ಒಟ್ಟು 12 ಕಡೆಗಳಲ್ಲಿ , 8 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(4) ಕೆಂಗಲ್ಲು ಆಂಜನೇಯ ಕೆಂಗಲ್ಲ ಹನುಮಂತರಾಯ ನಮ್ಮ ರಂಗನಾಥಗೆ ಬಹು ಪ್ರಿಯ ಪ ಮಂಗಳಕರ ವಜ್ರಕಾಯ ಉ ತ್ತುಂಗ ವಿಕ್ರಮ ಪೊರೆ ಜೀಯ ಅ.ಪ ಶ್ರಾವಣ ಕಡೆ ಶನಿವಾರ ಬರೆ ಭಾವಿಸಿ ಭಕ್ತರು ಸೇರೆ ಆವಾವೆಡೆ ಜನ ಮೀರೆ ನಿನ್ನ ತೀವಿದ ಮನದಿ ಪಾಡುವರೊ ದೊರೆ 1 ಬಹುಭಜಕರು ಕುಣಿದಾಡಿ ಗುಣ ಸಾಹಸ್ರಗಳ ಕೊಂಡಾಡೀ ಶ್ರೀಹರಿ ವೈಭವ ನೋಡೀ ಮಹದಾನಂದದೊಳಗೋಲಾಡಿ2 ಪರಿ ವ್ಯಾದಗಳಿಂದ ಸಿರಿ ವರನುತ್ಸವ ಬಹುಚಂದ ತಿರುಪತಿ ಯಾತ್ರಿಕರಿಂದ ನೆರೆದೆಸೆವ ಕಲ್ಯಾಣ ಬೃಂದ 3 ತಾಳ ತಂಬೂರಿ ಮದ್ದಳೆಯ ಮೇಳ ತಮ್ಮಟೆಗಳ ಬಹು ಘೋಷ ಭೂಲೋಕದಿಂ ಸ್ವರ್ಗಕೈದಿ ಶ್ರೀ ಲೀಲೆಯ ತೋರ್ಪುದು ನಿಜದಿ 4 ವರಜಾಜಿ ಕೇಶವನ ನಾಮವನು ನಿರುತ ನೆನೆವ ಶರಣ ಪ್ರೇಮ ಕರುಣದಿ ಪೊರೆ ಪುಣ್ಯಧಾಮ ಸಿರಿ ಜಯಚಾಮನೃಪಸ್ತುತ್ಯ ಭೀಮ 5
--------------
ಶಾಮಶರ್ಮರು
ಅಮೃತ ನೀಡೆನಗೆ ಪ ಅಮೃತ ನೀಡಪಮೃತ್ಯುಕಳೆದು ಧ್ಯಾ ನಾಮೃತವೆಂಬ ಸಾಮ್ರಾಜ್ಯ ಸಂಪದವಿತ್ತು ಅ.ಪ ಜರಾ ಮರಣವ ಗೆಲಿಪ ಅಮೃತ ದುರಿತ ಪರ್ವತಲೋಪ ಭರದಿಗೈದು ಮಾಯಮರವೆ ಹರಿಗೆ ಸ್ಥಿರ ಪರಮಪಾವನ ಮಾಳ್ಪ ಹರಿಸ್ಮರಣಾನಂದ 1 ಭವಬಾಧೆಯ ಗೆಲಿಪ ಅಮೃತ ಜವನ ಭಯವ ಲೋಪ ಜವದಿಗೈದು ತ್ರಯ ಭುವನದೊಳ್ಮಿಗಿಲಾಗಿ ಧ್ರುವನು ನಿರುತಮಾಗಿ ಸವಿದ ಮಹದಾನಂದ2 ತಾಮಸಗಳನಳಿವ ಅಮೃತ ಪಾಮರತನ ತುಳಿವ ಆ ಮಹ ವೈಕುಂಠದ ವಿಮಲ ಪದವಿಯನು ಕ್ಷೇಮದೀಯುವ ಶ್ರೀರಾಮ ಪ್ರೇಮಾನಂದ 3
--------------
ರಾಮದಾಸರು
ಎಂದು ಕಾಂಬೆನು ನಾನುಗೋ- ವಿಂದ ನಿನ್ನಯ ಪಾವನ್ನ ಪಾದವನ್ನು ನಾ ಪೊಂದಿಸೇವಿಸಿ ಆನಂದಪಡುವುದಕಿನ್ನು ಕರುಣಿಸೈ ಮುನ್ನ ಪ ಪೊಂದಿ ಮಹದಾನಂದ ಪಡೆಯಲು ಕಂದಿಕುಂದಿತು ತನುಮನೇಂದ್ರಿಯ ಇಂದೆ ತೋರಿಸೊ ಪಾದಕಮಲವ ಅ.ಪ ಬಾಲತನದಲಿ ನಾನು ಶ್ರೀಲೋಲ ನಿನ್ನಿಂದ ಪಾಲಿತನಾದೆನೊ ಬೆಲೆಯುಳ್ಳ ಆಯುವನೆಲ್ಲ ಕಳೆದು ಬಿಟ್ಟೆನು ನಾನು ಕೆಲಕಾಲದಲಿ ನಾ ಕಲುಶಕ್ರಿಯೆಗಳನ್ನು ಫಲವಿಲ್ಲದೆಸಗಿದೆನು ಎಲ್ಲರೊಳು ನೀ ನೆಲಸಿ ಜೀವರ ಎಲ್ಲಕರ್ಮವ ಮಾಡಿಸಿ ಫಲವೆಲ್ಲ ಅವರಿಗೆ ಇತ್ತು ನೀ ನಿರ್ಲಿಪ್ತನೆಂದು ತಿಳಿಯದಲೆ ಖುಲ್ಲಮಾನವರೊಡನೆ ಬೆರೆತು ಪುಲ್ಲಲೋಚನ ನಿನ್ನ ಮರೆದು ಇಲ್ಲ ಎನಗೆ ಎಣೆಯೆನುತ ನಾ ಬಲುಹೆಮ್ಮೆಯಿಂದಲಿ ದಿನಗಳ ಕಳೆದೇ ಇಲ್ಲನಿನಗೆಸರಿಯಿಲ್ಲ ನೀ ನಿಲ್ಲದಾಸ್ಥಳವಿಲ್ಲ ಜಗದಾ ಎಲ್ಲ ಕಾಲಗಳಲ್ಲಿ ಇಹ ಶ್ರೀನಲ್ಲ ನೀನೆಲ್ಲ ಬಲ್ಲೆಯೊ 1 ಬರಿದೇ ಕಾಲವ ಕಳೆದೇ ಶ್ರೀಹರಿಯೆ ನಿನ್ನಯ ಸ್ಮರಣೆಯನ್ನು ಮಾಡದೇ ಪರಿಪರಿಯ ತನುಮನ ಕ್ಲೇಶಗಳಿಗೊಳಗಾದೆ ನಾಮಸ್ಮರಣೆಯೊಂದಲ್ಲದೇ ಇನ್ನೆಲ್ಲಾ ಬರಿದೇ ಪರಮಕರುಣಾಶರಧಿ ಎಂಬುವ ಕರಿಧ್ರುವಬಲಿಮುಖ್ಯರೆಲ್ಲರ ಪೊರೆದ ಕೀರುತಿ ಕೇಳಿ ನಂಬಿದೆ ಶರಣಜನಮಂದಾರನೆಂದು ಅರಿಯೆ ನಾನವರಂತೆ ಸಾಧನ ಅರಿತು ಮಾಡುವ ಪರಿಯು ತಿಳಿಯದು ಬಿರುದು ಭಕ್ತಾಧೀನನೆಂದು ಹರಿಯೆ ನಿನ್ನಯ ಮರೆಯಹೊಕ್ಕೆನು ದುರಿತಶರಧಿಯೊಳಾಡುತಿರುವನ ಉ- ತ್ತರಿಸಲೊಂದೇ ನಾವೆಯಂತಿಹ ಚರಣಸ್ಮರಣೆಯಕೊಟ್ಟು ರಕ್ಷಿಸು ಪುರುಷಸೂಕ್ತಸುಮೆಯ ಜೀಯಾ2 ಶೇಷಗಿರಿಯವಾಸ ಶ್ರೀ ಶ್ರೀನಿವಾಸ ದೋಷರಹಿತ ಸರ್ವೇಶ ಮನೋ- ಕಾಶದಲಿ ಅನವರತ ನಿಲ್ಲೊ ಶ್ರೀಶಾ ಬಿಡಿಸೆನ್ನ ಭವಬಂಧ ಗ್ರಂಥಿಯ ಪಾಶಾ ಹರಿಸುವುದು ಕ್ಲೇಶಾ ಶ್ರೀಶ ನಿಗಗತಿಶಯವೆ ಎನ್ನಯ ವಿಷಯದಭಿಲಾಷೆಗಳ ಬಿಡಿಸೀ ದೋಷರಹಿತನ ಮಾಡಿಸೀ ಎನ್ನ ಪೋಷಿಸೋ ನಿನ್ನಸ್ಮರಣೆಯಿತ್ತು ದ್ವಾಸುಪ- ರ್ಣ ಶ್ರುತಿಗಳಿಂದಲಿ ಈಶ ದಾಸರ ಭಾವ ತಿಳಿಯದೆ ಮೋಸಹೋದೆನೊ ಬೋಧೆ ಇಲ್ಲದೆ ವಾಸುದೇವನೆ ರಕ್ಷಿಸೆನ್ನನು ಏಸುಕಾಲಕು ನೀನೆ ಗತಿ ಎಂದು ಆಸೆ ಮಾಡುವೆ ನಿನ್ನ ಕರುಣಕೆ ಬೇಸರದಲೆ ಮೊರೆಯ ಲಾಲಿಸಿ ಶ್ರೀಶ ಶ್ರೀ ವೆಂಕಟೇಶನೆ 3
--------------
ಉರಗಾದ್ರಿವಾಸವಿಠಲದಾಸರು
ಎಂದೆಂದೆನ್ನ ಮನದಿಂದ ಅಗಲದಿರೋನಂದ ನಂದನನೆ ಆನಂದ ಮೂರುತಿಯೆ ಪ ಬಹುಕಾಲ ನಿನ್ನ ಶ್ರವಣವೆಂಬ ಹೊನ್ನೋಲೆಯಬಹುಮಾನದಿಂದೆನ್ನ ಕಿವಿಯೊಳಿಟ್ಟುಮಹಿತ ಮಂಗಳಸೂತ್ರವೆಂಬೊ ದಾಸ್ಯವನ್ನು ಮಹದಾನಂದದಿ ಎನ್ನ ಕೊರಳೊಳ್ ಕಟ್ಟಿದೆಯಾಗಿ1 ಸುಲಲಿತ ಸೈರಣೆಯೆಂಬ ಭೂಷಣವಿತ್ತುಸಲಹಿದೆ ಬಹು ಪ್ರೀತಿ ಸಖಿಯೆಂದೆನ್ನಬೆಲೆಯಿಲ್ಲದ ಸುಜ್ಞಾನ ನಿಧಿಯನಿತ್ತುಜಲಜಾಕ್ಷ ಎನ್ನನು ಒಲಿದು ಆಳಿದೆಯಾಗಿ 2 ಎಲ್ಲಿ ನೀ ನಿಲಿಸಿದರೆನಗೇನು ಭಯವಿಲ್ಲಬಲ್ಲೆನೊ ವಿಶ್ವವ್ಯಾಪಕನೆಂಬುದಸಲ್ಲದೊ ಈ ಮುನಿಸೆನ್ನೊಳು ಸಿರಿಕೃಷ್ಣಒಲ್ಲದಿದ್ದರೆ ನಿನ್ನ ಸೆರಗಪಿಡಿದೆಳೆವೆ 3
--------------
ವ್ಯಾಸರಾಯರು
ಕ್ಷಿತಿಭಾರ ಹರಣನೇ ಶ್ರೀಜಾನಕೀ ಪತಿಯೇ |ಶಿತಿಕಂಠ ಸಖ ಹರಿಯೇ ಪ ಅತಿ ವಿಮಲನಂತಾರ್ಕ ನಿಭ ಪದಾಗತಿ ವಹನೆ ಪೊರೆ ಶ್ರೀರಾಮಚಂದ್ರಾನೇ ಅ.ಪ. ಪರಮ ಮಂಗಳ ನಾಮ | ಪರಿಹರಿಸಿ ಸಂಸೃತಿಯನಿರುತ ಮಹದಾನಂದ | ಪ್ರದವೆನಿಪುದೋ ||ಮರುತಾಂತರಾತ್ಮ ತವ | ನಾಮ ಸುಧೆ ಸುಖ ಸವಿದುಇರುವಂತೆ ಮಾಡಯ್ಯ | ಕರುಣ ನಿಧಿಯೇ 1 ಕಮಲ ಸಂಭವನಯ್ಯ | ಸುಮನಸರಿಗತಿ ಪ್ರೀಯಕಮಲದಳ ನೇತ್ರನೇ | ಕಾಮಿತ ಪ್ರದನೇ ||ಭ್ರಮ ಮೂರ ಪರಿಹರಿಸೊ | ಕಮಲಾಪ್ತ ಕುಲಜನೇಶಮದಮಾನ್ವಿತನೆನಿಸಿ | ವಿಮಲ ಮತಿ ಈಯೋ 2 ದಶಕಂಠ ಹರ ನಿನ್ನ | ಯಶವನ್ನೆ ಪೊಗಳಲುಶೇಷ ವಿಪ ರುದ್ರಾದಿ | ಗಸದಳವು ಇಹುದೂ |ಕಸರು ಕರ್ಮಾದಿಗಳ | ಕೆಸರು ಕಳೆ ಪ್ರಾರ್ಥಿಸುವೆಅಸಮ ಮಹಿಮನೆ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ದೊರೆಯಾಗಿ ನಾನಿಹೆನಮ್ಮ ಅಜಹರಿಹರರ್ಗಿಲ್ಲದೆ ಪದ ಸೇರಿತಮ್ಮ ಪ ಪರಿ ಪರಮಾನ್ನವಮ್ಮ 1 ಸಂಗರಹಿತ ಸತಿಯಮ್ಮ ಆಮಂಗಳವೆಂಬ ಘನಸುತರಮ್ಮಜಂಗಮವೇ ಜನವಮ್ಮ ಭೇದಂಗಳ ಪರಿದಿಹುದೇ ಅರಮನೆಯಮ್ಮ 2 ನಾದವೆಂಬುದ ವಾದ್ಯವಮ್ಮ ಸುನಾದವೆಂಬುದೇ ಗೀತಗಾಯಕರಮ್ಮಆದಿ ಬಂಧುವೇ ಮದವಮ್ಮ ತೇಜವಾದ ಚಿತ್ತವೇ ದೀವಟಿಗೆಮ್ಮ 3 ಜ್ಞಾನವೆಂಬುದೇ ಬಲವಮ್ಮ ಮಹದಾನಂದ ರಾಜ್ಯಕ್ಕೆ ಅಧಿಪತಿಯಮ್ಮತಾನೆ ಎಂಬುದೇ ಮುದ್ರೆಯಮ್ಮ ಇಂತುನ್ಯೂನವಿಲ್ಲದೆ ಸ್ಥಿರ ಸೇರಿದುದಮ್ಮ4 ಸುರವರರ್ಗಿನಿತುಂಟೆ ಅಮ್ಮಹಿರಿಯಾರಾರಾದರೇನು ದೊರಕದಮ್ಮಗುರುವಿನ ದಯದಿಂದಲಮ್ಮ ನಿಜಗುರು ಚಿದಾನಂದನೇ ತಾನಾದುದಮ್ಮ5
--------------
ಚಿದಾನಂದ ಅವಧೂತರು
ಪ್ರಾಣರಾಯನೆ ನಿನಗೆಣೆಯುಂಟೆ ಪಾಲಿಪ ಕ ರುಣಾಶಾಲಿಗಳನ್ನು ಪಣೆಗಣ್ಣ ಮೊದಲಾದಮರ ಗಣದೊಳು ಇನ್ನು ನಾ ಕಾಣೆ ಮುನ್ನ ಪ ಗುಣನಿಧಿಯೆ ಎಣಿಯಿಲ್ಲ ನಿನ್ನಯ ಅಣು ಮಹಘನರೂಪ ಕ್ರಿಯಗಳು ಕ್ಷಣಬಿಡದೆ ನೀನಖಿಳಜೀವರ ತ್ರಿ- ಗುಣ ಕಾರ್ಯವ ಗೈವೆ ಮುಖ್ಯ ಅ.ಪ ಕರ್ಮ ಜೀವರೊಳು ನೀನೆಸಗಿ ತೋರ್ಪುದೆ ಧರ್ಮ ನಾನರಿಯೆ ಪ್ರತಿ ಕರ್ಮ ಎನ್ನನುಭವಕೆ ತಂದಿಡುವುದೇ ನಿನ್ನ ಧರ್ಮ ನಾ ಕಾಣೆ ಮರ್ಮ ಜನುಮ ಕೋಟಿಗಳಿಂದಲಿ ಅನುಸರಿಸಿ ಬಂದಿಹ ಎನ್ನ ಕರ್ಮವ ಅನಿಲದೇವ ನಿನ್ನಿಂದ ಅಲ್ಲದೆ ಎನಿತು ಇತರನಿಮಿಷರು ಮಾಳ್ವರು ಜ್ಞಾನದಾಯಕ ನೀನೆ ಎನ್ನಯ ಮನದಲಿಹ ಜಂಜಡವ ಕಳೆದು ಹೀನಕರ್ತನು ತಾನು ಅಲ್ಲದೆ ನೀನೆ ಸರ್ವರ ಕರ್ತನೆಂಬುವ ಜ್ಞಾನಿ ಧ್ಯಾನ ಸ್ಮರಣೆಯನು ಸಾನುರಾಗದಿ ಇತ್ತು ನಿನ್ನ ಮತಾನುಗರಲ್ಲನವರತ ಇಡು ಅನೇಕ ಜನುಮಜನುಮಾಂತರದೊಳು 1 ಶ್ವಾಸನಾಮಕ ನೀನು ಜಗದೀಶ ನೀ ಜೀ- ವೇಶ ಸರ್ವಶಕ್ತಾನು ನೀ ತಾಸಿಗೊಂಭೈನೂರು ಶ್ವಾಸಗಳನ್ನು ಈ ಶರೀರದಿ ಜೀವರಿಂ ದೆಸಗುವೆಯೊ ನೀನು ಉಸುರಲೇನಿನ್ನು ವಾಸುದೇವಗೆ ಪ್ರೀತನಾಗಿ ಅ- ಶೇಷತತ್ತ್ವಕ್ಕೀಶನಾಗಿಹೆ ವಾಸವಾದಿಗಳೆಲ್ಲರೊಳು ಇನ್ನು ಈಸುಭಾಗ್ಯವು ಕಾಣಲಿಲ್ಲ ಏಸುಕಾಲಕು ನೀನೇ ಗತಿಯೆಂದು ಈಶ ಶೇಷ ಖಗೇಶ ಪ್ರಮುಖರು ದಾಸರಾಗಿಹಗರಯ್ಯ ಬಿಡದೆ ದೇಶಕಾಲಗಳಲ್ಲಿ ನಿನ್ನೊಳು ಸೂಸುವಾ ಅತಿಭಕುತಿಯಿಂದಲಿ ಈಶ ತಪದಲಿ ನಿನ್ನ ಮೆಚ್ಚಿಸೆ ಶೇಷಪದವಿಯ ಕೊಟ್ಟು ಶ್ರೀಶ- ನ ಶಯನಸೇವೆ ಸಂಪದವನಿತ್ತೆ 2 ಭಕುತ ಜನರ ಬಂಧೂ ಶ್ರೀಹರಿಗೆ ನೀ ಪ್ರಥ- ಮಾಂಗನಹುದೆಂದೂ ಈ ಸಕಲ ಜಗದಾ ಚೇಷ್ಟಪ್ರದನೆಂತೆಂದೂ ನೀನೆ ಭಗವತ್ಕಾರ್ಯಸಾಧಕನೆಂದೂ ಸಾರುತಿದೆ ಶ್ರುತಿ ಇಂದೂ ಲೋಕಮಾತೆಗೆ ನಮಿಸಿ ದಶಶಿರ ನಂದನನ ಸಂಹರಿಸಿ ಮಹದಾನಂದ ನೀ ವನವ ಭಂಗಿಸಿ ರಘುನಂದನಗೆ ಮುದದಿಂದ ವಂದಿಸಿ ನೊಂದ ದೃ- ಪದನಂದನೇಯಳಾ- ನಂದಪಡಿಸಲು ಕೊಂದೆ ಕೌರವ ವೃಂದವೆಲ್ಲವ ಸವರಿ ನಂದನಂದನಿಗಾನಂದ ಪಡಿಸಿದೆ ಇಂದಿರೇಶ ಶ್ರೀ ವೇಂಕಟೇಶನೆ ಎಂದಿಗೂ ಪರದೈವವೆಂದು ಬಂದು ಬೋಧೆಯನಿತ್ತ ಆ- ನಂದತೀರ್ಥ ನೀ ಸಮರ್ಥಾ3
--------------
ಉರಗಾದ್ರಿವಾಸವಿಠಲದಾಸರು
ಬಲು ಚಂದ ಮಹದಾನಂದ ಶ್ರೀಹರಿ ಭಜನೆ ಪ ಬಲು ಚಂದ ಬಲು ಚಂದ ಮಹದಾನಂದ ಜಲಜನಾಭನ ನಾಮ ನಲಿನಲಿದ್ಹೊಗಳ್ವುದು ಅ.ಪ ಬಲಿಯ ಕಾಯ್ದನ ನಾಮ ಬಲು ಚಂದ ಲಲನೆಗೊಲಿದನ ಧ್ಯಾನ ಆನಂದ ಕಲುಷಹರಣ ಕರಿಪಾಲನೆಂದೊದರಲು ಗಳಿಲನೆ ಪರಿಹಾರ ಭವಬಂಧ 1 ಮಾವಮರ್ದನನಾಮ ಬಲು ಚಂದ ಗೋವಳರೊಡೆಯನ ಧ್ಯಾನ ಆನಂದ ಗೋವುಪಾಲನೆಂದು ಭಾವಿಸಿ ಕೂಗಲು ಸಾವು ಹುಟ್ಟು ಇಲ್ಲ ಎಂದೆಂದು 2 ಕಾಮಪಿತನ ನಾಮ ಬಲು ಚಂದ ಕಾಮಿತಾರ್ಥನ ಧ್ಯಾನ ಆನಂದ ಭೂಮಿಗಧಿಕ ನಮ್ಮ ಸ್ವಾಮಿ ಶ್ರೀರಾಮನ ಪಾದ ನೇಮದಿ ನುಡಿಯೆ ಮುಕ್ತಿಪದ ಆನಂದ 3
--------------
ರಾಮದಾಸರು
ಮೋಸಹೋದೆವೈ ಸಖಿ _ ವಾಸುದೇವನ ತಿಳಿಯದೆ ಪ ಮೋಸಹೋದೆವೈ ಸಖಿ _ ಮೂಸಿತು ಮನವಮ್ಮ ದೋಷದೂರ ಜಗದೀಶನ ಈ ಲೋಕಶಿಶುವೆಂದರಿಯುತ ಅ.ಪ. ಪುಟ್ಟಿದ ಶಿಶು ಮೊಲೆ ಕೊಟ್ಟವಳಳಿದನೆ ಸುಟ್ಟಾನು ದೈತ್ಯರ ಗೋಷ್ಠಿಗಳೆಲ್ಲವ ಬೆಟ್ಟವನೆತ್ತುತ ವೃಷ್ಟಿಯ ತಡೆದನೆ ಮೆಟ್ಟುತ ಕಾಳಿಯ ತುಷ್ಟಿಯ ನೀಡಿದನೆ ಇಷ್ಟಾದರುನಾವು ತಿಳಿಯದೇ ಸೃಷ್ಟಿಗೊಡೆಯ ಬಹು ದುಷ್ಟನು ಎಂದೇವೆ ಪಟ್ಟೆ ಪೀತಾಂಚರ ಕದ್ದವನೆಂದೇವೇ ಇಟ್ಟನು ಕಣ್ಣನು ನಮ್ಮಲೆಂದೇವೇ ಜೇಷ್ಠ ಶ್ರೇಷ್ಠ ಪರಾತ್ಪರ ಹರಿ ಸಂ- ತುಷ್ಟ ಗುಣಾರ್ಣವ ನಿರುಪಮ ಸುಖಿ ಜಗ- ಚೇಷ್ಟೆಯ ನಡೆಸುವ ಶಿಷ್ಯರ ಧೂರೆ ಪರ- ಮೇಷ್ಠಿಯ ಪಿತ ನೆಂದರಿಯದೆ ಕೃಷ್ಣನಾ 1 ಮೆಲ್ಲನೆ ಬಾಯಲಿ ಲೋಕವ ನೆಲ್ಲವ ತಾಯಿಗೆ ತೋರಿದನೆ ಬಲ್ಲಿದನಿವ ತಾ ಬೆಂಕಿ ಜ್ವಾಲೆಯನುಂಗುತ ತಾಪೊರೆದನೆ ಗೊಲ್ಲರಪತಿ ಮುಳುಗಲು ಪಾತಾಳದಿ ತಂದನೆ ತಂದೆಯನು ಬಾಲರ ಗುಂಪಿಗೆ ಲೋಕಗಳೆಲ್ಲವ ನೀರೋಳು ತೋರಿದನೆ ಮೆದ್ದನು ಎಂದೇವೇ ನಿಲ್ಲದೆ ನಿಶಿಯೊಳು ನಮ್ಮನು ಕೆಡಿಸಿದನೆಂದೇವೆ ಸುಳ್ಳನು ಹೇಳುವ ಜಾಣ ಗೋಪಾಲನು ಎಂದೇವೇ ಸಲ್ಲದ ನುಡಿಗಳ ನಾಡುತ ಕಾಲವ ಕಳೆದೇವೇ ಎಲ್ಲರ ಹೃದಯದಿ ಮತ್ತೆ ಬ್ರಹ್ಮಾಂಡದಿ ಒಳಹೊರ- ನೆಲ್ಲಿಯು ತುಂಬಿಹಏಕನು ಬಲ್ಲನು ಎಲ್ಲವ ಎಲ್ಲವ ಮಾಡುತ ಮಾಡಿಸಿ ಪೊರೆವನು ದೋಷಗಳಿಲ್ಲದ ಸ್ವರತ ರಮಾಧವ ಕೃಷ್ಣನು ಎನ್ನದೇ 2 ತಿಂಗಳ ಬೆಳಕಲಿ ರಂಗನು ಬಂದಾನೇ ಅಂಗಜತಾಪವ ಹರಿಸುವೆನೆಂದಾನೆ ಕಂಗಳಿಗ್ಹಬ್ಬವ ನೀಡುತ ಪೊರೆದಾನೇ ಹಿಂಗದೆ ತನುಮನ ಎಲ್ಲವ ಸೆಳೆದಾನೇ ಮಂಗಳಕಾಯನು ನೀಡಲು ನಮಗಾ ಲಿಂಗನ ಸುಖವನು ಬಹುಮುಡಿ ಆದಾನೇ ಅಂಗವ ಮರೆಸುತ ಮಹದಾನಂದ ತ- ರಂಗದಿ ಒಯ್ಯುತ ಚೆಲುವನು ಕೂಡಿದನೇ ಅಂಗನೆ ಬುದ್ಧಿಲಿ ಇವನನು ತಿಳಿಯದೇ ರಾಗ ವಿಹೀನನ ನಮ್ಮೊಡನಾಡಿಯು ಎಂದೇವೇ ಸಾಗುತ ಬಂದಿಹ ನಮ್ಮಯ ರೂಪಕೆ ಎಂದೇವೇ ನಮ್ಮನು ಕೂಡುತ ಭೋಗವ ಪಡೆಯುವನೆಂದೇವೇ ಗಾಗ್ರ್ಯರು ಮುಂಚೆಯೆ ಪೇಳಿದ ನುಡಿಗಳ ಮರೆತೇವೇ ಭೋಗಿಶಯನ ಜಗದೇಕವೀರ ಸಕಲಾಗಮ ವಂದಿತ ಸಾಗಿಸೆ ದಿತಿಜರ ಕೃಷ್ಣನು ಬಂದಿಹ ದೇವಕಿ ಜಠರದಿ ಬಾಗುತ ಜಯಮುನಿ ವಾಯ್ವಂತರ್ಗತ ಶ್ರೀ ಕೃಷ್ಣವಿಠಲನು ಭಾಗವತgಶ್ರಯ ಪೂರ್ಣಾನಂದನ ಲೀಲೆಯ ತಿಳಿಯದೇ 3
--------------
ಕೃಷ್ಣವಿಠಲದಾಸರು
ಆನಂದಂ ಮಹದಾನಂದಂಹರಿಯ ಭಜನ ಬ್ರಹ್ಮಾನಂದಂ ಪಸತ್ಯ ನುಡಿಯುವುದೆ ಆನಂದಂ ತನ್ನಗುರ್ತ ತಿಳಿಯುವುದೆ ಆನಂದಂನಿತ್ಯನಿರ್ಮಲನ ಸತ್ಯ ಗುಣಂಗಳನುಭಕ್ತಿಯಿಂ ಭಜಿಸೆ ನಿತ್ಯಾನಂದಂಸತ್ಯ ಸತ್ಯ ಸರ್ವೋತ್ತಮ ಹರಿಯೆಂದುಅರ್ತಿಯಿಂ ಭಜಿಸೆ ಅತ್ಯಾನಂದಂ 1ಆಶ ನೀಗುವುದೆ ಆನಂದಂಭವಪಾಶಗೆಲಿಯುವುದೆ ಆನಂದಂಶ್ರೀಶ ಕೇಶವನ ಸಾಸಿರ ನಾಮದಧ್ಯಾಸದಿರುವುದೆ ಲೇಸಾನಂದಂದೋಷದೂರ ಭವಪಾಶಹರನ ಅನುಮೇಷ ಪÀಠಿಸೆ ಸ್ಥಿರದಾನಂದಂ 2ಹಮ್ಮನಳಿವುದೇ ಆನಂದಂ ತಾಸುಮ್ಮನಿರುವುದೆ ಆನಂದಂಕರ್ಮರಹಿತನಾಗಿ ಬ್ರಹ್ಮಪಿತನಪಾದಒಮ್ಮನದೊಳಗಸಮಾನಂದಂಧರ್ಮವಿಡಿದು ಪರಬ್ರಹ್ಮ ಶ್ರೀರಾಮನಮರ್ಮ ತಿಳಿಯೆ ನಿರ್ಮಲಾನಂದಂ 3
--------------
ರಾಮದಾಸರು
ಬಣ್ಣಿಸಲಮ್ಮೆ ನಾನು ಪ.ಬಣ್ಣಿಸಲಮ್ಮೆ ನಾ ಬಹಳ ಮಹಿಮ್ಮನಚಿನ್ಮಯ ನಗಾಧಿಪ ಚೆಲುವ ತಿಮ್ಮಪ್ಪನ ಅ.ಪ.ಇಳೆಯ ಮಾನವರೊಳು ಈಕ್ಷಿಸಿ ಕೃಪಾಳುಒಲಿದು ಕರುಣದಿಂದ ವೈಕುಂಠಪುರದಿಂದಇಳಿದು ಮಂಗಳದೇವಿಯನು ಕೂಡಿಕೊಂಡು ವಿಮಲ ಸ್ವಾಮಿಪುಷ್ಕರ ಮಹಾತೀರ್ಥದ ತೀರದಲಿ ನಿಂತು ಬೇಕಾದ ಧನಧಾನ್ಯ ಸಂಪದಹಲವು ಕಾಮ್ಯವನೀವ ಹೊಗಳಿದವರಕಾವಸುಲಭರೊಡೆಯನ ಕಂಡು ಹಸಿದ ಕಂಗಳಹಬ್ಬ ದಣಿಯಲುಂಡು ಬಹುತೋಷತುಳುಕುವ ಸುಜನವಿಂಡು ವಾರಂವಾರ 1ಪೇಳಲೇನಯ್ಯನ ಪರಿಸೆಯ ಸೊಬಗು ನಾಆಲಯದಿಂ ಗಡಾ ಜನಿಜನ ಸಂಗಡಚೋಳ ಚಪ್ಪರಮೊತ್ತ ಛತ್ರ ಚಾಮರ ಪತಾಕಾಳಿ ಸೀಗುರಿ ಢಕ್ಕೆ ಕೊಂಬು ಕಹಳೆ ಡೆಂಕೆಮೇಳೈಸಿ ಮಹಿಮರು ಮಹದಾನಂದದವರುಗೋಳಿಡುವರು ಹರಿಗೋವಿಂದ ಎನುವರುಕಾಲಾಟದಲ್ಲವರು ಕೀರ್ತಿಪ ಗೀತತಾಳ ದಂಡಿಗೆಯವರು ಬೆಳಗುವಸಾಲು ಪಂಜಿನವರು ವಾರಂವಾರ 2ವಾಂಛಿತಫಲಗಳು ಒದಗಲು ಹರಿಯೊಳುವಂಚನೆಯಿಲ್ಲದೆ ಒಂದೊಂದು ಬಗೆಯದೆಕಾಂಚನ ಮುಡುಪಿಲಿ ಕರಬದ್ಧಾಂಜಲಿಯಲಿಮಿಂಚುವ ಭಕ್ತಿಲಿ ಮಧುಕರ ವೃತ್ತಿಲಿಪಂಚಾಬ್ದಾದ್ಹಸುಳರು ಪ್ರಾಯದ ಅಬಲೇರುಹಿಂಚಾದ ವಯಸಾದ ಹಿರಿಯರು ಹರುಷದಿಸಂಚಿತಹರಕೆಯವರು ತೊಟ್ಟಿಲು ಮನೆಮಂಚವ ಹೊತ್ತವರು ದೇಶಗಳಿಂದಾಕಾಂಕ್ಷೆವಿಡಿದು ಬಂದವರು ವಾರಂವಾರ 3ಸ್ವಾಮಿ ವರಾಹಪಾದ ಸರಸಿಜಾಂಬುಸ್ವಾದತಾಮಹತ್ಯಂಕದ ಶಾತಕುಂಭಾಂಕದವೈಮಾನವಾಸನವಿಧಿಭವೇಂದ್ರೇಶನಕಾಮನ ಪಿತನ ಕಲಿಭಯಛಿತ್ತನಸೋಮಸೂರ್ಯಾಕ್ಷನಸಾಮಜಪಕ್ಷನಜೀಮೂತಗಾತ್ರನ ಜಿತಶತ್ರು ಸೂತ್ರನನೇಮದಿ ಕಂಡೆರಗಿ ಮೈಯೊಳುರೋಮ ಪುಳಕಿತರಾಗಿ ಭಕ್ತರಸ್ತೋಮವು ಮುಕ್ತರಾಗಿ ವಾರಂವಾರ 4ಗಿರಿಯೊಳಮಲಂತರ್ಗಂಗೆ ಪಾಪಾಂತೆವರಪಾಂಡುತೀರ್ಥ ಬಿಲ್ವಾಂಬು ಕಚ್ಛಪತೀರ್ಥಸಿರಿವರಾಹ ಮಚ್ಛಸಲಿಲಪಾವನಲಕ್ಷ್ಮಿಸರ ನಾರದೀಯ ಸರಸ್ವತೀಯ ತೋಯಮೆರೆವ ತುಂಬುರ ಜಲ ಮೊದಲಾದ ಸ್ಥಳಗಳಸರವ ಸನ್ನಿಧಪೂರ್ಣ ಸ್ವಾಮಿ ಪುಷ್ಕರಿಣಿಯನೆರಕೊಂಡು ಪೂತಾಂಗರು ಹರಿಪಾದಸರಸಿಜರತ ಭೃಂಗರು ಜ್ಞಾನೋನ್ಮತ್ತಭರಿತಾಂಗ ಮತ್ತಾಂಗರು ವಾರಂವಾರ 5ನಳಿನಾಕ್ಷ ಪದವಾರಿನಿತ್ಯಸೇವಿಸಿಸಿರಿತುಲಸಿ ತುದಿಯ ಪೊನ್ನತಳಗಿಯದಧ್ಯನ್ನಬಲುರುಚಿ ಅನ್ನವಾಲು ಬಕುಳನ್ನ ಪೊಂಗಲುಸಲೆ ಮೃದು ಗಾರಿಗೆ ಸುಕಿನುಂಡೆ ಗುಳ್ಳರಿಗೆಪುಳಿ ತಿಕ್ತ ಮಧುಮಿಶ್ರ ಪಲಸು ಪಾಲಿನ ದೋಸೆಪಲವು ಪರಿಯ ಘೃತವು ಪಕ್ವ ಪಂಚಾಮೃತಪಾಲ ತೈಂತೊಳೆ ಮನೋಹರ ಪ್ರಸಾದುಂಡುಕಳೆಯೇರುವರು ಮನೋಹರ ಅಲ್ಲಿಗಲ್ಲಿನಲಿವ ದಾಸರ ಮೋಹರ ವಾರಂವಾರ 6ಪೂವಿನಂಗಿಯ ಚೆನ್ನ ಪುಳಕಾಪುಮಜ್ಜನನವ್ಯೋತ್ಸಾಹದಲ್ಲಿಹ ನರಮುನಿಸುರಸಹಸೇವ್ಯಾನಂದನಿಲಯ ಸಾಮಗಾಯನ ಪ್ರಿಯದಿವ್ಯ ರತ್ನಾಭರಣ ದೀಧಿತಿ ಸಂಕೀರ್ಣಹವ್ಯಾಸದನುದಿನ ಹನುಮಗರುಡಯಾನಸವ್ಯಾಪಸವ್ಯ ಭವಭೂಷಿತ ಸ್ಥಿತಸೂರ್ಯಾರೂಢನ ಮೂರ್ತಿಯ ಭೂವೈಕುಂಠಸುವ್ಯಕ್ತವಹ ವಾರ್ತಿಯ ಪ್ರಸನ್ವೆಂಕಟವ್ಯಾಕೃತನ ಕೀರ್ತಿಯ ವಾರಂವಾರ 7
--------------
ಪ್ರಸನ್ನವೆಂಕಟದಾಸರು