ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಡೌಲಿನ ಡೌಲ್ಯಾಕೆ ಮಾಡ್ತೀ ಕಾಲತೀರದ ಮೇಲೇನೆಂದು ಹೇಳ್ತೀ ಪ ಹೊಯ್ಮಾಲಿತನದ್ಹೊಲೆಕೆಲಸ ಮಾಡಿಕೂತಿ ಸೈಮಾಡಿ ಬರಕೊಟ್ಟದೆಲ್ಲ ಮರೆತಿ ಅ.ಪ ಕಾಯವೆಂಬ ಹೊಲ ಕೌಲಿಗೆ ಹಿಡಿದಿ ಮಾಯ ಮರವೆಯೆಂಬ ಮುಳ್ಳು ಬೆಳೆಸಿದಿ ಹೇಯವಿಷಯವೆಂಬ ಸೆದೆಯ ಕೆಡವಿದಿ ಸಾವು ಹುಟ್ಟುಯೆಂಬ ಕೊರಡಗಿದ್ಹೋದಿ ಕಾವಲಾದೆಲೆ ಮೂಳಿ ನಿನ್ನ ಎಡಬಲದಿ ವಾಯಿದೆ ಸಮೀಪಬಂತು ಮುಂದೇನು ಹಾದಿ 1 ಕ್ರೋಧ ಎಂದೆಂಬ ಅಲಬು ಕಿತ್ತದೆ ಭೇದ ಎಂದೆಂಬುವ ಜೇಕು ತೋಡದೆ ವಾದವೆಂಬ ಬೋರೆ ಜಡ್ಡು ಕಡಿಯದೆ ಖೇದಯೆಂದೆಂಬ ಕರಿಕೆದಡ್ಡ ನಳಿಯದೆ ಶೋಧವಿನಿತಿಲ್ಲದೆ ಮುಸುಕಿಟ್ಟು ಮಲಗಿದಿ ಕಾದುವ ಒಡೆಯನಿಗೀಡೇನು ಮಾಡ್ದೀ 2 ಚಿತ್ತಶುದ್ಧಿಯೆಂಬ ಬದುವು ಕೆಡಿಸಿದಿ ನಿತ್ಯ ನಿರ್ಮಲತೆಯೆಂಬ ಬಾಂದು ಒಡೆಸಿದಿ ಸತ್ಯ ಸನ್ಮಾರ್ಗೆಂಬ ಸೀಮೆಯ ಮುರಿದಿ ತತ್ವ ವಿಚಾರವೆಂಬ ಒಡ್ಡ್ಹರೆಗಡಿದೀದಿ ಕರ್ತು ಶ್ರೀರಾಮನ ಅರ್ತು ಭಜಿಸಿದೆ ಯಮಗ್ವ್ಯೆರ್ಥ ತುತ್ತಾದಿ3
--------------
ರಾಮದಾಸರು
ಮನವೇ ನೀನೆಚ್ಚರಿಕೆ ಬಿಡದಿರು ಅನುದಿನವು ಹರಿಧ್ಯಾನದೊಳಗಿರು ಪ ವನಿತೆ ಧನಧಾರಿಣಿಯ ನೆಚ್ಚಿ ತನುವೆ ತಾನೆಂಬುದನುಚಿತವು ಅ.ಪ ಬರಿಯಕೈಯಲಿ ಭೂಮಿಗಳಿಸಿದೆ ದುರಿತಭಾರವ ಧರಿಸಿರ್ಪೆ ನರರೆ ಹರಿಸುವರಾರೋ ಕಾಣಿರ ಅರಿತುಕೊಂಡಿರೆ ತಿಳಿಸಿರೈ 1 ಕಾಯವಸ್ಥಿರ ಹೇಮಸಂಸ್ಕøತಿ ಮಾಯಾಪಾಶದ ಬಲೆಗೆ ಸಿಲ್ಕಿ ನಾಯಿನರಿಯಂದದಲಿ ತೊಳಲಿ ಸಾಯವರ ಕಂಡಳುವದೇಕೋ 2 ಜಾತಿಧನವಧಿಕಾರ ಖ್ಯಾತಿಗೆ ಆತುರದೊಳಭಿಮಾನ ಪಡುವೇ ಪಾತಕರೆ ಹಿಂಜರಿಯದಂತೇ ಪ್ರೀತಿಯಿಂ ಪರಪೀಡೆಗೈವೇ 3 ಪೊಡವಿಯೊಳ್ ಪೆಣ್ ಬಾಲ ವೃದ್ಧರು ಬಡವರಾರ್ತರು ಕುಂಟಕುರುಡರು ಎಡೆಯ ಜೀವಿಗಳನ್ನು ಕರುಣದಿ ಕಾಣೆಲೋ ಕಡುಜಾಣನೇ 4 ಸತ್ತಮೇಲೇನೆಂದು ಯೋಚಿಸು ಮುತ್ತಿ ಕತ್ತಿಯೊಳಿರಿವರೈ [ಮ]ತ್ತಕ್ಷಣದ ಫಲಕಾಶೆಪಡದಿರು ಸತ್ಯವಂ ಪಿಡಿ ನಿತ್ಯವೂ 5 ಯಮುನೆ ಹೊಕ್ಕರು ಯಮನು ಬಿಡನೂ ಅಮಮ ನರಕದೊಳಿಳಿಪರೈ ರಮಾರಮಣನ ಒಲುಮೆಗಾಗಿ ಶ್ರಮಿಸಿ ಪರರುಪಕಾರಿಯಾಗೋ6 ಪತಿತಪಾವನ ಜಾಜಿಕೇಶವ ನತಿಶಯದಿ ತಾ ಜಗವ ಪಾಲಿಪ ಚತುರ್ವೇದ ಶ್ರುತಿ ಪ್ರಮಾಣವ ಮತಿಯುತರು ಮೀರುವರೆ ಮರುಳೇ 7
--------------
ಶಾಮಶರ್ಮರು