ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚದುರೇ ವೃಂದಾವನದೊಳು ನಿಂತಿಹನ್ಯಾರೇ ಪೇಳಮ್ಮಯ್ಯಾ ಪ ಸತ್ ಸಖಿಯರಿಗುಣಿಸುವ ಜಾರಚೋರ ಶ್ರೀಕೃಷ್ಣ ಕಾಣಮ್ಮಾ ಅ.ಪ. ನೀರೇ ನೋಡೋಣು ಬನ್ನಿರಿ ಎಂದುಈ ಬಾಲೇರು ಗೋಪಾಲನ ಗಾನಕೆ ಬಂದು ಬೆದರುತ ಮನದೊಳು ಮದನಾಟಕೆ ನಿಂದೂಮೋರೆಯ ತಿರುವುತ ಅಂದು ಮಾರನಯ್ಯ ತವ ಚಾರುಧರಾಮೃತ ಸೂರೆಗೈಯ್ಯೋ ಸದ್ಧೀರಿಯರೊ ನಾವು 1 ಬಾಲೆ ನಿನ್ನಾಳುವ ದಾರಿ ಬ್ಯಾರಿಲ್ಲಾ ಕಾಲಬಂದೊದಗದು ಕೇಳೆನ್ನ ಸೊಲ್ಲ ಮತ್ತಾವದೊ ತಂಗಾಳಿ ಬೀಸುವ ವ್ಯಾಳೆ ಬಂತಲ್ಲಾ ಮೋಹಿಸಿ ಬಂದೆವೊ ನಲ್ಲಾ ಫುಲ್ಲಲೋಚನ ಮೃದು ಮಲ್ಲಿಗೆ ಮುಡಿಸಿ ಮೆಲ್ಲಗೆ ಮರ್ದಿಸು ಮೃದು ಚಲ್ವಯರುಹರೆ 2 ಸಿಂಧೂ ರಾಜಕುಮಾರಿಯ ರಮಣ ಶರದಿಂದೂ ಮಂಡಲ ಮುಟ್ಟುತಲಿದೆ ಧ್ವನಿ ಹಸನಾ ಶಂಭೂರ ಶತ್ರಾದಿಗಳುಗರೆವರು ಪೂಮಳಿ ನಾನಾ ಗಣಶಿರಿಸುತ ಮರುಳಾಗಿ ಪೂ ಬಾಣಾನಾಟವನೋಡುತ ನಾರಿಯ ತ್ಯಜಿಸದೆ ಪರನಾರಿಯ ರೂಪದಿಂದ್ರಮಿಪ ಮುರಾರೇ 3 ಸುರನದಿ ಸ್ಮರಸುತ ರಾಣಿ ನಾಟ್ಯವನಾಡುತ ನವನವ ಪಾಡುತ ದಿದ್ಧಿದ್ಧಿಮಿಕಿಟ ತಾಂ ತಾಳದಿ ನಲಿಯುತ 4 ಶಶಿಸೂರ್ಯನೆಳಸನ್ನಿಭ ಪ್ರಖನಕರಾ ಸರಸೀಜಾದಳ ನುತ ಭಾವಿ ಸಮೀರಾ ಷಟ್ ಶತ ಬಂದು ವಿಂಶತಿಹಂ ಸಾಖ್ಯ ಮಂತ್ರ ಸಹಸ್ತಾದಿಂದ ಸೇವಿಪ ಮಧ್ವಮಧೀಶನ ಲೀಲೆಯನೆನಿಪರ ಬಂದು ತೋರುವಾತ ತಂದೆವರದಗೋಪಾಲವಿಠಲನು 5
--------------
ತಂದೆವರದಗೋಪಾಲವಿಠಲರು
ಜೋ ಸಚ್ಚಿದಾನಂದನೆ ಜೋ ಜೋ ದೇವಕಿಕಂದನೆ ಜೋಜೋ ಬ್ರಹ್ಮಾದಿವಂದ್ಯನೆ ಧ್ರುವ ಹುಟ್ಟಿ ಬಂದು ನಿಜದೋರಿದೆ ಖೂನ ಮುಟ್ಟಿ ಬೀರುವ ಸುಚಿನ್ನಸಾಧನ ಇಟ್ಟ ಕಾವಲಿ ಹಾಕಿದೆ ಮೌನ ಮೆಟ್ಟಿಮರ್ದಿಸಿ ಬಂದೆ ಮಾವನ 1 ಮಾಡಬಂದೆ ನೀ ಧರ್ಮಸ್ಥಾಪನಿಯ ನೋಡಬಂದೆನಿಷ್ಟ ಜನರಾರ್ಚನಿಯ ಆಡಬಂದೆ ನಂದಯಶೋದೆ ಮನಿಯ ನೀಡಬಂದೆ ನಿಜಸುಖಸಾಧನಿಯ 2 ಶಿಷ್ಟಜನರಿಗಾಗಿ ಸಹಾಕಾರಿ ಸೃಷ್ಟಿಯೊಳು ತೋರಬಂದೆ ಶ್ರೀಹರಿ ದುಷ್ಟ ಜನರ ಮರ್ದಿಸುವಾವತಾರಿ ಕಂಸಾರಿ 3 ದೇವಾದಿಗಳ ಮಗುಟಮಣಿಯೆ ಭಾವಿಸಲಳವಲ್ಲ ಸದ್ಗುಣಿಯೆ ಕಾವ ದೈವ ನೀನೆ ಕೃಷ್ಣ ಕರುಣೆಯೆ ದೇವಕಿ ಗರ್ಭನಿಧಾನದ ಖಣಿಯೆ 4 ಬಲವಾಗಿ ಎನಗಬಂದೆ ಸರ್ವೇಶ ಒಲಿದು ಭಾನುಕೋಟಿತೇಜಪ್ರಕಾಶ ಫಲವ ನೀಡಿ ತೋರಬಂದೆ ಸಂತೋಷ ಸಲಹಬಂದೆ ಮಹಿಪತಿ ಪ್ರಾಣೇಶ 5 ಮನೋಹರ ಮಾಡುವ ನೀನೆ ಸಹಕಾರಿ ಅನುದಿನ ಲೆವಕಲ ನೀನೆ ಮುರಾರಿ 6 ಅನೆ ಕಾಯಲಿಪರಿ ನೀನೆ ಉದಾರಿ ಅನಾಥರಿಗೊಲುವ ನೀನೆ ಶ್ರೀಹರಿ 7 ಪತಿತ ಪಾವನ ಪೂರ್ಣ ನೀನೆ ನಿಶ್ಚಯ ಹಿತದಾಯಕ ನೀನಹುದೊ ಮಹಿಪತಿಯ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನದಿಗಳು ಭಾಗೀರಥ್ಯಾದಿ ನದಿಗಳ ತಾರತಮ್ಯ ನಿಜ ಭಾಗವತ ತಿಲಕ ನಿಮಿರಾಜಗೊಲಿದು ವಸಿಷ್ಠ ರಾಗದಲಿ ಕೇಳಿ ಜನರಯ್ಯಾ ಪ ಒಂದು ದಿನ ಗೋದಾವರಿಯ ತಟದಿ ನಿಮಿರಾಜ ಸಂದು ಯಜ್ಞವ ಮಾಡುತಿರಲಾಗ ಪರಮೇಷ್ಠಿ ನಂದನೆನಿಪ ವಶಿಷ್ಠ ಮಹಮುನಿ ನಡೆತಂದ ಮೇಧಾಗಾರಕೆ ಬಂದ ಯತಿವರನ ಮಣಿಪೀಠದಲಿ ಕುಳ್ಳಿರಿಸಿ ಸುಂದರಾಧಿಪ ಬೆಸಸಿದಾ 1 ವ್ರತಿಪತಿ ವಶಿಷ್ಠ ವೈಷ್ಣವಕುಲ ಶಿರೋರತುನ ಶ್ರುತಿಶಾಸ್ತ್ರ ಸರ್ವಜ್ಞ ಗಂಗಾದಿ ಪುಣ್ಯತೀ ಮತ್ಪಿತನೆನುತ ಪದಕೆರಗುವಾ ಕ್ಷಿತಿಪನೋಕ್ತಿಯ ಕೇಳುತಾನಂದ ಶರಧಿಯೊಳು ಗತನಾಗಿ ರೋಮ ಲಕ್ಷಣ ಕಳೇವರದಿ ಪುಳ ನೃಪತಿಗಿಂತೆಂದನು 2 ಕೇಳು ಜನನಾಥ ಮಹಭಾಗ ನಿನ್ನಯ ಪ್ರಶ್ನ ದೇಳಿಗೆಗೆ ಎನ್ನ ಸಂತೋಷ ಕಲ್ಪತರು ತ ಶಿಷ್ಯರೊಳು ಮೌಳಿಮಣಿ ನೀನಹುದು ನಿಖಿಳ ನದಿಗೊಳಿಪ್ಪ ಶ್ರೀಲೋಲನ ಸುಮೂರ್ತಿಗಳು ತಾರÀತಮ್ಯ ಸುವಿ ಮಾನವ ಇದನಾಲಿಪುದು ನೀನೆಂದನು 3 ಹರಿಪಾದನಖದ ಸಂಸ್ಪರ್ಶ ಮಾತ್ರದಿಂದಲಿ ಸುರತರಂಗಿಣಿ ಶ್ರೇಷ್ಠಳೆನಿಸುವಳು ನದಿಗಳೊಳು ದೊರೆಮೆನಿಪನಾ ತೀರ್ಥಕೆ ಸರಿತಾಗಗಣ್ಯ ಗೋದಾವರಿ ನಳಿನಿಗಿಂ ಕೊರತೆಯೆನಿಪಳೈ ವತ್ತು ಗುಣದಲಿ ಶಂಖ ಚರಣ ಸುಗದಾಬ್ಜ ಶೋಭಿತ ವೀರನಾರಾಯಣ- ರಸೆನಿಪನಾ ಸಲಿಲಕೆ 4 ಹರಜಟೋದ್ಭವ ಕುಶಾವರ್ತಿಗೆ ಸಹಸ್ರಗುಣ ಚಾರು ಕಂ ಬುರಲಿ ವಾರುಚಿ ಧನುರ್ಧಾರಿ ಯಮನಂದನಲಿ ವಿಹರಿಸುತಿಹನಾಜಲದೊಳು ತುರುಗಾಯ್ದ ದೇವನಂಗಜ ನದಿಗೆ ಈರೈದು ವಾಗ್ದೇವಿ ಶರಧಿಯೊಳು ಪು ಗೋದ ರಂಗನಾಥನೆನಿಪ 5 ಆ ಯಮಳನದಿಗಳಿಗೆರಡು ಗುಣಾಧಮ ಸರಯು ತೋಯಾಧಿಪತಿ ರಾಮ ಸರಯು ನೀರೆಂದು ಗುಣ ವಿಹಾಯ ಸಮಮಣಿತನಯಳೆ ಸ್ಥಾಯಕೆ ಚತುರ್ಬಾಹು ವಿಷ್ಣು ಕಾವೇರಿಗೆ ನಾಯಕ ವರಾಹದೇವಾ6 ಸಿಂಧು ಭವನಾಶಿಗೀರ್ವರು ಸಮರು ಕ್ಷೀರಾಬ್ಧಿ ಮಂದಿರ ನೃಸಿಂಹರಲ್ಲಿಹರು ಭವನಾಶನಿಗೆ ತಂದೆಯೆನಿಪ ತ್ರಿವಿಕ್ರಮ ಒಂದೆನಿಸುವುವು ನಾಲ್ಕು ನದಿಗಳು ಗುಣಗಳಿಂದ ಮುಂದಿಹ ಪದದಿ ಪೇಳ್ವೆ ಪೆಸರು ಹರಿರೂಪ ನೆಲ ತಮ್ಮಿಂದೀರಗಿಂತೆಂದನೂ 7 ವಾಜಿವದನು ಮಂಝರಾನದಿಯೊಳಿಹನು ನವ ರಾಜೀವನಯನ ಶ್ರೀಧರ ಭೀಮರಥಿಯೊಳಿಹ ವಿರಾಜಿಪ ಮಲಾಪಹಾರಿ ಭಾಜನದೊಳಿಪ್ಪ ದುಷ್ಟ ಜನರನು ಮರ್ದಿಸುವ ಶ್ರೀ ಜನಾರ್ದನ ನಾಲ್ಕು ನದಿಗಳು ದ್ವಿಗುಣದಿಂದಾ ನಿತ್ಯ ನೈಜಭಕ್ತಿ ಜ್ಞಾನದಿ 8 ಭೀಮರಥಿ ಸಮ ಪಿನಾಕಿನಿಯೊಳಗೆ ಕೇಶವನು ಭೂಮಿಯೊಳು ಪೃಥಕು ಪೃಥಕು ಸುಖ ಜ್ಞಾನದಿ ಶ್ರೀ ಮನೋರಮ ಕೇಶವಾದಿ ರೂಪಗಳಿಂದ ಸ್ವಾಮಿಯೆನಿಸುವನಲ್ಲ ಸ್ನಾನಾದಿ ಸತ್ಕರ್ಮ ಮೋಕ್ಷ ಗಳೀವನೊ 9 ಈ ನದಿಗಳೆರಡು ಗುಣ ಪುಷ್ಕರಣಿನಿಚಯ ನ್ಯೂನವೆನಿಪವು ಮುಕ್ತಿ ದತ್ತಾತ್ರಯನು ಕೃಷ್ಣ ಮಾನಸ ಸರೋವರದೊಳು ಜ್ಞಾನಾತ್ಮ ವಾಮನನ ಶ್ರೀ ಭೂ ಸಹಿತ ಪ್ರಸ ನ್ನಾನನಾಬ್ಜದಿದರೆ ಜಘನಸ್ಥಿತಾಭಯ ಸು ಧೇನಿಪುದು ಎಂದಾ 10 ದೇವಖಾತಗಳು ಶತಗುಣಕಡಿಮೆ ಮಾನಸ ಸ ರೋವರಕೆ ಇತರ ಪುಷ್ಕರಣಿಗಳಿಗಲ್ಪಗುಣ ಪಾವನವಗೈವ ಕ್ಷುದ್ರಾ ಪ್ರಾವಹಿಗಳೀರೈದು ಗುಣದಿ ಕಡಿಮೆ ಲಕ್ಷ್ಮೀ ದೇವಿಪತಿ ನಾರಾಯಣನ ಚಿಂತಿಸೆಂದು ನೃಪ ಭವನೋವ ಪರಿಹರಿಪುದೆಂದು 11 ಈ ಸಲಿಲತೀರ್ಥಂಗಳೆರಡು ಗುಣದಿ ತಟಾಕ ಶೇಷಪರ್ಯಂಕ ಅಚ್ಯುತನಿಹನು ಸಜ್ಜನರ ವಾಸವಾಗಿಹನು ಚಕ್ರಿ ಘೋಷಗೈವ ಧರಾಂತಕೂಪಗಳೊಳಿರುತಿಹ ನಾ ಕೇಶನದಿಗಳ ತಾರÀತಮ್ಯ ರೂಪಗಳನುಪ ಪಾಸನಗೈವುದೆದೆಂದು 12 ಈ ತೆರದಿ ನಿಮಿರಾಜಗೋಸುಗ ವಶಿಷ್ಠಮುನಿ ತಾ ತಿಳಿದ ಕಥಾತಿಶಯ ಪರಮ ವಿಬುಧರು ಧ ಪ್ರೀತಿಯಿಂದಾಚರಿಸಲು ಶೀತಾಂಶು ಕಮಲಾಪ್ತರುಳ್ಳನಕ ಸುರಪತಿ ನಿ ಕೇತನದಿ ವಿವಿಧ ಭೋಗಗಳಿತ್ತು ಶ್ರೀ ಜಗ ಸಂಪ್ರೀತಿಯಿಂದನುರಾಗದೀ 13
--------------
ಜಗನ್ನಾಥದಾಸರು
ಏಕೆ ವೃಂದಾವನವು ಸಾಕು ಗೋಕುಲವಾಸ |ಏಕೆ ಬಂದೆಯೊ ಉದ್ಧವಾ? ಪಸಾಕು ಸ್ನೇಹದ ಮಾತನೇಕ ಮಹಿಮನು ತಾನು |ಆ ಕುಬುಜೆಯನು ಕೂಡಿದ-ಉದ್ಧವಾ ಅ.ಪಬಿಲ್ಲು ಬಿಳಿಯಯ್ಯನ ಬೇಟ ನಗೆನುಡಿ ನೋಟ |ಇಲ್ಲದಂತಾಯಿತಲ್ಲ ||ಎಲ್ಲರಿಂದಗಲಿಸಿದ ಕ್ರೂರ ಅಕ್ರೂರನವ |ವಲ್ಲಭನ ಒಯ್ದನಲ್ಲ ||ಮಲ್ಲರನು ಮರ್ದಿಸುತ ಮಾವ ಕಂಸನ ಕೊಂದು |ಘಲ್ಲನಾಭನ ತಂದು ತೋರೈ-ಉದ್ಧವಾ 1ಅನುದಿನೊಳಾದರಿಸಿ ಅಧರಾಮೃತವನಿತ್ತು |ಇನಿದಾದ ಮಾತುಗಳಲಿ ||ಮನದ ಮರ್ಮವ ತಿಳಿದ ಮನಸಿಜಪಿತನ ಸಖವು |ಮನಸಿಜನ ಕೇಳಿಯಲ್ಲಿ ||ಕನಸಿನಲಿ ಕಂಡ ತೆರನಾಯಿತಾತನ ಕಾಂಬು |ವನಕ ಬದುಕುವ ಭರವಸೆ ಹೇಳು-ಉದ್ಧವಾ 2ಕರುಣನಿಧಿಯೆಂಬುವರು ಕಪಟನಾಟಕದರಸು |ಸರಸ ವಿರಸವ ಮಾಡಿದ ||ಸ್ಮರಿಸಿದವರನು ಕಾಯ್ವ ಬಿರುದುಳ್ಳ ಸಿರಿರಮಣ |ಮರೆದು ಮಧುರೆಯ ಸೇರಿದ ||ಪರಮಭಕ್ತರ ಪ್ರಿಯ ಪುರಂದರವಿಠಲನ |ನೆರೆಗೂಡಿಸೈ ಕೋವಿದ-ಉದ್ಧವಾ 3
--------------
ಪುರಂದರದಾಸರು
ಗಜಲಕ್ಷ್ಮಿ ಬಿಜಯ ಮಾಡೇ ಮೂಕಾಂಬಿಕೆಭಜಿಸುವೆ ವರವ ನೀಡೆಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅಜಸುರ ಮುಖ್ಯರು ಭಜಿಸಲು ನಿನ್ನನುನಿಜವಾದ ವರವನಿತ್ತೆ ಜಗನ್ಮಾತೆಕುಜನರ ಮರ್ದಿಸುತೆವಿಜಯಸಾರಥಿಭುಜಗಶಯನನಭಜನೆಯನು ಅನುದಿನದಿ ಪಠಿಸುವಸುಜನಸಜ್ಜನಪಾಲೆ ಸದ್ಗುಣಶೀಲೆಮುನಿಜನಲೋಲೆ ಜಯ ಜಯ1ಕೊಲ್ಲೂರ ಪುರನಿಲಯೆ ಮಹದೇವಿಯೆಪುಲ್ಲಲೋಚನೆ ಪಾಲಯೆಎಲ್ಲ ಭಕ್ತರ ಮನ ಸಲ್ಲಿಸಿ ಸಲಹುವಚಲ್ವ ರಂಗನ ರಾಣಿಯೆ ಶ್ರೀದೇವಿಯೆಕುಲ್ಲ ಕುಂಕುಮ ಜಾಣಿಯೇ ಸಲ್ಲಲಿತೆಕಾಲಲ್ಲಿ ರಂಜಿಪ ಪಿಲ್ಲಿ ಮಿಂಚಿಕೆ(?) ಕಡಗ ಪೈಜಣಗೆಜ್ಜೆ ಗಲಗಲ ಎಂದು ನಲಿಯುತ ಬಾರೆಜಗದ ವಿಚಾರೆ ಮುಖ ತನು ತೋರೆ ಜಯ ಜಯ2ಚಂದಿರ ಮುಖದ ಮನೇ ಸರ್ವೇಶ್ವರಿಕುಂದಕುಂಡಲರದನೇಮಂದಗಾಮಿನಿ ಅರವಿಂದನಯನೆಸುರಪಂಡಿತಗುಣಕರುಣಿನೀನಲ್ಲದೆ ಮುಂ ಸುಖವ ಕಾಣೆನೆಚಂದನನವಗಂಧ ಕುಂಕುಮ-ದಿಂದ ಶೋಭಿಪ ಕೀರವಾಣಿಯೆಸುಂದರಿಯೆ ಗೋವಿಂದನರಸಿಯೆ ಧರ್ಮದೇವಿಯೆದೈvÀ್ಯ £್ಞಶಿನಿಯೆ ಜಯ ಜಯ3
--------------
ಗೋವಿಂದದಾಸ