ಒಟ್ಟು 37 ಕಡೆಗಳಲ್ಲಿ , 23 ದಾಸರು , 33 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಇ) ಲೋಕನೀತಿ ಮಾಧವ ಎನಬಾರದೆ ಜೀವ ಕಾಲ ಪ ಆಚಿಂತೆ ಈ ಚಿಂತೆ ಎಲ್ಲಾ ಚಿಂತೆಯನು ಕಿಂಚಿತ್ತು ಹೊತ್ತು ಬಂತೆಯಾದೆ ನಾನು ಅ.ಪ ಪತಿಯ ಚಿಂತೆ ಪರಸತಿಯ ಚಿಂತೆ ಅತಿಯಾದ ಮೋಹದ ಮಕ್ಕಳ ಚಿಂತೆ ಪ್ರತಿದಿನ ತುತ್ತಿನ ಚೀಲದ ಚಿಂತೆ ಮತ್ತೇನು ಅದಕಾಗಿ ಆಸ್ತಿಯ ಚಿಂತೆ 1 ಆಸ್ತಿಮಾಡಿದರೆ ಕಾಯುವ ಚಿಂತೆ ಜಾಸ್ತಿ ಸೇರಿದರೆ ಕನಲುವ ಚಿಂತೆ ಸುಸ್ತಿ ಬಡ್ಡಿಯಲಿ ಬೇಯುವ ಚಿಂತೆ ಸುಸ್ತಾಗಿ ಸೊರಗುವ ನೋವಿನ ಚಿಂತೆ 2 ಬದುಕಿದರೂ ಚಿಂತೆ ಬಾಳಿದರೂ ಚಿಂತೆ ಬದುಕ ಸಹಿಸದ ಮೂಢರಿಂದ ಚಿಂತೆ ಮುದದಿ ಕಾಯುವ ಮಾಧವನ ಚಿಂತೆ ಬಾಧಿಸದಲ್ಲೋ ಕೊಂಚವು ತಂದೆ 3 ಆ ಚಿಂತೆ ಈ ಚಿಂತೆ ಯಾಚಿಂತೆಯೊಳಗಿಂದ ಆಚೆಗೆ ಎಳೆತಂದು ಮತಿಯನು ನೀಡೋ ಅಚಿಂತ್ಯ ನಿನ್ನನೆ ಚಿಂತಿಸುವಂತೆನ್ನ ನಿಶ್ಚಿಂತನಾಗಿಸೊ ಜಾಜಿಪುರೀಶ 4
--------------
ನಾರಾಯಣಶರ್ಮರು
(ಊ) ಆತ್ಮನಿವೇದನೆ ಇಟ್ಟಂತೆ ಇರುವೆನೊ ಹರಿಯೇ ನೀನು ಕೊಟ್ಟದ್ದನ್ನುಣ್ಣುವೆ ಮತ್ತೇನು ಧೊರೆಯೇ ಪ ಪಟ್ಟೆಪೀತಾಂಬರ ಕೊಟ್ಟರೆ ಉಡುವೆನುಬಟ್ಟೆಯಿಲ್ಲದಿರೆ ಚಿಂದಿತೊಟ್ಟು ನಾನಿರುವೆನೊಮೃಷ್ಟಾನ್ನ ಭೋಜನವಿತ್ತರೆ ಉಣ್ಣುವೆ ಉ-ಚ್ಛಿಷ್ಟನ್ನವನಿತ್ತನೆ ತುಷ್ಟಿಲೆ ತಿನ್ನುವೆ 1 ಹಾಸಿಗೆ ಕೊಟ್ಟರೆ ನಾ ಮಲಗುವೆಭೂಶಯನವಿತ್ತರೆ ಅಲ್ಲಿಯೆ ಒರಗುವೆಆ ಶಾಲು ಕೊಟ್ಟರೆ ಹೊದೆಯದೆ ಬಿಡದಾಕಾಶವ ಹೊದಿಯೆಂದರೆ ಹೊದೆಯುವೆ ಬರಿಯೆ 2 ನೀಕೊಟ್ಟರುಂಟು ಕೊಡದಿದ್ದರೇನುಂಟುಬೇಕು ಬೇಡಗಳು ನಿನ್ನಿಚ್ಛೆಯಾಧೀನಲೋಕೇಶ ಗದುಗಿನ ವೀರನಾರಾಯಣಸಾಕು ಬಿಡಿಸಯ್ಯ ನರಜನ್ಮದ ಗಂಟು 3
--------------
ವೀರನಾರಾಯಣ
101. ಹರಿಹರ ಧ್ರುವತಾಳ ಹರಿಹರರಿಬ್ಬರು ಒಂದೇ ರೂಪವ ಧರಿಸಿ | ದುರುಳ ಗುಹಾಸುರನ ಕೊಂದರೆಂದೂ | ಮರಳು ಮಾನವರು ತಿಳಿಯಾದೆ ನುಡಿವರು | ಹರಿಹರರೀರ್ವರು ಏರವಾದರೆ ಅಂದು | ಹರನು ಮೈಮರೆದು ನಿಂದನ್ಯಾತಕೆ | ಧಾರುಣಿಯೊಳಗೆ ಹಿರಣ್ಯಕಶಿಪು ದೈತ್ಯ | ಸುರರ ಓಡಿಸಿ ಪ್ರಬಲನಾಗಿರೆ | ಪರಮ ಪುರುಷ ಹರಿ ನರಹರಿರೂಪವನ್ನು | ಧರಿಸಿ ರಕ್ಕಸನ್ನ ಕೊಲ್ಲುವಾಗಲಿ, ಕೇ | ಸರಿಯಾ ಬಳಿಗೆ ಪೋಗಿ ಮಾರೆಯಾ ಬೇಡಿಕೊಂಡು | ಮೆರದಾನೇನೋ ಅವತಾರ ಮಾಡಿ | ಹರಿಯ ಅದ್ಭೂತ ಶಕ್ತಿ ನಾನಾ ಲೀಲಾ ವಿನೋದ | ಚರಿಸೂವ ಪರಬೊಮ್ಮ ಗುಣಪೂರ್ಣ ನೂ | ತುರಗವದನ ಮತ್ಸ್ಯಕೂರ್ಮಸೂಕರ ವೇಷ | ಧರಿಸಿದಾತನು ಕಾಣೋ ಯುಗಯುಗದೀ | ಕರುಣಾಸಿಂಧು ನಮ್ಮ ವಿಜಯವಿಠಲರೇಯಾ | ಹರಿಹರ ರೂಪ ಧರಿಸಿದ ಕಾಣಿರೋ 1 ಮಟ್ಟತಾಳ ದೀಪದ ಉಪಕಾರ ದಿನಪಗೆ ಏನಾಹದು | ಭೂಪತಿಗಾಳಿನ ಅನುಸುಣ್ಯಾತಕೆ | ಕೋಪವನು ತಾಳಿ ಭೃಗುಮುನಿ ಕೈಯಿಂದ | ಶಾಪನ ಕೈಕೊಂಡನಂದು ಭಸ್ಮಾ ಸುರನ | ಆ ಪತ್ತಿಗಾರದೆ ಮೊರೆ ಇಡಲು ಕೇಳಿ | ಶ್ರೀಪತಿ ಮೊಗದಲಿ ಕಾಯದದ್ದು ಕಾಣದೆ | ಗೋಪಾಲ ವಿಜಯವಿಠಲ ಹರಿಹರ | ರೂಪವು ತಾನಾದ ಅನೇಕ ರೂಪನೊ 2 ತ್ರಿವಿಡಿತಾಳ ಕಂತು ಜನಕ ಶಿವನ ಬೇಡಿಕೊಂಡದ್ದು ಪುರಾ | ಣಾಂತರದಲ್ಲಿ ಪೇಳುತಿವೆ ನೋಡಿಕೊ | ಎಂತಾಹದೀ ನುಡಿ ಸಿದ್ಧವಲ್ಲವೊ ಶ್ರೀ | ನಖ ಮೌಳಿ ಅಭೀದಾನು | ವೈರಿ ಅರ್ಧಂಗವನೆ ತಾಳಿ | ನಿಂತಿಪ್ಪ ಶ್ರೀ ಹರಿಯಾ ಕೂಡಾ | ನಂತಾ ಕಲ್ಪರೆ ನಿಗಮಾ ಗೋಚರ ಸರ್ವ | ಸ್ವತಂತ್ರನು ಒಬ್ಬಾರ ಹಂಗಿಗಾನೆ | ಚಿಂತಾಮಣಿಯಾ ಬಳಿಯಾ ನಾಡ ಹರಳನೆ ತಂದು | ಸಂತತವಿಟ್ಟರೆ ಸರಿಯಾಗೋದೆ | ಸಂತೋಷ ಪೂರ್ಣಗೆ ದೈತ್ಯನ ಕೊಲ್ಲುವುದಕೆ | ಚಿಂತೆಮಾಡಿದನೆಂಬೊ ವಾರ್ತಿಯೇನೂ | ನಿತ್ಯ ಮೇಹಕವನೆ ತೋರಿ | ಅಂತು ಗಾಣದ ನರಕಕ್ಕೆ ಹಾಕೂವ | ದಂತಿ ವರದ ದೇವ ವಿಜಯವಿಠಲ ಜಗ | ದಂತರಿಯಾಮಿಗೆ ಅಸಾಧ್ಯ ಬಂದಿಲ್ಲ 3 ಅಟ್ಟತಾಳ ಹರಗೆ ಈ ಪ್ರತಿಪ ಉಳ್ಳರೆ ಭಸುಮಾ | ಸುರಗಂಜಿ ಹರಿಗೆ ಮೊರೆ ಇಡುವನೇನೊ | ಜರಸಂಧನಿಗೆ ಇತ್ತಾವರ ಮತ್ತೇನಾಯಿತು | ಮರಳಿ ರಾಮನಕೂಡ ಶರಧನು ಪಿಡಿದು ಮೈ | ಮರೆದು ನಿಂದದ್ದು ಸರ್ವ ಜಗ ವೆಲ್ಲ ಬಲ್ಲದು | ಕರಿ ರಾಜಾ ಆ ಮೂಲಾವೆಂದು ಕರೆವಾಗ | ಪರಮೇಷ್ಠಿ ಶಿವನೊ ಮತ್ತಾವನೊ ಕಾಯ್ದವ | ಸುರರೊಳಗೀತಾ ಗಿಂದಧಿಕ ದೇವರು ಇಲ್ಲಾ | ಹರಿಹರರೂಪಾ ಶ್ರೀ ವಿಜಯವಿಠಲರೇಯಾ | ಚರಿತೆಯ ತೋರುವ ಅವರ ಯೋಗ್ಯತಾದಷ್ಟು 4 ಆದಿತಾಳ ತ್ರಿಶೂಲ ಡಮರುಗ ಭಸಿತ ರುದ್ರಾಕ್ಷಿಯು | ಪಶುವಾಹನನಾಗಿ ಇಪ್ಪದಿದೆ | ಅಸುರಾರಿಯಲ್ಲದೆ ಅನ್ಯರೂಪಗಳಲ್ಲ | ಹಸನಾಗಿ ತಿಳಿದು ಈತನ ಮಹಿಮೆ ಕೊಂಡಾಡಿ | ಕೆಸರು ಕಸ್ತೂರಿಯಾದರೆ ಕೌತುಕವಲ್ಲವೇನೊ | ಶಶಿಧರ ಹರಿರೂಪ ದೊ[ಳು]ಕೂಡುವನೆ | ವಶವಾಗಿ ಇಪ್ಪನು ತದ್ರೂಪಾದಂತೆ ಕಾಣೊ | ಕುಶನ ಬಯಸುವನು ಸಮನಾಗಿ ನಿಲ್ಲುವನೆ | ಪಶುಗಳ ಕಾಯ್ದ ನಮ್ಮ ವಿಜಯವಿಠಲ ಪ | ರಶುರಾಮ ಕ್ಷೇತ್ರದಲಿ ಹರಿಹರ ರೂಪನಾದಾ 5 ಜತೆ ತುಂಗಮಹಿಮೆ ದೇವೋತ್ತುಂಗಾ ತುಂಗಾವಾಸ | ರಂಗ ವಿಜಯವಿಠಲ ಹರಿಹರ ಮೂರುತಿ 6
--------------
ವಿಜಯದಾಸ
ಅಧ್ಯಾಯ ಮೂರು ಪದ್ಯ ಭಕ್ತರಭಿಮಾನಿ ಶಿವಶಕ್ತಿ ಎಂಬುವ ಸೂರ್ಯದೈತ್ಯವರ್ಯನು ಎಂಬೊ ಕತ್ತತಿಯ ಸಂಹರಿಸಿ ಮತ್ತು ದಿತನಾಗಿರಲು ಇತ್ತ ಅನುಭೂತಿಯಾಗುತ್ತಾದ ಮುಖಕಮಲ ಮತ್ತಳಿತಾಗೆ|| ಸತ್ಯವಂತಿಯು ದೇವಿ ಸತ್ಯದಿಂದನು ಭೂತಿಗಿತ್ತುತ ಬಾಯಂದು ಮತ್ತೆ ಮುಂದಕೆ ಕರೆದು ಹೆತ್ತ ತಾಯಿಯಂತೆ ಅತ್ಯಂತ ಸ್ನೇಹವ ಸುರಿಸಿ ಒತ್ತಿ ಮಾತಾಡಿದಳು ಮತ್ತೆ ಈ ಪರಿಯ|| 1 ಪದ ರಾಗ :ಶಂಕರಾಭರಣ ಅಟತಾಳ ಸ್ವರ ಷಡ್ಜ ಮತ್ತೇನು ಬೇಕು ನೀಬೇಡಮ್ಮ|| ನಿನ್ನ ಚಿತ್ತದೊಳು ಸಂಶಯ ಬೇಡಮ್ಮ|| ಪ ದೈತ್ಯನ ಸಂಹಾರ ಮಾಡಿದೆ| ನಾ ಮತ್ತೆ ಬಂದು ನಿನ್ನಕೂಡಿದೆ|| ಅಂತಃ ಕರುಣದಿಂದ ನೋಡಿದೆ || ನಿನ್ನೊಳತ್ಯಂತ ಸ್ನೇಹವಮಾಡಿದೆ|| 1 ದಾರು ಧನ್ಯರೆನಿಸಿ ಲೋಕಮಾನ್ಯರು|| 2 ಮಿತ್ರಾನಂತಾದ್ರೀಶಹ್ನಿಡುವವರು||3 ಆರ್ಯಾ ಪರಿ ಪರಿ ಅನುಭೂತಿ ತಿಳಿದಳು ಎಂಬುವರು ಸುಖಸಾರ|| 1 ಸಂಶಯ ಬಿಟ್ಟಾಡಿದಳು ಹೀಗೆಂದೂ||2 ಪದ ರಾಗ:ಕಾಪಿ ತಾಳಬಿಲಂದಿ ಸ್ವರ:ಪಂಚಮ ಇಂದು ತಾಯಿಯೆ|| ಇಂದು ಎಂದೆಂದೂ ದಯಾ ಒಂದೆ ಸಾಕು|| ಪ ದಾವ ಕಾಲಕು ದೇವಿ ನಿನ್ನ ಸೇವೆ ಇರಲಿ|| 1 ನತಿಯು ಮಾಡುವೆ|| ಮತಿಯು ಬೇಡುವೆ|| ಮತಿಯಿಂದಲೆ ಪತಿಯ ಸೇವಿಸಿ ಪತಿಯಿಂದಲೆ ಗತಿಯು ಆಗಲಿ|| 2 ಪ್ರಾತಗಾಣಿ ಸೆ || ಪಂಥಗೆಲ್ಲಿಸೆ || ಸಂತತಾನಂತಾ ಧ್ರೀಶನ ಅಂತರಂಗದಿ ಚಿಂತಿಸುವೆನು||3 ಆರ್ಯಾ ಅನುಭೂತಿಯ ಅನುಸರಿಸಿ || ಅನುಕೂಲ ಸ್ಥಾನ ಅನುದಿನ ಕರದ್ಹೇಳಿದಳು ಹೀಗೆಂದೂ|| ಪದ ರಾಗ:ಕಾನಡಾ ಆದಿತಾಳ ಸ್ವರ ಪಂಚಮ ಬಾರೋ ಬ್ಯಾಗನೆ ಭೈರವಾ|| ನೀ ಪೋಗೀ || ಬ್ಯಾ|| ಯಮುನಾ ತೀರಕೆಪೋಗಿ|| ಪ ದೊಡ್ಡದು|| ಶ್ಯಲವಾಗಿ ಈ ಕಾಲಕ ಅಲ್ಲೊಂದಾಲಯ ನಿರ್ಮಿಸಿಕಾಲಗಳ್ಹಿಯದೆ|| 1 ಬರುವೆನು|| ನಿಂದಿರಲೆ ತ್ವರದಿಂದಲೆ ಪೋಗುತ ಇಂದ ಈ ಕಾರ್ಯವ ಚಂದದಿ ಮಾಡಿ|| 2 ಯಮುನಾದ್ರಿಗೆ ಪೋಗಿ|| 3 ಆರ್ಯಾ ಆ ದೇವಿಯ ಆಜ್ಞಾವನೂ|| ಆದರದಿಂದಲೇ ಧರಿಸಿ ಹೋದಾತನು ಅಲ್ಲೇನಿಂತ ನಿತ್ಯದಲಿ|| 1 ಬರಲಿಲ್ಲಾಕೆಂತೆಂದು|| ತುಳುಜಾ ತಾನಾಗಿ ಅಲ್ಲಿಗೆ ಬಂದು || ಪರಮಾಜ್ಞಾಧಾರಕನಾ || ತ್ವರದಲಿ ನೋಡ್ಯಾಡಿದಳು ಈ ವಚನಾ|| 2 ಪದ ರಾಗ :ಶಂಕರಾಭರಣ ಅಟತಾಳ ಸ್ವರ ಪಂಚಮ ಕಾರ್ಯವಂತಯಂದು ನಿನ್ನ ಉಳಸಿದೆ|| 1 ಇಲ್ಲಿಗೆ ಬಂದ್ಯೋನಿ ಕಾರ್ಯಾರ್ಥಿ|| ಬರದೆ ಇಲ್ಲೇ ನಿಂತಿ ಪಡದಿ ನೀನು ಅಪಕೀರ್ತಿ||2 ಅನಂತಾದ್ರೀಶನ ಆಣೆ ನಿನಗುಂಟು|| 3 ಆರ್ಯಾ ಈ ರೀತಿಯ ನುಡಿ ಕೇಳಿ || ಹೇರಿದ ಅಪರಾಧ ಭಾರವನು ತಾಳಿ|| ಘೋರವು ಬಂತಿದು ಎಂದಾ|| ಭೈರವ ಮಾತಾಡಿದನು ಭಯದಿಂದಾ|| 1 ಪದ ರಾಗ:ಆನಂದ ಭೈರವಿ ಆದಿತಾಳ ಸ್ವರ ಪಂಚಮ ಎನ್ನ ಪರಾಧಾ ಹಿಡಿಬ್ಯಾಡಮ್ಮಾ|| ತಾಯಿಎನ್ನಾ ||ಅಂ|| ಬಹುಕಾಲ ನಿನ್ನವನಾದ ಮ್ಯಾಲೆ|| ಪ ಮದದಿಂದೆ|| ಈಗ ನನ್ನ ಅಪರಾಧದಿಂದ ನಾನೊಂದೆ || ನಿನ್ನ ಹೊರತು ಎನಗಿನ್ಯಾರ್ಹಿತಕರುಂಟು|| 1 ಮಂಗಳಾಂಗನೆ ನಾನು ಮಂಗನಂತಲಿ ನಿಂತೆ|| 2 ಅಚ್ಯುತಾನಂತಾದ್ರೀಶನಿಚೆÀ್ಛಗೆ ಬಂತಿದೆ|| 3 ಪದ್ಯ ಈ ರೀತಿ ನುಡಿಕೇಳಿ ಕಾರುಣ್ಯನಿಧಿ ದೇವಿ ತೋರಿಸ್ನೇಹವು ನಗುತ ಭೈರವನ ಶಿರದಲ್ಲಿ ಚಾರುಹಸ್ನದಿ ಹೊಡೆದಳ್ಹಾರ್ಯ ಭಾವದಲಿ ಆ ಭೈರವನು ಆ ಹಸ್ತಭಾರದಲಿ ವಟುಕಾದ ಉರ್ವಿಯಲಿ ತಾ ಡೋಳ್ಹಭೈರವನು ಎನಿಸಿ || ಪಾರ್ವತಿಯು ಚಾರು ಉರ್ವಿಯಲಿ ಜನರನುದ್ಧಾರ ಮಾಡುತ ಬಿಡದೆ ಸಾರಗಿರಿಯಲಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಇದು ಏನೋ ನಿನ್ನ ಗುಡೀ ಗುಡೀ |ಒಳಗಿನ ಕಸವನು ಹೊಡೀ ಹೊಡೀ ಪ ಹಗಲಿರುಳೊ ನೀ ಬದುಕ ಮಾಡಿ |ಏನು ಗಳಿಸಿದ್ಯೋ ಹುಡೀ ಹುಡೀ ||ಜಗದೊಳು ದೇವನ ತಿಳಿಯಲೊಲ್ಲಿ |ತಿಳಿದೀತೊ ಅಲ್ಲಿಗೆ ನಡೀ ನಡೀ 1 ಹಸಿದು ಬಂದು ನೀ ವಸ್ತಿಯಾಗಿಳಿದರೆ |ಮತ್ತೇನಾರ ಕೊಡೂ ಕೊಡೂ ||ಅಸ್ತಮಯಾದಿತು ಉದಯದಲೆದ್ದು |ತಪ್ಪದೆ ಇಲ್ಲೆಂಬೊ ನುಡೀ ನುಡೀ 2 ನಾಕು ಕಾಯದೊಳು ಎರಡಿಟ್ಟನು ನೀ |ಎರಡನೆ ದೇವರಿಗೊಡೀ ಒಡೀ ||ಲೋಕಪಾಲಕ ಭವತಾರಕನಂಘ್ರಿಯ |ಈ ಕಾಯದಿ ದಯಾ ಪಡೀ ಪಡೀ 3
--------------
ಭಾವತರಕರು
ಇಂದುವದನೆ ಪಾರ್ವತಿಯೆ ನಾ ಇಲ್ಲಿಗೆ ಬಂದೆನು ಬಾಗಿಲು ತೆಗೆಯೆ ಜಾಣೆ ಬಂದೆನು ಬಾಗಿಲು ತೆಗೆಯೆ 1 ಬಂದವರ್ಯಾರೀ ವ್ಯಾಳ್ಯದಿ ಬಾಗಿಲು ಬಂದು ತೆಗೆಯೊರ್ಯಾರಿಲ್ಲ ಈಗ ಬಂದು ತೆಗೆಯೊರ್ಯಾರಿಲ್ಲ 2 ಅಂಗನಾಮಣಿ ಕೇಳೆ ಗಂಗಾಧರೆನಿಸಿದ ಚಂದ್ರಶೇಖರ ನಾ ಬಂದೀನೆ ಜಾಣೆ ಚಂದ್ರಶೇಖರ ನಾ ಬಂದೀನೆ 3 ಸಿಂಧುರಾಜನ ಸತಿಸುತರನ್ಹೊತ್ತಿಲ್ಲಿಗೆ ಬಂದ ಕಾರಣವೇನು ನೀನು ಅವ ರಿಂದ ಕಾರಣ ಮತ್ತೇನು 4 ಪಶುಪತಿ ನಾ ಬಂದೆ ಕುಶಲದಿ ಬಾಗಿಲು ತೆಗೆಯೆ ಜಾಣೆ ಕುಶಲದಿ ಬಾಗಿಲು ತೆಗೆಯೆ 5 ಪಶುಗಳಿಗೆಲ್ಲ ಪತಿಯಾದರೆ ನಿನ ಕೊಂಬು ಹಸನಾಗಿ ತೋರಿಸೊ ಎನಗೆ ಕೊಂಬು ಹಸನಾಗಿ ತೋರಿಸೊ ಎನಗೆ 6 ಸರ್ವಶರೀರದಲ್ಲೆತ್ತಿಕೊಂಡಿರುವಂಥ ಶ್ರೇಷ್ಠ ಶಿವನು ನಾ ಬಂದೀನೆ ಜಾಣೆ ಶ್ರೇಷ್ಠ ಶಿವನು ನಾ ಬಂದೀನೆ 7 ಸರ್ವ ಸೇರಿರುವಂಥ ಹುತ್ತ ನೀನಾದರೆ ಇತ್ತ ಬರುವೋದುಚಿತಲ್ಲ ಪೋಗೊ ಇತ್ತ ಬರುವೋದುಚಿತಲ್ಲ 8 ಕಾಂತೆ ಪಾರ್ವತಿ ನೀಲಕಂಠ ನಾ ಬಂದೀನಿ ಸಂತೋಷದಿ ಬಾಗಿಲು ತೆಗೆಯೆ ಸಂತೋಷದಿ ಬಾಗಿಲು ತೆಗೆಯೆ 9 ಕಂಠದೊಳಗೆ ಕಪ್ಪಿದ್ದರೆ ನೀ ನವಿ- ಲಂತೆ ಕುಣಿದು ತೋರಿಸೆನಗೆ ನವಿ- ಲಂತೆ ಕುಣಿದು ತೋರಿಸೆನಗೆ 10 ಫಾಲಾಕ್ಷ ನಾ ರುಂಡಮಾಲೆ ಧರಿಸಿದಂಥ ಶೂಲಿಯು ನಾನು ಬಂದೀನೆ ತ್ರಿ- ಶೂಲಿಯು ನಾ ಬಂದೀನೆ11 ಮೂರು ಶೂಲೆಗಳ್ಯಾವ್ಯಾವ ಕಡೆಯಲುಂಟು ಭಾಳ ಬಲ್ಲವರಲ್ಲೆ ಪೋಗಯ್ಯ ನೀ ಭಾಳ ಬಲ್ಲವರಲ್ಲೆ ಪೋಗಯ್ಯ 12 ಸ್ಥಾಣು ನಾ ಬಂದೀನಿ ಜಾಣೆ ನೀ ಬಾಗಿಲು ತೆಗೆಯೆ ಒಳ್ಳೆ ಜಾಣೆ ನೀ ಬಾಗಿಲು ತೆಗೆಯೆ 13 ಸ್ಥಾಣು ನೀನಾದರೆ ವೇಣುಮದ್ದಲೆ ಮಾಡೊ ಜಾಣರ ಮನೆಗೆ ನೀ ಪೋಗಯ್ಯ ಒಳ್ಳೆ ಜಾಣರ ಮನೆಗೆ ನೀ ಪೋಗಯ್ಯ 14 ಗಜ ಚ- ರ್ಮಾಂಬರಧಾರನು ನಾನೇ ಚ- ರ್ಮಾಂಬರಧಾರನು ನಾನೇ 15 ವೈರಿ ಭಸ್ಮಾಂಗವ ಧರಿಸಿz À ಸಾಮಜ ವಸನವ ನೋಡಿ ಇರ- ಲಾರೆನು ನಿನ್ನೊಡಗೂಡಿ 16 ಭೂತಗಣಂಗಳ ನಾಥನಾಗಿರುವೊ ಪ್ರ- ಖ್ಯಾತನು ನಾನು ಬಂದೀನೆ ಸದ್ಯೋ- ಜಾತನು ನಾನು ಬಂದೀನೆ 17 ಭೂತಗಣವ ಕೂಡಿ ಯಾತಕೆ ಬರುವುದು ಭೀತಿ ಬಡುವೆ ಮುಂಚೆ ಸಾಗೋ ನಾ ಭೀತಿ ಬಡುವೆ ಮುಂಚೆ ಸಾಗೋ18 ಮಾತಿಗೆ ಮಾತನಾಡುವೋರೆ ಪಾರ್ವತಿ ಕೇಳೆ ಮೂಕನಂತಿರುವೆನೆ ನಾನು ಇನ್ನು ಮೂಕನಂತಿರುವೆನೆ ನಾನು 19 ಮೂಕನಂತಿರುವುದ್ವಿವೇಕ ಭೀಮೇಶಕೃಷ್ಣ- ನ್ನ ಕಾರುಣಕೆ ಪಾತ್ರಳೇನೋ ನಿನಗೆ ನಾ ಕೈಯ ಮುಗಿವೆ ಬಾ ನೀನು 20
--------------
ಹರಪನಹಳ್ಳಿಭೀಮವ್ವ
ಕಾವುದೆಮ್ಮನು ನೀನು ದೇವರಂಗಯ್ಯ ಪ ಭಾವಮೈದುನಗೆ ಬೋವನಾದ ರಂಗಯ್ಯ ನೋವುಬಾರದಂತವನ ಕಾಯ್ದೆ ರಂಗಯ್ಯಾ 1 ಮಾಯವಾದಿಗಳ ಸಂಗ ಬಿಡಿಸೋ ರಂಗಯ್ಯ ತೋಯಜಾಕ್ಷನೆ ಬೇಡುವೆ ಸ್ವಾಮಿ ರಂಗಯ್ಯ 2 ದಾಸತ್ವ ಮಾತ್ರ ದಯಮಾಡೊ ರಂಗಯ್ಯ 3 ಸತ್ತು ಹುಟ್ಟುವಿಕೆ ಬಿಡಿಸಿ ಸಲಹೊ ರಂಗಯ್ಯ ಮತ್ತೇನು ಬೇಡೆನು ಮಮ ಬಂಧು ರಂಗಯ್ಯ 4 ರಂಗೇಶವಿಠಲ ನೀನಲ್ಲವೆ ರಂಗಯ್ಯ ಭಂಗಪಡಲಾರೆ ಭವಹಿಂಗಿಸು ರಂಗಯ್ಯ 5
--------------
ರಂಗೇಶವಿಠಲದಾಸರು
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ
ಕೇಳೆಲೋ ಪ್ರಾಣಿ ನಂಬಿ ಪೂಜಿಸು ಹರಿಯ ಪಾದಾ | ಪಾಲಿಸುವಾ ಗರದು ಅನುಭವ ಬೋಧಾ ಪ ಗುರುವಿನಾ ಬಲಗೊಂಡು ಬಲಿಯೋ ಸ್ವಸುಖ ಪಡಕೋ | ಹರಿಯದೇ ನಾನಾ ಮಾರ್ಗವ ಕಂಡು 1 ಕಂಡ ದೈವಕ ಹಲ್ಲಾ ದೆರೆದು ಬಾಗುವದಲ್ಲಾ | ಮಂಡೆ ದಡವಲ್ಲದೇ ಮತ್ತೇನಿಲ್ಲಾ 2 ಇರಲು ಮನಿಲಿ ಧರಿಲುಳ್ಳಾ ಬಯಸಿದವಟಗಳೆಲ್ಲಾ | ತಿರುಕವ ಬೇಡಿ ಉಂಬುದು ಸಲ್ಲಾ 3 ನೀರಡಿಸಿ ಬರಿಗೈಯ್ಯಾ ನೆಕ್ಕಿದರೇನು ಶ್ರಯಾ | ಗುರುವಿನ ಕೇಳು ಸ್ವಹಿತೋಪಾಯ 4 ಹತ್ತು ಕಟ್ಟುವಕಿಂತ ಮುತ್ತು ಕಟ್ಟಬೇಕೆಂದೇ | ಅರ್ತರೊಲುವನು ಮಹಿಪತಿಸುತಂದೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೊಡುವವನು ನೀನು ಕೊಂಬುವನು ನಾನು ಪ ಬಡಮನದ ಮನುಜನ ಬೇಡಿ ಫಲವೇನುಅ.ಪ ಹದಿನಾರು ಹಲ್ಲುಗಳ ಬಾಯ್ದೆರದು ಬೇಡಿದರೆ ಇದು ಸಮಯವಲ್ಲೆಂದು ಪೇಳಿ ತಾನು ಮದನ ಕೇಳಿಗೆ ನೂರನೊಂದಾಗಿ ನೋಡುವನು ಮದಡ ಮಾನವನೇನು ಕೊಡಬಲ್ಲ ಹರಿಯೆ 1 ಗತಿಯಲ್ಲವೆಂತೆಂದು ನಾನಾ ಪ್ರಕಾರದಲಿ ಮತಿಗೆಟ್ಟು ಪೊಗಳಿದರೆ ಅವನು ತನ್ನ ಸತಿಸುತರ ಕೇಳಬೇಕೆಂದು ಮೊಗ ತಿರುಹುವ ದುರುಳ ಮತ್ತೇನು ಕೊಡಬಲ್ಲ ಹರಿಯೆ 2 ಹೀನ ವೃತ್ತಿಯ ಜನರಿಗಾಸೆಯನು ಬಡುವದು ಗಾಣದೆತ್ತು ತಿರುಗಿ ಬಳಲಿದಂತೆ ಭಾನು ಕೋಟಿ ತೇಜ ವಿಜಯವಿಠ್ಠಲರೇಯ ನೀನಲ್ಲದನ್ಯತ್ರ ಕೊಡುಕೊಂಬುರಂಟೆ 3
--------------
ವಿಜಯದಾಸ
ಗುರುನಾಥ ಗುರುನಾಥ ಹೇಳಿದ ಮಾತು ಮಾತೆನ್ನ ಬಹುದು ಮಾತುವೊಂದೇಪ ವೇದಕ್ಕೆ ನಿಲ್ಲದು ವಿವರಕ್ಕೆ ತೋರದುಆದಿ ಪುರಾಣದ ಅರ್ಥ ಅರ್ಥ ಅದುವಾದಕ್ಕೆ ದೂರದು ಕರವಶವಾಗದುಸಾಧಿಸಿ ತನಗೆ ತಿಳಿದು ಹೇಳಿದ ಮಾತು ಮಾತು ವೊಂದೇ 1 ಮೂರರ ನಡುವದು ಮೂಲವೆ ತಾನದುಧೀರ ಧೀರರೆಲ್ಲ ದಿಟ್ಟಿಪುದುಬೇರೆ ಮತ್ತಿಲ್ಲದು ಬೆಗಡಾಗಿ ಇಹುದು 2 ಸಾರಾಯದಿಂದೆನಗೊಲಿದು ಹೇಳಿದ ಮಾತು ಮಾತುವೊಂದೇಮಾತಿನ ಮಹಿಮೆಯ ಮತ್ತೇನ ಹೇಳಲಿಪ್ರೀತಿ ಎಂಬವೆಲ್ಲ ಪೀಡೆಯಾದವುಭೂತನಾಥ ಚಿದಾನಂದ ಭೂಪತಿಯಾದಈ ತೆರದಲಿ ತಾನಿಂತು ಹೇಳಿದ ಮಾತು ಮಾತುವೊಂದೇ3
--------------
ಚಿದಾನಂದ ಅವಧೂತರು
ಛೀ ನಿನ್ನ ಮೋರೆ ಮೇಲೆ - ಠೊಣ್ಯಛೀ ನಿನ್ನ ಮೋರೆ ಮೇಲೆ ಪ ನಿತ್ಯ ಪರಿ ಆಯುಷ್ಯವ ವ್ಯರ್ಥ ಕಳೆಯುತಿದ್ದೆ ಠೊಣ್ಯ 1 ಕಂಡ ಕಂಡಲ್ಲಿಗೆ ಪೋಗಿ ಧನಂಗಳ ಕೊಂಡು ಬರುತ್ತಲಿದ್ದೆಹೆಂಡಿರು ಮಕ್ಕಳು ಹಿತದವರೆಂದು ಕೊಂಡಾಡುತಲಿದ್ದೆಖೋಡಿ ಮಾತುಗಳನು ಹೇಳಿ ಮಂದಿಯ ಕುಂಡೆ ಚಿವುಟುತಿದ್ದೆಭಂಡ ಬಾಳು ಇದು ರಂಡೆ ಗಂಡ ಕಂಡ್ಯ ಯಮನ ಬಾಧೆ ಠೊಣ್ಯ2 ಮಾನವ ಜನ್ಮಕೆ ಬಂದು ಪುಣ್ಯ ಮತ್ತೇನೂ ಮಾಡದೆ ಹೋದೆದಾನವಾಂತ ಸತ್ಪಾತ್ರರಿಗೆ ನೀ ದೀನತ್ವವ ಪಡೆದೆಜ್ಞಾನಶೂನ್ಯ ಮದವೇರಿದ ಸೊಕ್ಕಿದ ಕೋಣಕೆ ಹುಟ್ಟಿದ್ದೆದೀನರಕ್ಷಕಾದಿಕೇಶವ ವಿಠಲಂಗೆ ನೀನತಿ ದೂರಾದೆ ಠೊಣ್ಯ 3
--------------
ಕನಕದಾಸ
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತ್ರಾಣಿ ಶ್ರೀ ಕೃಷ್ಣವೇಣಿ ಪ್ರಾಣಪತಿ ಪದಕಮಲ ಕಾಣಿಸು ಹೃದಯದಿ ತ್ರಾಣಿ ಶ್ರೀ ಕೃಷ್ಣ ವೇಣಿ ಪ ಯಮಧರ್ಮತನಯೆ ಶ್ರೀ ಕೃಷ್ಣ ಸಂಗದಿ ಜನಿಸಿ ಕಮಲ ಸಂಭವನ ಲೋಕದಲಿ ಮೆರೆದೆ ಸುಮನಸರ ನುಡಿಗೇಳಿ ಲೋಕಗಳ ದುರಿತೋಪ ಶಮನ ಗೊಳಿಸಲು ಬಂದೆ ತುಮಲ ಹರುಷದಲಿ 1 ಭೂತನಾಥನ ಜಟಾಜೂಟದಿಂದುದ್ಭವಿಸಿ ಶ್ವೇತಪಿಂಗಳ ಶೈಲಶಿಖರಕಿಳಿದೇ ಭೂತಳಕೆ ಭೂಷಣಳೆನಿಸಿ ಪೂರ್ವವನಧಿ ನಿ ಕೇತನವನೈದಿ ಸುಖಿಸಿದಿ ನಿನ್ನ ಪತಿಯೊಡನೇ 2 ಪ್ರಾಣಿಗಳು ನಿನ್ನ ಜಲಪಾನವನು ಗೈಯೆ ನಿ ತ್ರಾಣ ಸಂಹಾರ ವ್ಯಾಧಿಗೆ ಭೇಷಜಾ ಪ್ರಾಣ ಪ್ರಯಾಣ ಪಾಥೇಯವೆಂದರಿಯೆ ನಿ ರ್ವಾಣಪದವಿತ್ತು ಕಲ್ಯಾಣವಂತರ ಮಾಳ್ಪೆ 3 ಜನಪದಗಳಾಗಿ ಕಾನನವಾಗಿ ಮನ್ವಾದಿ ದಿನಗಳಲ್ಲಾಗಿ ಮತ್ತೇನಾಗಲೀ ಮನುಜ ಮಜನಗೈಯೆ ವಾಜಪೇಯಾದಿ ಮಖ ವನುಸರಿಸಿದಕೆ ಫಲವೇನು ತತ್ಪಲವೀವೆ 4 ಅರವತ್ತು ಸಹಸ್ರ ವರುಷಂಗಳಲ್ಲಿ ನಿ ರ್ಜರ ತರಂಗಿಣಿಯ ಮಜ್ಜನದ ಫಲವು ಗುರುವು ಕನ್ಯಸ್ಥನಾಗಿರಲು ಒಂದಿನ ಮಿಂದ ನರರಿಗಾ ಪುಣ್ಯಸಮನೆನಿಸಿ ತತ್ಫಲವೀವೇ 5 ಮನನಶೀಲ ಸುಯೋಗಿಗಳಿಗಾವ ಗತಿಯು ಇಹ ವನುದಿನದಿ ನಿನ್ನ ತೀರದಲಿ ಇಪ್ಪಾ ಮನುಜೋತ್ತಮರಿಗೆ ಆ ಗತಿಯಿತ್ತು ಪಾಲಿಸುವೆ ಅನುಪಮ ಸುಕಾರುಣ್ಯಕೆಣೆಗಾಣಿ ಜಗದೊಳಗೆ 6 ತಾಯೆ ಎನ್ನನುದಿನದಿ ಹೇಯ ಸಂಸಾರದೊಳ ಗಾಯಾಸ ಗೊಳಿಸದಲೆ ಕಾಯಬೇಕೊ ವಾಯುಪಿತ ಶ್ರೀ ಜಗನ್ನಾಥ ವಿಠ್ಠಲ ಹೃ ತ್ತೋಯಜದೊಳಗೆ ಕಾಂಬುಪಾಯ ಮಾರ್ಗವ ತೋರೆ 7
--------------
ಜಗನ್ನಾಥದಾಸರು
ದಾಸರ ದಾಸರ ದಾಸನೆಂದೆನಿಸುವ ಲೇಸು ಭಾಗ್ಯವ ಕೊಡೊ ಶಾಶ್ವತವಾಗಿಪ ಆಶಾಪಾಶವ ನಾಶನಗೈಸಿ ದೇಶಿಗರೆಲ್ಲರ ಕೂಸೆಂದೆನಿಸಿ ಅ.ಪ. ಉಪಟಳ ಬಹಳ ನೇಮ ನಿಷ್ಠೆಯ ಸುಳಿವೆನಗಿಲ್ಲ ತಾಮಸನಾಗಿ ಬಳಲಿದೆನಯ್ಯ ಪ್ರೇಮದಿ ಪಿಡಿದು ಸಲಹೊ ದಮ್ಮಯ್ಯ 1 ವದನದಿ ನಿನ್ನ ನಾಮವ ನುಡಿಸೊ ಪದದಲಿ ನಿನ್ನ ಯಾತ್ರೆಯ ನಡೆಸೊ ಹೃದಯದಿ ನಿನ್ನ ರೂಪವÀ ತೋರಿ ಅನುದಿನ ಶೌರಿ 2 ಭಕ್ತವತ್ಸಲ ಭಾಗ್ಯಸಂಪನ್ನ ಭಕ್ತರ ಸಂಗತಿ ಪಾಲಿಸೊ ಘನ್ನ ಉಕ್ತಿಯ ಲಾಲಿಸೊ ನಾನು ಅನಾಥ ಮತ್ತೇನು ಬೇಡೆನೊ ಶಕ್ತ ಶ್ರೀಕಾಂತ 3
--------------
ಲಕ್ಷ್ಮೀನಾರಯಣರಾಯರು