ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನ್ನ ಸ್ಮರಣೆ ತಾನರಿಯದ ಮನವು ಚಿನುಮಯ ರೂಪನ ಬೆನ್ನವಿಡಿವುದುಂಟೆ ಪ ಹಾವಿನ ಹೆಜ್ಜೆಯ ಹಾವರಿವಂದದಿ ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ ಗೋವಳನಿಲ್ಲದ ಗೋವಿನ ತೆರನಂತೆ ಜೀವನುಂಗುವ ವ್ಯಾಘ್ರನಗ್ರಕೆ ಸುಳಿಯಲು 1 ಕನ್ನಡಿ ಶುದ್ಧವಾಗಿಯೆ ಕಾಣದ ದೃಷ್ಟಿ ಚಿನ್ನವಾರಿಕೆಯನ್ನು ಮಾಡುವ ಪರಿಯು ನಗದ ಮನ ಮನ್ನಣೆಯಿಲ್ಲದ ಮನೆಯೊಳುಂಬರೆ ಹೇಸ2 ಹೇಳಿದ ಮಾತನು ಕೇಳಿ ಮಾನಸದೊಳು ಮೇಳವಾಗುವೆನೆಂದು ಖೂಳತನದಿ ಪೋಗಿ ಕೇಳಿದ ಉತ್ತರಕುತ್ತರ ಹರಿಸದೆ ಆಳು ಬಾವಿಯ ಹಾರಿ ಹೊಳಚುವ ತೆರನಂತೆ 3 ಕಾಗೆಯು ಗರುಡನ ಸರಿಯೆಂದು ಜೂಜಾಡಿ ಸಾಗರವನು ಹಾರಿ ನಡುವೆ ಬಿದ್ದಂದದಿ ಯೋಗಿಯ ಪರಿಯಂತೆ ತಪವೆಂದು ತನ್ನಯ ಮೂಗ ಮುಚ್ಚಲು ಭವರೋಗ ಹಾರುವುದಂತೆ 4 ಮೀಸಲಿಗೊದಗುವ ಶೇಷಗಿರೀಶನ ಆಸೆಯಗ್ರಾಸವ ಬೇಡಿಕೊಳ್ಳದ ಮನ ಸಾಸಿರ ವೆಗಡದ ಭಾಂಡದೊಳೋಗರ ಬೇಯಿಸಿ ಭುಂಜಿಪೆಯೆಂದು ಮೋಸ ಮಾಡುವದಿಂದು 5 ಚಿತ್ರಿಕ ರಚಿಸಿದ ಸೇನೆ ಸೇನೆಗಳಲ್ಲ ಪ್ರಸ್ತುತಕೊದಗುವದೆನುತಿಹ ರಾಯನ ಮುತ್ತಿಕೊಂಡಿಹ ಪರಸೇನೆಯ ಇದಿರೊಳು ಮೃತ್ಯುದೇವತೆ ಬಂದು ಮೂದಲಿಸುವಳೆಂದು6 ಮೊಸರನ್ನ ತನ್ನ ಕೈಯೊಳಗಿದ್ದಂತೆ ಹಸಿವಾದ ವೇಳ್ಯದಿ ಹಸಿಯ ಮೆಲ್ಲುವದೇಕೆ ಕುಶಲದಿ ನೆನೆಯಲು ಹಸನದಿ ಸಲುಹುವ 7
--------------
ವರಹತಿಮ್ಮಪ್ಪ
ನಲಿನಲಿದು ಬಾ ತ್ರಿಜಗದಾಂಬೆ ಪ. ಮಾನಸದೊಳು ಸುಜ್ಞಾನಬೋಧಳಾಗಿ ಆತನದೇವಕದಂಬೆ ಅ.ಪ. ವಿದ್ಯಾ ಬುದ್ಧಿ ವಿನಯ ಮಂಗಳಗಳ ಸಾಧ್ವಿ ನಿನ್ನಲಿ ಬೇಡಿಕೊಂಬೆ 1 ನಲಿದೆನ್ನಯ ಜಿಹ್ವಾಗ್ರದಿ ನೆಲಸುತ ಸುಲಭದೋರೆಯೆ ಸುಲಲಿತವ ಶಿವೆ 2 ಧೀರ ಲಕ್ಷ್ಮೀನಾರಾಯಣಾಶ್ರಿತೆ- ಪರಮೇಷ್ಠಿಪರಿರಂಭೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರೋ ಗೋಪಿಯ ಬಾಲಾ ಮಾನಸದೊಳುತೋರಿಸೋ ಮುಖಕಮಲಾ ಪ ಸೇರಿಸೊ ನಿನ್ನ ಪದ ಸಾರಸಯುಗಳ-ಪಾರ ಸದ್ಗುಣ ಶೀಲ ಅಪ್ಪಯ್ಯ ಕೃಷ್ಣಅ.ಪ. ವಕ್ತ್ರಲಂಬಿತವಾಲಾ ಮಣಿಮಯ ಚಿತ್ರಶೋಭಿತ ಭಾಲಾರತ್ನಕುಂಡಲ ನವಮೋಕ್ತಿಕ ಮಾಲಾ ಭೃತ್ಯಭಾಷಿತ ಪಾಲಾ 1 ಶುಭ ವೇಷಾಶಂಕರಮುಖ ಸುರಾತಂತಂ ವಿನಾಶ ಕಿಂಕರ ಜನ ಘೋಷ 2 ವೇದವನಿತ್ತವನೇ ವಾರಿಧಿಯೊಳು ಭೂಧರ ಪೊತ್ತವನೆಮೇದಿನಿಯನು ಕೋರಿಲ್ಯಾ ಧರಿಸಿದನೇ ನರ ಮೃಗದಾ ಮೊಗದವನೆ 3 ಧಾರುಣಿ ಅಳೆದವನೆ ಭಾರ್ಗವ ಸೀತಾ ಚೋರನ ಗೆಲಿದವನೆ ನಾರಿಮೋಹನ ಜಿನಾಚಾರ್ಯ ಸುತನೆ ಘೋರ ಮ್ಲೇಂಛರ ಹರನೇ 4 ಸಾಮಜ ಶರಣಾ 5
--------------
ಇಂದಿರೇಶರು
ಮಾನಿನಿ ಕರೆದ ಪ ನನ್ನ ಕರೆವ ನೋಡೆ ನಿನ್ನ ಕರೆವ ನೋಡೆಅನ್ಯ ಗೋಪಿಯರನೆಲ್ಲ ಕರೆಯುತಾನೆಮನ್ಮಥನಂಘ್ರಿ ಇನ್ನು ಬಿಟ್ಟಿರಲಾರೆಸನ್ನುತಾಂಗಿಯರೆಲ್ಲ ಸಾಗಿ ಬನ್ನಿ 1 ವೇಣುಸ್ವರವು ತಮ್ಮ ಮಾನಸದೊಳು ತುಂಬಿಕಾನ ಮೇಲೆ ಮಾಡಿ ಕೇಳುತಾವಖಾನ ಪುಲ್ಲನೆ ಬಿಟ್ಟುವ ವೃಂದಗೋಷ್ಟದಿ ನಿಂತುಸ್ಥಾನದೊಳಗೆ ಕಣ್ಣಿ ಕೀಳುತಾವ 2 ಇಂದು ಪಿಡಿದು ಪೋಗಿಆನಂದವಾಲನ ಮುಖ ಕಾಂಬೋಣಮ್ಮಾಆನಂದವಾಲನ ಮುಖ ನೋಡೋಣಮ್ಮಾ 3
--------------
ಇಂದಿರೇಶರು
ಸರ್ವಾಂತರ್ಯಾಮಿ ನಿನಗೆ ಪ ದೇವತಿರ್ಯಗ್ ಮನುಷ್ಯಾದಿ ಜಂತುಗಳಲ್ಲಿ ದಿವಿಭುವಿ ಪಾತಾಳದೊಳ ಹೊರಗಿರುವಗೆ ಅ.ಪ ಪ್ರಾಣ ಪ್ರತಿಷ್ಟೆಗೋಳಕತ್ರಯ ಚಿಂತನೆ ನೀನೆ ಕರುಣದಿ ಮನ್ಮಾನಸದೊಳು ಪೊಳ- ದೇನೇನು ಮಾಡಿಸಲದು ನಿನಗರ್ಪಿತ 1 ಅಣುವಿನೊಳಣುವಾಗಿ ಮಹತ್ತಿನೊಳ್ಮಹತ್ತಾಗಿ ಎಣÉಸಲೆನ್ನಳವೆ ನಿನ್ನಯ ಮಹಾಮಹಿಮೆಯ ವಿನುತಿಸುವುದು ಕೊನೆಗಾಣದೆ ಶೃತಿ ತತಿ 2 ಶ್ವೇತದ್ವೀಪಾನಂತಾಸನ ವೈಕುಂಠ ಆ- ಪ್ರೀತಿಯಿಂದಲಿ ನಿನ್ನ ಭಜಿಸುತಿರುವ ಭಕ್ತ- ವ್ರಾತವ ಸಲಹುವ ಗುರುರಾಮವಿಠಲನೆ 3
--------------
ಗುರುರಾಮವಿಠಲ
ನಲಿನಲಿದು ಬಾ ತ್ರಿಜಗದಾಂಬೆ ಪ.ಮಾನಸದೊಳು ಸುಜ್ಞಾನಬೋಧಳಾಗಿಆತನದೇವಕದಂಬೆ ಅ.ಪ.ವಿದ್ಯಾ ಬುದ್ಧಿ ವಿನಯ ಮಂಗಳಗಳಸಾಧ್ವಿ ನಿನ್ನಲಿ ಬೇಡಿಕೊಂಬೆ 1ನಲಿದೆನ್ನಯ ಜಿಹ್ವಾಗ್ರದಿ ನೆಲಸುತಸುಲಭದೋರೆಯೆ ಸುಲಲಿತವ ಶಿವೆ 2ಧೀರ ಲಕ್ಷ್ಮೀನಾರಾಯಣಾಶ್ರಿತೆ-ಪರಮೇಷ್ಠಿಪರಿರಂಭೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ