ಕರುಣಾಳುವೈ ನಿಂನ ಭಜನೆಯೊಂದೇ ಸಾಕು
ಭರದಲಿ ಪಾಪಿಯ ಶುದ್ಧ ಮಾಡಲಿಲೇ ಪ
ಅಜಮಿಳ ಜನ್ಮದಿ ಘೋರ ಪಾಪವ ಗೈದು
ಭಜನೆ ಮಾಡಲು ತನುನೀಗು ಕಾಲದಲೀ
ಭಜಕರ ಲೋಲನೆ ಹೀನನಿಗೊಲಿದು ನೀ
ಕುಜನನ ಪರೆದು ಮೋಕ್ಷವನಿತ್ತೆ ಹರಿಯೇ1
ದುರುಳ ವಾಲ್ಮೀಕನು ಹೀನ ಕೃತ್ಯವಗೈದು
ಸುರಮುನಿಯಾಜÉ್ಞಯಿಂ ನಾಮವಭಜಿಸೇ
ದುರಳನ ಸರಸದ ಭಕ್ತಿಗೆ ವಲಿಯುತ
ಪರಮ ಙÁ್ಞನವನು ನೀ ನಿತ್ತೆ ಶ್ರೀಹರಿಯೆ 2
ತರಳ ದಾಸರುಕೂಡಿ ಹರಿ ನಿಂನ ಸ್ತುತಿಸಲು
ನಿರುತ ಭಕ್ತರಿಗೆ ನೀನೊಲಿದೆ ಶ್ರೀಕಾಂತಾ
ಪರಮ ಆದರದಿಂದ ಹರಿಯಂನ ಮನವನ್ನು
ಪರಿ ಶುದ್ಧಮಾಡಿ ದೀನನ ಸೇರೋ ಹರಿಯೇ 3
ರಂಗನ ಮಹಿಮೆಯ ನುಡಿಯಲಾರೆನು ನಾನು
ಅಂಗಜ ಪಿತನಾದ ದಶರೂಪಧರನ
ನಿತ್ಯ ದೂರ್ವಾಪುರದಿನಿತ್ತುಮಂಗಳ ಪದವೀವ ಚೆನ್ನಕೇಶವನೆ 4