ಅಭಯವನು ಘಟ್ಯಾಗಿ ಪೊರೆಯಿರಿ ಕೆಟ್ಟ ಕಲ್ಮಷ ಕಳೆದು ಸೃಷ್ಟಿಗೊಡೆಯನ ತೋರಿ 3 ತಲ್ಲಣಿಸುತಿಹೆ ಕ್ಷುಲ್ಲ ದೇಹದಿ ಬಂದು ಒಲ್ಲೆನು ಈ ದುಃಖಭವ ಎಲ್ಲ ಮನಸು ನಿಮ್ಮ ಪಾದದಲಿರುವುದು ತಲ್ಲಣಗೊಳಿಸದೆ ಪೊರೆಯಿರಿ ಗುರುದೇವ 4 ತಂದೆ ಮುದ್ದುಮೋಹನವಿಠ್ಠಲನೆಂಬೊ ಇಂದಿರೇಶನ ಅಂಕಿತದಿ ಮೆರೆವೊ ಸುಂದರ ಗೋಪಾಲಕೃಷ್ಣವಿಠ್ಠಲನ ಎಂದೆಂದಿಗೂ ಮನಮಂದಿರದಲಿ ಕಾಂಬ 5
--------------
ಅಂಬಾಬಾಯಿ
ಜಯದೇವ ಜಯದೇವ ಜಯಮಹಾಂಗಿರೀಶಾ ಸ್ವಯಂಜ್ಯೋತಿ ಬೆಳಗುವೆ ಸಚ್ಚಿತ್ಸುಖತೋಷಾ ಪ ಸರ್ವರಲಿ ನೋಡಿದರೂ ನೀನಲ್ಲದೆ ಇಲ್ಲಾ ಉರ್ವಿಯಾಕಾಶ ದಶದಿಕ್ಕುಗಳೆಲ್ಲಾ ಸರ್ವೇಶ್ವರವೆಂಬದು ಸರ್ವಾಂಗದೆÉಲ್ಲಾ ಪಾರ್ವತೀಶ್ವರನೆಂಬುದು ಬಲ್ಲವನೆ ಬಲ್ಲಾ ಜಯದೇವ 1 ಸಕಲ ಸುಖದುಃಖವೆಂಬುದು ನಿನ್ನ ಲೀಲೆ ಅಖಿಲ ಅಂಡಗಳೆಂಬ ಭೋಜನಶಾಲೆ ಭಕುತಿ ಭಾಗ್ಯೆಂಬ ಜ್ಞಾನದ ದೀಪಜ್ವಾಲೆ ಪ್ರಕಟಿಸುವಂತೆ ಎತ್ತುವೆ ನಿನ್ನ ಮೇಲೆ ಜಯದೇವ 2 ಪರಿಶುದ್ಧಾತ್ಮಕದೇವಾ ನಿರುತ ನಿರ್ದೋಶಾ ಸಕಲಜನರ ಹೃದಯಕಮಲ ನಿವಾಸಾ ದುರಿತದಾರಿದ್ರ್ಯ ಭವದುಃಖವಿನಾಶಾ ಗುರು ವಿಮಲಾನಂದ ಶ್ರೀ ಮಹಾಂಗಿರೀಶಾ 3
--------------
ಭಟಕಳ ಅಪ್ಪಯ್ಯ
ತುರು ಮನವಾರ್ತೆಯಹರಿಬಲೆಯೊಳುಬಿದ್ದು ಹಲುಗಿರಿವುದ ನೋಡಿಪರಮವೈರಾಗ್ಯ ಖಡ್ಗದಿ ಮೋಹ ಪಾಶವಪರಿದು ಜ್ಞಾನಾಮೃತ ಪಾನಗೈಯೆಂದೆನು 1ಪರಧನವನು ಕಳಬೇಡ ಕೊಲ್ಲುವರೆಂದುವರದರು 'ುೀರಿಕದ್ದೊಡನೆ ಕೊಳದಿ ಸಿಕ್ಕಿಕೊರಗುತೆಲ್ಲರಿಗೆ ಪಲ್ಗಿರಿವಂತೆ ಬಯಲಿಗೆಬೆರತು ನೀ ಮುಂಗೆಡಬೇಡೆಂದು ಪೇಳಿದೆ 2ತಿರಿದುಂಬ ಪಾಪಿಗೆ ತುಪ್ಪ ಸಕ್ಕರೆ ಪಾಲುಬೆರೆದ ಮೃಷ್ಟಾನ್ನ ತಾ ಬರೆ ಸುಖದಿಂದುಂಡುುರದನ್ಯರೆಂಜಲಿಗೆರಗುವಂದದಿ ಪೂರ್ವದಿರವ ಬಯಸಿ ನೀನೀತೆರದಲಿ ಕೆ[ಡದೆ] 3ಹರಿಸ್ಮರಣೆಯ ಮಾಡು ಹರಿಕಥೆಗಳ ಕೇಳುಹರಿಯನರ್ಚಿಸಿ ನೋಡಿ ಹರುಷದಿಂ ಕುಣಿದಾಡುಹರಿ ಸರ್ವೋತ್ತಮನೆಂದು ಹಸನಾಗಿ ಬಾಳುವೆ'ರಿಯರೊಪ್ಪುವ ಮಾರ್ಗ 'ೀಗಿರು ನೀನೆಂದೆ 4ದೂಸುವವನಿಂದ ದೋಷ ಪೋಪುದು ನಿನ್ನಪೋಸುವವನಿಗೆ ಪುಣ್ಯ ಕೈಸಾರ್ವುದುರೋಷ ಹರ್ಷಗಳ ದೂರದಿ ಬಿಟ್ಟುಶ್ರೀಹರಿದಾಸರ ದಾಸರದಾಸ ನೀನಾಗೆಂದೆ 5ಶ್ರವಣಸುಧಾಪಾನ ರುಚಿಯ ಕಂಡರೆ ನೀನುಭವದುಃಖವೆಂಬ ಬಾಡಿದಗಂಜಿಗುಡಿವೆಯಾಸು'ವೇಕತನ ತಾನು ಸುಮ್ಮನೆ ದೊರೆವದೆಅ'ವೇಕತನವ ಬಿಟ್ಟಾನಂದಬಡುಯೆಂದೆ 6ಸಾರಿಗೆ ಸಾರಿಗೆ ಸಾರಿದರೆಯು ನಿನ್ನದಾರಿಯ ಬಿಡೆಯಲ್ಲ ದುಕ್ಕ ತೊಲಗದಲ್ಲಹೊರಲಾರೆನು ನಿನ್ನ ಹತ್ತಿರೆ 'ಧಿ ನನ್ನಸೇರಿಸಿ ಪೇಳಿದೆ ಸುಖಿಯಾಗಿ ಬಾಳೆಂದು 7ಸಾರಿದೆ ಸಾರಿದೆ ಕೆಡಬೇಡ ಭವಸುಖಹಾರುವದಿದು ನಿಜವಲ್ಲ ಸನ್ಮುಕ್ತಿಗೆದಾರಿಗೊಡದು ಸತ್ಸಂಗವ ಮಾಡಿ 'ಚಾರಿಸಿ ನಿನ್ನ ನೀ ಸುಖಮಯನಾಗೆಂದೆ8ಆಶೆಯ ಬಿಡಲೊಲ್ಲೆ ಆನಂದಬಡಲೊಲ್ಲೆಪೊಸದೆ 'ಷಯದ ಪೇರಡ'ಯೊಳಗೆಮೋಸಗೈವಳು ಮೃತ್ಯುವದರಿಂದ ಶ್ರೀಹರಿದಾಸರ ಜೊತೆಯ ಬಿಟ್ಟೊರ್ವ ಪೋಗದಿರೆಂದೆ 9ಬಲ್ಲೆಯ ಬಲ್ಲೆಯ ಗುರುಪದ ಸೇವೆಗೆಬಲ್ಲೆಯ ಬಲ್ಲೆಯ ಹರಿಕಥೆಗೇಳ್ಪರೆಬಲ್ಲೆಯ ಬಲ್ಲೆಯ ಹರಿನಾಮ ಸ್ಮರಣೆಯಕೊಲ್ಲುವೆ ಸಟೆಯಲ್ಲಿ ಕೇಳು ನೀ ನೀ ಮೇಲು 10ಗುರುಕರುಣವದೆಂಬ ಘಾಳಿ ಬೀಸಲಿ ತಾಳುತರಗೆಲೆಯಂತ್ತೆತ್ತಿ ತಂದು ಜ್ಞಾನಾಗ್ನಿಯೊಳ್‍ಉರು' ನಿನ್ನಯರೂಪನಡಗಿಸದಿಪ್ಪೆನೆವರಟು ಮಂಡೆಯದೆ ನಿನ್ನೊಡನೇಕೆ ಹಾರಲಿ 11ಬರಡು ಮನದೊಳೆ ಬರಿಜಗಳ'ದೆಂದುಗುರುವಾಸುದೇವಾರ್ಯ ಗುಪಿತದಿಂ ಚಿಕನಾಗಪುರದಿ ಜ್ಞಾನಾಮೃತಪಾನ ಗೈಸಿದುದರಿಂಬೆರೆದೆನಾತನೊಳು ನೀನಿರು ಪೋಗು ಬಯಲಾಗು 12
--------------
ವೆಂಕಟದಾಸರು
ನದೀಸ್ತೋತ್ರವು ಕೃಷ್ಣ ಗೋದಾವರೀ ನಂದಿನೀ ನಳಿನೀ ಹೇಮಾವತಿ ಸಿಂಧು ಸರಯು ನೇತ್ರಾವತಿ ಕುಮದ್ವತೀ ಭಾಗೀರಥೀ ಭೋಗವತಿ ಜಾಹ್ನವೀ ಜಯಮಂಗಲಿ ತ್ರಿಜಗತ್ವಾವನೀ ವಿಷ್ಣು ಪಾದೋದ್ಭವೆ ದೇವಿ ಕೃಷ್ಣವೇಣಿ ಅಘನಾಶಿನೀ ಗಂಗಾ ಯಮುನಾ ತ್ರಿವೇಣೀ ದಕ್ಷಿಣ ಪಿನಾಕಿನೀ ನರ್ಮದಾ ಸಾವಿತ್ರೀ ಗಾಯತ್ರೀ ಸರಸ್ವತೀ ಸೀತಾ ಮಾಲತೀ ಚಮಲಾಪಹ ವಾರಾಹೀ ವೈಷ್ಣವೀ ಸುಜ್ಯೋತಿ ಶಿವಗಂಗಾ ಪಂಚಗಂಗೀ ತ್ರಿಪದಗಾಮಿನೀ ಬ್ರಹ್ಮಪುತ್ರಾ ತುಂಗಭದ್ರಾ ಭೀಮರಥೀ ಗೋಮತೀ ಶರಾವತೀ ಸ್ವಾಮಿ ಪುಷ್ಕರಿಣೀ ವರಹ ಪುಷ್ಕರಿಣಿ ಪಾಂಡುತೀರ್ಥ ಪಾಪನಾಶಿನೀ ಆಕಾಶಗಂಗಾಧವಳ ಗಂಗಾ ಶಾಲ್ಮಲೀ ಲೋಕಪಾವನೀ ಕುಮಾರ ತೀರ್ಥ ವಿಷ್ಣುತೀರ್ಥ ನಾರಾಯಣತೀರ್ಥ ಕೌಮೋದಕೀ ಕಪಿಲತೀರ್ಥ ಅಲಕನಂದ ವರದಾ ಪಶ್ಚಿಮವಾಹಿನೀ ಸಿಂಧು ನದಿ ಶೋಣನದಿ ಚಂದ್ರಭಾಗ ಅರ್ಕಾವತೀ ಸುವರ್ಣ- ಮುಖರೀ ಗೋಗರ್ಭ ಶಿಂಶಾಕಾಗಿನೀ ಮಂದಾಕಿನೀ ಪ್ರಾತ:ಕಾಲೇ ಪಠÉೀನ್ನಿತ್ಯಂ ದು:ಖದಾರಿದ್ರನಾಶನಂ ಸ್ಮರಾಮಿ ನಿತ್ಯಂ ಭವದುಃಖ ದೂರಾ ಶ್ರಿ ಕಮಲನಾಭ ವಿಠ್ಠಲೋ ವಿಜಯತೇ ಶುಭಂ
--------------
ನಿಡಗುರುಕಿ ಜೀವೂಬಾಯಿ
ನಿತ್ಯ ಶುಭಮಂಗಳಂ ಪ. ವಸುದೇವತನಯನಿಗೆ ವೈಕುಂಠನಿಲಯನಿಗೆಕುಸುಮನಾಭನಿಗೆ ಕೋಮಲರೂಪಗೆಯಶೋದೆನಂದನಗೆ ವಸುಧೆಯ ರಮಣನಿಗೆನಸುನಗೆಯೊಳೊಪ್ಪುವ ನರಸಿಂಹಗೆ1 ಕೌಸ್ತುಭ ಹಾರಗೆಕನಕಾಂಬರಧರನಿಗೆ ಕಾರುಣ್ಯರೂಪನಿಗೆಸನಕಾದಿ ಮುನಿವಂದ್ಯ ನರಸಿಂಹಗೆ2 ಪಂಕಜನಾಭನಿಗೆ ಪಾಂಚಾಲಿರಕ್ಷÀಕಗೆಲಂಕೆಯನು ವಿಭೀಷಣನಿಗಿತ್ತವಗೆಕುಂಕುಮಾಂಕಿತನಿಗೆ ಕುವಲಯನೇತ್ರನಿಗೆಬಿಂಕದಿಂದಲಿ ಮೆರೆವ ನರಸಿಂಹಗೆ 3 ಪಕ್ಷಿವಾಹನನಿಗೆ ಪರಮಪಾವನನಿಗೆಕುಕ್ಷಿಯೊಳು ಜಗವನಿಂಬಿಟ್ಟವನಿಗೆಲಕ್ಷುಮೀಕಾಂತನಿಗೆ ಲಕ್ಷಣವಂತನಿಗೆಲಕ್ಷಣದೊಳೊಪ್ಪುವ ನರಸಿಂಹಗೆ4 ಭಕ್ತವತ್ಸಲನಿಗೆ ಭವದುಃಖದೂರನಿಗೆಮುಕ್ತಿದಾಯಕಗೆ ಚಿನ್ಮಯರೂಪಗೆಮಿತ್ರೆರುಕ್ಮಿಣಿ ಸತ್ಯಭಾಮೆಯರರಸನಿಗೆನಿತ್ಯಕಲ್ಯಾಣ ಶ್ರೀಹಯವದನಗೆ 5
--------------
ವಾದಿರಾಜ
ನೂರೆಂಟು ನೆನೆದು ಫಲವೇನು ಈರೇಳು ಜಗದೊಡೆಯಹರಿಯನೊಮ್ಮೆ ನೆನೆ ಮನವೆ ಪ. ಧನದಾಸೆಗಳಲದಿರು ಭವದುಃಖ ಬಳಲದಿರುಜನಾರ್ದನನ ಮರೆಯದಿರು ಈ ತನುವ ಪೊರೆಯದಿರುಅನಘಜನರೊಡನಾಡು ದಿನದಿನ ಶುಭವಕೂಡುಇನಿತು ಜನಮವೆ ಸಾಕು ಇನ್ನು ಮುಕುತಿಯೆ ಬೇಕು 1 ಸಾಕು ದುರ್ಜನÀರಾಟ ಸಾಕು ಸತಿಯರ ಬೇಟಸಾಕು ಸವಿಯನ್ನದೂಟ ಸಾಕು ಘನಕೂಟಸಾಕು ದೇಶಕೆವೋಟ ಸಾಕು ಸಲೆ ಭವನೋಟಸಾಕದೆಲ್ಲ ಖಳಕೂಟ ಸಾಕುಮನೆ[ಮಠ] 2 ಕೇಳು ಹರಿಮಹಿಮೆಯನು ಪೇಳು ಹರಿನಾಮವನುಬಾಳು ಬಂದಷ್ಟರಿಂದ ತಾಳು ಹಸಿತೃಷೆಗಳಶ್ರೀಲಲನೆಯಾಳ್ದ ಹಯವದನ ಸಿರಿನರಹರಿಯಆಳುತನವನು ಬೇಡು ಕೀಳು ಬುದ್ಧಿಯ ದೂಡು 3
--------------
ವಾದಿರಾಜ
ಶ್ರೀ ವೇಣುಗೋಪಾಲಕೃಷ್ಣಮೂರ್ತೇ ಪ ಕಾವುದೀತನ ನಿನ್ನ ದಾಸನೆಂದನವರತಅ.ಪ ಕಾಯದಿಂದಲಿ ನಿನ್ನ ಚರಣಸೇವೆಯ ಮಾಡಿ ತೋಯಜಾಂಬಕ ನಿನ್ನ ನಾಮ ವಾಚಿಸುತ ಮೂರ್ತಿ ಮಾನಸದಿ ಧೇನಿಸುತ ಈ ಉಪಾಸನೆಯನ್ನನವರತ ಕೊಡು ದೇವ 1 ಲೌಕಿಕದಲ್ಲಿದ್ದರು ಲೋಕೈಕನಾಥನೆ ಏಕಾಂತದಲಿ ನಿನ್ನ ನೆನಪು ಒಂದಿರಲಿ ಮಾಕಳತ್ರನೆ ನಿನ್ನ ಸಕಲಮಂಗಳವಿತ್ತು ಲೋಕದೊಳು ನಿನ್ನ ಭಕುತರೊಳಿಡು ಇನ್ನು 2 ಪವನಾಂತರಾತ್ಮ ಶ್ರೀ ವೇಂಕಟೇಶಾತ್ಮಕ ಶ್ರೀ ವೇಣುಗೋಪಾಲಕೃಷ್ಣಮೂರುತೇ ಭಾವಶುದ್ಧನಮಾಡಿ ಶ್ರೀವರನ ದಾಸರ ಸೇವೆಯನು ಕೊಟ್ಟು ಭವದುಃಖವನೆ ಹರಿಸೊ3
--------------
ಉರಗಾದ್ರಿವಾಸವಿಠಲದಾಸರು
ಶ್ರೀಕಾಂತೊಲಿದ ದಾಸ | ರೀ ಕಲಿಯುಗದಲ್ಲಿ |ಲೇಖಾಂಶರಹುದೇ ತಂಗೀ ||ಶೋಕಬ್ಯಾಡೆಲೆ ನರಲೋಕ ಉಳಿದರೆಂದು |ಈ ಕಂಭದೊಳಗಿಹರೇ ಹೇ ನೀರೇ ಪಆ ಸೇತೂ ಮೊದಲಾದ ಹಿಮಾಶೈಲಪರಿಯಂತ|ಸೂಸಿಹದಿವರ ಕೀರ್ತಿ ||ಯೇಸು ಬಗಿಯಲಿಂದ ಸೋಸಿ ನೋಡಿದರನ್ನ |ಪಾಸಟಿ ಯನಿಸದಲ್ಲೇ | ಯೇ ನಲ್ಲೇ 1ನರಮೋಹನಾರ್ಥವಾದರು ಲೌಕೀಕೆಂಬುದೂ |ಅರಿಯಾರು ಸ್ವಪ್ನದಲ್ಲೀ ||ಧರಿಯೊಳಖಿಲ ಸಜ್ಜನರು ಪರೀಕ್ಷಿಸಿಹರು |ಬರಿದೆ ಸ್ತವನವಲ್ಲಾವೆ | ಕೇಳಲವೇ2ಹರಿಕೃಪಿನೋಡುಇವರಿಗೆ ಜನರು ಎಷ್ಟು |ಜರಿದಾರು ಮನ್ನಿಪರೂ ||ಕರಣತ್ರಯದ ಶುದ್ಧರೆರಡು ಮಾರ್ಗವ ಬಲ್ಲ |ವರು ನಿತ್ಯಾಚರಿಸಿದರೂ | ಹಿರಿಯಾರೂ 3ಇವರಂದ ನುಡಿಯನು ಭವಕೆ ತಂದರೆ ಲೇಶ |ಭವದುಃಖವಾಗದಲ್ಲಾ ||ಜವದೊರವದು ಮುಕ್ತಿ ಜವನ ಬಾಧಿಲ್ಲಾಶು |ಕವಿಕುಲ ತಿಲಕರಿಗೇ | ನೀ ಯರಗೇ 4ಖಳಹ ಪ್ರಾಣೇಶ ವಿಠ್ಠಲನ ಚರಿತೆ ಪದಗಳಲಿ ಬಣ್ಣಿಸಿ ಸಂತತೀ |ನಿಲಸಿ ಜ್ಞಾನಿಗಳನ್ನು ತಲಿ ತೂಗಿಸಿದರು ಪೇ |ಳಲು ಎನ್ನ ಮತಿ ಸಾಲದೂ | ಸತ್ಯವಿದೂ 5
--------------
ಪ್ರಾಣೇಶದಾಸರು