ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಲ್ಲೆನವ್ವಾ ಲಕುಮಿಯ ನಲ್ಲ ಬಾರದಿದ್ದರೆತನುಹೊರೆಯನೊಲ್ಲೆನವ್ವಾ ಪ ಭಾರ ಹುವ್ವಿನಭಾರ ಸೈರಿಸಲಾರೆನೆಮಾರನಯ್ಯನು ಬಾರದಿದ್ದರೆಮಾರನಂಬಿಗೆ ಗುರಿಯ ಮಾಡಿ 1 ಎಲ್ಲ ದೇವರ ವಲ್ಲಭನೆಂದುಒಲಿದ ಮನ ನಿಲ್ಲದೆನಿಲ್ಲದೆ ರಂಗ ಪೋದ ಮಧುರೆಗೆಬಿಲ್ಲ ಹಬ್ಬದ ನೆವನ ಮಾಡಿ 2 ಮಂದಾನಿಲನ ಸಹಿಸಲಾಗದುನೊಂದೆ ಶುಕಪಿಕ ರವಗಳಿಂದಚಂದ್ರಕಿರಣದಿ ಬೆಂದೆ ಇನ್ನೀವೃಂದಾವನವೇಕನನಗಲಿ 3 ಮುನ್ನ ಆಡಿದ ಮಾತ ಮರೆತುಎನ್ನ ಮನದೊಳಗೀಡಾಡಿವನ್ನಜಾಕ್ಷನು ಬಾರ ಪುರದವನ್ನಿತೆಯರನು ಮೆಚ್ಚಿ ಪೋದ 4 ಪೊಂಗೊಳಲ ಧ್ವನಿಗೆ ಸಿಲುಕಿಭಂಗಗೆಟ್ಟೆನಂಗಜನಿಂದಲಿಪೆಂಗಳಿಗುಚಿತವಲ್ಲ ಇದುರಂಗವಿಠಲನ ತೋರದಿದ್ದಡೆ 5
--------------
ಶ್ರೀಪಾದರಾಜರು
ಶ್ಯಾಮಸುಂದರ ಶ್ರೀಮಾಧವ ಕಾಮಿಸುವಳಾ ಕಾಮಿನಿಯು ಪ. ಭಾಮಾಮಣಿಯು ನಿನ್ನನೀಕ್ಷಿಸದೆ ಯಾಮಯಾಮಕೆ ತಾಮಸಗೊಂಬಳು ಅ.ಪ. ಚಂದನಾದಿ ಸೌಗಂಧಕುಸುಮ ವಿಷ- ದಂದವೆಣಿಸುವಳು ಚಂದ್ರಮುಖಿ ಮಂದಾನಿಲ ಮಕರಂದ ಪಾನರಸ- ವೊಂದನೊಲ್ಲಳ ಪ್ರಿಯಸಖಿ ನಂದನ ಕಂದನೆ ವಂದನೆ ವಲ್ಲಭಗೈವಳು 1 ಹಾರ ಹೀರ ಬಂಗಾರ ಭೂಷಣವ ಭಾರವೆಂದು ಶೃಂಗರಿಸಳು ಕೀರಕೀಕಿ ಪಿಕ ಚೀರುಸ್ವನ ಶರ- ಧಾರೆಯೆಂದು ತಾ ಸೈರಿಸಳು ಕಾರುಣ್ಯವಾರಿಧೆ ಬಾರದೆ ಬಾಯಾರಿರುವಳು 2 ಮೀನಧ್ವಜನುರುಬಾಣದುರುಬೆಗೆ ಕ್ಷೀಣವಾಗಿಹಳು ಮೀನಾಕ್ಷಿ ಭಾನುತೇಜ ಲಕ್ಷ್ಮೀನಾರಾಯಣ ಧ್ಯಾನಿಸುವಳು ನಿನ್ನ ಪ್ರಾಣಸಖಿ ಮಾನಾಭಿಮಾನಾಧೀನವನಿನ್ನೊಳಗಿಟ್ಟಿಹಳು 3
--------------
ತುಪಾಕಿ ವೆಂಕಟರಮಣಾಚಾರ್ಯ
ಬನ್ನಿಗಡ ಸುಜನರೆಲ್ಲ ಪಾವನಕಾಯ ಸುಜನಪ್ರಿಯಪುಣ್ಯ ಸತ್ಯನಾಥಯತಿರನ್ನನ ಪಟ್ಟಣಕಿಂದು ಪ.ಪರಬೊಮ್ಮನೆಂಬುವ ಮನೆದೈವನಾಗಿಹಪರಸುಖವನೀವ ಮರುತದೇವನೆಂಬಾತಪರಮಪದದ ಗುರುವು ಯುಕ್ತಿಯಿಂದ ಕಾಪುರುಷರಗಲಿಸುವಂತೆ ಸತ್ಯನಾಥಪುರಪತಿಗೆ ಬೋಧಿಸುವ ಪರಮವಾರ್ತೆಯ ಕೇಳ 1ನವಭಕುತಿರತುನದಿಂದ ನಿರ್ಮಿತ ಪ್ರಾಕಾರಕೆನವದ್ವೇಷಿಗಳು ದಾಳಿಯಿತ್ತು ಅಂಡಲೆಯಲು ದಾನವಾರಿಯ ನಾಮಾಯುಧವ ಸತ್ಯಾಭಿನವÀÀ ತೀರ್ಥರೆಂಬೊ ಪುತ್ರಗೆ ನೀಡುತಮಾನವ ಹರಿಯೆಂಬಸುರರ ಮಡುಹಿಸುವುದು ನೋಡ 2ಕಾಯಜಚೋರನೆಂಬವ ತಾ ಕಳ್ಳ ಹನ್ನೊಂದರ ಕೂಡಿಕಾಯವೆಂಬ ರಾಜಗೃಹಕೆ ಕನ್ನವಿಕ್ಕುವುದ ಕಂಡುಕಾಯುವ ಜ್ಞಾನೆಂಬ ಭಟನು ಅಟ್ಟಲವನಕೈದು ಚಾಪವ ಸೆಳೆದು ಮಿಕ್ಕು ಚೋರನೀಕಾಯಕಟ್ಟಿಸುವಂಥ ಕರುಣಿಗೆ ನಮಿಸುವ3ಹರಿದಾಸರೆನಿಸುವ ಹಲವು ದೊರೆಗಳುಂಟುಹರದಾರಿಕ್ಕೆಲದಿ ಪಣ್ಯವ ಮಾಡಿ ಸುಧೆüವೀರಿಹರಿತತ್ವ ನಾಣ್ಯದೊಳು ರಾಮನಾಮದಹಿರಿದುಮುದ್ರೆಯನೊರೆದು ಪರಂಪರಹರುಷ ವ್ಯವಸಾಯವುಂಟು ಹಿರಿಯಾಮೃತವುಣ್ಣ 4ಅಭಿನವ ಚಂದ್ರಿಕೆದೋರಿ ಅಭಿಜ್ಞಾನತೆ ಮೆರೆದಅಭೀತ ಮಂಗಳಗಾತ್ರ ಅಮಿತ ಬುಧರಮಿತ್ರಅಭಿಜÕಗುರು ಸತ್ಯನಿಧಿಯ ಸುತ ಸತ್ಯನಾಥಅಭು ಪ್ರಸನ್ವೆಂಕಟೇಶನ ಭಜಕನ ಕವಿತಅಬುಜ ಪರಿಮಳಮಂದಾನಿಲವಿಡಿವಳಿಯಂತೆ 5
--------------
ಪ್ರಸನ್ನವೆಂಕಟದಾಸರು
ಶ್ಯಾಮಸುಂದರ ಶ್ರೀಮಾಧವಕಾಮಿಸುವಳಾ ಕಾಮಿನಿಯು ಪ.ಭಾಮಾಮಣಿಯು ನಿನ್ನನೀಕ್ಷಿಸದೆಯಾಮಯಾಮಕೆ ತಾಮಸಗೊಂಬಳು ಅ.ಪ.ಚಂದನಾದಿ ಸೌಗಂಧಕುಸುಮ ವಿಷ-ದಂದವೆಣಿಸುವಳು ಚಂದ್ರಮುಖಿಮಂದಾನಿಲ ಮಕರಂದ ಪಾನರಸ-ವೊಂದನೊಲ್ಲಳ ಪ್ರಿಯಸಖಿನಂದನ ಕಂದನೆ ವಂದನೆ ವಲ್ಲಭಗೈವಳು 1ಹಾರ ಹೀರ ಬಂಗಾರ ಭೂಷಣವಭಾರವೆಂದು ಶೃಂಗರಿಸಳುಕೀರಕೀಕಿಪಿಕಚೀರುಸ್ವನ ಶರ-ಧಾರೆಯೆಂದು ತಾ ಸೈರಿಸಳುಕಾರುಣ್ಯವಾರಿಧೆ ಬಾರದೆ ಬಾಯಾರಿರುವಳು 2ಮೀನಧ್ವಜನುರುಬಾಣದುರುಬೆಗೆಕ್ಷೀಣವಾಗಿಹಳು ಮೀನಾಕ್ಷಿಭಾನುತೇಜ ಲಕ್ಷ್ಮೀನಾರಾಯಣಧ್ಯಾನಿಸುವಳು ನಿನ್ನ ಪ್ರಾಣಸಖಿಮಾನಾಭಿಮಾನಾಧೀನವನಿನ್ನೊಳಗಿಟ್ಟಿಹಳು3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ