ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನ್ನ ಕಷ್ಟದಿ ತನಗೆ ದೊರಕುವುದು ಹಾಗ ಉನ್ನಂತ ಭಾಗ್ಯಗಳು ಹರಿಯ ವಿನಿಯೋಗ ಪ ಕಟ್ಟಿಗೆಯ ಹೊರೆ ತಂದು ಪಟ್ಟಣದೊಳಿಳುಹಿದರು ಉಟ್ಟ ಬಹಿರ್ವಾಸವನು ಬಿಗಿದಿಟ್ಟರು ಮೊಟ್ಟೆಯನು ಕೊಂಡೊಯ್ದು ಇಟ್ಟದನು ಮಾರಿದರು ಹೊಟ್ಟೆ ತುಂಬಿಸಿ ಕಡೆಗೆ ಕಟ್ಟುವನು ಹಾಗ 1 ಪದಪದ್ಯಗಳ ಹೇಳಿ ಕುಣಿದಾಡಲು ಹದಿನಾರನೆಯ ವಿಧಿಯ ಸದನದೊಳು ಸವಿದುಣಲು ಕದನ ಕರ್ಕಶನಾಗಿ ಕಡಿದು ಬರೆ ಹಾಗ 2 ಸೂಜಿ ನೂಲನು ಕೊಂಡು ಬಾಜಾರದೊಳು ಕುಳಿತು ಸೋಜಿಗದ ಹೊಲಿಗೆಯನು ಮಾಡಿಕೊಡಲು ಕಾಜು ಬಳೆಗಳ ಹೊತ್ತು ದಣಿದು ಮಾರಿದರವಗೆ ರೋಜು ಉಳಿವುದು ಅಸ್ತಮಯಕೆ ಒಂದ್ಹಾಗ 3 ಭಾಗ್ಯವುಳ್ಳವನನ್ನು ಬಾಧಿಸಲು ಅವ ತನಗೆ ಕಾಗೆ ಕರಿದೆನಿಸಿ ತಾ ಕಸ್ತೂರಿ ಹೋಲುವುದೆ ಮೊಗೆಮೊಗೆ ಮಲ್ಲಿಗೆಯು ಪರಿಮಳಿಪುದೆ 4 ಹರಿಯ ಸೇವೆ ಮಾಡೆ ಇಹಪರದ ಸೌಖ್ಯಗಳು ಹರನ ಸೇವೆಯ ಮಾಡೆ ಪರಮ ಪದವು ಸಿರಿಯರಸ ವರಾಹತಿಮ್ಮಪ್ಪ ನಿನ್ನಡಿಯ ಕರುಣರಸ ಹೊರತಾಗಿ ಸಿರಿಯು ಸೇರುವಳೆ 5
--------------
ವರಹತಿಮ್ಮಪ್ಪ
ಈ ಪರಿಯ ಅಧಿಕಾರ ಒಲ್ಲೆ ನಾನು |ಶ್ರೀಪತಿಯೆ ನೀನೊಲಿದು ಏನ ಕೊಟ್ಟುದೆ ಸಾಕು ಪಚಿರಕಾಲ ನಿನ್ನ ಕಾಯ್ದು ತಿರುಗಿದುದಕೆ ನಾನು |ಕರುಣದಲಿ ರಚಿಸಿ ನೀ ಈ ದುರ್ಗದಿ ||ಇರ ಹೇಳಿದುದಕೆ ನಾ ಹೊಕ್ಕು ನೋಡಿದೆ ಒಳಗೆ |ಹುರುಳ ಲೇಶವು ಕಾಣೆ ಕರಕರೆಯು ಬಲುನೋಡು 1ದಾರಿಯಲಿ ಹೋಗಿ ಬರುವವರಉಪಟಳಘನ|ಚೋರರಟ್ಟುಳಿಗಂತೂ ನೆಲೆಯೆ ಇಲ್ಲ ||ವೈರಿವರ್ಗದ ಜನರು ಒಳಗೆ ಬಲು ತುಂಬಿಹರು |ಮಿರಿ ನಿನ್ನಲಿ ಮನವನೂರಿ ನಿಲಗೊಡರು 2ಸರಿಬಂದ ವ್ಯಾಪಾರ ಮಾಡಿ ತಾವೆನ್ನನ್ನು |ಬರಿಯ ಲೆಕ್ಕಕೆ ಮಾತ್ರ ಗುರಿಯ ಮಾಡಿ ||ಕರಕರೆಯ ಬಡಿಸಬೇಕೆಂದು ಯೋಚಿಸುತಿಹರು |ಕರೆದು ವಿಚಾರಿಸಿ ನ್ಯಾಯ ಮಾಡಿಸು ದೊರೆಯೇ 3ನಾಮಾಂಕಿತಕೆ ಮಾತ್ರ ಅಧಿಕಾರವೆನಗಿತ್ತೆ |ಸ್ವಾಮಿತ್ವವೋನೋಡುಮನೆಮನೆಯಲಿ ||ಭೀಮ ವಿಕ್ರಮರವರು ದುರ್ಬಲಾಗ್ರಣಿ ನಾನು |ಗ್ರಾಮ ಒಪ್ಪಿಸೆ ನಮಿಪೆ ಸಂಬಂದ ತೆರಮಾಡು 4ಕಾಲಕ್ಕೆ ಕರೆಯ ಬಂದವರಿಗೆ ಒಳಗಾಗಿ |ಪಾಳೆಯವನೊಪ್ಪಿಸಿ ಕೊಡುವೆವೆಂದು ||ಆಲೋಚಿಸಿಹರಯ್ಯ ಈಗಲೆನಗೆ ನಿನ್ನ |ಆಳುಗಳ ಬಲಮಾಡಿ ಎನ್ನ ರಕ್ಷಿಸು ದೊರೆಯೆ 5ಕ್ಷಣಕೆ ನೂರುಪಟಳ ಈ ಕೋಟೆಗೆಲೊ ರಾಯ |ಅನುವಾದ ದಿವಸವೊಂದಾದರಿಲ್ಲ ||ಮೊನೆಗಾರ ಜನವಿಲ್ಲ ಇದ್ದವರು ವಶವಿಲ್ಲ |ಕೊನೆಗೊಂಡು ಗ್ರಾಮ ಕಾಪಾಡುವ ತೆರನೆಂತೊ 6ಎನಗೆ ಈ ಬಹುನಾಯಕರ ಕೊಂಪೆಯೊಳು ವಾಸ-|ವನು ಬಿಡಿಸಿ ನಿನ್ನ ನಿಜ ಪಟ್ಟಣದೊಳು ||ಮನೆ ಮಾಡಿಕೊಡಲು ನಾನಿನ್ನ ನೋಡಿಕೊಳುತ |ಅನುಗಾಲಬದುಕುವೆನೊ ಪುರಂದರವಿಠಲ7
--------------
ಪುರಂದರದಾಸರು