ಒಟ್ಟು 9 ಕಡೆಗಳಲ್ಲಿ , 8 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈತನೆಂಥಮಹಿಮೆ ನೊಡಿರೆ ರಂಗಯ್ಯ ರಂಗ ಈತನೆಂಥ ಮಹಿಮ ನೋಡಿರೆ ಪ ಈತನೆಂಥ ಮಹಿಮ ಓರ್ವ ಮಾತೆಯುದರದಿ ಜನಿಸಿ ಮತ್ತೊಬ್ಬ ಮಾತೆಕೈಯಿಂದ ಬೆಳೆದು ಗೋಕುಲ ನಾಥ ನವನೀತಚೋರನೆನಿಸಿದ ಅ.ಪ ಕಾಳಕೂಟ ವಿಷವ ಕುಡಿಸಿದ ಆ ಮಾಯದೈತ್ಯಳ ಕಾಲನ ಆಲಯಕೆ ಕಳುಹಿದ ಮಡುವನ್ನು ಧುಮುಕಿ ಕಾಳಿ ಹೆಡೆಮೆಟ್ಟಿ ನಾಟ್ಯವಾಡಿದ ಗೋವುಗಳ ಕಾಯ್ದ ಬಾಲನೆಂದೆತ್ತೊಯ್ಯಲು ಬಂದ ಖೂಳ ಶಕಟನ ಸೀಳಿ ಒಗೆದು ಕಾಳಗದಿ ಧೇನುಕನ ತುಳಿದು ಬಾಲಲೀಲೆಯ ತೋರಿ ಮೆರೆದ 1 ಪರಿಪರಿಯ ಮಾಯದಿಂ ಕಾಡ್ವ ಭೂಭಾರಿಯಾಗಿ ಧರಣಿಜನರತಿಶಯದಿ ಬಳಲಿಸುವ ಪರಮಕಂಟಕ ದುರುಳ ಕಂಸನೆಂಬುವನ ಶಿರವ ತರಿದ ಮಾಧವ ಧರಣಿತಾಪವನ್ನೆ ಕಳೆದು ಸೆರೆಯ ಬಿಡಿಸಿದ ಜನನಿ ಜನಕರ ಮಹಿಮೆ ತೋರ್ದ 2 ಗೊಲ್ಲ ಬಾಲರ ಸಮೂಹವನು ನೆರೆಸಿ ಮನೆಯಲ್ಲಿ ಯಾರು ಇಲ್ಲದ ಸಮಯವನೆ ಸಾಧಿಸಿ ಮೆಲ್ಲಮೆಲ್ಲನೆ ಎಲ್ಲ ಬಾಲರ ಒಳಗೆ ತಾ ಹೊಗಿಸಿ ಪಾಲ್ಮೊಸರು ಸವಿಸಿ ಕಳ್ಳ ಕೃಷ್ಣೆಮ್ಮ ನಿಲ್ಲಗೊಡನೆಂದು ಗೊಲ್ಲಸ್ತ್ರೀಯರು ಗುಲ್ಲುಮಾಡಲು ನಿಲ್ಲದೋಡಿ ತಾ ಪುಲ್ಲನಾಭನು ಎಲ್ಲಿ ನೋಡಿದರಲ್ಲೆ ತೋರುವ 3 ಶಿಶುವು ಈತನೆಂದು ಮುದ್ದಿಸುವಾಗ ಕುಶಲದಿಂದಪ್ಪಿ ಅಧರ ಸವಿಯುವ ಎಂಥ ಶಿಶುವನೆ ಹಸುಮಗಾಗೆಳೆದೊಯ್ದು ರಮಿಸುವ ಮಿಸುಗಗೊಡನಿವ ಕಸಿದು ಭಾಂಡ ದೆಸೆದೆಸೆಗೆ ಎಳೆದು ವಸುಧೆಯೊಳು ತನ್ನ ಅಸಮ ಮಹಿಮೆಯ ಪಸರಿಸಿದ ಹರಿ4 ಮಣ್ಣು ತಿಂದು ತಾಯ ಬಳಿಗೈದಕಂದ ಏನಿದು ಮಣ್ಣು ತಿನ್ವರೆ ಉಗುಳೆಂದೆಶೋದೆ ಕಣ್ಣು ತಿರುವÀಲು ತನ್ನ ಬಾಯೊಳ್ಬ್ರಹಾಂಡ ತೋರಿದ ಭಿನ್ನವಿಲ್ಲದ ತನ್ನ ತಾನು ಅರಿಯದೆಶೋದಿನ್ನು ಈರೂಪವಡಗಿಸೆನ್ನಲು ಸಣ್ಣಮಗುವಾಗಿ ಚಿಣುಫಣುವಿಡಿದುನ್ನ - ತೋನ್ನತ ಆಟವಾಡಿದ 5 ಪರಿಪರಿಯಲಿ ಕಾಡ್ವ ಕೃಷ್ಣನ್ನ ವರದೇವಿ ತಡೆಯದೆ ಸರವೆನಡುವಿಗ್ಹಚ್ಚಿ ತರಳನ್ನ ಸರಸರನೆ ಬಿಗಿದು ಒರಳಿಗ್ಹಾಕಿ ಕಟ್ಟಿ ಮುರಹರನ ಮರೆಯಾಗಲಾಕ್ಷಣ ಊರುತಂಬೆಗಾಲು ಊರಬೀದಿಲಿ ಒರಳನೆಳೆಯುತ ಹೊರಗೆ ಹೋಗಿ ತರಗುಳಿರಕಿಲದೊರಳ ಸೇರಿಸಿ ಮುರಿದು ಶಾಪದಿಂ ಮುಕ್ತಮಾಡಿದ 6 ಪುಂಡತನದಿಂ ಸೊಕ್ಕಿಮರೆಯುವ ಆ ರುಗ್ಮನಿಡಿಕೈಯ ಬಂಡಿಗಾಲಿಗೆ ಕಟ್ಟಿ ಶ್ರೀಧರ ರುಗ್ಮಿಣಿಯನ್ನು ಕೊಂಡು ಗೋಕುಲ ಸೇರಿ ವೈಭವ ನಡೆಸಿ ಯಾದವ ರ್ಹಿಂಡಲಿಗೂಡಿಸಿ ಪುಂಡದೇವಿಯುದ್ದಂಡತನದಿ ಕೈ ಕೊಂಡ ಕಲ್ಯಾಣ ಗಂಡುಗಲಿಗಳ ಗಂಡನೆನಿಸಿದ ಹಿಂಡುದೇವರ ಸಾರ್ವಭೌಮ 7 ಚರಣದಾಸರ ಒಡೆಯ ತಾನಾದ ವರ್ಣಿಸಲಳವಲ್ಲ ಚರಣದಾಸರ ದಾಸನೆನಿಸಿದ ಪುಸಿಯಲ್ಲ ಕೇಳಿರಿ ನರನ ಕುದುರೆಯ ವಾಘೆಯನು ಪಿಡುದು ರಥವ ನಡೆಸಿದ ಕರೆಯಲೋಡಿದ ಸರಸಿಯಲ್ಲಿಗೆ ಭರದಿ ಒದಗಿದ ಕುರುಪಸಭೆಯಲ್ಲಿ ಪರಮ ನಿಗಮಗಳ್ಗಿರುವನಗೋಚರ ಸ್ಮರಿಸಿದವರಿಗೆ ಭರದಿ ನೆರವಾದ 8 ತಾಳಿಬಂದ ನಾರಾಯಣಾವತಾರ ಪಾಲಿಸಲು ಜಗವಂ ಬಾಲಗೋಪಾಲ ಭಕ್ತರಾಧಾರ ಗೊಲ್ಲನೆನಿಸಿ ಲೀಲೆನಡೆಸಿದ ಶಾಮಸುಂದರ ಭವಜಾಲಪರಿಹರ ಕಾಳರಕ್ಕಸರೊಳು ಕಾದಿ ನಿರ್ಮೂಲಮಾಡಿ ಜಗಪಾಲಿಸಿದ ತ್ರಿ ಜಾನಕಿಲೋಲ ಶ್ರೀರಾಮ 9
--------------
ರಾಮದಾಸರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ನಿತ್ಯ ಶುಭಮಂಗಳಂ ಪ ಚಾರು ಮರಕಟರೂಪ ತಾಳಿದಾ ಮೂರ್ತಿಗೆ ಚೋರ ದಶಕಂಠನನು ದಣಿಸಿದವಗೆ ನೀರಜಾಮುಖಿಗೆ ಮುದ್ರೆಯಿತ್ತ ಕಪಿವರಗೆ ಶ್ರೀರಾಮ ಧ್ಯಾನದೊಳು ತತ್ಪರಾದವಗೆ 1 ನೀಚ ಠಕ್ಕನ ಹಿಡಿಂಬಕನೊರಸಿದಾ ಬಲಗೆ ಕೀಚಕರ ಕಿರ್ಮೀರ ಬಕಕಾಲಗೆ ನಾಚಿ ನೀರೊಳು ಪೊಕ್ಕು ಕುರುಪತೀಯಂತಕಗೆ ಆ ಚಕ್ರ ಸೇವೆಯಲಿ ನಿರತನಾದವಗೆ 2 ಜಗವನುದ್ಧರಿಪ ಬುದ್ಧಿಯ ತಾಳ್ದಯತಿವರಗೆ ಮಗುವಾಗಿ ಮಧ್ಯಗೇಹದಿ ಜಾತಗೆ ನಿಗಮ ಗೋಚರ ಶ್ರೀ ನರಸಿಂಹವಿಠಲನ ಭಕುತಿಯನು ಬೇಡಿ ಅಜಪದ ಪಿಡಿದ ಹರಿಗೇ 3
--------------
ನರಸಿಂಹವಿಠಲರು
ನಿತ್ಯ ಪರಿಪೂರ್ಣ ಕಾಮ ಪಟ್ಟಾಭಿರಾಮ ತನ್ನ ಸ್ಮರಿಸುವ ಜನಕೀವನು ಕ್ಷೇಮ ಪ ಭಾಸ್ಕರವಂಶ ಭೂಷಣ ತರಣಿಜಮಿತ್ರ ಭವ್ಯ ಚರಿತ್ರ | ದಾಶರಥಿ ಕರುಣಾಳು ಸರೋಜನೇತ್ರ ಅ.ಪ ಜಡಮತಿಯಾದರೂ ಇವನ | ಮರೆಯಾ ಇನ್ನು ಧೃಢಮತಿಗೆ ತನ್ನನೇ ಕೊಡುವೆನೈಯ್ಯಾ 1 ತಮ್ಮೋಳು ತಾವು ತಿಳಿದು | ಭಜಿಸುವರು ಇನ್ನು ಹೆಮ್ಮೆಯ ಮಾತುಗಳು ಬಿಡಿರಿ ಜನರು 2 ರಾಮನು ನರನೆಂಬ ಪಾಮರನ ಬಾಯಲಿ ಮಣ್ಣು ಸೋಮಶೇಖರ ತನ್ನ ಸತಿಗೆ | ಪೇಳಿದ ಇವನ ನಾಮದ ಮಹಿಮೆ ಕುಣಿಕುಣಿದು 3 ನಿರುತಾ ಪೊಗಳುವವಿವನ ವೇದ | ಇವನಾ ಚರಣೆ ಸಜ್ಜನರಿಗೆ ಬಲುಸ್ವಾದ 4 ಸೇತುವೆ ಕಟ್ಟುವುದುಂಟೆ ಕೋತಿದಂಡುಗಳೆಲ್ಲಾ ವ್ರಾತ ರಹಸ್ಯವೇತಕೆ ಚಿಂತೆ 5 ಹೊರಗಿನ ಕಣ್ಣಿಂದ ಅರಿಯಲು ಸಾಧ್ಯವಲ್ಲಾ ನೆರೆ ಒಳಗಣ್ಣಲಿ ನೋಡಬೇಕು | ಸ ದ್ಗುರು ಕಟಾಕ್ಷವಾದವಗೆ ಜೋಕು 6 ಪ್ರತ್ಯಕ್ಷವಾದಿಗಳಿಗೆ ಮೃತ್ಯುವಿನ ಬಾಯೊಳು ಸತ್ತು ಹುಟ್ಟುವುದು ತಪ್ಪುವುದಿಲ್ಲಾ | ಆ ಪತ್ತು ಇದೇ ದುರ್ಜನಿರಿಗೆಲ್ಲಾ 7 ಮಗನು ಬ್ರಹ್ಮನು ಮೊಮ್ಮಗನು ರುದ್ರನು ಮೂ ಜಗವನಾಳುವ ನಾರಾಯಣನಿವನು | ತಾನು ಮಗುವಾಗಿ ದಶರಥಗುದಿಸಿದನು 8 ಮುನಿ ಯಾಗವ ಪಾಲಿಸಿ ವನಿತೆಯ ಶಾಪ ಬಿಡಿಸಿ ತನ್ನೊಳಗಿಟ್ಟು ತಾ ಹುಡುಕಿದನು 9 ನರನಾಗಿ ದೈತ್ಯರ ಮುರಿದು ದೇವತೆಗಳಿಗೆ ಗರಸನಾಗಿ ಸಾಕೇತಪುರದಿ ಪೊಳೆದ 10 ನರನು ಪಾಮರನು ಹ್ಯಾಗೆ ತಿಳಿಯುವನು | ಸಂಸೃತಿ ಶರಧಿಯೊಳು ಬಿದ್ದು ಬಳಲುವನು11
--------------
ಗುರುರಾಮವಿಠಲ
ನೋಡಿ ನಿನ್ನನು ಧನ್ಯಳಾದೆನು ಮಾಡಿ ಕೃಪೆಯನು ಮನ್ನಿಸೂಬೇಡಿಕೊಂಬೆನು ಭವವ ಮುಂದಕೆ ನೀಡದಂಘ್ರಿಯೊಳೊಂದಿಸೂ ಪಕೃಷ್ಣ ನಿನ್ನನು ಮುದ್ದನಾಡುತ ಕಷ್ಟವನು ಕಡೆಗಾಂಬೆನೂಇಷ್ಟದೈವವು ನನ್ನ ಜಠರದಿ ಪುಟ್ಟೆ ನಿನ್ನನು ಕಂಡೆನೂದುಷ್ಟಕರ್ಮಗಳೆಲ್ಲವನು ನೆರೆ ನಷ್ಟಗೈಯುವ ದೇವನೂಪುಟ್ಟಮಗುವಾಗಿರಲು ಕೇಶವ ಮುಟ್ಟಿಲಾಲಿಪಳಾದೆನೂ 1ಬಟ್ಟಚೆಲು'ನ ರತ್ನದರಳೆಲೆ ಕಟ್ಟಿ ಬೊಪ್ಪದೊಳೊಲೆಯಲೂಪುಟ್ಟ ಮಾಗಾುಗಳು ಕಿ'ಗಳವಟ್ಟು ಕದಪುಗಳೊಪ್ಪಲೂನಟ್ಟನಡು ಪಣೆಯಲ್ಲಿ ಕತ್ತುರಿಬಟ್ಟು ಬೆಡಗನು ಬೀರಲೂಇಟ್ಟ ಕಪ್ಪಿನ ಕಣ್ಗಳೆಸೆಯಲು ಬಿಟ್ಟಬಾಯಲಿ ಸ'ಯಲು 2ಮುತ್ತು ರತ್ನಗಳನ್ನು ತೆತ್ತಿಸಿ ಸುತ್ತಕಾಂತಿಯ ಬೀರುವಉತ್ತಮದ ಮಕುಟವನು ನಿನ್ನಯ ನೆತ್ತಿಗಿಡುವೆನು ಕೇಶವಮತ್ತು ಕಂಕಣಗಳನು ಕರಗಳಿಗಿತ್ತು ಕಟ್ಟುವೆ ಪವಳವಾಸತ್ಯವಂತನೆ ನೀನು ಶಿಶುತನವೆತ್ತೆ ಪಡೆದೆನು ಭಾಗ್ಯವಾ 3ಸನ್ನುತನೆ ಪದಕಗಳ ಸರಗಳ ನಿನ್ನ ಕೊರಳಿಗೆ ಕಟ್ಟಿಚಿನ್ನ ಮುಕ್ತದಿ ಪೊಳೆವ ಕೌಸ್ತುಭವನ್ನು ಉರಕಳವಡಿಸುವಾರನ್ನ ಮಾಣಿಕದುಡಿಯ ಸೂತ್ರಗಳನ್ನು ಕಟಿಯಲಿ ರಚಿಸುವಾಇನ್ನು ಬಹು'ಧವಾಗಿ ಮನ್ನಿಪುದನ್ನು ವ'ಸಿದೆ ದಾಸ್ಯವಾ 4ಕಟ್ಟಿ ಘಂಟೆಯ ಸರವ ಕಟಿಯಲಿ ಪುಟ್ಟ ಶ್ರೀಮೃದುಪಾದವಾಮುಟ್ಟಿ ಕೈುಂದಂದುಗೆಗಳ ನಾನಿಟ್ಟು ಘಲಿಘಲಿಗುಟ್ಟುವಾಬಟ್ಟಗೆಜ್ಜೆಯ ಸಣ್ಣಸಾಲ್ಗಳ ದಟ್ಟಗೊಳಿಸೀಯೆಂದವಾನೆಟ್ಟದ್ಟೃಯಲೀಕ್ಷಿಸುತ ಹೊರಗಟ್ಟಿಬಿಟ್ಟೆನು ಕ್ಲೇಶವಾ 5ಒಂದು ಸ್ತನವನು ಸ'ಯುತಲೆ ಮತ್ತೊಂದು ಸ್ತನವನು ಕರದಲಿತಂದು ವದನದೊಳಿಟ್ಟು ದಣಿಯುತ ಮಂದಹಾಸದ ಮುಖದಲಿಇಂದಿರೇಶನೆ ನಿನ್ನ ನೋಡುತ ಇಂದು ಸಲ'ದೆ ಕೃಪೆಯಲಿವಂದಿಪರು ನಿನ್ನಡಿಗೆ ಸುರಮುನಿವೃಂದ ಭಾ'ಸಿ ಮನದಲಿ 6ಸಕಲ ಲೋಕಾಧಾರನಾಗಿಯೆ ಸಕಲ ಜೀವರ ಸಾಕ್ಷಿಯೆಪ್ರಕಟವಾಗೆನಗೀಗ ತೋರಿದೆ ಮುಕುತಿದಾಯಕ ಮೂರ್ತಿಯೆಭೃಕುಟಿಯಲಿ ನಿರ್'ುಸಿದ ಮಾಯೆಯ 'ಕರಿಸುವನುಸಾರಿಯೆಚಕಿತಳಿಗೆ ನನಗೊಲಿದೆ ತಿರುಪತಿ ವೆಂಕಟನಡಿಗೆ ಸ್ವಾ'ುಯೆ7
--------------
ತಿಮ್ಮಪ್ಪದಾಸರು
ಮತ್ಸ್ಯಾದಿ ದಶಾವತಾರಗಳು ಮತ್ಸ್ಯಾದ್ಯವತಾರವನು ತಾಳ್ದು ನೀ ಪರದೇವ ಮನ್ವಂತರ ಪ್ರಳಯಜಲಧಿಯನು ಪೊಕ್ಕು ಸೂರ್ಯಪುತ್ರನ ಮನುವ ದೋಣಿಯಲ್ಲಿರಿಸಿ ನೀನ್ ನೀರಾಟವಾಡಿದೆಯ ಲೀಲೆಯಿಂದಲಿ ನೀಂ 33 ಮಂದರ ಪೊಕ್ಕೆ ಕೂರ್ಮರೂಪವ ತಾಳ್ದು ಕಡಲಿನಡಿ ಸೇರಿ ದೇವತೆಗಳಿಗೆಯಮೃತ ಕಲಶವನು ತೆತ್ತು ನೀನ್ ದೈತ್ಯರನು ವಂಚಿಸಿದೆ ಮೋಹಿನಿಯದಾಗಿ34 ಸೂಕರದ ರೂಪವನು ತಾಳ್ದು ನೀನ್ ಸಿರಿವರನೆ ಚಿನ್ನ ಕಣ್ಣಿನ ದೈತ್ಯಸೇವಕನ ಕೊಂದು ದೈತ್ಯನಾತ್ಮಜ್ಯೋತಿಯನು ತನ್ನಲಿಯಿರಿಸಿ ವಾರಾಹ ರೂಪದಿಂದಲಿ ಆಟವಾಡ್ದೆ35 ಶಿಲ್ಪಿಯಿಂ ರೂಪುಗೊಂಡಿಹ ಕಂಬದಲಿಯಿದ್ದು ವಿಷ್ಣುವೇ ಪ್ರಹ್ಲಾದ ಮಗುವನುದ್ಧರಿಸೆ ನಂಬಿದೆಡೆಯೆಲ್ಲೆಲ್ಲು ಇರುವೆನೆಂಬುದ ತಿಳಿಸೆ ನರಸಿಂಹ ರೂಪವನು ತಾಳ್ದೆ ಪರಮಾತ್ಮ 36 ಇಂದ್ರಾವರಜನೊಮ್ಮೆ ವಟುವಾಮನನು ಬಂದು ಬಲಿಯ ಯಾಗದ ಸಮಯ ಮೂಹೆಜ್ಜೆ ಬೇಡೆ ರಾಜ ಕೊಡಬಯಸಲದ ಗುರು ಶುಕ್ರತಡೆದಾಗ ದಾನಿ ಬಲಿ ಕೊಟ್ಟವನು ಸಿದ್ಧಿಯನು ಪಡೆದಾ 37 ಸಂಹಾರ ಲೀಲೆಯನು ತೋರಲವ ಪರಮಾತ್ಮ ಪಿತೃವಾಕ್ಯಪಾಲನೆಗೆ ತಾಯ ತಲೆ ಕಡಿದು ಮಾತೆಯನು ಬದುಕಿಸುತ ದುಷ್ಟರಾಜರ ತರಿದು ರಾಜವಂಶವನು ನಿರ್ವಂಶ ಮಾಡಿದನು 38 ಎದೆಯೊಳಿಹ ಸೀತೆಯನು ಕಾಡೆಲ್ಲ ಹುಡುಕುತ್ತ ಜಲಧಿಗೇ ಕಟ್ಟಿ ಸೇತುವೆಯ ಸಿರಿವರನು ಕಪಿ ಸೈನ್ಯದೊಡಗೂಡಿ ಲಂಕೆಯನ್ನೈದುತ್ತ ರಾವಣನ ಕೊಂದು ಸೀತೆಯ ಮರಳಿ ತಂದೆ 39 ಇಬ್ಬರನು ತಾಯಂದಿರನು ರಮಿಸಿ ಮಗುವಾಗಿ ಪದಿನಾರು ಸಾಸಿರದ ಸತಿಯರನು ಒಲಿಸಿ ಏಕಕಾಲದಲಿ ಎಲ್ಲರನು ಮೆಚ್ಚಿಸಿದ ಹರಿ ಆನಂದರೂಪದವ ಪರಮಾತ್ಮ ನಿಜವು 40 ತಾಮಸದ ಜೀವರನಧೋಗತಿಗೆಯಿಳಿಸುತಲಿ ಬುದ್ಧ ರೂಪದಲಿ ತ್ರಿವಿಧ ಜೀವಂಗಳಿಗೆ ಯೋಗ್ಯತೆಗೆ ತಕ್ಕಂತೆ ಗತಿಯಾಗಿಸುವದೆ ನಿನ್ನ ಸಂಕಲ್ಪವದಲಾ 41 ಧರ್ಮವದು ನಶಿಸುತಲಿ ದುಷ್ಟರಾಜರು ತುಂಬೆ ಕಲಿಯುಗದ ಕೊನೆಯಲ್ಲಿ ಕಲ್ಕಿ ರೂಪದಲಿ ಅಶ್ವವನ್ನೇರುತಲಿ ದುಷ್ಟರನು ಸಂಹರಿಸಿ ಕೃತಯುಗವ ಮಾಡಿದೆಯ ಪರಮಾತ್ಮ ನೀನು 42 ಕಾಣದಾ ದೇವರಿಗೆ ಭಕ್ತಿಯಿಂ ಪೂಜಿಸಲು ಹತ್ತು ರೂಪಗಳಿವುಗಳೇ ಮುಖ್ಯವದರಿಂ ಅವತಾರ ರೂಪಗಳ ಪ್ರತಿಮೆಗಳ ಪೂಜಿಸುತ ಸರ್ವಾರ್ಥಸಿದ್ಧಿಗಳ ಪಡೆಯುವರು ಜನರು 43 ವೇದೋಕ್ತ ಪದಗಳಿಗೆ ಮುಖ್ಯಾರ್ಥ ಹರಿಯಿಹನು ಅಗ್ನ್ಯಾದಿ ನಾಮಗಳು ದೇವರಿಗೆಯಿಹವು ದೇವತೆಗಳಿಗೆಲ್ಲ ಅಗ್ರಣಿಯು ತಾನಾಗಿ ಅಗ್ನಿನಾಮವು ನಿನಗೆ ಒಪ್ಪುವುದು ಹರಿಯೆ 44 ಇಂದ್ರಿಯಂಗಳೆ ಕುದುರೆ ಬುದ್ಧಿಯೇ ಸಾರಥಿಯು ಮನವೆಂಬ ಕಡಿವಾಣ ಹಿಡಿದೋಡಿಸುವವನು ಜೀವನೇ ರಥಿಕನವ ವಿಷಯಬೇಟೆಗಳಲ್ಲಿ ಪರಮಾತ್ಮನರಿವೆಂತು ಮೂಡುವುದು ಅವಗೆ 45 ವಾಸದಿಂ ಬೆಳಗಿಸುವ ವಾಸುದೇವನು ತಾನು ವರುಣನಂತರ್ಗತನು ಶಿರದಲ್ಲಿಯಿಹನು ಸಪ್ತರಂಧ್ರಗಳಲ್ಲಿ ವಿದ್ಯುತ್ತ ಹರಿಸುತಲಿ ಜ್ಞಾನವನ್ನೊದಗಿಪನು ಶ್ರೀಕೃಷ್ಣನವನು 46 ವಿಜ್ಞಾನಿ ಭಗವಂತ ಹೃದಯ ಗುಹೆಯಲ್ಲಿಹನು ಅನಿರುದ್ಧ ಯಜ್ಞೇಶ ಮೊದಲಾದ ಪೆಸರಿಂ ಪ್ರಾಣವಾಯುಗಳ ಜೊತೆ ಪಾಕವನು ಗೈಯುತ್ತ ರಕ್ತರೂಪವ ಮಾಡಿ ಪಾಲಿಸುವ ನಮ್ಮ47 ಪ್ರಾಕೃತ ಜ್ಯೋತಿಯಾದೊಡೆ ದೇಹ ಸುಡದಿರದು ಅಪ್ರಾಕೃತ ಜ್ಯೋತಿ ಯಜ್ಞೇಶಗಿಹುದು ಭಕ್ಷ್ಯಭೋಜ್ಯಗಳೆಂಬ ಲೇಹ್ಯಪೇಯಗಳೆಂಬ ನಾಲ್ಕುವಿಧ ವಸ್ತುವಿನ ಪಾಕ ಮಾಡುವನು 48 ವಾಯುವಂತರ್ಗತನು ನೀಲರೂಪದ ದೇವ ಪ್ರದ್ಯುಮ್ನನಾಮಕನು ನಾಭಿಯಲ್ಲಿಹನು ಕಾಮರೂಪಿಯು ಅವನಪಾನಕ್ಕೆ ಒಡೆಯನವ ಪುರುಷರಿಂದಲಿ ಸೃಷ್ಟಿಗವನೆ ಕಾರಣನು 49 ಪೃಥ್ವಿವಿಯಪ್ ತೇಜಸ್ಸು ಮೂರು ದೇಹದ ಮೂಲ ಶ್ರೇಷ್ಠ ವಾಯುವು ಸೇರಿ ದೇಹಕ್ಕೆ ಚಲನೆ ಹೃದಯದಲ್ಲಾಗಸವು ಇರುವ ಕಾರಣದಿಂದ ಪಂಚಭೂತಂಗಳಿವು ದೇಹದಲ್ಲಿಹವು 50 ವಾಯುವಿನ ಜೊತೆಗೂಡಿ ದೇಹಚಾಲಕನು ಯಂತ್ರರೂಪದಲ್ಲಿದ್ದು ಯೋಗ್ಯತೆಗೆ ತಕ್ಕಂತೆ ಕಾರ್ಯವನು ಮಾಡಿಸುತ ಫಲವನ್ನು ಕೊಡುವ 51
--------------
ನಿಡಂಬೂರು ರಾಮದಾಸ
ಬಗೆಬಗೆ ಆಟಗಳೆಲ್ಲಿ ಕಲಿತೆಯೊ |ಜಗದ ಮೋಹಕನೆ ಪಖಗವರಗಮನನೆಅಗಣಿತಮಹಿಮನೆ |ಜಗದೊಳು ನೀ ಬಹು ಮಿಗಿಲಾಗಿ |ಪರಿಅ.ಪಒಬ್ಬಳ ಬಸಿರಿಂದಲಿ ಬಂದು-ಮ-|ತ್ತೊಬ್ಬಳ ಕೈಯಿಂದಲಿ ಬೆಳೆದು ||ಕೊಬ್ಬಿದ ಭೂಭಾರವನಿಳುಹಲು ಇಂಥ |ತಬ್ಬಿಬ್ಬಾಟಗಳೆಲ್ಲಿ ಕಲಿತೆಯೊ 1ಮಗುವಾಗಿ ಪೂತಣಿ ಮೊಲೆಯ-ಉಂಡು |ನಗುತಲವಳ ಅಸುವನೆ ಕೊಂಡು |ಅಘಹರ ನೀ ಗೋಪಿಯೊಳು ಜನಿಸಿ ಇಂಥ |ಸೊಗಸಿನ ಆಟಗಳೆಲ್ಲಿ ಕಲಿತೆಯೊ 2ಲೋಕರಂತೆ ನೀ ಮಣ್ಣನು ತಿನಲು |ತಾ ಕೋಪಿಸಿ ಜನನಿಯು ಬೇಗ ||ಓಕರಿಸೆನ್ನಲು ಬಾಯೊಳು ಸಕಲ |ಲೋಕವ ತೋರಿದುದೆಲ್ಲಿ ಕಲಿತೆಯೊ | 3ಮಡುವ ಧುಮುಕಿ ಕಾಳಿಂಗನ ಪಿಡಿದು |ಪಡೆಯ ಮೇಲೆ ಕುಣಿದಾಡುತಿರೆ ||ಮಡದಿಯರು ನಿನ್ನ ಬಿಡದೆ ಬೇಡಲು |ಕಡುದಯೆದೋರಿದುದೆಲ್ಲಿ ಕಲಿತೆಯೊ | 4ಒಂದುಪಾದಭೂಮಿಯಲಿ ವ್ಯಾಪಿಸಿ ಮ-|ತ್ತೊಂದುಪಾದಗಗನಕ್ಕಿಡಲು ||ಅಂದದಿ ಬಲಿಯ ಶಿರದಿ ಮೂರನೆಯದಿಟ್ಟು |ಬಂಧಿಸಿದಾಟಗಳೆಲ್ಲಿ ಕಲಿತೆಯೊ | 5ಭರದಿ ಭಸ್ಮಾಸುರ ವರವನು ಪಡೆದು |ಹರನು ಶಿರದಿ ಕರವಿಡ ಬರಲು ||ತರುಣಿರೂಪವ ತಾಳಿ ಉರಿಹಸ್ತದವನ |ಮರುಳುಗೊಳಿಸಿದುದನೆಲ್ಲಿ ಕಲಿತೆಯೊ | 6ಜಗಕೆ ಮೂಲನೆಂದು ನಾಗರಾಜ ಕರೆಯೆ |ಖಗವಾಹನನಾಗದೆ ನೀ ಬಂದು ||ನಗುತ ನಗುತ ಆ ವಿಗಡನಕ್ರನ ಕೊಂದ |ಹಗರಣದಾಟಗಳೆಲ್ಲಿ ಕಲಿತೆಯೊ 7ವೇದಗಳರಸಿಯು ಕಾಣದ ಬ್ರಹ್ಮ ನೀ-|ನಾದರದಲಿ ವಿದುರನ ಗೃಹದಿ ||ಮೋದದಿ ಒಕ್ಕುಡಿತೆಯ ಪಾಲನೆ ಕೊಂಡು |ಹಾದಿಯೊಳ್ ಹರಿಸಿದುದೆಲ್ಲಿ ಕಲಿತೆಯೊ 8ಡಂಬಕಹಿರಣ್ಯಕಶಿಪು ಪ್ರಹ್ಲಾದನ |ಹಂಬಲವಿಲ್ಲದೆ ಶಿಕ್ಷಿಸಲು ||ಸ್ತಂಭದಿ ಭಕ್ತಗೆ ರೂಪವ ತೋರಿ |ಸಂಭ್ರಮವಿತ್ತುದನೆಲ್ಲಿ ಕಲಿತೆಯೊ 9ಚಕ್ರಧರನೆ ಜರಾತನಯನೊಂದಿಗೆ ಕಾದಿ |ಸಿಕ್ಕಿ ಓಡಿದವನಿವನೆಂದೆನಿಸಿ ||ಭಕ್ತ ಭೀಮನ ಕೈಯಲಿ ಕೊಲ್ಲಿಸಿದ |ಠಕ್ಕಿನಾಟಗಳನೆಲ್ಲಿ ಕಲಿತೆಯೊ | 10ಆ ಶಿರವಾತನ ತಂದೆಯ ಕರದೊಳು |ಸೂಸುತ ರಕ್ತವ ಬೀಳುತಿರೆ ||ಸೋಸಿ ನೋಡದೆ ರುಂಡ ಬಿಸುಡಲವನ ಶಿರ |ಸಾಸಿರ ಮಾಡಿದುದೆಲ್ಲಿ ಕಲಿತೆಯೊ 11ಪ್ರಾಣ ಸೆಳೆವನೀ ದಿನವೆಂದರ್ಜುನ |ಧೇನಿಸದಲೆ ಸೈಂಧವಗೆನಲು ||ಕಾಣದಂತೆ ಸೂರ್ಯಗೆ ಚಕ್ರವನಿಟ್ಟು |ಬಾಣ ಹೊಡಿಸಿದುದನೆಲ್ಲಿ ಕಲಿತೆಯೊ 12ಸರ್ಪನ ಬಾಣವು ಉರಿಯುತ ಬರಲು ಕಂ-|ದರ್ಪನ ಪಿತ ನೀ ಕರುಣದಲಿ ||ತಪ್ಪಿಸಿ ಪಾರ್ಥನ ರಥ ನೆಲಕೊತ್ತಿ |ತೋರ್ಪಡಿಸಿದಾಟವೆಲ್ಲಿ ಕಲಿತೆಯೊ 13ದುರುಳದುಃಶಾಸನ ದ್ರೌಪದಿ ಸೀರೆಯ |ಕರದಿಂದ ಸಭೆಯೊಳು ಸೆಳೆಯುತಿರೆ ||ಹರಿಶ್ರೀ ಕೃಷ್ಣ ನೀ ಪೊರೆಯೆನಲಾಕ್ಷಣ |ಅರಿವೆ ರೂಪದೆ ಬಂದುದೆಲ್ಲಿ ಕಲಿತೆಯೊ 14ಕುರುಪತಿ ಸಭೆಯೊಳು ಗುರುವಿನಿಂದಿರುತ |ಸಿರಿಕೃಷ್ಣನು ಬರೆ ವಂದಿಸದೆ ||ಸ್ಥಿರವಾಗಿ ಕುಳಿತಿರೆ ಚರಣದಿ ಧರೆಮೆಟ್ಟಿ |ಕುರುಪನನುರುಳಿಸಿದ್ದೆಲ್ಲಿ ಕಲಿತೆಯೊ | 15ದುರಿಯೋಧನ ಪಾಂಡವರ ಶಿಕ್ಷಿಸಲು |ಮೊರೆಯಿಡಲವನ ಮರುಳುಗೊಳಿಸಿ ||ಧುರದೊಳುಪಾರ್ಥಗೆ ಸಾರಥಿಯಾಗಿ ನೀ |ಕುರುಕುಲವಳಿದುದನೆಲ್ಲಿ ಕಲಿತೆಯೊ | 16ಪತಿಶಾಪದಿ ಶಿಲೆಯಾದ ಅಹಲ್ಯೆಯ |ಹಿತದಿಂದವಳನು ಉದ್ಧರಿಸಿ ||ಪತಿಯೊಡಗೂಡಿಸಿ ಪತಿವ್ರತೆಯೆನಿಸಿದ-ಅ-|ಮಿತಮಹಿಮೆಯ ಕೃತಿಯೆಲ್ಲಿ ಕಲಿತೆಯೊ 17ಅಂಬರೀಷ ದ್ವಾದಶಿ ವ್ರತ ಸಾಧಿಸೆ |ಡೊಂಬೆತನದಿದೂರ್ವಾಸಬರೆ ||ಇಂದುಧರಾಂಶನು ರಾಜನ ಪೀಡಿಸ-|ಲಂದು ಚಕ್ರದಿ ಕಾಯ್ದುದೆಲ್ಲಿ ಕಲಿತೆಯೊ | 18ಕುಲಛಲಗಳನಳಿದ ಅಜಮಿಳ ಸರಸದಿ |ಹೊಲತಿಯ ಕೂಡಿರೆ ಮರಣ ಬರೆ ||ಬಲು ಮೋಹದ ಸುತ ನಾರಗನೊದರಲು |ಒಲಿದು ಗತಿಯನಿತ್ತುದೆಲ್ಲಿ ಕಲಿತೆಯೊ 19ಬಡತನ ಪಾರ್ವನ ಬಿಡದೆ ಬಾಧಿಸಲು |ಮಡದಿಯ ನುಡಿಕೇಳಿಆಕ್ಷಣದಿ ||ಒಡೆಯ ನೀನವನೊಪ್ಪಿಡಿಯವಲನು ಕೊಂಡು |ಕಡುಭಾಗ್ಯನಿತ್ತುದನೆಲ್ಲಿ ಕಲಿತೆಯೊ | 20ಎಂದೆಂದು ನಿನ್ನ ಗುಣವೃಂದಗಳೆಣಿಸಲು |ಇಂದಿರೆಬೊಮ್ಮನಿಗಸದಳವು ||ಮಂದರಧರಸಿರೆಪುರಂದರವಿಠಲನೆ |ಚೆಂದ-ಚೆಂದದಾಟಗಳೆಲ್ಲಿ ಕಲಿತೆಯೊ 21
--------------
ಪುರಂದರದಾಸರು
ಲಾಲಿಮುಕುಂದಲಾಲಿಗೋವಿಂದಲಾಲಿಮಯ್ಯಲಾಲಿಲಾಲಿಮೂರೈದಲಿಪ್ಪೆಲ್ಲಾಲಯರ ಪ್ರಭುಲಾಲಿಮಯ್ಯಲಾಲಿಪ.ಜಗ ಜಗುಳಿಸಿ ವಟಪತ್ರದಿ ಮಲಗಿದೆಲಾಲಿಮಯ್ಯಲಾಲಿಮಗುವಾಗಿ ವ್ರಜದೊಳು ತೊಟ್ಟಿಲೊಳೊಪ್ಪಿದೆಲಾಲಿ ಮಯ್ಯಲಾಲಿ1ಸ್ವಗತ ಭೇದ ವಜ್ರ್ಯ ಪರಮಾತ್ಮ ಪರಬ್ರಹ್ಮಜಗದ ಜೀವರ ಬಿಂಬಮೂರ್ತಿಅನಂತನೆಪಯೋನಿಧಿವಾಸ ಪರೇಶ ಪರಿಪೂರ್ಣಶ್ರೀಯರಸ ವೈಕುಂಠವಲ್ಲಭ ಕೃಷ್ಣಯ್ಯಸುರರ ಪುಣ್ಯದವಲ್ಲಿಫಲಿಸಲಿಲ್ಲುದಯಾದೆಧರೆಯ ಪಾವನ ಮಾಡೆ ಪಾಂಡವರಕಾಯಬಂದೆಅಜಮಿಳ ಗಜರಾಜ ಧ್ರುವ ಅಂಬರೀಷಪಾಲಸುಜನಪ್ರಹ್ಲಾದನ ಸಲಹಿದ ನರಹರಿಅಸಮ ಬಾಲಕನಾದೆ ಅವ್ಯಾಕೃತಾಂಗನೆವಿಷಮ ವಿದೂರಾಗಣಿತ ಸುಗುಣಾರ್ಣವಸ್ಮøತಿಗಿರಿಧರೆಶಿಶು ಮೃಗಚೇಲಧರ ಭಾರ್ಗವಕ್ರತುಕೃಷ್ಣೆಭವಧರ್ಮಪಾಲ ಪ್ರಸನ್ವೆಂಕಟೇಶ
--------------
ಪ್ರಸನ್ನವೆಂಕಟದಾಸರು
ಹೊಯ್ಯಾಲೊ ಡಂಗುರವ - ಜಗ - |ದಯ್ಯನಯ್ಯ ಶ್ರೀಹರಿ ಅಲ್ಲದಿಲ್ಲವೆಂದುಪ.ಅಷ್ಟೈಶ್ವರ್ಯದ ಲಕುಮಿಯ ಅರಸೆಂದು |ಸೃಷ್ಟಿ - ಸ್ಥಿತಿ - ಲಯಕರ್ತನೆಂದು ||ಗಟ್ಟಿಯಾಗಿ ತಿಳಿದುಹರಿ ಎನ್ನದವರೆಲ್ಲ |ಭ್ರಷ್ಟರಾದರು ಇಹ - ಪರಕೆ ಬಾಹ್ಯರು ಎಂದು 1ಹರಿಯೆಂಬ ಬಾಲನ ಹರಹರ ಎನ್ನೆಂದು |ಕರುಣವಿಲ್ಲದೆ ಪಿತ ಬಾಧಿಸಲು ||ತರಳನ ಮೊರೆಕೇಳಿ ನರಮೃಗರೂಪದಿ |ಹರಿಯ ನಿಂದಕನ ಸಂಹರಿಸಿದ ಮಹಿಮೆಯ 2ಕರಿ ಆದಿಮೂಲನೆ ಕಾಯೆಂದು ಮೊರೆಯಿಡೆ |ಸುರರನು ಕರೆಯಲು ಬಲ್ಲದಿರೆ ||ಗರುಡನನೇರದೆ ಬಂದು ಮಕರಿಯ ಸೀಳ್ದು |ಕರಿರಾಜನ ಕಾಯ್ದ ಪರದೈವ ಹರಿಯೆಂದು 3ಸುರಪಗೊಲಿದು ಬಲಿಯ ಶಿರವನೊದ್ದಾಗಲೇ |ಸುರಸವು ಉದಿಸೆ ಶ್ರೀ ಹರಿಪಾದದಿ ||ಪರಮೇಷ್ಟಿ ತೊಳೆಯಲು ಪವಿತ್ರೋದಕವೆಂದು |ಹರ ತನ್ನ ಶಿರದಲ್ಲಿ ಧರಿಸಿದ ಮಹಿಮೆಯ 4ಮಾನಸಲಿಂಗಪೂಜೆಗೆ ಮೆಚ್ಚಿ ಶಿವ ಬಂದು |ಬಾಣನ ಬಾಗಿಲ ಕಾಯ್ದಿರಲು |ದಾನವಾಂತಕ ಸಾಸಿರ ತೋಳ ಕಡಿವಾಗ |ಮೌನದಿಂದೊಪ್ಪಿಸಿಕೊಟ್ಟ ಶಿವನು ಎಂದು 5ಭಕ್ತಗೊಲಿದು ಭಸ್ಮಾಸುರಗೆ ಶಿವ ವರವಿತ್ತು |ಭಕ್ತನ ಭಯದಿಂದ ಓಡುತಿರೆ ||ಯುಕ್ತಿಯಿಂದಸುರನ ಸುಟ್ಟು ಶಿವನ ಕಾಯ್ದ |ಶಕನು ಶ್ರೀಹರಿ ಅಲ್ಲದಿಲ್ಲವೆಂದು 6ಗರಳಜ್ವಾಲೆಗೆ ಸಿರಿರಾಮ - ರಾಮನೆಂದು |ಸ್ಮರಿಸುತಿರಲು ಉಮೆಯರಸನಾಗ ||ಕೊರಳು ಶೀತಲವಾಗೆ ಸಿತಿಕಂಠ ತನ್ನಯ |ಗಿರಿಜೆಗೆ - ರಾಮಮಂತ್ರವ ಕೊಟ್ಟ ಮಹಿಮೆಯ 7ಹರಬ್ರಹ್ಮ ಮೊದಲಾದ ಸುರರನುದಶಶಿರ |ಸೆರೆಹಿಡಿದು ಸೇವೆಯ ಕೊಳುತಿರಲು ||ಶರಧಿಯ ದಾಟಿ ರಾವಣನ ಸಂಹರಿಸಿದ |ಸುರರ ಲಜ್ಜೆಯ ಕಾಯ್ದ ಪರದೈವ ಹರಿಯೆಂದು 8ಜಗದುದ್ಧಾರನು ಜಗವ ಪೊರೆವನೀತ |ಜಗ ಬ್ರಹ್ಮಪ್ರಳಯದಿ ಮುಳುಗಲಾಗಿ ||ಮಗುವಾಗಿ ಜಗವನುದ್ಧರಿಸಿ ಪವಡಿಸಿ ಮತ್ತೆ |ಜಗದ ಜನಕಪುರಂದರವಿಠಲನೆಂದು9
--------------
ಪುರಂದರದಾಸರು