ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸಕೂಟ ವರ್ಣನೆ ಸಾಟಿಯುಂಟೆ ಶ್ರೀನಿವಾಸನ ದಾಸಕೂಟದ ಮ್ಯಾಳಕೆ ಬೂಟಕದ ಮಾತಲ್ಲ ಕೇಳಿರಿ ಭಜನೆ ಮಾಡುತ ತಾಳಕೆ ಪ. ವಾಸುದೇವನ ವರ್ಣಿಸಲು ಕಮಲಾಸನಾದಿ ಸುರೇಂದ್ರರು ದಾಸಜನರ ಸಮೂಹದೊಳಗಾವಾಸವಾಡುತ ನಲಿವರು ಸೂಸುತಿಹ ಗಂಗಾದಿನದಿಗಳು ಬ್ಯಾಸರದೆ ಬಂದಿರುವವು ಕೇಶವನ ಕೊಂಡಾಟ ಧರೆಯೊಳು ಮೀಸಲಳಿಯದೆ ಮಧುರವು 1 ಬಾರಿಸುತ ತಂಬೂರಿ ತಾಳವ ನಾರದರ ಸಂಸ್ಮರಿಸುತ ಭೂರಿ ಕಿಂಕಿಣಿ ಮದ್ದಳೆಯ ಶೃಂಗಾರ ರಸವನು ಸುರಿಸುತಾ ವಾರಿಜಾಕ್ಷನ ಪರಮಮಂಗಳ ಮೂರುತಿಯ ಮುಂದಿರಿಸುತ ಮಾರುತನ ಮತವರಿತು ಬಹುಗಂಭೀರ ಸ್ವರದಿಂದರುಹುತಾ 2 ಹಿಂದೆ ಗಳಿಸಿದ ಹಲವು ದುರಿತವು ಕುಂದುವುದು ನಿಮಿಷಾರ್ಧದಿ ಅಂದಿನಂದಿನ ದೋಷದುಷ್ಕøತವೊಂದು ನಿಲ್ಲದು ಕಡೆಯಲಿ ಇಂದಿರಾಧವ ಶೇಷ ಭೂಧರ ಮಂದಿರನು ಮಹ ಹರುಷದಿ ಮುಂದೆ ನಲಿವುತ ಮನಕೆ ಪೂರ್ಣಾನಂದವೀವನು ನಗುತಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ವಾಸುದೇವ ಹರಿ ವಿಠಲಾ | ಪೋಷಿಸುವುದಿವನಾ ಪ ನೀಸಲಹದಿರೆ ಅನ್ಯ | ಆಶ್ರಯಗಳುಂಟೇ ಅ.ಪ. ದಾಸವೃತ್ತಿಯಲಿದ್ದು | ಮೀಸಲಳಿಯದೆ ಇರುವದಾಸದೀಕ್ಷಾಂಕಿತವು | ಲೇಸು ದೊರೆಯದಲೇ |ಘಾಸಿ ಪಡುತಲಿ ಮನದಿ | ಆಶ್ರಯಿಸಿ ಎನ್ನ ಸುಪ್ತೀಶ ಸೂಚ್ಯಪರಿ ಉಪ | ದೇಶವಿತ್ತಿಹೆನೋ 1 ಒಂದೊಮ್ಮೆ ಇವನಮ್ಮ | ಬಂಧುವೆಂದೆಣಿಸಿಹನೊಇಂದಿರಾಪತಿ ಹರಿಯೆ | ಕಂದರ್ಪಜನಕಾತಂದೆತಾಯಿಯು ನೀನೆ | ಕುಂದುನೆಣಿಸದೆ ಇವನಾಛಂದದಲಿ ಸಲಹೊ ಹರಿ | ನಂದ ಮುನಿವಂದ್ಯಾ 2 ತಾರತಮ್ಯಜ್ಞಾನ ಮೂರೆರಡು ಭೇದಗಳವಾರವಾರಕೆ ತಿಳಿಸಿ | ಕಾಪಾಡೊ ಹರಿಯೇ |ಮಾರಪಿತಮುರಮೈರಿ | ವೈರಾಗ್ಯ ಭಾಗ್ಯಕ್ಕೆದಾರಿತೋರುತ ಪೊರೆಯೊ | ವಾರಿಜಾಂಬಕನೇ 3 ಉತ್ತಮಾನುಷ್ಠಾನ | ಇತ್ತು ಈತಗೆ ನೀನುಚಿತ್ತದೊಳು ವ್ಯಾಪ್ತ ಸ | ರ್ವತ್ರ ಸ್ಮøತಿಯಿತ್ತು |ಎತ್ತು ಭವವನಧಿಯಿಂ | ಕೃತ್ತಿವಾಸನ ತಾತಮತ್ತನ್ಯ ಬೇಡೆ ನಿನ | ಚಿತ್ತದೊಲ್ಲಭನೇ 4 ದೇವ ದೈತ್ಯರು ದೇಹ | ಆವಾಶಿವಿಹರೆಂಬಭಾವಗಳ ತಿಳಿಸುತ್ತ | ತೀವ್ರುಪಾಸನವಾ |ದೇವ ಇವಗಿತ್ತು ಸಂ | ಭಾವಿಪುದು ಶ್ರೀಹರಿಯೆಗೋವಿಂದಾಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀಧರಾಕರ ಕಂಜ ಸೇವಿತ ಪಾದ ಪದ್ಮಜ ಪದದ ಪುರು ಕರು- ಣೋದಧಿಯೆ ಲಾಲಿಪುದು ಪಾಮರನೆಂಬ ಬಿನ್ನಪವ ಸೋದರ ಸ್ಥಿತ ಸಕಲ ಬ್ರಹ್ಮಾಂ- ಪತಿ ನೀನರಿವಿಯಾದರು ಮಾಧವನೆ ಮನದಿರವ ಪೇಳ್ವೆನು ಮನುಜಭಾವದಲಿ 1 ಸುಕೃತ ಫಲವೋ ದೋಷದೂರನೆ ನಿನ್ನ ಪದವನು ಮೀಸಲಳಿಯದೆ ಸೇವೆ ಮಾಳ್ವದು ಲೇಸುಲೇಸೆಂದು ದಾಸಕೂಟದಿ ಸೇರಿ ಮನೆಯಲಿ ವಾಸವಾಗಿರಲಿದರ ಮಧ್ಯಮ ರಾಶೆ ಬಲೆಯಲಿ ಸಿಲುಕಿದೆನು ಕರುಣಾ ಸಮುದ್ರಹರಿ 2 ತನ್ನಿಕೃಷ್ಟ ಮನೋವಿಕಾರಗ- ಳಿನ್ನು ಬಿಡದಲೆ ಪೀಡಿಸುವ ಪರಿ ಯನ್ನು ಪರಮ ಕೃಪಾಳು ನೀನೆಂದೊರವೆನಖಿಳೇಶ ಮಾನ್ನವರ ಮಧ್ಯದಲಿ ಮಾನದಿ ಎನ್ನ ಕಾಪಾಡುವದು ಭಾರವೆ ತನ್ನ ಫಲಗಳ ತಾನೆ ಕೆಡಹುವದುಚಿತವೇ ತೆಗೆ 3 ಯುಕ್ತಿಯಲಿ ನಿನ್ನಂಥ ದೇವರ ರೆತ್ತಿ ವೈದಮೃತವನು ಸುಲಭದೊಳಿತ್ತೆ ದಿವಿಜರಿಗೆ ಔತ್ತರೇಯನ ಕಾಯ್ದ ದ್ರೌಣಿಯ ನೆತ್ತಿಯೊಳಗಿನ ರತ್ನ ಭೀಮನಿ ಗಿತ್ತ ಪರಿಯನು ಪಠಿಸಿ ತಿಳಿದೆನು ಪಾವನಾತ್ಮಕನೆ 4 ಬ್ರಹ್ಮತೇಜೋ ವೃದ್ಧಿ ಬಲಿಯೊಳು ಬ್ಯಾಡ ಸಂಗರ ನಮಗೆನುತ ನಿ- ಮ್ಮಮ್ಮನೊಳ್ ನುಡಿದಂದು ಕಶ್ಯಪನಿಂದಲವತರಿಸಿ ಬ್ರಹ್ಮಚಾರಿಯ ರೂಪದಿಂದೀ ಕ್ಷಮ್ಮೆಯನು ಸೆಳೆದಿಂದ್ರಗಿತ್ತಮ- ಹಾನ್ಮಹಿಮ ನಿನಗಾವದಘಟಿತ ನೀರಜಾರಮಣ5 ನಾರದರ ನುಡಿ ನಿಜವೆನುತ ಮೂ- ರಾರು ಭಕ್ತಿಯ ತಾಳ್ದ ಮನುವಿನೊ- ಳಾರುಭಟಿಸುತ ಕಾಶ್ಯಪನು ಮದವೇರಿ ನಿಂದಿರಲು ಯಾರು ತಿಳಿಯದ ತೆರದಿ ಕಂಭದಿ ಮೃಗ ರೂಪವನು ಹೆ- ಮ್ಮಾರಿ ದೈತ್ಯನ ತರಿದು ತ್ವತ್ಪದವಿತ್ತೆ ದಾಸನಿಗೆ 6 ಏನು ಶ್ರಮವಿಲ್ಲದಲೆ ಪಿಡಿದು ದ- ಶಾನನನ ತೊಟ್ಟಿಲಿಗೆ ಕಟ್ಟಿ ಪ್ರ- ವೀಣತೆಯ ತೋರಿಸಿದ ವಾಲಿಯ ಪಕ್ಷವನು ತ್ಯಜಿಸಿ ದೀನ ಬಾಂಧವನೆಂಬ ಬಿರುದನು ದಿಟವೆ ನಿಶಿತದ್ರಾಜ್ಯ ಪದವಿಯ ಭಾನುಜನಿಗೊಲಿದಿತ್ತ ಭಕ್ತಜನಾರ್ತಿ ಭಂಜನನೆ 7 ಶಬ್ದಗೋಚರವಾದ ಕಥೆಗಳು ಬದ್ಧವೆಂಬುದು ಪೂರ್ವದನುಭವ ಸಿದ್ಧವಾಗಿಹುದೆನಗೆ ಸಜ್ಜನಲಬ್ಧಪದ ಪದ್ಮ ಬುದ್ಧಿಹೀನತೆಯಿಂದ ನುಡಿದರು ಮಧ್ವವಲ್ಲಭ ನಿನ್ನ ದಾಸನ- ನುದ್ಧರಿಸು ನೀನಲ್ಲದೆನಗಿನ್ನಾರು ಗತಿ ಹರಿಯೆ8 ಒಡೆಯರೆಂಬರನೆಲ್ಯುಕಾಣದೆ ಉಡುವದುಂಬುದಕೇನು ದೊರೆಯದೆ ಗಿಡವ ನಿಲುಕದ ಬಳ್ಳಿಯಂದದಿ ಬಡುವ ಕಷ್ಟವನು ತಡೆಯಲಾರದೆ ತಳಮಳಿಸುತಿರೆ ಪಿಡಿದು ಕರವನು ಕಾಯ್ದೆಯೆನ್ನನು ನುಡಿವದೇನಖಿಳಾಂಡ ನಾಯಕ ನಿನ್ನ ಮಹಿಮೆಯನು 9 ಮಾರಿಯಂದದಿ ಮಧ್ಯದೊಳಗೊ- ಬ್ಯಾರುವೇನೆಂಬಧಮ ಹೂಣನು ತೀರಿಸುವೆನೆಂದೆನ್ನೊಳಿಲ್ಲದ ದೂರ ಸಂಗ್ರಹಿಸಿ ಗಾರಗೊಳಿಸುವದರಿತು ಕಕ್ಷವ ಹಾರಿಸುತ ಸುರವಂದ್ಯ ಮೂರ್ತಿಯ ತೋರಿ ತಂದಿಲ್ಲಿರಿಸಿ ಪೊರೆದವನ್ಯಾರು ಪೇಳ್ದೊರೆಯೆ 10 ಶ್ರೀಶ ನಿನ್ನ ಪದಾಬ್ಜ ಪೊಗಳುವ ದಾಸ ಕೂಟದಿ ಸೇರಿ ಸೇವೆಯ ಬ್ಯಾಸರದೆ ನಡೆಸುತಿರೆ ಮತ್ತೊಬ್ಬಾಸುರನ ತೆರದಿ ದ್ವೇಷದಿಂದಿರೆ ದೂರ ಓಡಿಸಿ ದುರಿತ ಭಯಗಳ ಪರಿಹರಿಸಿದ ಮ- ದೀಶ ನೀನೆಂದನವರತ ನಂಬಿರುವೆ ಶ್ರೀಪತಿಯ 11 ಇಷ್ಟು ಪರಿಯಿಂದೆನ್ನ ರಕ್ಷಿಸು- ತಿಷ್ಟ ಫಲಗಳನೀವ ವೆಂಕಟ ಬೆಟ್ಟದೊಡೆಯನೆ ಬೇಡಿಕೊಂಬುವೆ ಒಂದು ಕೃತ್ಯವನು ಮಾನವ ನುಡಿಯಕಾಡನು ಸುಟ್ಟು ಸೂರೆಯಗೈದು ನಾ ಮನ ಸಿಟ್ಟ ತೆರದಲಿ ತೋರು ಚಿತ್ತವ ಸೃಷ್ಟಿಕರ ಶ್ರೀಶ 12
--------------
ತುಪಾಕಿ ವೆಂಕಟರಮಣಾಚಾರ್ಯ