ಒಟ್ಟು 5 ಕಡೆಗಳಲ್ಲಿ , 1 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈ ಭಾಗ್ಯ ನೋಡ ಒಯ್ಯಾರಿನಮ್ಮ ಸೌಭಾಗ್ಯ ಶ್ರೀ ಕೃಷ್ಣ ಕೈ ಸೇರಶೌರಿ ಪ. ಅರಳು ಅರಳು ಮೊದಲಾಗಿ ಏ ನಾರಿಸಕ್ಕರೆಯ ತಂದಿಟ್ಟು ಮಾರುವವರು ಕಡೆಯಿಲ್ಲ 1 ಕುಂಕುಮ ಅರಿಷಿಣ ಅಲಂಕಾರ ದ್ರವ್ಯವಅಂಕ ಅಂಕಣಕ ನೆರವ್ಯಾವ ಏನಾರಿ ಅಂಕ ಅಂಕಣಕ ನೆರವ್ಯಾವ ಬೆಲೆ ಮಾಡೊಕಂಕಣದ ಕೈಯ ಕೆಲದೆಯರು ಕಡೆಯಲ್ಲಾ ಏ ನಾರಿ 2 ಬುಕಿಟ್ಟು ಪÀರಿಮಳ ದ್ರವ್ಯ ಪೊಟ್ಟಣ ಕಟ್ಟಿತರಹತರಹ ಏ ನಾರಿಪೊಟ್ಟಣವ ಕಟ್ಟಿ ತರಹತರದ ದ್ರವ್ಯವ ಕೊಟ್ಟು ಕೊಂಬುವರು ಕಡೆಯಿಲ್ಲ ಏ ನಾರಿ3 ಸೋಜಿಗವಾಗಿದ್ದ ಜಾಜಿ ಮಲ್ಲಿಗೆ ಹೂ ಸೂಜಿ ಮಲ್ಲಿಗೆ ಸರಗಳು ಸೂಜಿ ಮಲ್ಲಿಗೆ ಸರಗಳ ರಂಗನ ಪೂಜೆಗೊಯ್ವೊ ಪುರುಷರು ಏ ನಾರಿ4 ನಾಲ್ಕು ದಿಕ್ಕಿಗೆ ದಿವ್ಯ ಆಕಳ ಹಿಂಡುಗಳು ಸಾಕುವ ಎರಳೆ ಎಳಿಗಾವು ಏ ನಾರಿಸಾಕುವ ಎರಳೆ ಎಳಿಗಾವು ಹೂಂಕರಿಸಿ ಬಾಹೋ ಚಲ್ವಿಕೆಯ ಏ ನಾರಿ 5 ಎತ್ತೆತ್ತ ನೋಡಿದರೂ ಮುತ್ತಿನ ಪಲ್ಲಕ್ಕಿಉತ್ತಮ ರಥವ ಹಿಡಿದೇಜಿ ಏ ನಾರಿಉತ್ತಮ ರಥವ ಹಿಡಿದೇಜಿ ಮ್ಯಾಲಿನ್ನು ಹತ್ತಿ ಬಾಹುವರು ಕಡೆಯಿಲ್ಲ ಏ ನಾರಿ6 ಬಾಜಾರದೊಳಗಿನ್ನು ರಾಜಸಿಂಹಾಸನ ರಾಜ ರಾಮೇಶ ಕುಳಿತಲ್ಲಿಯೆ ಏ ನಾರಿ ರಾಜ ರಾಮೇಶ ಕುಳಿತು ಪೂಜೆಗೊಂಬೊಮೂರ್ಜಗವು ಮುದದಿಂದ ಏ ನಾರಿ7
--------------
ಗಲಗಲಿಅವ್ವನವರು
ನಗರ ಎಂಥನಗರ ನಿಂತು ವರ್ಣಿಸಬೇಕುಶ್ರೀಕಾಂತೆಯಿಂದ ಇಂತು ರಮಿಸುವುದು ಪ. ಮುಂದಕ್ಕೆ ನೋಡಲು ಹೊಂದಿದ್ದ ಮನೆಗಳುಹಂದರದ ಜಗಲಿ ಸುಳಿಗೊಳಹಂದರದ ಜಗಲಿ ಸುಳಿಯೆಲಿ ಬೀದಿಯಲಿತುಂಬಿದ ಜನರು ಕಡೆಯಿಲ್ಲ 1 ಅತ್ತಿತ್ತ ನೋಡಲು ಕಾಣುವ ಗೋಪುರಮುತ್ತಿನಂಗಡಿ ಎಡಬಲಮುತ್ತಿನಂಗಡಿ ಎಡಬಲ ನೋಡುತ ಕತ್ತೆತ್ತಿ ನೋಡಿದರೂ ಕಡೆಯಿಲ್ಲ 2 ಕೋಗಿಲದ ಸ್ವರದಂತೆ ಮಕ್ಕಳ ಜೋಗುಳಹಾಡುತೆ ಮನೆ ಬಾಗಿಲ ಮುಂದೆಹಾಡುತೆ ಮನೆಮುಂದೆ ಮಕ್ಕಳಲಾಲಿ ಪಾಡುವರು ಕಡೆಯಿಲ್ಲ3 ನವನೀತ ಭಾರವ ವಹಿಸಿ ಕೆಲರುಭಾರವ ವಹಿಸಿ ಕೆಲರು ಅಲ್ಲಲ್ಲಿಸಾರಿ ಮಾರುವವರು ಕಡೆಯಿಲ್ಲ4 ಹಸಿರು ಬಳೆತೊಟ್ಟು ಕುಸುರಿನ ಸಿಂಬೆಯಲಿಮೊಸರ ಗಡಿಗೆ ಎಸಗುತಮೊಸರ ಗಡಿಗೆ ಎಸಗುತ ಮಾರುವ ಬಿಸಜನೇತ್ರಿಯರು ಕಡೆಯಿಲ್ಲ 5 ಬಿಳಿಯ ದಟ್ಟಿಯುಟ್ಟು ಸಣ್ಣ ಬುಟ್ಟಿಹೊತ್ತುಕಣ್ಣು ಕಜ್ಜಲದ ಕೆಲದೆಯರು ಕಣ್ಣು ಕಜ್ಜಲದ ಕೆಲದೆಯರು ಕೂಗುತಹಣ್ಣು ಮಾರುವವರು ಕಡೆಯಿಲ್ಲ 6 ಅಮ್ಮಮ್ಮ ರಮಿಯರಸು ಒಮ್ಮೊಮ್ಮೆ ಬೀದಿಲೆಸುಮ್ಮನೆ ಸುಳಿವ ಯಮಕದಿಸುಮ್ಮನೆ ಸುಳಿವ ಯಮಕದಿ ಶ್ರೀಕೃಷ್ಣತನ್ನ ಭಕುತರನ ಸಲುಹಲಿ 7
--------------
ಗಲಗಲಿಅವ್ವನವರು
ಮಾರಜನಕನ ಮಾರಿ ನೋಡುತಸುಖವ ಸೂರೆಗೊಂಡರೆನೀರೆ ದ್ವಾರಕಾಪುರದವರು ಪ. ದಟ್ಟಾದ ಬೀದಿಯಲಿ ಪಟ್ಟಾವಳಿಯ ಜವಳಿ ಇಟ್ಟು ಮಾರುವರು ಕಡೆಯಿಲ್ಲಇಟ್ಟು ಮಾರುವರು ಕಡೆಯಿಲ್ಲದ್ವಾರಕಾಶೆಟ್ಟರ ಭಾಗ್ಯ ಸರಿಗಾಣಿ1 ಅಚ್ಚ ಜರತಾರಿ ಹೆಚ್ಚಿನ ಜವಳಿಯಚಿತ್ರದ ಮಲ್ಲಿಗೆ ನಡುವಿಟ್ಟಚಿತ್ರದ ಮಲ್ಲಿಗೆ ನಡುವಿಟ್ಟು ಅಲ್ಲಲ್ಲಿಹಚ್ಚಿ ಮಾರುವವರು ಕಡೆಯಿಲ್ಲ 2 ಜವಳಿ ಅಂಗಡಿ ಮುಂದೆ ಹವಳಗಾರರು ಅಲ್ಲಿ ಕೊಳ್ಳುವ ನಾರಿಯರು ಕಡೆಯಿಲ್ಲ ಕೊಳ್ಳುವ ನಾರಿಯರು ಕಡೆಯಿಲ್ಲ ದ್ವಾರಕಾಕಳೆಯ ವರ್ಣಿಸಲು ವಶವಲ್ಲ 3 ಕಂಚು ಹಿತ್ತಾಳೆ ಮಾರುವ ಕಂಚುಗಾರರಂಗಡಿಸಂಚಿತವಾದ ನವಧಾನ್ಯಸಂಚಿತವಾದ ನವಧಾನ್ಯ ಅಲ್ಲಲ್ಲಿಹಚ್ಚಿಮಾರುವವರು ಕಡೆಯಿಲ್ಲ4 ರಂಗ ರಾಮೇಶನ ನಗರೀಲೆ ಬಂಗಾರ ಬೆಳ್ಳಿ ಬೆಲೆ ಮಾಡಿಬಂಗಾರ ಬೆಳ್ಳಿ ಬೆಲೆ ಮಾಡಿ ಮಾರುವ ರಂಗದುಟಿಯವರುಕಡೆಯಿಲ್ಲ 5
--------------
ಗಲಗಲಿಅವ್ವನವರು