ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದ್ವಾದಶನಾಮ ಸ್ತುತಿ ನಿನ್ನ ನೋಡಿ ಧನ್ಯನಾದೆನು ಶ್ರೀರಂಗನಾಥ ಪ ನಿನ್ನ ನೋಡಿ ಧನ್ಯನಾದೆ ಪನ್ನಗಶಯನ ರಂಗ ಮನ್ನಿಸಿ ರಕ್ಷಿಸು ಎನ್ನ ಮುನ್ನಜನ್ಮ ಬಾರದಂತೆ ಅ.ಪ. ಅರ್ಚ ಶೇಷಶಯನ ಲಕ್ಷ್ಮಿಗೆರಗಿ ಕೇಶವ ನಿಮ್ಮ ಸ್ತುತಿಸುವೆ 1 ಆದಿಸೃಷ್ಟಿಯಲ್ಲಿ ಬ್ರಹ್ಮನ ನಾಭಿಕಮಲದಲ್ಲಿ ಸೃಷ್ಟಿಸಿ ವೇದಸಾರವಾದ ಪ್ರಣವ ಓದಿ ಪೇಳಿದ ನಾರಾಯಣ 2 [ಆರ್ತಿ]ಯಿಂದ ಅಜನು ನಿಮ್ಮ ಮೂರ್ತಿಗಾಗಿ ತಪವ ಮಾಡೆ ಮಧುವೈರಿ ಮಾಧವಾ 3 ಪ್ರಣವಾಕಾರ ವಿಮಾನದಲ್ಲಿ ನಾಲ್ಕು ವೇದಶೃಂಗವಿರಲು [ವಿಷ್ಣು] ಪರವಾಸುದೇವರಿಂದ ಬಂದ ಶ್ರೀಗೋವಿಂದ 4 ಸತ್ಯಲೋಕದಲ್ಲಿ ನಿಂತು ನಿತ್ಯಪೂಜೆಯನ್ನು ಗ್ರಹಿಸಿ ಮತ್ತೆ ಇಕ್ಷ್ವಾಕುಗೊಲಿದ ವಿಶ್ವಮೂರುತಿ ವಿಷ್ಣುವೇ 5 ಸರಯು ತಮಸ ತೀರಮಧ್ಯದಿ ಹರಿಯೆ ನಿಮ್ಮನಿರಿಸಿ ದೊರೆಯು ಪರಮಪುರುಷನಿಂದ ಪೂಜೆ ಗ್ರಹಿಸಿದ ಮಧುಸೂದÀನ 6 ರಾಜ್ಯಾಭಿಷೇಕ ಕಾಲದಲ್ಲಿ ರಾಮಚಂದ್ರರು ರಾಕ್ಷಸೇಂದ್ರಗೆ ಕೊಡಲು [ರಾಜ್ಯವ] ಕಾವೇರಿ ಮಧ್ಯದಿನಿಂದು ತ್ರಿಜಗವಳೆದ ತ್ರಿವಿಕ್ರಮ 7 ಫಾಲ್ಗುಣ ಮೀನ ಉತ್ತರ ಫಲ್ಗುನೀ ನಕ್ಷತ್ರದಲ್ಲಿ ಬಾಲನಾಗಿ ಚಂದ್ರಪುಷ್ಕರಿಣಿ ತೀರದಿ ನಿಂದ ವಾಮನ 8 ಜಾಮಾತನೆನಿಸಿ ಗ್ರಹಿಸಿ[ದ] ಶ್ರೀದೇವಿ ಸಹಿತ ಶ್ರೀಧರ 9 ಮಳೆಯನಿಟ್ಟು ಧ್ವಜವಕಟ್ಟಿ ಸುರರ ಕರದು ಯಾಗವ ಮಾಡಿ ಯಾತ್ರದಾನದ [ತಳೆದ] ಹೃದಯವಾಸ ಹೃಷಿಕೇಶವ 10 ವೀರ ಮರುದಿನದಿ ಜಟಾಶೋಧಕರ ಮಂಟಪದಿ ನಿಂದು (?) [ಧೀರ] ಮುದುಕಿಗೊಲಿದು ದಧ್ಯಾನ್ನವ ಉಂಡ ಶ್ರೀಪದ್ಮನಾಭ 11 ನಾಲ್ಕು ದಿವಸದಲ್ಲಿ ನಾಗವೈರಿಯನ್ನು ಏರಿಬಂದು ಕಲ್ಪವೃಕ್ಷವು ಸರ್ಪವಾಹನ ಏರಿದ ದಾಮೋದರ 12 ಆರು ದಿವಸದಲ್ಲಿ ವರಿಯೂರಿಗೆ ಹೋಗಿ ನಿಮ್ಮ ಸಂತೈಸಿ ಮಾಲೆಧರಿಸಿದ ಸಂಕರ್ಷಣ 13 [ಮಾರನೆ] ದಿವಸದಲಿ ಚೂರ್ಣಾಭಿಷೇಕವನು ಧರಿಸಿ ವಾಸುದೇವ 14 ಎಲ್ಲೇಕೆರೆಗೆ ಪೋಗಿ ಭೂಮಿಯೆಲ್ಲ ನೋಡಿ ಹರುಷದಿಂದ ಅ[ಲ್ಲೆ] ತೇಜಿಯನೇರಿ ತೇರಿನೆದುರೆ ಪೇರಿಬಿಟ್ಟ ಪ್ರದ್ಯುಮ್ನ 15 ಪಂಗುನ್ಯತ್ತರವು ಬರಲು ಉಂಗುರವನು ಬೇಡಿತಂದು ಅನಿರುದ್ಧ 16 ತಿಂದ ಪಂಜಿನಪ್ರಹಾರ ಹರುಷದಿಂದ ಪುರುಷೋತ್ತಮ 17 ಪತ್ನಿಯೊಡನೆ ಪ್ರೇಮಕಲಹ ಅರ್ತಿಯಿಂದ ಮಾಡುತಿರಲು ವಿಷ್ಣು ಚಿತ್ತರ ವಾಕ್ಯದಿಂದ ಅರಸಿಗೇರಿದಾ ಅಧೋಕ್ಷಜಾ 18 ಮಂದರೋದ್ಧರ ತನ್ನ ಇಂದಿರೆಸಹಿತವಾಗಿ ಬಂದು ಗೋರಥವನೇರಿ ನಾಲ್ಕುಬೀದಿ ಮೆರೆದ ನಾರಸಿಂಹ 19 ವಾರಿಜಾಕ್ಷ ರಥವನಿಳಿದು ಕಾವೇರಿಯಲ್ಲಿ ತೀರ್ಥವಿತ್ತು ದರ್ಪಣದ ಗೃಹದಿ ನಿಂದ ಅರ್ತಿಯಿಂದ ಅಚ್ಚುತ 20 ಸಪ್ತ ಆವರಣವೆಲ್ಲ ಶಬ್ದವಿಲ್ಲದೆ ಸುತ್ತಿ ಬಂದು ಭಕ್ತ ಭಾಷ್ಯಕಾರರಿಗೊಲಿದ ದುಷ್ಟಮರ್ದನ ಜನಾರ್ಧನ 21 ಪೃಥವಿಯೊಳಗಾಶ್ಚರ್ಯವಾದ ಪ್ರತಿಯಿಲ್ಲದ ಪಲ್ಲಕ್ಕಿಯೇರಿ ಅತಿಶಯದಿಂದ ಬಂದ ಉರಗಶಯನ ಉಪೇಂದ್ರ 22 ಅಂದು ಸುರರ ಛಂದದಿಂದ ಮಂದಿರಕ್ಕೆ ಕಳುಹಿ ರಂಗ ಬಂದು ಭಕ್ತರ ಪಾಪ[ವ] ಪರಿಹರಿಸಿದಾ ಶ್ರೀಹರಿ 23 ಅಷ್ಟು ಚರಿತ್ರೆಯನ್ನು ಕೇಳಿ ಕಟ್ಟಿದ ಕಂಕಣವ ಬಿಚ್ಚಿ ಶ್ರೇಷ್ಠವಾದ ಸ್ಥಾನದಲ್ಲಿ ಮಂತ್ರಿ ಸಹಿತನಿಂದ ಶ್ರೀಕೃಷ್ಣ 24 ದಕ್ಷಿಣಗಂಗೆಯಾಗಿ ನಿಂದು ಭಕ್ತನ ದ್ವೀಪವನ್ನು ನೋಡುತ ಮುಕ್ತಿಮಾರ್ಗವನ್ನು ತೋರಿದ ಭಕ್ತವತ್ಸಲ ವೆಂಕಟರಂಗ 25
--------------
ಯದುಗಿರಿಯಮ್ಮ
ಮಂಗಲಾರತಿಯ ಪಾಡಿರೇ | ರಂಗನಾಥರುಕ್ಮಿಣೀಗೆ ಪ ಸಿಂಧು ಸುತೆಗೇ | ಸೀತಾರಾಮಚಂದ್ರಗೇ | ಉಪೇಂದ್ರಗೇ ಅ.ಪ ಮತ್ಸ್ಯ ಕೂರ್ಮವರಹಾವತಾರಗೇ ಕರುಳ ಮಾಲೆಧರಿಸಿದಾ ಲಕ್ಷ್ಮಿನಾರಸಿಂಹಗೇ 1 ಬಲಿಯ ದಾನವನ್ನೇ ಬೇಡಿ ಮಾತೆ ಶಿರವನಳಿದವಗೇ ಜಗವತೋರ್ದವಗೇ 2 ಬೆತ್ತಲಾಗಿ ನಿಂತಿದ್ದ ಉತ್ತಮ ಬೌದ್ಧ ಕಲ್ಕಿಗೇ ಸೃಷ್ಟಿಗೊಡೆಯ ಬಳ್ಳಾರಿ ಲಕ್ಷ್ಮೀನಾರಸಿಂಹವಿಠಲಗೇ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ಶುಭ ಮಂಗಳ ತ್ರಯಭುವನ ವಂದ್ಯ ಸೀತಾಕಾಂತಗೆ ಪ ದಶರಥಾತ್ಮಜನಾಗಿನರಲೀಲಿ ನಟಿಸಿದಗ ಋಷಿಮುಖಕಾಯ್ದ ಹಿಲ್ಯೋದ್ದಾರಗ ಅಸಮಧನುಮುರಿದ ವನಿಜೆಯಾಮಾಲೆಧರಿಸಿದಗ ಬೀಸಜಲೋಚನ ಜನಕ ಜಾಮಾತಗ 1 ಮೂನವರನುಜರ ಕೂಡಿ ಕಲ್ಯಾಣವಿಡಿದಂಗ ದೇವಭೃಗುಪತಿ ಮನಾನಲಿಸಿದವಂಗ ಅವಿಭವಿ ಬಂದಯೋಧ್ಯಾ ಪುರವನಾಳ್ದಂಗ ಜೀವಜಾತಕಸುಖವ ಬಡಿಸಿದಂಗೆ 2 ಗುರು ಮಹೀಪತಿ ಸುತನ ಜೀವ್ಹದಲಿತಾನಿಲಿಸಿ ನಿರುಪಚಾರಿತ್ರ ನುಡಿಸಿದಂಗೆ ಧರೆಯೊಳಗ ದೀನ ಅನಾಥರನು ಪೊರೆವ ಪರಮ ಮಂಗಳ ನಾಮ ಶ್ರೀ ರಾಮಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸರಸಿಜಾಕ್ಷ ಸಾಧುಪಕ್ಷ ನಿರತ ನಿನ್ನ ನಂಬಿದೆ ಪ ವಿನುತ ಶ್ರೀಧರಾ ಕೃಪಾನಿದೆ.ಪ ಹಿರಣ್ಯ ತರಿದು ಕರುಳ ಮಾಲೆಧರಿಸಿದ ನರಹರಿ ಪತಿತ ಪಾವನ 1 ದಾನಕೊಟ್ಟಬಲಿಗೆ ಮೆಚ್ಚಿ ದ್ವಾರಪಾಲಕನಾದವನೆ 2 ಕರಿಯಪೊರೆದು ಕಾಂಚಿಪುರದೊಳಿರುವ ವರದರಾಜನೆ ಗುರುರಾಮ ವಿಠಲ ನೀನೆ ಶರಣ ಕಲ್ಪಭೂಜನೆ 3
--------------
ಗುರುರಾಮವಿಠಲ
ವಾಸುದೇವ ನಿನ್ನವರ್ಮ ಕರ್ಮಂಗಳದೇಶ ದೇಶದೊಳು ಹೇಳಲೆ ? ಪಬೇಸರಿಯದೆ ಎನ್ನ ಹೃದಯ ಕಮಲದಲ್ಲಿವಾಸವಾಗಿ ಸುಮ್ಮನಿರುವೆಯೊ ? ಅ.ಪಮತ್ಸರೂಪನಾಗಿ ಮನಸು ಕಾಣಿಸಿಕೊಂಡು ಮಕ್ಕಳತಿದ್ದಿದ್ದು ಹೇಳಲೆ ?ಉತ್ಸಾಹದಿಂದ ನಿಗಮವ ತಂದು ಬ್ರಹ್ಮಗೆ ಮೆಚ್ಚಿಕೊಟ್ಟದ್ದು ನಾ ಹೇಳಲೆ 1ಕಡಗೋಲು ಮಂಡೆಯಂದದಿ ಕೈಕಾಲು ಮುದುಡಿಕೊಂಡದ್ದು ನಾ ಹೇಳಲೆ ?ಕಡಲೊಳಗಿಂದ ಪಾತಾಳಕೆ ಇಳಿದಿಳೆ ಪಡೆದಾತನ ಸುದ್ದಿ ಹೇಳಲೆ 2ಹುಚ್ಚುಮನಸುಮಾಡಿ ಕಚ್ಚುತ ಕೆದರುತ ರಚ್ಚೆಯಿಕ್ಕಿದಸುದ್ದಿ ಹೇಳಲೆ ?ಮುಚ್ಚಿದ ಭೂಮಿಯ ಹಲ್ಲಿಂದ ಕಿತ್ತಿದ ಹೆಚ್ಚುತನವ ನಾನು ಹೇಳಲೆ 3ಕಂದನ ಮಾತಿಗೆ ಕಡುಕೋಪದಿಂ ಬಂದು ಕಂಬವನೊಡೆದದ್ದು ಹೇಳಲೆ ?ಕುಂದದೆ ಹಿರಣ್ಯಕಶಿಪುವಿನುದರ ಸೀಳಿ ಕರುಳ್ಮಾಲೆಧರಿಸಿದ್ದು ಹೇಳಲೆ 4ಬಾಲನಾಗಿ ಬ್ರಹ್ಮಚಾರಿ ವೇಷವ ತೋರಿ ಬಲಿಯ ಬೇಡಿದುದನು ಹೇಳಲೆ ?ಲೀಲೆಯಿಂದಲಿ ಧರೆಯಈರಡಿ ಮಾಡಿದ ಜಾಲತನ್ವನುನಾನು ಹೇಳಲೆ5ಹೆಸರಿಲ್ಲದೆ ಹೋಗಿ ಹೆತ್ತತಾಯ್ ತಲೆಕುಟ್ಟಿ ಕೊಡಲಿಯ ಪಿಡಿದದ್ದು ಹೇಳಲೆ ?ಸೋಸಿ ದೈತ್ಯರನೆಲ್ಲ ರೋಸಿ ಪ್ರಾಣವ ಕೊಂಡ ದೋಷತನವ ನಾನು ಹೇಳಲೆ 6ತಾಯ ಮಾತನೆಕೇಳಿ ತಮ್ಮನ ಒಡಗೂಡಿಅಡವಿಯೊಳಿದ್ದುದು ಹೇಳಲೆ ?ಮಾಯಾಸೀತೆಗಾಗಿ ರಾವಣನನು ಕೊಂದು ಮಹಿಮೆಯ ನೆರೆದದ್ದು ಹೇಳಲೆ ? 7ತರಳತನದಲಿ ದುರುಳನಾಗಿ ಬಂದ ಒರಳೆಳೆತಂದದ್ದು ಹೇಳಲೆ(ಬೆರಳಿಂದ ಗಿರಿಯೆತ್ತಿ ಕಂಸನ ಕೊಂದ ಆ ) ದುರುಳತನದ ಸುದ್ದಿ ಹೇಳಲೆ 8.............................................................................................................................................................................. 9ರಾಯ ರಾವುತನಾಗಿ ರಾಯರ ಮನೆ ಪೊಕ್ಕು ಕಡುಗವ ಪಿಡಿದದ್ದು ಹೇಳಲೆ ?ಆಯತದಿಂದ ಕಲಿಯಲಿದ್ದು ಮನುಜರ ಮಾಯವ ತೋರಿದ್ದು ಹೇಳಲೆ 10ಧರೆಯೊಳಗಧಿಕವಾದ ಉರಗಗಿರಿಯಲ್ಲಿ ಸ್ಥಿರಿವಾಗಿನಿಂತದ್ದು ಹೇಳಲೆ ?ಕರುಣದಿಂ ಭಕುತರ ಪುರಂದರವಿಠಲನೆಂದು ನಾ ಹೇಳಲೆ 11 *
--------------
ಪುರಂದರದಾಸರು