ಒಟ್ಟು 8 ಕಡೆಗಳಲ್ಲಿ , 6 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೇಷಪ್ರಭುಗಳ ರಚನೆಗಳು ಪಾಲಿಸು ಶ್ರೀಹರಿಯೇ | ಸದ್ಗುಣ | ಶೀಲ ಭಾಗ್ಯನಿಧಿಯೇ | ಶ್ರೀಲಲಾಮ ಶೇಷಾಚಲಾಧೀಶ ಶ್ರೀಲೋಲ ಬಾಲಭಾಸ್ಕರ ಸಂಕಾಶನೆ ಪ ಕಂಡವರಿಗೆರಗಿ ದೈನ್ಯವ | ಗೊಂಡೆ ಖಿನ್ನನಾಗಿ ಭಂಡನಾಗಿ ಬಳಲಿಸಿ ಬಹು ಕಾಯವ ದಂಡಿಸಿದೆನು ರಕ್ಷಿಸೋ ಶ್ರೀಹರಿಯೇ 1 ಯಾರಿಗೆ ದೂರುವೆನು ಭಕ್ತೋ | ದ್ಧಾರನಲ್ಲವೆ ನೀನು | ಘೋರದುರಿತ ದಾರಿದ್ರ್ಯದ ವ್ಯಥೆಯ ಇ- ನ್ಯಾರಿಗೊರೆವೆ ಅದನ್ಯಾರು ಕಾವರೈ 2 ಏನಪರಾಧವ | ಗೈದೆ ನಾ -ನೇನು ಪಾಪಾತುಮನೋ | ಈಸಪರಾಧವನೆಣಿಸದೆ | ಎನ್ನಯ | ಕ್ಲೇಶವ ಪರಿಹರಿಸೋ ದಯಾನಿಧೇ 3 ಪರ ಪುರುಷೋತ್ತಮ | ಪರಂಜ್ಯೋತಿ ಪರಬ್ರಹ್ಮಸ್ವರೂಪನೆ 4 ಗಮನ ಮಾಧವ ಕರುಣಾ-| ಪಾಂಗರಂಗ ಮಂಗಲಾಂಗ ರಕ್ಷಿಸು 5
--------------
ಅನ್ಯದಾಸರು
ಕರೆದರೆ ಓ ಓ ಎನಬಾರದೆ ಮರೆತರು ಕೂಗಿನ ದನಿಕೇಳದೆ ರಂಗ ಪ ಶರಣಜನರು ಸಾಸಿರವಿದ್ದರೇನೋ ಮೊರೆಯಿಡುವವ ಕಂಡರರಿವಾಗದೇನೋ ಅ.ಪ ಲಕ್ಷಜೀವಿಗಳನ್ನು ರಕ್ಷಿಸುವವನೆಂದು ವಕ್ಷದೊಳಿರುವ ಶ್ರೀಲಕ್ಷ್ಮಿ ಹೇಳುವಳು ಪಕ್ಷಿರಾಜನ ಫಣಿಯಕ್ಷನಂಗನೆಯರು ಅಕ್ಷರ ಲೋಕಾಧ್ಯಕ್ಷನೆನುವರು 1 ಯೋಗವನರಿಯೆನು ಯಾಗವನರಿಯೆನು ತ್ಯಾಗ ಮಾಡುವ ಬುದ್ಧಿ ಎಳ್ಳನಿತಿಲ್ಲ ರಾಗ ರಚನೆಗಳ ಅರಿವೆನಗಿಲ್ಲ ನಾಗಶಯನ ಕಾಯೋ ಮಾಂಗಿರಿರಂಗ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಂಗ್ಲೆ ನಾರಾಯಣ ಕಾಮತರ ರಚನೆಗಳು ಪಾಲಿಸೈ ತ್ರಿಶೂಲಿಯೆ ಮುದದಿಂ | ಕಲಿಕಾಲ ರುದ್ರನೆ ಪಾಲಿಸೈ ತ್ರಿಶೂಲಿಯೆ ಮುದದಿಂ ಪ ಸಿಂಧು ಎನ್ನಯ ಬಂಧು ಬಿಡಿಸೈಯ |ಅಂದು ಪಾಲ ಮುದ ಚಂದ ನಿಂತ ಧರೀ ಆಪ -ದ್ಧಂಧುವೆ ನೀ ಬೇಗ ಬಂದೀಗಲೆನ್ನನು 1 ಧಾಮ ಮುನಿಜನ ಸ್ತೋಮವಂದ್ಯ ಬಿಲ್ಲ ಪ್ರೇಮಿಯೆ ರಿಪು ಕುಲ ಭೀಮ ವಿರೂಪಾಕ್ಷ ಕಾಮಾರಿ ನಂಬಿದೆ 2 ಪನ್ನಗ ಶೇಷಶಾಯಿ ವೆಂಕಟೇಶವಿಠಲ ಪ್ರಿಯರೀ ದಾಸರ ಕಾಯ್ವೆ ಕೈಲಾಸ ನಿವಾಸನೆ 3
--------------
ಅನ್ಯದಾಸರು
ಬಿಡಿ ರಚನೆಗಳು ವೆಂಕಣ್ಣಕವಿಯ ಹಾಡುಗಳು ಕುಣಿದಾಡೋ ಕೃಷ್ಣ ಕುಣಿದಾಡೋ | ಒಮ್ಮೆ | ಕುಣಿದಾಡೋ ಪ ಮುದ್ದು ಮೊಗದೊಲವ ಮುಗುಳ್ನಗೆದೋರಿ | ತದ್ಧಿಮಿಕೆಂದು ಮುರಾರಿ1 ಹಸ್ತಾಂಗುಲಿ ಅಭಿನಯಗಳ ಪಟ್ಟು ನ್ಯಸ್ತದಿ ಹೆಜ್ಜೆಯನಿಟ್ಟು 2 ಗೆಜ್ಜೆ ನೂಪುರ ಘಲ್ಘಲ್ ಘಲರವದಿಂದ ತದ್ದಣಿಕೆಂದು ಮುಕುಂದ 3 ಸ್ಥಾಯಿ ಮೃದಂಗ ತಾಳದಿ ಶ್ರುತಿಗೂಡಿ ಮಾ-ಗಾಯಿ ಕುಂಡಲಗಳೋಲಾಡಿ4 ಧಾಮ 5
--------------
ಅನ್ಯದಾಸರು
ಬೊಂಬೆಯಾಟವನಾಡಿಸಿದೆ ಮಹಾಭಾರತದ ಪ ಅಂಬುಜಭವಾದಿ ಅಮರರು ನೋಡುತಿರಲು ಅ ಕುರುಭೂಮಿಯೆಂಬ ಪುರವೀಧಿಯನು ರಚಿಸಿಮರೆಯ ಮಾಯದ ಐದು ತೆರೆಯ ಹಾಕಿಧರಣೀಶರೆಂಬ ನರಪ್ರತಿಮೆಗಳನಳವಡಿಸಿನರನ ರಥವಾಜಿಯ ಸೂತ್ರವನು ಪಿಡಿದು 1 ಓದುವನು ನಾರದನು ವಾದ್ಯಕಾರನೆ ಶಂಭುಬಾದರಾಯಣದೇವ ಕಥಾಪ್ರಸಂಗಿಮೇದಿನಿಯ ಹೊರೆಗಳೆವ ಮೃತ್ಯುವಿನ ಹಾಸ್ಯರಸವೇದನಿಕರಗಳು ಕೈವಾರಿಸುತಿರಲು 2 ಹದಿನೆಂಟು ಅಕ್ಷೋಹಿಣಿ ಮಾರ್ಬಲವ ನೆರೆಸಿಹದಿನೆಂಟು ದಿನ ಕದನಕೇಳಿಕೆ ನಡೆಸಿಅದರೊಳೈವರನುಳುಹಿ ಅವನಿಭಾರವನಿಳುಹಿಮುದದಿ ಬ್ರಹ್ಮಕಪಾಲವನು ತೃಪ್ತಿಗೊಳಿಸಿ 3 ಲೋಕದೊಳಗೈದನೆಯ ವೇದವಿದೆಂದೆನಿಸಿಪಾಕಶಾಸನ ಸಭೆಯನು ಮೆಚ್ಚಿಸಿಈ ಕಥೆಯ ಕೇಳಿದ ಜನಮೇಜಯನ ಪತಿಕರಿಸಿತಾ ಕಪಟನಾಟಕದ ಸೂತ್ರಧರನೆನಿಸಿ 4 ಇಂತೆಸೆವ ಲೀಲಾವಿನೋದ ರಚನೆಗಳಿಂದ ಲೋ-ಕಾಂತರಂಗಳ ಸಂಚರಿಸುತಸಂತಸದಿ ಭರತ ಸಂಸಾರವನು ಪೊರೆವ ವೇ-ದಾಂತನುತ ಕಾಗಿನೆಲೆಯಾದಿಕೇಶವರಾಯ 5
--------------
ಕನಕದಾಸ
139-8ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಮಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಪ್ರಾಣೇಶ ಶ್ರೀಶವಿಠ್ಠಲ ದಾಸರುಗಳಿಗೆಇನ್ನು ಅನೇಕರಿಗೆ ಶಿಷ್ಯತ್ವ ಇತ್ತುಪುನಃ ಶಿಷ್ಯರ ಸಹ ಕ್ಷೇತ್ರಾಟನ ಮಾಡಿಸ್ವರ್ಣಪುರಿಯೈದಿದರು ಸತ್ಯಬೋಧರಲಿ 1ಕರ್ಜಗೀ ದಾಸಪ್ಪಗೆ ಶ್ರೀದಾಂಕಿತ ಕೊಟ್ಟುಶ್ರೀಜಗನ್ನಾಥದಾಸರು ಮುಂದು ಹೊರಟುಕರ್ಜಗೀ ಸಮೀಪದಲಿ ವರದಾತೀರದಲಿತ್ರಿಜಗಖ್ಯಾತ ಧೀರೇಂದ್ರರ ನಮಿಸಿದರು 2ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗಪಟ್ಟಣದಿ ರಂಗನ್ನ ಸೇವಿಸಿಗರಳುಂಡೇಶ್ವರನÀ ದರ್ಶನ ಮಾಡಿದರು 4ಮಂಡಲೇಶ್ವರರೇನು ರಾಜಪ್ರಮುಖರು ಏನುಪಂಡಿತೋತ್ತಮರೇನು ದಿವಾನುಗಳು ಏನುಅಂಡಕೋಟಿನಾಯಕಹರಿಯ ದಾಸರಿವರನ್ನಕೊಂಡಾಡಿ ಮರ್ಯಾದೆ ಮಾಡಿದರು ಎಲ್ಲೂ 5ಉಡುಗೊರೆಗಳು ಕನಕರತ್ನಾಭರಣಗಳುನಡೆಯಬಾರದು ಎಂದು ಪಲ್ಲಕ್ಕಿ ವಾಹನವುಈಡುಂಟೆ ಜಗನ್ನಾಥದಾಸರಿಗೆ ಮೈಸೂರುಮಾಡಿದ ಮರ್ಯಾದೆ ರಂಗನ ಅನುಗ್ರಹವು 6ಮೈಸೂರು ಕೊಂಗು ಕೇರಳ ಚೋಳ ಪಾಂಡ್ಯದೇಶಗಳಿಗೆ ಪೋಗಿಉಡುಪಿಕಂಚಿಶ್ರೀ ಶ್ರೀನಿವಾಸನ ಕ್ಷೇತ್ರ ಘಟಿಕಾಚಲವುಈಶಾನುಗ್ರಹವು ಮರ್ಯಾದೆ ಎಲ್ಲೆಲ್ಲೂ 7ಜಯಜಯ ಜಗತ್ರಾಣ ಮಧ್ವ ನಾಮಾಭಿದಪದ್ಯಾವಳಿಯು ಶ್ರೀಪಾದರಾಜರದುದಿವ್ಯ ಫಲಶ್ರುತಿ ಇದಕೆ ಜಗನ್ನಾಥದಾಸಆರ್ಯರು ಬರೆದಿಹರು ಸಜ್ಜನರು ಪಠಿಸಿ 8ತೀರ್ಥಾಭಿಮಾನಿಗಳ ತದಂತಸ್ಥ ಹರಿರೂಪಕ್ಷೇತ್ರ ವಾರ್ತೆಗಳನ್ನು ತತ್ವ ಬೋಧಿಸುವಕೀರ್ತನೆಗಳ ಮಾಡಿ ಹರಿಗರ್ಪಿಸಿದರುಓದಿದರೆ ಕೇಳಿದರೆ ಇಹಪರದಿ ಸುಖವು 9ಹರಿವಾಯು ಸುರವೃಂದ ಗುರುವೃಂದ ಪ್ರೀತಿಕರಭಾರಿಶುಭಫಲಪ್ರದವು ತತ್ವ ಸುವ್ವಾಲೆಹರಿಕಥಾಮೃತಸಾರ ವರ್ಣಿಸಲಶಕ್ಯವುಉರುಮಹಾಸೌಭಾಗ್ಯಾಕಾಂಕ್ಷಿಗಳು ಓದಿ 10ಹರಿಸಮೀರರು ತಾವೇ ಶ್ರೀಪಾದರಾಜರಲುಶಿರಿವ್ಯಾಸರಾಜ ಶ್ರೀವಾದಿರಾಜರಲುಪುರುಂದರದಾಸರಲು ನಿಂತು ಸ್ವಪ್ನದಿ ಪ್ರೇರಿಸೆಹರಿಕಥಾಮೃತಸಾರ ಬರೆದ ದಾಸಾರ್ಯ 11ಪ್ರಾರಂಭ ಹರಿಕಥಾಮೃತಸಾರ ಸ್ವಾದಿಯಲಿಶಿರಿವ್ಯಾಸವಾದಿರಾಜ ವೇದವೇದ್ಯರ ಮುಂದೆವರಚಿಪ್ಪಗಿರಿಯಲ್ಲಿ ವಿಜಯದಾಸರ ಮತ್ತುಶಿರಿಕೃಷ್ಣ ಸನ್ನಿಧಿಯಲಿ ಸುಶುಭಮಂಗಳವು 12ಗುರುಶ್ರೀಶವಿಠಲ ದಾಸಾರ್ಯರು ಕುಂಟೋಜಿರಾಯರೆಂಬುವ ಸೂರಿಕುಲ ತಿಲಕಾಗ್ರಣಿಯುಹರಿಕಥಾಮೃತಸಾರ ಮಂಗಳವ ಚಿಪ್ಪಗಿರಿಯಲ್ಲಿ ಮಾಡಿಹರು ನಮೋ ನಮೋ ಇವರ್ಗೆ 13ಹರಿಕಥಾಮೃತಸಾರ ಫಲಶ್ರುತಿ ಅನೇಕವುಸೂರಿವರ್ಯರು ಹರಿದಾಸರು ಹಾಡಿಹರುಭರಿತ ರಚನೆಗಳ ಗ್ರಂಥ ಪದ್ಯಂಗಳಬರೆದಿಹರು ಜಗನ್ನಾಥದಾಸಾರ್ಯಸೂರಿ 14ಶ್ರೀ ದಪ್ರಾಣೇಶಾದಿ ದಾಸಶಿಷ್ಯರ ಕೂಡಿಮೋದಮಯ ನರಹರಿ ಹನುಮಗುರುವೃಂದಆರಾಧಿಸಿ ಬರುವವರ ಉದ್ಧರಿಸುತ್ತಮುದದಿಂ ಕುಳಿತರು ಮಾನವೀಯಲ್ಲಿ 15ವರುಷ ಎಂಭತ್ತೆರಡು ತಿಂಗಳು ಒಂದುಆರುದಿನ ಮೂವತ್ತೇಳು ಘಟಿಕ ಅರ್ಧಧರೆಯಲ್ಲಿಹರಿಇಚ್ಛಾ ಸೇವಾರತರಾಗಿತೆರಳಿದರು ಜಗನ್ನಾಥದಾಸ ಹರಿಪುರಕೆ 16ಶಾಲಿಶಕ ಹದಿನೇಳು ನೂರಮೂವತ್ತೊಂದುಶುಕ್ಲ ಸಂವತ್ಸರ ಭಾದ್ರಪದ ಶುದ್ಧಮೂಲಾನಕ್ಷತ್ರ ರವಿವಾರ ನವಮಿಯಲ್ಲಿಮಾಲೋಲ ಸಹ ಜ್ವಲಿಸುತ್ತ ತೆರಳಿದರು 17ಅಮೃತ ಸೈಷಸೇತುಃ ನರಸಿಂಹ ಸ್ತಂಭದಲಿಇರುತಿಹನು ಅಲ್ಲೊಂದು ಅಂಶದಿ ಇಹರುಶ್ರೀ ರಾಘವೇಂದ್ರ ವೃಂದಾವನ ಶ್ರೀ ಸತ್ಯಬೋಧರ ಸಾನ್ನಿಧ್ಯ ಸ್ತಂಭದ ಮುಂದೆ 18&ಟಜquo;ಜ&ಡಿಜquo; ಯೆನಲು ಜಯ ಸಂಸಾರ ಭಯಹರವು&ಟಜquo;ಗ&ಡಿಜquo; ಯೆನಲು ಸರ್ವಪೀಡೆ ಪರಿಹಾರ&ಟಜquo;ನ್ನಾ&ಡಿಜquo; ಯೆನ್ನೆ ಸರ್ವೋತ್ತಮಸ್ವಾಮಿ ಸುಖವೀವ&ಟಜquo;ಥ&ಡಿಜquo; ಎನಲು ಅನ್ನಧನವಿತ್ತು ರಕ್ಷಿಸುವ 19ಜಯಜಯತು ಶ್ರೀ ಹಂಸವಿಧಿ ಮಧ್ವ ವ್ಯಾಸಮುನಿಜಯಜಯತುಪುರಂದರವಿಜಯದಾಸಾರ್ಯಜಯಜಯತು ಗೋಪಾಲದಾಸಾರ್ಯ ಜಯಜಯತುಜಯಜಗನ್ನಾಥ ದಾಸಾರ್ಯ ಜಯಜಯತು 20ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 21- ನವಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಾಣೇಶ ದಾಸರ ತಾತ್ವಿಕಹಿನ್ನೆಲೆಯ ರಚನೆಗಳು219ಶ್ರೀಪೂರ್ಣಬೋಧಮತವಾ ನಂಬಿ |ಶ್ರೀ ಪತಿಯ ಒಲಿಸುವವರು ಕೇಳೀ ಪಆದಿಯಲಿಯಾದ ಚರಿತೆಯನ್ನುಪರ|ಮಾದರದಿಕೇಳಿಸುಜನಾ ||ರಾದವರು ಭಕುತಿಯಿಂದಾ ಮಹ ಪ್ರಳಯ |ವಾದ ತರುವಾಯ ಸೃಷ್ಟಿಯಾಗೇ 1ಸುರರೆಲ್ಲ ತಮ್ಮ ತಮ್ಮಾ ಸ್ಥಾನದಲಿ |ಸ್ಥಿರರಾಗಿ ಯುವರಾಜ್ಯಕೇ ||ಅರುಹನಾರೆನಲು ಅದಕೇ ಪೇಳಿದನು |ಹರಿಯು ಇಂತುಪಾಯವ ಕೇಳೀ 2ಒಂದು ದೇಹದಿ ಸರ್ವರೂ ಕ್ರಮನುಸಾರ- |ದಿಂದ ತೆರಳಿರಿ ಚೇತನಾ ||ಕುಂದುವದು ಆವನಿಂದಾ ಅವ ಶ್ರೇಷ್ಠ |ನೆಂದರಿವದೆಂದು ಸರಿದಾ ಕೇಳೀ 3ಹರಿಆಜÕದಂತೆ ತ್ಯಜಿಸೇ | ಕುಂಟನೂ |ಕುರುಡ ಮೂಕನು ಯನಿಸಿತೂ ||ಹಿರಿಯ ಪವಮಾನ ಬಿಡಲೂ ಎಲ್ಲರೂ |ಅರಿತರೂ ಕುಣುಪವೆಂದೂ ಕೇಳೀ 4ಮತ್ತೆ ಮೊದಲಂತೆಲ್ಲರೂ ವ್ಯಾಪಿಸಲು |ಬಿತ್ತು ಏಳಲಿಲ್ಲವದೂ ||ಸತ್ಯ ಸಂಕಲ್ಪ ಮರುತಾ ಸೇರಲದು |ತತ್ತಲಿಲ್ಲದೆ ಚಲಿಸಿತೂ ಕೇಳೀ 5ಅಂದಿನಾರಭ್ಯವಾಗೀ ತಿಳಿಸಿದನು |ಇಂದಿರೇಶನು ಈತನಾ ||ವಂದಿಪರಿಗೊಲಿವೆನೆಂದೂ ಇನ್ನಿದಕೆ |ಸಂದೇಹಉಂಟೆ ಬಂದೂ ಕೇಳಿ 6ಸ್ವಾಮಿ ಶ್ರೀ ರಾಮನಾಗೇ ಅವತಾರ |ವಾ ಮಾಡಿದನು ಮಾರುತಾ ||ಭೂಮಿಜೆಯದನುಜಒಯ್ಯಲೂ ಆ ಪುರಕೆ |ಪ್ರೇಮದಿಂದಲಿ ಚಿಗಿದನು ಕೇಳೀ 7ರಾಘವನ ಉಂಗುರವನೂ ವನದೊಳಗೆ |ಬ್ಯಾಗೆ ಇಂದಿರಿಗೆ ಕೊಟ್ಟೂ ||ಆಗಾ ಪೊಳಲನೇ ಸುಟ್ಟೂ ಹಾರಿತ್ವರ|ರಾಗಟಿಯ ಒಡಿಯಗಿತ್ತಾ ಕೇಳೀ 8ಇಂದ್ರಜಿತು ಮೋಹನಾಸ್ತ್ರಾ ಬಿಡಲಾಗಿ |ಅಂದಗೆಟ್ಟಿತು ಕಪಿ ಕುಲಾ ||ಇಂದಿರೇಶನ ಆಜÕದಿಂ ಆಗ ತ್ವರ- |ತಂದ ಸಂಜೀವನವನೂ ಕೇಳೀ 9ಅನಿಮಿಷರುಕಪಿಗಳಾಗೀ ನಿರುತ ರಾ- |ಮನ ಭಜಿಪರೀ ಕೆಲಸಕೇ ||ಅನುಕೂಲರೊಬ್ಬರಲ್ಲಾ ಒಬ್ಬ ಅಂ- |ಜನಿ ಸುತನೆ ಸೇವಿ ಮಾಡ್ದಾ ಕೇಳಿ 10ಉಪಕಾರ ಒಂದಕೆನ್ನಾ ಕೊಟ್ಟ ಮ್ಯಾ- |ಲೆ ಪರಿಮಿತ ಸೇವಿಗುಚಿತಾ ||ಸು ಪರೀಕ್ಷಿಸಿದರು ಕಾಣೇ ಭಳಿರೆ ಯಂ- |ದ ಪರಾಜಿತನು ಮೊಗಳಿದಾ ಕೇಳೀ 11ಈ ವಾಯು ಒಲಿದನೆಂದೂ ಒಲಿದ ಸು- |ಗ್ರೀವ ವಿಭೀಷಣಗೆ ರಘುಜಾ ||ಶ್ರೀವರನೆ ಕೃಷ್ಣನಾಗೀ ಅವತರಿಸೆ |ಐವರೊಳು ಭೀಮನಾದಾ ಕೇಳೀ 12ತರಣಿಮೊಮ್ಮಗನ ಸೇವೀ ಈ ವೃಕೋ- |ದರಮಾಳ್ಪನೆಂದುಶೌರಿ||ನರನ ರಥವನು ನಡಿಸಿದಾ ಇಲ್ಲದಿರೆ |ಥರವೆ ಇದು ಪಾಂಡವರಿಗೇ ಕೇಳೀ 13ಜೀವೇಶರೊಂದೆ ಎಂದೂ ವಾದಿಗಳು |ಭಾವಿಸಿರೆ ಮಧ್ವಮುನಿಯೂ ||ತಾ ವಿರಚಿಸಿ ಸುಗ್ರಂಥವಾ ನಿರ್ದೋಷ |ಗೋವಿಂದನೆಂದರುಹಿದಾ ಕೇಳೀ 14ಈತ ಮಾಡಿದ ಚರಿತೆಯಾ ಕಡೆಯಾಗಿ |ನಾ ತುತಿಸಲಾರೆ ಸ್ವಲ್ಪಾ ||ವಾತಸ್ಮರಣಿಯ ಮಾಡಲೂ ವೈಕುಂಠ |ಆತು ಇಪ್ಪದು ತಪ್ಪದೂ ಕೇಳೀ15ದೇಶದೊಳುತುಂಬಿಇಹ್ಯದೂ ಶ್ರೀ ಭಾರ- |ತೀಶ ಮಾಡಿದ ಮಹಿಮಿಯೂ ||ಲೇಶವಾತನ ಚರಿತ್ರೇ ಸ್ಮರಿಸೆ ಪ್ರಾ- |ಣೇಶ ವಿಠ್ಠಲ ಒಲಿವನೂ ಕೇಳೀ 16ಪ್ರಾಣದೇವರ ಕಥಿಯನು ಕೇಳಿದರೆ |ತಾನೆ ಇಹಪರದಿ ಬಿಡದೇ ||ಪ್ರಾಣೇಶ ವಿಠಲ ಕಾಯ್ವಾ ಇದಕೆ ಅನು- |ಮಾನಲೇಸಿನಿತವಿಲ್ಲವೂ ಕೇಳೀ13
--------------
ಪ್ರಾಣೇಶದಾಸರು
ಶ್ರೀ ವಾದಿರಾಜ ಸಲಹೆನ್ನ ರಾಜಸೇವಕರಿಗಮರಭೂಜರಾಜಪ.ಪಾವನ ಸುಕೀರ್ತಿ ಚಂದ್ರಿಕೆಯಿಂದ ಥಳಥಳಿಸಿಭೂವಲಯಕಾಹ್ಲಾದವನಿತ್ತೆ ರಾಜ ಅ.ಪ.ಚತುರ ಹಯಗ್ರೀವ ವಹಿಸಿ ಹೊಳೆವ ದಶಮತಿಶಾಸ್ತ್ರ್ತರಥವ ನಿರ್ಮಿಸಿಶ್ರುತಿಪಂಚರಾತ್ರವನ್ನು ವಾಜಿಗೈದುಋತು ಭೇದಶರ ಒಗ್ಗೂಡಿಸಿನ್ನೆಸೆದುಕ್ಷಿತಿಯರ ದುರ್ವಾದಿಗಳ ಜೈಸಿದೆ ಅಪ್ರತಿಮಹಾರಥಿಕನೆನಿಸುವ ಚಕ್ರವರ್ತಿ ರಾಜ1ಬೇಕಾದ ಪುರುಷಾರ್ಥವ ಕೊಡುವಗುಣಶಾಖೆಗಳ ಸೊಬಗುದೋರೆಶ್ರೀಕರ ಗ್ರಂಥರಚನೆಗಳ ವನೇಕ ಪತ್ರದವುಗಳಿರೆಆ ಕರುಣ ಲೋಚನ ಕುಸುಮರಸವನುಂಡುಝೇಂಕರಿಪಕವಿಮಧು ಮಕರಂದ ರಾಜಿಸುವ ರಾಜ2ಸಾರಾರ್ಥ ಚೋರ ಕುಲದಗಲ ಭೇದಿಸಿ ಸಂಚಾರ ಧರೆಯೊಳಗಿಡಿಸಿಈರಮತಸದ್ವನದಿಹಪಂಡಿತಚಕೋರಗಳ ನಲಿನಲಿಸಿದೆಧೀರ ವಾಗೀಶಕರವಾರಿಧಿಭವ ವಾದಿವಂದ್ಯವಾರಿನಿಧಿ ನಂದಕರ ಪ್ರಸನ್ವೆಂಕಟಪ್ರಿಯ 3
--------------
ಪ್ರಸನ್ನವೆಂಕಟದಾಸರು