ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಥಮ ವಚನ ಕಾಂತಿಯಿಂದಿರುವ | ಚಕ್ರ ಪದುಮ ಗದೆ | ಅದರೊಳಗೆ ಬಿದ್ದಿರುವ ಪರಮಪವಿತ್ರ ತ್ಯುಬುಗಳ ತೆಗೆದು | ನೇತ್ರದೊಳಗೊತ್ತಿ | ಪರಿಮಳವಾದ ಗಂಧಗಳಿಂದ ಅಲಂಕೃತ | ಸಿರಿದೇವಿ ವರದೊಡೆಯ ಮೇಲಿದ್ದು | ಕರಕಮಲದಲೊತ್ತುವ | ದಿನವೆ ಪರಮ ಪುಣ್ಯೋದಯ ಪ ಪಾದ | ಸರಸೀರುಹ ಸರಸದಿಂ ಕೊಂಡಾಡಿ | ನೆರಳಿ ಮರಳೀ ಸೌಖ್ಯದಾನಂದ | ಶರಧಿಯೊಳು ಮುಣುಗಿ ಮುಣುಗಿ ಏಳುತ | ಸೌಖ್ಯದಾನಂದ ಭಕ್ತಿಭಾವಗಳಿಂದ ಕರುಣಾಳು ಕೃಷ್ಣ ತ್ವರಿತದಲಿ ತನ್ನ ಸೇವಕ ಜನರೊಳಗೆ | ಸೇರಿಪ್ಪ ನಾ ಅರಿಯನು ನಾನೊಂದು ಸ್ತೋತ್ರ ಮಾಡುವದಕ್ಕೆ | ವರವ್ರಜ ತರುಣಿಯರು ಏನು ಪುಣ್ಯವ ಮಾಡಿದರೊ | ಸರುವದಾ ಹರಿಯನ್ನು ಕಾಣುವರು ಕಂಗಳಲಿ | ಪರಿಹಾಸ್ಯ ನುಡಿಯಲ್ಲ | ಪರಮ ಪವಿತ್ರರಿಗೆ ದೊರೆ | ಸಿರಿ ವಿಜಯವಿಠ್ಠಲನು | ಕರವಿಡಿದು ಎನ್ನಭೀಷ್ಟವನಿತ್ತು | ಪರಿಪಾಲಿಸಬೇಕೆಂದು ಭಕ್ತ ಕೇಳಿದನು 1 ದ್ವಿತೀಯ ವಚನ ಜಲಜನಾಭನÀ ರಥದ ದಡದ ಮೇಲೆ ನಿಲ್ಲಿಸಿ | ಜಲದೊಳಗೆ ತಾ ಮುಳುಗಿ ಅಕ್ರೂರ ಕಣ್ಣು ತೆರೆಯೆ | ಕಲುಷವರ್ಜಿತನಾದ ಕೃಷ್ಣ | ಹಲಧರನ ಸಹ ಮೇಳ ಸಂಭ್ರಮದಿ | ಜಲದೊಳಗೆ ತಾ ಕಂಡು | ನಾ ಪೇಳಿದ ಮಾತು ನಡಿಸಿ | ಬಲವಂತದಲಿ ಬಿದ್ದ ಭವರೋಗ ವೈದ್ಯನ ಮಾತೆ | ಲಲನಾಮಣಿಗೆ ಏನು ಹೇಳುವೆನು | ಸುಲಭವಾಗಿ ಎಮಗೆ ಅಭೀಷ್ಟಪ್ರದವಿದು | ಎಂದೆನುತ ತಂದೆ ನಂದಗೋಪನು | ಯೋಚಿಸಿ ಮನದಲಿ ಚಿಂತೆಯಗೊಂಡು | ಹನುಮೇಶ ವನಜಾಕ್ಷ | ಘನಮಹಿಮ ಎನ್ನ ಮನದ ಚಿಂತೆಯನು ಹನನವ ಮಾಡಿ ಎನ್ನ ಕೈಪಿಡಿಯಲಾಗದೆ ಈಗ ಎನುತ | ಮೇಲೇಳೆ ಸನಕ ಸನಂದನ ಸನತ್ಕುಮಾರ ಸಹ | ವನಜ ಸಂಭವ ಜನಕ ವೈಕುಂಠಪತಿ ಕೃಷ್ಣ | ಕನಕ ರಥದ ಮೇಲೆ ನಿಂತಿದ್ದು ತಾ ಕಂಡು | ಕರವೆರಡು ಜೋಡಿಸಿ | ಭರದಿ ಭಕ್ತಿಯಗೊಂಡು | ನರಜನ್ಮ ಹುಳು ನಿನ್ನ ಮಹಿಮೆಗಳ ಅರಿಯದೆ | ಜಲದೊಳಗೆ ನೀ ಬಿದ್ದಿ ಎನುತಲೀ ಯೋಚಿಸಿದೆ | ಚರಣದ ಮಹಿಮೆಗಳ | ಮರಣದಲಿ ಅಜಮಿಳಗೆ ದಯಮಾಡ ಬೇಕೈ | ಅರ್ಭಕ ಪ್ರಹ್ಲಾದ ನಿಜಮುನಿ ಶುಕಾಚಾರ್ಯರಂತೆ | ಅಪ್ರಾಕೃತ ಅಕಲಂಕ ಚರಿತ ಅಮರೇಂದ್ರ ವಂದಿತ | ಪಾಲಾ ವಿಜಯನ ರಥವನ್ನು ಸಾರಥಿಯಾಗಿ ದಯಾಸಮುದ್ರ ವಿಜಯವಿಠ್ಠಲನೇ2 ತೃತೀಯ ವಚನ ಅರವಿಂದನಾಭ ಕೃಷ್ಣ ಅಖಿಲಜನ ಪರಿಪಾಲ | ಕೃಪಾ ಸಮುದ್ರ | ಕಳತ್ರ | ಪರಿಪಾಲಿಸಬೇಕೆನ್ನ | ಪಾವನ ಚರಿತ್ರ | ಸುರಪತಿಗೆ ಅಸುರರ ಬಲನೀಗಿ ಆ | ವಿರಂಚಿ ಬಳಿಗೆ | ಶರಣೆಂದು ವರವೊಂದು ಕೇಳಿದೆ ವೈಕುಂಠಪತಿ ಕೃಷ್ಣ | ಕಂಟಕ ಕಂಸಾದಿಗಳ ಗೆಲಿದು | ಪಾದ | ಸರಸಿಜದೊಳು ಚಿತ್ತವಿರುವಂದದಲಿ | ಪರಮ ದಯಾಕರ ನಿನ್ನ ಮಹಾ ಮಹಿಮೆಗಳ | ಗರ್ವಿಷ್ಠನಾಗಿ ಮಲಗಿದವನಲ್ಲಿ | ಕೇಳ್ವ | ತ್ವರಿತದಲಿ ದಯಮಾಡಿ | ಭರದಿ ಪಾಲಿಸಬೇಕೆನ್ನ | ಭಕ್ತಜನ ವತ್ಸಲನೆ ಎನಲಾ ಮಾತಿಗೆ | ಇನ ಇಂದಿರೆ ಅರಸ | ಹನುಮೇಶ ಕನಕಮಯವಾದ ಪೀತಾಂಬರ | ಜನಿವಾರ | ಅನೇಕ ಅತರಿಗಳ ಗೆಲಿವ ಕನಕಮಯ | ಕಿರೀಟ ಚತುರ್ಭುಜ | ಕಟಕ ರತ್ನಮಯದುಂ | ಗುರ ವಾಹನ ಚಕ್ರವರ್ತಿಗೆ ತನ್ನ ನಿಜರೂಪವ3 ಚತುರ್ಥ ವಚನ ಆನಂದತೀರ್ಥ ಮುನಿವಂದ್ಯ | ಜ್ಞಾನಿಗಳ ವಲ್ಲಭ | ದೀನಜನ ಮಂದಾರ ನಾ | ನಿನ್ನ ಮೊರೆಹೊಕ್ಕು ಧೇನಿಸಲರಿಯೆ | ಆನೆಯನು ಆದರದಿ ಕಾಯ್ದ ಶ್ರೀನಿವಾಸ | ಸಾನುರಾಗದಿ ಪ್ರಹ್ಲಾದಗೊಲಿದ ಶ್ರೀನಿಧಿ ನರಸಿಂಹ | ಅನಾದಿ ಕಾಲದಿ ತಂದೆ ಬಂಧು ಬಳಗವು ಎಂದೆ | ಮಾನಿನಿ ದ್ರೌಪದಿ ಮೊರೆ ಇಟ್ಟಾಗ ಧ್ವನಿ ಕೇಳಿ | ಮಣಿ ಲಕುಮಿಗ್ಹೇಳದೆ | ಆನಂದಮಯನು ಅಕ್ಷಯವಿತ್ತು ಆಗ ಪರಿಪಾಲಿಸಿದಿ ಅದರಂತೆ | ಮಾನಹೀನನೆಂದು ನಿರಾಕರಿಸದೆ | ಧ್ಯಾನಕ್ಕೆ ಒಳಗಾಗಿ | ಮೌನಿಜನರನು ಕಾವ ಕ್ಷೋಣೀಶ ಮಾಣಿಕ್ಯ ಮಕುಟ ಕುಂಡಲಧರ | ಸಿರಿ ತುಳಸಿ | ಪರಿಮಳ ಸಿರಿಗಂಧ ಉದರದಲಿ ಬೆಳಗುವ | ಉಪೇಂದ್ರ ನಾಮ ಕೃಷ್ಣ ಉರಗೇಶಶಯನಾ | ನಿನ್ನ ದಾಸರದಾಸನೆಂದೆನುತ | ಕಾಣಸಿ ನಿನ್ನ ನಿಜರೂಪ | ನಿನ್ನ ಸ್ತೋತ್ರ ಮಾಡುವ ಭಕ್ತಗಣದೊಳಗೆ ನಿಲ್ಲಿಸೊ | ನಿನ್ನ ಮತ್ತೊಂದು ಪದಾರ್ಥ ಕೇಳುವವನಲ್ಲ | ತೀರ್ಥ ತೀರ್ಥಗಳಲ್ಲಿ ಮುಳುಗಿ ಬಂದವನಲ್ಲ | ಸಾರ್ಥಕವಾದಂಥ ಕೃತ್ಯ ಮಾಡುವನಲ್ಲ | ಸಾಧುಜನಸಂಗದಲಿ ಸೇರಿ ಪಾಡಿದವನಲ್ಲ | ಈ ನುಡಿ ಸತ್ಯವೇ ಲೇಸು ಪುಸಿಯಲ್ಲ | ಮಲ್ಲಮಲ್ಲರ ಗೆಲಿದ ಮಾಧವನು ನೀನಲ್ಲದೆ ಇನ್ನೊಂದು ದೈವವಿಲ್ಲದ ಮಧ್ವ ಮುನಿ ಹೃದಯಾಟ್ಟ ಪೀಠದೊಳು ವಾಸ ಮಾಡುವ ದೊರೆ ಉದ್ಧರಿಸಬೇಕೆನ್ನ ವಿಜಯವಿಠ್ಠಲನೆ 4 ಐದನೇ ವಚನ ಕರಿಯಬೇಕೆನ್ನ ಹಿರಿಯರೂ | ಇಡಲಾಗದ ಮನಸು ಸರ್ವದಾ ನಿನ್ನ | ಚರಣಾರವಿಂದ ದ್ವಂದ್ವದಲಿ | ಭರದಿಂದ ಮುದ್ರೆಯನಿಟ್ಟ | ತುತಿ ಮಾಡುವೆ ನಿನ್ನ | ಮುಚಕುಂದ ವರದ ನಿತ್ಯಾನಂದ ವಿಗ್ರಹ | ಸರಸಿರುಹಾಕ್ಷ ಸಜ್ಜನ ಪರಿಪಾಲಾ | ಪೂಜ್ಯ ಅವಗುಣ ವರ್ಜ ಅಕಳಂತ | ಮಹಾನುಭಾವ ಮಧ್ವೇಶ | ಈ ನುಡಿಯು ಪುಸಿಯಲ್ಲ | ಕರ ಪಿಡಿದು ಕಾಯ್ವರನ ಕಾಣೆ ಚರಣಾವಿಂದವನು ಭಜಿಪ ವೀಣೆ | ಈ ಕ್ಷೋಣಿಯೊಳಗೆನ್ನ ನರಜನ್ಮವು ಬಾರದೆ ಪರಿಪಾಲಿಸಬೇಕೆನ್ನ | ಪರಮ ಪವಿತ್ರ ಪಂಕೇರುಹನೇತ್ರ ಸಂಕಟಗಳ ಕಳೆದು | ಸೌಖ್ಯಪದ ವೈಕುಂಠದೊಳಗೆನ್ನ ನಿಲ್ಲಿಸೊ | ಭರದಿಂದ ನಿನ್ನ ನಾಮದ ಭಂಡಾರ ಕದ್ದ ಕಳ್ಳನೆನೆಸಿ | ಅರವಿಂದನಾಭ ನಿನ್ನ ಅಮರನೇ ವೈಕುಂಠ | ಕಾರಾಗೃಹದೊಳಗೆ ವಾಸ ಮಾಡಿಸು ದೇವ ಕೋಟಿ | ವರುಷಕೆ ಇದುವೆ ಎನಗೆ ಹರುಷ ಆನಂದಮಯ | ಇನ್ನೋರ್ವನಿಲ್ಲ ವಿಜಯವಿಠ್ಠಲನೇ 5
--------------
ವಿಜಯದಾಸ
ಅಥ ಹನುಮದ್ವ್ರತ ಕಥಾ ಸುಳಾದಿ ಧ್ರುವ ತಾಳ ವೃತವೆ ಉತ್ತಮ ವೃತವೆಂದು ಪೇಳಿಹರು ಅತುಳ ಜ್ಞಾನನಿಧಿ ವಿಜಯಾಖ್ಯ ಗುರುಗಳು | ಸತತ ಅಧ್ಯಾತುಮ ಅನಂತ ವೃತವೆಂದು | ಕ್ಷಿತಿಯೊಳು ಈ ವೃತಕೆÀ ಸರಿಗಾಣೆನೊ | ಪತಿತ ಮಾನವರ ಉದ್ಧಾರಗೋಸುಗವಾಗಿ ದ್ವಿತಿಯ ಉತ್ತಮ ವೃತವು ಹನುಮದ್ಪ್ರತವೂ | ಯತನ ಜ್ಞಾನೇಚ್ಛಾ ಶಕ್ತ್ಯಾದಿಗಳಿಗೆ ನಿರುತ | ಜತೆಯಾಗಿ ಕಾರ್ಯ ಮಾಳ್ಪ ಜ್ಞಾನಾಖ್ಯವೃತವೊ | ಅತಿಶಯವಾದ ಜ್ಞಾನ ಭಕ್ತಿ ವಿರಕ್ತಿವೀವುದು | ಮತಿವಂತರು ಮನಕೆ ತಂದು ತಿಳಿದು | ಕ್ಷಿತಿಪತಿ ಧರ್ಮರಾಜನೆಸಗಿದ ಮಹಾ ವೃತವೊ | ಪತಿಭಕುತಿಯುಕುತಳಾದ ದ್ರೌಪದಿಯು | ಪತಿ ಮೂರ್ಲೋಕದ ಶ್ರೀ ಕೃಷ್ಣನುಪದೇಶದಂತ್ಯೆ | ಮಿತ ಜ್ಯಾನದಿಂದ ಚರಿತ ವ್ರತವೊ | ಹಿತವಂತ ಹನುಮಂತ ಪಿತ ರಾಮನಿಗೆ ಪೇಳೆ ಆ | ಚ್ಯುತನಾದ ರಾಮನುಮತಿವಾನ್ ಹನು | ಮಂತನ ಭಕುತಿಗೊಲಿದು ಮಾಡ್ಡ ವೃತವೊ | ಸತತ ಸೂತರು ಶೌನಕಾದ್ಯರಿಗಿದರ ಮಹಿಮೆ | ಮಿತಿ ಇಲ್ಲದೇ ಪೇಳಿ ಮಾಡಿಸಿದ ವೃತವೊ | ವೃತತಿಜಾಸನ ಪ್ರಿಯ ಸುತ ಸುಂದರ ವಿಠಲನ ಭ | ಕುತಿ ಜ್ಞಾನವೀವ ಮಹಾ ಶ್ರೇಷ್ಠ ವೃತವೊ 1 ಮಟ್ಟತಾಳ ಜಾನ್ಹವೀ ತೀರದಲಿ ಶೌನಕಾದ್ಯ ಮುನಿಗಳು | ಧ್ಯಾನಿ ಸೂತರ ಕುರಿತು ಸಾನುರಾಗದಿ ನಮಿಸಿ | ಮೇಣು ಭಕುತಿಯಿಂದ ಙÁ್ಞನವಂತರೆ ನಿಮ್ಮಿಂ | ನಿತ್ಯ | ಧೇನಿಸುವೆವು ಹರಿಯಾ ಪುನೀತರ ಮಾಡುವಾ | ಕಾಣೋವನ್ಯ ವೃತವು ಆವುದುಪೇಳೆನಲು | ನಿತ್ಯ ಶೂದ್ರಾದಿ ನಾಲ್ಕು | ಜಾಣ ವರ್ಣರಿಂದ ಮಾಡ್ವದಕ್ಕೆ ಯೋಗ್ಯವೊ | ಏನು ಬೇಡಿದರೆ ತಡಿಯದೆ ಕೊಡುವುದೊ | ಜ್ಞಾನಿ ಜನಗಳಿಗೆಲ್ಲ ಮಂಗಳತಮ ವೃತವು | ಪುತ್ರಾದಿಗಳೀವುದು ಶ್ರೇಣಿ ದಿನ ಪ್ರತಿ ದಿನದಲ್ಲಿ ವರವಿದ್ಯ ಪ್ರದವೊ ಹಾನಿ ಲಾಭಗಳಲ್ಲಿ ಹನುಮಂತನ ನೆನಸೆ | ಮಾನನಿಧಿ ಸುತ ಸುಂದರ ವಿಠಲನ | ಧ್ಯಾನ ಧಾರಣವೀವ ಉತ್ತುಮಾಮಹವೃತವೊ 1 ರೂಪಕ ತಾಳ ಒಂದಾನೊಂದು ಸಮಯದಲ್ಲಿ ಶ್ರೀ ವ್ಯಾಸ ಶಿಷ್ಯ | ವೃಂದದಿಂದೊಡಗೂಡಿ ಯುಧಿಷ್ಠರನ ನೋಡಲು | ಅಂದುಳ್ಳ ದ್ವೈತ ವನಕೆ ನಡೆತಂದರು ಏನಂಬೆ | ಚಂದಾದ ನಿರ್ವೈರ ಮೃಗವೃಂದಗಳಿಂ ಕೂಡಿರುವ | ಕುಂದ ಮಂದಾರಾದಿ ಪುಷ್ಪಫಲ ವೃಕ್ಷಗಳಿಂ ಶೋಭಿಪ | ಕುಂದು ದೂರೋಡಿಸಿದ ಜ್ಞಾನಿಗಳ ಸಮೂಹವು | ಛಂದದಲಿ ಕಾವ್ಯಷಡಂಘ್ರಿ ನಿರತರಾಗಿ | ಮುಂದೆ ಅಧ್ಯಯನ ಶ್ರುತಸಂಪನ್ನರಾದವರು | ಒಂದೊಂದು ವೇದ ಋಗು ಯಜು:ಸಾಮಾಥರ್ವಣ ಒಂದೋಂದು ಶಾಖಾಶಾಸ್ತ್ರದಿ ಪ್ರವಚನಾಸಕ್ತರು | ಮಿಂದು ಹರಿಪದಜಲದಿ ಚತುರ ವೇದ ಘೋಷದಿ | ಸಂದೇಹವಿಲ್ಲದಲೇ ಭಗವದ್ಗೀತಾ ಲೀಲಾ | ಎಂದೆಂಬುವ ಹರಿಕಥಾಮೃತ ಪಾನ ಮಾಡುವ | ಸಂದೋಹ ಮುನಿಗಳಿಗೆ ನಿತ್ಯನ್ನದಾನವ ಮಾಡಿ | ಬಂಧುಗಳಿಂ ಸಹಿತ ಇರುವ ಯುಧಿಷ್ಟರನನ್ನು | ಸುಂದರ ವಿಠಲಾತ್ಮಕ ವ್ಯಾಸದೇವನು | ಅಂದು ದ್ವೈತವನದಲ್ಲಿ ಕೃಪಾ ದೃಷ್ಟಿಯಿಂದ ನೋಡಿದನು 3 ಕೃಷ್ಣದ್ವೈಪಾಯನಾ ಮುನಿಗಳಾಗಮ ಕೇಳಿ | ಕೃಷ್ಣೆ ಸಹಿತಾ ಅನುಜರೊಡನೆ ಕೂಡಿ | ಜೇಷ್ಠನಾದ ಯುಧಿಷ್ಠರನು ತಾ ದೂರ ನಡೆತಂದುವಾ | ಸಿಷ್ಟ ಕೃಷ್ಣಗೆ ಸಾಷ್ಟಾಂಗ ಪ್ರಣಾಮಗಳ ಮಾಡಿ ನಿ | ರ್ದಿಷ್ಟವಾದೆಕಾಂತ ಸ್ಥಳಕೆ ಕರೆತಂದು | ಶ್ರೇಷ್ಠವಾದಾಸನದ ಮೇಲೆ ಕುಳ್ಳಿರಿಸಿ | ಜೇಷ್ಟಾದಿಕೃಷ್ಣೇಯೊಡನೆ ಉತ್ಕøಷ್ಠ ಪೂಜೆಯ ಮಾಡೆ ಪರ ಮೇಷ್ಠಿ ಜನಕನು ತಾನು ತುಷ್ಟ ನಾಹೆ | ಶಿಷ್ಟಾಚಾರದಂತೆ ಕುಶಲ ಪ್ರಶ್ನೆಯು ಮಾಡ್ದ ನಿ | ರ್ದುಷ್ಟ ಭೀಮಾರ್ಜುನರೆ ಅಶ್ವಿನಿಯರೇ ಮನ | ಮುಟ್ಟಿ ಹರಿಪಾದ ಭಜನೆಯ ಮಾಡಿ ಸುಖಿಗಳಾಗಿಹ್ಯರೇ? ಧಿಟ್ಟತನದಲೆ ತಪವನೆಸಗಿ ಕಿರಿಟಯು | ನಿಷ್ಠಿಯಲಿ ಮಹರುದ್ರನೊಲಿಸಿ ಪಾಶುಪತವೆಂಬು | ತ್ಕøಷ್ಟಾಸ್ತ್ರ ಸಂಪಾದನೆಯ ಮಾಡಿದದು ಕೇಳಿ | ಹೃಷ್ಟನಾದೆನೊ ನಾನು ನಿಮ್ಮಿಂದಲಿ ಕೂಡಿ | ಕಷ್ಟಬಡುತಿರುವ ನಿನ ದುಃಖ ಶಾಂತ್ಯರ್ಥ | ಇಷ್ಟವೀವುದಕಾಗಿ ಬಂದಿಹನು ರಾಜಾಯು | ದ್ಯಿಷ್ಟರನೆ ಕೇಳುತ್ತಮ ವೃತವು ನಿನಗೋಸುಗ | ನಿಷ್ಠಿಯಿಂದಲಿ ಧರ್ಮತನಯ ನುಡಿದನು 4 ತ್ರಿವಿಡಿ ತಾಳ ನಮೊ ನಮೊ ತಾತ ಮಹಾ ಖ್ಯಾತವಂತರೆ ನಿಮಗೆ | ನಮೊ ನಮೊ ನಮೊ ಎಂದು ಬಿನ್ನೈಸುವೆ | ಶ್ರಮ ಪರಿಹರವೃತವಾವುದದÀರ ಮಹಿಮೆ | ಸುಮನಸರೊಡೆಯನೆ ಪೇಳಯ್ಯಾ ಜೀಯ್ಯಾ | ಕುಮತಿ ಪರಿಹರಿಸುವ ದೇವತೆ ಆರು ಉ | ತ್ತಮ ನಿಯಮ ಆವುದು ಪೂಜಾ ಕ್ರಮವು | ಶಮೆ ದಮೆವೀವ ನಿಯಮ ತಿಥಿ ಆವುದು | ರಮೆ ರಮಣನೆÉ ಆವ ಮಾಸದಲಿ ಮಾಡೋದು | ಶಮಲ ವಿವರ್ಜಿತ ವ್ಯಾಸದೇವನೆ ನಿಮ್ಮಾ | ಗಮನವು ಎಮ್ಮಯ ಕಷ್ಟ ದೊರೋಡಿಸಲು | ಸಮೀಚೀನ ಮತಿಯಿತ್ತು ಭಕ್ತರ ಪಾಲಿಪುದೆನುತ | ಸಮಚಿತ್ತ ಉಳ್ಳ ಮುನಿಗಳ ಕೂಡ ನಮಿಸಲು | ಭ್ರಮಣ ಮತಿಯ ಕಳೆವ ಹನುಮಾನ್ ಹ ನುಮನ್ನಾಮ ಪುನಃ ಪುನಃ ಸ್ಮರಿಸಿ ಶ್ರೀವ್ಯಾಸರು | ಆಮಮ ಪೇಳಲೇನೊ ಹನುಮದ್ವ್ರತವೋ | ಧೀಮಂತ ಹನುಮಂತನ ನಾಮೋಚ್ಚಾರಣೆಯಿಂದ | ಸಮಸ್ತ ಕಾರ್ಯ ಸಿದ್ದಿಪದು ಸಂಶಯ ಬ್ಯಾಡಿ | ಆ ಮಹಾ ದುಷ್ಟ ಗ್ರಹೋಚ್ಛಾಟನ ಜ್ವರಾದಿ | ತಾಮಸ ರೋಗ ನಿವರಣವಾಗುವದು | ಪ್ರೇಮದಿಂದಲಿ ಕೇಳು ಬಹು ವಾಕ್ಯಗಳಿಂದೇನು ? ಸೀಮೆಗಾಣದ ಅಭೀಷ್ಟಪ್ರದಾಯಕವೊ ನೀ ಮರೆಯದಿರು ಹಿಂದೆ ದ್ವಾರಕಿಯಲ್ಲಿ ಶ್ರೀ ಮದ್ವಿಷ್ಣುವೆ ಕೃಷ್ಣ ಪಾಂಚಾಲಿಯನಿ ಸ್ಸೀಮ ಭಕುತಿಗೆ ವೊಲಿದು ಈ ಮಹಾ ಹ ನುಮದ್ವ್ರತವನ್ನು ಉಪದೇಶಿಸಿ | ನೇಮದಿಂದಲೀ ವ್ರತವು ಮಾಡಿರೆನಲು ಕಾಮಿತಫಲವೀವಾ ವ್ರತದ ಮಹಿಮೆ ಆ | ಸ್ವಾಮಿ ಅನುಗ್ರಹದಿ ಸಂಪದೈಶ್ವರ್ಯದಿ ಆ ಮಹಾ ಸ್ತೋಮಗಳು ಪ್ರಾಪ್ತವಾಗಲು ನಿಮಗೆ | ಈ ಮಹಾ ವೃತ ಮಹಿಮೆ ತಿಳಿಯದ ಪಾರ್ಥನು ಪ್ರೇಮದಿಂ ದ್ರೌಪದಿ ಧರಿಸಿದ ದೋರವ ನೋಡಿ ಹೇ ಮಹಿಷಿಯೆ ಇದೆನೆನ್ನಲಾಗಿ | ತಾಮರಸನಯನೆ ಶ್ರೀ ಹನುಮದ್ದೋರವನ್ನೆ | ಆ ಮಹಾ ಐಶ್ವರ್ಯ ಗರ್ವಿಕೆ ಕ್ರೋಧಾದಿ ನಿ ಸ್ಸೀಮ ಪರಾಕ್ರಮಿ ನುಡಿದ ಅರ್ಜುನನು ಕಾಮಿನಿಯೆ ಕೇಳು ಆ ಹನುಮನೆಂಬೊ ಕಪಿ ನಾ ಮುದದಿ ಧ್ವಜದಲ್ಲಿ ಧರಿಸಿರುವೆನು ಈ | ಮರ್ಮವನು ತಿಳಿಯದೆ ಆ ವನಚರ ಶಾಖಾಮೃಗ | ಕಾಮಿತ ಫಲ ಕೊಡಬಲ್ಲದೆ ಕೇಳಿನ್ನು ಪಾಮರ ವ್ರತದಿಂದ ವಂಚಿಸಿದೆಲ್ಲದೇ ನೀನು ಕಾಮಿ ಜನರ ತೆರದಿಂದಲಿ ಅರ್ಜುನನು ಭಾಮೆ ದ್ರೌಪದಿ ಧರಿಸಿದ ತ್ರಯೋದಶ ಗ್ರಂಥಿಯುಕ್ತ ಆ ಮುದದ ದೋರವನು ಹರಿದು ಬಿಸಾಟಲು ಹೇಮಾದಿ ಸಕಲ ಸಂಪದೈಶ್ವರ್ಯ ರಾಜ್ಯವು ಭೂಮಿ ಸಹಿತ ಪ್ರಾಪ್ತವಾದುದೆಲ್ಲ ಪೋಗೆ | ಶ್ರಿಮದಾಂಧದಿಂದ ಪ್ರಾಪ್ತವ್ಯ ದುಃಖ ಫಲವು | ಪರಿಯಂತ | ರಾಮ ಮನೊರಮನು ಇನಿತು ನುಡಿಯೆ | ಸ್ವಾಮಿ ಆಜ್ಞವ ತಿಳಿದ ದ್ರೌಪದಿ ದೇವಿಯು | ಹೇ ಮಹತ್ಮರೆ ಶ್ರೀವ್ಯಾಸರ ನುಡಿ ನಿಜವೋ ನೇಮಗಳೆಲ್ಲಾ ತಿಳಿಯಲೋಶವೆ ಎಂದಿಗು 5 ಧ್ರುವ ತಾಳ ಕೇಳಯ್ಯಾ ಧರ್ಮರಾಜ ಆಲಸ ಮಾಡದೆ | ಪೇಳುವೆ ನಿನಗೊಂದು ಪುರಾತನ ಕಥೆಯು | ಆಲಿಸಿ ಮನಕೆ ತಂದು ಬಾಳು ಚನ್ನಾಗಿ ನೀನು | ಶೀಲೆ ಸೀತೆಯ ನೋಡುವ ಇಚ್ಛಾಉಳ್ಳ ಮಾ ನಿತ್ಯ ಲಕ್ಷ್ಮಣನೊಡಗೂಡಿ | ಮೇಲಾದ ಋಷ್ಯಮೂಕ ಗಿರಿಯ ಮಧ್ಯದಲ್ಲಿ ಶೀಲ ಭಕುತಿಯುಳ್ಳ ಹನುಮಂತನ ದರ್ಶನಾಗೆ ಆಳುವ ಕಪಿ ರಾಜ್ಯ ಸುಗ್ರೀವನ ಸಖ್ಯವನು ಬ ಹಾಳ ಮತಿಯುಳ್ಳ ವಾಯುಜ ಮಾಡಿಸೆ | ಮಾಸ ಮಳೆಗಾಲವು ವಾಸ ಮಾಡ್ಡ | ಕಾಲದಲಿ ಹನುಮನು ರಾಮದೇವಗೆ ನಮಿಸಿ | ನೀಲ ಮೇಘ ಶ್ಯಾಮ ಶ್ರೀ ರಾಮ ನೀನಿನ್ನ | ಬಾಲನ ಬಿನ್ನಪ ಮನಕೆ ತರಲು | ಪೇಳುವೆ ನಿಮ್ಮ ಸನ್ನಿಧಾನದಲೆನ್ನ ನಾಮ ಮಹಿಮೆ ಮೇಲುಸಿಲೆಯನದ್ಧರಿಸಿದ ಶ್ರೀರಾಮ ನೀನಙ್ಞನೆ | ಕಾಲ ಜನನದಲಿ ಇಂದ್ರನಿಂದಲಿ ಎನ್ನ ಮೇಲಾದ ವಜ್ರಾಯುಧದಿಂದ ಹನುಘಾತಿಸಲು ಭೂಲೋಕದಲ್ಲಿ ಅಂದಿನಾರಭ್ಯ ಹನುಮನೆಂದು ಖ್ಯಾತನಾಗಿ | ಕೇಳಯ್ಯಾ ಅಂಜನಾದ್ರಿಯಲ್ಲಿ ಸೂರ್ಯೋದಯ | ಕಾಲಕೆ ಪ್ರಕಟನಾದ ಬಾಲ ರವಿಯ ನೋಡಿ ಹಣ್ಣೆಂದು | ಮೇಲಾಗಿ ಭಕ್ಷಿಪುದಕೆ ಉಡ್ಡಾಣ ಮಾಡಲಾಗಿ | ಈ ಲೀಲೆಯ ತಿಳಿದು ಲೋಕ ಶಿಕ್ಷಣ ಗೋಸುಗ | ಕಾಲವಜ್ರಾಯುಧದಿಂದ ಹೊಡೆಯಲು ಮೂರ್ಛಿತ | ಬಾಲನಂತೆ ಬಿದ್ದವನೆನ್ನ ನೋಡಿ ಸ್ವಾಹಾ | ಲೋಲನ ಸಖನಾದ ವಾಯುದೇವನು ಎನ್ನ | ಮೇಲಿನ ಪ್ರೀತಿಯಿಂದ ಸರ್ವಜೀವರ ಶ್ವಾಸ | ಕಾಲನಾಮಕ ಭಗವಾನಿಚ್ಛೆಯಂತ ತೃಟಿ | ಕಾಲಬಿಡದೆ ಮಾಡ್ವ ಶ್ವಾಸ ನಿರೋಧಿಸೆ ಶಚಿ | ಲೋಲನಿಂದನ್ನ ಪುತ್ರನ ಕೆಡಹಿರಲವನನ್ನು ಈ | ಕಾಲಲವದಲ್ಲಿ ಕೆಡಹೆನೆನಲು ಆ | ಕಾಲದಲಿ ಬ್ರಹ್ಮಾದಿ ದೇವತೆಗಳು ಸಾಕ್ಷಾತ್ಕಾರರಾಗಿ | ಓಲೈಸಿ ಪೆಳ್ದ ಮಾತು ಎನಗೋಸುಗ ಆಂಜನೇಯಾ | ಬಾಲನೆ ಚಿರಜೀವಿಯಾಗು ನೀನೆ ಪರಾಕ್ರಮಿ | ಮೇಲೆನಿಪ ಶ್ರೀರಾಮನ ಕಾರ್ಯಸಾಧಕನಾಗೆನುತ | ಬಾಲ ಹನುಮನ ಪೂಜೆ ಮಾಡ್ಡರು ದೇವತೆಗಳು | ಮೇಲಾದ ಮಾರ್ಗಶಿರ ಶುದ್ಧ ತ್ರಯೋದಶಿ | ಕಾಲ ಅಭಿಜಿನ್ ಮೂಹೂರ್ತದಲ್ಲಿ ಆರು ಪೂಜಿಪರೊ | ಆಲಸವಿಲ್ಲದೆ ಪುರುಷಾರ್ಥ ಹೊಂದುವರೆಂದು | ತಾಳ ಮ್ಯಾಳರೊಡನೆ ವರವ ನೀಡಿ ಪೋದರು | ಆಲಯಾ ಸ್ವರ್ಗ ಸತ್ಯಾದಿ ಲೋಕಕೆ ಅಂದು ಹೀಗೆ | ಪೇಳೆ ಸುಂದರ ವಿಠಲ ರಘುರಾಮನು ನಸುನಗೆ | ಯಾಲಿ ಒಲಿದು ಹನುಮಗೆ ಹಸನ್ಮುಖನಾಗಿ ಇರಲು 6 ಮಟ್ಟತಾಳ ಭಕುತ ವತ್ಸಲ ನೀನು ಭಕುತರಿಚ್ಛವ ನೀನು | ಭಕುತ ಭಾಂಧವ ನೀನು ಭಕುತರೊಡಿಯ ನೀನು | ಭಕುತ ಪಾಲಕನೆಂಬ ಬಿರುದುಳ್ಳವ ನೀನು | ಭಕುತರಿಂದಲಿ ನೀನು ನಿನ್ನಿಂದಲೆ ಭಕುತರು | ಅಕಳಂಕ ಐಶ್ವರ್ಯ ಸತು ಚಿತು ಆನಂದಾತ್ಮಾ | ಮುಕುತಿ ಪ್ರದಾತನೆ ಸರ್ವ ಸ್ವಾಮಿ ನೀನು | ಸಕಲ ಲೋಕಗಳೊಡೆಯ ನಿನ್ನಿಂದಲೆ ಸರ್ವ ವ್ಯಕುತವಾಗ್ವದು ಸತ್ಯ ಸರ್ವಙ್ಞನು ನೀನು | ಭಕುತರ ಮನದಿಂಗಿತ ತಿಳಿಯದವನೆ ನೀನು | ಅಖಿಳ ಬ್ರಹ್ಮಾಂಡÀರಸನೆ ನಮೊ ನಮೊ ನಮೊ ನಮೊ | ಭಕುತರಿಂದಲೇ ನಿನ್ನ ಖ್ಯಾತಿ ಮೂರ್ಲೋಕಕ್ಕೆ ಭಕುತರೇ ನಿನ್ನಯಾ ಮಹಿಮೆಯ ಹೊಗಳುವರು | ಭಕುತರು ನಿನ್ನಿಂದಲೆ ಕೀರ್ತಿವಂತರÀಹರು | ಅಕುಟಿಲ ಪ್ರಭೋ ನೀನು ನಾ ನಿನ ನಿಜ ಭಕ್ತ | ಸಕಲ ಕಾಲದಲ್ಲಿ ನಿನ್ನನಾ ಮರೆಯದಲೇ | ಮಾಳ್ಪದು ನಿಜವಾಗೆ | ಶಕುತನೆ ಎನ ಕೀರ್ತಿ ನಿನ್ನಿಂದಾಗಲಿ ವಿಭೋ | ಉಕುತಿ ಲಾಲಿಸು ಪ್ರಭೋ ತವಚಿತ್ತವ ಧಾರೆ | ಭಕುತ ಹನುಮಂತ ಇನಿತು ವಿಙÁ್ಞಪಿಸಿ ನಿಲಲು | ಪ್ರಕಟಿತ ಅಶರೀರ ವಾಕ್ಯವು ಬಿಡದಲೆ | ಸಕಲ ನುಡಿ ಹನುಮಾ ಸತ್ಯನಾಡಿದನೆನಲು | ಸುಕರ ಏಕಮೇವ ದ್ವಿತಿಯ ಸುಂದರವಿಠಲ ತುಷ್ಟನಾಹೆ 7 ಝಂಪಿತಾಳ ಮಾಸಮಾರ್ಗಶೀರ್ಷ ಶುದ್ಧ ತ್ರೊಯೋದಶಿ | ಆ ಸುಮುಹೂರ್ತ ಜಯಾ ಅಭಿಜಿನ್ ಕಾಲಕೆ | ಶ್ರೀಶರಾಮನು ಹನುಮದ್ವ್ರತವ ಮಾಡ್ಡ ತ್ರಯೋ | ದಶ ಗ್ರಂಥಿüಯುತ ಹರಿದ್ರಾದೋರಗಳಲಿ | ಭಾಸುರಾಮತಿವೀವ ಹನುಮನಾವ್ಹಾನಿಸಿ | ಪೇಶಲಾಪೀತಗಂಧ ವಸ್ತ್ರ ಪುಷ್ಟಿಗಳಿಂದಲೀ | ಶ್ರೀಸೀತೆವಕ್ಷಸ್ಥಳದಿಪ್ಪ ನಿತ್ಯಾವಿಯೋಗಿನಿ | ಆ ಸುಗ್ರೀವ ಲಕ್ಷ್ಮಣಾದಿಗಳೊಡನೆ ನೆಸಗಿದನೇನೆಂಬೆ | ಲೇಶಬಿಡದೇ “ಓಂ ನಮೋಭಗವತೇ ವಾಯುನಂದನಾಯ” | ಈ ಸುಮಂತ್ರವ ಜಪಿಸಿ ತಾ ಸಹಸದಿ ಮಾಡ್ಡನೋ | ದೇಶಪರಿಮಿತ ಪ್ರಸ್ಥತ್ರಯೋಶಗೋಧೂಮವನು | ಆ ಸುದಕ್ಷಣೆ ತಾಂಬೂಲ ಸಹ ದ್ವಿಜರಿಗಿತ್ತದಾನ | ಮೀಸಲಾ ಮನದಿ ಈ ಸತ್ಕಥೆಯನು ಕೇಳಿ | ಭೇಶಮುಖಿ ಸೀತಿಯಳ ಕೊಡ್ದನೆಂಬದು ಖ್ಯಾತಿ | ಆ ಸತ್ಯಲೋಕರಿಗೆ ಆದುದು ಅಚ್ಚರವೆ ಪೂರ್ಣಕಾಮನಿಗೆ | ಕ್ಲೇಶನಾಶನವು ಸುಗ್ರೀವನಿಗೆ ವಿಶೇಷವಾದುದು ಸತ್ಯವೆನ್ನಿ | ತೋಷದಲಿ ವಿಭೀಷಣ ಶ್ರೀರಾಮನಾಙÉ್ಞಯಿಂ ಮಾಡ್ಡು | ದೇಶಲಂಕೆಯ ರಾಜ್ಯವನು ಪಡೆದನು | ಹೇ ಸುಮತಿಯೇ ಕೇಳಂದಿನಾರಭ್ಯ ಭೂಲೋಕಕೆ | ಲೇಸುವಿಶ್ರುತವಾದಿತೈ ಹನುಮದ್ವ್ರತವೂ | ಪರಿಯಂತ ಮಾಡ್ಡುದ ಕೀಸು ಉದ್ಯಾಪನೆಯಯ್ಯಾ ಆದಿ ಮಧ್ಯಾಂತಕೆ | “ಮಾಸಾನಾಂ ಮಾರ್ಗಶೀರ್ಷೋಹಂ” ಎಂದು ಗೀತೆÀಯಲಿ ಆ ಸ್ವಾಮಿ ದಿವ್ಯನುಡಿಯುಂಟು ಕೇಳ್ ಧರ್ಮಜನೆ | ಸ್ತ್ರೀಸಹಿತ ಅನುಜರೊಡನೇ ಈ ವ್ರತವನು | ಮೇಶನಾಜ್ಞೆಯಿದೆಂದು ಮಾಡಲು ನಿನಗೆ ರಾಜ್ಯ | ಕೋಶ ಭಾಂಡಾರಪ್ರಾಪ್ತಿಯಾಗುವದು | ಲೇಶ ಸಂಶಯ ಬ್ಯಾಡೆನಲು ಶ್ರೀ ವ್ಯಾಸ | ಆ ಸುಂದರ ವಿಠಲನ ಭಕುತರು ಮುದಭರಿತರಾಗೆ 8 ರೂಪತಾಳ ರವಿಯು ವೃಶ್ಚಿಕ ರಾಶಿಗೆ ಬರಲಾಗಿ | ಸವೆಯಾದ ಪದವೀವ ವ್ರತವಮಾಡುವದಕ್ಕೆ | ಕವಳಾ ಅಜ್ಞಾನಾಖ್ಯ ರಾತ್ರಿಕಳೆದು | ಸುವಿಮಲಾಜ್ಞಾನಾಖ್ಯ ಪ್ರಾತಃ ಕಾಲದಲೆದ್ದು | ಕವಿವ್ಯಾಸರ ಮುಂದೆ ಮಾಡಿ ಧರ್ಮಜನು | ಸುವಿವೇಕಬುದ್ಧಿಯಿಂ ಸ್ನಾನಾದಿಗಳ ಮಾಡಿ | ಹವಿಷಾದಿ ದ್ರÀ್ರವ್ಯಗಳಲಿ ಹರಿಯಚಿಂತಿಸಿ ಮಾ | ಧವÀನಾಜ್ಞೆಯಂತೆ ಉದ್ಯಾಪನವಂಗೈದು | ಕವ್ಯವಾಹನನಲ್ಲಿ ಮೂಲಮಂತ್ರದಿಂದ | ಲವಕಾಲ ಬಿಡದಲೆ ವೇದಸೂಕ್ತಗಳಿಂ ಹೋಮಿಸಿ | ನವಭಕುತಿಯಲಿ ಹನುಮಂತನ ವ್ರತಾಚರಿಸಲು | ಹವಣಿಸಿ ಸಂವತ್ಸರವು ಪೋಗಲು ಪಾಂಡವರು | ಬವರದಲ್ಲಿ ಕೌರವರಗೆ
--------------
ಸುಂದರವಿಠಲ
ಭಕ್ತರನ ನಂಬದಿರು ಭವದೂರನೆ ಮುಕ್ತಿಯನು ಬೇಡದಲೆ ನಿನ್ನೆ ಪೂಜಿಸುವರು ಪ ಪ್ರಸ್ತ ಮಾಡುವ ಸಾಧನಕ್ಕೆ ಪೋಗಿ ನಿಂದು ಬಲು ಹಸ್ತು ಬಂದವನು ತುತ್ತನ್ನ ಕೇಳೆ ಸ್ವಸ್ತವಾಗಿ ಕುಳಿತು ಭೋಜನ ಮಾಳ್ಪ ಆ ಗ್ರಹಸ್ತ ಪೊಟ್ಟಿ ತುಂಬದೆ ಬರಿದೆ ಏಳುವನೆ1 ಹಾದಿಕಾರನು ಬಂದು ವಸ್ತಿ ಮಾಡುವದಕ್ಕೆ ಆದರದಲಿ ಸ್ವಲ್ಪ ಸ್ಥಳವ ಕೇಳಿ ಪಾದ ಇಡುವನಿತರೊಳು ಕುಳಿತು ಆಮೇಲೆ ಸಂ ಪಾದಿಸುವ ತನ್ನ ತಕ್ಕಷ್ಟು ಧರಣಿಯನ್ನು2 ಆವದೊಲ್ಲೆವೆಂದು ಆಡುವರು ನಿತ್ಯದಲಿ ಕಾವ ಕರುಣಿ ನೀನೆಂದು ತಿಳಿದು ಸಿರಿ ವಿಜಯವಿಠ್ಠಲ ನಿನ್ನ ಇಂದು 3
--------------
ವಿಜಯದಾಸ