ಒಟ್ಟು 23 ಕಡೆಗಳಲ್ಲಿ , 11 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾರಿಜನಾಭನ ವನಜಾಂಘ್ರಿಗಳಿಗೆ ಕರವ ಕೊಂಡಾಡುವೆ ಪದವ 1 ದೇವದೈತ್ಯರು ಕೂಡಿ ಪಾಲಾಂಬುಧಿಯಲ್ಲಿ ಮೇರು ಮಂದರವ ಕಡೆಗೋಲು ಮಾಡಿದರು2 ವಾಸುಕಿ ಶರಧಿ ಮಧ್ಯದಲಿ ಹರಿ ಕೂರುಮನಾಗಿ ಮಂದರವನೆತ್ತಿದನು3 ಕಾಲಕೂಟ ವಿಷವಾಯು ಪಾನಮಾಡುತಲಿ ಮಹದೇವ ಕೋಪದಿ ನುಂಗಿ ನೀಲಕಂಠೆನಿಸೆ 4 ಕೌಸ್ತುಭ ಕಾಮಧೇನು ಸುರತರುವು ಹಸ್ತಿ ತೇಜಿಯು ಕಲ್ಪವೃಕ್ಷ ಸುಧೆ ಉದಿಸೆ 5 ಸಿಂಧು ಮಥನವ ಮಾಡಲು ಶ್ರೀದೇವಿ ಜನಿಸೆ ಮಂದಾರಮಾಲೆ ಕೈಯಿಂದಲಿ ಪಿಡಿದು 6 ಅರ್ಕಚಂದ್ರರ ಕಾಂತಿಗಧಿಕಾದ ಮುಖವು ದಿಕ್ಕು ದಿಕ್ಕಿಗೆ ಮಿಂಚಿನಂತೆ ಹೊಳೆಯುತಲಿ 7 ವಜ್ರಾಭರಣವು ಕಾಲಗೆಜ್ಜೆ ಸರಪಳಿಯು ಮಲ್ಲಿಗೆ ಕುಸುಮಗಳೊಂದೊಂದ್ಹೆಜ್ಜೆಗುದುರುತಲಿ 8 ಕುಡಿಹುಬ್ಬು ಕಡೆಗಣ್ಣ ನೋಡುತಲಿ ನಡೆದು ಬಂದಳು ತಾ ಬಡನಡುವಿನ ಒಯ್ಯಾರಿ 9 ಅತಿಹಾಸ್ಯಗಳಿಂದ ದೇವತೆಗಳ ಮಧ್ಯೆ ಈ ಪತಿ ಎಲ್ಲಿಹನೋ ತಾ 10 ಅರ್ಕನ್ವಲ್ಲೆನೆ ಅಗ್ನಿಯಂತೆ ಸುಡುತಿರುವನ ಶಕ್ರನ ಒಲ್ಲೆ ಮೈಯೆಲ್ಲ ಕಣ್ಣವಗೆ 11 ಸೋಮನ ಒಲ್ಲೆ ಕಳೆಗುಂದಿ ತಿರುಗುವನ ಪಾವನ ನಮ್ಮ ಗಾಳಿರೂಪದವನ12 ರುದ್ರನ್ವಲ್ಲೆನೆ ರುಂಡಮಾಲೆ ಹಾಕುವನ ಮುದಿಹದ್ದಿನಂದದಲಿ ಗರುಡ ಹಾರ್ಯಾಡುವನಲ್ಲೆ 13 ಶೇಷನ ಒಲ್ಲೆ ವಿಷದ ದೇಹದವನ ಗ- ಣೇಶನ್ವಲ್ಲೆನೆ ಡೊಳ್ಳು ಹೊಟ್ಟೆ ಗಜಮುಖನ 14 ಬ್ರಹ್ಮ ನಾಲಕು ಮೋರೆಗುಮ್ಮನಂತಿರುವ ಯಮ- ಧರ್ಮನ ಒಲ್ಲೆ ನಿಷ್ಕರುಣ ಘಾತಕನ 15 ಸುರಜನರ ನೋಡಿ ಗಾಬರ್ಯಾಗುವೆನು 16 ಮಂದ ಹಾಸ್ಯಗಳಿಂದ ಮಾತನಾಡುತಲಿ ಇಂದಿರೆಪತಿ ಪಾದಾರವಿಂದ ನೋಡುತಲಿ 17 ಗುಣದಲಿ ಗಂಭೀರ ಮಣಿಕೋಟಿತೇಜ ಎಣಿಕಿಲ್ಲದ ಚೆಲುವ ನೋಡೆನ್ನ ಪ್ರಾಣನಾಥ 18 ಹದಿನಾಲ್ಕು ಲೋಕ ತನ್ನುದರದಲ್ಲಿರುವ ಪದುಮಾಕ್ಷಗ್ವನಮಾಲೆ ಮುದದಿಂದ್ಹಾಕುವೆನು 19 ಕರ ವೈಜಯಂತಿ ಸರ ಮಣಿ ನಾ ಇರುತಿರೆ ವಕ್ಷಸ್ಥಳವು 20 ಶ್ಯಾಮವರ್ಣನ ಮುದ್ದು ಕಾಮನಜನಕ ಪ್ರೇಮದಿಂದ್ವೊಲಿವೆ ನಾ ಕಾಮಿಸಿ ಹರಿಯ 21 ಕಮಲಮುಖಿ ಬ್ಯಾಗ ಕಮಲಾಕ್ಷನ್ನ ನೋಡಿ ಕಮಲಮಾಲೆಯ ತಾ ಕಂದರದಲ್ಹಾಕಿದಳು 22 ಅಂಗನೆ ರಚಿಸಿ ತಾ ನಿಂತಳು ನಗುತ 23 ರತ್ನ ಮಂಟಪ ಚಿನ್ನ ಚಿತ್ರ ಪೀಠದಲಿ ಲಕ್ಷ್ಮೀನಾರಾಯಣರು ಒಪ್ಪಿ ಕುಳಿತಿರಲು 24 ಸಾಗರರಾಜ ತನ್ನ ಭಾಗೀರಥಿ ಕೂಡಿ ಸಿರಿ ಧಾರೆಯನೆರೆದ 25 ಅಚ್ಚುತ ಲಕುಮಿಗೆ ಕಟ್ಟಿದ ನಗುತ 26 ಮೇಲು ಕರಿಮಣಿ ಮಂಗಳ ಸೂತ್ರವ ಪಿಡಿದು ಶ್ರೀ ಲೋಲ ಲಕುಮಿಗೆ ತಾ ಕಟ್ಟಿದ ನಗುತ 27 ವಂಕಿ ಕಂಕಣ ಮುತ್ತಿನ ಪಂಚಾಳಿಪದಕ ಪಂಕಜಮುಖಿಗೆ ಅಲಂಕರಿಸಿದರು 28 ಸರಿಗೆ ಸರಗಳು ನಾಗಮುರಿಗೆ ಕಟ್ಟಾಣಿ ವರಮಾಲಕ್ಷುಮಿಯ ಸಿರಿಮುಡಿಗೆ ಮಲ್ಲಿಗೆಯ 29 ನಡುವಿನ್ವೊಡ್ಯಾಣ ಹೊಸ ಬಿಡಿಮುತ್ತಿನ ದಂಡೆ ಸಿರಿ ಪರಮಾತ್ಮನ ತೊಡೆಯಲ್ಲೊಪ್ಪಿರಲು 30 ಇಂದಿರೆ ಮುಖವ ಆ- ನಂದ ಬಾಷ್ಪಗಳು ಕಣ್ಣಿಂದಲುದುರಿದವು 31 ರಂಗನ ಕಂಗಳ ಬಿಂದು ಮಾತ್ರದಲಿ ಅಂಗನೆ ತುಳಸಿ ತಾನವತರಿಸಿದಳು32 ಪಚ್ಚದಂತ್ಹೊಳೆವೊ ಶ್ರೀ ತುಳಸಿ ದೇವಿಯರ ಅಚ್ಚುತ ತನ್ನಂಕದಲ್ಲಿ ಧರಿಸಿದನು 33 ಮಂಗಳಾಷ್ಟಕ ಹೇಳುತ ಇಂದ್ರಾದಿ ಸುರರು ರಂಗ ಲಕ್ಷುಮಿಗೆ ಲಗ್ನವ ಮಾಡಿಸಿದರು 34 ಅಂತರಿಕ್ಷದಿ ಭೇರಿನಾದ ಸುರತರುವು ನಿಂತು ಕರೆದಿತು ದಿವ್ಯ ಸಂಪಿಗೆ ಮಳೆಯ 35 ಲಾಜಾಹೋಮವ ಮಾಡಿ ಭೂಮವನುಂಡು ನಾಗಶಯನಗೆ ನಾಗೋಲಿ ಮಾಡಿದರು 36 ಸಿಂಧುರಾಜನ ರಾಣಿಗೆ ಸಿಂಧೂಪವನಿತ್ತು ಗಜ ಚೆಂದದಿ ಬರೆದು 37 ಚೆಲುವೆ ನೀ ಬೇಕಾದರೆ ಹಿಡಿಯೆಂದನು ರಂಗ 38 ಅಚ್ಚುತ ಎನ್ನಾನೆ ಲೆಕ್ಕಿಲ್ಲದ್ಹಣವ ಕೊಟ್ಟರೆ ಕೊಡುವೆನೆಂದಳು ಲಕ್ಷುಮಿ ನಗುತ 39 ತುಂಬಿ ಮರದ ಬಾಗಿನವ ಸಿರಿ ತಾ ಋಷಿಪತ್ನೇರನೆ ಕರೆದು40 ತುಂಬಿ ಮರದ ಬಾಗಿನವ ಹರದಿ ಕೊಟ್ಟಳು ತಾ ಋಷಿಪತ್ನೇರನೆ ಕರೆದು 41 ಕುಂದಣದ್ಹೊನ್ನಕೂಸಿನ ತೊಟ್ಟಿಲೊಳಿಟ್ಟು ಕಂದನಾಡಿಸಿ ಜೋಜೋ ಎಂದು ಪಾಡಿದರು42 ಕರಿ ಎಂದನು ರಂಗ 43 ಸುರದೇವತೆಗಳಿಗೆ ಸುಧೆ ಎರೆಯಬೇಕಿನ್ನು ಕರಿ ಎಂದಳು ಲಕ್ಷ್ಮಿ 44 ಹೆಣ್ಣನೊಪ್ಪಿಸಿಕೊಟ್ಟು ಚಿನ್ನದಾರತಿಯ ಕರ್ನೆ(ನ್ಯ?) ಸರಸ್ವತಿ ಭಾರತಿ ಬೆಳಗಿದರಾಗ 45 ಈರೇಳು ಲೋಕದೊಡೆಯನು ನೀನಾಗೆಂದು ಬಹುಜನರ್ಹರಸ್ಯೆರೆದರು ಮಂತ್ರಾಕ್ಷತೆಯ 46 ಪೀತಾಂಬರಧಾರಿ ತನ್ನ ಪ್ರೀತ್ಯುಳ್ಳಜನಕೆ ಮಾತುಳಾಂತಕ ಮಾಮನೆ ಪ್ರಸ್ತ ಮಾಡಿದನು 47 ಸಾಲು ಕುಡಿಎಲೆ ಹಾಕಿ ಮೇಲು ಮಂಡಿಗೆಯ ಹಾಲು ಸಕ್ಕರೆ ಶಾಖ ಪಾಕ ಬಡಿಸಿದರು 48 ಎಣ್ಣೋರಿಗೆ ಫೇಣಿ ಪರಮಾನ್ನ ಶಾಲ್ಯಾನ್ನ ಸಣ್ಣಶ್ಯಾವಿಗೆ ತುಪ್ಪವನ್ನು ಬಡಿಸಿದರು 49 ಏಕಾಪೋಶನ ಹಾಕಿದ ಶೀಕಾಂತಾಮೃತವ ಆ ಕಾಲದಿ ಸುರರುಂಡು ತೃಪ್ತರಾಗಿಹರು 50 ಅಮೃತ ಮಥನವ ಕೇಳಿದ ಜನಕೆ
--------------
ಹರಪನಹಳ್ಳಿಭೀಮವ್ವ
(ಆ) ಮಹಾಲಕ್ಷ್ಮೀ ಸ್ತುತಿಗಳು ಅರಿತು ಸಿಂಗರಮಾಡಿ ಅರಿತು ಸಿಂಗರ ಮಾಡಿ ಪ ಗರುವ ಚೆನ್ನಿಗರಾಯ ಬರುತಿಹನೆ ಬೇಗಾ ಅ.ಪ ಅಳಿಕುಂತಳೆಗೆ ನೋಡಲಲರ್ದ ಸಂಪಿಗೆ ಯೇಕೆ ಚೆಲುವ ಜಾಜಿಯ ಕಮ್ಮಲರ ತುರುಬಿರಮ್ಮಾ ಹೊಳೆವ ಚಂದಿರಮುಖಿಗೆ ವಳಿನವೇತಕೆ ಕೈಗೆ ಅಲರ್ದ ನೈದಿಲೆ ಕುಸುಮವನೆ ಕೊಡಿರೆಯಮ್ಮಾ 1 ಕೀರವಾಣಿಗದೇಕೆ ಜವ್ವಾಜಿ ಪರಿಮಳವು ಚಾರುಕತ್ತುರಿ ಹದನ ಮಾಡಿರಲು ಮುನ್ನಾ ತೋರ ಕುಚಗಿರಿಗಳಿಗೆ ವಜ್ರಭೂಷಣವೇಕೆ ಹಾರವಿದೆ ತಂದಿರಿಸಿ ಮಂಜುಳವಿದೆನಿಸೀ 2 ಲಾವಣ್ಯನಿಧಿಯೀಕೆ ಬೇರೆ ಸಿಂಗರವೇಕೆ ತೀವಿದಂಗದಕಾಂತಿ ನಯನ ವಿಶ್ರಾಂತೀ ಶ್ರೀವೇಲಪುರದಲ್ಲಿ ನೆಲಸಿಹ ಕರುಣದಿಂದ ದೇವ ವೈಕುಂಠಕೇಶವನರಸಿಯೀಕೇ 3
--------------
ಬೇಲೂರು ವೈಕುಂಠದಾಸರು
ಇಂದು ನಿನ್ನಯ ಪಾದಾ ವಂದಿಸುವೆ ನಾನು ಛಂದದಿಂದಾ ಪ. ಮಂದಾರೊದ್ಧರನ ಪಾದಾ ಸೇವಕರೆಂದೆನಿಸಿದಿ ದುರ್ಮಾಯವಾದಿಗಳನು ಜಯಸಿದಿ ಬ್ರಹ್ಮರಾಯನೆಂದೆನಿಸೀದಿ ಅ.ಪ. ಅಂಜನಿಸುತನೆಂದೆನಿಸಿದೆ ಸಂಜೀವನವ ತಂದಿ ಕಂಜಾಕ್ಷಿಮುಖಿಗೆ ಉಂಗುರವನ್ನಿತ್ತಿ ವನವ ಕಿತ್ತಿ ಸಂಜೀವರಾಯನೆ ದುರುಳ ರಾವಣನ ಸಂಹರಿಸಿದಿ ವಿಭೀಷಣನಿಗೆ ರಾಜ್ಯಭಾರದಲ್ಲಿ ನಿಲ್ಲಿಸಿದಿ ಅಯೋಧ್ಯನಗರಿಗೆ ತೆರಳಿದಿ 1 ಕುಂತಿಯಾ ಕಂದಾ ಕೌರವಾದಿಗಳ ಕೊಂದ ಯುದ್ಧದಲ್ಲಿ ಪ್ರಚಂಡಾ ಭಾರತಿಗೆ ಗಂಡಾ ಲಂಡದುಷ್ಯಾಸನನ ತುಂಡು ತುಂಡುಮಾಡಿ ಸೀಳಿದ ವಿರಾಟ ನಗರದಿ ಸಂಚರಿಸಿದಾ ಕೀಚಕಾದಿಗಳ ಸಂಹರಿಸಿದಾ ಪಾಂಚಾಲಿಗೆ ಸೌಗಂಧೀಕುಸುಮವನೆ ತಂದಾ ಆನಂದಾ 2 ಮಧ್ಯಗೇಹನಲ್ಲಿ ಉದ್ಭವಿಸಿದೆಯೋ ನೀ ಇಲ್ಲಿ ಅದ್ವೈತ ಮತವೆಲ್ಲಾ ಕಾಲಿಲೆ ವದ್ಯೋ ಗೆದ್ಯೋ ಮಧ್ವಮತವೆಲ್ಲ ಉದ್ಧಾರ ಮಾಡಿದಾ ಬದರಿಕಾಶ್ರಮಕೆ ಪುನರಪಿ ಪೋದಾ ವ್ಯಾಸಮುನಿ ಪಾದಕೆ ಅಭಿವಂದಿಸಿದಾ ಉಡುಪಿಯೊಳು ಕಾಳಿಮರ್ಧನಕೃಷ್ಣನು ನಿಲ್ಲಿಸಿದಾ 3
--------------
ಕಳಸದ ಸುಂದರಮ್ಮ
ಉಡಿಯ ತುಂಬಿರೆ ನಮ್ಮ ಉಡುರಾಜಮುಖಿಗೆ ಉಡಿಯ ತುಂಬಿರೆ ನಮ್ಮ ಕಡಲೆ ಕೊಬ್ಬರಿ ಬಟ್ಟಲೊಳು ಬಾಳೆಫಲಗ- ಳ್ವುಡಿಯ ತುಂಬಿರೆ ನಮ್ಮ ಪ ಜಂಬುನೇರಲ ಗೊನೆ ಜಾಂಬೂಫಲಗಳು ನಿಂಬೆ ದಾಳಿಂಬ್ರ ಔದುಂಬ್ರ ಫಲಗಳು 1 ಉತ್ತತ್ತಿ ದ್ರಾಕ್ಷಿ ಕಿತ್ತಳೆ ಸೀತಾಫಲವು ಅಕ್ಕಿ ಅಂಜೂರ ಉತ್ತತ್ತಿ ಫಲಗಳು2 ಶ್ರೇಷ್ಠ ಭೀಮೇಶ ಕೃಷ್ಣನ ಪಟ್ಟದರಸಿ ಗ್ಹಚ್ಚಿ ಕುಂಕುಮ ವೀಳ್ಯ ಕೊಟ್ಟು ರುಕ್ಮಿಣಿಗೆ 3
--------------
ಹರಪನಹಳ್ಳಿಭೀಮವ್ವ
ಎಷ್ಟೆಂದು ಹೇಳಲಮ್ಮಯ್ಯಕೃಷ್ಣನ ದಯವ ದಿಟ್ಟ ಪಾಂಡವರಲ್ಲೆಪ್ರಾಣ ಇಟ್ಟುಕೊಂಡಿ ಹನಮ್ಮ ಪ. ನೀರಜಾಕ್ಷಗೆ ನಮಿಸಿ ವೀರರೈವರು ಮಹಾದ್ವಾರದಲ್ಲಿ ಹೋರೆಂದು ಸಾರಿ ಹೇಳಿದೆನಮ್ಮಮಾರನಯ್ಯನ ಪಿತನ ಮೋರೆ ನೋಡುತಲಿತೀವ್ರ ಕರೆತಾರೆ ಮುತ್ತಿನ ಹಾರ ನಿನಗೆ ಈವೆನೆಂದ1 ಇಂದು ಮುಖಿಗೆ ನಾನು ವಂದಿಸಿ ಐವರು ಹೊರಗೆ ಬಂದಾರೆ ಹೀಗೆಂದೆ ನಮ್ಮಯ್ಯಮಂದಹಾಸನು ದಯದಿಂದ ನೋಡುತಲೆನ್ನತಂದು ತೋರಮ್ಮ ತೋಳಬಂದಿ ನಿನಗೀವೆನೆಂದ2 ಪುಟ್ಟ್ಟಸುಭದ್ರೆ ಪಾಂಡವರ ಪಟ್ಟದರಾಣಿ ದ್ರೌಪತಿಅಷ್ಟೂರೂ ಬಂದಾರೆಂಬೊ ಉತ್ಕ್ರಷ್ಟ ಹೇಳಿದೆನಮ್ಮತುಷ್ಟÀನಾಗಿ ರಮಿಯರಸು ಥಟ್ಟನೆ ಕರೆತಾರೆÀಂದುಕೊಟ್ಟು ವೀಳ್ಯವ ದಯದ ವೃಷ್ಟಿಗರೆದನಮ್ಮ 3
--------------
ಗಲಗಲಿಅವ್ವನವರು
ಗಂಗೆಯ ಶಿರದಿ ಪೊತ್ತವಗೆಮಂಗಳಪ್ರದಗೆ ಶಂಕರಗೆಪುಂಗವರಾಜವಾಹನಗೆಮಂಗಳಾರತಿಯನೆತ್ತಿರೆ 1 ಪಾಕಾರಿ ಪೂಜಿತಪಾದಗೆಮಾಕಾಂತನೇತ್ರಾರ್ಚಿತಗೆಶ್ರೀಕರಗೇಕೋರುದ್ರಗೆಏಕಾರತಿಯನೆತ್ತಿರೆ 2 ಪಂಚಬಾಣನ ಗೆಲಿದವಗೆ ತ್ರಿಪಂಚನೇತ್ರಗೆ ಪಂಚಮುಖಿಗೆಪಂಚಕೃತ್ಯಾಧೀಶ್ವರಗೇಪಂಚಾರತಿಯನೆತ್ತಿರೆ3 ಕಮಲಸಂಭವನುತಿ ಪಾತ್ರಗೆಕಮಲಾಪ್ತಕೋಪ್ತಕೋಟಿಭಾಸುರಗೆಕಮಲಾಹಿತ ಭೂಷಣಗೆಕಮಲದಾರತಿಯನೆತ್ತಿರೆ 4 ನಾಗೇಂದ್ರಚರ್ಮಾಂಬರಗೆನಾಗೇಂದ್ರ ಹಾರಶೋಭಿತಗೆನಾಗೇಂದ್ರ ಶಯನಸನ್ನುತಗೆನಾಗಾರತಿಯನೆತ್ತಿರೆ 5 ಸರ್ಪಕಂಕಣ ಸದಾಶಿವಗೆಮುಪ್ಪುರವನು ಗೆಲಿದವಗೆಕಪ್ಪು ಗೊರಲಗೆ ಕಾಮದಗೆಕಪ್ಪುರದಾರತಿಯನೆತ್ತಿರೆ 6 ಜಯ ಜಯ ಕೆಳದಿ ಪುರೇಶಜಯ ಜಯ ಶ್ರೀ ಪಾರ್ವತೀಶಜಯ ಜಯ ಶ್ರೀ ರಾಮೇಶ್ವರಜಯವೆಂದಾರತಿಯನೆತ್ತಿರೆ7
--------------
ಕೆಳದಿ ವೆಂಕಣ್ಣ ಕವಿ
ನಿತ್ಯ ಶುಭಮಂಗಳಂ ಪ ಚಾರು ಮರಕಟರೂಪ ತಾಳಿದಾ ಮೂರ್ತಿಗೆ ಚೋರ ದಶಕಂಠನನು ದಣಿಸಿದವಗೆ ನೀರಜಾಮುಖಿಗೆ ಮುದ್ರೆಯಿತ್ತ ಕಪಿವರಗೆ ಶ್ರೀರಾಮ ಧ್ಯಾನದೊಳು ತತ್ಪರಾದವಗೆ 1 ನೀಚ ಠಕ್ಕನ ಹಿಡಿಂಬಕನೊರಸಿದಾ ಬಲಗೆ ಕೀಚಕರ ಕಿರ್ಮೀರ ಬಕಕಾಲಗೆ ನಾಚಿ ನೀರೊಳು ಪೊಕ್ಕು ಕುರುಪತೀಯಂತಕಗೆ ಆ ಚಕ್ರ ಸೇವೆಯಲಿ ನಿರತನಾದವಗೆ 2 ಜಗವನುದ್ಧರಿಪ ಬುದ್ಧಿಯ ತಾಳ್ದಯತಿವರಗೆ ಮಗುವಾಗಿ ಮಧ್ಯಗೇಹದಿ ಜಾತಗೆ ನಿಗಮ ಗೋಚರ ಶ್ರೀ ನರಸಿಂಹವಿಠಲನ ಭಕುತಿಯನು ಬೇಡಿ ಅಜಪದ ಪಿಡಿದ ಹರಿಗೇ 3
--------------
ನರಸಿಂಹವಿಠಲರು
ಮಂಗಲಂ ಜಯಮಂಗಲಂತ್ರಿಜಗಂಗಳ ಪೊರೆವ ಶ್ರೀಮೂಕಾಂಬೆಗೆ ಪ ಗೌರಿಗೆ ಗುಹಜನನಿಗೆ ಗಿರಿಜಾತೆಗೆಧೀರಮಹಿಷ ದೈತ್ಯಮರ್ದಿನಿಗೆಕಾರುಣ್ಯನಿಧಿಗೆ ಕಾಮಿತಫಲದಾತೆಗೆನಾರದನುತೆಗೆ ನಾರಾಯಣಿಗೆ 1 ಶರದಿಂದುಮುಖಿಗೆ ಶಂಕರಿಗೆ ಶರ್ವಾಣಿಗೆದುರಿತ ದಾರಿದ್ರ್ಯಹರ್ತೆಗೆ ದುರ್ಗಿಗೆಪರಮೇಶ್ವರಿಗೆ ಪಾವನಚರಿತೆಗೆ ಶುಭಕರಿಗೆ ಸಮಸ್ತಮಂತ್ರೇಶ್ವರಿಗೆ 2 ರಾಜಶೇಖರಿಗೆ ರಾಜೀವನೇತ್ರಗೆ ರಕ್ತಬೀಜ ಶಾಸಿನಿಗೆ ಭುವನಮಾತೆಗೆತೇಜೋಮಯಿಗೆ ತರಣಿಕೋಟಿ ಭಾಷೆಗೆಶ್ರೀ ಜನಾರ್ದನನ ಸಹೋದರಿಗೆ 3 ಕಾಳಿಗೆ ಕಾಮರೂಪಿಣಿಗೆ ಕೌಮಾರಿಗೆಕಾಳರಾತ್ರಿಗೆ ಕಾತ್ಯಾಯನಿಗೆವ್ಯಾಳಭೂಷಿಣಿಗೆ ಯೋಗಿನಿಗೆ ರುದ್ರಾಣಿಗೆಭಾಳನೇತ್ರೆಗೆ ಭಯಹಾರಿಣಿಗೆ4 ಚಂಡಿಗೆ ಚಕ್ರಪಾಣಿಗೆ ಚಾತುರ್ಭುಜೆಗೆಮುಂಡಿಗೆ ಧೂಮ್ರಲೋಚನಹತ್ರ್ರೆಗೆಚಂಡಮುಂಡಾಸುರರಸುರಣರಂಗದಿದಿಂಡುದರಿಂದ ಸರ್ವಮಂಗಲೆಗೆ5
--------------
ಕೆಳದಿ ವೆಂಕಣ್ಣ ಕವಿ
ಮಂಗಳಾರತಿ ಎತ್ತಿರೆಲ್ಲ ಮಹಾತ್ಮರೆಲ್ಲಮಂಗಳಾರತಿ ಎತ್ತಿರೆಲ್ಲಸಂಗಾತೀತ ಚಿದಾನಂದಾವಧೂತಾಂಗ ಶ್ರೀಬಗಳಾಮುಖಿ ದೇವಿಗೆ ಪ ಕರದೊಳು ಚೂಡೆ ಕಂಕಣವಿಟ್ಟುಕೊರಳೊಳು ಸರಿಗೆಯ ಧರಿಸಿಶಿರದಿ ರತ್ನದ ಕಿರೀಟವಿಟ್ಟು ಸರ್ವಾಭರಣವಧರಿಸಿ ದುರುಳರ ದುಷ್ಟರ ಛೇಧಿಸಿ ಭ-ಕ್ತರ ಪಾಲಿಪ ಬಗಳಾಮುಖಿಗೆ 1 ನಿತ್ಯ ನಿರ್ಗುಣ ನಿರಾಮಯಗೆ ನಿಂದಕವಿದಾರಣೆಗೆಭಕ್ತ ವತ್ಸಲೆ ಭುವನೇಶ್ವರಿ ಮಾತೆಗೆಭಕ್ತಾಧಾರೆಗೆ ಪ್ರತ್ಯಗಾತ್ಮೆಗೆ ಪರಬ್ರಹ್ಮ ರೂಪಿಣಿಭಕ್ತ ಪ್ರಾಣಿಗೆ ಬಗಳಾಮುಖಿಗೆ 2 ಅದ್ವಯ ಆಗಮಗೋಚರಗೆ ಅಚಲಾನಂದಳಿಗೆ ಶುದ್ಧಸಂವಿಜ್ಯೋತಿರ್ಮಯಳಿಗೆಸರ್ವಸಾಕ್ಷಿಗೆ ಸದ್ಗುರು ಚಿದಾನಂದಾವಧೂತಗೆ ಸಿದ್ಧಪರ್ವತವಾಸಿ ಬಗಳಾಮುಖಿಗೆ 3
--------------
ಚಿದಾನಂದ ಅವಧೂತರು
ಯತಿಗಳ ಸ್ತುತಿ ಮಧ್ವಮುನಿಯೆ ಎನ್ನ ಉದ್ಧರಿಸಿನ್ನ ಪ. ಸದ್ಗುರುವೆ ನಿನ್ನ ಪದ್ಮಪಾದಗಳಿಗೆ ಕರ ಮಣಿ ಅ.ಪ. ವರಕಲ್ಪ ಕಲ್ಪದಲಿ ಹರಿಯ ಮೆಚ್ಚಿಸಿ ಸಿರಿವರನಲಿ ಜನಿಸಿ ವಾಯುವೆಂದೆನಿಸಿ ಸುರರೆಲ್ಲ ಮೊರೆಯಿಡೆ ಹರಿಯವತರಿಸಿ ಹರಿಯ ಸೇವೆಗೆ ನೀ ಮಾರುತಿ ಎನಿಸಿ ಶರಧಿ ಲಂಘಿಸಿ ಉಂಗುರ ಸೀತೆಗೆ ಇತ್ತು ದುರುಳನ ಪುರ ಸುರಮುಖನಿಗರ್ಪಿಸಿದೆ 1 ಚಂದ್ರವಂಶದಲಿ ಬಂದ್ಯೊ ಬಲಶಾಲಿ ನಂದಕಂದನ ಲೀಲೆ ಅಂದ ಪಾಡುತಲಿ ಬಂದಿತು ಕಲಹ ಅಲ್ಲಿ ದ್ವಂದ್ವ ಭಾಗದಲಿ ಅಂದು ಕೌರವರಲಿ ನಿಂದ್ಯೊ ದ್ವೇಷದಲಿ ಇಂದುಮುಖಿಗೆ ಸೌಗಂಧಿಕ ಇತ್ತು ಕುರು ನಂದನ ವಂಶವನಂದು ಛೇದಿಸಿದೆ 2 ದುರುಳರೆಲ್ಲರು ಬಂದು ಕಲಿಯುಗದಿ ನಿಂದು ಹರಿಯು ನರನು ಒಂದು ಅರುಹಲಿಂತೆಂದು ಸುರರೆಲ್ಲ ಬಲುನೊಂದು ಕ್ಷೀರಾಬ್ಧಿಗೆ ಬಂದು ಸಿರಿವರ ಪೊರೆಯೆಂದು ಮೊರೆಯಿಡಲಂದು ಹರಿ ನಿನಗರುಹಲು ಧರೆಯಲ್ಲಿಗೆ ಬಂದು ಸುರ ಭೂ ಶ್ರೇಷ್ಠನುದರದಲಿ ಜನಿಸಿದೆ 3 ಪರಮಾಯಿಗಳ ಮತ ತರಿದು ಕೆಡಹುತ್ತ ಹರಿ ಸರ್ವೋತ್ತಮೆನುತ ಧರೆಯೊಳ್ ಸಾರುತ್ತ ತರತಮ್ಯ ಸತ್ಯವೆನುತ ಪಂಚಭೇದೆನುತ ಸಿರಿರಮಣಗೆ ನರಭೃತ್ಯನೆನ್ನುತ್ತ ಪರಿ ಬೋಧಿüಸಿ ದುರುಳರ ಛೇಡಿಸಿ ಸರಸಿಜಾಕ್ಷಗೆ ಬಲು ಸಮ್ಮತನೆನಿಸಿ 4 ವೈಷ್ಣವಾಗ್ರಣೀ ಲೀಲೆ ಪೇಳಲಳವಲ್ಲ ಜಿಷ್ಣುಸಖನ ಲೀಲೆ ನುಡಿಸೆನಗೆ ಸೊಲ್ಲ ಕಷ್ಟಪಡುತಿಹೆನಲ್ಲ ಕರುಣವೇಕಿಲ್ಲ ಶ್ರೇಷ್ಠನೆ ಗೋಪಾಲಕೃಷ್ಣವಿಠಲ ಇಷ್ಟು ತಿಳಿಸುತ ಅಷ್ಟದಳದಲಿ ಶ್ರೇಷ್ಠದಿ ಪೂಜಿಪ ಗುಟ್ಟು ತೋರೆನಗೆ 5
--------------
ಅಂಬಾಬಾಯಿ
ಶ್ರೀ ಪಾರ್ವತೀದೇವಿ ಗೌರಿ ದೇವಿಗೆ ಸಖಿ ತಾರೆ ಆರುತಿಪ ಮುನಿಜನ ವಂದಿತೆ ಮನದಭಿ ಮಾನಿಯೆ | ಗಣಪತಿ ಷಣ್ಮುಖ ಜನನಿ ದೇವಿಗೆ 1 ಶಂಕರಿ ಭಕ್ತಸುಶಂಕರಿ ದೈತ್ಯ ಭ ಯಂಕಾರಿಯಾದ ಶಶಾಂಕ ಮುಖಿಗೆ 2 ಪತಿ ಸಹ ನೇಮದಿ ಪಠಿಸುವ ಹೈಮಾವತಿಗೆ 3
--------------
ಶಾಮಸುಂದರ ವಿಠಲ
ಸರಸ್ವತಿ ಮಂಗಳಾರುತಿಯನೆತ್ತೀರೆ ವಾರಿಜಭವಮುಖಿಗೆ ಮಂಗಳಾರುತಿಯನೆತ್ತೀರೆ ಪ ಇಂದು ಬಿಂಬ ಸದೃಶ ವದನೆಗೆ ಲಾವಣ್ಯ ಖಣಿಗೆ ಅಂದ ಕುಂಕುಮಭೂಷಿತ ಫಣೆಗೆ ಹರಿದ್ರ ಭೂಷೆಗೆ ಸಂದ ಮೌಕ್ತಿಕ ಚಂಪಕ ನಾಸಿಕೆಗೆ ಚಂದ ಕರುಣಾಭರಣ ಭೂಷಿತೆಗೆ ಚಾಪ ಇಂದು ಛವಿಯ ಕಿರೀಟ ಭೃತೆಗೆ ಹಿಂದೆ ಜೋಲ್ವ ಕನಕವೇಣಿಗೆ ಮಂಗಳಾರುತಿಯನೆತ್ತಿರೆ 1 ಚಾರುವಸನ ಭೂಷಿತಾಂಗೆಗೆ ವಿದ್ಯುತ್ಸುಕಾಂತೆಗೆ ಹಾರಪದ ಶÀಮಿರೂಪ ಕಂಠೆಗೆ ಸುಕಂಬು ಶ್ರೀದೇವಿಗೆ ಸಾರ ವೇದಾಂಗ ಭೂತೆಗೆ ನೀರಜ ಪಲ್ಲವಗಾತ್ರೆಗೆ ಸಾರಸಾಕ್ಷಿ ಶಿರಿವಂತೆಗೆ ಮಂಗಳಾರುತಿಯನೆತ್ತಿರೆ2 ಕರದಿ ವೀಣೆ ಧರಿಪ ದೇವಿಗೆ ಪಾವನ್ನಗಾತ್ರೆಗೆ ಧರೆಯ ಸೃಷ್ಟಿಕರ್ತನರಸಿಗೆ ಮಂಗಳ ವಾಣಿಗೆ ಪರಿಪರಿಯಲಂಕಾರ ಭೂಷಿತೆಗೆ ಸರಸ ಕೋಮಲ ಪದ್ಮಪಾತೆಗೆ ಮರಕತಭೂಷಣ ಭಾಸೆಗೆ ನಿರುತ ಜನಕೆ ವಿದ್ಯಪ್ರದೆಗೆ ನರಸಿಂಹವಿಠ್ಠಲನ ಬಾಲೆಗೆ ಮಂಗಳಾರುತಿಯನೆತ್ತಿರೆ 3
--------------
ನರಸಿಂಹವಿಠಲರು
ಉದ್ಧಾರ ಮಾಡಿದ ಶ್ರೀರಾಮ ಅಹಲ್ಯಾ | ಉದ್ಧಾರ ಮಾಡಿದ ||ಪದ್ಮಜಾಂಡದೊಳು ಪ್ರಸಿದ್ಧವಾದ ಮಾತಿದು ಪಮುನಿ ಶಾಪದಿಂದಲಿ ವನದಿ ಕಲ್ಲಾಗಿ ಬಲುದಿನ ಚಿಂತಿಸುತಲಿಹ |ವನಿತೆಯ ದಯೆಯಿಂದ1ಮಂದಮತಿ ಮಾಟಕೀ ಇಂದುಮುಖಿಗೆ ಇಂಥಕುಂದುಬಂತಲ್ಲಾ |ಎಂದು ಇಂದ್ರರ ಪ್ರಾರ್ಥಿಸುತಿರೆ2ಮೌನಿ ಮಾತಿಗೆ ಪಾದರೇಣು ಸ್ಪರ್ಶವಿತ್ತು ಮಾನಿನಿಯ ಮಾಡಿದಾ |ಪ್ರಾಣೇಶ ವಿಠಲನು 3
--------------
ಪ್ರಾಣೇಶದಾಸರು
ಎಂಥ ಗಾಡಿಕಾರನೆ ಯಶೋದೆ ನಿನ್ನ ಮಗ ಏಕಾಂತಕಾಂತೆರೊಳಾಡುವ ಕೊಂಕು ನೋಡುವ ಪ.ಮುಗುಳುನಗೆಗಳಿಂದ ಮಡದೇರ ಕಂಚುಕದಬಿಗುಹಿನ ಮಲಕ ಬಿಟ್ಟ ಬಹಳ ದಿಟ್ಟಉಗುರೊತ್ತಿ ಗುರುತು ಪೊಂಬುಗುರಿಗಳೆಮ್ಮವೆಮೊಗ್ಗು ಮೊಲೆಗಳ ಪಿಡಿದು ಮೊನೆ ನೋಡಿದ 1ತೋಳೆರಡನು ತಳಕಿಕ್ಕಿ ಇವಿಗೋ ದುಂಡುಮೊಲೆ ಎನಗಂದವೆಂದು ಮೋಹನಸಿಂಧುತಾಳಿದ್ದ ಕೊರಳೊಳು ತನ್ನ ಪದಕದೊಳುಮೇಲದೆಯೆಂದಪ್ಪಿದ ಬಿಗಿದಪ್ಪಿದ 2ರಾಕೇಂದುಮುಖಿಗೆರಾಹುಬಂದು ತೊಡರಿತುಈಕೆಗೆ ಮೋಸವೆಂದು ಎತ್ತಿದ ಬಂದುಜೋಕೆ ಮಾಡುವೆನೆಂದುಜಡಿದುಮಾರವೇಣಿಯಸಾಕಿ ಉಪಕಾರವೆಂದಸಚ್ಚಿದಾನಂದ3ಎಲೆಲೆ ನಾಭಿ ಒಲ್ಪಕಾಯಳೆ ನಾವು ಮುಟ್ಟಿ ಕೆಂಪಿನಾಮೊಲೆ ಮೊಗ್ಗು ಕಪ್ಪಾದವೆಂದು ಮುಟ್ಟಿ ಅಹುದೆಂದುಅಲಕದ ಪೆಳಲ ಬಿಟ್ಟು ಅಹಿರಿಪು ನವಿಲುಥರಅಲರ್ಗಳಾರ್ಮುಡಿಗಟ್ಟಿದ ಅಂಜಬ್ಯಾಡೆಂದ 4ಚದುರೇರೆನ್ನ ವಂಚಿಸಿ ಚಿನ್ನಿಪಾಲು ತನಿವಣ್ಣುಇದೀಗ ಬಚ್ಚಿಟ್ಟರೆಂದು ಯದುಕುಲೇಂದುಮುದ್ದು ಬಟುಗಲ್ಲದಿ ಮೊನೆವಲ್ಗಳ ನಾಟಿಸಿಅಧರಾಮೃತ ಪೀರಿದ ಅತಿಕೊಬ್ಬಿದ 5ಮುಡಿಯ ತೋರಕ ಕೊಡ ಮಲಿ ಭಾರಕಬಡನಡು ಮುರಿವದೆಂದು ನಗೆಯಲ್ಲವೆಂದುಜಡಿತದೊಡ್ಯಾಣವ ಜಾಣೆ ಕಟಿಗೆ ಬಿಗಿದುಡಿಗೆ ಕರವನಿಡಿದ ದುಡುಕು ಮಾಡಿದ 6ಮೃಗಮದಬಾವನ್ನ ಮಘಮಘಿಪ ಪೂಮಾಲೆಝಗಝಗಿಪ ಭೂಷಣವ ಜಾತಿ ಮೌಕ್ತಿಕವಮುಗುದೇರಿಗಿತ್ತ ಮೋಹಿಪ ಪ್ರಸನ್ನವೆಂಕಟಜಗಕೊಬ್ಬ ಚೆಲುವನಮ್ಮ ಜಯಿಸಿದ ನಮ್ಮ 7
--------------
ಪ್ರಸನ್ನವೆಂಕಟದಾಸರು
ಶೋಭಾನವೇ ಬಗಳಾಮುಖಿ ದೇವಿಗೆಶೋಭಾನವೇ ಸದ್ಗುರುನಾಥಗೆ ಶೋಭಾನವೆನ್ನಿ ಶುಭವೆನ್ನಿಪಸುತ್ತಿದ ಸರಿಗೆಯು ಒತ್ತಿದ ಚಿಂತಾಕೆತ್ತಿದ ರಾಗಟೆ ಹತ್ತಿದ ಚವುರಿಮತ್ತೆ ತುರುಬಿಗೆ ಪಂಚಕ ಮುಡಿದಿಹಮುಡಿದೀ ಬಗಳಾಮುಖಿಗೆ ರತ್ನದಾರತಿಯ ಬೆಳಗಿರೇ1ಶ್ರವಣ ಮನನ ನಿಧಿಧ್ಯಾಸನ ಸಾಧಿಸಿಭವಭವಗಳ ತರಿದೆಲ್ಲವ ಛೇದಿಸಿಶಿವಸಾಕ್ಷಾತ್ತಾಗಿ ಬೆಳಗುತ ಬೆಳಗುತ ಸದ್ಗುರುನಾಥಗೆಪವಳದಾರತಿಯೆ ಬೆಳಗಿರೆ2ವಾಲೆಬಳೆಗಳು ತಾಳಿಯು ಮೂಗುತಿಸಾಲಿನ ಅಡ್ಡಿಕೆ ತಾಯಿತ ಸರಪಳಿಮೇಲು ಪದಕವೆ ಮೆರೆದಿಹ ಮೆರೆದಿಹ ಬಗಳಾಮುಖಿಗೆಲೋಲದಾರತಿ ಬೆಳಗಿರೆ3ಬಾಲೋನ್ಮತ್ತ ಪಿಶಾಚಾಂಧರ ಬದಿರ ಲಕ್ಷಣಮೂಕಾವಸ್ಥೆಯ ತಾ ತಾಳಿ ಅರವಸ್ಥೆಯ ಧರಿಸಿಧರಿಸಿಹ ಸದ್ಗುರುನಾಥಗೆತೈಲದಾರತಿಯ ಬೆಳಗಿರೆ4ಹೊಸ ಮಿಂಟಿಕೆ ಪಿಲ್ಲೆ ಸವಂದಿಗೆಜಸವುಂಗರ ಮೀನೆಸೆದಿಹಮುದ್ರಿಕೆಮಿಸುನಿಯೊಡ್ಯಾಣವು ತೊಳಗುವ ತೊಳಗುವ ಬಗಳಾಮುಖಿಗೆಶೀಲದಾರತಿಯ ಬೆಳಗಿರೆ5ಧಗಧಗಿಸುವ ಪೀತಾಂಬರದುಡುಗೆಯಝಗ ಝಗಿಸುವ ಮಹಾಸ್ವರ್ಣದ ಕಂಚುಕಿನಿಗಮವೆಡಬಲದಲ್ಲಿ ಹೊಗಳುವ ಹೊಗಳುವ ಬಗಳಾಮುಖಿಗೆಸುಗಮದಾರತಿಯ ಬೆಳಗಿರೆ6ಝಗ ಝಗಿಸುವ ಪ್ರಭೆ ದೃಷ್ಟಿಸಿ ಶ್ರವಣದಿಮೊಗೆ ಮೊಗೆದು ದಶನಾದವ ಸೇವಿಸಿಬಗೆ ಬಗೆ ಆನಂದದಿ ಸುಖಿಸುವ ಸುಖಿಸುವ ಸದ್ಗುರುನಾಥಗೆಸುಗಮದಾರತಿಯ ಬೆಳಗಿರೆ7ಸಪ್ತಾವರಣ ಭಸ್ಮವ ಮಾಡಿಸಪ್ತಭೂಮಿಕೆ ಪಾವಟಿಗೆಯನೇರಿಗುಪ್ತ ಪ್ರಭಾತೀತವಾಗಿ ತೊಳಗುವ ತೊಳಗುವ ಸದ್ಗುರುನಾಥಗೆತೃಪ್ತದಾರತಿಯ ಬೆಳಗಿರೆ8ಕಂಕಣ ಹರಡಿಯ ಹಸ್ತದ ಕೈಯ್ಯಲಿಅಂಕುರಪಟ್ಟಿಯು ಪರಿಘವು ಶರಧನುಅಂಕೆಯಿಲ್ಲದಾಯುಧ ಪಿಡಿದಿಹ ಪಿಡಿದಿಹ ಬಗಳಾಮುಖಿಗೆಪಂಕಜದಾರತಿಯ ಬೆಳಗಿರೆ9ಸಾರಿಯೆ ತ್ವಂ ಪದ ತತ್ವಮಸಿ ಪದಮೀರಿಯೆ ಸಗುಣ ನಿರ್ಗುಣ ರೂಪವ ತೋರಿಚರಿಸುವಚರಿಸುವ ಸದ್ಗುರುನಾಥಗೆ ಸಾರದಾರತಿಯ ಬೆಳಿಗಿರೆ10ಪಿಡಿದೆಡಗೈಯಲಿ ವೈರಿಯ ಜಿಹ್ವೆಯ ಕೆಡುಹುತ ತುಳಿದೆಹೊಡೆಯುತ ಖಡುಗದಿ ಕೊಡುತ ಬೇಡಿದವರಿಗೆ ಅಭಯವಅಭಯವೀವ ಬಗಳಾಮುಖಿಗೆ ಸಡಗರದಾರತಿಯ ಬೆಳಗಿರೆ11ಸಾಧನ ನಾಲ್ಕನು ಸಾಧಿಪ ಸಚ್ಛಿಷ್ಯರಿಗೆಅಭಯವ ನೀಡುತ ಭಕ್ತಿರಿಗಾಧಾರವಾಗಿ ಕರುಣಿಪಕರುಣಿಪ ಸದ್ಗುರುನಾಥಗೆ ಸಾಧುಗಳಾರತಿ ಬೆಳಗಿರೆ12ಚಿದಾನಂದ ಪರಬ್ರಹ್ಮವು ತಾನೇಮದಮುಖನು ಸಂಹರಿಸಲೋಸುಗಸದನಬ್ರಹ್ಮ ರಂಧ್ರದಿ ಸ್ಥಾನವಾಯ್ತುಸ್ಥಾನವಾಯ್ತು ಬಗಳಾಮುಖಿಗೆ ಸುಧೆಯ ಆರತಿ ಬೆಳಗಿರೆ13ಸಿದ್ದ ಪರ್ವತವಾಗಿಹ ಪ್ರ-ಸಿದ್ಧ ಬಗಳಾಮುಖಿಯೆಂದೆಣಿಸುವಸಿದ್ಧ ಚಿದಾನಂದಾವಧೂತಅವಧೂತಸದ್ಗುರುನಾಥಗೆಸಿದ್ಧದಾರತಿಯ ಬೆಳಗಿರೆ14
--------------
ಚಿದಾನಂದ ಅವಧೂತರು