ಒಟ್ಟು 4 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೆಂದು ಹಸೆಗೆ ಕರೆವೆÀನು ಕ್ಷೀರಾಬ್ಧಿಶಯನನೆ ಸಾರಸನಯನನೇ ಪ. ಕ್ಷೀರಾಬ್ಧಿಜಾವರ ಮೇರುಗಂಭೀರನೆ ನೀರಜಭವಪಿತ ಮಾರಹರಾರ್ಚಿತ ಚಾರುನೀರದಗಾತ್ರ ಪರಮ ಪವಿತ್ರ ಅ.ಪ ಧರಣೀಸುರರ ಮೊರೆಗಳನಾಲಿಸಿ ಧರೆಯೊಳಗವತರಿಸಿ ನರರೂಪಧರಿಸಿ ಧರಣಿಪ ದಶರಥತರಳನೆಂದೆನಿಸಿ ಧರೆಯ ಭಾರವನಿಳಿಸಿ ಕರುಣಿಸು ಮನವೆರಸಿ 1 ಅಸುರೆ ತಾಟಕಿಯ ಅಸುವನಳಿದು ದುಷ್ಟ ನಿಶಿಚರರನು ಸದೆದು ಅನುಜನೊಡಗೊಂಡು ಕುಶಿಕನಂದನನ ಕ್ರತುವನು ತಾ ಕಾಯ್ದು ಅಸಮ ಶೂರನೆನಿಸಿ ಅಮರರ ಮನತಣಿಸಿ 2 ಶಿಲೆಯ ಶಾಪವಕಳೆದು ಲಲನೆಯ ಪೂಜೆಗೊಲಿದು ಬಲುಹಿನಿಂದಲೆ ಬಂದು ಹರಧನು ಮುರಿದು ಲಲನೆ ಜಾನಕಿಯ ನಲವಿನಿಂ ಕೈಪಿಡಿದು ಬಲುಗರ್ವಿತ ಭಾರ್ಗವ ಮದಮುರಿದೆ ಸಲಹೆನ್ನ 3 ಈಶವಿನುತ ಶ್ರೀ ಶೇಷಾಚಲ ನಿಲಯನೆ ದಾಸರಮನದೊಳು ವಾಸವಾಗಿಹನೇ ವಾಸವಾದ್ಯಮರ ಪೋಷಕನೆನಿಸಿಹನೆ ಭಾಸುರವದನನೆ ಶ್ರೀಸತೀಸದನನೆ ನೀಂ ನಲಿದು 4
--------------
ನಂಜನಗೂಡು ತಿರುಮಲಾಂಬಾ
ಮುರಲೀಯನೂದುವ ಮುರಹರನ್ಯಾರೇ ಪೇಳಮ್ಮಯ್ಯಾ ಪ ಮಾರನ ಕುಶಲವ ಮೋದದಿ ಬೀರುತ ಮನಮೋಹಗೊಳಿಪ ಮಾರನಯ್ಯ ಕಾಣೆ ಅ.ಪ. ಸುಂದರೀ ಸಖಿ ಸುಕುಮಾರಿ ಇಂದೀನ ವೈಭವ ಭಾರಿನಂದಾವೃಜನದೊಳಗಿಹ ನಾರೀ ವೃಂದಗಳೆಲ್ಲಾ ಪರಿಪರಿ ಸೇರಿ ನಂದನ ಸುತನಾ ಕಂದನ ಬಾಧೆಯ ತಾಳದೆ ತನ್ನೊಳು ಪೊಗಳುವ ಘನಶೌರಿ1 ಮದನಾ ಜನಕನು ಮೌನದಿ ನಿಂತಾಮಾನಿನಿಯರು ಮಾಡುವ ಚಿಂತಾ ಮನವಾತುರಗೊಳಿಪುದು ಶ್ರೀಕಾಂತಾ ಮಾವನರಿಪು ಸುಧೆನುಣಿಸು ಬಾ ಪ್ರಾಣಕಾಂತಾಮಾನರಹಿತಳಾಗಿ ಗಾನ ಮಾಡುವೆ ಘನ ಪ್ರಾಣಮಳಹೋ ಶ್ರೀಕೃಷ್ಣನೆಂದು 2 ಅಂಗದೊಸನವ ತೂರುತ ಮಂದಾಮಾರುತ ಪಡಿಸುವ ಮುಕುಂದಾ ಭಂಗಬಡಲಾರೆವು ಶ್ರೀಗೋವಿಂದಾ ಮದಮುರಿ ಮದಕುಲ ನಂದಾ ತುಂಗಮಹಿಮ ತಾ ಬಂದು ಪೊರೆದ ತಂದೆವರದಗೋಪಾಲವಿಠಲನ ಸಖ 3
--------------
ತಂದೆವರದಗೋಪಾಲವಿಠಲರು
ಶೋಭಾನವೆನ್ನಿರೆ ಶುಭಕರ ಸಾವಿತ್ರೇರು | ಪ್ರಭುಗುರು ಆತ್ಮಾ ಶ್ರೀರಾಮಗ ಪ ರಾಮರಾವಣ ಕ್ರೋಧನಿಸ್ಸೀಮ ಕುಂಭಕರ್ಣಾದಿ | ತಾಮಸದವರಾ ಮದಮುರಿದು | ತಾಮಸದವರ ಮದಮುರಿದು ಹೃದಯಕ | ಪ್ರೇಮ ಜಯೋತ್ಸವದಿಂದೈ ತಂದಾ 1 ಒಡನೆ ಶಾಂತಿ ಸೀತೆಯಾ ಬಿಡಿಸಿ ತಂದನು ಸೆರೆಯಾ | ದೃಢವಿಭೀಷಣನ ಸ್ಥಾಪಿಸಿದನಾ | ದೃಢವಿಭೀಷಣನ ಸ್ಥಾಪಿಸಿ ಆಶಾಪಾಶ | ಕಡಲ ಮಧ್ಯ ಪೂರದೊಳು ಈಗ 2 ವಿವೇಕ ಹರಿವಾನದಿ ಭಾವದಾರತಿಯೋಳು | ತೀವಿದ ಸಮ್ಯಜ್ಞಾನ ಜ್ಯೋತಿ | ತೀವಿದ ಸಮ್ಯಜ್ಞಾನಜ್ಯೋತಿಯಿಂದ | ದೇವದೇವೇಶಗ ತಿಂದೀಗ 3 ಅರಿಗಳ ಶಿಕ್ಷಿಸು ಶರಣರ ರಕ್ಷಿಸು | ಧರೆಯೊಳುಯೆಂದು ಹರಸುತ | ಧರೆಯೊಳು ಎಂದು ಹರಸುತ ಮುತ್ತಿನ | ಪರಮಶಾಶಯ ನೊಸಲೊಳಿಟ್ಟು 4 ಇಹಪರಸುಖದಾತಾ ಬಾಹ್ಯಾಂತ್ರ ಸದೋದಿತಾ ಮಹಿಪತಿಸುತ ಪ್ರಭು ರಘುನಾಥ | ಮಹಿಪತಿಸುತ ಪ್ರಭು ರಘುನಾಥ ನೆನೆವರ ಸಹಕಾರಿ ನಮ್ಮ ಸದೋದಿತ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು