ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಶೆಯ ಬಿಡಿಸಿದ್ಯೋ ಎನ್ನಾ ಮುಂದೆ ವಾಸವಾಗದಂತೆ ಕಾಯೋ ಮೋಹನ್ನಾ ವಾಸುದೇವನೆ ನಿನ್ನ ಸ್ಮರಣೆಯೊಳಗೆ ಮನ ಸೂಸದಂತೆ ಸ್ಥಿರ ನಿಜದಲ್ಲಿ ನಿಲಿಸಯ್ಯಾ ಪ ಬೆಂಬಿಡದೆಲೆ ನಿಜದರಿವನ್ನು ಕೊಡುವಾ ಕುಂಭಿಣಿಯೊಳಗೆಲ್ಲಾ ನೀನಲ್ಲದೆ ಎನ್ನಾ ನಂಬಿಗೆ ಕೊಡುವವರ್ಯಾರೋ ನಾರಾಯಣಾ 1 ಬೆಂದೆನು ನಾ ಭವದೊಳಗೆ ಎನ್ನಾ ತಂದೆ ನೀ ಕಾಯೋ ನಿಜಪದದೊಳಗೆ ಹಿಂದಿನ ಪ್ರಾರಬ್ಧ ಬವಣೆಯ ತೀರಿಸಿ ಮುಂದೆ ನೀ ಸಲಹೊ ಪರಮಪುರುಷನೆ ಹರಿ 2 ವಾಸನೆ ಬಂಧವೇ ಜೀವಾ ನಿ ರ್ವಾಸನೆಯನು ಕೊಟ್ಟು ಸಲಹೊ ಮಾಧವಾ ಶೇಷಶಯನನೆ ನಿಜ ಧ್ಯಾನದೊಳಿರಿಸೆನ್ನಾ ಆಶೆಯನು ಸಲಿಸಯ್ಯಾ ಮುರಾರಿ 3 ಅನಂತ ಮಹಿಮಾ ಮೇಘಶ್ಯಾಮಾ ನಿಶ್ಚಿಂತ ನಿಜ ಶಾಂತಿ ಸ್ವಸುಖವೀವಾ ನಂತಪರಾಧವ ಕ್ಷಮಿಸೆನ್ನಾ ಗುರುವೇ 4
--------------
ಶಾಂತಿಬಾಯಿ
ನೀಲಮೇಘಶ್ಯಾಮಾ ಬಾರೊ ನೀವೊಂದು ಮುತ್ತ ತಾರೋ ಪ. ನೀರಜಾಕ್ಷ ನಲಿದು ಬಾರೊ ನಗೆಮೊಗವನ್ನೆ ತೋರೊ ಅ.ಪ. ನಿನ್ನ ಸಮರ್ಯಾರೊ ಕೃಷ್ಣಾ ಸನ್ನುತಾಂಗ ಓಡಿ ಬಾರೋ ಬೆಣ್ಣೆಕೋಲು ಬೆಂಡು ಬುಗುರಿ ಚಿನ್ನ ರನ್ನ ಕೊಡುವೆ ಬಾರೋ 1 ಮುತ್ತಿನಂಗಿ ಕೊಡಿಸುವೇನೂ ರತ್ನತಿಲಕವಿಡುವೆ ಬಾರೋ ವತ್ತಿ ನಿನ್ನ ಬಾಯೊಳೂದೆ ರತ್ನ ಕೊಳಲ ಕೊಡುವೆ ಬಾರೋ 2 ಸ್ವರ್ಣಮಯೂರಂಗವ ತೋರೊ ನೀಲವರ್ಣಾ ಚಂದ್ರಬಿಂಬ ಬಾರೋ 3 ಭಕ್ತಿ ಸುರಧೇನುಬಾರೊ ಮುಕ್ತಿದಾತ ಶ್ರೀ ಶ್ರೀನಿವಾಸ ಮಾಧವ ಬಾರೋ 4
--------------
ಸರಸ್ವತಿ ಬಾಯಿ
ಪರಮಮಂಗಳ ಧಾಮಾ ಶ್ರೀರಾಮಾ ಪ ಕರುಣಾಮೃತ ಸಾಗರ ನಿಸ್ಸೀಮಾಚರಣಕೆರಗುವೆ ಸಾಸಿರನಾಮಾ 1 ಶರಣಾಗತರನು ಕರವಿಡಿವುದು ನೇಮಾಶರಣುಬಂದೆನಯ್ಯ ರಘುಕುಲ ಸೋಮಾ 2 ವಚನವ ಪಾಲಿಪ ಸುಚರಿತವೈ ನಿಮ್ಮಅಚಲ ಭಕ್ತಿಕೊಡು ಮೇಘಶ್ಯಾಮಾ 3 ಗದುಗಿನ ವೀರನಾರಾಯಣ ಪ್ರೇಮ ವೊದಗಿಸಿ ಕಾಯೋ ವೀರ ಲಲಾಮಾ 4
--------------
ವೀರನಾರಾಯಣ
ಸರಸಿಜನಯನಾ ಹೇ ಶ್ರೀನಿವಾಸ ಪ ಸರಸಿಜಭವಪಿತ ಸರಸಿಜಾಕ್ಷಿಧವ ಉರಗಶಯನ ನೀ ಉರಗಭೂಷಣವಂದ್ಯ ಅ.ಪ ಮೂರುಲೋಕದೊಡೆಯನಾದವ ನೀನು ತೋರೋ ನಿನ್ನ ಮಹಿಮೆಯಾ ಗಾರುಗೊಂಡಿಹೆ ಪಾರವಾರದೊಳು ತೋರಿ ನಿನ್ನಯ ಪದ ಸೇರಿಸುತಿರವ 1 ಬಾಲಕನ ಕಲಭಾಷೆಯ ಮಾತೆಯು ಬೇಗ ಲಾಲಿಸುವ ತೆರದಿ ಪಾಲಿಸೆನ್ನಾ ಶ್ರೀಲಲಾಮ ನೀ ಕುಲಲಾವರದನಾದಿ ನೀಲಮೇಘಶ್ಯಾಮಾ 2 ದಾನವಾಂತಕ ನೀನು ಶಿರಿವತ್ಸಾಂಕಿತ ದೀನÀಜನರ ಸುರಧೇನು ಏನು ತಪ್ಪಿದ್ದರೂ ನೀನು ಕ್ಷಮಿಸು ಇಂದು ದೇನುವರರ್ಪಿಸಿದಿ ಪ್ರಾಣೇ±ವಂದಿತ 3
--------------
ಸಿರಿವತ್ಸಾಂಕಿತರು
ಎಂಥ ಮಹಿಮನುನೋಡುನಮ್ಮಯಲಗೂರದ ಹನುಮಾ |ಸಂತತ ನೆನೆವರ ಚಿಂತಾಮಣಿ ನಿಜ ಶಾಂತಸದಾ ನಿಶ್ಚಿಂತ ಪರಾಕ್ರಮಾಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹುಟ್ಟುತಲಿ ಮಿತ್ರನ ತಿನಬೇಕೆಂದು ಥಟ್ಟನೆ ತಾ ಬಂದು |ಬೆಟ್ಟರಿಯ ಬೆನ್ನನೆ ಬೀಳಬೇಕೆಂದು | ಪುಟ್ಟರಿದಾನೆಂದು |ಮುಟ್ಟಿ ಬರಲುಕವನೆಟ್ಟನೆ ಹೊಯ್ಯಲು |ಧಿಟ್ಟ ಮರಪನೆಂದು ಧಿಟ್ಟನೆ ಧಿಟ್ಟ ಬಂದು1ಅಂಜನಿಯ ಗರ್ಭದಲಿ ತಾ ಬಂದಾ | ಸಂಜೀವನಿ ತಂದಾ |ಕೆಂಜಡಿಯನ ಸ್ವರೂಪನು ಜಗದಾನಂದಾ ಸ್ವಾನಂದ ಕಂದಾ ||ಮಂಜುಳ ಶಬ್ದಪ್ರಭಂಜನಕಪಿ ಜಗರಂಜಿತತೇಜಃ ಪುಂಜ ಸದಯದಾ2ಹರಿಸುತನು ಬ್ರಹ್ಮನೆ ತಾನೆ ಬಂದೂ ಕರವಿಟ್ಟನು ಇಂದೂ |ಪರಿಪರಿಯ ಶಕ್ತಿಯು ನಿನ್ನಲ್ಲಿಂದು ಗುಪ್ತಿರಬೇಕೆಂದು ಸ್ಥಿರಪದ ಕೊಟ್ಟೆ ವಜ್ರಾಂಗವನಿಂದೂ ವರದಾ-ಭಯನಿಟ್ಟು ತನುನಿಧಿ ತಂದೂ3ರವಿತನಯನ ಭೆಟ್ಟಯನು ತಕ್ಕೊಂಡಾ ರಘುರಾಮರ ಕಂಡಾ |ಅವನಂಗುಲಿಯೊಳು ಮುದ್ರಿಯನಿತ್ತಾ ಪ್ರಚಂಡಾಬಹು ಬಾಹೋದ್ದಂಡಾ | ತವಕದಿಅಕ್ಷಯಕುವರನಮರ್ದಿಸಿ ಘವಿ ಘವಿಸುವ ಲಂಕಿಯದಾ ಕೆಂಡಾ4ರಕ್ಕಸರೆಲ್ಲರ ಕುಕ್ಕಿರಿದನು ಅದ್ಭುತಾ ಜಗಕಪಿ ಪ್ರಖ್ಯಾತಾ |ಮಿಕ್ಕರಗಳನೆಲ್ಲ ಪಾಡುವೆ ರಾಮನ ದೂತಾ ಶರಣರ ಸಂಪ್ರೀತಾಉಕ್ಕಿ ಹರುಷದಲಿ ಬೇಗ ಬಾರೊ ಬೇಗ ಬಾರೊನೀಲಮೇಘಶ್ಯಾಮಾ ಭಕ್ತರ ಪಾಲಿಪ ಮುಕ್ತರಮಾಡುವ ಶಂಕರನೀತಾ5
--------------
ಜಕ್ಕಪ್ಪಯ್ಯನವರು