ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನವ ಸುವರ್ಣದಾ ಪರಿಯ ಹೊಳೆವ ಕೆಂಜೆಡೆಯಲೀ ದಿವಿಜ ನದಿಯ ನಿರುತ ಧರಿಸೀ ಮುಂದಲಿಯ ಲೀ ತವ ಶೀತಾಂಶೂನಾ ಕಳೆಯ ತಿಲಕಾ ಮಾಡಿ ಮೆರೆವಾ ಭವ ಭಯ ನಿವಾರಿಸಿ ಹೊರೆವಾ 1 ಮದನ ನಳಿದಾ ಭಾಲನಯನಾ ಸುವಿಧ್ಯದಿ ಮೊರೆಹುಗಲು ವಲುವಾನಂದನಯನಾ ಫಣಿ ಭೂಷಣ ಮಾರಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 2 ಠವ ಠವಿಸುವ ಮುನಿಯ ಮನೋಹರ ಪಂಚ ವದನಾ ರವಿ ಕೋಟಿ ತೇಜದಿರುವಾಘನ ಕಾರುಣ್ಯ ಸದನಾ ಭವಾನೀ ಯಡದ ತೋಡಿಯಲಿರಿಸೀ ಕೊಂಡು ಮೆರೆವಾ ಭವ ಭಯ ನಿವಾರಿಸಿ ಹೊರೆವಾ 3 ಧವಲೀಸುತಿಹ ತನು ರೂಚಯ ಕರ್ಪೂರ ಪರಿಯಾ ತವಕದಿಂದುಟ್ಟಾ ಉಡುಗಿ ಹರನಾ ಚರ್ಮ ಕರಿಯಾ ಸವಿಭೂತಿಯ ಸುಧರಿಸಿ ತಪವೇಷದಿ ಮೆರೆ ವಾ ಭವ ಭಯ ನಿವಾರಿಸಿ ಹೊರೆವಾ 4 ಭುವನತೃಯದಾ ಸುರನರೋರಗ ಪೂಜಿಸುತಿಹಾ ಪಾದ ದ್ವಿತೀಯಾ ಅವಿನಾವಾ ದೇವರ ಜನಗಿರಿ ವಾಸವಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 5 ತ್ರಿವಿಧ ತಾಪವಾಹರಿಸುವದು ಹರಯಂದ ಭರವಿದೀ ಭವಯನ್ನ ಲಾಗಾ ಸುಖಗರೆವ ಸಾನಂದ ವರದೀ ಭವ ಭಯ ನಿವಾರಿಸಿ ಹೊರೆ ವಾ 6 ಸವಾರೀಧರನಾವರಣದಿರುವಾ ಕಪ್ಪುಗೋರಳಾ ತ್ರಿವಿಷ್ಟಾಪರಿಯಾ ಪದವ ಮುನಿವಾ ತ್ರಿಶೂಲ ಸರಳಾ ಕವಿಬೋಧಿಸುವಾ ಡುವರ ಸೂತ್ರದ ಕೈಯ್ಯಾ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 7 ಶಿವಷ್ಟಕವನು ಹೃದಯ ಪತ್ರ ಮ್ಯಾಲ ಬರವಾ ಅವನಿಷ್ಟಾರ್ಥವಾ ಕುಡುತ ದುಷ್ಕøತ ಮೂಲಹರಿವಾ ಅವಿದ್ಯೋಡಿ ಸುವಾ ಗುರು ಮಹಿಪತಿಯಾಗಿ ಮೆರೆ ವಾ ಭವ ಭಯ ನಿವಾರಿಸಿ ಹೊರೆ ವಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುಮ್ಮನಿರಬೇಕು ಸುಜ್ಞಾನಿ ಜಗದೊಳಗೆ ಹಂಸೋಹಂ ಭಾವದ ಉಸಿರೊಡಿಯದ್ಹಾಂಗೆ ಧ್ರುವ ಎಲ್ಲದೋರ್ವದು ಮರೆದು ಎಲ್ಲರೊಳಗೆಹದರಿದು ಎಲ್ಲರೊಳಗೆಲ್ಲ ತಾನಾಗಬೇಕು ಎಲ್ಲರೊಳು ತಾನಾಗಿ ಎಲ್ಲ ತನ್ನೊಳಗಾಗಿ ಬೆಲ್ಲ ಸವಿದ ಮೂಕನಂತಾಗಬೇಕು 1 ಬಲ್ಲವತವನು ನೀಡಿ ಬಲ್ಲನೆತಾನಾಗಿ ಬಲ್ಲರಿಯೆನೆಂಬುದನು ಈಡ್ಯಾಡಬೇಕು ಬಲ್ಲರಿಯದೊಳಗಿದ್ದನೆಲ್ಲ ತಿಳಿಕೊಳ್ಳಬೇಕು ಸೊಲ್ಲಿಲ್ಹೇಳುವ ಸೊಬಗ ಬೀರದಿರಬೇಕು 2 ಸೋಹ್ಯ ಸೂತ್ರವ ತಿಳಿದು ಬಾಹ್ಯ ರಂಜನಿ ಮರೆದು ದೇಹ ವಿದೇಹದಲ್ಲಿ ಬಾಳಬೇಕು ಮಹಿಗೆ ಮಹಿಪತಿಯಾಗಿ ಸ್ವಹಿತ ಸದ್ಗುರುನಾದಶ್ರೀಹರಿ ಗುರುತನುಂಡು ಸುಖದಲಿ ಸುಖಿಸಬೇಕು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು