ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೆ ಮನವೆ ಸಲೆ ನಿನ್ನ ಮರೆವದು ಗುಣವೇ ಪ ಹರಿಯೋ ಮರವಿನ ಮುಸುಕಿದೆ ಮರೆಯೋ | ಸಿರಿ ಸೌಖ್ಯ ಮೃಗಜಳ ಪರಿಯೋ | ಚರವೆಂಬ ಹಂಬಲ ಮರಿಯೋ | ಪರಿ ವಾಸನೆಯ ಜರಿಯೋ | ಪ್ರಾರಬ್ಧ ನಿಜ ವೆಂದರಿಯೋ | ತಾಪ ಮೊನೆ ಮುರಿಯೋ | ಅರವಿನ ನಯನವದೆರಿಯೋ | ಪಾದ ಪದ್ಮಕ ಬೆರೆಯೋ 1 ತಿಳಿಯೋ ಇಳಿಯೊಳು ಸತ್ಪಥ ನೆಲಿಯೋ | ಕಳೇವರ ಸ್ಥಿರ ಬೊಬ್ಬುಳಿಯೋ | ನಲವಾರು ಅರಿಗಳ ನಳಿಯೋ | ಬಲಿತಿಹ ಹಮ್ಮಲ ಕಳಿಯೋ | ಬಳಲಿಪಾಗುಣ ಮಲ ತೊಳಿಯೋ | ಬಲು ಶಾಂತಿ ಹೃದಯದಲಿ ತಳೆಯೋ | ಒಲುವಂತೆ ಗುರುನಡಿ ಕಲಿಯೋ | ಸಲಹುವಾಗರದು ದಯ ಮಳಿಯೋ 2 ಜಡಿಯೋದೃಢ ಭಾವನೆಯನು ಹಿಡಿಯೋ | ಕೆಡುವ ಭಾವ ಮೂಲವ ಕಡಿಯೋ | ತಡಿಯದೆ ಮಹಿಪತಿ ದಯ ಪಡಿಯೋ | ಅಡಿಗಳಾಶ್ರಯವನು ಹಿಡಿಯೋ | ಒಡೆಯನಾಜ್ಞೆಯಂದದಿ ನಡೆಯೋ | ಕಡು ಪ್ರೀತಿಲಿ ಸ್ತುತಿ ನುಡಿಯೋ | ಮಡಿದ್ಹುಟ್ಟುವ ಜನ್ಮದ ಮುಡಿಯೋ | ಒಡನ ಹಾದಿದರಿಂದ ಕಡಿಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಯನ ನೋಡಿರೋ - ಮಧ್ವ - ರಾಯನ ಪಾಡಿರೊ ಪಅಂಜನೆಯಲಿ ಹುಟ್ಟಿ ಅಂಬರಕಡರಿದಹರಿಯೋ - ಸಿಂಹದ - ಮರಿಯೋ |ಕಂಜಾಕ್ಷಿಯ ಸುದ್ದಿಗೆ ಶರಧಿಯ ಲಂಘಿಸಿದ-ಪುರ- ಸಂಧಿಸಿದಅಂಜದೆ ವನವನು ಕಿತ್ತಿದ ಪುರವನುಸುಟ್ಟ - ತಾ ಬಲು - ದಿಟ್ಟಾ |ಸಂಜೀವನ ಗಿರಿ ತಂದು ವಾನರರಪೊರೆದಾ - ರಾಮನ - ಬೆರೆದಾ 1ಕುಂತಿ ಕುಮಾರನು ಶೀಮೆಗೆ ಹರುಷದಿಬೆಳೆದ - ಖಳರನು - ತುಳಿದ |ಅಂತ ಕೌರವ - ದುಶ್ಯಾಸನರಾ ಶಿರತರೆದಾ - ಚಲವನು - ಮೆರೆದ |ಸಂತಾಪವ ಪಡಿಸಿದ ಕುಜನಕೆ ಭೀಮ -ನಾದ -ಸನ್ನುತ- ನಾದ |ಕಂತುಜನಕಶ್ರೀ ಕೃಷ್ಣನ ಪಾದದಿಬಿದ್ದ - ಮದಗಜ - ಗೆದ್ದ 2ಮುನಿಕುಲದಲಿ ಉದಿಸಿದ ಗುರುಮಧ್ವ ತಾನಾದ - ಧರೆಯಲಿ - ಮೆರೆದ |ಅನಿಮಿಷರೊಡೆಯ ಶ್ರೀವೇದವ್ಯಾಸರಚರಣ-ಅನುದಿನ- ಸ್ಮರಣ |ಕನಸೊಳು ಕಾಣದ ಅದ್ವೈತಂಗಳಮುರಿದ - ತತ್ತ್ವ - ತೋರಿದ |ಘನಮಹಿಮ ಶ್ರೀಪುರಂದರವಿಠಲನದಾಸ - ಪಡೆದ - ಸನ್ಯಾಸ 3
--------------
ಪುರಂದರದಾಸರು