ಒಟ್ಟು 10 ಕಡೆಗಳಲ್ಲಿ , 6 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಕುಲವೊ ರಂಗ ಅರಿಯಬಾರದು ಪ. ಆವ ಕುಲವೆಂದರಿಯಬಾರದು ಗೋವುಕಾವ ಗೊಲ್ಲನಂತೆಪಾರಿಜಾತದ ವೃಕ್ಷÀವ ಸತ್ಯಭಾಮೆಗೆ ತಂದಿತ್ತನಂತೆ ಅ.ಪ. ಗೋಕುಲದಲ್ಲಿ ಪುಟ್ಟಿದನಂತೆ ಗೋವಳರೊಡನೆ ಆಡಿದನಂತೆತಾ ಕೊಳಲನೂದಿ ಮೃಗಪಕ್ಷ್ಷಿಗಳ ಮರುಳುಮಾಡಿದ ದೇವನಂತೆ 1 ಕಾಲಲ್ಲಿ ಶಕಟನ ಒದ್ದನಂತೆ ಗೂಳಿಯ ಕೊಂಬ ಕಿತ್ತನಂತೆಕಾಳಿಂಗನ ಹೆಡೆಯ ತುಳಿದು ಬಾಲೇರಿಗೊಲಿದ ದೇವನಂತೆ2 ಗೊಲ್ಲತೇರ ಮನೆಗಳಲ್ಲಿ ಕಳ್ಳತನವ ಮಾಡಿದನಂತೆಮೆಲ್ಲನೆ ಪೂತನಿ ಅಸುವ ಹೀರಿ ಬಲ್ಲಿದ ಕಂಸನ ಕೊಂದನಂತೆ 3 ಸರ್ಪ ತನ್ನ ಹಾಸಿಗೆಯಂತೆ ಪಕ್ಷಿ ತನ್ನ ವಾಹನವಂತೆÀರ್ಪಭೂಷಣ ಮೊಮ್ಮಗನಂತೆ ಮುದ್ದುಮುಖದ ದೇವನಂತೆ4 ತರಳತನದಿ ಒರಳನೆಳೆದು ಮರನ ಕೆಡಹಿ ಮತ್ತವರ ಸಲಹಿದುರುಳ ರಕ್ಕಸರನು ಕೊಂದ ಚೆಲುವ ಹಯವದನನಂತೆ 5
--------------
ವಾದಿರಾಜ
ಕೋಲ ಕೋಲೆನ್ನಿ ಮುತ್ತಿನ ಕೋಲ ಕೋಲೆನ್ನಿಆ ಬಾಲೆ ಭಾವೆಯ ಈಗ ಸೋಲಿಸಿದೆವೆನ್ನಿ ಪ. ಕೊಟ್ಟುತಾ ಮುಯ್ಯ ರುಕ್ಮಿಣಿಗೆ ಇಟ್ಟರು ಆಣಿಯಥಟ್ಟನೆ ತಿರುಗಿಸದಿದ್ದರೆ ಕೃಷ್ಣ ನಿಮ್ಮಯ ಅ.ಪ ತಂದ ಮುಯ್ಯವ ಹಿಂದಕೆ ತಿರುಗಿಸದಿದ್ದರೆಇಂದಿರಾಪತಿಭಾಮೆಗೆ ತಂದೆಯಾಗುವ1 ಬಾಲಿಯರು ಆಣೆಯ ಮೇಲೆ ಮೇಲೆ ಇಟ್ಟರೆಆಲಿಸಿ ಕೇಳುತ ರೋಹಿಣಿ ಬಾಲ ನಕ್ಕನು2 ಇಂಥ ಆಣೆಗೆ ಭಾಮೆ ಇನ್ನೆಂತು ಮಾಡುವಿಪಂಥಗಾರಳೆ ಬಂದು ಚಿಂತಿಸೆಂದನು 3 ಭದ್ರೆ ದ್ರೌಪತಿ ತಿದ್ದಿ ಆಣೆ ನಿಟ್ಟರೆಮುದ್ದು ರಾಮೇಶ ಇದಕೆ ಬಿದ್ದು ನಕ್ಕನು 4
--------------
ಗಲಗಲಿಅವ್ವನವರು
ಪಾರಿಜಾತ ಶ್ಲೋಕ : ದ್ವಾರಾವತಿಯಲಿ ದÀನುಜದಲ್ಲಣ ಮುಕುಂದ ಸಾರೆ ರುಕ್ಮಿಣಿಸಹಿತ ಆನಂದದಿಂದ ವಾರಿಜಾಂಬಕ ವಾಲಗದೊಳು ಚಂದ ನಾರಂದಮುನಿ ತಾ ಪಾರಿಜಾತವ ತಂದ 1 ಪದ : ಬಲ್ಲಿದ ಮುನಿಯ ಕುಳ್ಳಿರಿಸಿದ ಸತ್ಕರಿಸಿದ ಪುಷ್ಪಯಾರಿಗೆ ಎಂದ ವಲ್ಲಭೆರುಕ್ಮಿಣಿಗಲ್ಲದೆ ಬ್ಯಾರೆ ಸಲ್ಲದು ಎಲ್ಲ ನೀನು ಬಲ್ಲದೆ ಇಂತೆಂದ ಈ ಸುದ್ದಿ ಸತ್ಯಭಾಮೆಗೆ ತಂದು ಹೇಳಿದರಂದು ಕೇಳಿದಳಾಕೆ ನಿಂದು ಮನದಲ್ಲಿ ಅತಿನೊಂದು 1 ಶ್ಲೋಕ : ಇಂದ್ರಲೋಕದ ಚಂದದ ಕುಸುಮವನ್ನು ಮಂದಗಮನೆಯ ಮುಡಿಗೆ ತಾ ಮುಡಿಸಿದನು ಎರವು ಇಲ್ಲವು ಕಾಣಿ ಇಂದು ಮಾಡಿದ ಕುಹಕವ ಕೃಷ್ಣ ತಾನು 2 ಇನ್ನಾರಿಗೆ ಪೇಳುವೆನು ರುಕ್ಮಿಣಿ ತನ್ನ ಜೀವ ಬಹುಪ್ರೀತಿ ಬಡಿಸಿದ ಠಕ್ಕುಠವಳಿಗಳಿಲ್ಲಿ 2 ಶ್ಲೋಕ : ಮೆಚ್ಚಿ ಬಂದೆನೆ ಮೋಹಕ್ಕೆ ಮರುಳಾದೆನೆ ಹಚ್ಚಿರೆ ಮಾತ ಹರಿಯು ತಾ ಕೇಳಿದನೆ ನೆಚ್ಚಿ ಇದ್ದೆನೆ ಎನ್ನೊಳು ವಂಚಿಸಿದನೆ ರಚ್ಚಿಗಿಕ್ಕಿದ ರಂಪು ಮಾಡಿದ ಕಾಣೆ 3 ಪದ : ಮಾರನಟ್ಟುಳಿ ತಾಳಲಾರೆನೆ ಮುಖದೋರನೆ ಇನ್ನೇನು ತೆರನೆ ಕಂತು ಕಮಲಜನಯ್ಯ ಏನೆಂದು ತಿಳಿಯದು ಬಹು ಪ್ರೀತಿ ಇದ್ದವ[ಳ] 3 ಶ್ಲೋಕ : ಮಳೆ ಇಲ್ಲದ ಮೇಘವಿದ್ಯಾತಕ್ಮಮ್ಮ ಬೆಳೆ ಇಲ್ಲದ ಭೂಮಿ ಮತ್ಯಾತಕಮ್ಮ ಗಿಳಿಇಲ್ಲದ ಗೂಡು ತಾನ್ಯಾತಕಮ್ಮ ತಾಳಲಾರೆನೊ ಶ್ರೀ ಕೃಷ್ಣನಿಲ್ಲದೆ ಎಮ್ಮ 4 ಮಾತೆನ್ನ್ಯಾಕ ಪಡೆದಳೊ ಕುಹಕ ಮೂರುಲೋಕ ಪ್ರಸಿದ್ಧ ಓಡಿ ತನಗ್ಯಾಕಿದು ಬ್ಯಾಡಿ 4 ಶ್ಲೋಕ : ಬಿಸಜಾಕ್ಷನ ಬಹಳ ನಂಬಿದ್ದೆ ನಾನು ವಶವಾದನೆ ಒಲಿದು ರುಕ್ಮಿಣಿಗೆ ತಾನು ಅಟ್ಟುಳಿ ಇದೇನು ಆಸೆಬಟ್ಟೆನೆ ಬಹಳ ವಸುದೇವ ಸುತಗೆ 5 ಎಲ್ಲರೊಡನೆ ಕೋಪಿಸುತ ಮನದೊಳು ಮರುಗುತ ಸುರಪಾರಿಜಾತವೆ 5 ಶ್ಲೋಕ :ದೇವಲೋಕದ ಹೂವ ತನಗಿಲ್ಲವಲ್ಲ ಭಾವೆ ಎನ್ನೊಳು ಮುನಿಯದೆ ಬಿಡುವಳಲ್ಲ ಆವ ಪರಿಯಲಿ ತಿಳಿದು ಹೇಳುವೆನು ಸೊಲ್ಲ ಜೀವದೊಲ್ಲಭೆಯೊಡನೆ ಪಂಥವು ಸಲ್ಲ 6 ಎನ್ನೊಡನೆ ನುಡಿಯಳೊ ಇಂದು ಅಪ್ರಬುದ್ಧನಾದರೆ ಕೋಪವನು ತಾಳುವಳೊ ಇಂ ಬಾಗಿಲೊಳು ನಿಂದನು 6 ಶ್ಲೋಕ :ಚಿತ್ತದೊಲ್ಲಭೆ ಚದÀುರೆ ಮೋಹನಾಕಾರೆ ಮುತ್ತುರತ್ನವ ಮನೆಯೊಳಗೆಲ್ಲ ಬೀರಿ ಎತ್ತ ಹೋದಳೊ ಎನ್ನ ಪ್ರಾಣದ ನಾರಿ ಸತ್ಯಭಾಮೆಯ ಸುಳುಹು ಕಾಣೆನು ತೋರಿ 7 ಕೋಕಿಲವಾಣಿಯ ಇನ್ನೆಲ್ಲಿ ಹೋದಳು ತೋರಿಸೆ ಹತ್ರ ಸೇರಿಸೆ ಬಂದೆನು ಹಾರೈಸಿ ನಿಂತವರು ಕಣ್ಣು ಮಾ[ತಾ]ಡಿ 7 ಶ್ಲೋಕ :ಹಾಸಿ ಮಲಗಿದ್ದ ಸತಿಯ ಕಂಡು ಬೀಸಣಿಕೆಯಲಿ ಬೀಸಿದ ಕೃಷ್ಣ ತಾನು ಸೂಸು ಪರಿಮಳ[ದ] ಪಾರಿಜಾತದ ಹೂವ ಹಾ- ರÉೈಸಿ ಕಂಗಳು ತೀರ[ವು] ನೋಡಿದಳು ಕಾಂತೆ 8 ಫಲ್ಗುಣನ ಸಾರಥಿಯ ಇದು ಏನು ಸೋಗೆಂದು ಹಿಂಡು ಸ್ತ್ರೀಯರ ಶಿರೋರನ್ನಳೆ ಮೋಹನ್ನಳೆ ಮುನಿಸ್ಯಾತಕೆನ್ನೊಡನೆ ಅಪರಾಧವ ಕ್ಷಮಿಸೆ 8 ಶ್ಲೋಕ :ಅಕ್ಕರಿಂದಲೆ ರುಕ್ಮಿಣಿಗೆ ಇತ್ತ ಹೂವ ಮಿಕ್ಕ ಸತಿಯರಿಗ್ಯಾತಕೆಂಬ ಭಾವ ಕಕ್ಕುಲಾತಿಯ ಕಂಡೆ ನಿನ್ನಲ್ಲಿ ಜೀವ ಸೊಕ್ಕಬ್ಯಾಡವೊ ಸಾಕು ಹೋಗೆಲೊ ಗೋವ 9 ಮನ್ನಿಸೆ ಕೃಪಾಸಿಂಧು ಕೋಕಿಲಸ್ವರಗಾನೆ ಕುಳ್ಳಿರಿಸಿದ ಹೆಳವನಕಟ್ಟೆಯ ರಂಗನು ಕೃಪಾಂಗನು ದೇವೋತ್ತುಂಗ ವಿಕ್ರಮನು 9
--------------
ಹೆಳವನಕಟ್ಟೆ ಗಿರಿಯಮ್ಮ
ರಂಗರುಕ್ಮಿಣಿ ಸತ್ಯಭಾಮೆಗೆ ಬಂಗಾರದ ಪ ಮಂಟಪದೊಳು ಸತಿಯರೆಂಟುಮಂದಿಯು ಕೂಡಿ ಒಂಟಿಮುತ್ತೊ ್ಹಳೆವೊ ವೈಕುಂಠಪತಿಗೆ ಬ್ಯಾಗ 1 ವಾರಿಜಾಕ್ಷಿಯರ್ಹದಿನಾರುಸಾವಿರ ಮಂದಿ ಮಾರನಯ್ಯನ ಮುದ್ದು ಮಕ್ಕಳ ಸಹಿತಾಗಿ 2 ಎಡಬಲ ತೊಡೆಯಲ್ಲಿ ಮಡದಿ ರುಕ್ಮಿಣಿ ಭಾಮೆ ನಡುವೆ ಭೀಮೇಶಕೃಷ್ಣ ನಗುತ ಕುಳಿತನಾಗ 3
--------------
ಹರಪನಹಳ್ಳಿಭೀಮವ್ವ
ರಾಮ ನಾಮಕೆ ಸಮ ನಾಮವುಂಟೆ ಜಗದೀ ಪಾಮರರಘನಾಶಕೆ ಪ ಕಾಮಾರಿಯು ತನ್ನ ಭಾಮೆಗೆ ಬೋಧಿಸಿದೀ ನಾಮಕೆ ಸಮವುಂಟೇ ಅ.ಪ ಕೋಸಲಪತಿಯೆನಿಸೀ ಅಸುರೆಯ ಸಂಹರಿಸೀ ದುರುಳರಪಹರಿಸೀ ಮುನಿ ಸತಿಯನುದ್ಧರಿಸಿದ 1 ಸತಿಯನುಜರ್ವೆರೆಸೀ ದಿತಿಜರ ಕುಲವಳಿಸೀ ಸತಿಯಳ ನೆಲೆಯರಸೀ ದಿತಿಜಾಂತಕನೆನಿಸಿದ 2 ಶರಣನ ಪತಿಕರಿಸೀ ನರನಾಟಕ ನಡೆಸೀ ಕರುಣಾನಿಧಿಯೆನಿಸೀ ದೇವರದೇವ ರಘುರಾಮವಿಠಲನೆನಿಸೀ ಜನವನು ಪಾಲಿಸಿದಾ 3
--------------
ರಘುರಾಮವಿಠಲದಾಸರು
ಸಂಪ್ರದಾಯದ ಹಾಡು ವೆಂಕಟೇಶನ ಉರುಟಣೆಯ ಹಾಡು ಭಾರ್ಗವಿ ರಮಣಾ | ಜಗದಾಭಿ ರಮಣಾ ಪ ಲೋಕನಾಯಕ ಸ್ವಾಮಿ | ವೈಕುಂಠಾದಿಂದ ಬಂದೂಏಕಾಂತವಾನಾಡಿದಾ | ಲಕ್ಷೀಯರೊಡನೆ 1 ಧರೆಗೆ ವೈಕುಂಠಾದ | ಚರ್ಯವ ತೋರುವೆನೆಂದುಶಿರಿ ಮಹಾಲಕ್ಷೀಯೊಡನೆ | ಸಂಧಿಸಿದಾನೂ 2 ಸ್ವಾಮಿ ಕಾಸಾರದಲೀ | ಧಾಮಾವ ರಚಿಸೂವೆಆ ಮಹಾ ವೈಕುಂಠಾವ | ಅಗಲೀ ಬಂದೂ 3 ವತ್ಸರ ಕಾಲದಲೊಂದು | ಉತ್ಸವ ಮಾಡುವೆನೆಂದುಇಚ್ಛೆ ಮಾಡಿದನೂ ವೆಂಕಟ ಇಂದಿರೆಗೂಡಿ 4 ನವರಾತ್ರಿ ದಿವಸದಲೀ | ವಿವಾಹ ಲಗ್ನವ ರಚಿಸೀಅವನಿಯೊಳು ಡಂಗುರವನ್ನು ಹೊಯಿಸೀದ ಸ್ವಾಮೀ 5 ಕಾಶಿ ಕರ್ನಾಟಕದ | ದೇಶಾ ದೇಶದ ಜನರುಶ್ರೀಶಾನುತ್ಸವಕೇ ಜನರು ಒದಗೀದರಾಗಾ 6 ಹದಿನಾಲ್ಕು ಲೋಕಾದ | ಪದುಮಜಾದಿಗಳೆಲ್ಲಾ ಮದುವೆಯಾ ದಿಬ್ಬಣದಾ | ಜನರು ಬಂದರಾಗಾ 7 ಗರುಡಾ ಕಂಬದ ಸುತ್ತಾ | ಪರಿಪರಿ ವೈಭವದಿಂದಗಿರಿಯಾ ವೆಂಕಟಗೇ | ಕಂಕಣ ಕಟ್ಟಿದರಾಗಾ 8 ಆಗಮಾ ಪುರಾಣ | ರಾಗ ಮದ್ದಳೆ ತಾಳಭಾಗವತರೂ ಸುತ್ತ ಮಾಡುತಿರಲೂ 9 ತಾಳ ತಮ್ಮಟೆ ಕಾಳೆ | ಭೋರೆಂಬೋ ವಾದ್ಯಗಳೂವರ ನಾರಿಯರು ಸುತ್ತಾಗ್ಹಾಡುತಿರಲೂ 10 ಚಿನ್ನದ ಕರಿಮಣಿ | ರನ್ನ ಮಂಗಳಸೂತ್ರಹಿರಿಯಾ ವೆಂಕಟನೂ ಲಕ್ಷ್ಮೀಗೆ ಕಟ್ಟಿದ ನಗುತಾ 11 ಮುತ್ತಿನಾ ಕರಿಮಣಿ | ರತ್ನ ಮಂಗಳಸೂತ್ರಾಸ್ವಾಮಿ ವೆಂಕಟ ಲಕ್ಷ್ಮೀಗೆ ಕಟ್ಟಿದ ನಗುತಾ 12 ಅಂತರಾ ಮಾರ್ಗದೊಳೂ | ನಿಂತು ದೇವತೆಗಾಳು ಸಂತೋಷದಿಂದಲಿ ಜಯ ಜಯವೆಂದು ಪಾಡಿದರಾಗ 13 ಅಂಗಾನೆ ಶ್ರೀ ಭೂಮಿ | ರಂಗಾಮಂಟಪದೊಳಗೆಬಂಗಾರ ಗಿರಿಯಾ ವೆಂಕಟ ಒಪ್ಪಿದ ಸ್ವಾಮೀ 14 ಅತಿರಸಾ ಮನೋಹರ | ಮಿತಿಯಿಲ್ಲದ ಪದಾರ್ಥಗಳೂಸತಿಯರೆಲ್ಲರು ಭೂಮಕೆ ತಂದು ಬಡಿಸಿದರಾಗ 15 ಬೆರದ ನಾರಿಯರೆಲ್ಲ | ಹರಿಭೂಮಾ ನಂತರದೀಭರದಿ ಉರುಟಣಿಗೆ ಅಣಿ ಮಾಡಿದರಾಗಾ 16 ಮಿತ್ರೆ ಲಕ್ಷ್ಮೀಗೆ ತಕ್ಕ | ಹಿರಿಯರು ಪೇಳಲುಛಂದದಿಂದಲಿ ಅರಿಷಿನ ಕಲಸಿ ನಿಂತಳಾಗ 17 ಪನ್ನಗ ನಗವಾ | ಸೇರಿದ ಮಹರಾಯದುಡ್ಡು ದುಡ್ಡಿಗೆ ಬಡ್ಡಿಯನ್ನು ದುಡಿವಾ ಲೋಭಿ 18 ವಂಚಿಸಿ ಜನರನ್ನು | ಲಂಚಾ ಲಾವಣಿ ತೆಗೆದುಹಿಂಚಾಸಿ ವರ ಕೊಡುವಾ ಹಿತದಾ ದೇವಾ 19 ಬಡವಾ ಬಲ್ಲಿದರೆಂದು | ಬಿಡದಾಲೆ ಅವರಿಂದಮುಡುಪು ಹಾಕಿಸಿಕೊಂಡು (ಮುಂದಕೆ) ಬಿಡುವೋ ದೇವಾ 20 ಅನ್ನವೆಲ್ಲವ ಮಾರಿ | ಹೊನ್ನು ಕಟ್ಟುವೆಯಲ್ಲೊಅನ್ನದಾನವ ಮಾಡಲೊಲ್ಲಿ ಅನ್ಯಾಕಾರಿ 21 ಹೊನ್ನು ಸಾಲವ ತೆಗೆದು | ಎನ್ನಾ ಕಟ್ಟಿಕೊಂಡುಮನೆ ಮನೆಗೆ ಭಿಕ್ಷವ ಬೇಡುವ ಮಾನವಂತಾ 22 ಹೊನ್ನು ಸಾಲದು ಎಂದು | ಎನ್ನ ಸಾಕುವೆ ಹೇಗೋನಿನ್ನಾ ಕೃಪಣತನಕೆ ನಾನು ಎಣೆಗಾಣೆನೋ 23 ಇಪ್ಪತ್ತು ದುಡ್ಡೀಗೆ | ಸೇರು ತೀರ್ಥವ ಮಾರಿದುಡ್ಡು ಕಟ್ಟಿ ಜಾಳಿಗೆ ಗಳಿಸುವ ಜಾಣ ನೀನೂ 24 ಅಟ್ಟಾ ಮಡಿಕೆಯಲ್ಲಾ | ಕುಟ್ಟಿ ನಾಮವ ಮಾಡಿಗಟ್ಟಿಯಾಗಿ ಗಂಟು ಗಳಿಸುವ ಘನವಂತಾ 25 ದೇಶದೊಳು ನಿಮ್ಮಂಥಾ | ಆಸೆ ಉಳ್ಳವರಿಲ್ಲಕಾಸು ಕಟ್ಟಿ ಕವಡೆ ಗಂಟು ದುಡಿವ ಲೋಭಿ 26 ಮಡದಿ ನಾನಿರಲಿಕ್ಕೆ | ಕಡಿಮೆ ಏನಾಗೋದುಬಡತನ ನಿನಗೆ ಯಾತಕೆ ಬಂತೂ ಸ್ವಾಮೀ 27 ನಾರೀಯಾ ನುಡಿ ಕೇಳಿ | ವಾರೆ ನೋಟದಿ ನೋಡಿಮೋರೆ ತಗ್ಗಿಸಿ ವೆಂಕಟ ಮುನಿದು ನಿಂತಾ 28 ಕಡುಕೋಪಾ ಮಾಡುವರೆ | ಹುಡುಗನಂತಾಡುವರೆಕೊಡಲೀಯ ಪಿಡಿವಾರೆ ನಾನು ನುಡಿದಾ ನುಡಿಗೇ 29 ಕಣ್ಣಾನೆ ಬಿಡಬ್ಯಾಡ | ಬೆನ್ನ ತೋರಲಿ ಬ್ಯಾಡಾಇನ್ನು ಮುಖವಾ | ತಗ್ಗಿಸಬ್ಯಾಡ ಇತ್ತ ನೋಡೂ 30 ಎನ್ನರಸಾ ಹೊನ್ನರಸಾ | ಚೆನ್ನಿಗ ವೆಂಕಟರಾಯಾನಿನ್ನ ಪೋಲುವರ್ಯಾರೊ | ಜಗದೊಳು ನೀಲಗಾತ್ರಾ 31 ಎನ್ನರಸಾ ಚೆನ್ನರಸಾ | ಚೆನ್ನಿಗ ವೆಂಕಟರಮಣಾನಿನ್ನ ಮುದ್ದು ಮುಖವ ತೋರೊ ಅರಿಷಿಣ ಹಚ್ಚೇನು 31 ಎನ್ನುತ ಅರಿಷಿಣ | ಹಚ್ಚಿ ಕುಂಕುಮವಿಟ್ಟುರನ್ನ ಹಾರವ ಹಾಕಿ ತಾನು ಕುಳಿತಾಳಾಗ 33 ಮಂದರಧರ ತಾನೂ | ಛಂದದರಿಶಿನ ಪಿಡಿದೂಇಂದಿರಾದೇವಿಯನ್ನು ಮಾತನಾಡಿಸಿದಾ 34 ಎನ್ನರಸಿ ಹೊನ್ನರಸಿ | ಚೆನ್ನಿಗ ಮಾಯಾದೇವಿನಿನ್ನ ಮುದ್ದು ಮೊಗವಾನೆ ತೋರು ಅರಿಷಿನ ಹಚ್ಚೇನು 35 ಭಿಡೆಯಾ ನೋಡದೆ ಇಂಥಾ | ನುಡಿಗಳಾಡಿದ ಮ್ಯಾಲೆನಡುಗಿ ಮೋರೆಯ ತಗ್ಗಿಸಲಿಹುದೆ ನಾಚಿಕೆ ಯಾಕೆ 36 ಭಾಗ್ಯಾದ ಮೊಬ್ಬಿಲಿ | ಬಾಗಿ ನೀ ನಡೆಯಾದೇಅಗ್ಗಳಿಕೆ ಮಾತುಗಳನ್ನು ಆಡಿದೆಯಲ್ಲೇ 37 ಮಿಂಚಿನಂದದಿ ಬಹಳಾ | ಚಂಚಲ ಬುದ್ಧ್ಯವಳೇವಂಚಿಸೂವಳೆ ಜಗವಾ ವಾರಿಜಾಕ್ಷೀ 38 ಬಂಗಾರಾ ಮುಡುಪಿಗೆ | ಎನ್ನ ಕಂಗೊಳಿಸೀಗಾ ಹಿಂಗಾದೆ ಮಂಕು ಮಾನವರ ಮಾಡುವುದರಿದೇ 39 ಕಂಚುಕ ವೆಂಕಟ ಬಿಗಿದಾ ನಗುತಾ 40 ತಾಂಬೂಲವನೆ ಮೆದ್ದು | ಮಡದಿಯಾ ಮುಖ ಸೂಸೆಇಂಬೀಲ್ಹಚ್ಚೆ ಬರೆದರಾಗ ಅತಿ ಸಂಭ್ರಮದೀ 41 ತಿರುಮಲೇಶನು ತನ್ನ | ಮಡದೀಯನು ಎತ್ತಿಭರದಿಂದಾ ತನ್ನರಮನೆಗಾಗಿ ತೆರಳಿದಾನು 42 ದ್ವಾರದಾದಡಿಯಲ್ಲಿ | ನಾರೇರೆಲ್ಲರು ನಿಂತುವಾರಿಜಾಕ್ಷಿ ಪತಿಯ ಹೆಸರಾ ಹೇಳೆಂದರು 43 ಕಿರುನಗೆಯಿಂದ ಲಕ್ಷ್ಮೀ | ಗಿರಿಯಾ ವೆಂಕಟನೆನಲೂಹರಿಯೆ ನಿನ್ನ ರಮಣಿ ಹೆಸರಾ ಹೇಳೆಂದರೂ 44 ಜಾತಿ ನಾಚಿಕೆ ತೊರೆದು | ಶ್ರೀ ತರುಣಿ ಎನುತಾಲೆಪ್ರೀತಿಯಿಂದಲಿ ಸಿಂಹಾಸನದಿ ಕುಳಿತರಾಗಾ 45 ಮತ್ತೆ ನಾರಿಯರೆಲ್ಲಾ | ಮುತ್ತಿನಾರತಿ ಪಿಡಿದೂಸತ್ಯಾಭಾಮೆಗೆ ಜಯ ಜಯವೆಂದರಾಗ 46 ವಿಭುವಿನ ಗುಣವನ್ನು ವಿಸ್ತರ ಪೇಳಿದ ಜನಕೆಸಮಯದಂಥ ಭಾಗ್ಯವನಿತ್ತು ಸಲಹುವ ಸ್ವಾಮಿ 47 ಮಂಗಳ ವೆಂಕಟರಾಯಾ | ಮಂಗಳ ಮಾಧವರಾಯಾಮಂಗಳ ಮಾನಸಗೇಯಾ | ಮಂಗಳ ಮಾಧವರಾಯಾ 48 ಧರೆಯೊಳಧಿಕನಾದ | ದೊರೆ ವ್ಯಾಸವಿಠಲಾನುಪರಮ ಭಕ್ತಿ ಸುಜ್ಞಾನವನು ಪಾಲಿಸೂವಾ 49
--------------
ವ್ಯಾಸವಿಠ್ಠಲರು
ಹೂವ ಮುಡಿಸಿರೆ ಮುಡಿಗ್ಹರಸುತಲಿ ಮುತ್ತೈದೆಯಾಗೆನುತ ಹೂವ ಮುಡಿಸಿರೆ ಮುಡಿಗ್ಹರಸುತಲಿ ಪ ಮರುಗ ಮಲ್ಲಿಗೆ ಜಾಜಿ ಸುರಗಿ ಶಾವಂತಿಗೆ ಸುರಪಾರಿಜಾತ ಸಂಪಿಗೆ ಸತ್ಯಭಾಮೆಗೆ 1 ಸುರಪಾರಿಜಾತ ಪುನ್ನಾಗ ಪುಷ್ಪಗಳ 2 ಹೆರಳು ಬಂಗಾರ ರಾಗಟೆ ಗೊಂಡ್ಯ ಕ್ಯಾದಿಗೆ ಅರಳು ಮಲ್ಲಿಗೆಯ ಭೀಮೇಶಕೃಷ್ಣನ ಸತಿಗೆ3
--------------
ಹರಪನಹಳ್ಳಿಭೀಮವ್ವ
ಎಂಥ ಸುಖ ಎಂಥ ಸುಖ ಎಂಥ ಸುಖವಲಕ್ಷ್ಮಿಕಾಂತನ ಪೂಜಿಸಿ ಸಂತೋಷ ಪಡುವರುಕುಂತಿ ಮಕ್ಕಳುಕೆಲದಿಪ.ಜಾಳಿಗೆ ಮುತ್ತಿನ ಕವಚಭಾಳ ರತ್ನಗಳ ವಸ್ತಏಳು ಲೋಕಗಳ ಬೆಳಗುವಏಳು ಲೋಕಗಳ ಬೆಳಗುವ ಪೀತಾಂಬರವ್ಯಾಳಾಶಯನಗೆ ದೊರೆಕೊಟ್ಟ 1ಸರಮುತ್ತು ಹೆಣಿಸಿದ ಬರಿಯ ಮಾಣಿಕದ ವಸ್ತಧರೆಯೆಲ್ಲ ಬೆಳಗುವಪಟ್ಟಾವಳಿಧರೆಯೆಲ್ಲ ಬೆಳಗುವಪಟ್ಟಾವಳಿಕುಪ್ಪುಸನಾರಿ ರುಕ್ಮಿಣಿಗೆ ದೊರೆ ಕೊಟ್ಟ 2ಮುತ್ತು ಮಾಣಿಕ ರತ್ನ ತೆತ್ತಿಸಿದ ಆಭರಣಹತ್ತು ದಿಕ್ಕುಗಳ ಬೆಳಗುವಹತ್ತು ದಿಕ್ಕುಗಳ ಬೆಳಗುವ ಛsÀತ್ರ ಚಾಮರಸತ್ಯಭಾಮೆಗೆ ದೊರೆಕೊಟ್ಟ 3ಆನೆ ಕುದುರೆಯ ಸಾಲು ಎಷ್ಟೋ ರಥಗಳುಮಾನದ ಕಾಲಾಳು ಮೊದಲಾಗಿಮಾನದ ಕಾಲಾಳು ಮೊದಲಾಗಿ ಹರುಷದಿಶ್ರೀನಿವಾಸಗೆ ದೊರೆಕೊಟ್ಟ 4ಕುದುರೆ ಪಲ್ಲಕ್ಕಿ ರಥಸಾಲು ಬಿರುದಿನ ನೌಬತ್ತುಛsÀತ್ರ ಚಾಮರವು ಮೊದಲಾದಛsÀತ್ರ ಚಾಮರ ಮೊದಲಾದ ಉಚಿತವಮುದದಿ ರುಕ್ಮಿಣಿಗೆ ದೊರೆ ಕೊಟ್ಟ 5ಸಾವಿರ ಅಬುಜ ಕುದರಿ ಸಾಲಾದ ರಥಗಳುಮ್ಯಾಲೆ ಪಲ್ಲಕ್ಕಿ ಮೊದಲಾಗಿಮ್ಯಾಲೆ ಪಲ್ಲಕ್ಕಿ ಮೊದಲಾಗಿ ಛsÀತ್ರವಸತ್ಯಭಾಮೆಗೆ ದೊರೆಕೊಟ್ಟ 6ದೊರೆಯು ಧರ್ಮನು ಹರಿಗೆ ಬಿರುದು ಬಿನ್ನಾಣಗಳ ಕೊಟ್ಟಕರಗಳ ಮುಗಿದು ಶಿರಬಾಗಿಕರಗಳ ಮುಗಿದು ಶಿರಬಾಗಿ ರಾಮೇಶನಪರಮಪ್ರೀತಿ ಇರಲೆಂದು7
--------------
ಗಲಗಲಿಅವ್ವನವರು
ಬಲ್ಲಿದಗುರುಗಳಿಗೆಎಲ್ಲ ಹಿರಿಯರಿಗೆ ಎರಗಿಬಲ್ಲಷ್ಟು ತತ್ವ ರಚಿಸಿದೆಕೋಲಬಲ್ಲಷ್ಟು ತತ್ವ ರಚಿಸಿದೆಲಕ್ಷ್ಮಿವಲ್ಲಭನಿದಕೆ ಒಲಿಯಲಿಕೋಲ1ಪತಿಗಳ ದಯದಿ ಮಾತುಪತಿರಚಿಸಿದಶ್ರೀಪತಿ ಗುಣನಿಧಿ ಕವನವಕೋಲಶ್ರೀಪತಿ ಗುಣನಿಧಿ ಕವನವು ವಿಸ್ತರಕೆಮಧ್ವ ಮತದ ಜನತಿದ್ದಿ ಕೊಡಬಹುದುಕೋಲ2ರಾಮಕೃಷ್ಣ ದೈವರು ಪ್ರೇಮದ ನುಡಿಗಳುನೇಮ ನಿಷ್ಠೆಯಲೆ ಶ್ರವಣವೆಕೋಲನೇಮ ನಿಷ್ಠಯಲಿ ಶ್ರವಣವ ಮಾಡಲುನಮ್ಮ ಕಾಮನ ಪಿತನುಕೈಹಿಡಿವಕೋಲ3ಮುದ್ದುರಂಗನ ಕಥೆಬುದ್ಧಿ ಸಾಲದೆ ಅಪದ್ಧವೆ ಇರಲಿಅತಿದಯದಿಕೋಲಅಪದ್ಧವೆ ಇರಲಿ ಅತಿದಯದಿ ಪಾಂಡುರಂಗವಿದ್ವಜ್ಜನ ವಂದ್ಯ ಕೈಕೊಳ್ಳೊಕೋಲ4ಅರಸಿ ರುಕ್ಮಿಣಿ ಭಾವೆಗೆಸರಸಲ್ಲಾಡಿದ ಮಾತುಹರುಷ ಮನದಿಂದ ಶ್ರವಣವೆಕೋಲಹರುಷ ಮನದಿಂದಶ್ರವಣ ಮಾಡಲುನಮ್ಮ ನರಸಿಂಹನಿದಕೆ ಒಲಿವನುಕೋಲ5ಹರದಿರುಕ್ಮಿಣಿ ಭಾಮೆತಿರುಗಿಸಿದ ಮುಯ್ಯವಆದರದಿಂದ ಕೇಳಿದವರಿಗೆಕೋಲಆದರದಿಂದ ಕೇಳಿದವರಿಗೆ ಶ್ರೀಕೃಷ್ಣಪರಮಪದವಿಯನೆ ಕೊಡುವನುಕೋಲ6ಮಚ್ಛ ನೇತ್ರಿಯರು ತಂದಅಚ್ಛಾದ ಮುಯ್ಯವಸ್ವಚ್ಛಮನದಿಂದ ಶ್ರವಣವÀಕೋಲಸ್ವಚ್ಛಮನದಿಂದ ಶ್ರವಣವ ಮಾಡಲುನಮ್ಮ ಅಚ್ಯುತನಿದಕೆ ಒಲಿವನುಕೋಲ7ಮಂದಗಮನೆಯರು ತಂದಚಂದದ ಮುಯ್ಯವಆನಂದ ಮನದಿಂದ ಶ್ರವಣವಕೋಲಆನಂದ ಮನದಿಂದ ಶ್ರವಣವ ಮಾಡಲುನಮ್ಮ ಅನಂತ ನಿದಕೆ ಒಲಿವನುಕೋಲ8ಕಾಂತೆ ರುಕ್ಮಿಣಿ ಭಾಮೆಗೆಪಂಥಲಾಡಿದ ಮಾತುಸಂತೋಷದಿಂದ ಶ್ರವಣವಕೋಲಸಂತೋಷದಿಂದ ಶ್ರವಣವ ಮಾಡಲು ಭಾಗ್ಯಸಂತಾನ ಕೊಡುವ ರಮಿ ಅರಸುಕೋಲ9
--------------
ಗಲಗಲಿಅವ್ವನವರು