ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುದ್ದು ಮೋಹನದಾಸರೆ | ಎನ್ನನು ಬೇಗ ಉದ್ಧರಿಸಿರಿ ಪ್ರೀತರೆ ಪ. ಬಿದ್ದಿಹೆ ದುರ್ವಿಷಯಾಂಧ ಕೂಪದೊಳೀಗ ಶುದ್ಧ ಜ್ಞಾನವನಿತ್ತು ಪದ್ಮನಾಭನ ತೋರಿ ಅ.ಪ. ಪರಮಯತಿಚರ್ಯರೆ | ಈ ಜಗದೊಳು ವರ ಭಕ್ತಿವೆಗ್ಗಳರೆ ತರಳತನದಲಿ ಪಾದಚಾರಿಗಳಾಗಿ ಧರೆಯ ಕ್ಷೇತ್ರವನೆಲ್ಲ ಚರಿಸಿರ್ಪ ವಶಗೈದು ಹರಿಯ ಮೆಚ್ಚಿಸಿ ದಾಸಭಾವದಿ ಪರಿಪರಿಯ ಅಂಕಿತದಿ ಶಿಷ್ಯರ ಪರಮ ಸಂಭ್ರಮಗೊಳಿಸಿ ಮೆರೆಯುತ ಸಿರಿವರನ ಪದಸಾರಿದಂಥ 1 ಶೀಲವಂತರೆ ನಿಮ್ಮನು | ಕೊಂಡಾಡೆ ಈ ಸ್ಥೂಲಮತಿಗೆ ಸಾಧ್ಯವೆ ಕಾಲಕಾಲದಿ ಹರಿಲೀಲೆಯ ಪಾಡುತ ನೀಲವರ್ಣನ ಹೃದಯಾಲಯದಿ ಕಂಡು ಮೂಲರೂಪಿಯ ಪಾದಕಮಲದಿ ಲೋಲುಪಡುತಲಿ ಓಲ್ಯಾಡಿದ ಬಹು ಶೀಲಗುಣಗಣಪಾಲರೆ ಎನ್ನ ಪಾಲಿಸಿರಿ ಸಿರಿಲೋಲನ ತೋರಿ 2 ಸಂದೇಹವಿನ್ಯಾತಕೆ | ಮಂತ್ರದ ಮನೆ ಮಂದಿರದೊಳಗಿರೆ ಬಂದಿರಿ ದಾಸತ್ವದಿಂದ ಧರೆಯೊಳು ನಂದಕಂದನ ಲೀಲೆ ಅಂದ ಪಾಡುತಲಿ ಅಂದು ಗ್ರಂಥಗಳನೋದಿ ಪದವನು ಒಂದು ರಚಿಸಿ ಸಾಲದೆ ಮು- ಕುಂದನಾ ಗುಣವೃಂದ ಪೊಗಳಲು ಚಂದದಿಂದ ವಸುಂಧರೆಯೊಳು 3 ವರತತ್ವ ಅಂಶದಲಿ | ಶ್ರೀ ಗುರುವಿಗೆ ತಾರಕರೆನಿಸಿದಿರಿ ಸಾರಿರೆ ನಿಮ್ಮ ಪದ ಸ್ವಪ್ನದೊಳು ತೋರಿ ತೀರುಥವನೆ ಕೊಟ್ಟು ಸುಮ್ಮನಿರಲು ಗುರು ಸಾರಿ ಬಂದು ಬದಿಯಲಿ ನಿಂದು ಭೂರಿ ಕರುಣವ ಮಾಡಬೇಕೆಂದು ತೋರಿ ಪೇಳಲು ಹರಿ ನಿರ್ಮಾಲ್ಯ ಅಪಾರ ಕರುಣದಿ ಕೊಟ್ಟು ಪೊರೆದಿರಿ 4 ಸ್ತುತಿಸಲಳವೆ ನಿಮ್ಮನು | ಈ ಜಡಮತಿ ಕೃತಕವಲ್ಲವು ಇದಿನ್ನು ಅತಿಪ್ರೇಮ ಗುರುಗಳ ಹಿತದಿಂದ ನುಡಿದುದು ಚ್ಯುತದೂರ ಗೋಪಾಲಕೃಷ್ಣವಿಠ್ಠಲನ ಸತತ ಸ್ತುತಿಸುವ ಮತಿಯ ಪಾಲಿಸಿ ಪಥವ ತೋರಿರಿ ಕರ್ಮಜರೆ ಬೇಗ ಸತತ ಶ್ರೀ ಗುರು ವ್ರತವ ಪಾಲಿಪ ಮತಿಯ ದೃಢದಲಿ ಹಿತದಿ ಕರುಣಿಸಿ 5
--------------
ಅಂಬಾಬಾಯಿ
ಹರಿಯೆ ಸರ್ವೋತ್ತಮ ಪರದೈವವೆಂತೆಂಬ ಮರುತ ಮತವ ಸಾರಿರೊ ಪ. ಗರುವಿಕೆಯನೆ ಬಿಟ್ಟು ಪರಮತವನೆ ಸುಟ್ಟು ಹರಿಯ ಸೇವಕರಾಗಿರೊ | ಈ ಜಗದೊಳು ಅ.ಪ. ಪಂಚ ಭೇಧವ ತಿಳಿದು ಪಂಚೇಂದ್ರಿಯವ ಸೆಳೆದು ಪಂಚ ಮೂರ್ತಿಯ ಭಜಿಸಿರೊ ಪಂಚ ಸಂಸ್ಕಾರದಿ ಪಂಚಯಜ್ಞವ ರಚಿಸಿ ಪಂಚ ಮಾರ್ಗವ ಸಾರಿರೊ | ವೈರಾಗ್ಯದಿ 1 ಎಂಟು ಮದಗಳನಳಿದು ಎಂಟು ಮೂರ್ತಿಯ ತಿಳಿದು ಎಂಟು ದಳದಿ ಕಾಣಿರೊ ಎಂಟು ಕರ್ತೃತ್ವವ ಎಂಟು ತತ್ವದಿ ಮಾಳ್ಪ ಎಂಟಕ್ಷರನ ಪಾಡಿರೊ | ಕೊಂಡಾಡಿರೊ 2 ಮೂರು ಗುಣಗಳಿಂದ ಮೂರು ಮಾಳ್ಪ ಜಗವ ಮೂರು ರೂಪವ ನೆನೆಯಿರೊ ಮೂರು ಮೂರು ಭಕ್ತಿ ಮೂರು ಮಾರ್ಗದಿ ರಚಿಸಿ ಮೂರು ಲೋಕವ ಸಾರಿರೊ | ಮೂರನೆ ಗೆದ್ದು 3 ಕಂಡ ದೈವಗಳಿಗೆ ಮಂಡೆಯ ಬಾಗಿಸುತ ಬೆಂಡು ಆಗಲಿ ಬೇಡಿರೊ ಹಿಂಡು ದೈವಗಳಿಗೆ ಗಂಡ ಹರಿಯ ಭಜಿಸಿ ಗಂಡುಗಲಿಯಾಗಿರೊ | ಧೈರ್ಯವ ತಾಳಿ 4 ಗುರುಗಳಿಂದಲಿ ತತ್ವ ಸರ್ವಕಾಲದಿ ತಿಳಿದು ಉರ್ವಿಯೊಳಗೆ ಬಾಳಿರೊ ಸರ್ವಾಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ಸರ್ವಬಿಂಬನೆನ್ನಿರೊ | ಮೂಲರೂಪಿ 5
--------------
ಅಂಬಾಬಾಯಿ