ಒಟ್ಟು 6 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎದ್ದಳೀಗಿದಕೋ ಶ್ರೀರಮಣಿ || ಎದ್ದಳೀಗಿದಕೋ ಪ ಮುದ್ದು ಶ್ರೀ ಹರಿಯಾ ತೋಳ ತೆಕ್ಕೆಯಾನುಸಳಿ ಶುದ್ಧ ರಾತ್ರಿಲಿ ಹರಿ ರತಿಯೊಳು ಮಲಗಿ ಅ.ಪ. ಸರಸಿಜ ಸಖನ ಮುಂಬೆಳಗವ ಹರಿಯಲು | ಭರದಲಿ ಹಕ್ಕಿಯು ಕಲಕಲವೆನಲು 1 ನಾರದ ತುಂಬುರ ಮಾಡುವ ಪ್ರಾತ:| ಸ್ಮರಣೆಯ ಗಾಯನ ಧ್ವನಿಯನು ಕೇಳಿ 2 ಕರತಳದಲಿಯವಿಗಳನು - ವರೆಸುತಲಿ | ತೆರೆವುತ ಮುಚ್ಚುತ ಅರೆಗಣ್ಣ ನೋಟದಿ 3 ಬಾಯೊಳಗಿನ ತಂಬುಲವ ನುಗುಳುತ | ಅಧರ ವಕೆಂಪವ ನಡಗಿಸುತ 4 ಕಿರಿಬೆಮರವ ಕೊನೆ ಯುಗುರದಿ ಹಾರಿಸಿ | ಕುರುಳು ಗೂದಲು ಬೈತಲು ನೀಟಾಮಾಡುವ5 ಸಡಲಿದ ಅಲರ ಮುಡಿಯಾತಿದ್ದಿ ಬಿಗಿವುತಾ | ಒಡನೆ ಕೊರಳಾ ಭರಣವ ತಿರುಹುತಲಿ 6 ಎಡಬಲ ಕೊಲದ ವಡ್ಯಾಣ ಸರಿಸಿ ಉಟ್ಟಾ | ಉಡಿಗಿಯಾ ನಿರಯಾ ಮುಂದಕ sಸಾಂವರಿಸುತ7 ಪ್ರಕಟದಿದೋರ್ವ ಕುಚದ ನಖಕ್ಷತಗಳ | ಯುಕುತಿಲಿ ಅಡಗಿಸಿ ಪುಟವನು ಬಿಗಿವುತ 8 ತನ್ನನಂಬಿದ ಬಾಲರ ಹೊರಿಯಲುದಯ | ಕಮಠ ನ್ಯಾಯದಲಿ9 ಈರೇಳು ಜಗದ ಜೀವನ ಪಡೆದ ಜನನಿ | ಗುರುಮಹಿ ಪತಿಸುತ ಪ್ರಭುವಿನ ಅರಸಿ10
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಿಗಣೆಯ ಕಾಟವೇ ಕಾಟ-ಚಲ್ವ-ಸುಗುಣೆಯ ಕೂಟವೇ ಕೂಟಪ ಹಗಲಿರುಳೆನ್ನದೆ ಬಗೆಬಗೆ ರತಿಯೊಳು- ಸೊಗಯಿಸಿದೇಹಧಾತುಗಳನು ಕೆಡಿಸುವ ಅ.ಪ. ನಿಶಿಯೊಳಗನುದಿನ ಬಾಧಿಪ 1 ಹಾಸಿಗೆ ಮಂಚಾದಿಗಳಲಿ ಶರೀರದ ನಾಡಿಯನಿಲ್ಲಿಸುವ 2 ಸದ್ದಡಗಲು ಜತೆಗೂಡುತ-ಸುಖ-ನಿದ್ರೆಯ ಸಮಯವನೊಡುತ ನಮ್ಮ ನೊದ್ದಾಡಿಸುತಿಹ 3 ಹೆಗಲಿನ ಮೂಲದೊಳೇರಿ-ನಮ್ಮಬಗಲಿನ ಸಂದಿಗೆ ಸೇರಿ ಬೇಗದಿನುಗುಳಿಕದ್ದೋಡುವ 4 ಚಿಗಟದ ಹಿಂದೊಡಗೂಡಿ-ನಮ್ಮ-ತೊಗಟೆ ರಕ್ತದ ಸವಿನೋಡಿ ಬುಗುಟಿದ್ದಗಾಯವ ವಿಗಟವಮಾಡುವ 5 ನೋಟಕ ನೀನಾಗ ಬಹುದೆ-ಕಪಟ-ನಾಟಕಧಾರನೆ ಬರಿದೆ ನಿಶಾಟದಲ್ಲಣ ನಿನ್ನಕೂಟದ ಜನರಿಗೆ 6 ದುರಿತ ಕೋಲಾಹಲನೆಂದೆ-ನಿನ್ನ ಬಿರುದನು ಪೊಗಳುತ ನಿಂದೆ ಧರೆಯೊಳುತ್ತಮ-ಪುಲಿಗಿರಿಯೊಳು ನೆಲಸಿಹವರದವಿಠಲ ನಿನ್ನ ಶರಣರಾದವರಿಗೆ 7
--------------
ಸರಗೂರು ವೆಂಕಟವರದಾರ್ಯರು
ನೋಡಿದೆನು ತಿರುವೆಂಗಳೇಶನಾ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ನಾಡೊಳಗೆ ಈಡಿಲ್ಲದಪ್ಪನಾ ಪ ಘನಸುಂದರ ಜ್ಞಾನ ತೀರ್ಥ ಆನಂದ ಧನ ವರಹಾ ವೈರಾಗ್ಯನಿಲಿ ರ ತುನ ಚಂದ್ರಮ ವರಧÀರ್ಮ ನಾರಾ ಯಣ ಭಕುತಿ ಶ್ರೀಕಾಂತಿ ಬ್ರಹ್ಮಾ ರುಣ ವೃಷಭ ಶ್ರುತಿ ಗರುಡ ಸರ್ಪ ಜನತ ಪೂಜಿಪ ಸುರ ಸುಧಾನಂತ ಇನಿತು ಪೆಸರುಳ್ಳ ಪುಷ್ಕರಾದ್ರಿಯಾ1 ಖಗನ ಪೆಗಲಲಿ ನಗವ ತಂದ ಜಗದೊಳು ಸುವರ್ಣಮುಖರಿ ನಿ ಮ್ನಗ ತೀರದಲಿ ಸ್ಥಾಪಿಸಿದ ಸುತ್ತಲು ಝಗಝಗಿಸುದೆ ನೋಳ್ಪ ಜನರಿಗೆ ಹಿಮ್ಮೊಗವಾಗಿ ಪೋದವು ಯುಗ ಯುಗ ಕಥಾಭೇದ ಬಗೆಬಗೆ ಪೊಗಳಿದರೆ ನೆಲೆಗಾಣೆ ಅನುದಿನಾ 2 ಸರಸ್ವತಿಗೆ ಮುನಿಯಿಂದ ಶಾಪವು ಬರಲು ಭರದಲಿ ಬಂದು ವಿರಜಾ ಸರತಿಯೊಳು ಬೆರಸಿದಳ್ ತಪದಲಿ ಹರಿಯ ಕರುಣವ ಪಡೆದು ಪ್ರತಿದಿನ ಸ್ಮರಸಿದವರಿಗೆ ಪುಣ್ಯವೀವುತ ಸರುವ ಸರೋವರಧಿಕವೆನಿಪ ಸುಂ ದರ ಸ್ವಾಮಿ ಪುಷ್ಕರಣಿಯನು ತ್ರಿ ಕರಣ ಬಲು ಒಂದಾಗಿಬಿಡದಲೆ 3 ಎರಡೈದು ಪ್ರಾಕಾರ ಗೋಪುರಾ ಎರಡೈದು ದ್ವಾರಗಳು ಕಟ್ಟಿದಾ ಮಕರ ತೋರಣ ಧರೆಗೆ ಮಟ್ಟಿದ ಎಡಬಲದ ಪೂ ಸರಗಳೊಪ್ಪಲು ದ್ವಾರಪಾಲಕರಿ ರುತಿಪ್ಪರಲ್ಲೆಲ್ಲಿ ಕಾವುತಾ ನಿಕರ ತುಂಬಿರೆ ಪರಿಪರಿಯ ಮಂಟಪಗಳಿಂದಾ 4 ಭಂಗರಹಿತ ಬಂಗಾರಮಯವಾದಾ ತುಂಗ ಆನಂದ ನಿಲಯ ವಿಮಾನಾ ಕಂಗಗಳಿಗೆ ಬಲು ತೇಜಿಃಪುಂಜದಿ ಹಿಂಗದಲೆ ಗೋಚರಿಸುತದೆ ನರ ಸಿಂಗ ಮೂತ್ರ್ಯಾದಿಗಳು ಪ್ರಾಣ ಭು ಜಂಗಧರಾದಿ ದಿಕ್ಪಾಲರೆಲ್ಲರು ಸಂಗ ಮತಿಯಲಿ ವಾಸವಾಗಿರೆ ಮಂಗಳಾಂಗ ಪ್ರಿಯಾಂಗ ಪ್ರಿಯನಾ 5 ಮುಕ್ತಿ ಬೀದಿಗಳೆರಡು ವಿ ರಕ್ತಿ ಜ್ಞಾನ ಸತ್ಕರ್ಮ ಬಲು ದೃಢ ಭಕ್ತಿಯೋಗವು ಯಾವ ತ್ಯಾಗ ಸಂ ವ್ಯಕ್ತ ರಾಗವು ಈಪರಿ ಸು ಉಕ್ತಿ ದ್ವಾದಶ ಸಾಲ ಬೀದಿಗ ಳುಕ್ತ ಜನ ಸಂಚರಿಸುತ್ತಿಪ್ಪರು ಶಕ್ತನೊಬ್ಬನೆ ಜಗದೊಳೀತನೆ ವ್ಯಕ್ತ ಅವ್ಯಕ್ತದಲಿ ಚಿತ್ರವಾ 6 ಲೋಕೇಶ ಲೋಕಪಾಲಕರು ಖಗ ಕಾಕೋದರ ಗಂಧರ್ವ ಸನಕಾದಿ ಲೋಕ ಚಕ್ಷು ಸೀತಾಂಶು ಉದಿಸಿದರು ಏಕಾಂತನು ವಾಯುನಂದನ ಪಾಕಶಾಸನ ಸೌಮ್ಯ ಗುರು ಕವಿ ನಾಕಜನ ಮಿಗಿಲಾದ ಭಕ್ತರು ಏಕಗುಣವಾರಂಭಿಸಿ ಅ ನೇಕ ಗುಣದಲಿ ಭಜಿಸುತಿಪ್ಪುದಾ7 ಸಾರಿದರೆ ನೆಲೆದೋರದು ಕಂ ಸಾರಿ ಚಿನ್ಮಯ ಲೀಲೆಗೆ ಮತ್ತಾರಾದರು ಗಣ್ಯಮಾಳ್ಪರೆ ಧಾರುಣಿಲಿ ಮಧ್ಯದಲಿದಕೆ ಎ ದಿರುಗಾಣೆನು ಎಲ್ಲಿ ಚರಿಸಲು ಮಾರುತನು ತಾನೊಬ್ಬ ಬಲ್ಲ ವಿ ಸ್ತಾರವಿದರ ವಿಚಾರ ಮತಿಯಲಿ8 ಧೀರ ಜಗದೋದ್ಧಾರ ರಿಪು ಸಂ ಹಾರ ನಾನಾವತಾರ ನವನೀತ ಜಾರ ಶಿರೋಮಣಿ ಶ್ರೀ ನಾರಿಯರರಸನೆ ತಾ ಭಕ್ತ ಚ ಕೋರ ಚಂದ್ರಮ ಪೂರ್ಣ ಸುಂದರ ಸಾರ ಭವಾರ್ಣವತಾರ ಕಾರಣ ವೀರ ವಿತರಣ ಶೂರನೆನಿಪನ್ನ ದ್ವಾರದಲಿ ಬಂದು ಸ್ತುತಿಸಿದೆನು ನಿಂದೂ 9 ಈ ವೈಲಕ್ಷಣವುಳ್ಳ ದೊರೆತನ ಈ ವೈಭವ ಸರ್ವೋತ್ತಮನೆಂಬದು ಈ ವೈಭೋಗ ಸಾಕಲ್ಯವಾಗಿದೆ ಈ ವೈಯಾರವು ಈತಗಲ್ಲದೆ ಈ ವೈಕುಂಠನ ನೋಡುವುದು ಮಹಾ ಈ ವೈದಿಕದ ಭಾಗ್ಯಕ್ಕೆಣೆಯೆ ಈ ವೈಧಾತ್ರಿಗೆಯಿವನು ಪೇಳಿದ ಈ ವೈಚಿತ್ರವ ಕೇಳಿ ಮನದಲಿ 10 ರನ್ನಮಯ ಕಿರೀಟ ಕುಂಡಲ ಕರ್ಣ ಕಸ್ತೂರಿನಾಮ ಪಣೆಯಲಿ ಕೆನ್ನೆ ಚಂಪಕ ನಾಸದಂತ ಪ್ರ ಸನ್ನ ವದನಾಂಭೋಜಲೋಚನಾ ಚಿನ್ನಸರ ಉಡುದಾರ ಸರಿಗೆ ಮೋ ಹನ್ನ ಪೀತಾಂಬರ ನೂಪುರಗೆಜ್ಜೆ ಸನ್ನಿಧಿಗೆ ನಡೆತಂದು ದೇವವರೇ ಣ್ಯನಂಘ್ರಿಯ ನೆನೆದೆ ಚೆನ್ನಾಗಿ 11 ಮೆರೆವ ಉತ್ಸವ ವಾಹನಂಗಳು ನೆರೆದ ಪ್ರಜೆದಟ್ಟಡಿಯಾಗಿದೆ ನೋಡಿ ಎರಡೊಂದು ವಿಧದವರುಯಿಲ್ಲಿಗೆ ಬರುವರೈ ಅವರವರ ತಕ್ಕದು ಹರಿಯ ಫಲವನು ಕೊಡುವನಿಲ್ಲದೆ ಅರಮರೆ ಇಲ್ಲಿದಕೆ ಎಂದಿಗು ಮೊರೆವ ನಾನಾ ವಾದ್ಯ ರಭಸ ವಿ ಸ್ತರಿಸ ಬಲ್ಲೆನೆ ನೂತನೂತನಾ 12 ರಥದ ಸಂಭ್ರಮವಾರು ಬಲ್ಲರು ಪ್ರತಿಗಾಣೆ ಈ ಪೃಥ್ವಿಯೊಳಗೆ ಅ ಪ್ರತಿ ಸಾಹಸಮಲ್ಲ ತನ್ನಯ ಸತಿಯೊಡನೆ ಪರುಠವಿಸಿ ಪೊಳೆವುತ್ತ ಚತುರ ಬೀದಿಯ ಸುತ್ತಿ ಸುಮನಸ ತತಿಯ ಸಂಗಡ ಬರುವ ಭರ ಉ ನ್ನತವ ಗುಣಿಸುತ್ತ ನಲಿನಲಿದು ಅ ಚ್ಯುತನ ಕ್ರೀಡೆಯ ಸ್ಮರಿಸಿ ನಮೋ ಎಂಬೆ13 ರಾಜರಾಜೇಶ್ವರ ನಿರಂತರ ರಾಜಿಸುತಿಪ್ಪ ಬಗೆಬಗೆ ಸಂಪೂಜೆಯಲಿ ರಾಜೋಪಚಾರದಿ ಮೂಜಗದೊಳು ಈ ನಿಧಿಯಲಿದ್ದ ಸೋಜಿಗವೆ ಮತ್ತೆಲ್ಲಿಯಿಲ್ಲವು ರಾಜಶೇಖರ ಬಲ್ಲವನೊಬ್ಬನೆ ಮಾಜದಲೆ ಸಜ್ಜನರು ಸತ್ಕರ್ಮ ಬೀಜಮಂದಿ ಮಾಡಿಬಿಡಲೆ 14 ದರ ಸುದರಶನ ಪಾಣಿ ತನ್ನ ಸಂ ದರುಶನವೆಮಗಿತ್ತು ಘನ ಆ ದರ ಪಾಲಿಸಿ ಸಂಚಿತಗಾಮಿ ಪಠಿಸಿ ಪ್ರಾರಬ್ಧವೇ ತೀರಿಸಿ ಕರುಣದಿಂದಲಿ ದಿವ್ಯರೂಪದ ಗುರುತು ತೋರುವ ಅಂತರಂಗದಿ ಪರಮಪಾವನ ವಿಜಯವಿಠ್ಠಲ ಪೊರೆವ ಪ್ರೀತಿಲಿ ಬಂದು ಮರಿಯದೆ15
--------------
ವಿಜಯದಾಸ
ಮೊರೆ ಕೇಳು ನೀನೆನ್ನ ಕರುಣದಿ ತವಪಾದ ಪರಮಭಕ್ತಗಗೊಲಿಸದಿರು ದೇವ ಚರಣದಾಸರ ಕಾವ ಸಿರಿಯ ಸಖಜೀವ ಪ ಕ್ಷಿತಿಯೊಳು ಸತಿಸುತರತಿ ಮೋಹರತಿಯೊಳು ಮತಿಶೂನ್ಯನೆನಿಸಧೋಗತಿಗೆಳೆಸದೆ ಪತಿತಪಾವನ ನಿಮ್ಮ ಶ್ರುತಿಭೋದ್ವ್ಯಾಕ್ಯದಭಿ ರತಿಯನೆನ್ನೊಡಲೊಳು ನೆಲೆಸೀಶಾ ಹತಕಂಸ ಸುರತೋಷಾದ್ವಿತಿ ಪಂಚಶಿರ ನಾಶ 1 ವಿಷಯ ವಾಸನದೇಳಸ್ವಿಷಮ ಸಂಸಾರವೆಂಬ ಮುಸುಕಿದ ಮಡುವಿನೊಳ್ಮುಳುಗಿಸಿದೆ ವಸುಧೆಯೊಳಸೆವ ಆ ಅಸಮಹಿಮನ ಪಾದ ದಾಸರ ಸಂಗ ನೀಡ್ವಿಮಲಾಂಗ ಭಂಗ ಕುಸುಮಾಕ್ಷ ಕೃಪಾಂಗ 2 ಮದನಕದನದಿ ಮುದಸುಖವಿಧಿಸಗ ಲ್ಹೋದ ಸುದತಿಯಳ ನೆನೆವಂತೆ ಪಾದ ಸದುಭಕ್ತಿ ಹಂಬಲ ಅಗ ಲದಿರಿಸು ರಘುಕುಲಸೋಮ ಸದುಭಕ್ತರ ಪ್ರೇಮ ಸುದಯನೆ ಶ್ರೀರಾಮ3
--------------
ರಾಮದಾಸರು
ಶರಣು ಶರಣುರಾಯಾ | ಸರಸಿ-ಜಾಲಯ ಪ್ರೀಯಾ | ಶರಣು ಪಾವನಕಾಯಾ | ಸಲಹುನಮ್ಮಾ ಪ ಸ್ತುತಿಯ ಮಾಡಲರಿಯೇ | ಯತಿ ಛಲಗುಣ ವರಿಯೇ | ಪಾವನ ದೇವ ದಯಾನಿಧಿಯೇ 1 ಶಿರಿವಧು ರಮಣನಾ ಚರಿತವ ಪೇಳುವೆ | ಕರುಣದಿ ಶ್ರೀಹರಿ ನುಡಿಸಿದಂತೆ | ಕೇಳಿ | ಧರಿಯೊಳು ಭಾಗವತರು ಯಲ್ಲಾ 2 ಬನ್ನಿ ಸಾತ್ವಿಕ ಗುಣ ಸಂಪನ್ನ ಮುತ್ತೈದೇರು | ಅನ್ಯ ಭಾವನೆಗಳಿಗೆ ತೊಡಕದೇ | ಯನುತಲಿ | ಉನ್ನತ ಸಂಭ್ರಮದಿ ನೆರೆದರು 3 ದಿವ್ಯಾಂಬರವನುಟ್ಟು ದಿವ್ಯಾಭರಣನಿಟ್ಟು | ದಿವ್ಯಾಕೃತಿಯಲಿ ವಪ್ಪುತಿಹಾ | ಮುನಿ | ಮದನ ಲಾವಣ್ಯನು 4 ಅನಾದಿ ಮಹಿಮ ಮೋಹನನಾದ ಕೃಷ್ಣನು | ಜ್ಞಾನಾಂಗನೇ ರುಕ್ಮಣಿ ವಧುವಿನಾ | ಈರ್ವರಾ | ಅನುಭವ ದೂಟಣಿಯನ್ನು ಮಾಡಲಾರಿ 5 ಸಡಗರದಿಂದಾ ಹೃದಯಾ ಪೊಡವಿಯೊಳೊಪ್ಪುದಾ | ದೃಢ ವಜ್ರದಿಂದಲಿ ರಚಿಸಿದಾ | ಜಗದಲಿ | ಒಡನೆ ರತಿ ರತ್ನಾಸನ ಹಾಕಿ 6 ಮ್ಯಾಲ ಭಾವಕಿಯರು ಮೂಲೋಕವಂದ್ಯರಾ | ಲೋಲವಧು ವರರನು ಕುಳ್ಳಿರಿಸಿ | ಹರುಷದಿ | ಮೇಲೆನಿಸಿ ಊಟಣಿಯ ಮಾಡಿಸಲು 7 ಶುದ್ಧ ಮತಿವಂತಿಯರು ಅಧ್ಯಕ್ಷರತರಾಗಿ | ಸಿರಿ | ಮುದ್ದು ಶ್ರೀ ಕೃಷ್ಣನು ವಲಿವಂತೇ 8 ನಾನಾ ಗಂಟಗಳುಳ್ಳಾ ಕಠಿಣವಾದಾ ಅಭಿ | ಮಾನ ಅರಿಷಿಣವನು ಸಣ್ಣ ಮಾಡೀ | ಈಗಾ | ಏನುಳಿಯದ್ಹಾಂಗ ವಿವೇಕದಿಂದ 9 ಹಮ್ಮಿನರಿಷಿಣವನು ಸಮ್ಯಜ್ಞಾನದ ಕದಿ | ಕಮ್ಯ ದೋರುವಂತೆ ಕಲಿಸುತಾ | ಶ್ರೀವರ | ಬ್ರಹ್ಮನ ಪಾಪಕ ಅರ್ಪಿಸಿದರು 10 ತ್ವರಿತ ಲಕ್ಷ್ಮೀ ಕಾಲಾ ಪರವಾ ವಪ್ಪಿಲೆ ಹಚ್ಚಿ | ಭರದಿಂದಾಕ್ಷಣ ಕ್ಷಣಕ ರುಕ್ಮಣಿ ಯಾಮುಖದಿಂದ | ಹರಿಯಾ ನಾಮಗಳನು ನುಡಿಸುತಾ 11 ಭಾವನಿಂದ ರಂಜಿಸುವ ಕುಂಕುಮ ಮ್ಯಾಲೆ | ಆ ವಿಮಲ ಮುಕ್ತಿಯ ಶೇಶೇ ನಿಟ್ಟು ಧ್ಯಾನಾ | ಲೇವಿಗಂಧವಾ ಲೇಪಿಸಿದರು 12 ಪರಿಮಳ ಸುವಾಸನೆಯ ಬೇರದ ಸುಮನ ಸರವಾ | ಕೊರಳಿಗೆ ಹಾಕಿದೆ ಪರಿಯಿಂದಾ ಕೃಷ್ಣನಾ | ಕರದಿ ನೇಮಿಸಿದರು ರುಕ್ಮಣಿಗೆ 13 ಆರ್ತ ಜಿಜ್ಞಾಸನು ಧನಾರ್ಥಿಯು ಬೈಲಿ ಘಳಿಗೆ | ಅರ್ತು ಮುಖದಲಿ ಕೊಟ್ಟು ಬಿಸುಡಿದರು ಬುಧರು | ನಿರ್ತದಿಂದಲಿ ನೋಡಿ ಇಬ್ಬರಿಂದ 14 ಮಗುಳೆ ಸಂಕಲ್ಪಾದಾ ಬಗೆದಾ ಕುಪ್ಪಸಿನ | ಬಿಗಿ ಬಿಗಿದು ಕಟ್ಟಿದಾ ಗಂಟವನು ಒಂದೇ | ಜಗದೀಶನಾ ಕೈಯಿಂದ ಬಿಡಿಸಿದರು 15 ಹರಿಯಾ ತೊಡೆಯ ಮ್ಯಾಲ ನಿಂದಿರಿಸಿ ರುಕ್ಮಿಣಿಯನು | ಕರದಿ ಶಾಂತಿ ಅಂಬಿ ಬಿಂಬಿಸಿದರು | ನೋಡಿ | ಧರಿಯೊಳಾನಂದವ ತೋರುವಂತೆ 16 ತನುವಿನಾರತಿಯೊಳು ಘನದೆಚ್ಚರ ದೀಪದಿ | ಮನದಿಂದಾ ಜಯಾ ಜಯಾವೆಂದೂ ಬೆಳಗೀ | ಮರಹು | ಅನುವಾಗಿ ತಾವು ನಿವಾಳಿಸಿದರು 17 ಮರೆವಾ ಪ್ರಕೃತಿ ಪುರುಷರ ಶರಗಂಗಳಾ ಯರಡಾ | ಭರದಿಂದ ಕಟ್ಟಿ ಸುವೃತ್ತಿಂದಾ | ಬಳಿಕಾ | ತ್ವರಿತ ನಿಜ ಮಂದಿರವ ಸಾರಿದರು 18 ಇಂತಿ ಪರಿಯಾಗಿಹ ಅಂತರನು ಭವದಾ | ಕಂತುಪಿತ ಲಕ್ಷ್ಮಿಯ ಚರಿತವನು | ನೋಡಿ | ಸಂತತ ಸುಖವನು ಪಡೆದರೆಲ್ಲಾ 19 ಇನಿತು ಸುಖ ಕರವಾದಾ ಅನುಭವ ದೂಟಣಿಯನು | ಅನುವಾಗಿ ನುಡಿಸಿದಾ ಯನ್ನ ಮುಖದೀ | ಈಗಾ | ಘನ ಗುರು ಮಹಿತಪಿ ಸುತ ಸ್ವಾಮಿ 20 ತಂದೆ ತಾಯಿ ಮಿತ್ರ ಬಂಧು ಬಳಗನಾದಿ | ಎಂದೆಂದೂ ಶರಣರ ಸಲಹುವಾ | ದೇವನೇ | ಇಂದೆನ್ನ ನುದ್ಧರಿಸು ದತ್ತಾತ್ರೇಯಾ 21
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುಗುಣೆಯ ಕೂಟವೆ ಕೂಟ ಪ ಹಗಲಿರುಳೆನ್ನದೆ ಬಗೆ ಬಗೆ ರತಿಯೊಳು ಸೊಗಯಿಸಿ ದೇಹ ಧಾತುಗಳನು ಕೆಡಿಸುವ ಅ.ಪ ಗನುದಿನ ಬಾಧಿಪ 1 ಮಾಡಿ ಹಾಸಿಗೆ ಮಂಚಾದಿಗಳಲಿ ರೂಢಿಸಿ ಕಾಮಿನಿ ಕೂಡುವ ತೆರದೊಳೋ ಲಾಡಿ ಶರೀರದ ನಾಡಿಯ ನಿಲ್ಲಿಸುವ 2 ನಿದ್ರೆಯ ಸಮಯವ ನೋಡುತ ಮುದ್ದಾಡುತ ನಮ್ಮ ನೊದ್ದಾಡಿಸುತಿಹ 3 ತೊಗಲಿನ ನರಕ್ಕೆ ತಗಲೆ ನಿದ್ರೆಯ ನಗಲಿಸಿ ಬೇಗದಿನುಸುಳಿ ಕದ್ದೋಡುವ4 ತೊಗಟೆ ರಕ್ತದ ಸುವಿನೋಡಿ ಬುಗುಟೆದ್ದ ಗಾಯವ ವಿಗಟವ ಮಾಡುವ 5 ಕಪಟ ಕಾಟಕರ್ಮದ ನಿಸರ್ಗದಲ್ಲಿನ ಬಲು ಕೋಟಲೆಯುಂಬೆ ನಿನ್ನ ಕೂಟದ ಜನರಿಗೆ 6 ಬಿರುದನು ಪೊಗಳುತ ನಿಂದೆ ವರದವಿಠಲ ನಿನ್ನ ಶರಣರಾದವರಿಗೆ 7
--------------
ವೆಂಕಟವರದಾರ್ಯರು