ಒಟ್ಟು 16 ಕಡೆಗಳಲ್ಲಿ , 10 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಮದ್ರಾಮಾಯಣ ಮಂಗಳಂ ಮಂಗಳಂ ಮಹಾನುಭಾವಗೆ ಮಂಗಳಂ ಲೋಕಮಾತೆ ಸೀತೆಗೆ ಮಂಗಳಂ ಶತ್ರುಘ್ನ ಭರತಗೆ ಮಂಗಳಂ ಸೌಮಿತ್ರಿರಾಮಗೆ ಪ ದಶರಥನ ಉದರದಲಿ ಜನಿಸುವೆನೆಂದು ವರವನಿತ್ತ ರಾಮಚಂದ್ರಗೆ 1 ಭರತಸಹವಾಗಿ ಜನಿಸಿದ ರಾಮಚಂದ್ರಗೆ 2 ಜಾತಕರ್ಮವು ನಾಮಕರಣವು ಚೌಲ ಉಪನಯನಗಳ ಮಾಡಿ ವಿಶ್ವಾ ಮಿತ್ರರೊಡನೆ ಸಕಲ ವಿದ್ಯವ ಕಲಿಯೆ ಪೊರಟ ರಾಮಗೆ3 ಬಲ ಅತಿಬಲವೆಂಬ ವಿದ್ಯವ ವಿಶ್ವಾಮಿತ್ರರೊಡನೆ ಕಲಿತು ಅಶ್ವಿನಿದೇವತೆಗಳಂದದಿ ಬಂದ ಸೌಮಿತ್ರಿರಾಮ್ರಗೆ 4 ಭರದಲಿ ಅನಂಗನಾಶ್ರಮವನು ಪೊಕ್ಕು ಸರಯು ನದಿಯನು ದಾಟಿ ಬರದೂಷಣಜಾ ದೇಶದೊಳಗುಳ್ಳ ತಾಟಕಾಂತಕ ರಾಮಚಂದ್ರಗೆ 5 ಅಸ್ತ್ರವನ್ನು ಗ್ರಹಿಸಿ ಬೇಗನೆ ಸಿದ್ಧಾಶ್ರಮಕ್ಕೆ ನಡೆತಂದು ಸುಭಾಹುವ ನು ಸಂಹರಿಸಿ ಭರದಿ ಮಾರೀಚನ ಹಾರಿಸಿದ ರಾಮಗೆ 6 ವಿಶ್ವಾಮಿತ್ರರ ಯಜ್ಞ ಪಾಲಿಸಿ ಕುಶನ ವಂಶವಿಸ್ತಾರವ ಕೇಳಿ ಆಸರ [ಯು]ನದಿಯ ದಾಟಿ ಭರದದಿತಿಯಾಶ್ರಮಕೆ ಬಂದ ರಾಮಗೆ 7 ಮರುತ್ತ ಜನ್ಮವ ಕೇಳಿ ಅಹಲ್ಯೆಯನ್ನು ಪಾವನ ಮಾಡಿ ಬಂದ ರಾಮಗೆ 8 ಜನಕ ವಂದಿಸಿ ಧನ್ಯನೆನ್ನಲು ವಿಶ್ವಾಮಿತ್ರರು ವೃತ್ತಾಂತ ಹೇಳಿ ಧನುವ ತರಿಸಲು ನೋಡಿ ಕ್ಷಣದಿಮುರಿದಾ ರಾಮಚಂದ್ರಗೆ 9 ಕರವ ಪಿಡಿದು ಪೊರಟ ರಾಮಗೆ 10 [ಬೇಗ]ಮಾತಾಪಿತರ ಮಾತನಡೆಸಿ ಪ್ರೀತಿತೋರಿದ ಸೀತಾರಾಮಗೆ 11 ಕಂಡವರ ಮನದಲ್ಲಿ ರಮಿಸುವ ಪುಂಡರೀಕಾಕ್ಷನಿಗೆ ರಾಜ್ಯವ ಕೊಡುವೆನೆ[ನುತ] ದಶರಥ ವ್ರತವನಾಚರಿಸಿದ ರಾಮಚಂದ್ರಗೆ 12 ಕೈಕೆ ಪೂರ್ವದ ವರವ ಸ್ಮರಿಸಿ ಭರತನಿಗೆ ರಾಜ್ಯವನು ಬೇಡಿ ರಾಮನರ ಣ್ಯಕ್ಕೆ ಪೋಗೆನೆ ಬೇಗ ಪೊರಟ ಶ್ರೀರಾಮಚಂದ್ರಗೆ 13 ಮಾತೆಯನು ಬಹುವಿಧದಿ ಮನ್ನಿಸಿ ಪಿತನ ಪ್ರತಿಜ್ಞೆಯನು ಪಾಲಿಸಿ ಸೀತೆಲಕ್ಷ್ಮಣರೊಡನೆ ವನವಾಸಕ್ಕೆ ಪೊರಟ ರಾಮಚಂದ್ರಗೆ 14 ಪುರದ ಜನರನು ಸಂತವಿಟ್ಟು ಗುಹನ ಸಖ್ಯದಿ ನದಿಯ ದಾಟಿ ಭರದಿ ಭಾರದ್ವಾಜರ ಕಂಡು ಚಿತ್ರಕೂಟಕ್ಕೆ ಬಂದ ರಾಮಗೆ 15 ಅರಸು ಸ್ವರ್ಗವನೈದೆ ಭರತನಕರಸಿ ಕರ್ಮವನೆಲ್ಲ ಕಳೆದು [ವರ] ಮಾತೆಗೆ ಭಾಷೆ ಕೊಟ್ಟು ತಮ್ಮನಾಲಿಂಗಿಸಿದ ರಾಮಗೆ 16 ಭರತನಂಕದೊಳಿಟ್ಟು ಪ್ರೇಮದಿ ಮನ್ನಸಿ ಮೃದುವಾಕ್ಯದಿಂದ ಗುರುಗಳನುಮತದಿಂದ ಪಾದುಕೆಯಿತ್ತು ಕಳುಹಿದ ರಾಮಚಂದ್ರಗೆ 17 ಬೇಗನೆ ಚಿತ್ರಕೂಟವ ಬಿಟ್ಟು ಅತ್ರಿ ಯಾಶ್ರಮಕೆ ಬಂದು ಅಂಗರಾಗಾರ್ಪಣವನೆಲ್ಲ ಅಂಗೀಕರಿಸಿದ ರಾಮಚಂದ್ರಗೆ 18 ದಂಡಕಾರಣ್ಯವನ್ನು ಪೊಕ್ಕು ಉದ್ದಂಡವಿರಾಧನ್ನ ಕೊಂದು ಕಂಡು ಇಂದ್ರನ ಶರಭಂಗರಿಗೆ ಮುಕ್ತಿಯನಿತ್ತ ಶ್ರೀರಾಮಚಂದ್ರಗೆ 19 ಋಷಿಗಳಿಗೆ ಅಭಯವನು ಇತ್ತು ಲೋಕಮಾತೆಯ ನುಡಿಯ ಕೇಳಿ ಋಷಿಮಂಡಲವನು ಪೊಕ್ಕು ಬಂದು ಸುತೀಕ್ಷ್ಣರ ಕಂಡ ರಾಮಗೆ 20 ಅಸ್ತ್ರವನು ಕೊಡಲು ಗ್ರಹಿಸಿ ಪಂಚವಟಿಗೆ ಬಂದ ರಾಮಗೆ 21 ಶೂರ್ಪನಖಿ ರಘುಪತಿಯ ಮೋಹಿಸೆ ಕರ್ಣನಾಸಿಕವನ್ನು ಛೇದಿಸಿ ದುರುಳ ಖರದೂಷಣರ ಕೊಂದು ಸತಿಯನಾಲಿಂಗಿಸಿದ ರಾಮಗೆ 22 ದುರುಳ ಖಳನು ಜಾನಕಿಯ ಕದ್ದೊಯ್ಯೆ ಮಾರಿಚನ್ನ ಕೊಂದು ಬರುತ ಮಾರ್ಗದಿ ಗೃಧ್ರರಾಜಗೆ ಮುಕ್ತಿಯಿತ್ತ ಶ್ರೀರಾಮಚಂದ್ರಗೆ 23 ಕಬಂಧನಾ ವಾಕ್ಯವನು ಕೇಳಿ ಮಾರ್ಗದಲಿ ಅಯಮುಖಿಯ ಭಂಗಿಸಿ ಶಬರಿ ಭಕ್ತಿಯೊಳಿತ್ತ ಫಲವನು ಸವಿದು ಮುಕ್ತಿಯನಿತ್ತ ರಾಮಗೆ 24 ಸೀತೆಯರಸುತ ಮಾರ್ಗದಲಿ ಋಷ್ಯಮೂಕಪರ್ವತವ ಸೇರಿ ಪಂ ಪಾತೀರದಿ ತಮ್ಮನೊ[ಂದಿ]ಗೆ ನಿಂತ ಶ್ರೀರಘುರಾಮಚಂದ್ರಗೆ 25 ಪಂಪಾಪುಳಿನದ ವನವಕಂಡು ಪಂಕಜಾಕ್ಷಿಯ ನೆನೆದು ವಿರಹ [ತಾಪದರೆ] ಬಂದ ಆಂಜನೇಯಗೆ ಸಖ್ಯ ನೀಡಿದ ರಾಮಚಂದ್ರಗೆ 26 ಅಭಯವನು ಇತ್ತು ರವಿಜಗೆ ಏಳು ತಾಳೇಮರವ ಛೇದಿಸಿ ದುಂ ದುಭಿಯ ಕಾಯವನು ಒಗೆದ ಇಂದಿರಾಪತಿ ರಾಮಚಂದ್ರಗೆ 27 ಇಂದ್ರಸುತನು ರವಿಜನೊಡನೆ ದ್ವಂದ್ವಯುದ್ಧವ ಮಾಡುತಿರಲು ಒಂದುಬಾಣದಿಂದ ವಾಲಿಯ ಕೊಂದು ಕೆಡಹಿದ ರಾಮಚಂದ್ರಗೆ 28 ಮುದ್ರೆಯುಂಗುರವಿತ್ತು [ಅ]ಸಾಧ್ಯ ಇವನೆಂತೆಂದ ರಾಮಗೆ 29 ಬೆಳೆದ ಹನುಮಗೆ 30 ಶತ್ರುಪಟ್ಟಣವ ಕಂಡು ಛಾಯೆಯ ಕುಟ್ಟಿ ಸುರಚಿಯುಪಾಯದಿಮನ್ನಿ ಸುತ್ತ ಮೈನಕನ ಭರದಲಿ ಲಂಕಿಣಿಯನಡಗಿಸಿದ ಹನುಮಗೆ 31 [ವೀರ] ಹನುಮಗೆ 32 ದುರುಳ ರಾ ವಣನ ನಿಂದಿಸಿ ಪುರವಸುಟ್ಟಾ ವೀರಹನುಮಗೆ 33 ಸೀತೆಯೊಡನೆ ಗುರುತಕೇಳಿ ಸಮುದ್ರತೀರಕೆ ಬಂದು ಬೇಗನೆ ಜಾಂಬ ವಂತ ಅಂಗದರ ಕೂಡಿ ಮಧುವನವ ಭಂಗಿಸಿದ ಹನುಮಗೆ 34 ಕಂಡೆ ಲೋಕಮಾತೆಯನನ್ನೆನ್ನುತ ಬಂದು ಮುದದಿ ವಂದಿಸಿ ಇತ್ತ ಹನುಮನನಾಲಿಂಗಿಸಿದವಗೆ 35 ಬಂದ ರಾಮಗೆ 36 [ಭಕ್ತ] ವಿಭೀಷಣಗೆ ಅಭಯವನಿತ್ತು ಶರಧಿಗೆ ಸೇತುವೆಯನ್ನು ಬಂಧಿಸಿ ಮುತ್ತಿ ಲಂಕಾಪುರವ ಸಂಧಿಗೆ ಅಂಗದನ ಕಳುಹಿಸಿದ ರಾಮಗೆ 37 ಇಂದ್ರ[ಜಿತ್ತು]ವೊಡನೆ ಕಾದಿ ಸರ್ಪಾಸ್ತ್ರದಿಂದ ಬಿಡಿಸಿಕೊಂಡು [ಆ]ದುರುಳ ರಾವಣನ ನಡುಗಿಸಿ ಕಿರೀಟವನು ಭಂಗಿಸಿದ ರಾಮಗೆ 38 ಕುಂಭಕರ್ಣನ ತುಂಡುತುಂಡಾಗಿ ಕೊಂದುಕೆಡಹಿದ ರಾಮಚಂದ್ರಗೆ 39 ಕೊಂದು ವಜ್ರದಂಷ್ಟ್ರ ಆಕಂಪ ದೇವಾಂತಕ ನರಾಂತಕರನ್ನು ಮ ಹೋದರ ಮಹಾಪಾಶ್ರ್ವ ಅತಿಕಾಯ ತ್ರಿಶಿರಸ್ಸನ್ನು ಕೊಂದ ರಾಮಗೆ 40 ಮಾಯೆಯುದ್ಧದಿ ಮೇಘನಾಥನು [ಅನುಜನ] ಬ್ರಹ್ಮಾಸ್ತ್ರದಲಿ ಕಟ್ಟಲು ವಾಯುನಂದನನಿಂದ ಸಂಜೀವನವ ತರಿಸಿದ ರಾಮಚಂದ್ರಗೆ 41 ಮಾಯಾಸೀತೆಯ ಶಿರವನರಿಯಲು ವಿಭೀಷಣನ ಉ ಪಾಯದಿಂದ ಇಂದ್ರಜಿತ್ತು ಶಿರವಕಡಿದ ತಮ್ಮನಾಲಂಗಿಸಿದ ರಾಮಗೆ 42 ಮೂಲಬಲವನು ಕಡಿದು ರಾವಣನೊಡನೆ ಯುದ್ಧವ ಯೋಚಿಸೆ ಕಡಿದ ರಾಮಗೆ 43 ರಾವಣಾನೆಂಬ ಗಂಧಹಸ್ತಿಯ ರಾಮಕೇಸರಿ ಬಂದು ಮುರಿಯಲು ಸುರರು ಶಿರದಿ ಧರಿಸಿದ ರಾಮಚಂದ್ರಗೆ 44 ವಿಭೀಷಣಗೆ ಪಟ್ಟವನು ಕಟ್ಟಿ ಸೀತೆಯೊಡನೆ ಪ್ರತಿಜ್ಞೆ ಮಾಡಿ ರೆ ಬ್ರಹ್ಮರುದ್ರಾದಿಗಳು ಸ್ತುತಿಸಲು ತಂದೆಗೆರಗಿದ ರಾಮಚಂದ್ರಗೆ 45 ಸೀತೆಯಂಕದೊಳಿಟ್ಟು ಕಪಿಗಳಸಹಿತ ಪುಷ್ಪಕವೇರಿ ಭರದಿ [ಬ ರುತ್ತ] ಭಾರದ್ವಾಜರಿಗೆರಗಿ ಭರತನ ಮನ್ನಿಸಿದ ರಾಮಗೆ 46 ಕೈಕೆಸುತ ಕೈಮುಗಿದು ಕಿಶೋರ ಭಾರವ ತಾಳಲಾಗದೆಂದಾ ಳುತ [ಲಾ]ಯಿತ್ತ ರಾಜ್ಯವನ್ನು ಕೊಡಲು ಗ್ರಹಿಸಿದ ರಾಮಚಂದ್ರಗೆ 47 ಉಟ್ಟ ಮಡಿಯ ಜಟೆಯನುತಾ ಶೋಧಿಸೆ ಸೀತೆ ಸಕಲಾಭರಣ ತೊಟ್ಟು ಸುಗ್ರೀವ ಸಕಲರೊಡನೆ ರಥವನೇರಿದ ರಾಮಚಂದ್ರಗೆ 48 ಸರಮೆಪತಿ ಸೌಮಿತ್ರಿ ಚಾಮರ ಪಿಡಿಯೆ ಶತ್ರುಘ್ನ ಛತ್ರಿಯನು ಭರತ ಸಾರಥ್ಯವನು ಮಾಡಲು ಪುರಕೆತೆರಳಿದ ರಾಮಚಂದ್ರಗೆ 49 ರಾಜಗೃಹವನು ತೋರಿ ರವಿಜಗೆ ಶರಧಿಯುದಕಗಳೆಲ್ಲ ತರಿಸಿ [ವಿ ರಾಜಿಸಿ] ಪೀಠದಿ ಸೀತೆಯೊಡನೆ ವೊಪ್ಪಿದಾ ರಘುರಾಮಚಂದ್ರಗೆ 50 ವಸಿಷ್ಠ ಮೊದಲಾದ ಸಪ್ತ ಋಷಿಗಳು ಲಕ್ಷ್ಮೀಪತಿಗಭಿಷೇಕ ಮಾಡಲು ರಾಮಚಂದ್ರಗೆ 51 ಪಾದ ಪಿಡಿದಿಹ ರಾಮಚಂದ್ರಗೆ
--------------
ಯದುಗಿರಿಯಮ್ಮ
ಏಳಯ್ಯ ರಾಕ್ಷಸಾಂತಕ ದನುಜಸಂಹಾರ ಪ ಏಳಯ್ಯ ರಾಜೀವನಯನ ನವನೀತಚೋರ ಏಳು ಲಕ್ಷ್ಮೀಮನೋಹರ ಹರಿಯೆ ಅ.ಪ ದಿನಪನುದಯಂಗೆಯ್ಯೆ ದಿಕ್ಪಾಲಕರ್ನೆರೆಯೆ ಕನಕಭೂಷಣದ ಕಾಂತೆಯರು ಆರತಿಪಿಡಿಯೆ ಅನುಪಮಗೆ ಜಯವೆಂದು ಬಂದು ನಿಂದೈದಾರೆ ಇನಕುಲನೆ ನಲಿದುಪ್ಪವಡಿಸು ಶ್ರೀಹರಿಯೇ 1 ಪ್ರಹ್ಲಾದ ನಾರದರು ವಾಸಿಷ್ಠ ವಿಶ್ವಾಮಿತ್ರರು ಮಹಮುನಿಗಳತ್ರಿ ಭಾರದ್ವಾಜ ಜಮದಗ್ನಿ ಗೌತಮರು ಬಹುವಿಧದಿ ಕಶ್ಯಪರು ಹನುಮಂತ ತುಂಬುರರು ಹರುಷದಿ ಪಾಡುತ್ತಲೈದಾರೆ ಇನಕುಲನೆ ನಲಿದು 2 ದೇವಗಂಗೆಯಕೊಂಡು ದೇವರ್ಕಳೈದಿದರು ದೇವತಾವಳಿ ಬಂದು ದೇವ ಜಯವೆನುತಿಹರು ದೇವಪುರದಲಿ ನಿಂದ ದೇವಕಿಯ ವರಕಂದ ದೇವ ಲಕ್ಷ್ಮೀಪತಿಯ ದೇವ ನೀನೇಳೈ ಹರಿಯೇ 3
--------------
ಕವಿ ಲಕ್ಷ್ಮೀಶ
ಕರಿಮುಖದ ಗಣಪತಿಯ ಚರಣಕ್ಕೆಯೆರಗಿ ಶಾರದೆಗೆ ಸೆರಗೊಡ್ಡಿ ವರವನು ವರವ ಬೇಡಿಕೊಂಡೆ ಸ್ಥಿರವಾದ ಭಕುತಿ ಕೊಡುಯೆಂದು 1 ವಾಯು ಬ್ರಹ್ಮ ಭಾರತಿಗೆ ಬಾಳ ಬೇಡಿಕೊಂಡ್ವೇ- ದವ್ಯಾಸರಿಗೆ ನಮೋಯೆಂಬೆ ನ- ಮೋಯೆಂದು ನಾರದರ ಪಾದಪದ್ಮಗಳಿಗೆರಗುವೆ 2 ಅತ್ರಿ ಅಂಗೀರಸ ವಸಿಷ್ಠಗೌತಮ ವಿಶ್ವಾ- ಮಿತ್ರ ಮಾರ್ಕಾಂಡೇಯ ಚ್ಯವನರು ಚ್ಯವನ ಭಾರದ್ವಾಜ ಬಕದಾಲ್ಭ್ಯರಿಗೆ ನಮಿಸುವೆ 3 ಪಂಡಿತ್ವಾಲ್ಮೀಕಿ ಕೌಂಡಿಣ್ಯ ಕೌಂಡಿಣ್ಯ ಅಗಸ್ತ್ಯಮುನಿ ಮರೀಚರಿಗೆ ನಾನು ನಮೋಯೆಂಬೆ4 ಶೇಷಗಿರಿವಾಸನ ಆಕಾಶನಳಿಯನೆ ವೆಂಕ- ಟೇಶ ನೀ ನಮ್ಮನೆ ದೈವ ಮನೆದೈ- ವ ಸಲಹೆನ್ನ ಪದ್ಮಾವತೀಶ ಪರಮಾತ್ಮ 5 ಮಂಗಳಾಂಗನೆ ನೀನು ಮಂಗಳಮಹಿಮನೆ ಮಂಗಳದೇವಿ ರಮಣನೆ ನೀನೆಮಗೆ ಜಯ ಮಂಗಳವ ಕೊಟ್ಟು ಸಲಹೆನ್ನ 6 ವಾಸುದೇವನೆ ನೀನು ವಾಸುಕಿಶಯನನೆ ವಾಸವಿಯ ರಥವ ನಡೆಸಿದೆ ನಡೆಸಿದಂಥ ಶ್ರೀನಿ- ವಾಸ ನೀನೆಮಗೆ ದಯಮಾಡು 7 ಎನ್ನಲ್ಲೆ ನೀನಿದ್ದು ನಿನ್ನಗುಣ ಬಹುರೂಪ- ವನ್ನು ತಿಳಿಸದಲೆ ಇರುವೋರೆ ಇರುವೋರೆ ನೀನು ಪ್ರ- ಸನ್ನನಾಗೆನಗೆ ದಯಮಾಡು 8 ಕಾಲ ಕಾಲಕೆ ನಿನ್ನ ನಾಮವನು ನಾಲಿಗೆ ಮ್ಯಾಲಿಟ್ಟು ನಿನ್ನ ನೆನೆವಂತೆ ನೆನೆವಂತೆ ಅನಿರುದ್ಧ 9 ಕಾಮಕ್ರೋಧವು ಮದ ಮಾತ್ಸರ್ಯ ಲೋಭಗಳು ಮೋಹ ಮಡುವಿನಲಿ ಮುಣುಗಿದೆ ಮುಣುಗಿದೆನೊ ಎನ್ನ ಕೈ ನೀನೆ ಪಿಡಿದೆತ್ತಿ ಕರೆದೊಯ್ಯೊ 10 ಐದು ಮಂದ್ಯೆನ್ನಲ್ಲಿ ಐದಾರೆ ಮಾರಾಯ ಬೈದರು ಬಿಡರೋ ಎನ್ನೀಗ ಎನ್ನೀಗ ಕಟ್ಟಿ ಕೊಂಡೊಯ್ದು ಹಾಕುವರೊ ಯಮನಲ್ಲಿ 11 ಆರು ಮಂದ್ಯರಿಗಳು ಕ್ರೂರ ಶತ್ರುಗಳುಂಟು ಘೋರಬಡಿಸುವರೊ ಅನುಗಾಲ ಅನುಗಾಲ ದುರ್ವಿಷಯ ತಾವೆನಗೆ ಕಲಿಸಿ ದಣಿಸೋರು 12 ಹತ್ತು ಮಂದಿ ಯೆನ್ನ ಸುತ್ತ ಮುತ್ತಿರುವರೊ ಕೂಪ ಭವದೊಳು ಭವದೊಳಗೆ ಬಳಲುವೆನು ಚಿತ್ತಕ್ಕೆ ತಂದು ದಯಮಾಡು 13 ಸಂಚಿತಾಗಾಮಿಗಳ ಮುಂಚೆ ದಹಿಸಿ ಈ ಪ್ರ- ಪಂಚವನು ಬಿಡಿಸೊ ಪರಮಾತ್ಮ ಪರಮಾತ್ಮ ನೀಯೆನ್ನ ವಂಚನಿಲ್ಲದಲೆ ಸಲಹೈಯ್ಯ 14 ಜ್ಞಾನ ಭಕ್ತಿ ಗಾನ ವೈರಾಗ್ಯ ಭಾಗ್ಯಗಳು ಜಾನಕಿರಮಣ ಜಗದೀಶ ಜಗದೀಶ ಜನಕನ ಜಾಮಾತ ನೀನೆ ತಿಳಿಸಯ್ಯ 15 ದ್ವಾಸುಪರುಣನಂತೆ ಈ ಶರೀರದೊಳಿದ್ದು ಏಸೇಸು ಜನ್ಮಕ್ಕಗಲದೆ ಅಗಲದಂತಿದ್ದು ಉ- ದಾಸೀನವ ಮಾಡೋದೊಳಿತಲ್ಲ 16 ಇಂದುಕುಲಜಾತ ನಿನ್ನೊ ್ಹಂದಿಕೊಂಡಿದ್ದು ಎಂದೆಂದಿಗು ಬಿಡದೆ ಗೆಳೆತನ ಗೆಳೆತನವಿದ್ದಲ್ಲಿ ಸಂದೇಹವ್ಯಾಕೊ ಸಲಹಲು 17 ಮುಕ್ತಿದಾಯಕ ನಿನ್ನ ಭಕ್ತರೇಸುಮಂದಿ ಹೆತ್ತಾಯಿಸುತರೇನವರೆಲ್ಲ ನಾ ಹುಟ್ಟಿದೆನೆ ಮತ್ತೆ ಮಲತಾಯಿ ಉದರದಿ 18 ಶ್ರೀಶನೆ ಕೇಳ್ ನಿನ್ನ ದಾಸರಂಗಳದಲ್ಲಿ ಬೀಸಿ ಬಿಸಾಕೊ ಎನ್ನನು ಎನ್ನ ಹರಿದಾಸರ ದಾಸತ್ವಯೆನಗೆ ಕೊಡಿಸಯ್ಯ 19 ಅಂಬರೀಷ್ವರದ ನಿನ್ನ ್ಹಂಬಲೆನಗಿರಲಯ್ಯ ಬಿಂಬ ಮೂರುತಿಯೆ ಬಿಡದೆನ್ನ ನಿನ್ನೂರಲ್ಲಿ ಇಂಬುಕೊಟ್ಟೆನ್ನ (ಅ)ಲ್ಲಿರಿಸಯ್ಯ 20 ಕಡಿದು ಹೊಡೆದು ಬಯ್ದು ಬಂದು ಕಾಲಿಂದೊದ್ದ- ರ್ಹಿಡಿಯದೆ ಅವರ ಅಪರಾಧ ಅಪರಾಧವೆಣಿಸದಿರೆ ನಡೆದರೊ ನಿನ್ನ ಪುರಕಾಗ 21 ಪುಟ್ಟ ಪ್ರಹ್ಲಾದ ಧ್ರುವ ಕೊಟ್ಟರೆಷ್ಟು ಭಾಗ್ಯ ಕಷ್ಟಕ್ಕೆ ಬಂದು ಒದಗಿದೆ ಒದಗಿ ಬಂದವರ ಆಪತ್ತು ಬಂಧನ ಬಿಡಿಸಿದೆ 22 ತನ್ನ ಮಗನ ಕರೆಯೆ ಎನ್ನ ಕರೆದನೆಂದು ನಿನ್ನ ದೂತರನು ಕಳಿಸಿದೆ ಕಳಿಸಿದ್ಯಜಮಿಳಗೆ ಮನ್ನಿಸಿ ಕೊಟ್ಟ್ಯೊ ನಿನಲೋಕ 23 ತಿರುಕ ತಂದವಲಕ್ಕಿ ಕರಕÀರನೆ ನೀಮುಕ್ಕಿ ದೊರೆತನವ ಕೊಟ್ಟು ದಾರಿದ್ರ್ಯ ದಾರಿದ್ರ್ಯ ಕಳೆದದ್ದು ಅರಿಕಿಲ್ಲವೇನೊ ಜನಕೆಲ್ಲ 24 ನಿಲ್ಲಬೇಕೆಂದಿಟ್ಟಿಕಲ್ಲು ಕೊಟ್ಟವಗೆ ಕೈ- ವಲ್ಯವನು ಕೊಟ್ಟ್ಯೋ ಕರುಣಾಳು ಕರುಣಾಳು ಬುಕ್ಕಿ ್ಹಟ್ಟು ಮಲ್ಲಿಗೆಯ ಮಾಲೆಗೊಲಿತೀಯೊ 25 ಕರೆದು ಕಂಸಗೆ ಕೊಟ್ಟು ಕೊಲಿಸಬಂದ- ಕ್ರೂರ(ಗೆ) ನದಿಯಲ್ಲೆ ನಿನ್ನ ನಿಜರೂಪ ನಿಜರೂಪ ತೋರಿದ್ದು ಇದುಯೇನು ನಿನ್ನ ಮಹಿಮೆಯು 26 ಗಂಧಕ್ಕೆ ಒಲಿದು ಕುಬ್ಜೆಯ ಡೊಂಕನೆ ತಿದ್ದಿ ಸುಂದರಿಯ ಮಾಡಿ ಸುಗುಣನೆ ಸುಗುಣನೆ ನೀನಾಕೆ- ಯಂಗಸಂಗ್ಯಾಕೆ ಬಯಸಿದಿ 27 ಕಲ್ಲಾದಹಲ್ಯೆಯನು ಕಡು ಚೆಲ್ವೆಯನು ಮಾಡಿ ಎಲ್ಲಿ ಮಲಗಿದ್ದ ಮುಚುಕುಂದ ಮುಚುಕಂದನ ಗುಹೆ- ಕೈವಲ್ಯ ಕೊಡಹೋದ್ಯೊ 28 ಮಗ್ಗವನೆ ಹಾಕಿ ಮಾರುಬಟ್ಟೆ ನೇದಿಲ್ಲ ರೊಕ್ಕವನೆ ಕೊಟ್ಟು ತರಲಿಲ್ಲ ತರಲಿಲ್ಲ ದ್ರೌಪದಿಗೆ
--------------
ಹರಪನಹಳ್ಳಿಭೀಮವ್ವ
ಪದಯುಗಳಂ ಪ ರಾಮಸುಂದರ ಘನ ಶ್ಯಾಮರಘೂದ್ವಹ ಅ.ಪ. ದಶರಥ ಹೃದಯಾನಂದಕರಂ ತ್ರಿದಶಗಣಚಿತ್ತಾಮೋದಕರಂ 1 ಪೂರಿತ ಕೌಶಿಕಯಜನಂ ಸಂತಾರಿತಗೌತಮ ಲಲನಾಂ 2 ಖಂಡಿತ ಶಂಕರ ಚಾಪಂ ಪರಿ-ದಂಡಿತ ಭಾರ್ಗವ ಕೋಪಂ 3 ಪಾತಕ ನಿಚಯಂ 4 ಮುನಿಜನ ಸ್ತುತಿರಚನಂ5 ಭಾರದ್ವಾಜಾರ್ಪಿತ ಭೋಜ್ಯಂ 6 ಉದ್ದಂಡ ವಿರಾಧಪಾತಕ ಹರಣಂ 7 ನಿರ್ಜಿತರಾಕ್ಷಸಷಂಡಂ8 ಧೃತಜಗದುಲ್ಲಾಸಂ 9 ವಿವಿಧಾಯುಧಜಾಲಂ 10 ಶೂರ್ಪನಖಾಂಗಂ 11 ನರವರಮುನಿಗಣ ಪರಿಪಾಲಂ12 ಮಾಯಾಮೃಗಾರ್ಪಿತ ಬಾಣವರಂ- ಜಟಾಯುಸಂಪಾದಿತ ಲೋಕವರಂ 13 ರಾವಣಹೃತ ನಿಜ ಪತ್ನೀಕಂ ಲೋಕಾವನಗತ ಕೋಪೋದ್ರೇಕಂ 14 ಬಂಧನ ಮೋಚನ ಚತುರಂ 15 ವಾತತನೂಭವ ಕೃತಸ್ತೋತ್ರಂ-ಪಂಪಾತಟಿನಿರ್ಮಿತ ಸುಕ್ಷೇತ್ರಂ16 ಶಿಕ್ಷಿತ ಸಂಕ್ರಂದನ ತನುಜಂ-ಸಂರಕ್ಷಿತ ಚಂಡ ಕಿರಣ ತನುಜಂ17 ಸೀತಾಲೋಕನ ಕೃತಕಾಮಂ-ನಿಜಧೂತಾಮೋದನ ಸುಪ್ರೇಮಂ18 ಯವನಾಲಯ ಪರಿವಾರಂ19 ಧೂತಾಹೃತ ಶುಭದೃಷ್ಟಾಂತಂ-ವಿಜ್ಞಾತನಿಜಸ್ತ್ರೀ ವೃತ್ತಾಂತಂ20 ಭೀಷಣ ಜಲನಿಧಿ ಬಂಧಕರಂ-ವಿಭೀಷಣ ಸಂರಕ್ಷಣ ಚತುರಂ21 ಶೋಷಿತ ರಾವಣ ಜಲದಿಂ-ಸಂತೋಷಿತ ದೈವತ ಪರಿಧಿಂ22 ಪಾತಕ ನಿಜ ನಾಮಾಂಕಂ 23 ಸ್ವೀಕೃತ ಸಾಕೇತವಾಸಂ-ಅಂಗೀಕೃತ ಮಾನುಷ್ಯ ವಿಲಾಸಂ24 ವಿಠಲಮತಿಶಯರುಚಿರಂ25
--------------
ಸರಗೂರು ವೆಂಕಟವರದಾರ್ಯರು
ಪುಣ್ಯ ಕ್ಷೇತ್ರವ ಸ್ಮರಿಸಿ ಧನ್ಯರಾಗಿರೋ ಪ ನಿಮ್ಮ | ಮುನ್ನೆ ಮಿಕ್ಕಾದಘ ಮಹ ಅನ್ಯಾಯ ಅಳಿದು ಅನು ಕಾರುಣ್ಯನಿಧಿ ಹರಿ ಒಲಿವಾ ಅ.ಪ. ಕ್ಷೇತ್ರ ಮಧುರೆ ಗೋಕುಲ ವೃಂದಾವನ ನಾಸಿಕ ತ್ರಿಯಂಬಕ ಮುದ್ಗಲಕ್ಷೇತ್ರ ಪರಾಶರ ಮಗನಾಶ್ರಮ ವಾರಣಾಸಿ ಭಾರದ್ವಾಜ ಕ್ಷೇತ್ರ ಅರುಣಾಚಲ ದರ್ಭಶಯನ ಮಧ್ಯಾರ್ಜುನ 1 ಸುಂದರ ಸಿಲಾಚಯ ಜಂಬುಕೇಶ್ವರ ಮಹಾನಂದಿ ಚಿದಂಬರ ವೀರ ರಾಘವ ದೇವ ಸ್ಕಂದ ನಿಬ್ಬಣಸ್ವಾಮಿ ಕಾರ್ತಿಕ ಖಗಶೇಷ ನಂದ ಯೇಕಾಂಬರೇಶ ಮಂದಾಕಿನಿ ಇಪ್ಪ ಸಾಗರ ಯಯಾತಿಗಿರಿ ಒಂದೊಂದು ಕೋಟೀಶ್ವರಾ 2 ಸಿರಿ ದ್ವಾರಕಾ ಸಿಂಹಾದ್ರಿ ನೀಲಕಂಠನಿಧಿ ವೀರ ನಾರಾಯಣವೋ ಕೇದಾರ ಕುರುಕ್ಷೇತ್ರ ಪುಷ್ಕರ ಕ್ಷೇತ್ರ ಮಾರಕಾಪುರಿ ಚನ್ನಾ 3 ಉದ್ಭವ ಆದಿ ಅನಂತ ಬಲಕ್ಷೇತ್ರ ಪುಂಡರೀಕಾಕ್ಷ ಸುಧಿಯೆಂದು ಕನ್ಯಾಕುಮಾರಿ ಮುದದಿ ಮಹಂಕಾಳಿ ಹಸ್ತಿಪಳಿನಾಥ ಪದ ಮುರಳಿ ತ್ರಿವಿಕ್ರಮ 4 ಕೂರ್ಮ ನೆಲ್ಲನಪ ಧರಣೀಧರ ಚಾಪವಾಣಿ ಕ್ಷೇತ್ರ ಶ್ರೀನಿವಾಸನೆದ ನಿಧಿ ಗೌರೀ ಮನೋಹರ 5 ಶಂಕರನ ಕ್ಷೇತ್ರ ಗೋಗರ್ಭ ಶೇತುವನ ಗಜಾರಣ್ಯ ಓಂಕಾರನಾಥ ದೇವಾ ವೇದಿ ಗೋಪಾಲನಿಧಿ ಅಲಂಕಾರ ಮುಕ್ತಿ ಕ್ಷೇತ್ರ 6 ಮಳೂರಪ್ರಮೇಯ ಶಿವಾ ಅಂತಕನಗೆ ದ್ವಾಪುರತೀರ್ಥ ನಿವರ್ತಿ ಅಂತು ಆದಿಶ್ರೀರಂಗ ನೀಲಾರಣ್ಯ ರಾಜವನ ನೈಮಿಷ ಭೋಕ್ತ 7 ಅಂದದಲಿಯಿಪ್ಪ ನಿಧಿ ಮಾಧವಸ್ವಾಮಿ ಮೇಲು ಘಟಿಕಾಚಲ ಬದರಿ ನರಸಿಂಹ ರವಿಸೇತು ಗಣ ಮುಕ್ತೇಶ್ವರ ಕಾಲದೂತ ಗೆದ್ದ ಕ್ಷೇತ್ರ ಭವಾನಿಗುಡಿ ವ್ಯಾಳನಿಧಿ ಮಹಾಲಕುಮಿ ರಘುನಾಥ ಶಿವಗಂಗೆ ಬಾಲಕೃಷ್ಣ ಕ್ಷೇತ್ರ ಕರವೀರ ಪುರ ವಿಶಾಲ ವಿಹಂಗಕ್ಷೇತ್ರ 8 ಪೇಳಿದುದಕ್ಕೆ ಆರಿಗೆ ಅಳವಲ್ಲ ನೆನಸೋದು ಮಾನವರು ಮೀಸಲಾಮನದಲ್ಲಿ ಅನಂತ ಜನುಮದ ದೋಷ ವಿ- ಪಾಲಿಸುವ ಕುಲಕೋಟಿಗಳ9
--------------
ವಿಜಯದಾಸ
ಪ್ರಾಣ ನಿನ್ನಂಘ್ರಿ ಸಿರಿರೇಣು ಕಾಣು ಯೋನಿಯಲಿ ಬಂದೆ ನೊಂದೆ ಗುರುವೆ ನೀನೆ ಗತಿಯೊ ಪ ಭರತ ಭಾರತಿರಮಣ ಭಾರತ ಪ್ರತಿಪಾದ್ಯ ಭರದಿಂದಲಿ ಎನ್ನಭಾರ ವಹಿಸುವ ಭರಣ ಭಾರದ್ವಾಜಾತ್ಮಜ ಭಾರಭಂಗಾ 1 ಗತಿ ಅಗತಿ ಗಮನಗರ್ಭ ಸ್ವರ್ಗ ನರಕ ಈ ಕ್ಷಿತಿ ಲೋಕಾಂತದಲ್ಲಿ ಬಳಲಿ ಮತಿಯ ಕಾಣದೇ ಮಂತ್ರಿ ರಾಜ ಮಹಾತತುವೇಶ ಬಲವತ್ವ್ಸರೂಪ2 ಪಂಚಾಹುತಿಯಲಿ ಹಾಕದಿರೋ ಜೀವೇಶ ಸಂಚಿತಾವಳಿ ಸರ್ವನಾಶಾ ಪಂಚದ್ವಾರದಲಿ ಶ್ರೀ ಹರಿಯ ಪೂಜಿಪ ಪುಣ್ಯ ಸಂಚಕನೆ ಪುರುಷಾಕಾರನೀಯೋ 3 ಅಪೂಪ ಬಹುರೂಪ ಹರಿಚಾಪ ಪ್ರತಾಪ ಕಪಿಕುಲಾಂಬುಜ ದಿನಪ ಸುರಪ ರಿಪು ವಿಪಿನಕಾಲ ಮಹಾ ಗುಪುತ ವ್ಯಾಪ್ತ ಸುಪ್ತಿ ಸ್ವಪನ ಜಾಗೃತಕಾರ್ಯಫಲದಾ4 ರಾಜಿಸುವ ರಾಗವಿದೂರಾ ವಾಜಿರೂಪ ವಾಶಿಷ್ಟ ವಂದ್ಯಾ ವರದಾ ಮಜ್ಜಗದ್ಗುರು ಮುಖ್ಯ ಪ್ರಾಣಾ 5 ಪೂರ್ವೋತ್ತರಂಗ ಸಂಧಿ ಸಂಧಾನ ವಿಶಿಷ್ಟಾ ಈರ್ವ ಸ್ಥಾನದಲಿ ನೀನೇ ಸರ್ವದಲಿ ಧ್ಯಾನವನು ಇತ್ತು ಪಾಲಿಸು ನಿತ್ಯ ಮೂರ್ತಿ 6 ಮಾನವ ರೂಪಾ ಮಾನಾಭಿಮಾನಿಗಳೊಡಿಯಾ ಆನಂದತೀರ್ಥಪದ ಭಕ್ತ ಅನಾಥಬಂಧು ವೈರಾಗ್ಯ 7 ಸಮಸ್ತ ಪರಮಾಣು ತಿಳಿಸೋ ಸಾಮ ಸೂರ್ಯಸ್ಥಿತನೆ ಸೂತ್ರಾ8 ಇಪ್ಪತ್ತೆರಡು ಸ್ಥಾನದಲಿ ಪ್ರಭುವೆ ಜಗ ದಪ್ಪ ಚತುರದ್ವಾರವಾಸ ಅಪ್ರತಿಮಲ್ಲ ಶ್ರೀ ವಿಜಯವಿಠ್ಠಲನ್ನ ಅಪ್ಪಿಕೊಂಡು ಮೆರೆದ ಧೀರಾ 9
--------------
ವಿಜಯದಾಸ
ಬಂದಾ ಗೋವಿಂದನು ಗೋಕುಲದಿಂದ ಆನಂದ ಮುಕುಂದನು ಪ ಅಂದಿಗೆ ಕಿರುಗೆಜ್ಜೆಯು ಘಲುಘಲುರೆನೆ ಮಂದಹಾಸನಗೆಯಿಂದಲಿ ಶ್ರೀಹರಿ ಅ.ಪ ಕರದಿ ಕಂಕಣ ವಂಕಿಯು ಹೊಳೆಯುತಲಿ ಸಿರದಿ ಕಿರೀಟ ಮುಂ- ಗುರುಳು ಮುಖ ಬೆವರಿನ ಹೊಸ ಕಾಂತಿಯಲಿ ಬೆರಳುಗಳಲಿ ಉಂಗುರ ಥಳಥಳಥಳ ಹೊಳೆಯುವ ಸೊಬಗಿನಲಿ ಕೊರಳೊಳು ಸರಿಗಿಯ ಸರ ಪರಿ ಸರ ಪದಕಗಳ್ಹೊಳೆಯುತಲಿ ಜರಿ ಪೀತಾಂಬರದ ನಡುವಿಲಿ ಕಿರು ಗೆಜ್ಜೆಗಳ್ಹೊಳೆಯುತಲಿ ತರುತುರು ತರುಣೇರು ಮರುಳಾಗುವ ತೆರ ಪರಿಪರಿ ರಾಗದಿ ಮುರಳಿಯ ನುಡಿಸಲು ಸುರರು ಪುಷ್ಪ ವೃಷ್ಟಿಯ ಸುರಿಸುತಲಿರೆ ತುರುಕರು ಮಧ್ಯದಿ ಪೊಳೆವೊ ಚಂದ್ರಮನಂತೆ1 ತುಂಬುರು ನಾರದರೆಲ್ಲರು ಕೂಡಿ ಅಂಬರದಲಿ ನೆರೆದರು ಗಂಧರ್ವಪ್ಸರ ಸ್ತ್ರೀಯರು ಕುಣಿದಾಡಿ ಪರಮಾತ್ಮನ ಸ್ತುತಿಸುತ ರಂಭೆ ಊರ್ವಶಿ ಮೇನಕೆಯರು ಕೂಡಿ ಆನಂದದಿ ನರ್ತಿಸೆ ಇಂದಿರೆ ರಮಣನ ಗುಣಗಳ ಪಾಡಿ ಅಂಬರದಲಿ ದೇವ ದುಂದುಭಿಗಳು ಮೊಳಗಲು ಕಂದರ್ಪನ ಪಿತ ಕರುಣದಿ ಭಕುತರ ಚಂದದಿ ದುರ್ಮತಿ ನಾಮ ವತ್ಸರದಲಿ ಕುಂದಿಲ್ಲದೆ ಸಲಹುವೆನೆನುತಲಿ ತ್ವರ 2 ಸೃಷ್ಟಿಗೀಶನ ಗುಣಗಳ ಪಾಡುತಲಿ ವ- ಶಿಷ್ಠರು ವಿಶ್ವಾಮಿತ್ರ ಕಶ್ಯಪ ಭಾರದ್ವಾಜ ಮುನಿಗಳು ದೇವೇಶನ ಸ್ತುತಿಸುತ ಅತ್ರಿ ಜಮದಗ್ನಿ ಜಾಬಾಲಿಗಳು ಶ್ರೀಕೃಷ್ಣನೆ ಪರನೆಂದು- ತ್ತಮ ಋಷಿಗಳು ಪೊಗಳುತಲಿರಲು ಪರಮೇಷ್ಠಿ ಪಿತನ ತ- ನ್ನಿಷ್ಟ ಭಕುತರನು ಸಲಹಲು ಕಂಕಣ ಕಟ್ಟಿಹ ಕಮಲನಾಭವಿಠ್ಠಲ ತ್ವರ ಶಿಷ್ಟರ ಸಲಹಲು ಸರಸರ ಓಡುತ 3
--------------
ನಿಡಗುರುಕಿ ಜೀವೂಬಾಯಿ
ಬೆಳಗಾಯಿತು ಏಳಿ ಪಾದ ನಳಿನ ಸೇವಕರು ಪ ಉದಯ ಕಾಲದೊಳೆದ್ದು ಹೃದಯ ನಿರ್ಮಲರಾಗಿ ಮಧುಸೂದನನ ಪಾಡಿ ಸ್ತುತಿಸುತಲಿ ಮುದದಿಂದ ಮಾಧವನ ವಿಧವಿಧದಿ ಪೂಜಿಸಿ ಪದುಮನಾಭನ ಪಾಡಿ ಪೊಗಳುವ ಜನರು 1 ರಂಗನ ಮಹಾದ್ವಾರದ ಮುಂದೆ ಕಾಣುವ ಗಜ ಸಾಲುಗಳ ನೋಡುತ ಬಂಗಾರ ಕೋಡುಳ್ಳ ಗೋವ್ಗಳಿಗೆರಗುತ್ತ ಅಂಗಜ ಜನಕನ ಪಾಡಿ ಪೊಗಳುವರು2 ರಂಭೆ ಊರ್ವಶಿ ಮೇನಕೆಯರೆಲ್ಲರು ಕೂಡಿ ಸಂಭ್ರಮದಲಿ ನಾಟ್ಯವಾಡುತಿರೆ ಗಂಗೆ ಗೋದಾವರಿ ಕೃಷ್ಣ ತುಂಗಭದ್ರೆ ಯಮುನೆಯರು ಇಂಬಿಲ್ಲದೆ ಪಾಡುತಿಹರೊ ಶ್ರೀ ಹರಿಯ 3 ಅತ್ರಿ ವಸಿಷ್ಠ ಗೌತಮ ಭಾರದ್ವಾಜರು ಅರ್ಥಿಯಲ್ಲಿ ಜಮದಗ್ನಿ ಋಷಿಗಳೆಲ್ಲ ಸ್ತೋತ್ರಮಾಡುತ ಪುರುಷೋತ್ತಮನನು ಪಾಡಿ ವಿಶ್ವಾಮಿತ್ರರು ಬಹು ಭಕ್ತಿಯಲಿ 4 ಸುತ್ತ ಸನಕಾದಿ ನಾರದರೆಲ್ಲ ಪಾಡಲು ನೃತ್ಯಗಾಯನದಿಂದ ಶ್ರೀ ಕೃಷ್ಣನ ಅರ್ತಿಯಿಂದ ಅಜಭವ ಸುರರೆಲ್ಲ ಸ್ತುತಿಸಲು ಸ್ತೋತ್ರಮಾಡಲು ದುರ್ಗದೇವಿಯರು5 ಗಜರಾಜ ಗೋಮಾತೆ ಮೊದಲಾದವರು ಬಂದು ಮಧುಸೂದನನ ನೋಡೆ ನಿಂತಿಹರು ಮದಗಜಗÀಮನೇರು ಮುದದಿ ಕಲಶ ಕನ್ನಡಿಗಳ ಪಿಡಿದು ನಿಂತಿಹರು ಬೇಗದಲಿ 6 ಮುತ್ತಿನ ಕದಗಳು ತೆಗೆವ ವ್ಯಾಳ್ಯದಲಿ ನೌಬತ್ತು ನಗಾರಿ ವಾದ್ಯಗಳಾಗಲು ಸಪರ್Àನ್ಹಾಸಿಕೆಯಲ್ಲಿ ಮಲಗಿರುವ ದೇವನ ಅರ್ಥಿವೈಭವ ನೋಡೊ ವೇಳೆ ಮೀರುವದು7 ಗಂಗಾಜನಕನ ಚರಣಂಗಳು ನೋಡುವ ಬಂಗಾರ ಕಿರುಗಂಟೆಗಳ ನಡುವನು ನೋಡುವ ರಂಗು ಕೇಸರಿಯ ಪೀತಾಂಬರ ನೋಡುವ ಶೃಂಗಾರ ವೈಜಯಂತಿಯ ನೋಡುವ 8 ವಕ್ಷ ಸ್ಥಳದಲ್ಲಿ ಶ್ರೀ ಲಕ್ಷ್ಮಿಯ ನೋಡುವ ಹಸ್ತದ ಆಭರಣಂಗಳ ನೋಡುವ ಮುತ್ತಿನ ಭುಜ ಕೀರ್ತಿ ರತ್ನದ್ಹಾರಗಳಿಂದ ಒಪ್ಪುವ ಉರದಿ ಶ್ರೀವತ್ಸನ ಸ್ತುತಿಸೆ 9 ಕೋಟಿ ಸೂರ್ಯರ ಕಾಂತಿ ಸೋಲಿಪ ನಗುಮುಖ ಲಲಾಟದಿ ಕಸ್ತುರಿ ತಿಲಕ ಒಪ್ಪಿರಲು ಮಾಟದ ಕರ್ಣಕುಂಡಲಗಳು ಹೊಳೆಯುತ್ತ ನೋಟದಿ ಜಗವ ಮೋಹಿಪ ದೇವನನು ನೋಡೆ10 ಅಂದದ ಮುಗುಳು ನಗೆಯು ದಂತ ಪಂಙÉ್ತಯು ಪಾದ ಕದಪುಗಳಂದವು ಇಂದ್ರ ನೀಲದಮಣಿ ಖಚಿತ ಕಿರೀಟದ ಮಂದಹಾಸದ ನಗೆÀಮುಖ ನೋಡುವ 11 ಕಡೆಗಣ್ಣ ನೋಟದಿ ಜಗವ ಸೃಷ್ಟಿಪದೇವ ಖಗವಾಹನನು ಸಂರಕ್ಷಿಪ ಲೋಕವ ಅಗಣಿತ ಮಹಿಮ ಅತಿಶಯದಿ ಲಯವ ಮಾಳ್ಪ ಸುಗುಣ ಸುಂದರನ ಗುಣ ಪೊಗಳುವ ಜನರು12 ನಿಖಿಳ ವ್ಯಾಪಕ ಕೃಷ್ಣ ಶುಕಮುನಿ ವಂದಿತ ದಿವ್ಯ ಚರಣನ ರುಕುಮಿಣಿ ಅರಸನ ಭಕುತರ ಪೋಷನ ಸಖ್ಯದಿಂದ ಪ್ರಿಯನ ನೋಡುವ ಸುಜನರು13 ಅನಿರುದ್ಧ ದೇವ ಶ್ರೀ ಪ್ರದ್ಯುಮ್ನ ಮೂರ್ತಿಯ ಸಂಕರುಷಣ ವಾಸುದೇವೇಶನ ನವನೀತ ಚೋರನ ನಾರಾಯಣನ ನಾಮ ಸ್ಮರಿಸುವ ಸುಜನರು 14 ಕವಿಜನ ಪ್ರಿಯನ ಕಮನೀಯ ರೂಪನ ಕಮಲನಾಭವಿಠ್ಠಲನ ಪಾಡುವ ಕಮಲಸಖನ ಸೋಲಿಸುವ ಮುಖಕಾಂತಿಯಕಮಲಾಕ್ಷಿಯರಸನ ಪೊಗಳುವ ಸುಜನರು15
--------------
ನಿಡಗುರುಕಿ ಜೀವೂಬಾಯಿ
ರಾಮಭಜೇ ತೇ ಪದಯುಗಳಂ ಸೀತಾ ಪ ರಾಮಭಜೇ ತೇ ಪದಯುಗಳಂ ರಾಮ ಸುಂದರ ಘನಶ್ಯಾಮ ರಘೂದ್ವಹ ಅ.ಪ ದಶರಥ ಹೃದಯಾನಂದಕರಂ ತ್ರಿ ದಶಗಣ ಚಿತ್ತಾಮೋದಕರಂ 1 ಪೂರಿತ ಕೌಶಿಕಜನಂ ಸಂ ತಾರಿತ ಗೌತಮ ಲಲನಾಂ 2 ಖಂಡಿತ ಶಂಕರಚಾಪಂ ಪರಿ- ದಂಡಿತ ಭಾರ್ಗವ ಕೋಪಂ 3 ಸ್ವೀಕೃತ ಜಾನಕೀಹೃದಯಂ ದೂ ರೀಕೃತ ಪಾತಕನಿಚಯಂ 4 ಪಾಲಿತ ಮಾತಾಪಿತೃ ವಚನಂ ಸಂ ಲಾಲಿತ ಮುನಿಜನ ಸ್ತುತಿರಚನಂ 5 ಭರತ ಸಮರ್ಪಿತ ನಿಜರಾಜ್ಯಂ ಮುನಿ ವರಭಾರದ್ವಾಜಾರ್ಪಿತ ಭೋಜ್ಯಂ 6 ದಂಡಕಾರಣ್ಯಂ ಪಾವನಚರಣಂ ಉ- ದ್ದಂಡ ವಿರಾಧಾ ಪಾತಕಹರಣಂ 7 ಕುಂಭಜಾರ್ಪಿತ ಶರಕೋದಂಡ ಸಂ ರಂಭ ನಿರ್ಜಿತ ರಾಕ್ಷಸದಂಡಂ 8 ಪಂಚವಟೀತಟ ಕೃತವಾಸಂ ದೃ ಗಂಚಲ ಧೃತಗಜದುಲ್ಲಾಸಂ 9 ಶೂರ್ಪನಖೀ ವಚನಾಲೋಲಂ ಸಹ ಜಾರ್ಪಿತ ವಿವಿಧಾಯುಧ ಜಾಲಂ 10 ರೂಪನಿರ್ಜಿತ ಸುಮಬಾಣಾಂಗಂ ವಿ ರೂಪಿತ ದುಷ್ಟ ಶೂರ್ಪನಖಾಂಗಂ 11 ಖರತರ ಖರದೂಷಣಕಾಲಂ ಸುರ ನರವರ ಮುನಿಗಣ ಪರಿಪಾಲಂ 12 ಮಾಯಾಮೃಗಾರ್ಪಿತ ಬಾಣವರಂ ಜ- ಟಾಯು ಸಂಪಾದಿತ ಲೋಕವರಂ13 ರಾವಣಹೃತ ನಿಜಪತ್ನೀಕಂ ಲೋ- ಕಾವನಗತ ಕೋಪೋದ್ರೇಕಂ14 ಸಾಧಿತ ಶಬರೀ ಮೋಕ್ಷಕರಂ ಕ- ಬಂಧ ಬಂಧನ ಮೋಚನ ಚತುರಂ 15 ವಾತ ತನೂಭವ ಕೃತಸ್ತೋತ್ರಂ ಪಂ ಪಾತಟ ನಿರ್ಮಿತ ಸುಕ್ಷೇತ್ರಂ 16 ಶಿಕ್ಷಿತ ಸಂಕ್ರಂದನ ತನುಜಂ ಸಂ- ರಕ್ಷಿತ ಚಂಡಕಿರಣ ತನುಜಂ 17 ಸೀತಾಲೋಕನ ಕೃತಕಾಮಂ ನಿಜ ದೂತಾಮೋದನ ಸುಪ್ರೇಮಂ 18 ನಿಜಕರ ಭೂಷಣ ದಾತಾರಂ ಧುರ ವಿಜಯ ವನಾಲಯ ಪರಿವಾರಂ 19 ಧೂತಾಹೃತ ಶುಭದೃಷ್ಟಾಂತಂ ವಿ- ಜ್ಞಾತ ನಿಜಸ್ತ್ರೀ ವೃತ್ತಾಂತಂ 20 ಭೀಷಣ ಜಲನಿಧಿ ಬಂಧಕರಂ ವಿ ಭೀಷಣ ಸಂರಕ್ಷಣ ಚತುರಂ21 ಶೋಷಿತ ರಾವಣ ಜಲಧಿಂ ಸಂ- ತೋಷಿತ ದೈವತಪರಿಧಿಂ 22 ಸೀತಾ ಸಮಾಶ್ರಿತ ವಾಮಾಂಕಂ ಪರಿ- ಪಾತಕ ನಿಜನಾಮಾಂಕಂ 23 ಸ್ವೀಕೃತ ಸಾಕೇತಾವಾಸಂ ಅಂ- ಗೀಕೃತ ಮಾನುಷವಿಲಾಸಂ 24 ವರವ್ಯಾಘ್ರ ಪ್ರಭೂಧರ ಕಲ್ಪತರುಂ ಶ್ರೀ ವರದವಿಠಲಮತಿಶಯ ರುಚಿರಂ 25
--------------
ವೆಂಕಟವರದಾರ್ಯರು
ಶ್ರೀಮತ್ಕಾಂಚನ ಕೋಟಿರನ್ನತನಯಾ | ಕ್ಷೀರಾಂಬುನಿಧಿ ಮಧ್ಯದಿ | ನೇಮದಿಂ ನಿಜಧಾಮದಲ್ಲಿ ರಮೆಯಾ | ಒಡಗೂಡಿ ಸುರಸಿದ್ಧದೀ | ಸಾಮಗಾಯನ ಪ್ರಿಯನಾಗಿನಿರುತಾ | ಪಾಲಿಪ ಲೋಕಂಗಳಂ | ಮಾಧವ ದಯಾನಿಧೇ ವಧುವರಾ | ಕುರ್ಯಾತ್ಸದಾ ಮಂಗಳಂ | 1 ಭಾನುಕೋಟಿಯ ತೇಜದಿಂ ಬೆಳಗುವಾ | ಮುಕಟವು ಮಸ್ತಕದಿ | ಶ್ರೀ ನೀಲಾಳಕ ಭಾಲಮಧ್ಯಮೆರೆವಾ | ಕೇಶರ ಪೌಂಡ್ರಕದಿ | ಸೂನಾಸಿಕದಿ ವಾರಜಾಕ್ಷಅಧರಿಂ | ದೊಪ್ಪುವ ಕರ್ಣಂಗಳಂ | ತಾನೀಕುಂಡಲ ಭೂಷಣಾ ವಧುವರಾ | ಕುರ್ಯಾತ್ಸದಾ ಮಂಗಳಂ 2 ಶ್ರೀ ಲಕ್ಷ್ಮೀ ನಿಜಶಾರದಾಗಿರಿಸುತೇ | ಭಾರತೀ - ಶಚಿ- ಭಾಮಿನೀ | ಕಾಲಿಂದೀವರ ನರ್ಮದಾ ಸರಸ್ವತೀ | ಗಂಗಾ ತ್ರಿಪಥಗಾಮಿನೀ | ಪಾಲಿಸುವ ಗೋದಾವರೀ ಭೀಮರಥೀ | ಶ್ರೀ ಕೃಷ್ಣ ವೇಣಿಂಗಳಂ | ಮೇಲೆ ಕಾವೇರಿತುಂಗೆ ತಾವಧುವರಾ | ಕುರ್ಯಾತ್ಸದಾ ಮಂಗಳಂ 3 ವಾರಿಜಾಸನ ವಾಯು ಶಂಕರಗುರು | ತ್ವಂಹೇಂದ್ರ ವಸಿಷ್ಠನು | ಭಾರದ್ವಾಜ ಪರಾಶರಾತ್ರಿ ಭೃಗು ಕ- ಶ್ಯಪ ಕೌಶಿಕ ಶ್ರೇಷ್ಠನು | ಕಾರುಣೀ ಜಮದಗ್ನಿ ರಾಮ ಮರಿಚೀ | ವ್ಯಾಸಾದಿ ಋಷಿ ಪುಂಗಳಂ | ನಾರದಾದಿ ಮುನೀಂದ್ರರೀ ವಧುವರಾ | ಕುರ್ಯಾತ್ಸದಾ ಮಂಗಳಂ 4 ಇಂದ್ರೋವಹ್ನಿ ಪಿತೃಪತಿ - ನಿಋಋತಿ | ಮಕರೇಶ ಪ್ರಭಂಜನಾ | ಸಾಂದ್ರೈಶ್ವರ್ಯ ಕುಬೇರ ಈಶದಿಕ್ಪಾ ಲಾದಿತ್ಯಶಶಿರಂಜನಾ | ಚಂದ್ರಾತ್ಮಜನುಭೌಮದೇವಗುರುತಾ | ಕವಿಮಂದ ಗ್ರಹಂಗಳಂ | ಸಾಂದ್ರಾಗೀಹ ಸಮಸ್ತಗಿರೀ ವಧುವರಾ | ಕುರ್ಯಾತ್ಸದಾ ಮಂಗಳಂ 5 ಶ್ರೀ ಮತ್ಸ್ಯಾಕೃತಿ ಕೂರ್ಮನಾಗಿ ವರಹಾ | ನರಸಿಂಹನೆಂದೆ ನಿಸಿದಾ | ವಾಮನಾಭೃಗುವರ್ಯರಾಮರಘುಪಾ | ಯದುವಂಶದಲಿ ಜನಿಸಿದಾ | ತಾ ಮತ್ತೇ ನಿಜ ಬೌದ್ಧಕಲ್ಕಿ ಎನಿಸೀ | ತಾಳ್ದಾವತಾರಂಗಳಂ | ಶ್ರೀ ಮನೋಹರ ದೇವಕೀ ವಧುವರಾ | ಕುರ್ಯಾತ್ಸದಾ ಮಂಗಳಂ 6 ಕಾಶೀ ಕಂಚಿ ಅವಂತಿಕಾ ವರಪುರೀ | ದ್ವಾರಾವತೀ ಮಥುರಾ | ದೋಷನಾಶಿಕ ಪುಣ್ಯಕ್ಷೇತ್ರ ಬದರೀ | ಶೇಷಾದ್ರಿವರ ಸೇತುಬಧ ತುಹಿನಾ | ರಜತಾದ್ರಿ ಸೈಲಂಗಳಂ | ಈ ಸಪ್ತಾಂಬುಧೀ ಸರ್ವದೀ ವಧುವರಾ | ಕುರ್ಯಾತ್ಸದಾ ಮಂಗಳಂ 7 ದಶರಥಾತ್ಮಜನಾದ ರಾಮಜಗದೀ | ಜನಕಾತ್ಮಜಾ ಸೀತೆಯಾ | ಕುಶಲದೀ ನರಲೀಲೆಯಿಂದ ಮೆರೆವಾ ವೈಭವ ಸಂಗsತಿಯಾ ಉಸರೀದಾ ಗುರುಮಹಿಪತಿಸುತ ಕ- ನ್ನಡ ಭಾಡೆ ಶ್ಲೋಕಂಗಳಂ | ವಸುಧೆಯಲಿ ಸ್ಮರಿಸುವವರಿಂಗೆ ಕೊಡುವಾ | ರಘುನಾಥ ಜಯಮಂಗಳಂ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತಿ ಸಹಿತ ಕಶ್ಯಪರು ರತುನದಾರತಿ ಪಿಡಿದು ರತಿಪತಿಪಿತನಿಗೆ ಅತಿಹರುಷದಿ ಅತಿಶಯದ ಮಹಿಮೆಗಳ ಪೊಗಳುತಲಿ ಶ್ರೀಹರಿಗೆ ಕುಶಲದಾರತಿ ಎತ್ತಿಬೆಳಗಿದರು ನಿತ್ಯ ಶುಭ ಮಂಗಳಂ 1 ಅನಸೂಯ ಸಹಿತ ಅತ್ರಿಯರು ಬೇಗನೆ ಬಂದು ನಳಿನಾಕ್ಷನ ಚರಣಕ್ಕೆರಗಿ ನಿಂದು ವಿಧವಿಧದ ಆಟಗಳ ಆಡಿದ ಶ್ರೀಹರಿಗೆ ಪದುಮದಾರತಿ ಎತ್ತಿ ಬೆಳಗಿದರು ನಿತ್ಯ ಶುಭಮಂಗಳಂ 2 ಶೀಲವತಿಯಾದ ಸುಶೀಲೆ ಸಹಿತ ಭಾರದ್ವಾಜ ಋಷಿಗಳು ತಮ್ಮ ಆಶ್ರಮದಲಿ ಶ್ರೀಲಕುಮಿವಲ್ಲಭಗೆ ಶೀಘ್ರದಿಂದಲಿ ತಾವು ಗೋಮೇಧಿಕದಾರುತಿ ಬೆಳಗಿದರು ನಿತ್ಯ ಶುಭಮಂಗಳಂ 3 ಕುಮುದ್ವತಿ ಸಹಿತ ವಿಶ್ವಾಮಿತ್ರ ಋಷಿಗಳು ಕನಕ ಮಂಟಪದಿ ಮೆರೆಯುವ ದೇವಗೆ ಸನಕಾದಿವಂದ್ಯನಿಗೆ ವನಜಾಕ್ಷಿಯರಸನಿಗೆ ಕನಕದಾರತಿ ಎತ್ತಿ ಬೆಳಗಿದರು ನಿತ್ಯ ಶುಭಮಂಗಳಂ 4 ಪ್ರಹ್ಲಾದವರದನಿಗೆ ಅಹಲ್ಯೆಯ ಸಹಿತದಿ ಫುಲ್ಲಲೋಚನಪ್ರಿಯಗೆ ಋಷಿಗೌತಮ ಮಲ್ಲಿಗೆಹಾರಗಳು ಧರಿಸಿ ಶೋಭಿಪ ಹರಿಗೆ ಚಲ್ವನವರತ್ನದಾರತಿ ಎತ್ತುತಾ ನಿತ್ಯ ಶುಭಮಂಗಳಂ 5 ರೇಣುಕಾ ಸಹಿತ ಜಗದಗ್ನಿ ಋಷಿಗಳು ತಮ್ಮ ಧ್ಯಾನಗೋಚರನಾದ ಪರಮಾತ್ಮನ ಮಾನಿನಿಮಣಿ ಲಕುಮಿಯೊಡನೆ ಶ್ರೀಕೃಷ್ಣನಿಗೆ ನೀಲಮಾಣಿಕ್ಯದ ಆರತಿ ಎತ್ತುತ ನಿತ್ಯ ಶುಭಮಂಗಳಂ 6 ಸತಿ ಸಹಿತ ವಶಿಷ್ಠ ಋಷಿಗಳು ಇಷ್ಟಮೂರುತಿಯಾದ ವರಕಮಲನಾಭ ವಿಠ್ಠಲನ ಸ್ಮರಿಸುತ ನಿತ್ಯ ನವರತ್ನದಾರತಿ ಬೆಳಗಿದರು ನಿತ್ಯ ಶುಭಮಂಗಳಂ 7 ಮಂಗಳಂ ಸಪ್ತಋಷಿಗಳು ಪರ್ಣಶಾಲೆಯೊಳು ಗಾಂಗೇಯನುತನ ಪೂಜಿಸಿ ಹರುಷದಿ ಸಂಗೀತಲೋಲನಿಗೆ ಶೃಂಗಾರ ಪುರುಷನಿಗೆ ರಂಗಿನಾರತಿಯೆತ್ತಿ ಬೆಳಗಿದರು ನಿತ್ಯ ಶುಭಮಂಗಳಂ 8
--------------
ನಿಡಗುರುಕಿ ಜೀವೂಬಾಯಿ
ಸುಂದರ ಮೂರುತಿ ಹರಿಯೆ ಬಾ- ರೆಂದು ಕಶ್ಯಪ ಋಷಿ ಅದಿತಿಯರು ಮಂದಹಾಸದಿ ನಮ್ಮ ಮಂದಿರಕೀಗ ಗೋ- ವಿಂದ ಬಾ ಶ್ರೀಮುಕುಂದ ಬಾ ಯಾದವ ವೃಂದ ಬಾ ಬಲುಮುದದಿಂದ ಬಾ ಬಾ- ರೆಂದು ಕರದಾರು ಶೋಭಾನೆ 1 ಅಚ್ಚುತಾನಂತ ಶ್ರೀಹರಿ ನೀನು ಸಚ್ಚಿದಾನಂತಾತ್ಮನೆ ನೀನು ಮಿತ್ರೆ ಲಕುಮಿ ಒಡಗೂಡುತ ಬಾರೆಂದು ಅತ್ರಿಯರು ಸ್ತುತಿಪರು ಮಿತ್ರೆಯರು ಪಾಡ್ವರು ಕೀರ್ತಿಪರು ಅನಸೂಯಾತ್ರಿಯರು ಬಾರೆಂದು ಕರೆದಾರು ಶೋಭಾನೆ 2 ಭಾಗವತರ ಪ್ರಿಯ ಬಾರೆಂದು ಭಾರದ್ವಾಜರು ಭಕ್ತಿಯಲಿ ಸತಿ ಸುಶೀಲೆ- ಯರು ಸುಂದರ ನಾರಿಯರು ಕರೆವರು ಕಂಸಾರಿ ಬಾರೆಂದು ಕರದಾರು ಶೋಭಾನೆ 3 ಹಸ್ತಿವರದ ಹರಿ ಬಾರೆಂದು ವಿಶ್ವಾಮಿತ್ರರು ಹರುಷದಲಿ ಸತಿ ಸಹಿತದಿ ಕರೆವರು ಭಕ್ತಿಯಲಿ ಪರಮಾಸಕ್ತಿಯಲಿ ಹರಿಯನು ಸ್ತೋತ್ರದಲಿ ಭೂ ರಮಾ ಪಾರ್ಥಸಾರಥಿಯ ಕರದಾರು ಶೋಭಾನೆ 4 ಕೌಶಿಕ ಯಜ್ಞಪಾಲನೆ ಬಾ ಕಂಸನ ಸಭೆಯಲಿ ಸೆಳೆದನೆ ಬಾ ಹಂಸವಾಹನಪಿತ ಬಾರೆಂದು ಕರೆವರು ಗೌತಮರು ಪತ್ನಿ ಅಹಲ್ಯೆಯರು ಪಾಡುತ ಪ್ರಾರ್ಥಿಪರು ಮುರಹರಿ ಗೋಪಾಲ ಬಾರೆಂದು ಕರದಾರು ಶೋಭಾನೆ 5 ಜಗದುದರನೆ ಶ್ರೀ ಹರಿಯೆ ಬಾ ನಿಗಮತಂದು ಸುತಗಿತ್ತನೆ ಬಾ ಝಗಿಝಗಿಸುವ ಆಭರಣಗಳ್ಹೊಳೆಯುತ ಬಾರೆಂದು ಜಯ ಜಯವೆನ್ನುವರು ಋಷಿ ಜಗದಗ್ನಿಯರು ರೇಣುಕ ಸಹಿತ ಶ್ರೀಶನ ಕರದಾರು ಶೋಭಾನೆ 6 ಮದನ ಗೋಪಾಲನಿಗೆ ಮಂಗಳ ಯದುಕುಲ ತಿಲಕನಿಗೆ ಮಂಗಳ ಕಮಲಾನಾಭ ವಿಠ್ಠಲನಿಗೆ ಸತಿ ಅ- ರುಂಧತಿಯರು ಜಯ ಜಯ ಮಂಗಳವೆಂದು ಕರದಾರು ಶೋಭಾನೆ7 ಶೋಭನವೆನ್ನಿರೆ ಶ್ರೀಹರಿಗೆ ಶೋಭನವೆನ್ನಿರೆ ಮಾಧವಗೆ ಶೋಭನವೆನ್ನಿರಿ ಸೊಬಗುಳ್ಳ ದೇವಗೆ ಶೋಭಾನೆ ಸಿರಿಯರಸಗೆ ದಿವ್ಯ ಶೋಭಾನೆ ಪರಮಪುರುಷನಿಗೆ ಶೋಭಾನೆ ಶೋಭನ ಗರುಡಗಮನಗÉಶೋಭನವೆನ್ನಿರೆ ಶೋಭಾನೆ 8
--------------
ನಿಡಗುರುಕಿ ಜೀವೂಬಾಯಿ
ಹರಿಕಥಾಮೃತಸಾರದ ಫಲಶ್ರುತಿ ಶ್ರೀ ಮದಶ್ವಗ್ರೀವನೊಲುಮೆಗೆ ಧಾಮರೆನಿಪ ಶ್ರೀ ವಾದಿರಾಜರುಪ್ರೇಮದಲ್ಲಿ ಜಗನ್ನಾಥದಾಸರ ಸ್ವಪ್ನದಲಿ ಬಂದುಶ್ರೀ ಮನೋರಮನರಿಪ ತತ್ವ ಸು ಸೌಮನದ ಮಾಲಿಕೆಯನಿತ್ತು-ದ್ದಾಮ ಗ್ರಂಥವ ರಚಿಸಿರೆನುತಲಿ ನುಡಿದ ಕಾರಣದೀ ಪ ಭಾಗವತ ಗಾರುಡ ಭವಿಷ್ಯೋತ್ತರ ಪುರಾಣಚಾರು ವಿಷ್ಣು ರಹಸ್ಯ ಪಂಚರಾತ್ರಾಗಮ ವಾಯುಸಾರ ಗುರವೃತ್ಪ್ರವೃತ್ತವು ಈರ ಸಂಹಿತಾದಿತ್ಯವಾಗ್ನೇಯಪಾರ ರಸಗಳ ತೋರ್ಪ ಶ್ರೀ ಗುರು ಮಧ್ವ ಶಾಸ್ತ್ರದಲೀ 1 ಸಾರ ಕ್ರೋಢೀಕರಿಸಿ ದೀನೋ-ದ್ಧಾರಗೋಸುಗ ಹರಿಕಥಾಮೃತ ಸಾರವನು ರಚಿಸೀಸ್ಥೈರ್ಯ ಮಾನಸದಿಂದ ಭಾವೀ ಭಾರತೀಪತಿ ವಾದಿರಾಜರಭೂರಿ ತೋಷಕೊಪ್ಪಿಸುತಲಾಪಾರ ಮುದ ಪಡೆದೂ 2 ಸಾಸಿರಾರ್ಥಗಳೊಂದು ಪದಕವಕಾಶವಿರುವೋ ಶ್ರೀದ ವಿಷ್ಣುಸಾಸಿರದ ನಾಮವನು ಯೋಚಿಸಿ ಇಹರು ಗ್ರಂಥದಲೀಈಸು ರಹಸ್ಯವನರಿತು ಪಠಪಗೆ ಏಸು ದೂರವೊ ಮುಕ್ತಿಬರಿದಾ-ಯಾಸ ಬಟ್ಟುದರಿಂದ ಫಲವೇನಿಲ್ಲವೀ ಜಗದೀ 3 ಹ ಯೆನಲು ಹರಿಯೊಲಿಯುವನು ತಾ ರಿ ಯೆನಲು ರಿಕ್ತತ್ವ ಹರಿಸುವಕ ಯೆನಲು ಕತ್ತಲೆಯೆಂಬಾಜ್ಞಾನವನು ಪರಿಹರಿಪಾಥಾ ಯೆನಲು ಸ್ಥಾಪಿಸುವ ಜ್ಞಾನ ಮೃಯೆನಲು ಮೃತಿಜನಿಯ ಬಿಡಿಸುವತ ಯೆನಲು ಹರಿ ತನ್ನ ಮೂರ್ತಿಯ ತೋರುವನು ನಿತ್ಯಾ 4 ಸಾ ಯೆನಲು ಸಾಧಿಸುವ ಮುಕ್ತೀ ರ ಯೆನಲು ರತಿಯಿತ್ತು ರಮಿಪನುಕಾಯ ವಾಙ್ಮನದೆಂಟು ಅಕ್ಕರ ನುಡಿದರದರೊಳಗೇಶ್ರೀಯರಸು ವಿಶ್ವಾದಿ ಅಷ್ಟೈಶ್ವರ್ಯ ರೂಪದಿ ನಿಂತು ತಾ ಪರ-ಕೀಯನೆನಿಸದೆ ಇವನ ಮನದೊಳು ರಾಜಿಪನು ಬಿಡದೇ 5 ಅನಿರುದ್ಧ ಧರ್ಮವು ದೊರಕಿಸುವ ಪರಮ್ಹರುಷದಲ್ಲಿ ಸ-ತ್ವರ ಕಥಾಯೆನೆ ಕೃತಿರಮಣನರ್ಥಗಳ ಹನಿಗರೆವಾವರ ಅಮೃತಯೆನಲಾಗ ಶ್ರೀ ಸಂಕರುಷಣನು ಕಾಮವನು ಯೋಜಿಪಸರಸ ಸಾರೆನೆ ವಾಸುದೇವನು ಮೋಕ್ಷ ಕೊಡುತಿಪ್ಪಾ 6 ನಿತ್ಯ 7 ಚಾರುತರದೀ ಹರಿಕಥಾಮೃತ ಸಾರಕೃತ ಋಷಿ ಭಾರದ್ವಾಜರುಸಾರ ಹೃದಯದಿ ನಿಂತು ಸಕಲ ಸು ಶಾಸ್ತ್ರದಾಲೋಕಾಸಾರಿ ಸಾರಿಗೆ ಮಾಡಿ ಮಾಡಿಸಿ ಸೂರೆಗೊಟ್ಟಾನಂದ ಚಿನ್ಮಯಪಾರವಾರಾಶಯನ ಶ್ರೀ ಕಮಲಾಪತಿ ವಿಠಲಾ 8
--------------
ಕಮಲಪತಿವಿಠ್ಠಲರು
ಒಳಿತು ಈಶಕುನ ಫಲವಿಂದು ನಮಗೆ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಲಜನಾಭನ ಸಂಗ ದೊರಕುವುದೆ ರಮಣಿ ಪ.ವಾಮಗರುಡನನೋಡು ವಾಯಸದ ಬಲವನ್ನುಕೋಮಲಾಂಗಿಯರೈದು ಪೂರ್ಣಕುಂಭ ||ಸಾಮಾನ್ಯವೇಗೌಳಿ ಬಲಕಾಗಿ ನುಡಿಯುತಿದೆಪ್ರೇಮದಲಿ ಮಧುರ ವಚನವ ಕೇಳು ರಮಣಿ 1ಮೊಳಗುತಿವೆಭೇರಿದುಂದುಭಿ ಘಂಟೆ ವಾದ್ಯಗಳುಫಲ ಪುಷ್ಪ ದಧಿಗಳಿದಿರಾಗುತಿದೆಕೊ ||ಚೆಲುವ ಭಾರದ್ವಾಜ ಪಕ್ಷಿ ಬಲವಾಗುತಿದೆಬಲುಹಂಗಎಡವಾಗುತಿದೆನೋಡುಕೆಳದಿ2ನೋಡು ದ್ವಯ ಬ್ರಾಹ್ಮಣರು ಇದಿರಾಗಿ ಬರುವುದನುಕೂಡಿದುವು ಮನದ ಸಂಕಲ್ಪವೆಲ್ಲ ||ಬೇಡಿದ ವರಗಳೀವ ಪುರಂದರವಿಠಲನನೋಡಿ ಸಂತೋಷದಲಿ ನೆನೆವೆನೆಲೆ ರಮಣಿ 3
--------------
ಪುರಂದರದಾಸರು
ನವರತ್ನ ಖಚಿತ ಮಾಣಿಕ್ಯದ ಮಂಟಪದಿನವವಿಧದ ಹಂಸತೂಲಿಕ ತಲ್ಪದಲಿಭುವನಮೋಹನ ಶ್ರೀಹರಿಪವಡಿಸಿರಲುಕವಿಗಳು ಪೊಗಳಿ ಪಾಡುವರು ಶ್ರೀಹರಿಯೆಏಳಯ್ಯ ಬೆಳಗಾಯಿತು 1ನಾಗಶಯನನೆ ಏಳು ನಾಗಾರಿವಾಹನನೆನಾಗಸಂಪಿಗೆ ಪಾರಿಜಾತವರಳುತಿದೆಬೇಗದಲಿ ಭಾಗೀರಥಿ ಉದಕವನೆ ತಂದುನಾಗಕನ್ನಿಕೆಯರು ಕಾದು ನಿಂತಿಹರುಏಳಯ್ಯ ಬೆಳಗಾಯಿತು 2ಅತ್ರಿ ವಸಿಷ್ಠ ಭಾರದ್ವಾಜ ಗೌತಮರುಸುತ್ತೆಲ್ಲ ಋಷಿಗಳು ಸ್ತೋತ್ರವನೆ ಮಾಡುತ್ತಮಿತ್ರೆರುಕ್ಮಿಣಿ ಭಾಮೆರಿಂದ ಸೇವಿಪ ಹರಿಗೆಮುತ್ತಿನಾರತಿ ಪಿಡಿದು ನಿಂದಿಹರು ಹರಿಯೆಏಳಯ್ಯ ಬೆಳಗಾಯಿತು 3ಲಕ್ಷ್ಮಿರಮಣನೆ ಏಳು ಪಕ್ಷಿವಾಹನ ಏಳುಕುಕ್ಷಿಯೊಳು ಜಗವನಿಂಬಿಟ್ಟವನೆ ಏಳುರಕ್ಷ ಶಿಕ್ಷಕ ಜಗದ್ರಕ್ಷಕನೆ ನೀ ಏಳುಈಕ್ಷಿಸಿ ಭಜಕರನುದ್ದರಿಸಲೇಳುಏಳಯ್ಯ ಬೆಳಗಾಯಿತು 4ಕಮಲಮಲ್ಲಿಗೆ ಜಾಜಿಕುಸುಮಮಾಲೆಗಳನ್ನುಕಮಲಾಕ್ಷಿಗರ್ಪಿಸುತ ಹರುಷದಿಂದಕಮಲನಾಭ ವಿಠ್ಠಲ ಸಲಹು ಸಲಹೆಂದೆನುತಕಮಲಭವೇಂದ್ರಾದಿಗಳು ಸ್ತುತಿಸುವರು ಹರಿಯೆಏಳಯ್ಯ ಬೆಳಗಾಯಿತು 5ಏಳು ಧೃವವರರೂಪ ಏಳು ನರಹರಿರೂಪಏಳುನಗಧರರೂಪಏಳಯ್ಯ ಹರಿಯೆಏಳಯ್ಯ ಬೆಳಗಾಯಿತು
--------------
ನಿಡಗುರುಕಿ ಜೀವೂಬಾಯಿ