ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದೆಂದಿಗೂ ಕುಂದದೆ ಸಲಹು ಎನ್ನ ಪ ಮಂದರಧರಸುರ ನರ ಹರಿಯೇಇಂದಿರೆಯರಸರವಿಂದ ಲೋಚನಮಂದನು ನಾನೆಂದರಿಯೆ ಅ.ಪ ಶಿರಿಗರುವದ ಭರದಿಂದ ಬರಸಿ |ಅನ್ಯರೊಳಿರಲು ಬಲು ನಾ ಚರಿಸಿ |ಶಿರಿಕರ ಕರಿವರ ವರದನ ವಿರುದ್ಧವ |ನಿರುವರ ನೆರೆಯಲಿ ಮೆರಿಸಿ 1 ಕರುಣಾಘನ ಕರುಣಾಲಯ ವರ್ಣ ಸು - |ಪರ್ಣಯಾನ ಯದುಕುಲ ಮಣಿಯೇ ||ಶರಣಾಗತ ಪರಿಪಾಲಿಪನೆಂದು |ಪರಿಪರಿ ಪಾಡುತ ನಾ ದಣಿಯೆ 2 ಭವ ಭವ ಬಿಡಿಸಿ3
--------------
ರುಕ್ಮಾಂಗದರು
ಏಸೇಸು ಕÀಲ್ಪ್ಪಕ್ಕು ಈಶನು ನೀನಯ್ಯಾ ಆಸಾಸು ಕಲ್ಪಕ್ಕು ದಾಸನು ಇವನಯ್ಯಾ ಉದಾಸೀನ ಮಾಡದೆ ಪೋಷಿಸಬೇಕಯ್ಯ ವಾಸನ ನೀ ಮಾಡಿ ವಾಸನ ಮಯರೂಪÀ ಸೋಸಿಲಿ ತೋರಿಸಿ ದಾಸನ ಮಾಡಿಕೊ ಆಸೆ ಬಿಡಿಸಿ ವಿಶೇಷ ಭಕುತಿ ಜ್ಞಾನ ಲೇಸಾಗಿ ನೀನಿತ್ತು ಶ್ರೀಶಗುರು ಜಗನ್ನಾಥ ವಿಠಲ ವರ- ಪರಿ ಪರಿ ದೇಶದಲ್ಲಿ ಮೆರಿಸಿ ಆಶೆಯ ಪೂರ್ತಿಸು ವಾಸವನನುಜಾ
--------------
ವರದೇಶವಿಠಲ
ಕರುಣದಿ ಬಂದು ನಿನ್ನ ಚರಣ ಕಮಲವೆನ್ನ ಶಿರದ ಮೇಲಿಟ್ಟು ನೀ ಪೊರಿಯೊ ಕೃಪಾರಸ ಸುರಿಯೋ ಗರುಡಧ್ವಜ ನೀನು ಸ್ಮರಮಣ ನಿನ್ನ ಭಕುತರ ಸುರಧೇನೆಂದು ಕರೆವರು ನಿನ್ನನು ಪ ಸರಸಿಯೊಳ್ಕರಿರಾಜ ಭರದಿಂದ ತನ್ನವುದ್ಧರಿಸೆಂದು ಮೊರೆಯಿಡೆ ಪೊರೆದೆಯಲ್ಲೊ ಶಿರಿಯೊಳುನುಡಿಯದೋ ಶರಣಾಗತರನ್ನು ಪೊರೆವೆನೆಂಬ ನಿಜ ಬಿರಿದನು ಮೆರಿಸಿದಿ1 ಆಗಮವಂದಿತ ನಾಗಭೂಷಣ ತಾತ ಮೇಘವಾಹನ ಸುತನ ಬ್ಯಾಗ ರಕ್ಷಿಸಿದಿ ಜಾಗುಮಾಡದೆ ಎನ್ನ- ದಾಗಲು ರಕ್ಷಿಸೆಂದು ಬಾಗಿ ಬೇಡುವೆನು 2 ಕಾವನು ನೀನಲ್ಲದೆ ಯಾವ ದೇವರನು ನಾ ಆವಲ್ಯು ಕಾಣೆನು ಭಾವಜಜನಕನೆ ಶ್ರೀವಾಸುದೇವನ ಗೋವೃಂದ ರಕ್ಷಕನೆ ಪತಿ ಶ್ರೀವತ್ಸಾಂಕಿತನೆ 3
--------------
ಸಿರಿವತ್ಸಾಂಕಿತರು
ದುರಿತಭಂಜನ ನರಹರಿಯೆ |ಪರಿಪರಿಯಿಂದ ಸಲಹು ಶ್ರೀವೈಕುಂಠ ದೊರೆಯೆ ಪ ನಿನ್ನ ದಾಸರ ದಾಸ ನಾನು |ಎನ್ನವರು ದಾಸರ ದಾಸರಲ್ಲೇನು ||ಇನ್ನು ಒದಗದೆ ಇಹುದೇನು |ಉನ್ನತವಾದ ಬಿರುದಂಗಳ್ನಿನಗಿಲ್ಲವೇನು ? 1 ತೊತ್ತು ಮೆರಿಸಿಕೊಂಡವನಲ್ಲ |ಹೆತ್ತವರ ಭಾವಗಳನೆಲ್ಲ ಮರೆವನಲ್ಲ ||ಒತ್ತಿ ಆಪತ್ತವು ಬರಲು | ಪೊತ್ತವರಿಗೆ ಮೊರೆಯಿಡೆ ಕಡೆಗೆ ಬಿಡುವನಲ್ಲ 2 ಬರುತಿಹುದು ಸಂಕಟವೆಂದು |ಹಿರಿಯರು ನಮ್ಮನೆಲ್ಲವನು ಮರೆದರಂದು ||ಮರೆಯದೆ ರುಕ್ಮಗಿನ್ನಿದು |ಮರೆ ಮಾಡುವ ಪೀತಾಂಬರದಿಂದ ಬಂದು3
--------------
ರುಕ್ಮಾಂಗದರು
ಭಕ್ತಿಲೇಸು ಮುಕ್ತಿಗಿಂತಲಿ ಪ ಭಕ್ತಿಲೇಸು ಮುಕ್ತಿಗಿಂತಲಿ | ಭಕ್ತಜನರಾ ಪಾಲಿಸುವನಾ | ಭಕ್ತಿಗೊಲಿದು ಫಣಿಗಣ ಲೋಕದಿ | ಯುಕ್ತಬಲಿಯ ಬಾಗಿಲಲೊಳಿಹ ರಂಗಯ್ಯನಾ | ಸುರಪ್ರೀಯನಾ ಮುನಿಧ್ಯೇಯನಾ 1 ಸರಸಿಭವನ ಕಠಾರದಿಂದ ಲೋಗದನಾ | ಅರಸೆನಿಪನಾ ತನುಭವನಾ | ಧರಿಸಿದನಾ | ಅರಸಿಯ ಜನಕನ ಕುಲರಿಯನಿಪನಾ | ಕುವರನ ಸ್ಯಂದನ ವಾಜಿಯನು ಪೊರೆದನಾ | ಗೆಲಿಸಿದನಾ | ಮೆರಿಸಿದನಾ 2 ವನರುಹಸಖನ ಪೊಂದೇರ ನಡೆಸುತಿಹನಾ | ಅನುಜನಾ ಅರಿಗಳಾ ಹರಿಯ ನಂದನನಾ | ಘನವಾಲದಿಂದ ನೊಂದಿಹ ಪುರದರಸನಾ | ಅನುಜನಾ ಸ್ಥಿರಪದವಿತ್ತು ನುಳುಹಿದನಾ | ನಿಲಿಸಿದನಾ | ಕಾಯ್ವನಾ 3 ಸಿರಿಯ ಮದನಳಿದು ಗುರುಚರಣಕೆ ಹೊಂದಿ | ದೊರಕಿ ನಿತ್ಯದಲಿ ಸಂತುಷ್ಟವಿರುತಾ | ಗುರುವರ ಮಹಿಪತಿ ಸ್ವಾಮಿಯ ಷೋಡಶ | ಪರಿಯಲಿ ತುಳಸಿಯ ತಂದು ಪೂಜೆ ಮಾಡುವ | ಪಾದ ನೋಡುವಾ | ಪಾಡುವಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವರದೇಶವಿಠಲರ ಹಾಡು ದಾಸರಾಯರ ದಿವ್ಯ ಚರಣ ಭಜಿಸಿ |ಶ್ರೀಶ ಪ್ರಾಣೇಶ ದಾಸಾರ್ಯ ಗುರುವರ್ಯ ಪ ಪಾದ ಭಜಿಪ ಸದ್ಭಕ್ತರ |ಏಸು ಜನ್ಮದ ಪಾಪರಾಶಿ ಪರಿಹರ ವೋ ||ಶ್ರೀಶನಲಿ ಸದ್ಭಕ್ತಿ ಲೇಸಾಗಿ ಪುಟ್ಟುವದು |ಲೇಶ ಸಂಶಯವಿಲ್ಲ ಆಲಸವು ಸಲ್ಲ 1 ಮರುತ ಮತ ತತ್ವಗಳ ಥೆರೆಗಳಿಂಸೂಸುತ |ಧರಣಿ ದ್ವಿಜರಿಗೆ ರಾಮನಾಮ ಮೃತ ||ನಿರುತ ಭಜಿಸಲು ಜ್ಞಾನ ವೈರಾಗ್ಯ ತರಮಣಿಯ |ಹರಿಭಕುತಿ ಧೇನುವಂ ನೀಡ್ವ ಪಾಲ್ಗಡಲೆನಿಪ 2 ಸುಜ್ಞಾನವೆಂಬಂಥ ಕಿರಣಗಳ ಪಸರಿಸುವ |ಅಜ್ಞಾನ ತಿಮಿರವನು ದೂರೋಡಿಪ |ಸೂಜ್ಞರೆಂಬುವ ತಾವರೆಗಳರಳಿಸುವಂಥ |ಅಜ್ಞ ಕುಮುದಗಳ ಬಾಡಿಸುವ ಭಾಸ್ಕರ ನೆನಿಪ 3 ನಮಿತ ಜನ ಭವತಾಪ ಕಳೆದು ಸದ್ಭಕ್ತಿಯಿಂ |ಬಮಿತ ಆಹ್ಲಾದವನು ಬೀರುವಂಥ ||ಶಮದಮಾದಿಗಳ ಚಂದ್ರಿಕೆಯಿಂದ ಶೋಭಿಸುವ |ವಿಮಲ ಹರಿಜನ ಚಕೋರಕೆ ಚಂದ್ರನೆಂದೆನಿಪ 4 ದಾಸ ಕುಲತಿಲಕ ಪ್ರಾಣೇಶರಾಯರ ಕವನ |ಶ್ರೀಶ ಕಥೆಗಳ ರಾಶಿ ಮೀಸಲಾಗಿರಲು |ಆಸು ಭಕ್ತರಿಗೆ ಸಂತೋಷಗೊಳಿಸಲು ಸರ್ವ |ದೇಶದಲಿ ಮೆರಿಸಿ ಸತ್‍ಕೀರ್ತಿಯನು ಪಡೆದಂಥ 5 ಈ ಗುರುಗಳ ಪಾದಕ್ಕೆರಗಿದ್ದ ಶಿರಧನ್ಯ |ಈ ಗುರುಗಳೀಕ್ಷಿಸಿದ ನೇತ್ರ ಧನ್ಯ ||ಈ ಗುರುಗಳ ವಾಣಿ ಕೇಳಿದ ಕಿವಿಧನ್ಯ |ಈ ಗುರುಗಳನು ಮನದಿ ನೆನೆವ ನರಧನ್ಯ 6 ರಾಗ ದ್ವೇಷಾದಿಗಳ ಗೆದ್ದು ಸದ್ಭಕ್ತಿಯಂ |ಶ್ರೀಗುರು ಪ್ರಾಣೇಶ ಭಜಕರೆನಿಪ |ನಾಗ ಪರ್ಯಂಕ ವರದೇಶ ವಿಠಲನ ಪ್ರಿಯಯೋಗಿ ವರದೇಂದ್ರ ಮುನಿಗಳ ಪಾದಭೃಂಗ 7
--------------
ಶ್ರೀಶಪ್ರಾಣೇಶವಿಠಲರು