ಒಟ್ಟು 7 ಕಡೆಗಳಲ್ಲಿ , 6 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯ ಸುತ್ತಿ ಬಾಯ ಹೊಯ್ವುದು ಆಯ ತಪ್ಪಿ ಆಯ ಕೆಟ್ಟ ನ್ಯಾಯಬಪ್ಪುದು ಪ ಹೆತ್ತ ತಾಯಿ ತಂದೆಯನ್ನು ಒತ್ತಿ ಬಯ್ವುದು ಅತ್ತೆಯನ್ನು ಕಂಡು ಹರುಷವಿತ್ತು ನಗುವುದು ಮೃತ್ಯುವನ್ನು ತಂದು ತನ್ನ ಹತ್ತಿರಿಡುವುದು ಒತ್ತಿನವನ ಹೊರಗೆ ಸಾರೆನುತ್ತ ನುಡಿವುದು 1 ಗುರುಗಳನ್ನು ಜರೆದು ಕರೆಕರೆಯ ತಪ್ಪುದು ಕೊರಳು ಕೊಯ್ಕರನ್ನು ತಾನು ಸೆರಗ ಪಿಡಿವುದು ಮರವೆ ತೋರ್ಪುದು ಗರುವತನದಿ ಪರರ ಒಡವೆ ಇರುಳು ಸುಲಿವುದು 2 ದಾನದತ್ತವಾದುದನ್ನು ತಾನು ಸೆಳೆಯುವುದು ಮಾನವನ್ನು ಹಿಡಿದು ಮೇಲೆ ಮಾನಯಿಡುವುದು ಜ್ಞಾನಿಯನ್ನು ಕಂಡು ಮನದಿ ಬೇನೆ ತೋರ್ಪುದು ಅನಾಥರನ್ನು ಕಂಡು ಬಹು ಹೀನ ನುಡಿವುದು 3 ಅನ್ನವನ್ನು ಇತ್ತವರ ಮುನ್ನ ಬೈಯ್ವುದು ಭಿನ್ನ ಭೇದ ತೋರಿ ಮನವ ಕನ್ನ ಕೊರೆವುದು ತನ್ನವರ ಮರೆತು ಪರರ ಕನ್ಯೆಗಳುವುದು ಹೊನ್ನ ಬೊಂಬೆಯಂತೆ ಮಾಯೆ ಬೆನ್ನ ಸುಳಿವುದು 4 ತಪ್ಪಿ ನಡೆಯೆ ಈ ಪರಿಯೊಳಿಪ್ಪೆಯೆಂಬುದು ಅಪ್ಪ ವರಾಹತಿಮ್ಮಪ್ಪನ ಸೇರಿಕೊಂಬುದು ಒಪ್ಪಿ ತೋರ್ಪ ಮಾಯೆಯೆಲ್ಲ ತಪ್ಪಿ ಪೋಪುದು ಉಪ್ಪರದ ದಾಸ ಪೇಳ್ದ ಒಪ್ಪಿಕೊಂಬುದು 5
--------------
ವರಹತಿಮ್ಮಪ್ಪ
ಗುರುರಾಜ ಕರುಣದಿ ನೋಡಯ್ಯ ಪ ಸುರಗಣ ಒಡೆಯನೆ ಕರವೆತ್ತಿ ಮುಗಿಯುವೆ ಕರೆಕರೆ ಮಾಡದೆ ಚರಣವ ತೋರಿಸು ಅ.ಪ. ಭವ ಮೋಚಕನ ಬಿಟ್ಟು ಭವಣೇಗಳನೆಪಟ್ಟು ನಾ ಒದ್ದಾಡುವೆ ಇಂದು ಅವನಿಯ ಜನರೊಳು ಅವಗುಣ ಪ್ರತಿಮೆಯ ತವಕದಿ ಪೊರೆಯದೆ ಜವನಡಿಕಳಿಸೊದೇ 1 ಅನುದಿನದೀ ನಾನು ಅನುಮಾನದಿಂದಲಿ ನೊಂದೆ ಅನಿಲನ ಹಾದಿಯ ಬಿಟ್ಟು ಅನ್ಯರಾನಂಬೀ ಕೆಟ್ಟೆ ತನುಮನ ನಿನ್ನಡಿ ಅರ್ಪಿಸಿನಂಬಿದೆ ದಿನದಿನ ದಯದಿಂ ನಿನ್ನವರೊಳು ಸೇರಿಸೊ 2 ಕಾಮಕೇಳಿಯಲಿ ಮುಳುಗಿ ಕಾಮಿನಿಯರ ಬರೆದೆ ಕಾಮಜನಕನ ಮರೆತೆ ಸೋಮಶೇಖರ ಪ್ರಿಯನೆ ಶಮದಮಪಾಲಿಸಿ ತಾಮಸ ಓಡಿಸಿ ಸಾಮಜವರದನ ಪ್ರೇಮವ ಕೊಡಿಸೋ 3 ಜ್ಞಾನಶೂನ್ಯನು ಆಗಿ ಶ್ವಾನಂದದಿ ಇರುವೆ ಮಾನಾಭಿಮಾನವನ್ನು ನಿನಗೆ ಅರ್ಪಿಸಿದೆನೊ ಅನಿಲನಶಾಸ್ತ್ರದಿ ಜ್ಞಾನವ ನೀ ನೀಡಿ ಮನದಲಿ ನಲಿನಲಿ ಮುನಿಗಳ ಒಡೆಯಾ 4 ವಿಧವಿಧ ಟೀಕೆಗಳನು ಮುದದಿಂದಲಿ ಮಾಡಿ ಮೋದವಂತದ ತತ್ವಗಳ ಮುಂದಕ್ಕೆ ತಂದೆಯೋ ಸದಯದಿ ಜಯಮುನಿ ವಾಯ್ವಾಂತರ್ಗತ ಮಾಧವ ಕೃಷ್ಣವಿಠಲನ ತೋರುತ 5
--------------
ಕೃಷ್ಣವಿಠಲದಾಸರು
ಗೋಪಿ ನಿನ್ನ ಮಗನ ಲೂಟಿಯ ಪ ಮಾಡುತಾನೆ ಮನೆಗೆ ಬಂದು ಬಹಳ ಚೇಷ್ಟೆಯ ಅ ಮಾನಿನೀಯರೊಳಗೆ ಪೋಕಾಟವೇನಿದುಮಾನವನ್ನು ಕಳೆದ ಪರಿಯ ಹೇಳತೀರದು 1 ಪಿಡಿದ ಸೆರಗ ಬಿಡನು ಇನ್ನೇನ ಮಾಡಲಿತಡೆಯಲಾರೆವಮ್ಮ ಕೇಳೆ ಇವನ ಹಾವಳಿ 2 ಕದಳಿ ರಂಗನಬನ್ನಣೇಯ ಮಾತ ಕೇಳಿ ಬಿಡುವೆ ಪುರುಷನ 3
--------------
ಕನಕದಾಸ
ನಂಬಿದೆನೊ ನಿನ್ನ ಅಂಬುಜನಯನ ಕೃ ಪಾಂಬುಧೆ ದೃಢದಲಿ ಪ ಸಂಭ್ರಮದಲಿ ಕಿವಿ ತುಂಬುತಿರುವ ಆ ಡಂಬರ ವಚನಕೆ ಮುಂಬರಗೊಳ್ಳುತ ಅ.ಪ ನವ ಘನ ನಿಭಕಾಯ ನಿನ್ನಯ ಕರುಣಮಯ ಸಹಾಯ ವಿಲ್ಲದೆ ಬಿಗಿಯುತಿರುವ ಮಾಯಾ ಪಾಶವ ತೊರೆಯಲಳವೆ ಜೀಯಾ ನಿನ್ನಯ ದಯವ ಪಡೆದ ಪರಿಯನರುಹುವ ಯತಿವರೇಣ್ಯ ಗುರುಮಧ್ವರಾಯರ ಪರಮ ಸಮಯ ಸಾರಗಳನು ಸಂತತ ಶ್ರವಣ ಮನನ ಧ್ಯಾನಗಳಿಂದ ಪರಿಚಯ ಪಡೆದು ದು ಷ್ಟ ವಿಷಯಗಳಲಿ ಮತಿಯನು ಮುರಿಯುವಂತೆ ಕರುಣಿಸೋ ಸುಗುಣಾಲಯ 1 ನೀರಜದಳ ನೇತ್ರ ವರ ಸುಖ ಚಿನ್ಮಯೈಕ ಗಾತ್ರ ಸುಜನ ಮಿತ್ರ ಸುರವರ ಸರಸಿಜಭವ ಪುತ್ರ ರುಚಿರರ ಮುಕುಟಾಕ್ಷಪಾತ್ರ ನಿನ್ನಯ ವಿವಿಧ ಲೀಲೆಗಳು ಚಿತ್ರವಿಚಿತ್ರವು ಅರಿತೆನೆಂದು ತಿಳಿದು ಮೆರೆಯುತಲಿರುವ ನರರ ಮದವ ಮುರಿದು ದೈನ್ಯದಿಂದಲಿ ಮರೆತೆನೆಂದು ದಿನದಿನದಲಿ ಭಜಿಪರ ಪೊರೆವ ಪರಮ ಕರುಣಾರಸಮಯನೆ 2 ದೀನಭಕುತರನ್ನು ಪೊರೆಯುವ ದಾಸಿಯೆಂದು ನಿನ್ನ ಪೊಗಳುವ ಮಾನತತಿಗಳನ್ನು ಸಂತತ ಧ್ಯಾನ ಮಾಡಿ ಎನ್ನ ಕ್ಲೇಶವ ಮೌನದಿಂದ ಇನ್ನೂ ಸಹಿಸುತ ಜಾನಕೀಶ ತವ ಪಾದಕಮಲದ ರೇಣುವನ್ನು ಶಿರದಿ ಧರಿಸುತಲಿ ಅನು ಮಾನವನ್ನು ತೊರೆದು ಮುದದಿ ಸುವಿಮಲ ಜ್ಞಾನಮೂರ್ತೆ ಜ್ಞಾನಿವರ ಪ್ರಸನ್ನನೆ ನೀನೆ ಎನ್ನ ರಕ್ಷಕನೆಂದರಿಯುತ 3
--------------
ವಿದ್ಯಾಪ್ರಸನ್ನತೀರ್ಥರು
ಪಾರ್ಥಸಾರಥಿ ನಿಮ್ಮ ಸೇವೆಯ ಮಾಡಿ ಸಾರ್ಥಕವಾದೆನು ಪ ವಾರ್ಥಿಪುರುಷನೆ ನಿಮ್ಮ ಕೀರ್ತಿಯ ಕೊಂಡಾಡಲೆನಗೆ ಶಕ್ತಿಯ ವಿಸ್ತರಿಸೆನಗೆ ಯುಕ್ತಿಯ ಅ.ಪ ಆಚಾರ್ಯರಿಗೆ ಅಭಿವಂದನೆ ಮಾಡಿ ಅಜನರಾಣಿಯ ಭಜಿಸುವೆ ಅನಾದಿಕ್ರಮವನು ಪೇಳುವೆ 1 ಕೈರವಿಣಿಯಲ್ಲಿ ಸ್ನಾನವಮಾಡಿ ಕೈಮುಗಿದು ಮಾರುತಿಗೆ ನಾ ಕರುಣಿಆಚಾರ್ಯರಿಗೆ ವಂದಿಸಿ ಕರಿಯಬಳಿಗೆ ನಾ ಬಂದೆನು ನಾ ಕರಿಯ ಬಳಿಗೆ ಬಂದೆನು 2 ದವನೋತ್ಸವದ ಮಂಟಪಂಗಳು ಭಾಗವತರ ಭವನವು ಬಲವಬಳಸಿ ಭಕ್ತವತ್ಸಲನ ಚೆಲುವರಥವನು ನೋಡಿದೆ ನಾ ಶೇಷರಥವನು ಸೇವಿಸಿ 3 ಮೂಡಬೀದಿಯ ಸುತ್ತಿಬಂದು ಮಹದಾಹ್ವಯರನು ಸೇವಿಸಿ ಮಹಾನುಭಾವನ ವಿಮಾನವನು ನೋಡಿ ಮಾನವನ್ನು ಬಿಟ್ಯೆನೊ ದೇಹಾಭಿಮಾನವನ್ನು ಬಿಟ್ಯೆನೊ 4 ಕಾರಿಮಾರಿ ಪುತ್ರರಿಗೆ ಬಾರಿಬಾರಿಗೆ ವಂದಿಸಿ ವಾರಿಜಾಕ್ಷನ ಗೋಪುರವ ನೋಡಿ ಘೋರಪಾಪವ ಕಳೆದೆನೊ ಯನ್ನ ಘೋರಪಾಪವ ಕಳೆದೆನೊ 5 ಗರುಡಕಂಭವ ದೀಪಸ್ತಂಭವು ವಾಹನದ ಮಂಟಪಂಗಳು ವಾರಿಜನಾಭನ ಪಕ್ಷಿವಾಹನನ ನೋಡಿ ವಂದನೆಯ ಮಾಡಿದೆ ಅಭಿವಂದನೆಯ ನಾ ಮಾಡಿದೆ 6 ತೋರಣದ ಬಾಗಿಲನು ದಾಟಿ ವಾರುಣದೆದುರಲಿ ವಂದಿಸಿ ವಾರಿಜಾಕ್ಷಿ ಶ್ರೀವೇದವಲ್ಲಿಯ ಸಾರೂಪ್ಯವನು ನಾ ಬೇಡಿದೆ ಸಾಯುಜ್ಯವನು ನಾ ಬೇಡಿದೆ 7 ಭಕ್ತಿಸಾರರ ಚರಣಕೆರಗಿ ಹಸ್ತಗಿರೀಶನ ವಂದಿಸಿ ಸುತ್ತಿ ಗರುಡಕಂಬವನ್ನು ಮತ್ತೆ ಸಿಂಹನ ಸೇವಿಸಿ ದಿವ್ಯ ನಾರಸಿಂಹನ ಸೇವೆಸಿ 8 ವಿಷ್ಣುಚಿತ್ತರ ಪುತ್ರಿಯನ್ನು ಅರ್ಥಿಯಿಂದಲೆ ಸೇವಿಸಿ ಮುಕ್ತಿದಾಯಕ ರಂಗನ ಪಾದಕೆ ಮುದದಿ ವಂದನೆ ಮಾಡಿದೆ ನಾ ಮುದದಿ ವಂದನೆ ಮಾಡಿದೆ 9 ಯಾಮುನಾಚಾರ್ಯರಿಗೆ ವಂದಿಸಿ ಕಾಂಚೀಪೂರ್ಣರಿಗೆರಗುವೆ ವೇದಾಂತಾಚಾರ್ಯರ ವಂದನೆ ಮಾಡಿ ಅನಾದಿ ಪಾಪವ ಕಳೆದೆನೊ ನಾ ಅನಾದಿ ಪಾಪವ ಕಳೆದೆನೊ 10 ಭಾಷ್ಯಕಾರರ ಚರಣಕೆರಗಿ ವರಯೋಗಿಗಳಿಗೆ ವಂದಿಸಿ ಕುಲೇಶ ದಾಶರಥಿಗೆ ವಂದಿಸಿ ದ್ವಾರಪಾಲಕರ ನೋಡಿದೆ ನಾ ದ್ವಾರಪಾಲಕರ ನೋಡಿದೆ 11 ಗಂಟೆಬಾಗಿಲ ದಾಟಿ ಶ್ರೀವೈಕುಂಠವಾಸನ ಭಕ್ತರು ಹದಿ ನೆಂಟು ಆಳ್ವಾರುಗಳ ಸೇವಿಸಿ ಕಂಟಕಗಳ ಕಳೆದೆನೊ ಭವ ಕಂಟಕಗಳ ಕಳೆದೆನೊ 12 ಮಾಧವ ಅನಂತ ಶ್ರೀಪದ್ಮನಾಭನ ಸೇವಿಸಿ ಶ್ರೀರಾಮ ಲಕ್ಷ್ಮಣ ಭರತ ಶತ್ರುಘ್ನ ಸೀತೆಯನು ನಾ ನೋಡಿದೆ ಲೋಕಮಾತೆಯನು ನಾ ಬೇಡಿದೆ 13 ಆದಿಶೇಷನ ಮೇಲೆ ಮಲಗಿದ ಅನಾದಿರಂಗನ ಸೇವೆಗೆ ಕುಲ ಶೇಖರರ ಸ್ಥಾನದಲಿ ನಿಂದು ಯದುಕುಲೇಶನ ನೋಡಿದೆ ನಾನೆದುಕುಲೇಶನ ನೋಡಿದೆ 14 ಅನಿರುದ್ಧ ಸಹಿತಲೆ ಎಡದಿ ಸಾತ್ಯಕಿ ಪಂಚಮೂರ್ತಿಗಳ ನಡುವೆ ಪಾರ್ಥಸಾರಥಿ ಯೆಡಬಲದಿ ಶ್ರೀದೇವಿ ಭೂದೇವಿ 16 ಆದಿಶೇಷನ ಮೇಲೆ ತನ್ನಯ ಪಾದವನ್ನು ಪ್ರಸÀರಿಸಿ ವಿ ಅಂದುಗೆ ಗೆಜ್ಜೆ ಕುಂದಣದ ಪಾಡಗಗಳು ಆನಂದದ ಪಾಡಗಗಳು 17 ಕನ್ನಡಿಯಂದದಿ ಕಣಕಾಲುಗಳು ಉನ್ನತವಾದ ಪೀತಾಂಬರವು ಪನ್ನಗಶಯನನ ವಡ್ಯಾಣದಲಿ ಪರಮಮೂರ್ತಿಯ ಸರಗÀಳು ಶ್ರೀಮೂರ್ತಿ ಸರವನು ಸಿಕ್ಕಿಸಿ 18 ದುಷ್ಟನಿಗ್ರಹವನ್ನು ಮಾಡಿ ಶ್ರೇಷ್ಠರನ್ನು ಪರಿಪಾಲಿಪ ಶ್ರೀ ಕೃಷ್ಣಮೂರುತಿಯ ಎಡದ ಭಾಗದಿ ಶ್ರೇಷ್ಠವಾದ ಖಡ್ಗವು ಸರ್ವಶ್ರೇಷ್ಠವಾದ ಖಡ್ಗವು 19 ಸಿಂಧುರಾಜನ ಕೊಲ್ಲುವುದಕಾಗಿ ಅಂದು ಚಕ್ರವ ಕಳುಹಿದೆ ಒಂದು ಕೈಯಲಿ ಪಾದವ ತೋರುತ ಮತ್ತೊಂದು ಕೈಯಲಿ ಶಂಖವು ಅನಂದದಿಂದಲೆ ಶಂಖವು 20 ಸೃಷ್ಟಿಯೆಳಗ್ಹದಿನಾಲ್ಕು ಲೋಕವ ಪಕ್ಷಿವಾಹನವಂ ಬಿಟ್ಟು ವಕ್ಷಸ್ಥಳದಲಿ ಲಕ್ಷ್ಮಿದೇವಿಯ ರತ್ನಾದ್ಹಾರದಪದಕವು ನವರತ್ನದ್ಹಾರದ ಪದಕವು 21 ಕಂಠದೊಳಗಿಟ್ಟ ಕೌಸ್ತುಭಮಣಿ ಎಂಟುಪುಷ್ಪದ ಹಾರವು ವೈ ಕುಂಠವಾಸನ ಸೇವಿಸಿದರೆ ಕಂಟಕಂಗಳು ಕಳೆವುದು ಭವಕಂಟಕಗಳು ಕಳೆವುದು 22 ಕುಂದಕುಸುಮದಂತೆ ದಂತವು ಪವಳದಂತೆ ಅಧರಕಾಂತಿಯು [ಚೆಂದದಿ] ಪೊಳೆವ ಕರ್ಣಕುಂಡಲ ಚೆಲುವ ನಾಸಿಕದಂದವು ತಿಲಕುಸುಮನಾಸಿಕದಂದವು 23 ದೀಪದಂದದಿ ಕರುಣನೇತ್ರವು ಚಾಪದಂದದಿ ಪುಬ್ಬುಗಳಲಿ ವಿವೇಕವಾಗಿ ತೋರ್ಪುದು 24 ಪದುಮನಾಭನ ಸೇವಿಸಿದವರಿಗೆ ಒದಗಿ ಬರುವುದು ಮುಕ್ತಿಯು ಎಲ್ಲರಿಗೊದಗಿ ಬರುವುದಿಷ್ಟಾರ್ಥವು 25 ಪಾದದಿ ಕೇಶದ ಸೇವೆಯನು ಮಾಡಿ ಅನಾದಿಪಾಪವ ಕಳೆದೆನೊ ವೇದಮೂರುತಿ ವೆಂಕಟಕೃಷ್ಣನೆ ಪಾದವನ್ನು ತೋರಿಸು ನಿಮ್ಮ ಶ್ರೀ ಪಾದವನ್ನು ತೋರಿಸು 26
--------------
ಯದುಗಿರಿಯಮ್ಮ
ಬ್ರಹ್ಮಾದಿದೇವಗಣ ನಮಿತ ಪಾದಯುಗಳನೆ ನಿನಗೆ ರಂಗಧಾಮನೆ ಪ ಸುಮನಸರೊಡೆಯನೆ ಕಮಲಾಪತಿಯೆ ಅ.ಪ. ಗೋಪಾಲ ಬಾಲಕಿಯರ ಮನಕುಮುದ ಚಂದ್ರನೆ ನಿನಗೆ ರಂಗಧಾಮನೆ ಕಪಟ ರಕ್ಕಸರನು ಮಡುಹಿದನೆ 1 ಕಾವೇರಿ ತೀರದಲ್ಲಿ ನಿಂದ ಪಾವನರೂಪನೆ ಹಾವಿನಹÉಡೆಯೊಳ್ಕುಣಿದವನೆ ಸನ್ಮಂಗಳಂ ನಿನಗೆ ರಂಗಧಾಮನೆ ನಮ ತೋಹನಾಂಗೀಯ ರಾಮನಾಪಹಾರಿಯೆ 2 ಮಾನಿನಿ ದ್ರೌಪದಿಯ ಮಾನವನ್ನು ಕಾಯ್ದನೆ ನಿನಗೆ ರಂಗಧಾಮನೆ ದಿನಕರ ಕೋಟಿತೇಜನೆ ರಂಗೇಶವಿಠಲನೆ 3
--------------
ರಂಗೇಶವಿಠಲದಾಸರು