ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈಗಲೊ ಇನ್ನಾವಾಗಲೊ ಈ ತನುವು ಪೋಗದಿರದು ಪ. ಭೋಗದಾಸೆಯ ಬಿಡಿಸಯ್ಯ ನಾಗಶಯನ ನಳಿನನಯನ ಅ.ಪ. ಎಂಬತ್ತು ನಾಲ್ಕು ಲಕ್ಷ ಯೋನಿಗಳಲಿ ಬಂದು ಅಂಬುಜಾಕ್ಷನೊಂದೆನಯ್ಯ ಅಂದಂದು ಮಾಡಿದ ಅಘದಿಕುಂಭೀಪಾಕ ಮೊದಲಾದ ಕುತ್ಸ್ಸಿತ ನರಕದಿ ಬಿದ್ದುಉಂಬ ದುಃಖವ ಬಿಡಿಸಯ್ಯ ಉದಧಿಶಯನ ಪುಣ್ಯಕಥನ 1 ಓದನ ಮಾತ್ರಕ್ಕೆ ಸಭೆಯೊಳುವಾದಿಸುವೆ ವೇದಶಾಸ್ತ್ರ ಉಪನ್ಯಾಸಂಗಳನು ಮಾಡುವೆಕ್ರೋಧರಹಿತನಾಗಿ ಅವರು ಕೊಡಲು ಕೊಂಡಾಡುವೆಆದರಿಸದಿದ್ದರವರ ಬೈದು ಬರುವೆ ಖಿನ್ನನಾಗಿ2 ದೇಶದೇಶಂಗಳಿಗೆ ಧನದ ಆಸೆಗಾಗಿ ಪೋಗಿ ಪೋಗಿಬ್ಯಾಸರದೆ ಕಂಡವರ ಕಾಡಿ ಬೇಡಿ ಬಳಲಿದೆಕಾಸಿನ ಲಾಭವು ಕಾಣೆ ಘಾಸಿಯಾದೆನಯ್ಯ ಶ್ರೀನಿ-ವಾಸ ನಿನ್ನ ಪೂಜಿಸದೆ ಮೋಸಹೋದೆನಯ್ಯ ನಾನು3 ಸ್ನಾನಮೌನಂಗಳನು ಮಾಡುವೆ ಸಕಲ ಜನರ ಮುಂದೆಮಾನವರಿಲ್ಲದಾಗಲೆ ಮೌನವಿಲ್ಲ ಮಂತ್ರವಿಲ್ಲಜ್ಞಾನವ ಪೇಳುವೆ ಮೋಸಕಟ್ಟ[ಲೆ]ಯ ಮಾಡಿಕೊಂಡುಧ್ಯಾನಿಸದೆ ಹೊಟ್ಟೆಯನ್ನು ಹೊರೆವೆ ನಿನ್ನ ಮರೆವೆ4 ಕರ್ಣ ಕೇಳದು ಅನ್ಯವಾರ್ತೆ[ಗೆ] ಹೊತ್ತುಸಾಲದುಇನ್ನು ಹೇಸಿಕೆ ಮನಕೆ ಬಾರದು ಮುಂದಿನ ಗತಿಗೆ ದಾರಿ ತೋರದು 5 ಕಂಬುಕಂಧರ ನಿನ್ನ ನೆನೆಯದೆ 6 ವೃದ್ಧನಾದೆನು ಪಲ್ಗಳೆಲ್ಲ ಬಿದ್ದವು ಕಣ್ಣುಕಾಣಬಾರದುಎದ್ದು ನಿಲ್ಲಲಾರೆನಯ್ಯ ಉದ್ಧರಿಸೊ ಹಯವದನತಿದ್ದಿ ಮನವ ನಿನ್ನ ಪಾದಪದ್ಮವ ನೆನೆವಂತೆ ಮಾಡೊಪೊದ್ದಿದವರ ಪೊರೆವ ಕರುಣಾಸಿಂಧು ಎನಗೆ ನೀನೆ ಬಂಧು 7
--------------
ವಾದಿರಾಜ
ದೇವ ನೀನುಪಕಾರ ಅಪಾರ ಮಾಡಿದೆ ಕಾವ ಕರುಣಾ ಸ್ವಭಾವ ಕೇಳು ಪೇಳುವೆ ಪ ನವಯುವತಿ ಶಿಲೆ ಕೊರಳಿಗೆ ಕಟ್ಟಿಕೊಂಡು ಭವ ಸಾಗರದೊಳು ಮುಳುಗಿ ಪೋಗುವ ನಾ ಅವಸರಕೊದಗಿ ಪಿಡಿದು ದಡ ಸೇರಿಸಿ ದವನಾಗಿ ಎಚ್ಚರಿಕೆ ತಂದಿತ್ತೆ ದಯಾಳೊ 1 ಭಾರ ತಾಳದು ಎಂದು ಸೂತ್ರವೂ ಶಿಖಿಯೊ ನಿ ವಾರಿಸಿ ತನುವಿಗೆ ಲಘುವು ಮಾಡಿದೇಯೆ ಭಾರಮಯತಾ ರಜ್ಜು ಮನಕೆ ಸುತ್ತಿದೆ ಆಶಾಂ- ಕುರ ಕೇಶಗಳು ಬೆಳದಿವೆ ಪರಿಹರಿಸು 2 ಲಕ್ಷ್ಯವಿಲ್ಲದೆ ಅನ್ನ ಮೊದಲಾಗಿ ಕೊಡುವಂಗೆ ಶಿಕ್ಷಿಸಿ ಗರ್ವವು ಕಳೆದು ಈಗ ಭಿಕ್ಷುಕನ ಮಾಡಿದೆ ನಿನ್ನದೆ ಬೇಡುವೆ ಲಕ್ಷ್ಮೀಪತಿಯೆ ಅಂತರಂಗದ ಗೃಹಸ್ಥ 3 ಏಳು ಮನೆಗಳನ್ನು ಕೇಳೋದು ಯತಿಧರ್ಮ ಏಳಲಾರಿನೊ ವೃದ್ಧ ಕೇಳಲಾರೆ ಕೇಳುವೆ ನಿನ್ನನೇ ಏಳು ಭಿಕ್ಷವ ನೀಡು ಬಾಳುವೆ ಬಹುಕಾಲ ನಿನ್ನ ಕೊಂಡಾಡುತ 4 ಶ್ರೋತ್ರಕ್ಕೆ ನಿನ್ನ ಕಥೆ ನಾಸಕೆ ನಿನ್ನ ಗಂಧ ನೇತ್ರಕ್ಕೆ ನಿನ್ನ ರೂಪ ರಸನಿಗೆ ನಾಮಾಮೃತ ಗಾತ್ರಕ್ಕೆ ನಿನ್ನ ಪಾದಸ್ಪರುಷ ಮನೋಬುದ್ಧಿ ಮಾತ್ರಕ್ಕೆ ಗುಣಕರ್ಮ ಕೊಡು ವಾಸುದೇವವಿಠಲ5
--------------
ವ್ಯಾಸತತ್ವಜ್ಞದಾಸರು
ಬಿಡೋ ಇನ್ನು ಬಿಡೋ ಇನ್ನು ಪ ಕಡೆಗಾದರೂ ನಿನ್ನ ಹುಡುಗು ಬುದ್ಧಿಯನು ಅ.ಪ. ಜೀರ್ಣವಾಯಿತು ದೇಹವು ನಿನಗೆ ಜೀರ್ಣವಾಗಲಿಲ್ಲ ನೇಹವು ಕೊನೆಗೆ 1 ವಾಹನ ಮೃಷ್ಟಾನ್ನಗ ಳಾ ಮಹನೀಯನೊಲಿಸವೊ ಮೂಢ 2 ಸ್ನಾನ ದಾನ ಅಧ್ಯಯನಾದಿಗಳಿಗೆ ಶ್ರೀನಿವಾಸ ತಾನೊಲಿಯನೊ ಬರಿದೆ 3 ತಾಳ ಮೇಳ ಸಂಗೀತಾದಿಗಳನು ಕೇಳನು ಪ್ರೇಮದ ಭಾವವಿಲ್ಲದೊಡೆ 4 ಚಿತ್ತ ಮಲಿನವಿದ್ದು ಸತ್ಕಾರವಗೈಯ್ಯೆ ಆಪ್ತ ಕಾಮ ತಾ ತೃಪ್ತಿಯ ಪೊಂದನು 5 ಶ್ರೀಧರ ತಾ ದಯದಿಂದೊಲಿದಲ್ಲದೆ ಸಾಧನ ಮಾತ್ರಕ್ಕೆ ಒಲಿಯಲು ಸಾಧ್ಯವೆ 6 ನಳಿನನಯನನಾಜ್ಞೆಯ ನೀ ಪಾಲಿಸೆ ಒಲಿವನು ನಿಜವಿದು ನಲಿಯುತ ನಿನಗೆ 7 ಮೃಡವಂದಿತ ಶ್ರೀ ಕರಿಗಿರೀಶನೊಳ್ ದೃಢ ಭಕ್ತಿಯನಿಡು ಬಿಡದೆ ಪೊರೆವನೊ 8
--------------
ವರಾವಾಣಿರಾಮರಾಯದಾಸರು