ಒಟ್ಟು 13 ಕಡೆಗಳಲ್ಲಿ , 2 ದಾಸರು , 12 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಚನ ಮನವು ಬಿಲ್ಲನೆ ಮಾಡಿ ತನುವು ಹೆದಿಯನೆ ಕಟ್ಟಿ ಅನುಭವದ ಅಂಬಿನಲಿ ಜನನ ಮರಣದ ಗುರಿಯ ಕೆಡಹಿದಾ ಜ್ಞಾನಸಾಗರ ಗುರುನಾಥನೆಂದು ಸ್ತುತಿಸಿದಾ ಮಹಿಪತಿಯು |
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆ ಹರಿ ಇದ್ದಾನೆ | ಸಿಕ್ಕುವಾ ಸದ್ಗುರು ಕರುಣದಲಿ ಧ್ರುವ ಆದಿ ಅನಾದಿಯ ಹಾದಿ ವಿಡಿದು | ಸಾಧಿಸಿ ನೋಡಿರಯ್ಯ ಸಜ್ಜನರು | ವೇದಾಂತದ ಸುಸಾರವಿದು | ಭೇದಿಸಿದವರಿಗೆ ಭಿನ್ನವಿಲ್ಲ 1 ತನ್ನೊಳಗಾಗಿರಲಿಕ್ಕೆ ಭಿನ್ನವ್ಯಾಕೆ | ಚೆನ್ನಾಗಿ ನೋಡುವದು ಉನ್ಮನದಲಿ | ಇನ್ನೊಬ್ಬರಿಗೆ ತಾ ತಿಳಿಯದು | ಧನ್ಯವಾದರು ಅನುಭವಿಗಳು2 ಸೆರಗು ಸಿಲ್ಕಲಿಲ್ಲ ನಾಲ್ಕರಲಿ | ಅರಹು ಆಗಲಿಲ್ಲ ಆರರಲಿ | ಪೂರಿಸಲಿಲ್ಲ ಭಾವ ಮೂರಾಗಲಿ | ತೋರಿದ ಸದ್ಗುರು ಎನ್ನೊಳಗೆ 3 ಮೋಸಹೋಯಿತು ಜಗ ವೇಷದಲಿ | ವಾಸತಿಳಿಯದೆ ವಾಸುದೇವನ | ಕಾಸಿನ ಆಶೆಗೆ ದಾಸರಾಗಿ | ಘಾಸಿ ಆಯಿತು ಭವಪಾಶದಲಿ 4 ಸಣ್ಣದೊಡ್ಡದರೊಳು ಸಾಕ್ಷವಾಗಿ | ಬಣ್ಣ ಬಣ್ಣದಲಿ ತಾ ಭಾಸುತಿಹ್ಯ | ಕಣ್ಣಾರೆ ಕಂಡು ಗುರು ಕೃಪೆಯಿಂದ | ಧನ್ಯವಾದ ಮೂಢ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಧರಿಯೊಳು ಬ್ರಹ್ಮಾನಂದವನು ತುಂಬಿ ತುಳುಕತಿಹ್ಯಾನಂದಮಯ ಕಾಯದೊಳು ಕೌತುಕವು ನಾದಬಿಂದು ಕಳಿಯಲಿ ಸ್ತುತಿಸಲೆನ್ನಳವಲ್ಲ ಕ್ಷಿತಿಯೊಳು ಘನಮಹಿಮೆ ಅತಿಹರುಷವನು ದೋರುತಿಹ್ಯ ಸದ್ಗತಿ ಸುಖವು ಗುರುದಾಸರು 1 ಓಂಕಾರ ಮೊದಲಾದ ಶ್ರುತಿವೇದ ಘೋಷಗಳು ಧಿಮಿಧಿಮಿಸುವ ಮಹಾಶಬ್ದಗಳು ವಾದ್ಯಗಳು ಕೇಳುವದು ನೀದೃಶ್ಯೆಲಿ ಗರ್ಜಿಸುವ ಭೃಂಗಿಶಂಖನಾದ ಧ್ವನಿಯಗಳು ಭೋರಿಡುವ ಭೇರಿ ಮೃದಂಗ ವೇಣಿಯಗಳು ಚಿಣಿ ಚಿಣಿ ತಂತ್ರ ಮೊದಲಾದ ಸಂಕಾರಗಳು ಕೇಳಿ ಪಾವನವಾದೆನು 2 ಬೆರೆದು ನೋಡಲು ಅಂತರಾತ್ಮದೊಳು ಪ್ರಭೆಯಗಳು ಥಳಥಳಿಸುವಾ ಮಹಾತೇಜಗಳು ಪುಂಜಗಳು ಹೇಳಲಿನ್ನೇನದ ಹೊಳವಗಳು ಸುಳವಗಳು ನೋಡುವದು ಅನಿಮಿಷದಲಿ ರವಿ ಶಶಿ ತಾರೆಗಳು ಸೂಸುತಿಹ್ಯ ಕಿರಣಗಳು ಭಾಸಿಸುವ ನಾನಾವರ್ಣಗಳು ಛಾಯಗಳು ಬೆರಗಾದೆÀನಿಂದ 3 ವರ್ತಿಸುತ್ತಲಿಹ ಪ್ರವೃತ್ತಿ ನಿವೃತ್ತಿಗಳು ಅಂತರಾತ್ಮದ ವಾಯುಸ್ತುತಿಯಗಳು ಗತಿಯಗಳು ತಿಳಿವದೀ ಪ್ರಣಮ್ಯಲಿ ಸೂಸುತಿಹ ಶ್ವಾಸವುಚ್ಛ್ವಾಸನಿಯ ಭಾಸಿಗಳು ಶೋಭಿಸುವ ಜೀವನದ ಮಂತ್ರ ಸರ ಮಾಲೆಗಳು ಪಾವನವಾದೆನು 4 ಕರದ್ವಯಂ ಮುಗಿದು ವರಗುರುಚರಣಕಮಲಕಿ ನ್ನೆರಗಿ ಪರಮಾನಂದ ಹರುಷದಿ ಶಿರಸದಿ ಶ್ರೀಗುರುಮೂರ್ತಿಯ ನೆನೆವೆನು ಸದ್ಭಾವದಿಂದ ಸದ್ಗುರು ಪಾದಮಂಪಿಡಿದು ಸದ್ಬ್ರಹ್ಮರಸದೊಳು ಮುಳುಗಿ ಸದ್ಭಕ್ತಿಯಲಿ ಸದ್ಗತಿ ಸಾಧನವು ಸಾಧಿಸಿಹ್ಯ ಮಹಿಪತಿಯು ] ಶ್ರೀ ಗುರುಕೃಪೆಯಲಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆವಯ್ಯ ನಿಮ್ಮ ಗುರುಪುಣ್ಯ ಚರಣಮಹಿಮೆ ಮಂಡಲದೊಳು ಗುರುಕೃಪೆಯಿಂದ ದ್ರುವ ಕಣ್ಣಮುಚ್ಚಿದರೆ ತಾ ಕಣ್ಣನೊಳಗದೆ ಕಣ್ದೆರದರೆ ಕಾಣಿಸುತದೆ ಸಣ್ಣ ದೊಡ್ಡದರೊಳು ತುಂಬಿತುಳುಕುತದೆ ಬಣ್ಣ ಬಣ್ಣದಲೆ ಭಾಸುತಲ್ಯದೆ 1 ಆಲಿಸಿಕೇಳಲು ಹೇಳಗುಡುತಲ್ಯದೆ ತಾಳಮೃದಂಗ ಭೇರಿ ಭೋರಿಡುತ ಒಳಹೊರಗೆ ಧಿಮಿಧಿಮಿಗೊಡುತಲ್ಯದೆ ಹೇಳಲಿನ್ನೇನು ಕೌತುಕವ 2 ಸುಳಿ ಸುಳಿದಾಡುತಹೊಳೆಯುತ ಎನ್ನೊಳಗೆ ಥಳಥಳಿಸುವ ತೇಜ:ಪುಂಜವಿದು ಪರಿ ಕಳೆದೋರುತಲ್ಯದೆ ಝಳಝಳಿಸುತ ಎನ್ನ ಮನದೊಳಗೆ 3 ತುತ್ತಾಯಿತಾ ಮಾಡಿನಿತ್ಯ ಸಲುಹುತದೆ ಎತ್ತಹೋದರೆ ತನ್ನಹತ್ತಿಲ್ಯದೆ ದತ್ತವುಳ್ಳವಗೆ ತಾ ಪ್ರತ್ಯಕ್ಷವಾಗ್ಯದೆ ಮೊತ್ತವಾಗ್ಯದೆ ತನ್ನ ನೆತ್ತಿಯೊಳಗೆ 4 ಧನ್ಯಗೈಸಿತು ಎನ್ನ ಪ್ರಾಣ ಜೀವನವಿದು ಚೆನ್ನಾಗಿ ಪೂರ್ಣ ಗುರುಕೃಪೆಯಿಂದ ಕಣ್ಣಾರೆ ಕಂಡೆ ಭಾನು ಕೋಟಿಪ್ರಕಾಶ ನಿಮ್ಮ ಧನ್ಯಧನ್ಯವಾದ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೌತುಕವು ನೋಡಿ ಮಹಾ ಗುರುನಾಮಮಹಿಮೆಯು ಬಯಲು ವಿದ್ಯವು ಕೇಳಿ ಭಾವಿಕರೆಲ್ಲ ಧ್ರುವ ಶೂನ್ಯ ಮಂಡಲದಿ ನಿಶ್ಯೂನ್ಯ ಬೀಜದ ವೃಕ್ಷ ಮಾನ್ಯಮೋನದಲಿ ಬೆಳೆಯುತಿಹ ವೃಕ್ಷ ನೋಡಿ 1 ಬಯಲು ಭಾವದ ಪುಷ್ಪ ನಿರ್ಬೈಲ ಸಾಫಲವು ಸುವಾಸನೆಯ ಗೊಂಚಲವು ಜಡಿವೃತ ದಿವ್ಯಾಮೃತ ಫಲವು ಸವಿಯು ಸೇವಿಸುವದಕೆ ಹೊಯಲುವಾದರು ಮಹಾಮಹಿಮರಿದು ನೋಡಿ2 ತಾಯಿ ಇಲ್ಲದ ಶಿಶುವು ಕಾಯವಿಲ್ಲದೆ ಬಂದು ಕೈಯವಿಲ್ಲದೆ ಕೊಂಡು ಸೇವಿಸುವದು ಬಾಯಿ ಇಲ್ಲದ ನುಂಗವದು ಕಂಡು ಮಹಿಪತಿಯು ಕೈಯ ಮುಗಿದನು ಗುರುವಿಗೆ ತ್ರಾಹಿಯೆಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತ್ರಾಹಿ ತ್ರಾಹಿ ಎನ್ನಿರೊ ತ್ರೈಲೋಕ್ಯದೊಡಿಯಗೆ ತ್ರಾಹಿ ತ್ರಾಹಿ ಎನ್ನಿರೊ ತಾರಕ ಬ್ರಹ್ಮಗೆ ಧ್ರುವ ಕಾಮ ಕ್ರೋಧ ಸುಟ್ಟು ಹೋಳಿಯಾಡುವ ಬನ್ನಿರೊ ಪ್ರೇಮ ಪ್ರೀತಿಯಿಂದ ಕುಣಿದಾಡುವ ಬನ್ನಿರೊ 1 ಭೇದವಳಿದು ಸಾಧು ಜನರ ಕೂಡಿಕೊಂಬ ಬನ್ನಿರೊ ಮದ ಮತ್ಸರವ ಬೂದಿ ಮಾಡಿಚೆಲ್ಲುವ ಬನ್ನಿರೊ 2 ಏಕರಂಗವಾಗಿ ಓಕುಳ್ಯಾಡವ ಬನ್ನಿರೊ ಜೀಕಳಿಯ ಮಾಡಿ ಮಾಯ ಮೋಹ ಎಸುವ ಬನ್ನಿರೊ 3 ಎಲ್ಲರೊಳಗಿಹ ನಮ್ಮ ಪುಲ್ಲನಾಭ ಚಲುವನೊ ಬಲ್ಲ ಮಹಿಮನಿಗೆ ನೆಲೆಯ ನೋಡಿ ಒಲಿವನೊ 4 ಹೋಳಿಯಾಡಿದನು ನೋಡಿ ಇಳಿಯೊಳಗ ಮಹಿಪತಿಯು ಕಳೆದು ಕಲ್ಪನೆ ಕೋಟಿಲಿಂದ ಗೆದ್ದ ನೋಡಿರೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದತ್ತವಧೂತ ಶ್ರೀ ಗುರು ಸಾಕ್ಷಾತ ನಿತ್ಯವಾಗಿಹ್ಯ ನಿಜ ನಿರ್ಗುಣನೀತ ಪ ನಿರ್ಗುಣ ನಿಶ್ಚಲ ಗಗನಾಕಾರ ಸುಗುಣದಲಿ ತಾನೆ ಸಹಕಾರ 1 ಸಹಕಾರನಹುದು ಸದ್ಗುರುನಾಥ ಬಾಹ್ಯಾಂತ್ರದಲಿ ತಾನೆ ಪ್ರಖ್ಯಾತ 2 ಪ್ರಖ್ಯಾತನಹುದು ತ್ರಿಗುಣರಹಿತ ಮುಖ್ಯಮುನಿಗಳಿಗೆ ಮೋಕ್ಷ ಸುದಾತ 3 ದಾತನಹುದು ತ್ರೈಲೋಕ್ಯದೊಳೀತ ಈತನೆ ವಿಶ್ವದೊಳಗೆ ದೈವತ 4 ದೈವತನಹುದು ದೇವಾದಿಗಳಾತ್ಮ ಮೂರ್ತಿ ಶ್ರೀಹರಿ ಸರ್ವಾತ್ಮ 5 ಹರಿ ಸರ್ವಾತ್ಮನಾಗಿಹ ನಿಜಪೂರ್ಣ ಪರಿಪರಿ ಆಗುವ ಅಗಣಿತಗುಣ 6 ಅಗಣಿತಗುಣ ಅಗಾಧ ಅಪಾರ ನಿಗಮಗೋಚರ ನಿರುಮಪ ನಿರ್ಧಾರ 7 ನಿರ್ಧಾರನು ನಿಜನಿಷ್ಟರಪ್ರಾಣ ಸಾಧಕರಿಗೆ ಸದ್ಗತಿ ಸಾಧನ 8 ಸಾಧನದೊಡೆಯನಹುದು ಶಾಶ್ವತ ಆದಿದೇವ ಸಕಲಾಗಮ ಪೂಜಿತ 9 ಪೂಜಿತ ಬ್ರಹ್ಮಾದಿಗಳ ಕೈಯ ಮೂಜಗದೊಳು ರಾಜಿಸುತಿಹ 10 ರಾಜಿಸುತಿಹ ತಾ ರಾಜರಾಜೇಂದ್ರ ಸುಜನರ ದೃಷ್ಟಿಯೊಳಿಡದಿಹ ಸಾಂದ್ರ 11 ಸಾಂದ್ರವಾಗಿಹನು ಸಾರ್ವಭೌಮ ಇಂದ್ರಾಧಿಕÀರೊಂದಿತ ಮಹಿಮ 12 ಮಹಿಮನಹುದು ಮುನಿಜನ ಮಂದಾರ ಧ್ಯಾಯಿಸುವರ ನಿಜ ಸಾಕ್ಷಾತಾರ 13 ಸಾಕ್ಷಾತಾರ ಶ್ರೀಗುರು ಜಗದೀಶ ಮೋಕ್ಷಾಧಿಕರಿಗಳಾತ್ಮ ಉಲ್ಹಾಸ 14 ಉಲ್ಹಾಸವೆ ನಿಜ ವಸ್ತುವೆ ತಾನು ಕಲ್ಪದ್ರುಮ ನಿಜ ಕಾಮಧೇನು 15 ಕಾಮಧೇನುವಾಗಿ ರಕ್ಷಿಸುವ ಬ್ರಹ್ಮನಿಷ್ಠರ ಹೃದಯದಲಿ ಭಾಸಿಸುವ 16 ಭಾಸುವ ಭಾಸ್ಕರಕೋಟಿ ಪ್ರಕಾಶ ಋಷಿ ಮುನಿಗಳ ನಿಜಮಾನಸ ಹಂಸ 17 ಹಂಸನಾಗಿ ವಿಶ್ವಂಭರಿತ ಸೂಸುವ ಸರ್ವಾಂತ್ರಲಿ ಅನಂತ 18 ಅನಂತ ಕೋಟಿ ಬ್ರಹ್ಮಾಂಡನಾಯಕ ಅನುಭವಿಗಳಿಗೆ ದೋರುವ ಕೌತುಕ 19 ಕೌತುಕದೋರಿದ ಕರುಣದಲ್ಯನಗೆ ಜೀವಪಾವನಗೈಸಿದ ಜಗದೊಳಗೆ 20 ಜಗದೊಳು ಸ್ತುತಿಸುವೆನು ಅನುದಿನ ಶ್ರೀಗುರು ದತ್ತವಧೂತ ಪೂರ್ಣ 21 ಪೂರ್ಣ ಸ್ಮರಿಸುವೆನು ಮನದೊಳು ನೋಡಿ ಪುಣ್ಯ ಪ್ರಭೆಯ ನಿಜ‌ಘನ ಒಡಗೂಡಿ22 ಒಡಗೂಡಿದ ನಿಜಾನಂದದ ಗತಿಯು ಕ್ಷಿತಿಯೊಳು ಕೊಂಡಾಡಿದ ಮಹಿಪತಿಯು 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆಲೆಯಗೊಳ್ಳಿರೊ ಮನವ ಬಲಿದು ನೆಲೆಯಗೊಳ್ಳಿರೊ ನೆಲೆಯಗೊಳ್ಳಿರಯ್ಯ ನೀವು ಬಲಿದು ಭಾವಭಕ್ತಿಯಿಂದ ಧ್ರುವ ಹಲವು ಮಾತಾಡಿ ನಿಮ್ಮ ಕುಲವ ಚಲವವೆಂದು ಎನಿಸಬ್ಯಾಡಿ ಹೊಲಬು ತಿಳಿದು ನಿಮ್ಮ ನೆಲೆಯನಿಭವನರಿತು ನೋಡಿರೊ 1 ಗುಟ್ಟು ತಿಳಿಯಲರಿಯದೆ ಬೊಟ್ಟೆಣಿಸಿ ದಣಿಯಬ್ಯಾಡಿ ಮಟ್ಟಮಾಡಿ ಮನವ ನಿಜಗಟ್ಟಿಗೊಳ್ಳಿರೊ 2 ನಿಲವು ತಿಳಿದು ನೆಲಯಗೊಂಡು ಇಳಿಯೊಳಗೆ ಮಹಿಪತಿಯು ಒಲಿದು ದಯಮಾಡಿ ಸಲಹುತಿಹ ಗುರು ಕಾಣಿರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಾಸುದೇವನ್ನಾ ಪಾದವ ನಂಬಬಾರದೇ | ಈಶನೊಲಮಿಂದಾ ಸದ್ಗತಿ ಸುಖವು ದೊರದೇ ಪ ವನಜಭವಾದಿಗಳು ದೋರುವೆನಾ ಮುಕುತಿಯು ಪಾಯಾ | ಯನುತ ಬಂದರೆಯುನೊಡದಿರು ಅವರ ಕಡೆಯಾ 1 ಜಠರ ಬಾಗಿಲವಾ ಕಾವಾಶ್ವಾನನ ಪರಿಯಂತೆ | ನಿಷ್ಠೆಯೊಂದನೆ ಬಿಟ್ಟು ತಿರುಗಬ್ಯಾಡ ಕಂಡಂತೆ2 ಇಂದಿಗೆ ನಾಳಿಗೇ ಹ್ಯಾಂಗೆಂದು ಚಿಂತಿಸದಿರು | ಛಂದದಿ ಗೀತೆಯಲಿ ಸಾರಿದ ವಾಕ್ಯಾ ಮರೆಯದಿರು 3 ಶಿಲೆಯೊಳಗಿರುತಿಹಾ ಕಪ್ಪಿಗಾಹಾರ ನೀಡುವರಾರೋ | ತಿಳಿದು ನೀನೀಗ ಹಲವ ಹಂಬಲವ ಹಿಡಿಯದಿರು 4 ಎರಡು ದಿನದಿದು ಸಂಸಾರವೆಂಬುದು ನೋಡಿ | ಅರಿತು ಇದರೋಳಗ ಸಾರ್ಥಕ ಸಾಧನವ ಮಾಡಿ 5 ಒಂದು ಭಾವದಲಿ ತ್ವರಿತದಿ ಹೊಕ್ಕರ ಶರಣವನು | ತಂದೆ ಮಹಿಪತಿ ಸುತ ಸನ್ಮಾರ್ಗ ಕೂಡಿಸುತಿಹನು 6 ಏನೆಂದರಿಯದಾ ಕಂದಗೆ ಉದ್ದರಿಸಿದ ನೋಡೀ | ತಂದೆ ಮಹಿಪತಿಯು ದಾರಿಯ ದೋರಿದ ದಯಮಾಡಿ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶುದ್ಧ ಸನ್ಮಾರ್ಗ ಸರ್ವರಿಗಿದು ಒಂದೆ ಬುದ್ಧಿವಂತರು ತಿಳಿದರು ಇದರಿಂದೆ 1 ಇದರಿಂದೇವೆಂಬುದು ನಿರ್ವಾಣ ಒದರುತಲಿಹುದು ವೇದಪುರಾಣ 2 ಪುರಾಣ ಪುಣ್ಯದ ಹಾದಿಯು ನಿಜ ಸುರಮುನಿಗಳಿಗಿದು ಹೊಳೆವದು ಸಹಜ 3 ಸಹಜಾನಂದದ ಸುಖಸಾಗರ ಬಾಹ್ಯಾಂತ್ರ ಸದೋತಿತ ಸಹಕಾರ 4 ಸಹಕಾರವು ಚಿನ್ಮಯ ಚಿದ್ರೂಪ ಸೋಹ್ಯದೋರುವ ಶ್ರೀ ಗುರುಸ್ವರೂಪ 5 ಸ್ವರೂಪವೆ ಸದ್ಗೈಸುವ ಹಾದಿ ಪರಮ ವೈಷ್ಣವರ ಮೂಲಾಗ್ರದ ಆದಿ 6 ಅಧಿವೆಂಬುದು ನಿಜನಿರ್ಧಾರ ಸಾಧಿಸುದವರಿಗೆ ಸಾಕ್ಷಾತಾರ 7 ಸಾಕ್ಷಾತ್ಕಾರವೆ ಮೋಕ್ಷದಮನೆಯು ಅಕ್ಷಯ ಪದ ಅದ್ವೈತದ ಖಣಿಯ 8 ಅದ್ವೈತವೆ ಆಧ್ಮಾತ್ಮ ಸುವಿದ್ಯ ಸಿದ್ದಸಾಧಕರಿಗೆ ಆಗುವ ಸಾಧ್ಯ 9 ಸಾಧ್ಯವೆಂಬುದು ನಿಜಸಿದ್ಧಾಂತ ಭೇದಿಸಿದವರಿಗೆ ಇದು ಸನ್ಮತ 10 ಸನ್ಮತವೆ ಮತ ಸರ್ವರಿಗೆಲ್ಲ ಉನ್ಮನಲೀಹ ಮಹಾಯೋಗಿಯು ಬಲ್ಲ 11 ಬಲ್ಲೆವೆಂಬುದು ಬಲು ಅಗಾಧ ಸೊಲ್ಲಿಗೆ ಸಿಲುಕದು ಗುರುನಿಜಭೋದ 12 ಬೋಧವೆ ಸದ್ಗುರುವಿನ ದಯಕರುಣ ಸದ್ಗತಿಸುಖ ಸಾಧನದ ಸ್ಫುರಣ 13 ಸ್ಫುರಣವೆ ಬ್ರಹ್ಮಾನಂದದ ಹರುಷ ತರಣೋಪಾಯದ ಮಹಾ ಉಪದೇಶ 14 ಉಪದೇಶವೆ ನಿಜ ಉಪನಿಷದ್ವಾಕ್ಯ ಒಪ್ಪಿಡುವದು ಭೂಸ್ವರ್ಗತ್ರೈಲೋಕ್ಯ 15 ತ್ರೈಲೋಕ್ಯಕೆ ಇದು ನಿಜನಿಧಾನ ಭಯವಿಲ್ಲದ ಮಹಾಸುಖಸಾಧನ 16 ಸಾಧನದಿಂದ ಸದ್ಗತಿ ಸಂಪೂರ್ಣ ಸಾಧು ಸಜ್ಜನರಿಗೆ ಸಕಲಾಭರಣ 17 ಸಕಲಾಭರಣ ಸದ್ಗುರು ನಿಜ ಅಭಯವು ಶುಕಾದಿ ಮುನಿಗು ಕೂಡಿದ ಪ್ರಭೆಯು 18 ಪ್ರಭೆಗಾಣಲು ತೋರದು ನೆಲೆನಿಭವು ನಿಭವೆ ಮಹಾಮಂಗಳಕರ ಶುಭವು 19 ಶುಭದೋರುದು ಸದ್ಗುರು ಕೃಪೆಯಿಂದ ಭ್ರಮೆಹಾರಿತು ಮಾಯೆ ಇದರಿಂದ 20 ಇದರಿಂದೆ ಇದರಿಟ್ಟಿತು ಪುಣ್ಯ ಒದಗಿ ಕೈಗೂಡಿತು ಬಂತು ತಾರ್ಕಣ್ಯ 21 ತಾರ್ಕಣ್ಯವು ಬಂತೆನ್ನೊಳು ಪೂರ್ಣ ಸರ್ಕನೆ ದೊರೆಯಿತು ಸದ್ಗುರುಖೂನ 22 ಖೂನವೆ ಎನ್ನೊಳಗಾಯಿತು ಧ್ಯಾನ ಘನಸುಖದೋರುವ ಅನುಸಂಧಾನ 23 ಅನುಕೂಲಾದ ನಮ್ಮಯ್ಯ ಪ್ರಸಿದ್ಧ 24 ಪ್ರಸಿದ್ಧವೆ ಪ್ರತ್ಯಕ್ಷ ಪ್ರಮಾಣ ಭಾಸುತಿಹುದು ಶ್ರೀಗುರು ಶ್ರೀಚರಣ 25 ಶ್ರೀಚರಣಕೆ ಎರಗಿಹ ಮಹಿಪತಿಯು ಸೂಚನೆ ಮಾತ್ರ ಕೊಂಡಾಡಿದ ಸ್ತುತಿಯು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಿದ್ಧಾಂತವಿದು ನೋಡಿ ಸದ್ಗುರುವಿನ ಕೃಪೆಯು ಬುದ್ಧಿವಂತರು ಬಲ್ಲರಾಧ್ಯಾತ್ಮ ಸುಖವು ಧ್ರುವ ಕಾಲಿಲ್ಲದಾಕಳವು ಬಾಲಮುಖದಲಿ ಬಂದು ಕಾಳರೂಪದ ಹುಲಿಯನೆ ನುಂಗಿತು ಮೇಲವರಿಯಲಿ ಬಂದು ಜಲದೊಳಗಿನ ಕಪ್ಪೆ ಮೂಲ ಸರ್ಪದ ಹೆಡೆಯ ನುಂಗಿದದು ನೋಡಿ 1 ಬಾಲ ಇಲ್ಲದ ಇಲಿಯು ಜಾಲಹಾಕುತ ಬಂದು ಸ್ಥೂಲ ಬೆಕ್ಕಿನ ತಲೆಯನೆ ಮುರಿಯಿತು ನಾಲಿಗಿಲ್ಲದ ಮೊಲವು ನಿಲುಕಿ ಜಪವ ಹಾಕಿ ಭಲೆ ಶ್ವಾನನ ಗಂಟಲ್ಹಿಡದಿಹುದು ನೋಡಿ2 ದಿವ್ಯ ಯೋಗದ ಮಾತು ಕಿವಿ ಇಲ್ಲದವಕೇಳಿ ಕಣ್ಣಿಲ್ಲದವ ಕಂಡು ಬೆರಗಾದನು ಕೌತುಕವು ಕಂಡು ಮಹಿಪತಿಯು ತನ್ನೊಳು ತಾನು ತ್ರಾಹಿ ತ್ರಾಹಿಯಿಂದ ಮನದೊಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಸನಗೊಂಡವ ಹರಿದಾಸ ನೆಂದ ಮಹಿಪತಿಯು 1 ನಿತ್ಯ ನಿಜಪಥಗೂಡಿದವರ ಭೃತ್ಯನೆಂದ ಮಹಿಪತಿಯ 2 ಚಿಣ್ಣ ಕಿಂಕರನೆಂದ ಮಹಿಪತಿಯು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು