ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಕಜಾಸನ ವಂದ್ಯ | ವೆಂಕಟಾದ್ರಿ ವಿಠಲ ತವಕಿಂಕತನ ವಿತ್ತವಗೆ | ಸಂಕಟವ ಕಳೆಯೊ ಪ ಮಂಕುಹರಿಸುಜ್ಞಾನ | ದಂಕುರಕೆ ಮನಮಾಡಿಬಿಂಕದಿಂ ಪೊರೆಇವನ | ಅಕಳಂಕ ಮಹಿಮಾ ಅ.ಪ. ಸತ್ಯಶೌಚಾಚಾರ | ಕೃತ್ಯದಲಿ ಮನವಿರಿಸುನಿತ್ಯತವ ಮಹಿಮಗಳ | ಸುತ್ತಿಇರಲಿ ಇವಗೇನಿತ್ಯನೂತನ ಮಹಿಮ | ತತ್ವಗಳ ತಿಳಿಸುತ್ತಭೃತ್ಯವತ್ಸಲ ಕಾಯೋ | ಮೃತ್ಯುಹರದೇವಾ 1 ತತ್ವಾರ್ಥ ತಿರುಳುಗಳೆ | ಚಿತ್ರಿಸುವ ಕಲೆವೃದ್ಧಿವಿಸ್ತರೀಸಿವನಲ್ಲಿ | ನಿಸ್ತುಲಾತ್ಮಕನೇ |ಅರ್ಥಕಾಮಸುರೂಪ | ಪೊತ್ತುಪೊರೆಯುವ ದೇವಾಪ್ರತ್ಯೇಕ ಪ್ರಾರ್ಥನೆಯ | ಕೃತ್ಯವೇಕಿನ್ನು 2 ನಾನು ನನ್ನದು ಎಂಬ | ಹೀನಮತಿಕಳೆದಿನ್ನುನೀನು ನೀನೇ ಎಂಬ | ಜ್ಞಾನಮಹಬರಲೀ |ಪ್ರಾಣ ಪ್ರಾಣನೆ ಜಗ | ತ್ರಾಣನಹುದೆಂಬ ಸುಜ್ಞಾನ ಪಾಲಿಸಿ ಪೊರೆಯೋ | ಮನಿಮಧ್ವ ವರದಾ 3 ಮೀನಾಂಕ ಜನಕಾಮಾನಮೇಯಾನುಭವ | ಸಾನು ಕೂಲಿಸುವಕೋನೇರಿವಾಸ ಕಾರುಣ್ಯ | ತೋರಿವಗೇ4 ಗೋವತ್ಸದನಿ ಕೇಳಿ | ಆವುಧಾನಿಸುವಂತೆನೀವೊಲಿದು ಕಾಪಾಡು | ಬಾವುಕರ ಪಾಲಾ |ಪೂವಿಲ್ಲನಯ್ಯಗುರು | ಗೋವಿಂದ ವಿಠಲತವಪಾವನವ ಪದ ತೋರೆ | ಓವಿ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ಪಾರು ಮಾಡೋ ಕೃಷ್ಣಾ | ಪಾರು ಮಾಡೋ ಪ ಭವ ಅ.ಪ. ನಿಗಮ ಗೋಚರ ತವಬಗೆ ಬಗೆ ಮಹಿಮಗಳವಗತ ಮಾಡುತ 1 ರಸವೆನಿಪುದು ಭೂ | ವಸುಮತಿ ಪಂಚಕೆರಸವಹುದದರಿಂದ | ರಸವೆನಿಪಾಪಾ |ರಸವಾಚ್ಯ ವರುಣ ನಾ | ರಸವೆನಿಸುವ ಸೋಮಔಷಧಿ ದೇವನಿಂದ | ರಸವೆನಿಸುವ ರುದ್ರ 2 ಈಶಗಿಂದಧಿಕ ವಾ | ಗೀಶನ ಭಾರ್ಯೆಯುಈ ಸರಸ್ವತಿಯಿಂದ | ಆಸಾಮನಾಮಾ |ಆ ಸಾಮುಖ್ಯನಿಲಗು | ಈಶ ಉದ್ಗೀಥನೆಹೇ ಸರ್ವೋತ್ತಮೋತ್ತಮ | ಭಾವಿಸಿ ಮನದಲಿ 3 ಪರ | ರಸತಮ ವೆನಿಪಳುಸುಸಮ ಪರಮ ಪರರ್ಥ | ರಸತಮ ಪದ ಪಡೆದ 4 ಭವ 5
--------------
ಗುರುಗೋವಿಂದವಿಠಲರು
ವರಗುರು ತಂದೆ ಮುದ್ದು ಮೋಹನದಾಸರೆಗಿತ್ತರು ಲೇಸ ಪರಮ ಸಂಭ್ರಮದೊಳಿವರ ಸಹವಾಸ ಕರುಣಿಸಿದನು ಶ್ರೀಶ ಪ ರಾಗ ದ್ವೇಷಾದಿಗಳಿವರೊಳಗಿಲ್ಲ ಪಾಮರರಿವರಲ್ಲ ಶ್ರೀ ಗುರುಗಳೆನಗಿವರೆಂದು ಸ್ತುತಿಪನಲ್ಲ ಲಾಲಿಪುದೆನಸೊಲ್ಲ 1 ಶುಭ ಚರಿತೆಯನು ಜ್ಞಾನಿಗಳೆಂಬುದನು ಖುಲ್ಲ ಜನ ನಿಂದಿಸಿದರಾಗುವದೇನೊ ಅರಿಯೆನಯ್ಯ ನಾನು 2 ಪಾದ ಸರಸಿರುಹಕೆ ಭ್ರಮರರೆನಿಸುವ ಗುಣಯುತರ ಕುಜನಗಳೇನು ಬಲ್ಲರಯ್ಯ ಇವರ ಮಹಿಮಂಗಳ ವಿವರ 3 ಕರಿಗಿರಿಯೆಂಬ ವರಕ್ಷೇತ್ರದಲ್ಲಿ ವರುಷಂಪ್ರತಿಯಲ್ಲಿ ಹರಿದಾಸೋತ್ತಮ ಧರಣಿಸುರರನಲ್ಲಿ ಬಲು ಸೇವಿಪರಲ್ಲಿ 4 ಇಷ್ಟದೈವ ಅಪವರ್ಗಪ್ರದನೆಂಬ ಶ್ರೀ ನರಹರಿಯೆಂಬ ದಿಟ್ಟ ಶ್ರೀ ರಂಗೇಶವಿಠಲನ ಬಿಂಬಾಕೃತಿಯ ಸದಾ ಕಾಂಬ 5
--------------
ರಂಗೇಶವಿಠಲದಾಸರು