ಒಟ್ಟು 19 ಕಡೆಗಳಲ್ಲಿ , 17 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಲದೆಲಿಯ ಮ್ಯಾಲ ಮಲಗ್ಯುಂಗುಟ ಚಪ್ಪರಿವನು ನೀನಾರೈ ಮೂಲರೂಪದ ನಿಜದೋರದೆ ಬಾಲಕನಾಗಿಹ ನೀನಾರೈಧ್ರುವ ಚಲುವ ಕಂಗಳ ನೋಡದಲ್ಹೊಳವುತ ಜಲದೊಳಗಾಡುವನಾರೈ ಕಾಲುಡಿಗಿಸಿ ಬೆನ್ನಿಲೆ ಬಲು ಕಠಿಣವ ತಾಳಿದವ ನಿನಾರೈ 1 ಕೋರ್ಹಲ್ಲಿಲಿ ಬೇರನೆ ಅಗಳ್ಯಾಡುತ ದೋರುವ ನೀನಾರೈ ನರಮೃಗರೂಪದಿ ತರಳಗೊಳಿದು ಭರದಲಿ ಬಂದವನಾರೈ 2 ಒಪ್ಪಿಲಿ ಮೂರುಪಾದ ಭೂಮಿಯೊಪ್ಪಿಸಿಕೊಂಡವನಾರೈ ಚಪ್ಪಗೊಡಲಿ ಕೈಯಲಿ ಪಿಡಕೊಂಡು ಇಪ್ಪವ ನೀನಾರೈ 3 ಬಳ್ಳಿಹಿಡಿದು ಕಲ್ಲನೆ ಉದ್ಧರಿಸಿದ ಮಲ್ಲನು ನೀನಾರೈ ಗೊಲ್ಲತೆಯರ ಮೋಹಿನಿ ಎಳಿದಾಡುವ ಚಲುವನು ನೀನಾರೈ 4 ಚದುರನು ನೀನಾರೈ ಕುದುರೆಯನೇರಿ ಹದನದಿ ತಿರವ್ಯಾಡುವ ರಾವುತನಾರೈ 5 ಕುರುಹುದೋರದೆ ನರನಾರಿಯರ ರೂಪದಲ್ಯಾಡಿದವನಾರೈ ಬಡಿಸಿದವ ನೀನಾರೈ 6 ಅಗಣಿತ ಗುಣದಲಿ ಬಗೆ ಬಗೆ ಅಡುವ ಸುಗುಣ ನೀನಾರೆ ೈ ಝಗಝಗಿಸುವ ಜಗನ್ಮನೋಹರನಾಗ್ಯಾಡುವ ನೀನಾರೈ 7 ಖೂನ ಕುರುಹದೋರಿದ ಭಾನುಕೋಟಿ ತೇಜನಹುದೋ ಬಾರೈ ದೀನ ಮಹಿಪತಿ ಸನಾಥಮಾಡಿದ ದೀನೋದ್ಧಾರಹುದಹುದೈ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಊರಿಗೆ ಬಂದರೆ ದಾಸಯ್ಯ - ನಮ್ಮಕೇರಿಗೆ ಬಾ ಕಂಡ್ಯ ದಾಸಯ್ಯ ಪ ಕೈಲಿ ಕೋಲು ಕೊಳಲು ದಾಸಯ್ಯಕಲ್ಲಿಗೆ ವರವಿತ್ತೆ ದಾಸಯ್ಯಮಲ್ಲನ ಮರ್ದಿಸಿ ಮಾವನ ಮಡುಹಿದನೀಲಮೇಘಶ್ಯಾಮ ದಾಸಯ್ಯ 1 ಕೊರಳೊಳು ವನಮಾಲೆ ದಾಸಯ್ಯ - ಬಲುಗಿರಿಯನು ನೆಗಹಿದೆ ದಾಸಯ್ಯಇರುಳು ಹಗಲು ನಿನ್ನ ಕಾಣದೆ ಇರಲಾರೆಮರುಳು ಮಾಡುವಂಥ ದಾಸಯ್ಯ 2 ಆದಿನಾರಾಯಣ ದಾಸಯ್ಯಮೋದದೊಂದು ಸಾಸಿರ ನಾಮದ ದಾಸಯ್ಯಮೇದಿನಿಯೊಳು ಪುಟ್ಟಿ ಗೋವ್ಗಳ ಕಾಯ್ದಆದಿಕೇಶವರಾಯ ದಾಸಯ್ಯ3
--------------
ಕನಕದಾಸ
ಕೃಷ್ಣ ಪಾಲಿಸು ಪರಮ ಕೃಪಾಲಯ ಪ. ಪಾಲಿಸು ನಿನ್ನಯ ಬಾಲನು ಬೇಡುವ ಬಯಕೆಯ ಲಕ್ಷ್ಮೀ- ಲೊಲ ನೀ ಕರದು ತಾರಾಕೆಯ ಅ.ಪ. ತುರುವು ಮೊಲೆಯನುಂಬ ಕರುವಿನ ಬೆನ್ನನು ತುರಿಸುತ ತಿರುಗುವ ತೆರದಲಿ ನೀ- ನಿರುವಿಯೆಂದರಿದೆನು ಮನದಲಿ ಚರಣ ಪಂಕಜಗಳ ಶರಣ ಹೊಕ್ಕೆನ್ನನು- ದ್ಧರಿಸು ಶ್ರೀಕಾಂತ ಗುಣದಲಿ ಸ್ವೀ- ಕರಿಸುತ ನನ್ನ ನಿನ್ನ ಕೆಲದಲ್ಲಿ 1 ಖಗರಾಜ ಭೂಧರವರ ನಾಗಭೂಷಣ ಶಕ್ರ ಪೂಜಿತ ನಿನ್ನಾ- ವಾಗ ಕಾಂಬೆನು ಗೃಹರಾಜಿತ ಮೂಗಭಾವದ ತಪ್ಪ ಮನಕೆ ತರುವರೆ ಮ- ಹಾ ಗಣಪತಿ ಶಬ್ದ ವಾಚ್ಯನೆ ಎನ್ನ ಬೇಗ ಕರೆಸು ಸರ್ವಾಧ್ಯಕ್ಷನೆ 2 ಎಲ್ಲವು ನಿನಗೊಪ್ಪಿಸುವೆ ಎಂಬುದ ನೀ ಬಲ್ಲಿ ಶ್ರೀಭೂರಮೆನಲ್ಲನೆ ಎನ- ಗಿಲ್ಲ ಭಾರವು ಜಗಮಲ್ಲನೆ ತಲ್ಲಣ ಬಿಡಿಸಿ ಪಾಲಿಸು ಶಿರದಲಿ ಪದ ಪಲ್ಲವನನು ವೆಂಕಟೇಶನೆ ಸರಿ- ಯಲ್ಲ ನಿನಗೆ ಶ್ರೀನಿವಾಸನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಗೋಪಿ ಇವನು ನಿನ್ನಾ ಪ ಜಗವ ನಿರ್ಮಿಸಿ ಪಾಲಿಸಿ ಅಳಿಸುವ ಅಗಣಿತ ಸುಗುಣಾ ಭರಣನೆ ಇವನು ಅ.ಪ ಬೆಣ್ಣೆಯ ಕದ್ದನು ಸಣ್ಣವನಿಹ ಬಹು ಚಿಣ್ಣರ ಕೂಡುತ ಗೋಗಣ ಕಾಯುವ ಮನ್ಮನ ಪುಥ್ಥಳಿ ಕಳಿಸುವದಾಗದು ಎನ್ನುವ ನುಡಿಗಳ ಬದಿಗಿಡು ತಾಯಿ ಉಣ್ಣುತ ಉಣ್ಣುತ ಮೊಲೆಯನು ಕೊಂದಿಹ ಉನ್ನತ ರಕ್ಕಸಿ ಪೂತಣಿಯನ್ನಿವ ಮಣ್ಣನು ಕಂಡರು ಕಂಸನದೂತರು ಪೂರ್ಣಾನಂದನು ಸರಿ ಇವನಮ್ಮ 1 ಜಾರ ಚೋರ ಸುಕುಮಾರನು ಸುಂದರ ನಾರೇರ ವಲಿಸಿ ಸೇರಿದ ನಿಶಿಯಲಿ ಪೋರನೆಂಬ ಮನ ದೂರವಗೈದುಗ ಭೀರ ಮಹಿಮ ಜಗ ಸಾರನೆಂದರಿಯೆ ಭಾರಿಗಿರಿಯನೆತ್ತಿ ಊರಿಗೆ ಊರನು ಸೇರಿಸಿ ಪೊರೆದಿಹಪಾರಮಹಿಮ ಜಂ ಭಾರಿದರ್ಪಹರ ಪೋರನೆ ಬಿಡುಬಿಡು ನಿಗಮ ಸಂಚಾರನೆ ಖರೆಯೆ 2 ಕಾಲ್ಗಳು ಸೋಕಲು ಶಕಟನು ಬಿದ್ದನು ಶೀಳುತ ಕೊಕ್ಕನು ಬಕನಂ ಕೊಂದನು ಕಾಳಿಯ ತುಳಿಯುತ ಗರ್ವವ ನಿಳಿಸಿದ ಲೀಲಾಜಾಲದಿ ಜ್ವಾಲೆಯ ನುಂಗಿದ ಬಾಲರು ಕೇಳಲು ಆಲಯತೋರಿದ ಪಾಲಿಸಿ ವರುಣನ ತಂದೆಯ ಕಂದನ ಲೋಲನೆ ಸರಿ ಜಗಮೂಲನು ಕೇಳೆ 3 ನೀರಜ ನಾಭಗೆ ಗೊಲ್ಲತಿಯ ಗಣ ಬೀರಲ್ ಸಾಧ್ಯವೆ ಮೋಹವ ನೆಂದಿಗು ಶ್ರೀರತಿದಾಯಕ ಕೊಳ್ಳುವನೇ ರತಿ ಭವ ತಾರಕ ಶುಭ ಶೃಂಗಾರ ಪೂರ್ಣ ಪರಿವಾರದಭೀಷ್ಠವ ಖರೆ ಭೂರಿದಯಾಮಯ ನಾರಾಯಣನಿವ ದೋಷ ವಿದೂರ 4 ಮೆಲ್ಲಗೆ ಬಾಯೊಳು ಎಲ್ಲವ ತೋರಿದ ಮಲ್ಲನು ಸರ್ವರ ವಲ್ಲಭ ಸಿದ್ಧವು ಗೊಲ್ಲನ ವೇಷದಿ ಇಲ್ಲಿಹನಮ್ಮ ಇಲ್ಲವೆ ಸಮರಿವಗೆಲ್ಲಿಯ ಸತ್ಯ ಮಲ್ಲರ ಮರ್ದಿಸಿ ಕೊಲ್ಲುತ ಕಂಸನ ನಿಲ್ಲಿಸಿ ಧರ್ಮವ ಕಾಯುವ ನಮ್ಮ ಬಲ್ಲಿದ “ಶ್ರೀಕೃಷ್ಣವಿಠಲ” ಬೇಗನೆ ನಿಲ್ಲಿಸಿ ಕೊಳ್ಳದೆ ಕಳುಹೇ ತಾಯಿ 5
--------------
ಕೃಷ್ಣವಿಠಲದಾಸರು
ಜಯ ಜಯಾ ದೇವ ದೇವಾ ಮಾರ್ತಾಂಡ ಭೈರವಾ ದಯದಿಂದ ಪಾಲಸೆನ್ನಾ ಭಕ್ತರನುದಿನಕಾವಾ ಪ ಶರಣರ ಮೊರೆಯ ಕೇಳಿ | ಶಿವ ಅವತಾರವ ತಾಳಿ ಭವರೂಪಮಣಿಮಲ್ಲನಾ | ಮರ್ಧಿಸಿದೆ ತನುಶೀಳಿ 1 ವಿವೇಕಹಯವನೇರಿ | ಭೋಧನಾಸ್ತ್ರವನು ದೋರಿ ಅವಗುಣ ಬಲಮುರಿದೇ | ಜಗಕಭಯವ ಬೀರಿ 2 ಮ್ಯಾಲಕರದಿಂದ ಉಘೇ | ಯನ್ನಲು ಕೂಗಿ 3 ಘನಗುರು ಮಹಿಮಪತಿ | ಸುತ ಪ್ರಭು ಮಾಪತಿ ಮನದೊಳು ಜ್ಞಾನ ದೀಪಾ | ದಿಂದಬೆಳಗುವೆ ಆರತಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಪ್ಪು ಮಾಡುವದು ಮನುಜ ಧರ್ಮ | ನಮ್ಮದು ಬೇಡುವದು ಕಾಡುವದು ಪ ನಡೆ ನುಡಿಗೆ ತಪ್ಪು ನೋಡುವದು ನ್ಯಾಯವೇ ನಿನಗೆ ||ಬಡವರಾಟಗಳೆಂದು ಸಲುಹಯ್ಯ | ಮಾಡಲಬೇಡ ತಡವ |ಕಡಿದ್ಹಾಕು ಕಮಳಲೋಚನಾ | ಎನ್ನ ನಿನ್ನಡಿಗೆಸೇರಿಸು | ಕಡಲಶಯನ ಮೋಹನ್ನಾ 1 ಮಡಹಿ ಮಲ್ಲನ ಕೆಡವಿ | ಜೋಡು ಮತ್ತಿಯ ಮರವ ತಡವಿ | ಮಧು ಮೊದಲಾದವರನ್ನು | ಅಡವಿ ಕಿಚ್ಚವ ನುಂಗಿ | ಕಡುವಿ ಮಡುವ ಧುಮುಕಿ | ಬಡವಿ ಕುಬ್ಜಿಯ ಕೈಪಿಡಿದು ಯಶವ ಪಡೆದಿ 2 ನಡೆವವನು ಎಡವುವನೆಂದು | ಅಪರಾಧಗಳನುಬಡಿದಾಡದೆ ಒಡಲೊಳಗೆ ಹಿಡಿವ | ಮಡದಿಯನುನಿಮ್ಮ ಜಡೆಯಲಿರಿಸಿದ ಮನೆಯಲಿ ಎನ್ನ |ಸಡಗರದ ರುಕ್ಮದಿಂದಿಡಿದು ಲಾಲಿಸು 3
--------------
ರುಕ್ಮಾಂಗದರು
ನಿನಗೆ ಅಂಜುವಳಲ್ಲೋ ಮುರಾರೆ ಮಧುರಿಪು ಪ ಮಲ್ಲರ ಗೆಲಿದಿಹ ಗೊಲ್ಲ ಗೋಪಾಲ ಬಾ ಪರಿಪಾಲಿಸು ಅ.ಪ. ಮಾನವ ಮಡುಹಿದ ಮಲ್ಲನ ಕಂಡು ಅಂಜುವಳೆ ರಂಗ ನಾ ಅಂಜುವಳೇ 1 ಥಂಡ ಥಂಡದಾ ಬಲು ಭಂಡ ಮಾತಾಡುವ ಪುಂಡನಿಗೆ ನಾ ಅಂಜುವಳೇ ಪುಂಡ ಜರಾಸಂಧನಿಗಂಜಿ ನಗೇಂದ್ರನ ಭಂಡಿ ಪೊಡೆದ ಈ ಭಂಡನಿಗೇ ರಂಗಾ ನಾ ಅಂಜುವೆನೇ 2 ಹಿಂಡು ಜೀವರಾ ನಾ ಅಂಬುಜದೊಳಿಟ್ಟು ಸಲಹುವತೊಂಬನಿಗೆ ನಾ ಅಂಜುವಳೇ ಪುಂಡ ಖಳರ ಚಂಡಾಡುವತಂದೆವರದಗೋಪಾಲವಿಠ್ಠಲ ರಂಗಾ 3
--------------
ತಂದೆವರದಗೋಪಾಲವಿಠಲರು
ನಿನಗೆ ನಾ ಬ್ಯಾಡಾದನೆ ಘನಕೃಷ್ಣ ಮಾನಿನಿಯ ಕಿಂತ ಕೊನೆಯೆ ಪ ಎನ್ನ ಕಣ್ಣಿಗೆ ತೋರದೆ ಬೆನ್ನಲ್ಲಿ ಮಾನಿನಿಗೆ ನೀ ತೋರಿದ್ಯಾ ಮನ್ನಿಸುವ ನಿತ್ಯದಲಿ ಮುನ್ನ ನಿನಗೆ ನಾ ದ್ವೇಷಿಯಲ್ಲವೋ 1 ಒಳಗೆ ನೀನಿರುವಿ ಎಂದೂ ತಿಳಿದು ಬಲು ತೊಳಲಿ ಶರಣು ಬಂದರೆ ಪೊಳೆಯದಲೆ ಮನಸಿನೊಳಗೆ ಕೊಳಲು ಕರೆ ಬಾಲೇಗೆ ನೀ ತೋರಿದ್ಯಾ 2 ಸುಳ್ಳು ಇದು ಎಂದ್ಹೇಳಲು ಸಲ್ಲದೆಲೊ ಕಳ್ಳ ನೀನೆಂದು ಬಂದೆ ಪುಲ್ಲನಾಭನೆ ತೋರೆಲೊ ಮಲ್ಲನೆ ಗಲ್ಲ ಪಿಡಿದು ಮುದ್ದಿಪೆ 3 ನೀರದಸಮ ಕಾಂತಿಯ ನಾರಿಮಣಿ ಬೀರಿದಳೊ ಶ್ರೀಕೃಷ್ಣನೆ ಕರುಣಸಾಗರನೆಂಬೊದು ಮರೆತು ನೀ ದೂರ್ಹೋಗಿ ನಿಲ್ವರೇನೊ 4 ಮೂರು ವಯಸೆಂದ್ಹೇಳರೊ ಚಾರುತರಾಭರಣ ಇಟ್ಟಿಹನೆಂಬುರೊ ಈ ರೀತಿ ಅಬಲೆಯರು ನಿರುತದಲಿ ಧರೆಯೊಳಗೆ ಪೇಳ್ವುದರಿಯಾ5 ಎಂದಿಗಾದರು ನಿನ್ನನು ಪೊಂದದೆಲೆ ಇಂದಿರಾಧವ ಬಿಡುವನೆ ತಂದೆ ಶ್ರೀ ಮಧ್ವರಾಯ ಛಂದದಲಿ ಮುಂದೆ ತಂದೆಳೆವ ನಿನ್ನ 6 ನೀ ಬಿಟ್ಟರೇ ಕೆಡುವೆನೆ ಶ್ರೀ ಭೀಮನೊಬ್ಬ ಬಲ ಸಾಕೆಲೊ ಅಪಾರ ದೈವ ನಿನ್ನ ಕೊಬ್ಬುತ ತಬ್ಬಿ ನಾ ನಿನ್ನೊಲಿಸುವೆ7 ಮಾನದಿಂದಲಿ ತೋರೆಲೊ ನಿನಗಿದು ಘನತೆಯಲ್ಲವೊ ಜೀಯನೆ ಮುನ್ನ ಮಾಡ್ದುಪಕೃತಿ ಮರೆತೆಯಾ8 ಇನಿತು ವಂಚಿಸಿ ಪೋದರೆ ನಾ ನಿನ್ನ ಹೀನ ಗುಣದವನೆನ್ನುವೆ ಮನ್ನಿಸಿ ಸಲಹೋ ಬ್ಯಾಗ ಶ್ರೀ ನರಹರಿಯೆ ನಾ ಭಿನ್ನೈಸುವೆ9
--------------
ಪ್ರದ್ಯುಮ್ನತೀರ್ಥರು
ನೆನೆವೆನನುದಿನ ನೀಲನೀರದವರ್ಣನ ಗುಣರನ್ನನಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಪಾಂಗನ ಪ. ದೇವಕೀ ಜಠÀರೋದಯಾಂಬುಧಿಚಂದ್ರನ ಸುಖಸಾಂದ್ರನಗೋವ್ರಜಕೆ ಘನ ಯಮುನೆಯನು ದಾಟಿ ಬಂದನ ಅಲ್ಲಿ ನಿಂದನಮಾವ ಕಳುಹಿದ ಮಾಯಶಠವಿಯ ಕೊಂದನ ಚಿದಾನಂದನ ದೇವರಿಪು ದೈತ್ಯೇಂದ್ರ ಶಕಟನ ಒದ್ದನ ಶ್ರುತಿಸಿದ್ಧನ 1 ಗೋಕುಲದ ಗೋಪಿಯರ ಸಂಚಿತ್ತ ಚೋರನ ಬಹು ಧೀರನ ಅ-ನೇಕ ನಾರಿಯರ್ವಸನವನು ಕದ್ದೊಯ್ದನ ಪುರಗಾಯ್ದನನಾಕಿಯರ ನೋಯಿಪಧೇನುಕ ವತ್ಸವಿಘಾತ ವಿಖ್ಯಾತನಕಾಕುಮತಿ ಕಾಳಿಂಗನ ಫಣ ತುಳಿದನ ಆವಗೊಲಿದನ 2 ಕರ ಪಿಡಿದನ ಸುಧೆಗುಡಿದನಬಾಲ ಭಾಮೆಯರೊಡನೆ ಜಲಕ್ರೀಡೆಗಿಳಿದನ ಅಲ್ಲಿ ನಲಿದನಲೀಲೆಯಲಿ ಲಲನೆಯರಿಗಿಷ್ಟವ ಕೊಟ್ಟನ ಸಂತುಷ್ಟನ 3 ಕ್ರೂರ ಬಕ ಕೇಶಿಗಳನೆಲ್ಲ ಸೀಳ್ದನ ಸುರರಾಳ್ದನ ಅಕ್ರೂರ ಕರೆಯಲು ಹರುಷದಿಂದಲಿ ಬಂದನ ಸುರವಂದ್ಯನಸಾರಿ ಕುಬ್ಜೆಗೆ ಭೂರಿಸಂತಸವಿತ್ತನ ಅತಿಶಕ್ತನವಾರಣವ ಒದ್ದು ಕೆಡಹಿದಾಪ್ರತಿಮಲ್ಲನ ಅತಿಚೆಲ್ವನ4 ಸುಲಭದಿಂದಲಿ ಶಿವನ ಧನುವನು ಮುರಿದನ ನೆರೆಮೆರೆದನಮಲೆತÀ ಮಲ್ಲರ ಮಡುಹಿರಂಗದಿ ನಿಂತನ ಜಯವಂತನಖಳಕುಲಾಗ್ರಣಿ ಕಂಸನೆಂಬನ ಹೊಡೆದನ ಹುಡಿಗೆಡೆದನಬಲದಿ ತಾಯಿತಂದೆ ಬಂಧನ ಕಡಿದನ ಕೀರ್ತಿ ಪಡೆದನ 5 ಭುವನ ಪಟ್ಟವನುಗ್ರಸೇನಗೆ ಕೊಟ್ಟನ ಅತಿ ದಿಟ್ಟನಯುವತಿಯರಿಗುದ್ಧವನ ಕಳುಹಿದ ಜಾಣನ ಸುಪ್ರವೀಣನವಿವಿಧ ವಿದ್ಯಾ ಕಲೆಗಳನ್ನೆಲ್ಲ ಅರಿತನ ಶುಭಚರಿತನ ಜವನ ಶಿಕ್ಷಿಸಿ ದ್ವಿಜನ ಕಂದನ ತಂದನ ಆನಂದನ 6 ಕುಮತಿ ಖಳ ಮಾಗಧನ ಯುದ್ಧದಿ ಗೆದ್ದನ ಅನವದ್ಯನದ್ಯುಮಣಿಸಮ ದ್ವಾರಕೆಯ ರಚಿಸಿದುದಾರನ ಗಂಭೀರನಸುಮತಿ ಮುಚುಕುಂದನೊದ್ದ ಯವನನ ಸುಟ್ಟನ ಅತಿದಿಟ್ಟನವಿಮಲ ಸುಚರಿತ್ರಾಷ್ಟಮಹಿಷಿಯರಾಳ್ದನ ನೆರೆಬಾಳ್ದನ 7 ಮುರನರಕ ಮುಖ್ಯರನು ಚಕ್ರದಿ ತರಿದನ ಕರಿವರದನಸುರತರುವ ಸತಿಗಾಗಿ ತಂದ ಸಮರ್ಥನÀ ಜಗತ್ಕರ್ತನದುರುಳ ಶಿಶುಪಾಲಾದಿ ದೈತ್ಯ ಸಂಹಾರನ ಬಹು ಶೂರನಕುರುಕುಲಕೆ ಲಯವಿತ್ತ ಪಾಂಡವಪ್ರೀಯನ ಕವಿಗೇಯನ 8 ಸಂತತವೀ ಸಾರÀ ಕತೆಯನು ಕೇಳ್ವರ ನೆರೆ ಬಾಳ್ವರಕಂತುಪಿತ ಕಾರುಣ್ಯದಿಂದಲಿ ಹೊರೆವನು ಸುಖಗರೆವನುಇಂತು ಇಳೆಯ ಸುಜನರ ಸಲಹುವ ಕಾಂತನ ಸಿರಿವಂತನಪಂಥವುಳ್ಳ ಪ್ರಸನ್ನ ಹಯವದನ್ನನಮುನಿಮಾನ್ಯನ 9
--------------
ವಾದಿರಾಜ
ಪುಟ್ಟಿದನು ಜಗದೀಶ | ಜಗಭಾರ ನೀಗಲುವೃಷ್ಣಿಕುಲದಲಿ ಈಶ | ದೇವಕಿಯ ಜಠರದಿಕೊಟ್ಟು ಅವಳಿಗೆ ಹರ್ಷ | ಕರುಣಾಬ್ದಿ ಭೇಶ ಪ ಅಟ್ಟಹಾಸದಿ ದೇವದುಂದುಭಿ | ಶ್ರೇಷ್ಠವಾದ್ಯಗಳೆಲ್ಲ ಮೊಳಗಲುಅಷ್ಟಮಿಯ ದಿನದಲ್ಲಿ ಬಲು ಉ | ತ್ಕøಷ್ಟದಲ್ಲಿರೆ ಗ್ರಹಗಳೆಲ್ಲವು ಅ.ಪ. ಪರಿ ದೇ-ವಕ್ಕಿಯಲಿ ಉದ್ಭವಿಸೀ | ಸಜ್ಜನರ ಹರ್ಷೀಸಿ ||ವಕ್ರಮನದವನಾದ ಕಂಸನು | ಕಕ್ಕಸವ ಬಡಿಸುವನು ಎನುತಲಿನಕ್ರಹರ ಪ್ರಾರ್ಥಿತನು ದೇ | ವಕ್ಕಿ ವಸುದೇವರಿಂದಲಿ 1 ದೇವ ಶಿಶುತನ ತಾಳೀ | ನಗುಮೊಗವ ತೋರಲುದೇವ ವಾಣಿಯ ಕೇಳೀ | ಅನುಸರಿಸಿ ಆದ ವಸುದೇವ ತನಯನ ಕೈಲೀ | ಕೊಂಡಾಗ ಬಂಧನಭಾವ ಕಳಚಿತು ಕೇಳೀ | ಶ್ರೀ ಹರಿಯ ಲೀಲೇ ||ಪ್ರಾವಹಿದ ಸರಿದ್ಯಮುನೆ ವೇಗದಿ | ಭಾವ ತಿಳಿಯುತ ಮಾರ್ಗವೀಯಲುಧೀವರನು ದಾಟುತಲಿ ಶಿಶು ಭಾವದವನನ ಗೋಪಿಗಿತ್ತನು 2 ವಿಭವ ||ತಂದು ಶಿಶು ಸ್ತ್ರೀಯಾಗಿ ಮಲಗಿರೆ | ಬಂದು ಕಂಸನು ಕೈಲಿ ಕೊಳ್ಳುತಕಂದನಸು ಹರಣಕ್ಕೆ ಯತ್ನಿಸೆ | ಬಾಂದಳಕ್ಕದು ಹಾರಿ ಪೇಳಿತು 3 ದುರುಳ ಭಯವನೆ ಪೊಂದಿ ತೆರಳುತತರಳರಸುಗಳ ನೀಗ ತನ್ನಯ | ಪರಿಜನಕೆ ಅಜ್ಞಾಪಿಸಿದ ಕಂಸ 4 ಆರೊಂದನೆಯ ದಿನದಿ | ಗೋಕುಲಕೆ ಬಂದಳುಕ್ರೂರಿ ಪೂಥಣಿ ವಿಷದಿ | ಪೂರಿತದ ಸ್ತನ ಕೊಡೆಹೀರಿ ಅವಳಸು ಭರದಿ | ಮೂರೊಂದು ಮಾಸಕೆಭಾರಿ ಶಕಟನ ಮುದದಿ | ಒದೆದಳಿದೆ ನಿಜಪದದಿ ||ಮಾರಿ ಪೂಥಣಿ ತನುವನಾಶ್ರಿತ | ಊರ್ವಶಿಯ ಶಾಪವನೆ ಕಳೆಯುತಪೋರ ಆಕಳಿಸುತ್ತ ಮಾತೆಗೆ | ತೋರಿದನು ತವ ವಿಶ್ವರೂಪ 5 ಭಂಜನ ||ಪಾನಗೈಯ್ಯುತ ದಾನ ವನ್ಹಿಯೆ | ಹನನ ವಿಷತರುರೂಪಿ ದೈತ್ಯನ ಧೇನುಕಾಸುರ ಮಥನ ಅಂತೆಯೆ | ಹನನ ಬಲದಿಂದಾ ಪ್ರಲಂಬನು6 ಪರಿ ಗೋವರ್ಧನ | ಶಂಖ ಚೂಡನ ಶಿರಮಣಿಯು ಬಲು ಅಪಹರಣ | ಅರಿಷ್ಟಾಸುರ ಹನನ ||ಹನನಗೈಯ್ಯಲು ಕೇಶಿ ಅಸುರನ | ಘನಸುವ್ಯೋಮಾಸುರನ ಅಂತೆಯೆ ಮನದಿ ಯೋಚಿಸಿ ಕಂಸ ಕಳುಹಿದ | ದಾನ ಪತಿಯನು ಹರಿಯ ಬಳಿಗೆ 7 ಬಲ್ಲ ಮಹಿಮೆಯ ಹರಿಯ | ಅಕ್ರೂರ ವಂದಿಸಿಬಿಲ್ಲಹಬ್ಬಕೆ ಕರೆಯ | ತಾನೀಯೆ ಕೃಷ್ಣನುಎಲ್ಲ ತಿಳಿಯುತ ನೆಲೆಯ | ಪರಿವಾರ ಸಹಿತದಿಚೆಲ್ವ ರಥದಲಿ ಗೆಳೆಯ | ಅಕ್ರೂರ ಬಳಿಯ ||ಕುಳ್ಳಿರುತ ಶಿರಿ ಕೃಷ್ಣ ತೆರಳುತ | ಅಲ್ಲಿ ಯಮುನೆಲಿ ಸ್ನಾನ ವ್ಯಾಜದಿ ಚೆಲ್ವತನ ರೂಪಗಳ ತೋರುತ | ಹಲ್ಲೆಗೈದನು ಗೆಳೆಯ ಮನವನು 8 ಬವರ | ಗೈವುದಕೆ ಬರ ಹರಿಹಲ್ಲು ಮುರಿಯುತ ಅದರ | ಸಂಹರಿಸಿ ಬಿಸುಡಲುಮಲ್ಲ ಬರೆ ಚಾಣೂರ | ಹೂಡಿದನು ಸಂಗರ ||ಚೆಲ್ವ ಕೃಷ್ಣನು ತೋರಿ ವಿಧ್ಯೆಯ | ಮಲ್ಲನನು ಸಂಹರಿಸುತಿರಲು ಬಲ್ಲಿದನು ಬಲರಾಮ ಮುಷ್ಟಿಕ | ಮಲ್ಲನನು ಹುಡಿಗೈದು ಬಿಸುಟನು 9 ಜಲಧಿ | ಆವರಿಸಿ ಬರುತಿರೆಹರಿಯ ಬಲ ಸಹ ಭರದಿ | ಸಂಹರಿಸಿ ಅವರನುಕರಿಯ ವೈರಿಯ ತೆರದಿ | ಹಾರುತಲಿ ಮಂಚಿಕೆಲಿರುವ ಕಂಸನ ಶಿರದಿ | ಪದಮೆಟ್ಟಿ ಶಿಖೆ ಪಿಡದಿ ||ಗರುಡನುರಗನ ಪಿಡಿದು ಕೊಲ್ಲುವ | ತೆರದಿ ಕೃಷ್ಣನು ಪಿಡಿದ ಕಂಸನ ಕರದಿ ಖಡ್ಗದಿ ಶಿರವ ನಿಳುಹಲು | ನೆರೆದ ಸುಜನರು ಮೋದಪಟ್ಟರು 10 ಮಂದ ಮೋದ ಪಡಿಸುವ 11
--------------
ಗುರುಗೋವಿಂದವಿಠಲರು
ಬಿಡಿಸೊ ಬಂಧನ ಕ್ಲೇಶವ ಬಿಗಿಯುತಲಿದೆ ಪ ನಾನು ಬಿಟ್ಟರು ಎನ್ನ ಕಂಬಳಿ ಬಿಡದಿದೆ ಅ.ಪ ಎಲ್ಲವ ಬಿಟ್ಟು ನಾ ಬಂದೆನೆಂದರಿತೆನೊ ಎಲ್ಲವು ಎನ್ನನು ಬಿಡಲಿಲ್ಲವೊ ಕಲ್ಲು ಎದೆಯ ಪೊತ್ತ ಮಲ್ಲನೆಂದರಿತೆನೊ ಹುಲ್ಲೆಯ ಮರಿಯಂತೆ ನಡುಗುವಂತಾಯಿತೊ 1 ಮಿಕ್ಕ ವಿಷಯಗಳ ಬೇಡ ಬೇಡೆನ್ನುತ ಹೊಕ್ಕರು ಮೂಲೆ ಮೂಲೆಗಳನ್ನು ದಿಕ್ಕು ದಿಕ್ಕುಗಳಿಂದ ಸೆಳೆಯುತಲಿರುವುದು ಅಕ್ಕರೆ ತೊಲಗಿತು ಶುಷ್ಕವಾಯಿತು ಮನವು 2 ಲೋಕ ರಕ್ಷಕನು ನೀನೆಂಬುದನರಿತರು ವ್ಯಾಕುಲವೇತಕೆ ಪ್ರತಿ ಕ್ಷಣವು ತಾ ಕಾಣದ ನರ ವರವÀ ಕೊಡಲುಬಹುದೆ ಏಕಾಂತ ಭಕುತ ಪ್ರಸನ್ನನೆ ಕರುಣದಿ 3
--------------
ವಿದ್ಯಾಪ್ರಸನ್ನತೀರ್ಥರು
ಮಧುರೆಗೆ ಪೋಗಬ್ಯಾಡಾ ರಂಗಯ್ಯ ರಂಗಾ ಪ. ಮಧುರೆಗೆ ಪೋದಾರೆ ಚದುರಿ ನಾರಿಯರು ಬೆದರುತಲಿರುವೆವು ಹರಿಯೇ ಎನ್ನಯ ದೊರೆಯೇ ಅ.ಪ. ಮಧುರಾಪುರದಿಂದ ಅಕ್ರೂರ ಕರಿಲಿಕ್ಕೆ ಬಂದಾನು ಮಲ್ಲನ ಕೊಂದನು ಕೃಷ್ಣ ರಜಕನ ಕೊಂದನು ರಕ್ತಾಲಂಕೃತನಾಗಿ ಕುಬಜಿಯಿಂದ ಗಂಧವಾ ಕೊಂಡನು ಡೊಂಕನು ತಿದ್ದಿದನು 1 ಚಾಣಿಕರ ಮುಷ್ಟಿಕರ ಕೂಡಾ ಮುಷ್ಟಿ ಯುದ್ಧವ ಮಾಡಿ ಕುಟಿಲರ ಕೊಂದು ರಂಗಮಂಟಪಕೆ ಬಂದು ನಾನಾಭರರಣ ಭೂಷಿತನಾಗಿ ರಾಜ ಬೀದಿಯೊಳು ಸಾಗಿ 2 ಮಧುರಾಪುರದ ನಾರಿಯರು ಬಲು ಚೆಲುವಿಯರು ನಿನ್ನನೆ ಮರುಳು ಮಾಡುವೋರು ಯಮ್ಮನಗಲಿಸುವೋರು ಇವರು 3 ಕನಿಕರವಿಲ್ಲವೆ ನಾವು ನಿನ್ನನು ಬಿಟ್ಟು ವೊಂದು ನಿಮಿಷವಾದರು ಕಾಲಹ್ಯಾಗ ಕಳಿಯೋಣ ಘನ ಮಹಿಮನ ಅಧರಾಮೃತ ಪರವಶವಾದೆವು 4 ಮಲ್ಲಯುದ್ಧವ ಮಾಡಿ ಮಾವ ಕಂಸನ ಕೊಂದು ಉಗ್ರಸೇನರಿಗೆ ಅನುಗ್ರಹವ ಮಾಡಿ ಶೀಘ್ರದಿ ಬರಬೇಕೆಂದು ಬೇಡುವೆ ನಾ ಬಂದು ಕಾಳಿಮರ್ಧನಕೃಷ್ಣ ನಿನಗಿಂದು 5
--------------
ಕಳಸದ ಸುಂದರಮ್ಮ
ಯಾರಿಗೆ ಹೋಲುವೆ ನಿನ್ನ ಯಾರಲ್ಲಿ ಸಲ್ಲಾಪಿಸಲಿ ಮಾರನೋ ಮದನನ ಪಡೆದ ಕೇಶವನೋ ಪ ಸಾರಸವದನನು ವಾರಿಧಿಶಯನನು ಅ.ಪ ಆಹವ ಭೀಮನೋ | ಸಾಹಸ ಮಲ್ಲನೋ ಬಹು ಸುದೀರ್ಘನು ಮೋಹಮಂದಿರನು ಮಹಿಜೆಯರಸನೋ ಅಹಿಯ ಶಯನನೋ ಬಹುಗುಣಾನ್ವಿತ ವೆಂಕಟೇಶನೋ ಮಹಿತ ಮಹಿಮನು ಸಾಹಸ ಶೀಲನು ಪಾಹಿರಘು ಕುಲಪತಿ ಚೆನ್ನ ಚೆಲುವನು 1 ಉರಗ ಭೂಷಣನೋ | ಸರಸಿಜ ಭವನೋ ಧರಣಿಯ ಅಳೆದ ಪರಮಪುರುಷನೋ ಗರುಡಗಮನನೋ | ಕರುಣ ಭಜಿಪನೋ ನರಪಸುತ ಕೋದಂಡಧರನೋ ಮೆರೆವ ಕಾಂಚೀಪುರದ ವರದನೋ ನಿರುತ ವಂದಿತ ಮಾಂಗಿರೀಶನೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾರು ಬಲ್ಲರು ವೆಂಕಟೇಶ ನಿನ್ನೊಳಿಹ ಚಾರು ಗುಣಶೀಲವೆಂಬ ವಾರಿಧಿಯ ಚಿಪ್ಪಿನೊಳು ಮೊಗೆದು ಬತ್ತಿಸುವಂಥ ವೀರನಾವನು ಜಗದೊಳು ಪ ಹದಿನಾಲ್ಕು ಲೋಕವನ್ನು, ನೀ ನಿನ್ನ ಉದರದೊಳಗಿರಿಸಿಕೊಂಡು ಉದಧಿಮಯವಾಗಿರ್ದ ಕಾಲದೊಳು ನಿನಗೊಂದು ಉದುರಿದೆಲೆಯೊಳು ನಿದ್ರೆಯಂತೆ 1 ಮಾಯೆ ಕಮಲಾಕರದೊಳು, ನಿನ್ನುದರ- ದಾಯತದಿ ತೋರಿ ನಿಲಲು ಮೋಹಿಸಲು ಆ ಕ್ಷಣದಿ ಕಾಯವಾಗಲು ಮೇಲೆ ಬಾಯಿ ನಾಲ್ಕಾಯಿತಂತೆ 2 ಅಲ್ಲಿ ತೋರಿದ ಸೊಲ್ಲನು, ಖಳನೋರ್ವ ನೆಲ್ಲವನು ಸೂರೆಗೊಳಲು ಮಲ್ಲನಾಗಿಯೆ ಜಲದಿ ಘಲ್ಲಿಸಿಯೆ ದೈತ್ಯನನು ಚೆಲ್ವಸಾರವ ಸೆಳೆದೆಯಂತೆ 3 ಅದರ ಆಧಾರದಿಂದ, ಸನಕಾದಿ- ಗುದಯವಾದುದುಯೆಲ್ಲವೂ ಮೊದಲ ಕಾಣದೆ ವೃಕ್ಷವದುರಿ ಬಿದ್ದುದ ನೋಡಿ ತುದಿಯೊಳಗೆ ಕದನವಂತೆ 4 ಒಳ ಹೊರಗೆ ನೀನೊಬ್ಬನೆ, ಹೊಳೆ ಹೊಳೆದು ಸುಳಿವ ಪರಿಯನು ಕಾಣದೆ ಮಲತಾಯಿ ಮಗನೊಳಗೆ ಕಲಹವಿಕ್ಕುವ ತೆರದಿ ಹೊಲಬುದಪ್ಪಿಯೆ ನಡೆವರಂತೆ 5 ಒಂದಿದರಿಂದೆರಡಾದುದು, ಮೂರಾಗಿ ಬಂದು ಇದಿರೊಳು ನಿಂದುದು ಒಂದು ಮಾತಿನೊಳೆರಡು ಸಂದೇಹಗಳ ತೋರಿ ಮಂದ ಬುದ್ಧಿಯ ಕೊಡುವೆಯಂತೆ 6 ಜಡವಾದ ಅಡವಿಯನ್ನು ಸಂಚರಿಸಿ ಒಡಲ ಹೊರೆವುದು ಕಡೆಯೊಳು ಎಡೆಯೊಳೊಪ್ಪಿಸಿ ಕೊಡುವಿಯಂತೆ 7 ನಂಬಿ ಬಂದವರ ನೀನು, ಮನದೊಳಗೆ ಹಂಬಲಿಸಿಕೊಂಡಿರುತಲೆ ಇಂಬಾಗಿ ಇಹಪರದಿ ಉಂಬ ಸಂಭ್ರಮವನ್ನು ಸಂಭವಿಸಿ ತೋರ್ಪೆಯಂತೆ 8 ಭೂಮಿಗೆ ವೈಕುಂಠವೆಂದು, ನಿಂತಿರುವ ಸ್ವಾಮಿಯೆನ್ನೆಡೆಗೆ ಬಂದು ಕ್ಷೇಮವನು ವರಾಹತಿಮ್ಮಪ್ಪ ಕರುಣದಿ ಕಾಮಿತಾರ್ಥವನೀಯೊ ಎಮಗೆ 9
--------------
ವರಹತಿಮ್ಮಪ್ಪ
ಹರಿಕೃಪೆಯೋಗ್ಯ ಮುಮುಕ್ಷನು ಧರಿಯೊಳು ಕಾಂಬ ಪರೋಕ್ಷನು ಪ ಹಿಂದಿನ ಪುಣ್ಯದಿ ಬಂದೆನೈ ದೇಹದಿ ಮುಂದಾವಗತಿಯಂದು ಮುಮುಕ್ಷನು ನೊಂದು ಮನದಿ ಪಶ್ಚಾತ್ತಾಪ ವಿರಕ್ತಿಯ ಹೊಂದಿದ ದಡದಲಿ ಮುಮುಕ್ಷನು ನಿಂದು ವಿವೇಕದಿ ಪರಮ ಶುಭೇಚ್ಛವ ಛಂದದಿ ಹಿಡಿವನು ಮುಮುಕ್ಷನು ಇಂದಿರೆ ಪತಿಗೋವಿಂದ ಮುಕ್ಕುಂದ ಸಲ ಹೆಂದು ಮೊರೆಯಿಡುವ ಮುಮುಕ್ಷನು 1 ಅಷ್ಟಮದ ಮುರಿದು ಆರರಿಗಳ ಇಟ್ಟಣಿ ಗಿಡಿಸುವ ಮುಮುಕ್ಷನು ದುಷ್ಟತನ ಬಿಡಿಸಿ ಮನನಿನ ಮಲ್ಲನೆ ಕಟ್ಟಲೆಳಿರಿಸುವ ಮುಮುಕ್ಷನು ನಿಷ್ಠೆಯಿಂದಲಿ ಗುರುಚರಣ ವಭಕುತಿಲಿ ಮುಟ್ಟಿಭಜಿಸುವನು ಮುಮುಕ್ಷನು ಇಷ್ಟಸ್ವಧರ್ಮಪಕರ್ಮಗಳನ್ನು ಕಾಮ್ಯವ ಬಿಟ್ಟು ನಡೆಸುತಿಹ ಮುಮುಕ್ಷನು 2
--------------
ಕಾಖಂಡಕಿ ಶ್ರೀ ಕೃಷ್ಣದಾಸರು