ಒಟ್ಟು 7 ಕಡೆಗಳಲ್ಲಿ , 4 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈತನೇ ಲೋಕಗುರು ವೇದವಿಖ್ಯಾತ ಪ. ಭೂತಳದಿ ಶ್ರೀರಾಮದೂತನೆಂಬಾತಅ.ಪ. ಅಖಿಳ ಉದಧಿ ಲಂಘಿಸಿದಇಂದೀವರಾಕ್ಷಿಗೆ ವಂದಿಸಿ ಮುದ್ರಿಕೆಯನಿತ್ತುಬಂದು ರಾಮರ ಪಾದಕೆರಗಿ ನಿಂದಾತ 1 ಅರ್ಜುನಗೆ ಅಣ್ಣನಾಗಿ ಅಂದು ದುರ್ಯೋಧನನಲಜ್ಜೆಯನೆ ಕೆಡಿಸಿ ಷಡ್ರಥಿüಕರನು ಗೆಲಿದಮೂಜ್ಜಗವು ಮೆಚ್ಚಲು ಮುನ್ನ ಮಾಗಧನ ಸೀಳಿದಸಜ್ಜನಪ್ರಿಯ ಭೀಮಸೇನನೆಂಬಾತ2 ಮೂರಾರು ಎರಡೊಂದು ಮೂಢಮತಗಳ ಜರಿದುಸಾರ ಮಧ್ವಶಾಸ್ತ್ರವನು ಸಜ್ಜನರಿಗೊರೆದುಕೂರ್ಮ ಶ್ರೀ ಹಯವದನನ ಪೂರ್ಣ ಸೇವಕನಾದಧೀರ ಮಧ್ವಾಚಾರ್ಯ ಲೋಕದೊಳು ಮೆರೆದ 3
--------------
ವಾದಿರಾಜ
ಎಂತು ಪೊಗಳಲೊ ನಿನ್ನ-ಯತಿಕುಲ ಶಿರೋರನ್ನ ಪ ಶಾಂತ ಮಧ್ವಾಚಾರ್ಯ ಸಂತ ಕುಲವರ್ಯ ಅ.ಪ. ಪ್ರಥಮಾವತಾರದಲಿ ವ್ರತತಿ ರಾಮನ ಭಜಿಸಿಅತಿ ಪಂಥದಿಂದ ಶರಧಿಯನು ದಾಟಿಕ್ಷಿತಿಜೆಗಂಕಿತವಿತ್ತು ಪೂದೋಟವನು ಕಿತ್ತೆಪ್ರತಿಗಾಣೆ ನಿನಗೆ ಅಪ್ರತಿ ಪರಾಕ್ರಮಿಯೆ 1 ದ್ವಿತಿಯಾವತಾರದಲಿ ದೇವಕೀಜನ ಕಂಡುಸತಿಗೆ ಕಾಮಿಸಿದವನ ಸಾಹಸದಿ ಸದೆದೆಪ್ರತಿಯಾದ ಮಾಗಧನಪೃತನದಲಿ ನೀ ಕೊಂದೆಪ್ರತಿಯ ಕಾಣೆನೊ ನಿನಗೆ ಮೂಜ್ಜಗದೊಳಗೆ 2 ತೃತಿಯಾವತಾರದಲಿ ತ್ರಿಜಗನುತಿಸಲು ಬಂದುಯತಿಯಾಗಿ ಮಹಾಮಹಿಮನನು ಭಜಿಸಿದೆಕ್ಷಿತಿಗಧಿಕ ಉಡುಪಿಯಲಿ ಕೃಷ್ಣನ್ನ ನಿಲಿಸಿ ಪ್ರತಿಮತಮತವ ಮುರಿದೆ ಪೂರ್ಣಪ್ರಜ್ಞ ಮುನಿವರನೆ 3
--------------
ವ್ಯಾಸರಾಯರು
ಜಯ ವಾಯು ಹನುಮಂತ ಜಯ ಭೀಮ ಬಲವಂತ ಪ ಜಯಪೂರ್ಣ ಮತಿವಂತ ಜಯ ಸಲಹೊ ಸಂತ ಅ.ಪ. ಅಂಜನೆಯಲಿ ಹುಟ್ಟಿ ಅಂದು ರಾಮನ ಸೇವೆನಂದದಿಂದಲಿ ಮಾಡಿ ಕಪಿ ಬಲವ ಕೂಡಿಸಿಂದು ಲಂಘಿಸಿ ಖಳರ ವನ ಭಂಗಿಸಿ ಸೀತೆ-ಗುಂಗುರವ ಕೊಟ್ಟೆ ಲಂಕಾಪುರವ ಸುಟ್ಟೆ 1 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಅರಿಬಲವ ಕುಟ್ಟಿಉರಗ ಬಂಧನದಿಂದ ಕಪಿವರರು ಮೈಮರೆಯೆಗಿರಿಯ ಸಂಜೀವನವ ತಂದು ಬದುಕಿಸಿದೆ 2 ದ್ವಾಪರಾಂತ್ಯದಿ ಪಾಂಡು ಭೂಪನಾತ್ಮಜನೆನಿಸಿಶ್ರೀ ಪಾರ್ಥಸಾರಥಿಯ ಭಜಕ ನೀನಾದೆಪಾಪಿ ಮಾಗಧ ಬಕ ಕೀಚಕ ಹಿಡಿಂಬಕರಕೋಪದಿಂದಲಿ ತರಿದೆ ಮೂಜ್ಜಗದಿ ಮೆರೆದೆ 3 ಧsÀುರದಲಿ ದುರ್ಯೋಧನನ ಬಲವನು ತರಿದೆಅರಿತು ದುಶ್ಶಾಸನನ ಒಡಲನ್ನು ಬಗೆದೆಉರವ ತಪ್ಪಿಸಿ ಕೌರವನ್ನ ತೊಡೆಗಳ ಮುರಿದೆಹರಿಯ ಕಿಂಕರ ಧುರಂಧರಗಾರು ಸರಿಯೆ ಕಲಿಯುಗದಲಿ ಕಳ್ಳರುದಿಸಿ ದುರ್ಮತಗಳನುಬಲಿಸಿ ಶ್ರೀಹರಿಯ ಗುಣಗಳನು ಮರೆಸಿಕಲಿಯನನುಸರಿಸಲು ಗುರುವಾಗಿ ಅವತರಿಸಿಖಳರ ದುರ್ಮತ ಮುರಿದೆ ಶ್ರೀಕೃಷ್ಣಪರನೆಂದೆ
--------------
ವ್ಯಾಸರಾಯರು
ನಿಖಿಳ ಗುಣಪೂರ್ಣ ಪ ಭಾರತೀಶ ಸಕಲಪ್ರಾಣಿಗಳ ಹೃದಯಾಬ್ಜ ವಾಸ ಸುರೇಶಅ.ಪ ವಾತಸುತನಾಗಿ ರಘುನಾಥ ಪ್ರಿಯ ದೂತ ಬಲುಯೂಥ ಲಂಕೆಯ ಪೊಕ್ಕು ಖ್ಯಾತಿಯನು ಪಡೆದೆಸೀತೆಗುಂಗುರವಿತ್ತು ವೀತಿಹೋತ್ರಗೆ ಪುರವಪ್ರೀತೆನಿಸಿದಾತ ದಿತಿಜಾತರಿಗೆ ಭೀತಿಕರ 1 ಲಂಡ ಕೀಚಕ ಬಕರ ಮಂಡೆಯನು ಒಡೆದು ಉ-ದ್ದಂಡ ಮಗಧಾಧಿಪನ ದಂಡವನು ಸೀಳಿಭಂಡ ಕೌರವರ ಶಿರ ಚೆಂಡಾಡಿ ಪ್ರಬಲ ರಣ-ಮಂಡಲದಿ ಚಂಡರಿಪು ದಂಡೆಗಳ ಖಂಡಿಸಿದೆ 2 ಭೃಂಗ ಮೂಜ್ಜಗದೊಳಗೆತುಂಗ ಭವಭಂಗ ದಯಾಪಾಂಗ ಯತಿಪುಂಗವನೆ3
--------------
ವ್ಯಾಸರಾಯರು
ರಕ್ಷೆಸೆನ್ನ ಈ ಕ್ಷಣದಲುಪೇಕ್ಷೆ ಮಾಡದೆ ಪಕ್ಷಿವಾಹನ ಪರಮಪುರುಷ ಲಕ್ಷ್ಮಿನಾಯಕ ಪ ಅಂದಂದಿಂದ ಕೈಯಹಿಡಿದು ಚಂದದಿಂದ ಎನ್ನಬಿಡದೆ ಇಂದು ನಿನ್ನ ದ್ವಂದ್ವ ಚರಣಕ್ಹೊಂದಿದ ದಾಸನು ಎಂದು 1 ಕಷ್ಟಿ ಇವನು ಎಂದು ಕರುಣ ದೃಷ್ಟಿಯನೆ ತೋರುಬೇಗ ಸೃಷ್ಟಿಗೊಡೆಯ ನಾದ ಶ್ರೀ ಕೃಷ್ಣಮೂರುತಿ ನೀನೆ ಗತಿ 2 ಇಂದು ಮಾಡಿದಂಥದೆಂಥಾ ದೋಷವೊ ಹರಿಯೆ ಇಂದು ಎನ್ನ ಬಾಧಿಸುವುದು ಏನು ಕಾರಣವೊ ಕೃಷ್ಣಾ 3 ಸಜ್ಜನರ ರಕ್ಷಕ ದೇವ ಸರ್ವಜನರ ಪೋಷಕ ನೀನೆ ದುರ್ಜನರ ಖಂಡಿಸಿದ ಮೂಜ್ಜಗ ಪಾಲಕ ನೀನೇ ಎಂದೂ 4 ಪುಂಡರೀಕವರದ ಭೂಮಂಡಲಾಧಿಪತಿಯೆನಿಸಿ ಮಹಿಮವುಳ್ಳದೇವ 5 ಭಾವಜನಯ್ಯ ಭವ ಸ್ತೋತ್ರ ಪ್ರೀಯಾ ಪೊರೆಯದಲಿರುವದು ದೇವಾ 6 ಗಂಗೆ ಜನಕ ಮಂಗಳಾಂಗ ಕರುಣಾಸಾಗರ ಘನಗಂಭೀರಾ ರಂಗ `ಹೆನ್ನವಿಠಲ' ಕೃಪಾಂಗ ದೇವೋತ್ತುಂಗ ಹರಿಯೆ7
--------------
ಹೆನ್ನೆರಂಗದಾಸರು
ಶಂಕರನಾರಾಯಣ ಸಲಹೊ ಎನ್ನ | ಪಂಕಜ ಪಾರ್ವತಿ ಪ್ರಿಯಾ | ಕಿಂಕರನ ಮೊರೆ ಕೇಳು ಪ ಶಂಖ ಚಕ್ರಪಾಣಿ | ಮೃಗಾಂಕ ಮೌಳಿ ಅಹಿಪರಿ-| ಯಂಕ ರುಂಡಮಾಲಾ ಶ್ರೀ | ವತ್ಸಾಂಕ ಭುಜಗಭೂಷಣ ವಿಷ್ಟು 1 ನಂದಿಗಮನ ಗರುಡಾರೂಢಾ | ಅಂದ ಭಸ್ಮಧರ ಕಸ್ತೂರಿ | ಸಿಂಧು ವೈರಿ 2 ಪೀತಾಂಬರಧರ ಕೃತ್ಯವಾಸಾ | ಜಾತರಹಿತ ಜಾಹ್ನವಿಧರ | ವಿ- ಧಾತ ಜನಕ ತ್ರಿಶೂಲಪಾಣಿ | ವಾತನೋಡಿಯ ಶಿವ ಗೋವಿಂದ 3 ಕೈಲಾಸವಾಸ ವೈಕುಂಠ | ಲೋಲ ಮಹಾಲಿಂಗ ರಂಗಾ | ಜ್ವಾಲನೇತ್ರ ಕಮಲನಯನಾ | ಕಾಲಾ ನೀಲವರ್ಣ ಕಪರ್ವಿ 4 ರಾಜನೊಬ್ಬ ಭೃತ್ಯನೊಬ್ಬ | ಪೂಜ್ಯನೊಬ್ಬ ಮಾಳ್ಪನೊಬ್ಬ | ಮೂಜ್ಜಗೇಶ ವಿಜಯವಿಠ್ಠಲ | ರಾಜ ತಾತ ಈಶ ಮೊಮ್ಮಗ 5
--------------
ವಿಜಯದಾಸ
ಹರಿನಾಮ ಭಜನೆಯೊಳಿರು ಇರೂ ಶ್ರೀಹರಿ ಮಹಿಮೆಯ ಭುವಿ ತೋರುರೋರು ಪ ಸಜ್ಜನರ ಸಂಗವ ಮಾಡು ಮಾಡು ದುರ್ಜನರ ಸಂಗವ ಬಿಡೂ ಬಿಡೂ ಮೂಜ್ಜಗದೊಡೆಯನ ಪಾಡು ಪಾಡು ಇನ್ನು ಮುಕುತಿಯ ಬೇಕೆಂದು ಬೇಡು ಬೇಡು 1 ಪಾದ ಹಿಡಿ ಹಿಡಿ ಮನದಿರುವ ಕಾಮ ಕ್ರೋಧ ಕಡಿ ಕಡಿ ಶರಣರ ಕೂಟದೋಳ್ ಕೂಡಿ ಕೂಡಿ ಬೇಗ ನರಹರಿ ಮೂರ್ತಿಯ ನೋಡಿನೋಡಿ 2 ರಾಮನಾಮಾಮೃತ ಕುಡಿ ಕುಡಿ ಅತಿಕಾಮುಕ ದ್ರವ್ಯವ ಬಿಡಿಬಿಡಿ ಸ್ವಾಮಿ ನಾರಾಯಣನೆಂದು ನುಡಿನುಡಿ ಬಹು ಪ್ರೇಮದಿ ಹರಿಕರುಣ ಪಡಿಪಡಿ 3 ಸಕಲಶಾಸ್ತ್ರಗಳ ನೋಡು ನೋಡು ಅದರ ಸಾರಾಂಶ ತಿಳಿದು ಆಡೂ ಆಡೂ ಪ್ರಕಟಿತ ಭಕ್ತರಿಗನ್ನ ನೀಡು ನೀಡು ಇನ್ನು ಪರಮಾತ್ಮನ ಕೊಂಡಾಡು ಆಡು 4 ನರಹರಿಯು ಕಥೆಯ ಕಿವಿಲಿ ಕೇಳುಕೇಳು ಪರಮ ಭಕ್ತರ ಪಾದಕೆ ಬೀಳು ಬೀಳು ಶ್ರೀ ಪರಬ್ರಹ್ಮನ ಸೇವೆಗೆ ಏಳು ಏಳು 5 ಯೋಗ್ಯರ ಕಂಡರೆ ಹಿಗ್ಗೂ ಹಿಗ್ಗೂ ಅತಿ ಭಾಗ್ಯರ ಕಂಡರೆ ತಗ್ಗೂ ತಗ್ಗೂ ಸುಜ್ಞಾನಿಗಳಿಗೆ ಡೊಗ್ಗು ಡೊಗ್ಗು ಇನ್ನು ಶುದ್ಧಾತ್ಮಕರೊಳು ಜಗ್ಗು ಜಗ್ಗು 6 ಸನ್ಯಾಸಿಗಳನು ಸೇರು ಸೇರು ದುಷ್ಟದುರ್ಮಾಗರ ಕಂಡು ದೂರು ದೂರು ಮರ್ಮ ಬಲ್ಲವರಲ್ಲಿ ಜಾರು ಜಾರು ಶ್ರೀ ಮಹಾ 'ಹೆನ್ನ ವಿಠ್ಠಲನ’ ‘ಸಾರೂ ಸಾರೂ’ 7
--------------
ಹೆನ್ನೆರಂಗದಾಸರು