ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಗನೆ | ನಮ್ಮ ರಂಗನೆ | ಮುನಿದನ್ಯಾತಕೆ ಪ್ರಾಣಲಿಂಗನೆ ಪ ನಿಜವಾದ ವಾಜಿಯ ಮಾಜುತ ಪೇಳಲು |ಸೋಜಿಗ ಮಾಡಲು ಮಂಗನೇನೆ ? 1 ಕೊಳಲನೂದಲು ಬಳಲದೆ ಮನವಿಟ್ಟು |ಕೇಳಲು ಮರುಳ ಕುರಂಗನೇನೆ ? 2 ಬಿಡದೆ ರಮಣಿಯನ್ನು ಎಡದಲ್ಲಿ ಬಿಡುವನು |ಮಡದಿ ಮಾರ್ಗದೊಳು ಹಂಗವೇನೆ ? 3 ಕೈಯಲ್ಲಿ ನೆರೆಯದೆ ಮೈಯಲ್ಲಿ ತೋರದೆ |ಸುಯ್ಯಲು ಬಿಡಲು ಭುಜಂಗನೇನೆ ? 4 ತಕ್ಕಾದ ನುಡಿಯನು ರುಕ್ಮೇಶನಾಡದೆ |ಅಕ್ಕ ಮಿಕ್ಕದ ವಿಹಂಗನೇನೆ ? 5
--------------
ರುಕ್ಮಾಂಗದರು
ಒಯ್ಯೆ ಬಾಹ ಉಳಿಯೆ ಹೋಹ ನಲ್ಲನ ತಾಹ ಉಯ್ಯಾಲೆ ಉತ್ಸಾಹ ನಮ್ಮಪ್ಪನಿವ ತಾಯಿ ತಮ್ಮ ಪ. ಚಿನ್ನದ ಸರಪಣಿಯ ಚೆಲುವ ಪೊನ್ನಮಣಿಯ ರÀನ್ನದ ನೇಣ ತುದಿಯ ರಮಣಿಯರೆಲ್ಲರರ್ಥಿಯ1 ಈ ಮೈಯಲ್ಲಿ ಮಲಗಿಪ್ಪ ಈ ಮಹಾಲಕ್ಷ್ಮಿಯ ನೋಳ್ಪ ಸನ್ಮೋದನೆನಿಪ ಶೇಷಶಯನನ ವಟತಲ್ಪ 2 ಇಂದಿರೆ ಇಷ್ಟವನೀವ ಇಂದಿರೆಗಿವನು ಧವ ಎಂದೆಂದು ಭಕ್ತರ ಕಾವ ಎಸೆÉವ ಮಂಚದ ದೇವ 3 ಬಾರಯ್ಯ ಭಕ್ತರಬಂಧು ಬಾರಯ್ಯ ಕರುಣಾಸಿಂಧು ಇಂದು ಬಾರಯ್ಯ ಮುಕುಂದನೆಂದು 4 ಕುಂಜರ ಕೂಗಲು ಬಂದೆ ಕೂಡೆ ಮಕರಿಯ ಕೊಂದೆ ಕಂಜಾಕ್ಷ ಕಾಮನ ತಂದೆ ಕಾಯೆಂದು ಪಾಡಲು ಬಂದೆ 5 ಕಾಕರ ಗಂಟಲಗಾಣ ಕಾಮಿಸದೆನ್ನಯ ಮನ ಏಕೋದೇವನೆಂಬ ಜಾಣ ಏರಿದ ಮಣಿಯ ನೇಣ 6 ಅಖಿಳ ಸುರರ ತಾತ ರುಕುಮಿಣಿ ಪ್ರಾಣನಾಥ ರೂಢಿಗತಿಯ ಪ್ರತಿ ಈತ 7 ಮಾಯದ ದೈತ್ಯರ ಕೊಂದು ಮಲಗಬೇಕೆಂದು ಬಂದು ಹಯಗ್ರೀವರಾಯ ನಿಂದು ಹರುಷವ ತಾಳ್ದನೆಂದು 8 ಮುಂದೆ ದೇವಾಂಗನೆಯರು ಮುಖಸುತ್ತ ಮುಕ್ತಿಸುರ ವೃಂದದ ಮಧ್ಯದೊಳರವಿಂದಾಕ್ಷಿ ಪೊಳವುತ್ತಿರೆ 9 ಒಪ್ಪುವ ತಾಳಗಳೊಪ್ಪೆ ಒರಗಿಪ್ಪ ದೇವನುತ 10 ಮಾನ್ಯ ಶ್ರೀ ಹಯವದನ್ನ ಮನದ ಮಧುಸೂದನ್ನ ಎನುತ ತೂಗುವ ಜನ ಎಂದೆಂದು ಭಕ್ತಮೋದನ11
--------------
ವಾದಿರಾಜ
ಭಳಿಭಳಿರೆ ಶನಿರಾಜ ನೀನೆ ಬಲ್ಲಿದನೊ ಇಳೆ ಮೂರರಲಿ ನಿನಗಿಂ ಬಲ್ಲಿದರ ಕಾಣೆ ಪ ಧರೆಗೆಲ್ಲ ಒರ್ವನೆ ದೊರೆಯಾದ ನಳನನ್ನು ಪರರಾಯನಾಳೆನಿಸಿ ತಿರುವಿಸಿದಿ ಅಶ್ವ ವರ ಸತ್ಯ ಹರಿಶ್ಚಂದ್ರನ್ಹೊಲೆಯನಾಳೆನಿಸವನಿಂ ನಿರುತದಿಂ ಕಾಯ್ಸಿದೆಯೊ ಸುಡುಗಾಡವ 1 ಭೂಪತಿ ವಿಕ್ರಮಗೆ ಕಳ್ಳನೆಂದೆನಿಸವನ ತಾಪಬಡಿಸೆದೆಯೊ ಕೈಕಾಲುಗಳ ಕಡಿಸಿ ರೂಪಗೆಡಿಸಿದಿಂದ್ರಿನ ಮೈಯಲ್ಲಿ ತೂತ್ಹಾಕಿ ಶಾಪಕೊಡಿಸಿಂದುವಿನ ಕಳೆಯುಗುಂದಿಸಿದಿ 2 ಕುರುರಾಯನೊಂಶವಂ ನಿರ್ಮೂಲ ಮಾಡಿದೆಯೊ ತಿರಿದುಣಿಸಿದಿ ಆ ಮಹ ಪಾಂಡುನಂದನರ ಪರಮ ಸುಖಿಗಳ ಸುಖಕೆ ಕಿಡಿಯಿಟ್ಟು ನೋಡಿದಿ ವರ ತಪಸ್ವಿಗಳ ತಪಸ್ಸು ಭಂಗಪಡಿಸಿದೆಯೊ 3 ಒದಗಿ ಯಮದೇವನನ್ವಧೆ ಮಾಡಿಸಿದೆಯೊ ನೀ ಪದುಮಪೀಠನದೊಂದು ಮಸ್ತಕವ ಕಳೆದಿ ಮುದ ಕೃಷ್ಣ ಗಿಡದಡಿಯಸುವ ಬಿಟ್ಟನೆನಿಸಿದಿ 4 ಇಂತಿಂಥ ಮಹಿಮರನು ಈ ಪಾಡ ಪಡಿಸಿದಿ ನ ಮ್ಮಂಥ ನರಜನರ ಪಾಡೇನು ನಿನಗೆ ಕಂತುಪಿತ ಶ್ರೀರಾಮನನುಮತಿಯ ಪಡೆದು ಬಲ ವಂತನಿನಿಸಿದೆಯೋ ನೀ ಮೂಲೋಕದೊಳಗೆ 5
--------------
ರಾಮದಾಸರು
ಹರಿ ಎನ್ನು ಹರಿ ಎನ್ನು ಹರಿ ಎನ್ನು ಮನವೆ ಪ. ನಿರುತದಿ ಪೊರೆವನ ಮರೆವರೆ ಮನವೆ ಅ.ಪ. ಸರಿಯುವುದು ಆಯುಷ್ಯ ಸಂಪತ್ತು ನೋಡು ಬರುತಿದೆ ಮೃತ್ಯುವು ಕರೆಯಲು ನೋಡು ಹರಿನಾಮ ಯಮದಂಡ ಕಡಿವುದು ನೋಡು ಪರಮಪುರುಷನ ನೀ ಬಿಡದೆ ಕೊಂಡಾಡು 1 ಹರಿಯ ನಾಮಾಮೃತ ಸುಜನಕೆ ನೀಡು ಹರಿಯ ಜ್ಞಾನಾನಂದಾಂಬುಧಿಯೊಳೊಲ್ಯಾಡು ಹರಿಯ ಮೂರುತಿಯನ್ನು ಮನದಲ್ಲಿ ನೋಡು ಹರಿಭಕ್ತಿ ಮದವೇರಿ ಕುಣಿ ಕುಣಿದಾಡು 2 ಹರಿಗುರು ಸ್ಮರಣೆಯ ನಿರುತದಿ ಮಾಡು ಹರಿಭಕ್ತಿ ಲಾಂಛನ ಮೈಯಲ್ಲಿ ಮೂಡು ಹರಿದಾಸ ಸಂಪತ್ತಿನೊಳಗೆ ಓಲಾಡು ಹರಿಯ ಮನದಿ ಕಂಡು ನಲಿನಲಿದಾಡು 3 ಕಾಮಕ್ರೋಧಗಳನ್ನು ಖಂಡಿಸೀಡ್ಯಾಡು ನೇಮ ಶ್ರೀ ಗುರು ಆಜ್ಞೆಯಂದದಿ ಮಾಡು ಯಾಮ ಯಾಮಕೆ ಹರಿನಾಮವ ಪಾಡು ಶ್ರೀಮದಾನಂದತೀರ್ಥರ ಮತ ನೋಡು 4 ಶ್ರೀ ಪರಮಾತ್ಮನ ಗುಣವ ಕೊಂಡಾಡು ಶ್ರೀಪತಿ ಭಕ್ತರ ಸಂಗದಿ ಕೂಡು ಭವ ಹರ ಸ್ತುತಿ ಮಾಡು ಗೋಪಾಲಕೃಷ್ಣವಿಠ್ಠಲನ ದಯ ಬೇಡು 5
--------------
ಅಂಬಾಬಾಯಿ
ಹ್ಯಾಗೆ ದರುಶನ ಪಾಲಿಸುವೆ ವಿಠ್ಠಲನೆ ಹ್ಯಾಗೆನ್ನ ಪೊರೆವೆ ವಿಠ್ಠಲನೆ ಪ. ನಾಗಶಯನನೆ ನಿನ್ನ ನೋಡಬೇಕೆಂದು ಮನ ಈಗ ತವಕಿಸುತಿಹುದು ಹ್ಯಾಗೆ ಮಾಡಲಿ ವಿಠಲ ಅ.ಪ. ಅರಿಯದಾ ದೇಶದಲಿ ಆಲ್ಪರಿದು ಅನ್ಯರಿಗೆ ಬರಿದಾಯ್ತು ಬಯಕೆ ವಿಠ್ಠಲನÉ ಪರಿ ಹರಿಯೆ ನೀನಲ್ಲದಲೆ ಪೊರೆಯುವರ ಕಾಣೆ ವಿಠ್ಠಲನÉ 1 ಕೈಯಲ್ಲಿ ಕಾಸಿಲ್ಲ ಮೈಯಲ್ಲಿ ಬಲವಿಲ್ಲ ಹ್ಯಾಗೆ ಬರಲಿನ್ನು ವಿಠ್ಠಲನೆ ನ್ಯಾಯದಿಂದಲಿ ಹಿಂದಿನಾ ಭಕ್ತರಂದದಲಿ ಕಾಯಬಾರದೆ ಎನ್ನ ಪೇಳೂ ವಿಠ್ಠಲನೆ 2 ಭಕ್ತ ಸುರಧೇನೆಂಬೊ ಬಿರುದು ಕೇಳೀ ಬಂದೆ ಚಿತ್ತಕ್ಕೆ ಬರದೆ ವಿಠ್ಠಲನೆ ಭಕ್ತರಾ ಕೂಟದಲಿ ಸೇರಲಿಲ್ಲವೆ ನಾನು ಭಕ್ತವತ್ಸಲನಲ್ಲವೇನೊ ವಿಠ್ಠಲನೆ 3 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆ ಇಂದಿರೇಶನೆ ಕಾಯೊ ಸತತ ವಿಠ್ಠಲನೇ ಹಿಂದಿನವರನು ಪೊರೆದ ಕೀರ್ತಿ ಉಳಿಯಲು ಈಗ ಕುಂದನೆಣಿಸದೆ ಕಾಯಬೇಕೊ ವಿಠ್ಠಲನೇ 4 ಕರುಣಿ ಎನ್ನಯ್ಯ ಕಂಗೆಡಿಸದಲೆ ಕಾಪಾಡೊ ಚರಣವೇ ಗತಿ ಎಂದು ಬಂದೆ ವಿಠ್ಠಲನೆ ಗುರು ಅಂತರ್ಯಾಮಿ ಎನ್ನಭಿಮಾನ ನಿನದೈಯ್ಯ ಸಿರಿಯರಸ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಸಂಸಾರ ಕನಸಣ್ಣ ಸಕಲರಿಗೆ ಹೇಳುವೆನಣ್ಣಸಂಸಾರ ಸತ್ಯವೆಂಬುವನ ಬಾಯಲ್ಲಿ ಹೊರೆ ಮಣ್ಣಣ್ಣಪಹೆಂಡತಿಯು ಕನಸಣ್ಣ ಗಂಡನೂ ಕನಸಣ್ಣಗಂಡು ಮಗ ಸೊಸೆ ಸಹೋದರರು ಬಂಧುಗಳು ಕನಸಣ್ಣ1ದನಕರು ಕನಸಣ್ಣ ದವಲತ್ತು ಕನಸಣ್ಣಮನೆ ಮದುವೆ ಮಂಟಪ ಮಹಾಲಕ್ಷ್ಮೀ ಕನಸಣ್ಣ2ವೈಯ್ಯಾರ ಕನಸಣ್ಣ ವಸ್ತುಗಳು ಕನಸಣ್ಣಮೈಯಲ್ಲಿಹ ಬಲವದು ಮತ್ತೆ ಮುರಿ ಮೀಸೆ ಕನಸಣ್ಣ3ನಾನಿಹುದು ಕನಸಣ್ಣ ನೀನಿಹುದು ಕನಸಣ್ಣಶಾಣೆತನ ಮಾನಾಪಮಾನಗಳು ಸೈನ್ಯ ಕನಸಣ್ಣ4ಸಂಸಾರ ಮಾಡಿದರಣ್ಣ ಸಾಕ್ಷಿಯಾಗಿರಬೇಕಣ್ಣಹಂಸ ಚಿದಾನಂದ ಸದ್ಗುರು ಹೊಂದಲು ಸರಿವುದು ಜನನವಣ್ಣ 5
--------------
ಚಿದಾನಂದ ಅವಧೂತರು