ಒಟ್ಟು 15 ಕಡೆಗಳಲ್ಲಿ , 10 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಚ್ಚತ್ತು ಇರು ಕಂಡ್ಯ ಮನವೇ | ನಮ್ಮ | ಅಚ್ಯುತನಂಘ್ರಿಗಳನು ನೆನೆ ಕಂಡ್ಯ ಮನವೆ ಪ ಆಡದಿರಪವಾದಗಳನು ಕೊಂ | ಡಾಡದಿರಿನ್ನು ಚಿಲ್ಲರೆ ದೈವತಗಳನು || ಬೇಡದಿರು ಭಯ ಸೌಖ್ಯವನು ನೀ | ಮಾಡದಿರಿನ್ನು ದುರ್ಜನ ಸೇವೆಯನು || ಸಜ್ಜನ ದ್ವೇಷವನು1 ನರಜನ್ಮ ಬರುವದೆ ಕಷ್ಟ ಇದ- | ನರಿದು ನೋಡು ವಿಪ್ರಾದಿ ಶ್ರೇಷ್ಠ || ಮರಳಿಬಾಹುದು ಉತೃಷ್ಟ | ಕೇಳೆಲವೊ ಮರ್ಕಟ 2 ಹಾಳು ಹರಟೆಗೆ ಹೋಗಬೇಡ ನೀ ಕಂಡ | ಕೂಳನು ತಿಂದು ಒಡಲ್ಹೊರಿಯಬೇಡ || ಕಾಲ ವ್ಯರ್ಥ ಕಳಿಯ ಬೇಡ ನಮ್ಮ | ಶ್ರೀ ಹರಿಯ ದಯಮಾಡ 3 ಅನ್ಯ ಸ್ತ್ರೀಯರ ನೋಡ ಬೇಡಾ ಹಿಂದೆ | ಮಣ್ಣುಕೂಡಿದವರ ನೀ ನೋಡಾ || ಅನ್ಯ ಶಾಸ್ತ್ರವನೋದಬೇಡಾ ನಮ್ಮ | ಬೋಧ ಮೈ ಮರೆತಿರಬೇಡಾ 4 ಗೋ ವಿಪ್ರರ ಸೇವೆ ಮಾಡು ಸೋಹಂ | ಭಾವಗಳನು ಬಿಟ್ಟು ದಾಸತ್ವ ಕೊಡು || ಕೇವಲ ವೈರಾಗ್ಯ ಮಾಡು ವಿಜಯ || ಲಜ್ಜೆಯ ಈಡ್ಯಾಡೊ5 ನಾನು ಎಂಬುದು ಬಿಡು ಕಂಡ್ಯ ಎನ್ನ | ಮಾನಾಪಮಾನಕ್ಕೆ ಹರಿಯೆನ್ನು ಕಂಡ್ಯ || ಜ್ಞಾನಿಗಳ ಒಳಗಾಡು ಕಂಡ್ಯ ವಿಷಯ | ಬೀಳುವಿ ಯಮಗೊಂಡಾ 6 ಕಷ್ಟ ಪಡದೆ ಸುಖಬರದು ಕಂ- | ಗೆಟ್ಟ ಮೇಲಿನ್ನು ಕಷ್ಟ ತಿಳಿಯೋದು || ದುಷ್ಟ ವಿಷಯ ಆಶೆ ಜರಿದು ವಿಜಯ- | ಕೂಗೆಲವೊ ಬಾಯಿ ತೆರೆದು 7
--------------
ವಿಜಯದಾಸ
ಏಕ ಚಿಂತಿಸಲಯ್ಯ ಈ ಜಗದ ಸುಖಕಾಗಿ ಸಾಕು ಇದರೊಳು ಸುಖದ ಲೇಶವನು ಕಾಣೆ ಪ ಒಂದು ಸುಖ ಬಯಸಿದೊಡೆ ಹಿಂದೆ ನೂರೆಂಟಾಗಿ ಸಂದಣಿಪ ದುಃಖಗಳು ಬಂದು ಒದಗುವವಿದಕೆ ಎಂದಿಗೂ ಬಯಸೆನಾ ಈ ತೆರೆದ ಸುಖವನ್ನು ಹಿಂದಿನಾ ಕರ್ಮದಂತಾಗುತಿರುವುದಕೆ 1 ಮೊದಲು ಸವಿಯಾಗಿಹುದು ತುದಿಯಲಿದು ವಿಷವಹುದು ಬದಲಾಗುತಿಹ ಇಂಥ ಸುಖ ಬೇಡವೆನಗೆ ಮೊದಲುಕೊನೆ ಇಲ್ಲದಿಹ ಸದಮಲಾನಂದವಹ ಪದವ ಮರೆಯಿಸುತಿರುವದಿದು ಬೇಡವೆನಗೆ 2 ಅನಿಸಿಕೆಯೆ ಕೂಡಿರುವ ಈ ಸುಖವು ನಿಜವಲ್ಲ ಮನವಾಣಿಗಳಿಗಾಚೆಗಿಹ ಸುಖವು ನಿಜವು ತಾನೆ ಸುಖರೂಪನೆಂದನಿತರೊಳು ನಿಶ್ಚಯಿಸಿ ಜ್ಞಾನಿಶಂಕರನೆ ನಾನಾದ ಮೇಲಿನ್ನು 3
--------------
ಶಂಕರಭಟ್ಟ ಅಗ್ನಿಹೋತ್ರಿ
ಕಾಯಬೇಕೆನ್ನ ಕರುಣದಲಿ ಧನ್ವಂತ್ರಿ ಶ್ರೀಯರಸ ನರಹರಿಯೆ ಪ್ರಾರ್ಥಿಸುವೆ ನಿನ್ನ ಪ. ಸುರರಿಗೆ ಮರಣ ಕಾಲವು ಪ್ರಾಪ್ತವಾಗಲು ಗಿರಿಯಿಂದ ಶರಧಿಯನು ಮಥಿಸೆ ಪೇಳಿ ಕರುಣದಿಂದಮೃತ ಕರದಿಂದ ಸುರರಿಗೆ ಎರೆದು ಜರೆ ಮೃತ್ಯು ಬಿಡಿಸಿದಗೆ ಇದು ಒಂದು ಘನವೆ 1 ಸಕಲ ನಾಡಿಗಳಲ್ಲಿ ಚೇಷ್ಟಪ್ರದ ನೀನಾಗಿ ಸಕಲ ವ್ಯಾಪಾರಗಳ ನಡೆಸುತಿರಲು ಯುಕುತಿಯಿಂದಲಿ ನಾಡಿ ನೋಡಿ ತಿಳಿಯುವನ್ಯಾರೊ ಮುಕುತಿದಾಯಕ ನಿನಗೆ ಇದು ಒಂದು ಘನವೆ 2 ಅನಾದಿಯಿಂದ ಅಪಥ್ಯದಲಿ ನರಳುವೆನೊ ಈಗ ಪಥ್ಯವ ಮಾಳ್ಪ ಬಗೆ ಯಾವುದೊ ಶ್ರೀನಿವಾಸನೆ ನಿನ್ನ ಧ್ಯಾನವೆ ಔಷಧವೊ ಶ್ರೀ ಗುರುಗಳಾಜ್ಞೆಯೆ ಪಥ್ಯವೆನಗಿನ್ನು 3 ಭಕ್ತಪ್ರಹ್ಲಾದನನು ಯುಕ್ತಿ ಶಕ್ತಿಗಳಿಂದ ಮುಕ್ತಿಮಾರ್ಗವ ತೋರಿ ಸಲಹಲಿಲ್ಲೇ ಭಕ್ತಿಹೀನರನೆ ಕಂಡು ಎನ್ನ ರಕ್ಷಿಸದಿರಲು ಯುಕ್ತವೇ ನಿನಗಿನ್ನು ಭಕ್ತಪಾಲಕನೆ 4 ನಿನ್ನ ದಾಸತ್ವದಲಿ ನೆಲಸಬೇಕಾದರೆ ಬಿನ್ನಣದ ರೋಗಗಳ ಪರಿಹರಿಸಿ ಸಲಹೊ ನಿನ್ನವರಾದ ಮೇಲಿನ್ನು ಕಾಯದೆ ಇಹರೆ ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಕೊಡುಕೊಡು ವರವನು ತಡವು ಮಾಡದೆ ಎ ನ್ನೊಡೆಯ ಶ್ರೀಹರಿ ಕೃಪೆ ಮಾಡಯ್ಯ ಪ ಬಿಡದಿರೆನ್ನನು ಜಗದೊಡತಿಯಾಣೆ ನಿ ನ್ನಡಿಗಳನೆಂದಿಗೂ ಬಿಡೆನಯ್ಯಾ ಅ.ಪ ಕ್ಷಿತಿಯೊಳಗತಿಶಯ ಪತಿತ ಪಾವನ ಶ್ರೀ ಪತಿ ನೀಗತಿ ಎನುತಿಹೆನಯ್ಯ ರತಿಪತಿಪಿತನೆ ಸುಮತಿಯನು ಪಾಲಿಸಿ ಗತಿಯನು ತೋರಿಪುದೆನಗಯ್ಯ1 ನಿನ್ನ ಪದವ ನಂಬಿ ನಿನ್ನವನೆನಿಸಿದ ಎನ್ನನುಪೇಕ್ಷಿಪರೇನಯ್ಯ ಸನ್ನುತ ನಿನ್ನನು ಮನ್ನಿಸಿ ಕೇಳುವ ಬಿನ್ನಪವಿನಿತೆ ಕೇಳಯ್ಯ 2 ಎಲ್ಲರ ಹೃದಯದೊಳಲ್ಲಿ ನೆಲೆಸಿರುವ ಫುಲ್ಲನಯನ ನೀ ಪೇಳಯ್ಯ ಕಲ್ಲುಮನದಿ ನೀನೊಲ್ಲದೊಡೀ ಜಗ ದಲ್ಲಿ ಪೋಪುದಿನ್ನೆಲ್ಲಯ್ಯ 3 ಪತಿಯಗಲಿದ ಪತಿವ್ರತೆಗೆ ಇತರರಲಿ ರತಿ ಸಂಜನಿಸುವದೇನಯ್ಯ ಗತಿಪತಿಯೆಲ್ಲರಪತಿ ನೀನೆನ್ನುತ ಶ್ರುತಿನುತಿಪುದು ಪುಸಿಯೇನಯ್ಯ 4 ಜಗದೊಳು ನಿನ್ನನೆ ಸುಗುಣಿಯು ಎನ್ನುತ ನಿಗಮವು ಪೊಗಳುತಲಿಹುದಯ್ಯ ಖಗಪತಿಗಮನನೆ ಬಗೆ ಬಗೆಯಲಿ ರತಿ ಸೊಗಯಿಸು ನಿನ್ನೊಳು ಎನಗಯ್ಯ 5 ಸೃಷ್ಟಿನಾಥಪದ ವಿಷ್ಟರ ಭಕ್ತಿಯ ಕೊಟ್ಟರಭೀಷ್ಟವು ಎನಗಯ್ಯ ಇಷ್ಟರ ಮೇಲಿನ್ನು ಲಕ್ಷ ಕೊಟ್ಟರೂ ಎನ ಗಿಷ್ಟವಲ್ಲ ಶ್ರೀ ಕೃಷ್ಣಯ್ಯ 6 ಚರಣಕಮಲದೊಳಗೆರಗುವೆ ಪುಲಿಗಿರಿ ವರದವಿಠಲ ದಯೆಯಿರಿಸಯ್ಯ ಚರಣಶರಣನಿಗೆ ಕರುಣಿಸದಿದ್ದರೆ ಕರುಣಿಗಳರಸರಿನ್ನಾರಯ್ಯ 7
--------------
ವೆಂಕಟವರದಾರ್ಯರು
ತಡವ ಮಾಡುವಿಯಾಕೊ ಒಡೆಯ ಗೋವಿಂದ ಬಡವನ ಮೇಲಿನ್ನು ಮುನಿಸೆ ಮುಕುಂದ ಪ. ಕೆಟ್ಟ ಕೃತ್ಯಗಳತ್ಯುತ್ಕøಷ್ಟವಾದುದರಿಂದ ಮಂಡೆ ಕುಟ್ಟುವ ತೆರದಿ ಸಿಟ್ಟಿನಿಂದಲಿ ಬಹು ಕಷ್ಟಗೊಳಿಸಿದಿ ಕಟ್ಟ ಕಡೆಯಲಿ ನೀ ಕಟ್ಟ ಬಿಡಿಸಿದಿ 1 ದುಷ್ಟ ಬಾಧೆಯ ಮುರಿದಟ್ಟಿದಿ ದಯದಿ ಘಟ್ಟ ಬೆಟ್ಟಗಳನ್ನು ಮೆಟ್ಟಿ ನಾ ಭರದಿ ನಿಟ್ಟುಸುರಲಿ ಬಾರೆ ಕೃಷ್ಣ ನೀ ಕರುಣದಿ ತೊಟ್ಟಿಲ ಶಿಶುವಿನಂದದಲಿ ಪಾಲಿಸಿದಿ 2 ಜನರ ಸಹಾಯವ ಕನಸಿಲಿ ಕಾಣೆ ಧನಬಲವೆಂದೆಂದಿಗಿಲ್ಲ ನಿನ್ನಾಣೆ ವನರುಹೇಕ್ಷಣ ನಿನ್ನ ನಾಮ ಒಂದೆ ಹೊಣೆ ಯೆನುತ ನಂಬಿದುದರ ಫಲವಿನ್ನು ಕಾಣೆ 3 ಜಗದ ಸಜ್ಜನರಿದು ಮಿಗೆ ಮೀರಿತೆನಲು ಹಗೆಗಳೆಲ್ಲರು ಬಹು ಸೊಗಸಾಯಿತೆನಲು ನಗಲು ಎನ್ನನು ನೋಡಿ ನಗಧರ ನೀ ಬಂದು ಅಘಟಿತ ಘಟನ ಮಾಡಿದಿ ದೀನಬಂಧು 4 ಈ ಪರಿಯಲಿ ನಿರುಪಾಧಿಯೊಳೆನ್ನ ಕಾಪಾಡಿ ಕಡೆಯೊಳೀ ಕಷ್ಟಗಳನ್ನ ನೀ ಪರಿಹರಿಸಲೇಬೇಕು ಪ್ರಸನ್ನ ಶ್ರೀಪತಿ ಶೇಷಾದ್ರಿವಾಸ ಮೋಹನ 5
--------------
ತುಪಾಕಿ ವೆಂಕಟರಮಣಾಚಾರ್ಯ
ಥರವಲ್ಲ ಸ್ವಾಮಿ ಥರವಲ್ಲ ಪ. ಥರವಲ್ಲ ಸ್ವಾಮಿ ಈ ತೆರನ ಮಾಡುವುದು ಕರುಣ ಸಾಗರನೆಂಬ ಬಿರುದಿನ್ನು ನಿಲದು ಅ.ಪ. ಊರೊಳಗಿಹ ಜನರೆಲ್ಲರು ಕೂಡಿ ವಾರಿಜಾಕ್ಷನ ದಾಸನೆಂದು ಕೊಂಡಾಡಿ ಸಾರಿಸಾರಿಗೆ ನಿನ್ನ ಕೀರ್ತನೆ ಮಾಡಿ ಪೋರ ಪೇಚಾಡುವನೆಂಬರು ಕೂಡಿ1 ಪಾರಾಯಣದ ಪುಸ್ತಕವ ಕಟ್ಟಿಟ್ಟು ವಾರಿಜನಾಭ ನಿನ್ನಯ ಪೂಜೆ ಬಿಟ್ಟು ಕಾರಿ ಕೆಮ್ಮುತ ಬಿದ್ದಿರುವ ದೊಡ್ಡ ಗುಟ್ಟು ಯಾರ ಮೇಲಿನ್ನು ತೋರಿಸಲೆನ್ನ ಸಿಟ್ಟು 2 ಮೋಹ ಪಾಶದಿ ಮುಸುಕಿ ಕಟ್ಟಿದರೆ ಬಹ ಪಾತಕಗಳಿಗೆಲ್ಲ ನಾನಿದಿರೆ ನೀ ಹದಿನಾಲ್ಕು ಲೋಕೇಶನೆಂದೊದರೆ ದೇಹವ ಬಳಲಿಸಿದರೆ ನಾನೇನ್ಹೆದರೆ 3 ನಂಬಿರೊ ಭಕ್ತ ಕುಟುಂಬಿಯನೆಂದು ಅಂಬುಜಸಂಭವನ್ಯಾಕೆಂದನಂದು ಹಂಬಲಿಸಿದರು ನೀ ದಯದೋರದಿಂದು ಬೊಂಬೆಯೆ ಸರಿಯೆಂದು ಜನರೆಂಬೊ ಕುಂದು 4 ಸರ್ವದೋಷಹರ ಸಾಗರಜೇಶ ನಿರ್ವೇದದಿಂದ ನಾ ನುಡಿದೆನಾಕ್ರೋಶ ಸರ್ವಕಾಲಕು ಸಲಹುವ ನೀನೆ ಶ್ರೀಶ ಶರ್ವಾದಿ ವಂದ್ಯ ಶೇಷಾಚಲವಾಸ 5
--------------
ತುಪಾಕಿ ವೆಂಕಟರಮಣಾಚಾರ್ಯ
ದಾಸನಾದ ಮೇಲೆ ಈಶ ದೂರುಂಟೆ ಆಸೆನೀಗಲು ಸುಖದ ರಾಶಿ ಬೇರುಂಟೆ ಪ ದೋಷಕ್ಕಂಜಿದಮೇಲೆ ಸನ್ಮಾರ್ಗ ಬೇರುಂಟೆ ಕ್ಲೇಶ ನೀಗಿದಮೇಲೆ ಪುಣ್ಯ ಇನ್ನುಂಟೆ ಹೇಸಲು ಪ್ರಪಂಚಕೆ ಸತ್ಸಂಗ ಬೇರುಂಟೆ ವಾಸನ್ಹಿಂಗಿದಮೇಲೆ ವೈರಾಗ್ಯವುಂಟೆ 1 ಜ್ಞಾನಗೂಡಿದಮೇಲೆ ಮತ್ತೆ ತೀರ್ಥಗಳುಂಟೆ ಧ್ಯಾನವಿಡಿದಮೇಲೆ ಅನ್ಯಮೌನುಂಟೆ ಹೀನಗುಣ ತೊಳೆದಮೇಲಿನ್ನು ಸ್ನಾನಗಳುಂಟೆ ಮಾನಸವು ಶುದ್ಧಿರಲು ಬೇರೆ ಮಡಿಯುಂಟೆ 2 ಕೈವಲ್ಯ ಇನ್ನುಂಟೆ ಶರಣು ಪೊಂದಿದಮೇಲೆ ಪರಮಾರ್ಥ ಬೇರುಂಟೆ ಅರಿವನರಿತರೆ ಬೇರೆ ಪರಲೋಕ ಇರುಲುಂಟೆ ಶರಣರೊಲಿದಮೇಲ್ಹರಿಚರಣ ಹೊರತುಂಟೆ 3 ಸಫಲನಾದಮೇಲೆ ವ್ರತನೇಮ ಬೇರುಂಟೆ ಗುಪಿತವರಿತಮೇಲೆ ಪರತತ್ವವುಂಟೆ ಅಪರೂಪ ಧ್ಯಾನಿರಲು ತಪ ಬೇರೆ ಇರಲುಂಟೆ ಅಪರೋಕ್ಷಜ್ಞಾನ್ಯಾದ ಮೇಲೆ ಮಿಕ್ಕಸಾಧನುಂಟೆ 4 ಮಾನಹೋದಮೇಲೆ ಮರಣ ಬೇರಿರಲುಂಟೆ ನಾನತ್ವ ಪೋದಮೇಲೆ ಸತ್ಕರ್ಮವುಂಟೇ ಧ್ಯಾನದಾಯಕ ಮಮಪ್ರಾಣ ಶ್ರೀರಾಮನಡಿ ಖೂನ ತಿಳಿದ ಮೇಲೆ ಮುಕ್ತಿ ಬೇರುಂಟೆ 5
--------------
ರಾಮದಾಸರು
ಯಾತಕೆನ್ನ ಮೇಲಿನ್ನು ಪಂಥ ಸಾಕೊ ಶ್ರೀಕಾಂತ ಪ. ಘೋರ ಷಡ್ವೈರಿಗಳಾರುಭಟಿಗಳನ್ನು ದೂರಗೈದರೆ ನಿನ್ನ ಮಂದಿರವನು ಸಾರಿಸಿ ಶುಚಿಗೈವನಿಂದಿರಾ- ವರ ಬಾರೊ ಭಕ್ತ ಕುಮುದ ಚಂದಿರಾ ಶ್ರುತಿ ಸಾಗರಾ ಲೋಕೈಕ ಸುಂದರಾ 1 ವ್ಯರ್ಥವಾಗಿ ಬಹಿರರ್ಥದಿ ಮಾನಸ ವರ್ತಿಸದಿರೆ ನಿನ್ನ ನೋಡುವೆ ಬಹ- ಳರ್ಥಿಯಿಂದಲಿ ಪಾಡಿ ಪೊಗಳುವೆ ಮೋಹ ಕಾರ್ಥ ಶಾಸ್ತ್ರವ ದೂರ ದೂಡುವೆ ಪುರು- ಷಾರ್ಥದಾಯಕ ನಿನ್ನ ಕೂಡುವೆ 2 ಪತಿಯೆಂದು ಸಂಭ್ರಮಗೊಂಬೆನು ಭೂ- ಪತಿಯಲಿ ನೀನಿಹೆಯೆಂಬೆನು ಸಮ ರತಿಯಿಂದ ಪುರುಷ ಸುಖವುಂಬೆನು ಭಕ್ತಿ ಸತಿಯರ ಭರವನಿಂತು ಕಾಂಬೆನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27
--------------
ಅಂಬಾಬಾಯಿ
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ 15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ 23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27 ಸೀತಾಪತಿವಿಠಲ ದಾಸಳ ನಿರ್ಯಾಣ ಪದ 266 ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ 3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ 22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36
--------------
ಅಂಬಾಬಾಯಿ
ಶ್ರೀಹರಿ ಕೃಪೆಮಾಡಯ್ಯ ಪ ನಿನ್ನಡಿಗಳನೆಂದಿಗೂ ಬಿಡೆನಯ್ಯ ಅ.ಪ. ನೀಗತಿಯೆನುತಿಹೆನಯ್ಯ ತೋರಿಪುದೆನಗಯ್ಯ 1 ನಿನ್ನ ಪದವನಂಬಿ-ನಿನ್ನವನೆನಿಸಿದ-ಯೆನ್ನನು ಪೇಕ್ಷಿಪರೇನಯ್ಯ ಸನ್ನುತ ನಿನ್ನದು ಮನ್ನಿಸಿ ಕೇಳುವ ಬಿನ್ನಪವಿನಿತೆ ಕೇಳಯ್ಯ 2 ಎಲ್ಲರ ಹೃದಯದೊಳಲ್ಲಿ ನೆಲಸಿರುವ ಪುಲ್ಲನಯನನೀ ಪೇಳಯ್ಯ ಕಲ್ಲುಮನದಿನೀ ನೊಲ್ಲದೊಡೀ ಜಗ-ದಲ್ಲಿ ಪೋಪುದಿನ್ನೆಲ್ಲಯ್ಯ3 ಪತಿಯಗಲಿದ ಪತಿವ್ರತೆಗೆ ಇತರರಲಿ ರತಿ ಸಂಜನಿಸುವದೇನಯ್ಯ ನುತಿಪುದು ಪುಶಿಯೇನಯ್ಯ 4 ನಿಗಮವು ಪೊಗಳುತಲಿಹುದಯ್ಯ ಸೊಗಯಿಸುನಿನ್ನೊಳುಯನಗಯ್ಯ 5 ಸೃಷ್ಠಿನಾಥಪದ ವಿಷ್ಟರ ಭಕ್ತಿಯ ಕೊಟ್ಟರಭೀಷ್ಟವು ಯನಗಯ್ಯ ಇಷ್ಟರಮೇಲಿನ್ನು ಲಕ್ಷಕೊಟ್ಟರೂಯನಗಿಷ್ಟವಿಲ್ಲಶ್ರೀ ಕೃಷ್ಣಯ್ಯ 6 ದಯೆಯಿರಿಸಯ್ಯ ಚರಣ ಶರಣನಿಗೆ ಕರುಣಿಸದಿರ್ದರೆ ಕರುಣಿಗಳರಸರಿನ್ನಾರಯ್ಯ 7
--------------
ಸರಗೂರು ವೆಂಕಟವರದಾರ್ಯರು
ಸಹಿಸಲಾರೆನೊ ವ್ಯಥೆಯ ಪವಮಾನ ವಂದಿತನೆ ಪ. ಅಹೋರಾತ್ರಿಲಿ ಮನ ಕಳವಳ ಪಡುವದೊ ಆಹಾರ ನಿದ್ರೆಗಳು ತೊಲಗಿ ಪೋದವು ದೇವಾ ಸಹಿತಾಗಿ ತಾಯಿಯ ಸರ್ವಬಾಂಧವರೆಲ್ಲಾ ಸ ನ್ನಿಹಿತರಾಗಿ ಎನ್ನ ಬಳಗ ಇದ್ದರೂ ಕೂಡ ಅ ಸಹ್ಯವಾದ ದುಃಖ ದೂರಾಗಲಿಲ್ಲವೊ ಆಹಾ ಇರಲಾರೆ ಇರಲಾರೆ ಭಕ್ತ ಜನರ ಬಿಟ್ಟು ಮಹಿದಾಸ ಮೂರ್ತಿಯ ನಿನ್ನ ಭಕ್ತರ ಪಾದ ಸಹವಾಸ ಸುಧೆಯ ಸುರಿಸಿ ಬಲುಪರಿ ಅಹಿಭೂಷಣ ತಾತ ಕಾಳಿಮರ್ಧನಕೃಷ್ಣಾ 1 ಕರ್ಮ ಅಡ್ಡಬಂದು ಎನ್ನ ಘಾಸಿ ಮಾಡುತಲಿದೆ ಅರಿಯದಾದೆನೊ ದೇವಾ ಬ್ಯಾಸರವಾಗಿದೆ ಜನ್ಮವು ಮಹಿಯೊಳು ಸಾಸುವೆ ಮಾತ್ರವು ಸ್ವತಂತ್ರವಿಲ್ಲದಿಹ ದೋಷಿಜೀವನ ತಾನೇನು ಮಾಡಬಲ್ಲ ಸಾಸಿರನಾಮಗುರು ಕಾಳೀಮರ್ಧನಕೃಷ್ಣ2 ಜಲದ ಮಧ್ಯದಿ ಇರುವ ಮೀನವನು ಕಾವ ಮಳಲಿನೊಳಗೆ ತೆಗೆದು ಬಿಸುಟಿದಂತಾಯಿತು ಹೊಳೆಯ ಈಜುವೆನೆಂದು ಬಲು ಹೆಮ್ಮೆಯಿಂದಲಿ ಸೆಳೆವಿಗೆ ಸಿಕ್ಕು ಬಿದ್ದ ಮನುಜನ ತೆರನಾಯ್ತು ಬಲವಾಗಿ ಘಾಯವ ಪೊಂದಿದ ಸ್ಥಾನದಲ್ಲಿ ಸಲೆ ಕಾದ ಆಯಸ ಸೆಳೆಯನೆಳೆದಂತಾಯ್ತು ಅಳಲನು ನಿನಗಲ್ಲದೆ ಇನ್ನಾರಿಗೆ ಪೇಳಲೋ ಕೊಳಲಧರನೆ ಗುರು ಕಾಳಿಮರ್ಧನಕೃಷ್ಣಾ 3 ನಿನ್ನ ಭಕ್ತರಾ ಮಾತು ಯನಗದು ಮನ್ನಣೆ ನಿನ್ನ ಭಕ್ತರ ಕಥಾಶ್ರವಣ ಯನ್ನ ಕರಣಾಭರಣ ನಿನ್ನ ಭಕ್ತರ ಸಮೂಹ ಎನ್ನಯ ಕಣ್ಬೆಳಕು ನಿನ್ನ ಭಕ್ತರ ಪಾದದೂಳಿಯೆ ಶಿರೋಭೂಷಣವೆನೆಗೆ ನಿನ್ನ ಭಕ್ತರ ಆಶೀರ್ವಾದವೇ ಸರ್ವ ಬಲವೈ ಇನ್ನು ಈ ಬುದ್ಧಿಯು ಎಂದಿಗೂ ಕೆಡೆದಂತೆ ಚೆನ್ನಾಗಿ ರಕ್ಷಿಸೊ ಗುರು ಕಾಳಿಮರ್ಧನಕೃಷ್ಣಾ 4 ಪರಾಧೀನನೆಂದು ಪರಿಪರಿಯಿಂದಲಿ ಕೊರಗಿಸುವುದು ನಿನಗೆ ಎಂದಿಗೂ ಸರಿ ಅಲ್ಲ ಪರಾಧೀನನು ಅಹುದು ಪರತಂತ್ರನಾನಹುದು ಸರ್ವತಂತ್ರ ಸ್ವತಂತ್ರ ನೀನೆಂಬುದು ಸಿದ್ಧ ಶರಣಾಕರ ಆದರಿಷ್ಟು ಮಾತ್ರ ಕೇಳೋ ಸತಿ ತನ್ನಧೀನಳೆಂದು ಶಿರಶಿಡಿಯುವ ಊರಿ ಬಿಸಿಲಿನೊಳು ನಿಲ್ದಪನೆ ಸರಿಬಂದಿದ್ದು ಮಾಡೋ ಇದರ ಮೇಲಿನ್ನು ದೇವಾ ಉರಗಶಯನ ಗುರು ಕಾಳೀಮರ್ಧನಕೃಷ್ಣಾ 5 ನೀನು ನುಡಿಸಿದಂತೆ ನುಡಿದು ನುಡಿವೆನಯ್ಯ ನಿನ್ನ ಚಿತ್ತವು ಗುರು ಕಾಳೀಮರ್ಧನಕೃಷ್ಣಾ
--------------
ಕಳಸದ ಸುಂದರಮ್ಮ
ಸಿರಿದೇವಿ ವರಬೇಗ ಕರುಣಿಸೊ ದಯದಿಂದ ಶರಣಾಗತ ಪರಿಪಾಲನೆಂಬಿ ಘನ ಬಿರುದಿಹದೊರೆ ನರಹರಿಕರುಣಾಕರ ಪ. ಕರಿರಾಜ ಮೊರೆಯಿಡುವ ಸ್ವರವ ಕೇಳುತಲಂದು ಸಿರಿಯೊಳಗುಸುರದೆ ಗರುಡನ ಪೆಗಲೇರಿ ಸರಸಿ ತಡಿಗೆ ಬಂದು ಕರಿಯನುದ್ಧರಿಸಿದಿ 1 ಘೋರ ಕಿಂಕರರಿದಿರು ಸಾರೆಜಾಮಿಳ ಭಯದಿ ನಾರಾಯಣನೆಂದು ಬೇಡಿದ ಮಾತ್ರದಿ ವಾರಿಜಭವಪಿತ ಪಾರಗಾಣಿಸಿದಿ 2 ತರಳ ಪ್ರಹ್ಲಾದನನು ಹಿರಣ್ಯಕನು ಬಾಧಿಸಲು ಹರಿ ನೀನೆ ಗತಿಯೆನುತಿರೆ ಕಂಭದಿ ಇರವ ತೋರಿ ಬಹು ಪರಿಯಲಿ ಸಲಹಿದಿ 3 ದುರುಳ ಸೀರೆಯ ಸೆಳೆಯೆ ಹರಿಕೃಷ್ಣ ಸಲಹೆನೆ ಸೀರೆಯ ಮಳೆ ಗರದಂದದಲಿತ್ತು ಪರಿಪಾಲಿಸಿದೆ 4 ಎನ್ನ ದುಷ್ಕøತದಿಂದ ನಿನ್ನ ನಾಮದ ಮಹಿಮೆ ಭಿನ್ನವಾಗುವದೆ ನಿನ್ನ ಪದಾಂಬುಜ ವನ್ನು ನಂಬಿದ ಮೇಲಿನ್ನುದಾಸೀನವೆ 5 ಪಾಕಶಾಸನನಘವ ನೀಕರಿಸಿ ಸಲಹಿದನೆ ಭೀಕರವಾಗದೆ ಸಾಕು ಸಾನುಭವ ಕೃಪಣ ದಯಾಕರ ಮೂರುತಿ 6 ಒಳಗೆ ನೀ ತಳಿಸುತಲಿ ಗಳಿಸಿ ಪಾಪಗಳೆನಗೆ ತಳಮಳಗೊಳಿಸುತ ಬಳಲಿಪದುಚಿತವೆ ಉಳುಹಿನ್ನಾದರು ನಳಿನನಾಭ ಹರಿ 7 ಬಡವ ಮಾನವನೊಬ್ಬ ಪಡೆಯ ತನ್ನವರನ್ನು ಕೆಡಲು ಬಿಡನು ಜಗದೊಡೆಯ ನೀ ಎನಗಿರೆ ತಡವ ಮಾಡಿ ಕಂಡ ಕಡೆಯಲಿ ಬಿಡುವುದೆ 8 ನಿನ್ನ ಕಥಾಮೃತಸಾರವನ್ನೆ ಶಿರದಿ ಧರಿಸಿ ಇನ್ನು ಬಳಲಿದರೆ ನಿನ್ನ ಘನತೆಗಿದು ಚೆನ್ನಾಗುವುದೆ ಪ್ರಸನ್ನ ಮುಖಾಂಬುಜ 9 ಮಾನಾಮಾನವ ತೊರೆದು ನಾನಾ ದೇಶದಿ ತಿರಿದು ಶ್ರೀನಿವಾಸ ನಿನ್ನಾನನ ದರುಶನ- ವನು ಮಾಡಿದ ಮೇಲೇನಿದು ತಾತ್ಸಾರ 10 ಆಶಾಪಾಶವ ಬಿಡಿಸಿ ಮನದಾಸೆಗಳ ಪೂರೈಸಿ ದಾಸದಾಸನೆಂಬೀ ಸೌಖ್ಯವನಿತ್ತು ಪೋಷಿಸು ಶೇಷಗಿರೀಶನೆ ತವಕದಿ 11
--------------
ತುಪಾಕಿ ವೆಂಕಟರಮಣಾಚಾರ್ಯ
ಎನ್ನಬಿನ್ನಪಕೇಳು ಧನ್ವಂತ್ರಿ ದಯಮಾಡು ಸಣ್ಣವನು ಇವ ಕೇವಲಆರೋಗ್ಯ ಆಯುಷ್ಯ ಐಶ್ವರ್ಯವೆಂಬೊ ಈ ಮೂರುವಿಧ ವಸ್ತುಗಳುವಸುಮತಿಯ ಮೇಲಿನ್ನು ಅಸುರ ಜನರೆ ಬಹಳ ವಶವಲ್ಲ ಕಲಿಯ ಬಾಧೆಆದಿವ್ಯಾಧಿಗಳು ಉನ್ಮಾದ ವಿಭ್ರಮ ನಾನಾ ಬಾಧೆಗೌಷಧವು ನೀನೆಅನ್ಯರನು ಭಜಿಸದಲೆ ನಿನ್ನನೆ ಸ್ತುತಿಸುತ ನಿನ್ನ ಚಿಹ್ನೆಗಳ ಧರಿಸಿನಿನ್ನವರಲಿ ಇವಗೆ ಇನ್ನು ರತಿಯನ್ನು ಕೊಟ್ಟು ನಿನ್ನವನೆಂದುಅರಿದು
--------------
ಗೋಪಾಲದಾಸರು
ಕಂಡು ಕಂಡೆಂತು ಕೈ ಬಿಡುವೆ ಹರಿಯೆ |ಪುಂಡರೀಕಾಕ್ಷನಿನ್ನ ನಂಬಿದ ಮೇಲೆಪಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ |ಬಣಗುದಾರಿದ್ರ್ಯದಲಿ ಬಲು ನೊಂದೆನಯ್ಯ ||ಫಣಿಶಾಯಿ ಪ್ರಹ್ಲಾದವರದನೇ ನೀನೆನಗೆ |ಹೊಣೆಯಾದ ಮೇಲಿನ್ನು ಮರುಳು ಗೊಳಿಸುವರೆ? 1ಒಂದು ದಿನ ಅತಿಥಿಗಳನುಪಚರಿಸಿದವನಲ್ಲ |ಬೆಂದೊಡಲ ಹೊರೆದು ಬೇಸತ್ತೆನಯ್ಯ ||ಕುಂದು-ಕೊರತೆಯು ಏಕೆ ? ನಿನ್ನ ನಂಬಿದೆ ದಯಾ-|ಸಿಂಧುಗೋವಿಂದನೇ ತಂದೆಯಾದ ಮೇಲೆ2ಬಂಧು ಬಳಗ ಮುನ್ನಿಲ್ಲ ಬದುಕಿನಲ್ಲಿ ಸಖವಿಲ್ಲ |ನಿಂದ ನೆಲ ಮುನಿಯುತಿದೆನೀರಜಾಕ್ಷ||ತಂದೆ-ತಾಯಿಯು ನೀನೆ ಬಂಧು ಬಳಗವು ನೀನೆ |ಕುಂದದೇ ರಕ್ಷಿಸೈ ನಂದನಂದನನೆ 3ಆಶೆಯನು ಬಿಡಲಿಲ್ಲ ಅತಿ ಹರುಷವೆನಗಿಲ್ಲ |ದೇಶದೇಶವ ತಿರುಗಿ ದೆಸೆಗೆಟ್ಟೆನಯ್ಯ ||ವಾಸವಾರ್ಚಿತನಾದ ವೈಕುಂಠನಿಲಯ ಲ-|ಕ್ಷ್ಮೀಶ ನೀಯೆನ್ನ ಕಣ್ಣಾರೆ ಕಂಡ ಮೇಲೆ 4ಭಕುತವತ್ಸಲನೆಂಬ ಬಿರುದು ಹೊತ್ತಿದ ಮೇಲೆ |ಭಕುತರಾಧೀನನಾಗಿರ ಬೇಡವೆ ||ಮುಕುತಿದಾಯಕನೆ ಬೇಲೂರು ಪುರಾಧೀಶ್ವರ |ಸಕಲ ದೇವರದೇವಪುರಂದರವಿಠಲ5
--------------
ಪುರಂದರದಾಸರು