ಒಟ್ಟು 26 ಕಡೆಗಳಲ್ಲಿ , 15 ದಾಸರು , 26 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಮಂಗಳೂರಿನ ಪ್ರಾಣದೇವರನ್ನು ನೆನೆದು) ಪಾಲಿಸೆನ್ನ ಪಾವಮಾನಿ ಪಾವನಾತ್ಮ ಸುಜ್ಞಾನಿ ಪ. ಮೂರ್ಲೋಕದ ಸಚರಾಚರಜಾಲದಂತರಂಗ ಕರುಣಿ ಅ.ಪ. ಮೂರವತಾರವ ಗೈದು ಮುರಾರಿಯ ಪೂಜಿಸಿದೆ ಪಾರಮೇಷ್ಠಿಪದ ಪೊಂದಿದೆ ಭಾರತಿಮನೋಹರ 1 ಪಾರಗಾಣರು ನಿನ್ನ ಮಹಿಮೆ ಫಾಲನಯನಾದಿಗಳು ಕ್ರೂರಕರ್ಮಿಗಳೇನರಿವರು ಶ್ರೀರಾಮಶರಣ್ಯ 2 ಅರಿವರ್ಗಗಳತಿಕ್ರಮವ ಧಿಕ್ಕರಿಸೈ ಸುಜ್ಞಾನವಿತ್ತು 3 ಸರ್ವಾಪರಾಧಗಳನು ಸಾಧುವರದ ಕ್ಷಮಿಸು ಗರ್ವಹಂಕಾರವೀಯದೆ ಗಜವರದನ ಭಕ್ತಿಯಿತ್ತು 4 ಕರಣೀಕಾಗ್ರಣಿ ಮಂಗಲಪುರವರ ಪ್ರಾಣೇಶ ವರ ಲಕ್ಷ್ಮೀನಾರಾಯಣ ಶರಣಾಗತರೀಶ 5
--------------
ತುಪಾಕಿ ವೆಂಕಟರಮಣಾಚಾರ್ಯ
ಅನಂತ ಯೋನಿಯೊಳಗೆ ಅನಂತ ಜನ್ಮತಿರುಗಿಅನಂತ ಯುಗಯುಗಂಗಳಲಿ ಸತ್ತು ಹುಟ್ಟೆಅನಂತನಾಟವೆಯೆಂದು ಅರಿವು ಇಲ್ಲದೆ ಹೋಗಿಅನಂತ ದುಃಖಸಾಗರದಿ ಹಿರಿದು ಬಳಲುವಿರಿ 1 ವಿಶ್ವತೈಜಸ ಪ್ರಾಜ್ಞ ಮೂವರೆಂದೆನಿಸಿವಿಶ್ವದೊಳು ನಾನಾ ರೂಪಗಳ ತಾಳಿವಿಶ್ವದೊಳ ಹೊರಗೆಲ್ಲ ಪೂರ್ಣ ತಾನೆಂದೆನಲುವಿಶ್ವಾತ್ಮಕನು ನೀವು ಮತ್ತಾರು ತಿಳಿಯಿರೋ 2 ಮೂರವಸ್ಥೆಗಳಲ್ಲಿ ಮೂರು ಮೂರ್ತಿಗಳಾಗಿತೋರುತಿಹ ನಾನಾ ಬಗೆ ಲೀಲೆಗಳನುಭೂರಿ ಸಂಸಾರಗಳ ದುಃಖ ಸುಖವೆಂದೆನಿಸಿತೋರಿ ನೋಡಿಪನವನು ಮತ್ತಾರು ತಿಳಿಯಿರೋ 3 ಸತಿ ಪುರುಷರಾಗಿಹನು ಸುತನು ತಾನಾಗಿಹನುಖತಿಯು ಶಾಂತಿಯು ಕಾಮವಾಗಿ ತಾನಿಹನುಅತಿ ಕುಲಗಳಾಗಿಹನು ಅತಿ ಜಂತುವಾಗಿಹನುಮಿತಿಯಿಲ್ಲದಾಗಿಹನು ನೀವಾರು ತಿಳಿಯಿರೋ 4 ಈ ವಾಕ್ಯಗಳನೇ ನೀವಾರಮುಂದುಸುರದಲೆಸಾವದಾನದಿ ತಿಳಿದು ನೋಡಿದೇವ ಚಿದಾನಂದ ಗುರು ತಾನೀಗ ನಿಜವೆಂದುಸಾವದಾನದಿ ಕಂಡು ಕಡೆಹಾಯಿರೋ 5
--------------
ಚಿದಾನಂದ ಅವಧೂತರು
ಗುರು ಮುಖ್ಯಪ್ರಾಣದರಸನೆ ನೀ ಎನ್ನ ಕರುಣಿಸು ಕೃಪೆಯಿರಿಸು ಪ. ನಿತ್ಯ ಪರಿಪೂರ್ಣನಾಗುತ ಪರಮಾತ್ಮನ ಮತಕನುಸರಿಸಿ ಧರೆಗೆ ಭಾರವಾದ ದುರುಳರ ವಧೆಗೈದ ಮರುತಾತ್ಮಜ ಮನೋಹರ ಮೂರುತಿಯಾದ 1 ರಾಮನಪ್ಪಣೆಯಿಂದ ಆ ಮಹಾಂಬೋಧಿಯ ಭೀಮ ವಿಕ್ರಮನುರೆ ದಾಂಟಿ ಬಂದು ರಾಮಣೀಯಕರವಾದ ರಾಮಮುದ್ರಿಕೆಯನ್ನು ತಾ ಮಣಿಯುತ ಸೀತಾ ಮಾನಿನಿಗಿತ್ತ 2 ಆ ಮಹಾಲಕ್ಷ್ಮಿಯ ನೇಮವ ಕೈಗೊಂಡು ತಾಮಸಿಚರರ ನಿರ್ನಾಮಗೈದು ಹೇಮಲಂಕೆಯನುರೆ ಹೋಮವಗೈಯುತ ಚೂಡಾಮಣಿ ತಂದಿತ್ತ 3 ಕ್ರೂರ ಕೌರವಕುಲ ಘೋರ ಕಾನನಕೆ ಕು- ಠಾರನಾಗುತಲಿ ಸಂಹಾರಗೈದು ವಾರಿಜಾಕ್ಷನ ಕೃಪೆಯಿಂದ ಮಾಗಧನನ್ನು ಚೀರಿದ ಕುಂತಿಕುಮಾರ ಮೂರ್ಲೋಕದ 4 ಹರಿ ಸರ್ವೋತ್ತಮನೆಂದು ಧರೆಗೆ ಸಾರುತ ಬಂದು ವರ ವೈಷ್ಣವಮತ ಸ್ಥಿರವ ಮಾಡಿ ಧರಣಿಯೊಳಗೆ ತಾತ್ವರ್ಯನಿರ್ಣಯವೆಂಬ ಪರಮ ಗ್ರಂಥವಗೈದ ಗುರು ಮಧ್ವಾಚಾರ್ಯನೆ 5 ಇಂತೀ ಮೂರವತಾರವಾಂತು ದಾನವರಿಂಗೆ ಸಂತಾಪಗೈದ ಮಹಾತುಮನೆ ಚಿಂತಿತಾರ್ಥವನೀವ ಚಿಂತಾಮಣಿ ಎಂದು ಸಂತತ ಭಜಿಪೆನು ಶಾಂತ ಹುನುಮಂತನೆ 6 ಶ್ರೀ ರಾಘವ ಲಕ್ಷ್ಮೀನಾರಾಯಣನ ಪಾದ- ಚಾರಕನಾದ ಗಂಭೀರನಿಗೆ ನೀರಜಾಂಡದೊಳಾರು ಸಮಾನರು ಕ್ಷಿರಸಾಗರಶಯನ ನೀನೊಬ್ಬನಲ್ಲದೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಗುರು ಮುಖ್ಯಪ್ರಾಣದರಸನೆ ನೀ ಎನ್ನ ಕರುಣಿಸು ಕೃಪೆಯಿರಿಸು ಪ. ನಿತ್ಯ ಪರಿಪೂರ್ಣನಾಗುತ ಪರಮಾತ್ಮನ ಮತಕನುಸರಿಸಿ ಧರೆಗೆ ಭಾರವಾದ ದುರುಳರ ವಧೆಗೈದ ಮರುತಾತ್ಮಜ ಮನೋಹರ ಮೂರುತಿಯಾದ 1 ರಾಮನಪ್ಪಣೆಯಿಂದ ಆ ಮಹಾಂಬೋಧಿಯ ಭೀಮ ವಿಕ್ರಮನುರೆ ದಾಂಟಿ ಬಂದು ರಾಮಣೀಯಕರವಾದ ರಾಮಮುದ್ರಿಕೆಯನ್ನು ತಾ ಮಣಿಯುತ ಸೀತಾ ಮಾನಿನಿಗಿತ್ತ 2 ಆ ಮಹಾಲಕ್ಷ್ಮಿಯ ನೇಮವ ಕೈಗೊಂಡು ತಾಮಸಿಚರರ ನಿರ್ನಾಮಗೈದು ಹೇಮಲಂಕೆಯನುರೆ ಹೋಮವಗೈಯುತ ಚೂಡಾಮಣಿ ತಂದಿತ್ತ 3 ಕ್ರೂರ ಕೌರವಕುಲ ಘೋರ ಕಾನನಕೆ ಕು- ಠಾರನಾಗುತಲಿ ಸಂಹಾರಗೈದು ವಾರಿಜಾಕ್ಷನ ಕೃಪೆಯಿಂದ ಮಾಗಧನನ್ನು ಚೀರಿದ ಕುಂತಿಕುಮಾರ ಮೂರ್ಲೋಕದ 4 ಹರಿ ಸರ್ವೋತ್ತಮನೆಂದು ಧರೆಗೆ ಸಾರುತ ಬಂದು ವರ ವೈಷ್ಣವಮತ ಸ್ಥಿರವ ಮಾಡಿ ಧರಣಿಯೊಳಗೆ ತಾತ್ವರ್ಯನಿರ್ಣಯವೆಂಬ ಪರಮ ಗ್ರಂಥವಗೈದ ಗುರು ಮಧ್ವಾಚಾರ್ಯನೆ 5 ಇಂತೀ ಮೂರವತಾರವಾಂತು ದಾನವರಿಂಗೆ ಸಂತಾಪಗೈದ ಮಹಾತುಮನೆ ಚಿಂತಿತಾರ್ಥವನೀವ ಚಿಂತಾಮಣಿ ಎಂದು ಸಂತತ ಭಜಿಪೆನು ಶಾಂತ ಹುನುಮಂತನೆ 6 ಶ್ರೀ ರಾಘವ ಲಕ್ಷ್ಮೀನಾರಾಯಣನ ಪಾದ- ಚಾರಕನಾದ ಗಂಭೀರನಿಗೆ ನೀರಜಾಂಡದೊಳಾರು ಸಮಾನರು ಕ್ಷಿರಸಾಗರಶಯನ ನೀನೊಬ್ಬನಲ್ಲದೆ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯದೇವ ಜಯದೇವ ಜಯಜಯ ಹನುಮಂತಾ | ದಯದೊಲವಿಂದಲಿ ಸಲಹು ಜಯ ಕೀರುತಿವಂತ ಪ ಅಂಜನೆ ಉದರದಿ ಬಂದು ಮೌಂಜೀಬಂಧನದಿ | ಕಂಜ ಸಖನ ಮಂಡಲ ತುಡಕಲು ಹವಣಿಸಿದಿ | ಭಂಜನೆ ಇಲ್ಲದೆ ರಾಮರ ಸೇವೆಗೆ ತತ್ಪರದಿ | ರಂಜಿಸುವಂದದಿ ಮಾಡಿದೆ ಇಳೆಯೊಳು ತನುಮನದಿ 1 ರಘುಪತಿ ಮುದ್ರೆಯ ಕೊಂಡು ಸಾಗರ ಲಂಘಿಸಿದೆ| ಭುಕುತಿಲಿ ಜಾನಕಿದೇವಿಗೆ ಅರ್ಪಿಸಿ ಕೈಮುಗಿದೆ | ಯಕುತಿಲಿ ವನವನೆ ಕಿತ್ತಿ ಲಂಕೆಯ ಸದೆಬಡಿದೆ| ಮಗುಳೆ ಪ್ರತಾಪದಿ ಬಂದು ಅಜಪದವಿಯ ಪಡೆದೆ 2 ಮೂರವತಾರ ನೀ ಆಗಿ ಪರಿಪರಿ ಚರಿತೆಯನು | ದೋರಿದೆ ಜಗದೊಳು ಅನುಪಮ ಹರಿಪ್ರಿಯನಾದವನು | ಚಾರು ಭಕ್ತೀಭಾವ ಪ್ರೇಮವ ಕಂಡವನು | ಅನುದಿನ ಮಹೀಪತಿನಂದನು ನಿಮ್ಮವನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತೋರಮ್ಮಯ್ಯ ಯತಿಕುಲ ಸರ್ವಭೌಮನ್ನ ಪಮೂರವತಾರದ ಪುಣ್ಯರಾಶಿಯನು ತೂರಿಸುಜನರ ಪೊರೆವ ಉದಾರನ ಅ.ಪಅಸುರ ಬಾಲನಂತೆ ಹರಿಯಲಿ ಅಸಮ ಭಕ್ತಿಯಂತೆಅಸುರಾರಿಯ ನರಸಿಂಹರೂಪವನು ಅಸುರತಾತನಿಗೆ ತೋರ್ದನಂತೆ 1ಪರಮಹಂಸನಂತೆ ಪುರಂದರದಾಸರ ಗುರು ಅಂತೆಅರಸನ ರಕ್ಷಿಸಿ ಅರಸನಾಗಿ ಕ್ಷಣ ಉದ್ಗ್ರಂಥಗಳನು ರಚಿಸಿದನಂತೆ 2ಕಡುಬಡತನವಂತೆ ಸುದಾಮನ ಮರಸಿ ಬಿಟ್ಟಿತಂತೆಸಡಗರದಿಂದ ಸನ್ಯಾಸಿಯಾಗಿ ದರ್ಮಸಾಮ್ರಾಜ್ಯವನಾಳಿದನಂತೆ3ಕಾಮಧೇನುವಂತೆ ಕಲಿಯುಗ ಕಲ್ಪವೃಕ್ಷವಂತೆನೇಮದಿಂದ ಸೇವೆಯನು ಮಾಡಿದರೆ ಕಾ'ುತಾರ್ಥಗಳನೀಯ್ವನಂತೆ 4ಸಾಲವಪುರದಂತೆ ಭಕ್ತರಿಗೊಲಿದು ಬಂದನಂತೆಮೂಲಸ್ಥಾನ ಮಂತ್ರಾಲಯವಂತೆ ಭೂಪತಿ'ಠಲನ ತೋರುವನಂತೆ 5
--------------
ಭೂಪತಿ ವಿಠಲರು
ಪಾದ ಸರೋಜಯುಗಳವ ನೆರೆ ನಂಬಿದೆ ಜೀಯ್ಯ ಪ ತಿಮಿರ ಕಾನನ ಯತಿವರ್ಯ ಮಹಾಶೌರ್ಯ ಮೇರು ಸಮ ಧೈರ್ಯ ತ್ರಿವಿಧ ಜೀವರಿಗೆ ಆಚಾರ್ಯ ಅ.ಪ ರಾಮದೂತಾನಾಗಿ ಸೀತೆಗುಂಗುರವಿತ್ತೆ ಕಲಿಯುಗದಿ ಭೂಸುರಕುಲದಿ ಪುಟ್ಟಿ ನೀ ಮೆರೆದಿ ಆರ್ತಜನ ಕೃಪಾಶರಧಿ 1 ಅನುಸಂಧಾನ ಪೂರ್ವಕ ಕೊಡು ವಿಜ್ಞಾನ 2 ಮೂರವತಾರದಿ ಶ್ರೀರಾಮ ಕೃಷ್ಣ ವ್ಯಾಸ- ರಾರಾಧಿಸಿ ಗೈದ ಧೀರ ಶಿಖಾಮಣಿ ಭವ ಭಯನಾಶ ಕೊಡುವುದು ಲೇಸಾ ಗುರುರಾಮವಿಠಲನದಾಸ 3
--------------
ಗುರುರಾಮವಿಠಲ
ಪ್ರಾಣಪತೇ ಗುರುವರೇಣ್ಯಾಗ್ರಗಣ್ಯ ಪ ಕಾಣೇ ನಿನಗೆ ಸರಿಜಾಣರ ತ್ರಿಜಗದೊಳು ಅ.ಪ ರಾಮಕೃಷ್ಣ ವೇದವ್ಯಾಸ ನೀ ಮೂರವತಾರದಿ ಪ್ರೇಮದಿ ಮಾಡಿದೆ ನಿಷ್ಕಾಮ ಮಾರ್ಗಸ್ಥಾಪಕನೆ 1 ಧಾರಾಳವಾಗಿ ನಿಲ್ಲಿಸಿ ಕ್ರೂರರೆದೆಯವೊಡೆದೆ 2 ನಿನ್ನ ನಂಬಾದವ ಬನ್ನಬಡುವ ಭವದಿ ಚೆನ್ನಗುರುರಾಮವಿಠಲನ್ನ ಮಚ್ಚಿಸಿದೆ ಧೀರಾ 3
--------------
ಗುರುರಾಮವಿಠಲ
ಬಣ್ಣಿಸಲಳವಲ್ಲ ನಿಮ್ಮ ಪ್ರ ಸನ್ನ ಮೂರುತಿ ಯಲಗೂರ ವಾಸ ಹನುಮಾ ಪ ಅಂಜನಿಯುದರದಲಿ ಜನಿಸೀ ತೇಜ ಪುಂಜ ರಾಮನ ಸೇವೆಯಲಿ ಮನನಿಲಿಸಿ ಕಂಜ ಛವನ ಪಟ್ಟ ಧರಿಸಿ ಬಲು ರಂಜನೆ ಮೆರೆದ ಭಕ್ತಾಗ್ರಣಿಯೆನಿಸಿ 1 ಜ್ಞಾನ ಭಕುತ ವೈರಾಗ್ಯದಲಿ ಸರಿ ಉರಗ ಲೋಕದಲಿ ಮಾನನಿಧಿಯೇ ವಿಕ್ರಮದಲಿ ಚರ ಣಾಗತೆ ರಕ್ಷಕ ನೇಮ ಬರದಿರಲಿ2 ಮೂರವ ತಾರದಿ ಬಂದು ದೀನೋ ದ್ಧಾರಣ ಮಾಡಿದೆ ಸದ್ಬೋಧ ಗರದು ಕಾರುಣಿ ಗುರುವಾಗೆಂದೆಂದು ಸಹ ಕಾರದಿ ಮಹಿಪತಿ ಸುತಗೊಲಿದಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಾರತೀರಮಣಾ ಮನ್ಮನದಲಿ ತೋರು ತವ ಚರಣಾ ಪ ಮೂರೇಳು ಸಾವಿರದಾರುನೂರು ಜಪ ಓರಂತೆ ಜಪಿಸಿ ಉದ್ಧಾರ ಮಾಡುವಿ ಎಮ್ಮ ಅ.ಪ. ಮೂರುವಿಧ ಜೀವರೋಳು ಹೊರ ನೀ ಪ್ರೇರಕನೋ ದೇವ ನಾರಾಯಣನ ನಿಜಾರಾಧಕರೊಳು ಆರು ನಿನಗೆ ಸರಿ ಮೂರವತಾರನೆ 1 ಚತುರವಿಂಶಶಿ ತತ್ವೇಶರಾಪತಿಯ ನಿನ್ನ ತುತಿಪ ಉಪೇಂದ್ರ ಸುಯತಿಕರ ಪೂಜಿತ ನತಿಸುವೆ ಎಮಗೆ ಸನ್ನತಿ ಕೊಡು ಸರ್ವದಾ 2 ಪ್ರಾಣಪಂಚಕ ರೂಪನೆ ಖಳ ಶ್ರೇಣೀವಂಚಕ ಕ್ಷೋಣಿಯೊಳಗೆ ಕೃಷ್ಣ ವೇಣೀತರಂಗಿಣಿ ತ್ರಾಣಗೈದ ನಿರ್ವಾಣ ಪ್ರದಾಯಕ 3 ಲೋಕರೂಪನೆ ಜಗದೊಳನೇಕ ಚರಿತನೆ ಪಿನಾಕಿ ಸುರೇಂದ್ರ ದಿ ವೌಕಸರೆಮ್ಮನು ಸಾಕುವರನುದಿನ4 ಮಾತರಿಶ್ವನು ಜಾತಹನುಮ ಜಗನ್ನಾಥವಿಠಲನ ಪ್ರೀತಿಯಿಂದಲಿ ತೋರೋ 5
--------------
ಜಗನ್ನಾಥದಾಸರು
ಭಾರತೀಶ ಹರಿದಾಸನಾದನಿಲ್ಲೀ ವೀಣೆಯ ಧರಿಸುತಲೀ ಪ. ಭಾರಿಭಾರಿಗವತಾರ ಮಾಡಿ ಬಳಲೀ ಆನಂದದಲ್ಲೀ ಅ.ಪ. ತ್ರೇತೆಯಲ್ಲಿ ಶ್ರೀ ರಾಮದೂತನಾಗಿ ತನುಸುಖವ ನೀಗಿ ಪ್ರೀತಿ ಭಕ್ತಿಯಲಿ ರಾಮ ಕಾರ್ಯಕಾಗಿ ತನುವಪ್ಪಿಸಿ ಬಾಗಿ ಖ್ಯಾತಿ ಪಡೆದು ಶರಧಿಯ ಲಂಘಿಸಿ ಪೋಗಿ ಸೀತೆಯ ಕಂಡೆರಗಿ ವೀಹೋತ್ರಗೆ ಪುರವಪ್ಪಿಸಿ ತಿರುಗೀ ರಾಮರ ಕಂಡೆರಗಿ 1 ಕುಂತಿಯ ಜಠರದಿ ಜನಿಸಿ ಭೀಮನೆನಿಸೀ ಬಕಮುಖರನೆ ಜೈಸಿ ಸಂತೋಷದಿ ಸೌಗಂಧ ಸತಿಗೆ ಸಲಿಸೀ ಕೌರವರ ಸಂಹರಿಸೀ ಅಂತರಂಗದಲಿ ಕೃಷ್ಣನಂಘ್ರಿ ಭಜಿಸಿ ಪಾಂಡವರನೆ ಮೆರಸೀ ಕಂತುಪಿತನ ಕಡುಕೃಪೆಯ ಪಡೆದು ಸುಖಿಸೀ ಮೇಲ್ತೋರದೆ ಸ್ಮರಿಸೀ 2 ಮೂರನೆ ರೂಪದಿ ಮುನಿಯಾಗವತರಿಸೀ ದುರ್ಮತಗಳ ಜೈಸೀ ಸಾರತತ್ವಮತ ಸಜ್ಜನರಿಗೆ ತಿಳಿಸೀ ಸರ್ವೋತ್ತಮ ಹರಿ ಎನಿಸೀ ಆರು ಅರಿಯದಂತೆ ದಾಸತ್ವವಚರಿಸೀ ದುರ್ಮತಗಳ ಜೈಸೀ ತೋರಿ ತೋರದಂತೆ ಸದ್ಗ್ರಂಥದಿ ತಿಳಿಸೀ ಯತಿ ಕುಲಜರೋಳ್ ನಿಲಿಸೀ 3 ಮೀಸಲ ದಾಸ್ಯವ ಮೂರವತಾರದಲ್ಲಿ ಚರಿಸಲು ಕಲಿಯಲ್ಲೀ ವ್ಯಾಸ ಮುನಿಯು ಬಹಿರಂಗಪಡಿಸೆ ಚಲ್ಲೀ ನಾರದ ಮುನಿಯಲ್ಲೀ ಪುರಂದರ ಗುರುವೆನಿಸುತಲೀ ಮೆರೆಯಲು ಜಗದಲ್ಲೀ ಮೀಸಲು ಉಳಿಯದೆ ಪೋಯಿತೆಂದು ಇಲ್ಲೀ ದಾಸ ತಾನಾಗುತಲೀ 4 ದಾಸತನದ ಆನಂದವನನುಭವಿಸೇ ದೇವತೆಗಳು ಬಯಸೇ ಭೂಸುರ ಜನ್ಮದಿ ಭೂಮಿಯಲವತರಿಸೇ ಹರಿದಾಸರಾಗಿ ಸುಖಿಸೇ ವಾಸುದೇವಗೆ ತಾ ನಿಜದಾಸನು ಎನಿಸೇ ಮಾರುತಿ ಇದ ಬಯಸೇ ಶ್ರೀಶ ಗೋಪಾಲಕೃಷ್ಣವಿಠಲದಾಸಾ ಬೆಳಗಾವಿ ವಾಸಾ 5
--------------
ಅಂಬಾಬಾಯಿ
ಮಂಗಳಂ ನಿಜಭಕ್ತ ಪರಿಪಾಲಗೆ ಪ ಕೇಸರಿ ತನಯಗೆ ಮಂಗಳ ಕಂಜಾಪ್ತಜನ ಕಾಯ್ದಗೆ ಮಂಗಳ ಅಂಜನಾದ್ರಿ ತಂದಾತಗೆ ಮಂಗಳ ಸಂಜಯವಂತ ಶ್ರೀ ಹನುಮಂತಗೆ 1 ಕುಂತಿ ಪಾಂಡವಜನಾಗಿ ಕುವಲಯದೊಳು ಬಲ ವಂತ ರಾಯರಾ ತರಿದಗೆ ದಂತಿಪುರವ ಬೇಡಿ ಕೊಡದಿರೆ ಕೌರವರ ಸಂತತಿ ಸವರಿದ ಸುಖ ಪೂರ್ಣಗೆ 2 ಮೂರವತಾರ ಮಾಡಿದಗೆ ಮಂಗಳ ಮೂರೇಳು ಮತಗಳ ಮುರಿದವಗೆ ಮಂಗಳ ಸಿಂಧು ಜಗನ್ನಾಥ ವಿಠಲನ ಆರಾಧಿಸಿದ ಮಧ್ವ ಮುನಿರಾಯಗೆ 3
--------------
ಜಗನ್ನಾಥದಾಸರು
ಮಂಗಳವೆನ್ನಿ ಮುಖದಲೆ ಜಯಾಮಂಗಳಾರತಿಗಳ ಎತ್ತಿ ಕರದಲೇ ಪ ಮಂಗಳ ಶ್ರೀನಿವಾಸನಿಗೆ ಜಯಮಂಗಳ ತದ್ವಕ್ಷವಾಸಿ ಲಕ್ಷುಮಿಗೆಮಂಗಳ ಸರಸಿಜ ತನುಜಗೆ ಜಯಮಂಗಳ ಮೂರವತಾರ ಮೂರುತಿಗೆ 1 ಮಂಗಳ ವಾಣಿ ಭಾರತಿಗೆ ಜಯಮಂಗಳ ಗರುಡಹ ಪಾರ್ವತೀಶ್ವರಗೆಮಂಗಳ ಷಣ್ಮಾಹೇಶರಿಗೆ ಜಯ 2 ಮಂಗಳ ನಾರದ ಮುನಿಗೆ ಜಯಮಂಗಳ ರಾಘವೇಂದ್ರಾಯ ಯತಿಗೆಮಂಗಳ ದಾಸಮಂಡಳಿಗೆ ಜಯಮಂಗಳ ಇಂದಿರೇಶನ ಭಜಕರಿಗೆ 3
--------------
ಇಂದಿರೇಶರು
ರಾಜೋಪಚಾರರಾಜೋಪಚಾರರಾಜೀವನೇತ್ರ ನೀನವಧರಿಸು ಬೇಗ ಪಸಾವಿರದ ದಳವುಳ್ಳ ಕಮಲವೊಂದಕೆ ಶಕ್ತಿಸಾವಿರದ ಮೌಕ್ತಿಕದ ಸರಗಳೊಪ್ಪಿಹವುಕಾವಿಹುದು ಸಕಲ ದೇವಾತ್ಮಕದ ಶಾರದೆಯುನಾ ವಹಿಸಿ ತುರಿಯ ಕಲಶದ ಛತ್ರವೆಂದೆಂಬ 1ಆವಗವು ಸತ್ವಾದಿ ಗುಣಗಳಿಂದೊಪ್ಪಿರುವಆವರಣ ವಿಕ್ಷೇಪ ಶಕ್ತಿಯೆಂಬೆರಡುದೇವ ನಿನ್ನುಭಯ ಪಾಶ್ರ್ವದಲೊಲವುತಿಹ ಸರ್ವಭಾವದಿಂದುಭಯ ಚಾಮರವೆರಡರಿಂದ 2ಗಂಧರ್ವ ನಗರದಿಂದೈತಂದ ನಾರಿಯರುಛಂದದಿಂ ನರ್ತಿಸುತಲಿಹರೈವರಿವರುಒಂದಾಗಿ ಬಳಿಕಿವರ ಹೊಂದಿ ಮತ್ತೈವರಿರೆಹಿಂದೆ ನಾಲ್ವರುವೆರಸಿ ನಲಿವ ನರ್ತನವೆಂಬ 3ಪರವೆಂದು ನಾಭಿಯಲಿ ಪಶ್ಯಂತಿ ಹೃದಯದಲಿಸ್ವರವಿಹುದು ಕಂಠದಲಿ ಮಧ್ಯಮಾಖ್ಯೆಯಲಿಸ್ಫುರಿಸಿ ಮುಖಕಮಲದಲಿ ವೇದಶಾಸ್ತ್ರಗಳಾಗಿಮೆರೆವ ವೈಖರಿಯೆಂಬ ಗೀತವಿದ ಕೇಳು 4ತಾಳ ಮರ್ದಳೆ ಘಂಟೆ ಭೇರಿ ಶಂಖಗಳಿಂದಮೇಲಾದ ವೀಣೆ ವೇಣುಗಳ ರವದಿಂದಲಾಲಿಸುವ ಛಿಣಿ ಛಿಣೀ ಛಿಣಿಗಳೆಂಬವರಿಂದನೀಲ ಮೇಘಧ್ವಾನ ದಶನಾದದಿಂದ 5ಪರಿಪರಿಯ ಗತಿಯುಳ್ಳ ಚಿತ್ತವೆಂಬಶ್ವವನುವರ ಸತ್ವ ಗುಣವೆಂಬ ಹಲ್ಲಣವ ಬಿಗಿದುನಿರತ ಪರಮಾತ್ಮನೀಕ್ಷಣದ ಕಡಿವಾಣವನುಪಿರಿದಾಗಿಯಳವಡಿಸಿ ಮುಂದೆ ನಿಂದಿಹುದಾಗಿ 6ಒಲವುತಿಹ ಸುಖ ದುಃಖವೆರಡು ಘಂಟೆಗಳಿಂದನೆಲನ ಸೋಕುವ ಕಾಮ ಸುಂಡಿಲದರಿಂದಫಲ ಚತುಷ್ಟಯ ಪಾದ ಮೇಲು ಮಂಟಪದಿಂದಬಲುಮೆಯಹ ಮೂಲ ಕಾರಣವೆಂಬ ಗಜವು 7ಹಿಂದೆಮುಂದರುವರೊಂದಾಗಿ ವಹಿಸಿರಲದಕೆಹೊಂದಿಸಿದ ಚೌಕಿ ಮನವೆಂಬುದದರಲ್ಲಿಮಂದ ಮೃದು ಬಹು ವಿಷಯ ಸುಖದ ಹಾಸಿಕೆ ಹಾಸಿದಂದಳವಿದನುಭವದ ಕೊಂಬಿನಿಂದೊಪ್ಪಿರುವ 8ಆರು ನೆಲೆಯುಳ್ಳ ರಥವದಕೆ ಶಕ್ತಿಗಳೆಂಬಮೂರು ಕಲಶಗಳಲ್ಲಿ ನಾಲ್ಕು ಸತ್ತಿಗೆಯುಮೂರವಸ್ಥೆಗಳದರ ತುರಿಯವೆಂಬುದೆ ನಾಲ್ಕುಮೂರುಲೋಕವನಾಳ್ವ ಮಹಿಮ ನೀ ಪ್ರತಿಗ್ರಹಿಸು 9ನುಡಿವುದೆಲ್ಲವು ವೇದ ನಡೆವುದೆಲ್ಲವು ಶಾಸ್ತ್ರಬಿಡದೆ ನಿನ್ನಾಜ್ಞೆಯೊಳಗಿರೆ ಪುರಾಣದೃಢವಾಗಿ ನಿನ್ನ ಭಜನೆಯ ಮಾಳ್ಪ ದಿವಸವದುಕಡುಪುಣ್ಯವಾದ ಪಂಚಾಂಗವೆನಿಸುವದು 10ಉದಯದಲಿ ನಿನ್ನ ಸ್ಮರಣೆಯ ಮಾಡೆ ಪುಣ್ಯತಿಥಿಒದಗಿಸುವ ಸತ್ಕರ್ಮ ವಾರವೆನಿಸುವದುಅದರಲ್ಲಿಯನುಭವವೆ ನಕ್ಷತ್ರ ನಿನ್ನಲ್ಲಿಹುದುಗೆ ಜೀವನು ಯೋಗ ಹುದುಗುವದೆ ಕರಣ 11ಸಕಲ ವೇದಂಗಳಲಿ ಪ್ರತಿಪಾದಿಸಿದ ಫಲವುವಿಕಳವಿಲ್ಲದೆ ನಿನ್ನ ನಿಮಿಷ ಧ್ಯಾನಿಸಲುಸಕಲ ತೀರ್ಥಸ್ನಾನ ದಾನ ಜಪ ತಪ ಯಜ್ಞಸಕಲವೂ ಬಹುದೆಂಬ ಸರ್ವೋಪಚಾರ 12ಸುರ ಸಿದ್ಧ ಮುನಿವೃಂದ ನಿರತ ಸೇವಿತ ಚರಣಶರಣಾಗತೋದ್ದರಣ ಶರಧಿಜಾರಮಣತಿರುಪತಿಯ ಸ್ಥಿರವಾಸ ನಿರುಪಮ ಮಹಾಕರುಣಮರೆಯೊಕ್ಕೆ ಸಲಹೆನ್ನ ಪ್ರಾಣ ವೆಂಕಟರಮಣ 13ಓಂ ಜುನೇ ನಮಃ
--------------
ತಿಮ್ಮಪ್ಪದಾಸರು
ವಾಯ ದೇವರ ಮಹಿಮಾ ವರ್ಣನೆ ಮೂರವತಾರ , ಷಟ್ಪದಿ ಶ್ರೀರಮೇಶ ವಿಧೀರ ವಿಪವೃತ್ರಾರಿ ವಿನುತ ಸರ್ವಾಧಾರ ನಿರುಪಮನೆ ಸ್ವತಂತ್ರಗುಣಾರ್ಣವ ಪ್ರಭುವೇ | ಪತಿ ಓಂಕಾರ ವ್ಯಾಹೃತಿ ವಾಚ್ಯ ಸರ್ವಪ್ರೇರಕ ಬಲಸುಭಾಸಕ ಹರಿಯೆ ವಾಗ್ರಸನೆ ನಮಿಪೆ 1 ಆಪ್ತನೆಂದರೆ ಪ್ರಾಣ ಸರಿ ಪರಮಾಪ್ತ ಹರಿಯ ಯಥಾರ್ಥಜ್ಞಾನ ಪ್ರಾಪ್ತಿ ಮಾಡಿಸಿ ವಿಷ್ಣು ಕರುಣವ ಕೊಡಿಸುವನು ತಾನು | ಆಪ್ತ ನೆನ್ನೆಯಥಾರ್ಥ ಪೇಳುವ ಮತ್ತೆ ನಿಶ್ಚಯ ಜ್ಞಾನವುಳ್ಳವ ಶಕ್ತ ಕರುಣ ಪಟುತ್ವಯುತನಿರ್ವಂಚನೆಗಳಿಂದ 2 ಶಿಷ್ಯ ವಾತ್ಸಲ್ಯ ಯುತ ಗುರುಸರಿ ವಿಶ್ವ ಜನಕನ ಪ್ರಥಮ ಭಕ್ತಶ್ವಾಸಗಿಂತಲು ಬೇರೆಯವನಿಲ್ಲ ಪವಮಾನನವ | ದೋಷ ಸಂಶಯ ರಹಿತ ಹರಿ ವಿಶ್ವಾಸ ಪಾತ್ರ ವಿಶೇಷ ಮಹಿಮಸುರಾಶ್ರಯ ನಿವನು ವಂಶನೆ ನಿಸುವ ಸೂತ್ರಗಾನಮಿಪೆ 3 ಯಾವ ಜ್ಞಾನ ಬಲ ಸ್ವರೂಪ ಸುದೇವ ಕ್ರೀಡಾದಿ ಗುಣಯುತ ಭವನಾವಿಕ ಪ್ರಭು ವಾಯುವಿನಗುಣ ಚರಿತೆ ವೃಂದಗಳ | ಪಾವನ ಬಳಿತ್ಥಾದಿ ಶೃತಿಗಳು ಸಾವಧಾನದಿ ಪೊಗಳುವವೊ ಆಭಾವಿ ಬ್ರಹ್ಮನ ಮೂಲ ರೂಪವುಜ್ಞಾನ ಬಲಮಯವು 4 ಮೂಲ ರಾಮಾಯಣ ವಿಶೇಷವ ಪೇಳುವ ಹನುಮನೇ ಪ್ರಥಮ ನಿಹಖೂಳ ದಿತಿ ಜನ ಸೈನ್ಯ ಮಾರಕ ಭೀಮ ನೆರಡೆನ್ನಿ | ಶೀಲ ಸಖಗಳ ನೀವ ಶಾಸ್ತ್ರವ ಪಾಲಿಸಿದ ಗುರು ಮಧ್ವರಾಯರೆ ಮೂಲ ಮುಖ್ಯ ಪ್ರಾಣ ದೇವನ ಮೂರನೆಯ ರೂಪ 5 ಪ್ರಾಣ ನೀತ್ರಯ ರೂಪಗಳು ಸಮವೆನ್ನುವದು ಸರ್ವ ವಿಷಯದಿ ಮುಕ್ಕಣ ಪ್ರಮುಖರ ಜ್ಞಾನ ದಾತೃವಿಗಿನ್ನು ಸಮವುಂಟೆ | ಜ್ಞಾನ ವಾಚಕ ಹನುಮ ಶಬ್ದವು ಪೂರ್ಣ ಹರಿ ಸಂದೇಶವೈದನು ಜಾನಕಿಗೆ ನಿರ್ದೋಷ ವಾಕ್ಯಗಳನ್ನು ಧೀಮಂತ 6 ಪಂಚರಾತ್ರಾಗಮ ಪುರಾಣ ವಿರಂಚಿ ಜನಕನ ತೋರ್ಪವೇದವು ವಂಚಿಸದ ಇತಿಹಾಸಗಳು ಕೂಡುತಲಿ ಸಪ್ತಗಳ | ಮಿಂಚಿಸುತ ಸುಜ್ಞಾನ ಪಾಪದ ಸಂಚಯ ತರಿವ ಕಾರಣದಿ ಬಲಿವಂಚಕನ ಭಕ್ತರು ಕರೆಯುವರು ಸಪ್ತಶಿವ ವೆಂದು7 ಶಾಸ್ತ್ರ ವಚನಕೆ ಮಾತೃ ವೆಂಬರು ಸಪ್ತ್ರ ಶಿವಕರ ಮಾತೃಗಳ ಧರಿಸಿಪ್ಪ ನಿವನೆಂದು | ಖ್ಯಾತನಾಗಿಹ ಭೀಮ ನಾಮದಿ ತೀರ್ಥವೆನ್ನಲು ಶಾಸ್ತ್ರವಿದಿತವು ಮತ್ತೆ ಮಧುವೆನೆ ಸುಖವು ಮುಕ್ತಿಯನೀವ ಶಾಸ್ತ್ರವನು 8 ಇತ್ತ ದೇವನೆ ಮಧ್ವನೆಂಬರು ಸುತ್ತುತೀತ್ರಯ ನಾಮದರ್ಥವ ನಿತ್ಯ ತಿಳಿಯುತ ಪಠಿಸಿ ಪಾಡಲುವಾಯು ದೇವನನು | ಭಕ್ತ ಬಾಂಧವನಾತ ವಲಿಯುತ ತತ್ವವೇತ್ತನ ಮಾಳ್ವ ನಿಶ್ಚಯ ಭೃತ್ಯನಾನೆಂತೆಂದು ಮಧ್ವರ ಸಾರಿ ಭಜಿಸುತಿರಿ9 ಪ್ರೌಢ ಮಧ್ವಗೆ ಪೂರ್ಣ ಪ್ರಜ್ಞನೆ ಈತ ಶ್ರುತಿ ಸಿದ್ದ | ಬೀಡು ಮಾಡಿಹ ವಿದ್ಯೆ ನೂಕುತ ತೊಂಡ ನೆಂದಿವರಡಿಗೆ ಬೀಳಲು ಪಾಂಡುರಂಗನ ಬಿಚ್ಚಿ ತೋರುವ ಗೋ ಸಮುದ್ರದಲಿ10 ಏನ ಪೇಳಲಿ ಏನಪೇಳಲಿ ಜ್ಞಾನನಿಧಿ ಸರ್ವಜ್ಞ ಗುರುವರ ತಾನು ಗೈದ ಮಹೋಪಕಾರವ ಮುಕ್ತಿಯೋಗ್ಯರಿಗೆ | ಜ್ಞಾನ ಬಾಹುದೆ ಬಿಟ್ಟರೀತನ ಶೂನ್ಯವೆ ಸರಿ ಎಲ್ಲ ಆತಗೆ ಮನ್ನಿಸುವನೆ ಅನನ್ಯವನು ಹರಿ ಶರಣು ಆಚಾರ್ಯ 11 ಈತನೇ ಆನಂದ ತೀರ್ಥನು ಈತನೇ ಆಚಾರ್ಯ ನಿಶ್ಚಯ ಈತನೇ ಸರಿಮಾತರಿಶ್ವನು ವಾಯುವಿನರೂಪ | ಈತ ಚರಿಸುವ ಶಾಸ್ತ್ರವ್ಯೂಹದಿ ದೈತ್ಯರಿಂದಾಚ್ಛಾದಿತ ಗುಣಯುತ ಆತ್ಮಪೂರ್ಣಾನಂದ ದೇವನ ಶಾಸ್ತ್ರಮಥಿಸುತಲಿ 12 ಸಾರ ವೃಂದಕ್ಕೆ ಚುಚ್ಚುವನು ದುರ್ವಾದಿ ಮತಗಳ ಕೆಚ್ಚೆದೆಯವನು ಗರ್ಜಿಸುತವೇದೋಕ್ತವಾಕ್ಯಗಳ | ಹೆಚ್ಚು ಹೆಚ್ಚೇ ಸರಿಯು ವಿಷ್ಣುವು ಸ್ವಚ್ಛ ಪೂರ್ಣಾನಂದ ಸುಖಮಯ ಪೃಚ್ಛ ಪರಿವಾರ ಸರಿ ವಿಧ್ಯಾದಿಗಳು ಹರಿಗೆಂದು 13 ಕಚ್ಚಿಲತೆಗಳ ಬಿಸುಡುವಂದದಿ ನುಚ್ಚು ಮಾಡುವ ಪ್ರಶ್ನೆನೀಕವ ಅಚ್ಚನಾರಾಯಣನೆ ಪ್ರೇರಕ ನಿವಗೆ ಜನಕನಿಹ | ಮೆಚ್ಚು ಮಗ ಶ್ರೀ ಲಕ್ಷೀ ದೇವಿಗೆ ರಚ್ಚೆತನುವನು ಕಿತ್ತುವೋಡಿಸಿ ಹೆಚ್ಚಿಸುವ ಸುಜ್ಞಾನ ದೀಪವ ಹರಿಯ ಪ್ರಧಮಾಂಗ14 ಕೊಟ್ಟು ಉಂಗುರ ಸುಟ್ಟುಲಂಕೆಯ ಬಿಟ್ಟು ಕಾಮವ ಮೆಟ್ಟಿಖಳರನು ಜಟ್ಟಿ ಹನುಮನು ಪಟ್ಟ ಪುತ್ರನ ಪದವಿ ಸಾಧಿಸಿದ | ಹುಟ್ಟಿ ಕುಂತಿಲಿ ಕುಟ್ಟಿ ಕುರುಕುಲ ಇಟ್ಟು ಮನದಲಿ ದಿಟ್ಟ ಕೃಷ್ಣನ ಅಟ್ಟಿ ಹಾಸದಿ ಮೆರೆದ ಭೀಮನು ಜ್ಞಾನ ಭಾಸ್ಕರನು15 ಹುಟ್ಟು ಸಾವಿನ ಕಟ್ಟು ಬಿಡಿಸಲು ಘಟ್ಟ ದಡಿಯಲಿ ಭಟ್ಟನೆನಿಸುತ ಬಟ್ಟೆ ತವಕದಿ ಭ್ರಷ್ಟದಸ್ಯುಗಳ | ಕೆಟ್ಟ ಮತಗಳ ಸುಟ್ಟು ವಾದದಿ ಸೂತ್ರ ಭಾಷ್ಯವ ನೆಟ್ಟ ಸಂತರ ಮನದಿ ವಿಷ್ಣುವ ಶ್ರೇಷ್ಠಗುರುಮಧ್ವ16 ಏಕೆ ಭಯ ನಮಗಿನ್ನು ನಿರಯದ ಏಕೆ ಸಂಶಯ ಮುಕ್ತಿ ವಿಷಯದಿ ಏಕೆ ಕಳವಳ ಮಧ್ವರಾಯರ ಶಾಸ್ತ್ರ ಪೀಯೂಷ | ಜೋಕೆಯಿಂ ಪ್ರತಿದಿನವು ಸೇವಿಸೆ ಶ್ರೀಕಳತ್ರನು ಕೈಯ ಬಿಡುವನೆ ನಾಕಪತಿಯಿಂಬಿಟ್ಟು ಸಲಹುವ ಶಾಸ್ತ್ರಸಿದ್ಧವಿದು 17 ಹೆಚ್ಚು ಮಾತೇಕಿನ್ನು ಹರಿಮನ ಮೆಚ್ಚುಯೆನಿಸಿಹ ಮಧ್ವರಾಯರು ಬಿಚ್ಚಿತೋರಿದ ತೆರದಿ ಶೃತಿಗಳ ಭಜಿಸಿಖಳ ಜನಕೆ | ಬಚ್ಚಿಡುತ ವಿಜ್ಞಾನ ಮರ್ಮವ ನುಚ್ಚು ನೂಕುತ ದುರ್ಮತಕಿಡಿರಿ ಕಿಚ್ಚು ಕಮಲೇಶ ನೊಲಿಮೆಗೆ ಬೇರೊಂದು ಪಥವಿಲ್ಲ 18 ನಮ್ಮಹಿರಿಯರ ಖಿನ್ನನುಡಿಗಳ ನೊಮ್ಮನದಿ ನೀವೆಲ್ಲ ಕೇಳಿರಿ ರಮ್ಮೆಯರಸಗೆ ಸಮ್ಮತದ ಸಚ್ಛಾಸ್ತ್ರದರ್ಪಣವ | ಹೆಮ್ಮೆಯಿಂದಲಿ ಕೊಟ್ಟು ಬಂದೆವು ಒಮ್ಮೆಯಾದರು ನೋಡುವರೆ ಈ ನಮ್ಮ ಸಂತತಿ ಹಾ ಹರಿ ಹರೀಯೆಂಬ ಕ್ರಾಂತಿಯುತ19 ಉಣ್ಣಿರುಣ್ಣಿರಿ ಮಧ್ವಕಂದರೆ ಭವ ಹುಣ್ಣುವಳಿಯಿರಿ ಅಣ್ಣ ಪ್ರಾಣನದಯವ ಯಾಚಿಸಿಘನ್ನ ಶಾಸ್ತ್ರಾನ್ನ | ಅನ್ನ ಶೃತಿಗಳು ವಿವಿಧ ಸ್ಮøತಿಪ ಕ್ವಾನ್ನ ಪಾಯಸ ಗೀತೆ ಭಕ್ಷ್ಯಗಳೆನ್ನಿ ಬಗೆ ಬಗೆ ಸರ್ವ ಮೂಲವ ಸೂತ್ರಗಳೆ ಸಾರು 20 ತುಪ್ಪವೆನ್ನಿರಿ ನ್ಯಾಯ ಸುಧೆಯನು ಗೊಪ್ಪರಾಜರ ಗ್ರಂಥ ಹಲ್ಪವು ಅಪ್ಪರಾಯರ ವಾಣಿ ಕ್ಷೀರವು ದಾಸ ಸಾಹಿತ್ಯ | ತಪ್ಪದೆಲೆ ತಿಂಬಂಥ ತಿಂಡಿಯು ಚಪ್ಪರಿಸಿ ಭಾರತದ ಕೂಟನು ವಪ್ಪುವನು ಶ್ರೀ ಕೃಷ್ಣ ದೇವನು ಭಕ್ತ ನುಣ್ಣಲಿವ 21 ಎಂತು ಪೊಗಳಲಿ ನಿಮ್ಮ ಗುರುವರ ಹಂತ ಸುರಗಣ ವೆಲ್ಲ ನಿಮ್ಮಡಿ ನಿಂತು ಪಡೆದರು ಜ್ಞಾನ ಪ್ರಾತರ್ನಾಮಕನೆಶರಣು | ಕಂತೆ ಮತಗಳ ನಾಶಗೈದನ ನಂತ ಮಹಿಮನೆ ದೀನ ನಾನಿಹೆ ಕುಂತಿ ನಂದನ ನೀನೆ ತಿಳಸೈ ಸಕಲ ಶಾಸ್ತ್ರಾರ್ಥ 22 ಮೂರ್ತಳೆನಿಸುವ ಚಂದ್ರಮಾನಿನಿನಾಥ ಸೂರ್ಯ ನೊಳ್ ಆದಿತ್ಯ ನಾಮದಿ ನಿಂತು ದಿಕ್ಪತಿಗಳಿಗೆ ಶಕ್ತಿಗಳ | ಇತ್ತು ಸೃಷ್ಠಿಯ ಕಾರ್ಯ ವೆಸಗುವೆ ಉತ್ತರಾಯಣ ಪಗಲು ಮಾನಿಯೆ- ನಿತ್ಯ ಪ್ರೇರಿತ ನೀಪ್ರಜಾಪತಿನಾಮ ಹರಿಯಿಂದ 23 ಖ್ಯಾತ ಮೂರ್ತಾ ಮೂರ್ತ ಧಾರಕೆ ತತ್ವಪತಿಗಳ ಪೋಷತನುವಲಿ ಮೃತ್ಯುಹಾಗಶನಾಪಿಪಾಸಾಪಾನ ನಾಮಗಳ | ಎತ್ತಿ ನಡಿಸುವೆ ದೇಹ ಕಾರ್ಯವ್ರಾತ ಬಿಡಲೇನೊಂದು ನಡೆಯದು ಮಾತರಿಶ್ವನೆ ನಿಧಿಗು ಆರ್ಯುರ್ದಾತ ನೆನಿಸಿರ್ಪೆ 24 ಅನ್ನ ವಿಧಿಯಿಂ ಕೊಂಬೆ ಸಮಸರಿ ಯನ್ನ ಬ್ರಹ್ಮಗೆ ಜೀವ ಗಣತಾವುಣ್ಣಲಾರರು ನಿನ್ನ ಬಿಡೆ ಪ್ರಾಣದಿ ಪಂಚಕನೆ | ಸ್ವಪ್ನ ನಿದ್ರಾ ಸಮಯದೊಳ್ ಹರಿಯನ್ನು ಕೂಡಿರೆ ಕರಣಪರು ಘನಯಜ್ಞ ನಡಿಸಿ ಸರ್ಮರ್ಪಿಸುವೆ ನೀನೊಬ್ಬ ದೇವನಿಗೆ 25 ನಿನ್ನ ನಂಬಿದ ಭಕ್ತನಿಗೆ ಭವ ಹುಣ್ಣು ಮುಟ್ಟದು ವಿಷ್ಣು ವಲಿಯುತ ಮನ್ನಿಸುವ ಹರಿಯಾಜ್ಞೆಯಿಂಮುಕ್ತಿದನು ನೀ ಹೌದು | ವಿಶ್ವ ವಂಶನೆ ನಿನ್ನ ಮಹಿಮೆಯಗಣ್ಯ ಸಿದ್ಧವು ನಿನ್ನ ಧೊರೆ ಹರಿ ಒಬ್ಬ ಜೀವೋತ್ತುಮನೆ ಅಶರೀರ26 ಜ್ಞಾನ ಬಲ ಐಶ್ವರ್ಯಗಳು ಪರಿಪೂರ್ಣ ಸರಿ ವೈರಾಗ್ಯ ಹಾಗೆಯೆ ಪ್ರಾಣನಿನ್ನಲಿ ಕರಿಸುವೆಯೊ ಆಧ್ಯರ್ಧ ನಾಮದಲಿ | ಮಾನ್ಯ ವಿಷ್ಣುಸಹಾಯ ನಿನಗೈನ್ಯೂನ ವಿಲ್ಲವು ಯಾವ ತೆರದಲುಕಾಣೆ ಅಪಜಯ ಜೀವ ಸಾಧನೆಯೆಲ್ಲ ನಿನ್ನಿಂದ 27 ಶೇಷಗಸದಳ ನಿನ್ನ ಪೊಗಳಲು ಶೇಷ ಸರಿ ಬಡದಾಸನಹೆ ವಿಶ್ವಾಸದಿಂ ಸಂವತ್ಸರನೆ ನೀಕಾಯಬೇಕೆಂಬೆ | ಏಸು ಜನ್ಮಗಳನ್ನು ಕೊಟ್ಟರು ಶ್ವಾಸ ಪತಿತವ ಮತದಿ ಪುಟ್ಟಿಸಿ ದಾಸ ಭಾಗ್ಯವ ನೀಡು ಹರಿಯೊಳ್ ಶುದ್ಧ ಭಕ್ತಿಯುತ28 ಎರಡು ಸಹ ಮೂವತ್ತು ಲಕ್ಷಣ ವಿರುತಿಹ ಜಗದ್ಗುರುವೆ ವಿಷ್ಣುವಿಗೆರಡು ಎರಡು ಸರಿಯೆಂತೆಂದು ಸ್ಥಾಪಿಸಿ ಎರಡು ವಿದ್ಯೆಗಳಿರವು ತೊರುವ ಲೆರಡು ಸುಖಗಳ ಪಡೆಯೆಸಾಧನ ಮಾರ್ಗ ನೀಡ್ವೆಬತ 29 ಸರ್ವ ಶಕ್ತನೆ ಶರ್ವ ವಿನುತನೆ ಸರ್ವ ಸರ್ವಗ ಹಿರಿಯ ತನಯನೆ ಸರ್ವ ಜಗದಾಧಾರ ಪೋಷಕ ಸರ್ವ ತೋವರನೆ | ಸರ್ವ ಕಾಲದಿ ಸರ್ವ ದೇಶದಿ ಸರ್ವ ಗುಣದಿಂ ಹರಿಯ ಯಜಿಸುವ ಸರ್ವ ಸದ್ಗುಣ ಪೂರ್ಣ ದೋಷವಿದೂರ ಸರ್ವಜ್ಞ 30 ಹಿಂದೆ ಪೂರ್ವಜರೆಲ್ಲ ಕೂಡುತಲೊಂದು ಪಾಯವಗೈದು ಮೃತ್ಯುವತಂದು ದಿವಿಜ ವೃಂದಕೆ ಕುಂದು ವದಗಿಸಲು | ಕಂದುತಳಿಯಲ್ ನಿಖಿಲ ಸುರಗಣ ಕುಂದು ಮೃತ್ಯುವ ಗೈದು ಪುಡಿಪುಡಿ ವಂದನಾರ್ಹನು ಒಬ್ಬನೀನೇ ಯೆಂದು ಸ್ಥಾಪಿಸಿದೆ 31 ಪಾಹಿ ಅಮ ಶುಚಿ ಯೊಗ ಕ್ಷೇಮನೆ ಪಾಹಿ ಅಮರಲಲಾಮ ಅನಿಲನೆ ನಿರವದ್ಯ | ಪಾಹಿ ಸತ್ಯ ವಿಶುದ್ಧ ಸತ್ವನೆ ಪಾಹಿ ಲಕ್ಷ್ಮೀ ಪುತ್ರ ಭೃತ್ಯನೆ ಪಾಹಿ ಜೀವಗ ಬಾದರಾಯಣಪ್ರೀಯ ಮಹರಾಯ 32 ಪಾಹಿ ಹನುಮನೆ ಭೀಮ ಮಧ್ವನೆ ಪಾಹಿ ದುರ್ಮತ ಧ್ವಾಂತ ಸೂರ್ಯನೆ ಪಾಹಿ ನತಜನ ಪಾಲ ಪ್ರಾಣನೆ ಪಾಹಿ ಶ್ರೀಸುತನೆ | ಪಾಹಿ ಜಗದಾಧಾರ ಸೂತ್ರನೆ ಪಾಹಿ ಸಾಮನೆವಂಶ ದೂರನೆ ಪಾಹಿ ಹರಿಯಚ್ಛಿನ್ನ ಭಕ್ತನೆ ಪಾಹಿ ವಿಜ್ಞಾನ 33 ಪಾಹಿ ಋಜುಪತಿ ವಾಯುಕೂರ್ಮನೆ ಪಾಹಿ ಜೀವ ಲಲಾಮ ಗುಣನಿಧಿ ಪಾಹಿ ಶುಚಿ ಸರ್ವಜ್ಞ ಸಾಮಗಭಾವಿ ಶತಮೋದ | ಪಾಹಿ ಸತ್ಯನೆ ಕಲಿವಿದಾರಣ ಪಾಹಿ ಗುರು ಗೋವತ್ಸ ರೂಪಿಯೆ ಪಾಹಿ ಮಿಷ್ಣು ಪದಾಬ್ಜಮಧುಕರ ಭಾರತೀ ಕಾಂತ 34 ಪಾಹಿ ಅಮೃತನೆ ವಿಶ್ವರಜ್ಜುವೆ ಪಾಹಿ ಬೃಹತೀ ಛಂದ ಮಾನಿಯೆ ಪಾಹಿ ಹಂಸೋಪಾಸಕ ಪ್ರಭು ಆಖಣಾಶ್ಮಸಮ | ಪಾಹಿ ಸಾಯಂಖ್ಯಾತ ಜೀವಗ ಪಾಹಿ ಜಗಚೇಷ್ಠಾ ಪ್ರವರ್ತಕ ಪಾಹಿ ಅನಿಲನೆ ಶೇಷವಿಪಶಿವ ವಂದಿತಾಂಘ್ರಿಯುಗ 35 ಪಾಹಿ ಪರಿಸರ ಪಂಚ ಕೋಶಗ ಪಾಹಿ ಗುಣನಿಧಿ ಕೊವಿದೋತ್ತಮ ಪಾಹಿ ನಮಿಸುವೆ ಅಣುಮಹದ್ಘನ ರೂಪ ವಿಖ್ಯಾತ | ಪಾಹಿ ವಿಶ್ವಗ ವ್ಯಸನ ವರ್ಜಿತ ಪಾಹಿ ಹರಿಯನು ನಿತ್ಯನೋಳ್ಪನೆ ಪಾಹಿ ವಿಷ್ಣುದ್ವಾರ ಶರಣೈ ಪಾಹಿ ಹರಿ ಸಚಿವ 36 ಜಯ ಜಯವು ಶ್ರೀ ಹನುಮ ಭೀಮಗೆ ಜಯ ಜಯವು ಶ್ರೀ ಮಧ್ವರಾಯಗೆ ಜಯ ಜಯವು ತತ್ವೇಶರರಸಗೆ ಮುಖ್ಯಪ್ರಾಣನಿಗೆ | ಜಯ ಜಯವು ಜಯತೀರ್ಥ ಹೃಸ್ಥಗೆ
--------------
ಕೃಷ್ಣವಿಠಲದಾಸರು