ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಋ) ಕ್ಷೇತ್ರವರ್ಣನೆ (1) ಮೇಲುಕೋಟೆ ಯತಿರಾಜ ಸಂಪತ್ಕುಮಾರಾ ಸ ತ್ಕøತದೊಳಗಿರಿಸೆನ್ನ ಧೀರಾ ಪ ಸತತ ಶ್ರೀಮದ್ವೈಷ್ಣವರನಾ ನುತಿಸುವಾನಂದ ದೊಳಗಿರಿಸೈ ಪತಿತಪಾವನ ಕಂಕಣಾಧ್ರುತ ಕ್ಷಿತಿಯ ಪಾಲ ಮಹಾನುಭಾವನೆ 1 ನೋಡಲಿಚ್ಚೈಸಿ ನಾಂ ಬಂದೆ ನನ್ನ ಮೂಢಾಕೃತದೊಳು ನಿಂದೆ ಕೇಡುಗಳು ಬಂದೆನ್ನ ವಿಧ ವಿಧ ಬಾಧೆ ಪಡಿಸುತ್ತಿರುವದಿದೆಕೊ ನೋಡಿ ಸುಜನರ ಕೂಡಿ ಭಜನೆಯ ಮಾಡುವೆನು ಶ್ರೀಮಾಧವಾಗ್ರಣಿ 2 ತುಲಶಿಮಣಿಹಾರ ಲೀಲಾ ಸ ತ್ಫಲತಂತ್ರ ದಾಸಾನುಕೂಲಾ ಕಾಲಕಲನಹುದೊ ಶ್ರೀಮನ್ ಬಾಲಬ್ರಹ್ಮಚಾರಿ ಮದ್ಗುರು ಮೇಲುಕೋಟೆಯೊಳಿರುವೊ ನಿಜವರ ಲೀಲಾಮಾನುಷವಿಗ್ರಹನೆ ನಿಜ ಯತಿರಾಜ ಸಂಪತ್ಕುಮಾರಾ 3
--------------
ಚನ್ನಪಟ್ಟಣದ ಅಹೋಬಲದಾಸರು
ಕಾಮಜನಕ ಭೃಗು ರಾಮ ದಯಾಂಬುಧಿ ಕಾಮಿತ ಫಲದಾಯಿ ಪ. ಮಂಗಳಾಯನ ಮಾತರಿಶ್ವನುತಾ ದಯವಾಗು ದ್ವಿಯುಗ ಶೃಂಗ ಹವ್ಯವಹಾಂತರಂಗಗತ ದು:ಕ್ಷತ್ರಹಂತಾ ತುಂಗ ಪರಶುಧರಾಂಸಬಾಹು ನಿಭಾಂಗ ಶಾರ್ಙಶರಾಸನಾರ್ಜುನ ದುರಿತ ತರಂಗ ಸಂಗರಮಾಂಗಸಂಗತ 1 ನೀನೆ ಗ್ರಹಪತಿಯೆಂಬುದನು ತಿಳಿದು ದುರ್ಮೋಹವಳಿದು ತಾನು ಯನ್ನುವಹಂಕೃತಿಯು ಕಳಿದು ನಿನ್ನಲ್ಲಿ ನಲಿದು ಸ್ನಾನ ಹೋಮ ಸುರಾರ್ಚನಾದಿಗ ಳೇನು ಮಾಡಿದರೆಲ್ಲ ನಿನ್ನ ಸಮಾನಕರಿಪ ಮಹಾನುಭಾವನೆ 2 ಒಪ್ಪಿಸಿದೆ ಸರ್ವಸ್ವವನು ನಿನಗೆ ಗತಿ ನೀನೆ ಎನಗೆ ಕಪ್ಪಕಾಣಿಕೆ ಎಲ್ಲವೂ ನಿನಗೆ ಇದು ಸತ್ಯ ಕೊನೆಗೆ ಅಪ್ಪಳಿಸು ರಿಪುಪುಂಜವನು ಬರುತಿಪ್ಪದುರಿತವ ಭಂಗಿಸುತ ನ- ಕಂದರ್ಪಭಂಜನ ಸರ್ಪಗಿರಿವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ನೀನೆ ಪಾಲಿಸೊ ಎನ್ನ ಮಾರುತಿರಾಯ ಪ ನೀನೆ ಪಾಲಿಸೊ ಮಹಾನುಭಾವನೆ ಸದಾ ಙÁ್ಞನ ಭಕುತಿನಿತ್ತು ಮಾನಾದಿ ನೀ ವೇಗ ಅ.ಪ ನಿನ್ನ ಆಧಾರ ಲೋಕಾ ಜನರು ಸದಾ ನಿನ್ನ ಭಜಿಸುವೊರೇಕಾ ಪ್ರಕಾರದಿ ನಿನ್ನ ಸೇವಿಪರನೀಕಾ ಸಂಗಾವಿತ್ತು ನಿನ್ನ ಧ್ಯಾನಿಪ ವಿವೇಕಾ ಮತಿಯನಿತ್ತು ಮನ್ನಿಸೊ ಮಜ್ಜನಕಾ ನಿನ್ನಾ ಭಜಿಪರಿಗೆ ಅನ್ಯಾಲೋಕಗಳುಂಟೆ ಘನ್ನಾ ಹರಿಯ ಲೋಕವನ್ನೆ ಸೇರುವರಯ್ಯಾ 1 ರಂತರ ದೊಳಗಿಹನು ಎಂದು ನಿನ್ನಾ ನಂತ ರೂಪಗಳನ್ನು ಭಜಿಸುವ ಗಂತು ಜ್ಞಾನವನ್ನು ನೀಡುತ ಜನ ರಂತರದಲಿ ನೀನು ನಿಂತು ಪಾಲಿಸಿ ಜೀವರಂತೆ ಗತಿಯನಿತ್ತು ಕಂತುºರಾದ್ಯರ ಸಂತತಿ ವಂದ್ಯನೆ 2 ಸೀತಾರಾಮನ ಪಾದವಾ ಸೇವಿಸಿ ನಿತ್ಯ ಪಾತಕಾಂಬುಧಿಗೆ ದಾವಾನಂತೆ ಜಗದಿ ಈ ತೆರದಲಿ ಮೆರೆವಾನೆಂದು ಈಗ ಸೋತು ನಾ ಬಂದೆ ದೇವಾ ನೀನೇ ಎನ್ನ ಮಾತು ಲಾಲಿಸೊ ದ್ಯುಧವಾ ಮಾತರಿಶ್ವ ನಿಜ ದೂತಾನು ನಾನಯ್ಯ ನೀತ ಗುರು ಜಗನ್ನಾಥವಿಠಲಪ್ರಿಯ 3
--------------
ಗುರುಜಗನ್ನಾಥದಾಸರು
ಪರಾಕು ಹೇಳುವನ ನಿರಾಕರಿಸುವದು ಹೊಕ್ಕ ನಿನ್ನ ಸೇವೆಯೊಳಗೆ ಬಹು 1 ಮಲಾದು(?0 ಇರುವಂ-------ಳಗೆ ಇರುವ ಅಲಾದಿ ಅಂಗಗಳು ಅವತರಿಸಿದ ದೇವಾ 2 ನೆಲಾನ ಘೂರಿಸಿದ ಭಲಾಶೆ ಮಾಡಿ ದುರುಳಾದ ಕರುಳ ತೆಗೆದು ಕೊರಾಳಲ್ಲಿಟ್ಟ ಸ್ವಾಮಿ 3 ಧರಾನÉ ದಾನ ಬೇಡಿ ಸರಾನ ಕೋಪದಿಂದ ಶರ---------ಸಿದ ಶ್ರೀಹರಿ ಎಂದು ಬಹು 4 ಬಲಾನೆ ಕುಟ್ಟಿ ಖಳನ ಬಲಾನೆಲ್ಲವ ಮುರಿದು ಲಲಾನೆಯನು ತಂದು ರಘುರಾಮನೆಂದು ಬಹು 5 ದುಷ್ಟ ಕಂಸಾನ ಕೊಂದಾ ಸೃಷ್ಟಿಕರ್ತಾನು ನೀನು ಕೃಷ್ಣಾ ಕರುಣಿಸೂ ಎಂದು ಪ್ರಾಯದಲಿ ಮೊರೆಯಿಟ್ಟು 6 ಅಂಬಾರವನು ಬಿಟ್ಟು ಸಂಚಾರದಲಿ ನೀ---- ---ಂ ಬೇರಿದಂಥ ಶ್ರೀ ಮಹಾನುಭಾವನೆನುತಾ 7 ಶರಾಣು ಎಂದು ಬಂದವರಾನ ಪೊರೆದ ಶ್ರೀಧರಾನೆ ರಕ್ಷಿಸೆಂದು ಕರಾವು ಮುಗಿದಿಂದೂ8 ನಿರಾಮಯಾನಾದ ಶ್ರೀ ರಾಮದೇವರೆನ್ನ ಪತಿ `ಹೊನ್ನ ವಿಠ್ಠಲಾ’ 9
--------------
ಹೆನ್ನೆರಂಗದಾಸರು
ಸುಬ್ರಹ್ಮಣ್ಯ ಸ್ವಾಮಿ ತೇ ನೌಮಿ ಶರಣಾಗತರ್ಗೆ ನಿರ್ಭಯವ ಪಾಲಿಸು ಪ್ರೇಮಿಪ. ಅಭ್ರವಾಹನಾದಿದೇವ ಸಭ್ಯ ಸಂಭಾವಿತ ಜಗ- ದಭ್ಯುದಯ ತೇಜೋಮಯ ಕರ್ಬುರಾಂತಕ ನಿಶ್ಯೋಕಅ.ಪ. ಭಾವಭಕ್ತಿಭಾಗ್ಯಶೂನ್ಯರು ನಿನ್ನಯ ಪದ ಸೇವೆಗಾಲಸ್ಯವ ಮಾಳ್ಪರು ಕೇವಲ ದುರ್ಜನರು ಬಾರರು ದೇವದೇವ ನಿನ್ನ ಕರು- ಣಾವಲಂಬಿಗಳನೆಲ್ಲ ಕಾವನೆ ಮಹಾನುಭಾವನೆ 1 ಚಂದ್ರಸೂರ್ಯರಿರುವ ತನಕ ಸ್ಥಾನಿಕ ವಿಪ್ರ- ರಿಂದ ಪೂಜೆಗೊಳೈ ಷಣ್ಮುಖ ವಂದನೀಯ ಪಾರ್ವತಿಯ ನಂದನ ನಳಿನಾಯತಾಕ್ಷ ಇಂದುಶೇಖರಕುಮಾರ ಸ್ಕಂದನೆ ನಿತ್ಯಾನಂದನೆ 2 ಪಾವಂಜಾಖ್ಯಸುಕ್ಷೇತ್ರವಾಸ ಪೊರೆಯೊ ಪರಮೇಶ ಕೇವಲ ವಿಜ್ಞಾನಪ್ರಕಾಶ ಭಾವಜೋಪಮ ಲಾವಣ್ಯ ಕೋವಿದಾಗ್ರಗಣ್ಯ ಮಹಾ- ದೇವ ಲಕ್ಷ್ಮೀನಾರಾಯಣನ ಸೇವಕ ಬುದ್ಧಿದಾಯಕ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸುಬ್ರಹ್ಮಣ್ಯ ಸ್ವಾಮಿ ತೇ ನೌಮಿ ಶರಣಾಗತರ್ಗೆನಿರ್ಭಯವ ಪಾಲಿಸು ಪ್ರೇಮಿ ಪ.ಅಭ್ರವಾಹನಾದಿದೇವ ಸಭ್ಯ ಸಂಭಾವಿತ ಜಗ-ದಭ್ಯುದಯ ತೇಜೋಮಯ ಕರ್ಬುರಾಂತಕ ನಿಶ್ಯೋಕ ಅ.ಪ.ಭಾವಭಕ್ತಿಭಾಗ್ಯಶೂನ್ಯರು ನಿನ್ನಯ ಪದಸೇವೆಗಾಲಸ್ಯವ ಮಾಳ್ಪರುಕೇವಲ ದುರ್ಜನರು ಬಾರರು ದೇವದೇವ ನಿನ್ನ ಕರು-ಣಾವಲಂಬಿಗಳನೆಲ್ಲ ಕಾವನೆ ಮಹಾನುಭಾವನೆ 1ಚಂದ್ರಸೂರ್ಯರಿರುವ ತನಕ ಸ್ಥಾನಿಕ ವಿಪ್ರ-ರಿಂದ ಪೂಜೆಗೊಳೈ ಷಣ್ಮುಖವಂದನೀಯ ಪಾರ್ವತಿಯ ನಂದನ ನಳಿನಾಯತಾಕ್ಷಇಂದುಶೇಖರಕುಮಾರ ಸ್ಕಂದನೆ ನಿತ್ಯಾನಂದನೆ 2ಪಾವಂಜಾಖ್ಯಸುಕ್ಷೇತ್ರವಾಸ ಪೊರೆಯೊ ಪರಮೇಶಕೇವಲ ವಿಜ್ಞಾನಪ್ರಕಾಶಭಾವಜೋಪಮ ಲಾವಣ್ಯ ಕೋವಿದಾಗ್ರಗಣ್ಯ ಮಹಾ-ದೇವ ಲಕ್ಷ್ಮೀನಾರಾಯಣನ ಸೇವಕ ಬುದ್ಧಿದಾಯಕ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ