ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸು ಸಂತತ ಹರಿಯನು ಮನವೇ ಪ ಸ್ಮರಿಸು ಸಂತತ ಹರಿಯ ಕರುಣಾಳುಗಳ ದೊರೆಯ ಸರಸಿಯೊಳಗಂದು ಕರಿಯ ನರನ ಸಂಗರದೊಳಗೆ ಕಾಯ್ದು ದೊರೆಯ ಜಗದೀಶ ಅ.ಪ. ಪರ ಸೌಖ್ಯ ದಾನಿಗಳರಸನೆಂದು ಸಾನುರಾಗದಿ ನಂಬಿದ ಜನಕೆ ಸುರ ಮೋದ ಸಲಿಸುವ ಶ್ರೀಮ ಪತಿ ಸಾಮ ಗಾನ ಲೋಲನ ಪ್ರಸಾದಾ ಪಾದಾ 1 ಎಲ್ಲೆಲ್ಲಿ ನೋಡೆ ಮತ್ತಲ್ಲಲ್ಲಿ ನೆಲೆಸಿಹನು ಬಲ್ಲಿದನು ಭಾಗ್ಯವಂತ ನಂಬಿದವರಿ ಗಲ್ಲದೆ ಒಲಿಯ ಭ್ರಾಂತಾ ದುಷ್ಟ ಜನ ರೊಲ್ಲ ನಿಶ್ಚಯ ಮಹಂತಾರೊಡೆಯ ಕೈ ವಲ್ಯದಾಯಕನ ಇಂಥಾ ಪಂಥಾ 2 ಅಣುವಿನೊಳಗಣುವಹನು ಘನಕೆ ಘನತರನಹನು ಅಣು ಮಹದ್ವಿಲಕ್ಷಣಾ ಕಲ್ಯಾಣ ಗುಣಜ್ಞಾನ ಘನಲಕ್ಷಣಾ ಸಂಪೂರ್ಣ ಮನ ಮುಟ್ಟಿ ಕರೆದಾಕ್ಷಣಾ ಬಂದೊದಗಿ ಕುಣಿವ ಲಕ್ಷ್ಮೀ ವಕ್ಷನಾ ಅನಪೇಕ್ಷನಾ 3 ಚೆಲುವರೊಳಗತಿ ಚೆಲುವ ಸುಲಭರೊಳಗತಿ ಸುಲಭ ಒಲಿವ ಸರಿ ಬಂದ ತೆರದಿ ಗುಣಕರ್ಮ ಕುಲಶೀಲಗಳನೆಣಿಸನರಿದೀ - ಭಕುತಿ ಫಲವ ಕೊಡೆ ತಾ ತವಕದಿ ಶಬರಿ ಎಂ ಶರಧಿ ಭರದೀ 4 ನೋಡಿ ನೋಡಿಸುತಿಹನು ಮಾಡಿ ಮಾಡಿಸುತಿಹನು ನೀಡಿ ನೀಡಿಸುವ ಪಿಡಿವಾ ಪಿಡಿಸುವನು ಬೇಡಿ ಬೇಡಿಸುವ ಬಡವರೊಡೆಯ ಕೊಂ ಡಾಡುವರ ಒಡನಾಡುವಾ ಈ ಮಹಿಮೆ ಗೀಡೆಂದು ಆವ ನುಡಿವಾ ಕೆಡುವಾ 5 ಕೋದರಾದ್ಯಮರ ವ್ರಾತಾ ಸಹಿತ ಮಹ ದಾದಿ ಪೃಥ್ವಂತ ಭೂತಾದೊಳು ನಿಲಿಸಿ ಕಾದುಕೊಂಡಿಹ ವಿಧಾತಾ ಅಂಡತ್ರಿದ ಶಾಧಿಪನ ಸೂತ ಸಚ್ಚರಿತಾ 6 ನಿಗಮ ಸಂಚಾರ ಶ್ರೀ ಜಗನ್ನಾಥವಿಠಲರೇಯಾ ತನ್ನ ಪಾ ದಗಳ ಧ್ಯಾನಿಪರ ನೋಯಾಗೊಡದಂತೆ ಮಾಯಾ ರಮಣ ನಮ್ಮ ನಗಲಿ ಸೈರಿಸನು ಪ್ರಿಯಾ ಧ್ಯೇಯಾ 7
--------------
ಜಗನ್ನಾಥದಾಸರು
ಸ್ಮರಿಸೊ ಹರಿನಾಮ ಏ ಮನುಜಾ ಸ್ಮರಿಸೋ ಹರಿನಾಮ ನಿರವಧಿ ಸುಖಧಾಮ ಪರಮ ಪುರುಷಗಿದು ಪರಿಪೂರ್ಣ ಪ್ರೇಮ ಪ. ತರಳ ಪ್ರಹ್ಲಾದನ ಪೊರದು ಪಾಂಚಾಲಿಗೆ ತ್ವರಿತದೊಳಕ್ಷಯವಿತ್ತು ಸರಸಿಯೊಳಗೆ ಕರಿರಾಜನ ಸಲಹಿದ ನರ ಕಂಠೀರವ ಕರುಣಿಸುವನು ಬೇಗ 1 ಹಲವು ಜನ್ಮಗಳಲ್ಲಿ ಗಳಿಸಿದ ದುಷ್ಕøತ ಗಳನೆಲ್ಲ ನಿರ್ಮೂಲಗೊಳಿಸುವುದು ಜಲಜ ಸಂಭವ ಮಾಳ್ಪ ಕೆಲಸದಿ ಸಿಲುಕದೇ ನೆಲೆಗೊಂಡು ಸೌಖ್ಯವ ಸಲಿಸಬೇಕಾದರೆ 2 ಕಲಿಕೃತ ಕಲ್ಮಷ ಬಲೆಯಿಂದ ಮೋಚನ- ಗೊಳಿಸಲು ಹರಿನಾಮವಲ್ಲದಿನ್ನು ಚಲಿತ ಚಿತ್ತದ ಕರ್ಮಬಲದಿಂದಲಾಹದೆ ನಳಿನನಾಭನೇ ನೀ ಬೆಂಬಲನಾಗು ತನಗೆಂದು 3 ಉದಯಾರಂಭಿಸಿ ಮತ್ತೊಂದು ದಯ ಪರ್ಯಂತ ವಿಧಿವಿಹಿತಗಳೆಲ್ಲ ಸದರವೇನೊ ಪದುಮನಾಭನ ನಾಮ ಒದಗಿದರದು ಪೂರ್ಣ- ವದರಿಂದ ಸರ್ವರ ಹೃದಯ ನೀ ಮರೆಯದೆ 4 ಸಂಚಿತಾಗಾಮಿಗಳಂಚುವಂ ದಿತಿಜರ ಸಂಚಯಕನುದಿನ ಸ್ಮರಿಸುವರ ಕಿಂತಿತಾರಬ್ದ ಪ್ರಪಂಚವ ತ್ವರಿತದಿ ಮಿಂಚಿನಂದದಿ ತೋರಿ ಪರಿಹಾರಗೊಳಿಪರೇ 5 ಕರುಣಾಭಿಮಾನಿಗಳರಿತು ಮಾಡಿಸುತಿಹ ನಿರತ ಕೃತ್ಯಗಳೊಂದು ಮೀರದಲೆ ಹರಿಯಾಜ್ಞೆ ಇದು ಯೆಂದು ಚರಿಸುತಲನುದಿನ ಪರಮೋತ್ತಮ ಕಾರ್ಯಧುರವಿದೆ ತನಗೆಂದು 6 ನಾಗ ಗಿರೀಂದ್ರನ ನೆನೆದರೆ ಇಹಪರ ಭೋಗ ಸಾಮ್ರಾಜ್ಯವು ಸ್ಥಿರವಾಹುದು ವಾಗೀಶನ ಪರಮಾಗಮ ಸಿದ್ಧಾಂತ- ವಾಗಿಹದಿದೆಯೆಂದು ನೀ ಗುರುತವನಿಟ್ಟು 7
--------------
ತುಪಾಕಿ ವೆಂಕಟರಮಣಾಚಾರ್ಯ